Tag: Chaitra Kottur

  • ಬೆಳಗ್ಗೆಯಷ್ಟೇ ವಿವಾಹ- ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕೊಟ್ಟೂರು ದಂಪತಿ

    ಬೆಳಗ್ಗೆಯಷ್ಟೇ ವಿವಾಹ- ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕೊಟ್ಟೂರು ದಂಪತಿ

    – ನನಗೆ ಚೈತ್ರಾ ಇಷ್ಟವಿಲ್ಲವೆಂದ ನಾಗಾರ್ಜುನ್

    ಕೋಲಾರ: ಬೆಳಗ್ಗೆಯಷ್ಟೇ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ವಿವಾಹ ವಿವಾದ ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದಾರೆ.

    ನಾಗಾರ್ಜುನ್ ಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ ರನ್ನ ಕೂಡಿ ಹಾಕಿ ದೇಗುಲದಲ್ಲಿ ವಿವಾಹ ಮಾಡಿಸಲಾಗಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್, ಬಲವಂತವಾಗಿ ಚೈತ್ರಾಗೆ ತಾಳಿ ಕಟ್ಟಿದ್ದಾರೆ. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎಂದು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ನಾಗಾರ್ಜುನ್ ಕುಟುಂಬದವರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.

    ಇದೀಗ ನಾಗಾರ್ಜುನ್ ಕುಟುಂಬದವರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಈ ವೇಳೆ ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಎಂದು ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆಯೇ ಹೋಗುತ್ತೇನೆ ಎಂದು ಬಿಗಿಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇಂದು ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಸ್ಥಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಿಗ್ ಬಾಸ್ ಸೀಸನ್ 7 ರಲ್ಲಿ ಭಾಗವಹಿಸಿದ್ದ ಕೋಲಾರ ಮೂಲದ ಚೈತ್ರಾ ಕೊಟ್ಟೂರು. ಮಂಡ್ಯ ಮೂಲದ ನಾಗಾರ್ಜುನ್ ಜೊತೆಗೆ ಮದುವೆಯಾಗಿದ್ದರು. ಹಲವು ವರ್ಷಗಳಿಂದ ಚೈತ್ರಾ ಹಾಗೂ ನಾಗರ್ಜುನ್ ಇಬ್ಬರು ಪ್ರೀತಿಸುತ್ತಿದ್ದರು. ಬಳಿಕ ವಿವಾಹವಾಗಿದ್ದಾರೆ ಎನ್ನಲಾಗಿತ್ತು.

  • ‘I Am In Love’ ಎಂದ ಬಿಗ್‍ಬಾಸ್ ಖ್ಯಾತಿಯ ಚೈತ್ರಾ

    ‘I Am In Love’ ಎಂದ ಬಿಗ್‍ಬಾಸ್ ಖ್ಯಾತಿಯ ಚೈತ್ರಾ

    ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್-7’ರ ಖ್ಯಾತಿಯ ನಟಿ ಚೈತ್ರಾ ಕೋಟೂರು ಬಿಗ್‍ಬಾಸ್‍ ಮನೆಯಲ್ಲಿದ್ದಾಗ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದರು. ಇದೀಗ ಪ್ರೀತಿ ಮಾಡುತ್ತಿದ್ದೀನಿ ಎಂದು ಹೇಳುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

    ನಟಿ ಚೈತ್ರಾ ಬಿಗ್‍ಬಾಸ್ ಮುಗಿದ ಮೇಲೆ ಎಲ್ಲೂ ಕಾಣಿಸಿಕೊಂಡಿಲ್ಲ. ಆದರೆ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದರು. ಇದೀಗ ನಟಿ ಚೈತ್ರಾ ಕೋಟೂರು ‘ನಾನು ಪ್ರೀತಿಯಲ್ಲಿ ಬಿದ್ದಿದ್ದೀನಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೀತಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

    ಚೈತ್ರಾ ಅವರು ಫೇಸ್‍ಬುಕ್ ಪೇಜಿನಲ್ಲಿ “ನಾನು ಪ್ರೀತಿಯಲ್ಲಿದ್ದೇನೆ. ಯಾರ ಜೊತೆಗೆ ಅಂತ ಕೇಳಬೇಡಿ. ನಾನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ನಗುವ ಎಮೋಜಿಯನ್ನು ಹಾಕಿ ತಮ್ಮ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

