ಕಲಬುರಗಿ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಯ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚೈತ್ರಾ ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದರು. ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದು ಯಾದಗಿರಿ ಜಿಲ್ಲೆಯ ಗಡಿ ದಾಟಿಸಿ ಬಿಟ್ಟಿದ್ದಾರೆ.
ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಗಳನ್ನು ಡಿಸಿ ಹೇರಿದ್ದರು.
ಸಿಆರ್ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಭಾನುವಾರ ಆದೇಶ ಹೊರಡಿಸಿದ್ದರು. ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿಬರ್ಂಧ ವಿಧಿಸಲಾಗಿತ್ತು.
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.
ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಚೈತ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಂಗಳೂರಿನ ಸಬ್ ಜೈಲಿನ ಸೂಪರಿಂಟೆಂಡೆಂಟ್ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಕೋರ್ಟ್ ಗೆ ಹೇಳಿಕೆ ನೀಡಿದ್ದರು.
ಇಂದಿನ ವಿಚಾರಣೆ ವೇಳೆ ಆದೇಶವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಕ್ಕೆ ಜಡ್ಜ್ ಚೈತ್ರಳಿಗೆ ತಪರಾಕಿ ಹಾಕಿದ್ದಾರೆ. ನ್ಯಾಯಾಲಯಕ್ಕೆ ಅವಮಾನ ಮಾಡಿದ್ದಕ್ಕೆ ಜಡ್ಜ್ ಚೈತ್ರಾಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಚೈತ್ರಾ ನ್ಯಾಯಾಂಗ ಬಂಧನದ ಅವಧಿ ನವೆಂಬರ್ 19ರವರೆಗೆ ಮುಂದುವರಿಯಲಿದೆ.
ಏನಿದು ಪ್ರಕರಣ?
ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸುಬ್ರಹ್ಮಣ್ಯ ಮಠ ಮತ್ತು ದೇವಸ್ಥಾನದ ಸಂಘರ್ಷ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.
ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.
ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿತ್ತು. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದರು. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.
ಮಂಗಳೂರು: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನ ನಡುವಿನ ಸಂಘರ್ಷ ಹಿಂಸೆಗೆ ತಿರುಗಿದೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ, ಗುಂಪು ಕಟ್ಟಿಕೊಂಡು ಬಂದು ಕುಕ್ಕೆಯ ಸ್ಥಳೀಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾಳೆ.
ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಮಠ ಮತ್ತು ದೇವಸ್ಥಾನದ ಸಂಘರ್ಷ ಮೊನ್ನೆ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.
ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.
ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿದೆ. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದಾರೆ. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದೆ. ತಲೆಗೆ ಗಂಭೀರ ಗಾಯಗೊಂಡ ಗುರುಪ್ರಸಾದ್ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವೇಳೆ ಲಾಠಿಚಾರ್ಜ್ ಮಾಡಿ ಗುಂಪು ಚದುರಿಸಿದ್ದ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಸ್ಥಳೀಯರನ್ನು ಕೆರಳಿಸಿದ್ದು, ಚೈತ್ರಾ ಮತ್ತು ಗ್ಯಾಂಗ್ ಸದಸ್ಯರನ್ನು ಬಂಧಿಸಬೇಕೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಗುರುವಾರ ವರ್ತಕರು ಸ್ವಯಂಪ್ರೇರಿತರಾಗಿ ಕುಕ್ಕೆ ಸುಬ್ರಹ್ಮಣ್ಯ ಬಂದ್ಗೆ ಮುಂದಾಗಿದ್ದಾರೆ.
