Tag: Chaitra Kotooru

  • ನಟ ತಬಲಾ ನಾಣಿಗೆ ಹೆಂಡತಿ ಬೇಕಂತೆ

    ನಟ ತಬಲಾ ನಾಣಿಗೆ ಹೆಂಡತಿ ಬೇಕಂತೆ

    ಈ‌ ಹಿಂದೆ ದೇಶಪ್ರೇಮ ಸಾರುವ ಆ್ಯಕ್ಟ್ 370  ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ಶಂಕರ್ (K. Shankar) ಅವರೀಗ ಕಾಮಿಡಿ ಜಾನರ್  ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಲೈರಾ ಎಂಟರ್  ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ  ಭರತ್ ಗೌಡ ಮತ್ತು ಸಿ.ರಮೇಶ್ ಜೊತೆಯಾಗಿ ನಿರ್ಮಿಸುತ್ತಿರುವ, ಕೆ.ಶಂಕರ್ ನಿರ್ದೇಶನವಿರುವ  ಆ ಚಿತ್ರದ ಹೆಸರು ‘ನನಗೂ ಹೆಂಡ್ತಿ ಬೇಕು’ (Nanagu Hendti Beku).  ದೃಷ್ಟಿ ವಿಕಲಚೇತನನೊಬ್ಬ ಮದುವೆಯಾಗಲು ಹೊರಟಾಗ ನಡೆಯುವ  ಪ್ರಸಂಗಗಗಳನ್ನು  ಹಾಸ್ಯಮಯವಾಗಿ ಹೇಳುವ ಕಥಾಹಂದರ ಹೊಂದಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ  ನಡೆಯುತ್ತಿದೆ. ಕೆ. ಶಂಕರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಸಂಪೂರ್ಣ ಕಾಮಿಡಿ ಜಾನರ್  ಚಿತ್ರವಾಗಿದೆ.

    ಮದುವೆಯಾಗಲು ಹೊರಟು  ಒಂದು ಹೆಣ್ಣುಕೂಡ  ಸಿಗದೇ ಪರಿತಪಿಸುವ ಕುರುಡನ ಪಾತ್ರದಲ್ಲಿ ಹಾಸ್ಯನಟ ತಬಲ ನಾಣಿ (Tabla Nani) ಅವರು  ಕಾಣಿಸಿಕೊಂಡಿದ್ದಾರೆ. ತಬಲ ನಾಣಿಗೆ ಎದುರು ಬ್ಯಾಂಕ್ ಜನಾರ್ಧನ್ ಮತ್ತು ಬಾಲು ನಕರಾತ್ಮಕ ಪಾತ್ರದಲ್ಲಿ ರಂಜಿಸಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್  ಒಬ್ಬ ಮೂಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಎರಡು  ಫೈಟ್ ಮತ್ತು ಎರಡು ಹಾಡುಗಳಿದ್ದು,  ಕೆ.ಎಮ್. ಇಂದ್ರ ಅವರ ಸಂಗೀತ ಸಂಯೋಜನೆಯಿದೆ.

     

    ಇಡೀ ಚಿತ್ರದ ಚಿತ್ರೀಕರಣ  ಚಿತ್ರದುರ್ಗದಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ತಬಲಾ ನಾಣಿ, ರಾಜ್ ಬಾಲ, ಬ್ಯಾಂಕ್ ಜನಾರ್ಧನ್, ಶೃತಿ, ಚೈತ್ರಾ ಕೋಟೂರ್ (Chaitra Kotooru), ರಮೇಶ್ ಭಟ್, ಕಿಲ್ಲರ್ ವೆಂಕಟೇಶ್ ಗಣೇಶ್ ರಾವ್, ದೊಡ್ಡ ರಂಗೇಗೌಡ, ಧರ್ಮ, ಕೆಜಿಎಫ್ ಕೃಷ್ಣಪ್ಪ, ಪ್ರಿಯಾಂಕ, ಗಾನವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ  ನಟಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಮನೆಗೆ ಚೈತ್ರಾ ಕೋಟೂರು ರೀ-ಎಂಟ್ರಿ

    ಬಿಗ್ ಮನೆಗೆ ಚೈತ್ರಾ ಕೋಟೂರು ರೀ-ಎಂಟ್ರಿ

    ಬೆಂಗಳೂರು: ಬಿಗ್ ಬಾಸ್ ಮನೆಗೆ ಚೈತ್ರಾ ಕೋಟೂರು ರೀ-ಎಂಟ್ರಿ ನೀಡಿದ್ದು, ಮನೆಯ ಸದಸ್ಯರು ಶಾಕ್ ಆಗಿದ್ದಾರೆ.

