Tag: Chakravarthy Chandrachud

  • ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್

    ಸಂಚಾರಿ ವಿಜಯ್ ಹೆಸರಲ್ಲಿ ಗಿಣಿ ದತ್ತು ಪಡೆದ ಬಿಗ್‍ಬಾಸ್ ಸ್ಪರ್ಧಿ ಚಂದ್ರಚೂಡ್

    ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಬಳಿಕ ಇದೀಗ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನೇ ದಂಗುಬಡಿಸಿದೆ. ಸಂಚಾರ ನಿಲ್ಲಿಸಿದ ಸಂಚಾರಿಗೆ ಈಗಾಗಲೇ ಎಲ್ಲರೂ ಕಣ್ಣೀರ ವಿದಾಯ ತಿಳಿಸಿದ್ದಾರೆ. ಈ ಬೆನ್ನಲ್ಲೇ ಕನ್ನಡದ ಬಿಗ್ ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಅವರು ವಿಜಯ್ ಹೆಸರಿನಲ್ಲಿ ಮಹಾನ್ ಕಾರ್ಯವೊಂದನ್ನು ಮಾಡಿದ್ದಾರೆ.

    ಹೌದು, ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ಗಿಣಿಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ವಿಜಯ್ ಹೆಸರು ಸದಾ ಮನದಲ್ಲಿರುವಂತೆ ಮಾಡಿದ್ದಾರೆ. ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಪ್ರಾಣಿಸಂಗ್ರಹಾಲಯದಲ್ಲಿ ಗಿಣಿ ದತ್ತು ಪಡೆದಿರುವ ಚಂದ್ರಚೂಡ್, 1 ವರ್ಷಗಳ ಕಾಲ ಅದರ ಆರೈಕೆಯನ್ನು ಮಾಡಲಿದ್ದಾರೆ. ಇದನ್ನೂ ಓದಿ: ದಾಸನ ಮನವಿಗೆ ಸ್ಪಂದನೆ- ಪ್ರಾಣಿಗಳನ್ನು ದತ್ತು ಪಡೆದ ಅಭಿಮಾನಿಗಳು

    ತಾವು ಗಿಣಿ ದತ್ತು ಪಡೆದಿರುವ ವಿಚಾರವನ್ನು ಚಂದ್ರಚೂಡ್ ಅವರು ಸಾಮಾಜಿಕ ಜಾಲತಾನದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ ಸ್ಟಾ ಖಾತೆಯಲ್ಲಿ ಸರ್ಟಿಫಿಕೆಟ್ ಸಹಿತ ಮಾಹಿತಿ ಶೇರ್ ಮಾಡಿಕೊಂಡಿರುವ ಚಂದ್ರಚೂಡ್, ಸಂಚಾರಿ ವಿಜಯ್ ನಿನಗೆ ಗಿಣಿ ಇಷ್ಟ, ಅದಕ್ಕೆ ನಿನ್ ಹೆಸರಲ್ಲೊಂದು ತಗೊಂಡಿದ್ದೀನಿ ನೋಡಿ ಸ್ವಾಮಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಡಿಕೆ ರವಿ ಪಾತ್ರದಲ್ಲಿ ಅಭಿನಯಿಸ್ತಾರಾ ಚಕ್ರವರ್ತಿ ಚಂದ್ರಚೂಡ್?

    ಕೆಲ ದಿನಗಳ ಹಿಂದೆ ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಕೊರೊನಾ ಬಿಕ್ಕಟ್ಟಿನಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಪ್ರಾಣಿಗಳಿಗೂ ಅಷ್ಟೇ ತೊಂದರೆ ಉಂಟಾಗಿದೆ. ಮೃಗಾಲಯಗಳಲ್ಲಿ ಪ್ರಾಣಿಗಳ ಪೋಷಣೆ ಕಷ್ಟವಾಗಿದೆ. ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುವುದರ ಮೂಲಕ ನೆರವಾಗಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ದರ್ಶನ್ ಮಹತ್ಕಾರ್ಯಕ್ಕೆ ಕೈ ಜೋಡಿಸಿದ ಉಪೇಂದ್ರ