ಕೊಪ್ಪಳ: ಹಿಂದೂ ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಒಂದೇ ಭಾಷಣಕ್ಕೆ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಚ್ಚಿಬಿದ್ದಿದ್ದಾರೆ ಎಂದು ಹೇಳಲಾಗಿದ್ದು, ಆದ್ರೆ ಅವರನ್ನು ನ್ಯಾಯ ಸಮ್ಮತವಾಗಿ ಎದುರಿಸಲಾಗದ ಅನ್ಸಾರಿ ಬೆಂಬಲಿಗರು ಚೈತ್ರಾ ತೇಜೋವಧೆಗೆ ವಾಮಮಾರ್ಗ ಅನುಸರಿಸಿದ್ದಾರೆ.
ಕೆಲವು ದಿನಗಳಿಂದ ಕೊಪ್ಪಳ ಜಿಲ್ಲೆಯಾದ್ಯಂತ ಚೈತ್ರಾ ಕುಂದಾಪುರ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದಿದ್ದಾರಂತೆ ಹೇಳುವ ಎಡಿಟೆಡ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಎರಡು ದಿನಗಳ ಹಿಂದೆ ಗಂಗಾವತಿಗೆ ಆಗಮಿಸಿದ್ದಾಗ ಚೈತ್ರಾ ಅವರು ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಈ ಮೊದಲು ಸಹ ಚೈತ್ರಾ ಕುಂದಾಪುರಕ್ಕೆ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ರು, ಫೆಬ್ರವರಿ 20ಕ್ಕೆ ಮತ್ತೊಮ್ಮೆ ಕೊಪ್ಪಳಕ್ಕೆ ಚೈತ್ರಾ ಕುಂದಾಪುರ ಆಗಮಿಸುತ್ತಿದ್ದಾರೆ ಅಂತಾ ಹಿಂದೂ ಸಂಘಟನಾ ಕಾರ್ಯಕರ್ತರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ರು. ಈ ಮೊದಲು ಸಹ ಚೈತ್ರಾ ನೇರವಾಗಿ ಶಾಸಕ ಅನ್ಸಾರಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ರು. ಈ ಹಿನ್ನೆಲೆಯಲ್ಲಿ ಅನ್ಸಾರಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ.
ಚೈತ್ರಾ ಕುಂದಾಪುರ ಹೇಳೋದು ಹೀಗೆ:
ವಾಟ್ಸಾಪ್, ಫೇಸ್ಬುಕ್ನಲ್ಲಿ ಕೆಲವೊಂದು ಗೊಂದಲ ಸೃಷ್ಟಿಸೋ ಪೋಸ್ಟ್ ಗಳು ಹರಿದಾಡುತ್ತಿದೆ. ಆದರೆ ನನಗೆ ಅಂತಹ ಯಾವುದೇ ದಾರಿದ್ರ್ಯ ಬಂದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಈ ರೀತಿ ಪೋಸ್ಟ್ ಹಾಕಿದವರಿಗೆ ಒಂದು ಸಂದೇಶ ನೀಡಲು ಇಷ್ಟಪಡುತ್ತೇನೆ. ಈಗಾಗಲೇ ಇಲಿಯಾಸ್ ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿದ್ದೇನೆ. ಈ ಸುದ್ದಿಯ ಮೂಲ ಗಂಗಾವತಿ ಎಂದು ಹೇಳಲಾಗುತ್ತಿದೆ. ಆದರೆ ಮಂಗಳೂರು-ಉಡುಪಿ ಭಾಗದ ಮುಸ್ಲಿಮರ ಮೂಲಕ ಕಾಂಗ್ರೆಸ್ ಐಟಿ ಸೆಲ್ ಸಹಾಯದ ಮೂಲಕ ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. 2015ರಲ್ಲಿ ಉಡುಪಿಯಲ್ಲಿ ನಡೆದ ಒಂದು ಘಟನೆಯ ಫೋಟೋಗಳಿಗೆ ನನ್ನ ಫೋಟೋ ಸೇರಿಸಿ ಈ ರೀತಿ ಮಾಡಲಾಗುತ್ತಿದೆ.