    ಮಂಗಳವಾರ ಬಿಗ್ ಬಾಸ್ ಸ್ಪರ್ಧಿಗಳಿಗೆ ಮನರಂಜನೆ ನೀಡಲು ಜಾದೂಗಾರ ಕುದ್ರೋಳಿ ಗಣೇಶ್ ಅವರನ್ನು ಮನೆಗೆ ಕಳುಹಿಸಿದ್ದರು. ಗಣೇಶ್ ಅವರು ಬೆಡ್ ರೂಂ, ಡೈನಿಂಗ್ ಟೇಬಲ್, ಲಿವಿಂಗ್ ಏರಿಯಾದಲ್ಲಿ ಮ್ಯಾಜಿಕ್ ತೋರಿಸಿದ ಬಳಿಕ ಗಾರ್ಡನ್ ಏರಿಯಾದಲ್ಲಿ ಮ್ಯಾಜಿಕ್ ತೋರಿಸುವುದಾಗಿ ಹೇಳಿ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಹೋದರು.

    ಗಣೇಶ್ ಮನೆಯ ಮುಖ್ಯದ್ವಾರದ ಬಳಿ ಹೋಗಿ ಮ್ಯಾಜಿಕ್ ಮಾಡಿದ್ದಾರೆ. ಈ ವೇಳೆ ಚೈತ್ರಾ ಕೋಟೂರು ಅಲ್ಲಿ ಪ್ರತ್ಯಕ್ಷವಾಗಿದ್ದಾರೆ. ಚೈತ್ರಾ ಅವರನ್ನು ನೋಡುತ್ತಿದ್ದಂತೆ ಮನೆಯ ಸದಸ್ಯರು ಶಾಕ್ ಆದರು. ಚೈತ್ರಾ ಅವರು ಮನೆಯೊಳಗೆ ಹೋಗುತ್ತಿದ್ದಂತೆ ಗಣೇಶ್ ಅಲ್ಲಿಂದ ಹೊರಟು ಹೋಗಿದ್ದಾರೆ.

    ಚೈತ್ರಾ ಮನೆಯೊಳಗೆ ಬಂದ ನಂತರ ನಾನು ಮೊದಲೇ ಹೇಳಿದೆ. ಇಲ್ಲಿ ಯಾವುದು ಶಾಶ್ವತ ಅಲ್ಲ. ಟೈಂ ಬಂದಾಗ ಎಲ್ಲರೂ ಹೋಗಬೇಕು. ಮತ್ತೆ ಟೈಂ ಬಂದಾಗ ಬರಬೇಕು ಎಂದು ಹೇಳಿದ್ದಾರೆ. ಸದ್ಯ ಚೈತ್ರಾ ಮನೆಗೆ ಮತ್ತೆ ಎಂಟ್ರಿ ಕೊಟ್ಟಿರುವುದರಿಂದ ಮನೆಯ ಕೆಲವು ಸದಸ್ಯರು ಶಾಕ್‍ನಲ್ಲಿದ್ದು, ಅವರ ಬಗ್ಗೆಯೇ ಮಾತನಾಡುತ್ತಿದ್ದಾರೆ.

    ಸೋಮವಾರವಷ್ಟೇ ವೈಲ್ಡ್ ಕಾರ್ಡ್ ಮೂಲಕ ನಟಿ ರಕ್ಷಾ ಸೋಮಶೇಖರ್ ಅವರು ಬಿಗ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಅವರು ಎಂಟ್ರಿ ಕೊಟ್ಟ ಮರುದಿನವೇ ಚೈತ್ರಾ ಕೋಟೂರು ಬಿಗ್ ಬಾಸ್ ಮನೆಗೆ ಮತ್ತೆ ಪ್ರವೇಶಿಸಿದ್ದಾರೆ.

  • ಒಂದು ಆ್ಯಪಲ್‍ನ ಕತೆ – ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳಿಂದ ರಂಪಾಟ

    ಒಂದು ಆ್ಯಪಲ್‍ನ ಕತೆ – ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳಿಂದ ರಂಪಾಟ

    ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ.