    ದರ್ಶನ್ ಮನವಿಯ ಬೆನ್ನಲ್ಲೇ ಅವರ ಅಭಿಮಾನಿಗಳು ಹಾಗೂ ಪ್ರಾಣಿಪ್ರಿಯರು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿಯೂ ಪ್ರಾಣಿಗಳನ್ನು ದತ್ತು ಪಡೆಯುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಡಿ ಬಾಸ್ ಮನವಿ ನಂತರ ಕೇವಲ ಎರಡು ದಿನದಲ್ಲಿ 25 ಲಕ್ಷ ಮೌಲ್ಯದ ದತ್ತು ಹಣ ಸಂಗ್ರಹವಾಗಿದೆ ಎಂದು ಕರ್ನಾಟಕ ಮೃಗಾಲಯ ಮಾಹಿತಿ ನೀಡಿತ್ತು. ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸೇರಿದಂತೆ ಹಲವು ಮಂದಿ ಈಗಲೂ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಮಾನವೀಯ ಕಾರ್ಯ ಮುಂದುವರಿದಿದೆ.

  • ಡಿಕೆ ರವಿ ಪಾತ್ರದಲ್ಲಿ ಅಭಿನಯಿಸ್ತಾರಾ ಚಕ್ರವರ್ತಿ ಚಂದ್ರಚೂಡ್?

    ಡಿಕೆ ರವಿ ಪಾತ್ರದಲ್ಲಿ ಅಭಿನಯಿಸ್ತಾರಾ ಚಕ್ರವರ್ತಿ ಚಂದ್ರಚೂಡ್?

    ಬೆಂಗಳೂರು: ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ, ಬಿಗ್‍ಬಾಸ್ ಸೀಸನ್-8ರಲ್ಲಿ ಸ್ಪರ್ಧಿಸುವ ಮೂಲಕ ಫೇಮಸ್ ಆದ ಚಕ್ರವರ್ತಿ ಚಂದ್ರಚೂಡ್‍ರವರಿಗೆ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪಾತ್ರದಲ್ಲಿ ಅಭಿನಯಿಸಲು ಸಿನಿಮಾ ಒಂದರ ಆಫರ್ ಸಿಕ್ಕಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಬಿಗ್‍ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು, ಇದ್ದ ಅಲ್ಪಾವಧಿಯಲ್ಲಿಯೇ ಚಕ್ರವರ್ತಿ ಚಂದ್ರಚೂಡ್‍ರವರು ಸಖತ್ ಸುದ್ದಿಯಾಗಿಲ್ಲಿದ್ದರು. ಆದರೆ ಕೊರೊನಾದಿಂದ ಅರ್ಧದಲ್ಲಿಯೇ ಬಿಗ್‍ಬಾಸ್ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಯಿತು. ಸದ್ಯ ಕೊರೊನಾ ಲಾಕ್‍ಡೌನ್‍ನಿಂದ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿರುವ ಚಕ್ರವರ್ತಿ ಚಂದ್ರಚೂಡ್‍ರವರಿಗೆ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿಯವರ ಪಾತ್ರದಲ್ಲಿ ಅಭಿನಯಿಸಲು ಆಫರ್ ಬಂದಿದ್ಯಂತೆ. ಇದನ್ನು ಓದಿ: ಯೋಗ ಮಾಡಲು ಹೋಗಿ ಟ್ರೋಲ್‍ಗೊಳಗಾದ ನಟಿ ರಾಖಿ ಸಾವಂತ್

    ಈ ಕುರಿತಂತೆ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ, ಸಾ ರಾ ಮಹೇಶೂ ಡಿಕೆ ರವಿ ಪಿಕ್ಚರ್ ತಗೀತಾರಂತೆ – ಇತ್ತ ರೋಹಿಣಿ ಸಿಂಧೂರಿ ಸಿನಿಮಾ ಘೋಷಣೆಯಾಗಿದೆ. ನಿನ್ನೆ ಹೊಸ ಡೈರೆಕ್ಟರ್ ಒಬ್ಬರು ಡಿಕೆ ರವಿ ಪಾತ್ರ ಮಾಡ್ತೀರಾ ಅಂತ ಕೇಳಿದ್ರು. ಎರಡು ಕಂಡಿಷನ್ ಹಾಕಿದೀನಿ. ಆ 37 ಮೆಸೇಜ್ ತೋರಿಸ್ತೀರಾ ಸಿನಿಮಾದಲ್ಲಿ? ಇನ್ನೊಂದು bxjwoaabxಹೊಝಖಿಧಟಿ#*%833 (ದುಡ್ಡಲ್ಲ) ನೋಡಣ… ಮುಂದಾ… ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಇತ್ತೀಚೆಗೆ ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಐಎಎಸ್ ಅಧಿಕಾರಿ ಮತ್ತು ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ ಶ್ರೀ ನಾಲ್ವಡಿ ಕೃಷ್ಣರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಭಾರತ ಸಿಂಧೂರಿ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ತಯಾರಾಗಲಿದೆ ಎಂಬ ಸುದ್ದಿ ಬಹಿರಂಗಗೊಂಡಿದೆ.