    ಚೈತ್ರಾ ಈ ರೀತಿ ಪೋಸ್ಟ್ ಮಾಡಿದ ತಕ್ಷಣ ಅನೇಕರು ಕಮೆಂಟ್ ಮಾಡುವ ಮೂಲಕ ಹುಡುಗ ಯಾರು? ಎಂದು ಕೇಳುತ್ತಿದ್ದಾರೆ. ಕೆಲವರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

     

    ಬಿಗ್‍ಬಾಸ್ ಮನೆಯಲ್ಲಿ ಇದ್ದಾಗ ಚೈತ್ರಾ, ಶೈನ್ ಶೆಟ್ಟಿ ಅವರನ್ನು ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಅಲ್ಲದೇ ಸ್ವತಃ ಚೈತ್ರಾ ಅವರೇ ನನಗೆ ಸೊಪ್ಪು ಮಾರುವವರ ಜೊತೆ ಮದುವೆಯಾಗಿದೆ ಎಂದು ಹೇಳಿ ಶಾಕ್ ನೀಡಿದ್ದರು. ಆದರೀಗ ಚೈತ್ರಾ ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನು ಪ್ರೀತಿಸುತ್ತಿದ್ದೀನಿ ಎಂದು ಹೇಳಿದ್ದಾರೆ.

  • ಅಯ್ಯೋ ಕಾಲಿಗೆ ಬೀಳ್ತೀನಿ ಬಿಟ್ಟು ಬಿಡಿ: ಭೂಮಿ ರಿಕ್ವೆಸ್ಟ್

    ಅಯ್ಯೋ ಕಾಲಿಗೆ ಬೀಳ್ತೀನಿ ಬಿಟ್ಟು ಬಿಡಿ: ಭೂಮಿ ರಿಕ್ವೆಸ್ಟ್

    ಖಾಸಗಿ ವಾಹಿನಿಯಲ್ಲಿ ನಡೆಯುವ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಭೂಮಿ ತಮ್ಮ ಸಹಸ್ಪರ್ಧಿ ಚೈತ್ರಾ ಕೋಟುರ್ ಗೆ ನಿಮ್ಮ ಕಾಲಿಗೆ ಬೀಳ್ತೀನಿ. ಈ ವಿಷಯವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಶುಕ್ರವಾರದ ಸಂಚಿಕೆಯಲ್ಲಿ ಭೂಮಿ ಮತ್ತು ವಾಸುಕಿ ವೈಭವ್ ಬೆಂಚ್ ಮೇಲೆ ಕುಳಿತು ಮಾತನಾಡುತ್ತಿದ್ದರು. ಇದೇ ವೇಳೆ ಚೈತ್ರಾ ಕೋಟುರ್ ಸಹ ಅಲ್ಲಿದ್ದರು. ಭೂಮಿ ಮಾತನಾಡುವಾಗ ವಾಸುಕಿ ಆಮೇಲೆ ಹೇಳು. ಈಗ ಬೇಡ, ಚೈತ್ರಾ ಇಲ್ಲಿಯೇ ಇದ್ದಾರೆಂಬ ಸನ್ನೆ ಮಾಡಿದರು. ಆದ್ರೂ ಭೂಮಿ ಮಾತ್ರ ತಮ್ಮ ಮಾತು ಮುಂದುವರಿಸಿದ್ದರು. ಕೊನೆಗೆ ವಾಸುಕಿ ಈಗ ಬೇಡ ಆಮೇಲೆ ಹೇಳು ಎಂದು ಜೋರಾಗಿಯೇ ಹೇಳಿದರು.

    ಅಲ್ಲಿಯೇ ಇದ್ದ ಚೈತ್ರಾ, ಯಾಕೆ ನಾನಿದ್ದರೆ ನಿಮಗೆ ತೊಂದರೆನಾ ಎಂದು ಪ್ರಶ್ನೆ ಮಾಡಿದರು. ಭೂಮಿಯೇ ಹೇಳಲು ಸಿದ್ಧವಿರುವಾಗ ನೀವೇಕೆ ಬೇಡ ಎಂದು ಹೇಳ್ತಿರಿ. ಈ ರೀತಿ ಮಾತನಾಡೋದು ಸರಿ ಅಲ್ಲ. ಹೀಗೆ ಮಾತನಾಡಿದ್ರೆ ನನ್ನ ಸ್ಥಾನದಲ್ಲಿರುವ ಯಾರಿಗೆ ಆದ್ರೂ ಬೇಸರ ಆಗುತ್ತೆ ಎಂದು ಅಸಮಾಧಾನ ಹೊರಹಾಕಿದರು.