    ಬುಧವಾರ ಸ್ಪರ್ಧಿ ಚೈತ್ರ ಕೊಟ್ಟೂರು ಅಡುಗೆ ಮನೆಯಲ್ಲಿ ಸೇಬು ತೆಗೆದುಕೊಂಡು ತಿಂದಿದ್ದಾರೆ. ಅವರು ಸೇಬು ತೆಗೆದುಕೊಳ್ಳುವ ಮೊದಲು ಅಡುಗೆ ತಂಡದಲ್ಲಿದ್ದ ಚಂದನ್ ಆಚಾರ್ಯ ಅವರ ಬಳಿ ಕೇಳಿದ್ದಾರೆ. ಆಗ ಚಂದನ್, ಚೈತ್ರ ಅವರಿಗೆ ಸೇಬು ತಿನ್ನಲು ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ.

    ಮರುದಿನ ಬೆಳಗ್ಗೆ ಅಡುಗೆ ವಿಭಾಗದ ಚೀಫ್ ಆಗಿರುವ ಸುಜಾತ ಅವರು ಸೇಬು ಯಾರು ತಿಂದರು ಎಂದು ಪ್ರಶ್ನಿಸಿದ್ದಾರೆ. ಆಗ ಚೈತ್ರ ನಾನೇ ಸೇಬು ತಿಂದಿರುವುದು ಎಂದು ಹೇಳಿದ್ದಾರೆ. ಬಳಿಕ ನಾನೊಬ್ಬಳೇ ಸೇಬು ತಿನ್ನಲಿಲ್ಲ ಚಂದನ್ ಅವರಿಗೆ ಕೊಟ್ಟು, ಎಲ್ಲರಿಗೂ ಕೊಟ್ಟು ತಿಂದೆ ಎಂದು ಉತ್ತರಿಸಿದ್ದಾರೆ.

    ತನ್ನ ಹೆಸರು ಹೇಳಿದ್ದರಿಂದ ರೊಚ್ಚಿಗೆದ್ದ ಚಂದನ್, ಚೈತ್ರ ಅವರ ಜೊತೆ ಜಗಳವಾಡಲು ಶುರು ಮಾಡುತ್ತಾರೆ. ಬಳಿಕ ಸುಜಾತ ಕೂಡ ಚೈತ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗಳವಾಡಿ ಸುಮ್ಮನಾಗಿದ್ದ ಚಂದನ್, ಪದೇ ಪದೇ ಚೈತ್ರ ಅವರ ಬಳಿ ಹೋಗಿ ಮತ್ತೆ ಜಗಳವಾಡಲು ಶುರು ಮಾಡುತ್ತಾರೆ.

    ಈ ವೇಳೆ ಚೈತ್ರ, ಚಂದನ್ ಮೇಲೆ ರೇಗಾಡುತ್ತಾರೆ. ಮತ್ತೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಮುಗಿಯುವ ಲಕ್ಷಣ ಕಾಣುತ್ತಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಜೈ ಜಗದೀಶ್ ಜೋರಾಗಿ ಗದರುತ್ತಾರೆ. ಬಳಿಕ ಚೈತ್ರ ಮನೆಯಲ್ಲಿ ಎಲ್ಲರೂ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.

    ಸುಜಾತ ಹಾಗೂ ಚಂದನ್ ವರ್ತನೆಯಿಂದ ಬೇಸತ್ತ ಚೈತ್ರ ತಿಂಡಿ ತಿನ್ನುವುದಿಲ್ಲ ಎಂದು ಹಠ ಮಾಡುತ್ತಾರೆ. ಮನೆಯಲ್ಲಿದ್ದ ಸ್ಪರ್ಧಿಗಳು ಎಷ್ಟೇ ಸಮಾಧಾನ ಮಾಡಿದರೂ ಚೈತ್ರ ತಿಂಡಿ ತಿನ್ನಲು ಒಪ್ಪುವುದಿಲ್ಲ. ಬಳಿಕ ವಾಸುಕಿ ವೈಭವ್, ಶೈನ್ ಶೆಟ್ಟಿ, ಕುರಿ ಪ್ರತಾಪ್, ಕಿಶನ್ ಸೇರಿ ಯುವತಿಯರು ಚೈತ್ರರನ್ನು ಸಮಾಧಾನ ಮಾಡುತ್ತಾರೆ.