    ಒಟ್ಟಾರೆ ಸಿನಿಮಾದ ಆ ಎರಡು ಕಂಡಿಷನ್‍ನನ್ನು ನಿಗೂಢವಾಗಿಟ್ಟಿದ್ದು, ಸಿನಿಮಾಗೆ ಒಕೆ ಎನ್ನುತ್ತಾರೋ ಇಲ್ಲಾವೋ ಕಾದು ನೋಡಬೇಕಾಗಿದೆ. ಇದನ್ನು ಓದಿ: ನುಸ್ರತ್ ಜಹಾನ್ 6 ತಿಂಗಳ ಗರ್ಭಿಣಿ, ಮಗು ನನ್ನದಲ್ಲ ಎಂದ ಗಂಡ – ಬಿರುಕಿಗೆ ಕಾರಣರಾದ್ರಾ ಯಶ್?

  • ಚಕ್ರವರ್ತಿಗೆ ಬ್ಲೇಡ್ ರಾಜ ಎಂದು ಡೈರೆಕ್ಟಾಗಿ ಹೇಳಿದ್ಯಾಕೆ ಮನೆ ಮಂದಿ?

    ಚಕ್ರವರ್ತಿಗೆ ಬ್ಲೇಡ್ ರಾಜ ಎಂದು ಡೈರೆಕ್ಟಾಗಿ ಹೇಳಿದ್ಯಾಕೆ ಮನೆ ಮಂದಿ?

    ಬಿಗ್ ಬಾಸ್ ಮನೆಯಲ್ಲಿ ಈಗ ಬೇಗುದಿ ಆರಂಭವಾಗುತ್ತಿದ್ದು, ಒಬ್ಬರನ್ನೊಬ್ಬರು ದೂಷಿಸುವ ಸಂದರ್ಭ ಶುರುವಾಗಿದೆ. ಬ್ಲೇಡ್ ರಾಜ ಎಂದು ಮನೆ ಮಂದಿ ಹೇಳಿದ್ದಕ್ಕೆ ಚಕ್ರವರ್ತಿ ಚಂದ್ರಚೂಡ್ ಸಿಕ್ಕಾಪಟ್ಟೆ ಬೇಜಾರಾಗಿದ್ದಾರೆ. ಯಾಕೆ ನನ್ನನ್ನು ಎಲ್ಲರೂ ಬ್ಲೇಡ್ ರಾಜ ಎಂದರು? ಇದ್ದಿದ್ದನ್ನ ಇದ್ದಂಗೆ ಹೇಳಿದ್ಕಾ? ಏನು, ಎತ್ತ ಎಂದು ವೈಷ್ಣವಿ ಅವರನ್ನು ಪ್ರಶ್ನಿಸಿದ್ದಾರೆ.

    ಕಣ್ಮಣಿ ಬ್ಲೇಡ್ ರಾಜ ಅವಾರ್ಡ್ ಯಾರಿಗೆ ನೀಡಬೇಕು ಎಂದು ಕೇಳಿದಾಗ ಮನೆಯ ಸದಸ್ಯರು ಚಕ್ರವರ್ತಿ ಚಂದ್ರಚೂಡ್ ಹೆಸರು ಹೇಳಿದ್ದಾರೆ. ಅಲ್ಲದೆ ಕಣ್ಮಣಿ ಸಹ ಬ್ಲೇಡ್ ರಾಜ ಅವಾರ್ಡ್‍ನ್ನು ಚಕ್ರವರ್ತಿ ಚಂದ್ರಚೂಡ್ ಅವರಿಗೆ ನೀಡಿದ್ದಾರೆ. ಹೇಳಿದ್ದನ್ನೇ ಹೇಳ್ತಾರೆ, ಜಾಸ್ತಿ ಹೊತ್ತು ತಲೆ ತಿಂತಾರೆ ಎನ್ನುವ ಉದ್ದೇಶದಿಂದ ಮನೆ ಮಂದಿ ಚಕ್ರವರ್ತಿ ಹೆಸರನ್ನೇ ಪ್ರಸ್ತಾಪಿಸಿದ್ದಾರೆ. ಇದೀಗ ಈ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದ್ದು, ಯಾಕೆ ನನಗೆ ಎಲ್ಲರೂ ಬ್ಲೇಡ್ ರಾಜ ಎಂದರು ಎಂದು ಚಕ್ರವರ್ತಿ ವೈಷ್ಣವಿ ಬಳಿ ಕೇಳಿದ್ದಾರೆ. ಆಗ ವೈಷ್ಣವಿ ಸಮಾಧಾನಪಡಿಸಲು ಯತ್ನಿಸಿದ್ದಾರೆ.