ಈ ರೀತಿಯ ಫೋಟೋಗಳನ್ನು ಶೇರ್ ಮಾಡುವವರನ್ನು ಬಂಧಿಸಲು ಪೊಲೀಸರಿಗೆ 2 ದಿನಗಳ ಕಾಲ ಸಮಯ ನೀಡಿದ್ದೇನೆ. ಅಲ್ಲದೇ ನಾಳೆ ಇನ್ನಷ್ಟು ಮಂದಿಗೆ ಹಾಗೂ ಕಾಂಗ್ರೆಸ್ ಸೆಲ್ ಐಟಿ ಅಧಿಕಾರಿಗಳಾದ ದಿನೇಶ್ ನಾಯಕ್, ಅನಿಲ್ ರೆಡ್ಡಿ ಹಾಗೂ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರ ಮೇಲೆ ಕೇಸನ್ನು ದಾಖಲಿಸುತ್ತೇನೆ.
ಈ ರೀತಿ ಪೋಸ್ಟ್ ಗಳಿಂದ ನನ್ನನ್ನು ಹಿಂದೂ ಸಮಾಜದ ಪರ ಕೆಲಸಗಳಿಂದ ವಿಮುಕ್ತಗೊಳಿಸಬಹುದು ಎಂದುಕೊಂಡಿದ್ದೀರಿ. ಈ ರೀತಿಯ ಸುದ್ದಿಗಳು ಈ ಹಿಂದೆ ಕೂಡ ಆಗಿತ್ತು. ಆದರೆ ಈ ಬಾರಿ ನಾನು ಗಂಭೀರವಾಗಿ ಪರಿಗಣಿಸಿದ್ದೀನಿ. ಈಗ ಈ ಪೋಸ್ಟ್ ಶೇರ್ ಮಾಡುತ್ತಿರುವ ಪ್ರತಿಯೊಬ್ಬರ ಫೋನ್ ನಂಬರ್ ಪಡೆದು ಪೊಲೀಸರಿಗೆ ಕೊಟ್ಟಿದ್ದೇನೆ. ಹಾಗಾಗಿ ಪೊಲೀಸರು 2 ದಿನಗಳಲ್ಲಿ ಅವರನ್ನು ಬಂಧಿಸಬೇಕು ಇಲ್ಲದಿದ್ದರೆ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುವ ಎಲ್ಲ ತಯಾರಿ ನಡೆಸಿಕೊಂಡಿದ್ದೇವೆ.
ಪೋಸ್ಟ್ ವೈರಲ್ ಆಗುವ ಮೊದಲೇ ಅನ್ಸಾರಿ ಬೆಂಬಲಿಗ ಪರಮೇಶ್ ಬಡಿಗಿ ಎಂಬಾತ ಈ ಸುಳ್ಳು ಪೋಸ್ಟ್ ಗಳ ಬಗ್ಗೆ ವರದಿ ಮಾಡುವಂತೆ ಸ್ಥಳೀಯ ಯೂಟ್ಯೂಬ್ ಚಾನಲ್ ವರದಿಗಾರನಿಗೆ ಮಾಹಿತಿ ನೀಡಿದ್ದಾನೆ. ವರದಿ ಮಾಡಲು ನಿರಾಕರಿಸಿದ ಯೂಟ್ಯೂಬ್ ಚಾನೆಲ್ ನ ಗೋವಿಂದಗೆ ಅನ್ಸಾರಿ ಬೆಂಬಲಿಗ ಪರಮೇಶ ಅವಾಜ್ ಹಾಕಿದ್ದಾನೆ. ಅನ್ಸಾರಿ ಬೆಂಬಲಿಗ ಪರಮೇಶ್ ವರದಿ ಬಿತ್ತರಿಸುವಂತೆ ವರದಿಗಾರನಿಗೆ ತಾಕೀತು ಮಾಡಿದ ಆಡಿಯೋ ವೈರಲ್ ಆಗಿವೆ.
ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಚೈತ್ರಾ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.