    ಮನೆಯ ಎಲ್ಲ ಕಡೆಯೂ ಕ್ಯಾಮೆರಾಗಳಿವೆ. ಇಡೀ ಕರ್ನಾಟಕವೇ ನಿಮ್ಮ ಮಾತನ್ನು ಕೇಳುತ್ತಿರುವಾಗ ನಾನನಿದ್ದರೇನು ನಿಮಗೆ ತೊಂದರೆನಾ? ಭೂಮಿಯೇ ಹೇಳಲು ಸಿದ್ಧವಾಗಿರುವಾಗ ನೀವು ಏಕೆ ಬೇಡ ಎಂದು ಹೇಳುತ್ತೀರಿ. ಭೂಮಿಗೆ ತನ್ನ ಮಾತು ಹಂಚಿಕೊಳ್ಳಲು ಅವಕಾಶ ಮಾಡಿಕೊಡಿ. ಈಗ ಬೇಡ ಎಂಬ ನಿಮ್ಮ ಮಾತು ನನಗೆ ನೋವು ತರಿಸಿತು ಎಂದು ಚೈತ್ರಾ ಬೇಸರ ವ್ಯಕ್ತಪಡಿಸಿದರು.

    ಮಾತಿಗೆ ಮಾತು ಕೊಡುವುದು ತುಂಬಾ ಸರಳ. ನಾನು ನಿಮ್ಮ ಮಾತುಗಳಿಗೆ ಇದೂವರೆಗೂ ಪ್ರತಿಕ್ರಿಯಿಸಿಲ್ಲ. ನಿಮ್ಮ ರೀತಿಯೇ ಸಾತ್ವಿಕವಾಗಿ ನಾನು ಮಾತನಾಡಿದ್ರೆ ನಿಮಗೆ ತಡೆದುಕೊಳ್ಳಲು ಆಗಲ್ಲ. ನಿಮ್ಮ ಮಾತುಗಳಿಗೆ ಟಾಂಗ್ ಕೊಡಲು ನನಗೆ ಇಷ್ಟವಿಲ್ಲ ಮತ್ತು ಭೂಮಿ ಹೇಳುವ ಮಾತು ಕೇಳಿಸಿಕೊಳ್ಳಲು ಮನಸ್ಸಿಲ್ಲ ಎಂದು ಚೈತ್ರಾಗೆ ವಾಸುಕಿ ವೈಭವ್ ಉತ್ತರ ನೀಡಿದರು.

    ಕೊನೆಗೆ ಚೈತ್ರಾ ಅಲ್ಲಿಂದ ಬಾತ್‍ರೂಮಿಗೆ ತೆರಳಿದರು. ಚೈತ್ರಾ ಅಲ್ಲಿಂದ ಹೋಗುತ್ತಿದ್ದಂತೆ ವಾಸುಕಿ, ನಿನಗೆ ನಾನು ಹೇಳಿದ್ದು ಕೇಳಿಸಲಿಲ್ವಾ? ಎಂದು ಭೂಮಿಗೆ ಕ್ಲಾಸ್ ತೆಗೆದುಕೊಂಡರು. ಇಷ್ಟರಲ್ಲಿಯೇ ಚೈತ್ರಾ ಮತ್ತೆ ಹೊರಗೆ ಬಂದರು. ನನಗೆ ಯಾರ ಭಯವೂ ಇಲ್ಲ ಎಂದು ವಾಸುಕಿ ಹೇಳುತ್ತಿದ್ದಾಗ ಇಬ್ಬರ ಮಧ್ಯೆ ಪ್ರವೇಶಿಸಿದ ಚೈತ್ರಾ ಮತ್ತೆ ಸ್ಪಷ್ಟನೆ ಕೊಡಲು ಮುಂದಾದರು. ಕೊನೆಗೆ ಭೂಮಿಯೇ, ಅಯ್ಯೋ ಚೈತ್ರಾ ನಿಮ್ಮ ಕಾಲಿಗೆ ಬೀಳ್ತೀನಿ ಬಿಟ್ಟು ಬಿಡಿ ಎಂದು ಹೇಳಿ ಇಬ್ಬರ ಕೋಳಿ ಜಗಳಕ್ಕೆ ಅಂತ್ಯ ಹಾಡಿದರು.