    ಆರಂಭದಲ್ಲಿ ಈ ಬಗ್ಗೆ ಮಂಜು ಹಾಗೂ ದಿವ್ಯಾ ಸುರೇಶ್ ಮಾತನಾಡಿಕೊಂಡಿದ್ದು, ಚಕ್ರವರ್ತಿ ನನ್ನ ಮೇಲೆ ತುಂಬಾ ಬೇಜಾರಾಗಿದ್ದಾರೆ, ಹೆಚ್ಚು ಮಾತನಾಡಿದ್ದು ನೀನಲ್ಲವೇ ಎಂದು ನನ್ನನ್ನು ಪ್ರಶ್ನಿಸಿದರು. ತುಂಬಾ ಮಾತನಾಡಿದ್ದು ನಾನೇ ಆದರೆ ಕಣ್ಮಣಿ ಬ್ಲೇಡ್ ರಾಜ ಎಂದು ಕೇಳಿರುವುದು ಎಂದು ಹೇಳಿದೆ ಎಂದು ಮಂಜು ದಿವ್ಯಾಗೆ ಹೇಳಿದ್ದಾರೆ. ಮನಸ್ಸಲ್ಲಿ ಇನ್ನೊಬ್ಬರಿಗೆ ಕೆಟ್ಟದ್ದು ಬಯಸಿ, ಮುಂದೆ ಚೆನ್ನಾಗಿರುವುದು ಅಸಾಧ್ಯ, ಚಕ್ರವರ್ತಿ ತುಂಬಾ ಬೇಸರವಾದರು, ಆದರೆ ಅವರು ಬ್ಲೇಡ್ ರಾಜ ಎನ್ನುವುದರಲ್ಲಿ ಸತ್ಯ ಇದೆ. ಬೇರೆಯವರ ಜೊತೆ ಮಾತನಾಡುತ್ತಿದ್ದಾಗ ನಾನು ಹೋದ ತಕ್ಷಣ ಹೊಗಳಲು ಆರಂಭಿಸುತ್ತಾರೆ ಎಂದು ಚಕ್ರವರ್ತಿ ಬಗ್ಗೆ ಮಂಜು ಬಳಿ ದಿವ್ಯಾ ಸುರೇಶ್ ಹೇಳಿದ್ದಾರೆ.

    ಅಲ್ಲದೆ ಇಂದು ಸಹ ಒಬ್ಬೊಬ್ಬ ಸ್ಪರ್ಧಿ ಬಗ್ಗೆ ಹೇಳಲು ಕಣ್ಮಣಿ ಕೇಳಿದಾಗ, ಅದೇ ವಿಚಾರವನ್ನು ಮಂಜು ಪ್ರಸ್ತಾಪಿಸುತ್ತಾರೆ. ನನ್ನ ಜೊತೆಗೇ ಸಿಗರೇಟ್ ಸೇದಲು ಬಂದು, ನನಗೇ ಬ್ಲೇಡ್ ರಾಜ ಅಂತಾರಲ್ಲ ಎಂದು ಚಕ್ರವರ್ತಿ ಯೋಚಿಸುತ್ತಿದ್ದಾರೆ ಎಂದು ಮಂಜು ನೇರವಾಗಿ ಹೇಳಿದ್ದಾರೆ.

    ಬ್ಲೇಡ್ ರಾಜ ಎಂದು ಅವಾರ್ಡ್ ಕೊಟ್ಟಿದ್ದಕ್ಕೆ ಬೇಜಾರಾಗಿಲ್ಲ, ಈ ಮೈಂಡ್ ಸೆಟ್‍ಗಳು ಇನ್ನೂ ಇಂಡಿಪೆಂಡೆಂಟ್ ಆಗಿಲ್ಲವಲ್ಲ. ಕೆಟ್ಟದ್ದು ಬಂದಾಗ ಒಬ್ಬರ ತಲೆ ಮೇಲೆ ಹಾಕಲು ತಯಾರಿರುತ್ತಾರೆ, ಯಾರಿಗೂ ಮಾತನಾಡಲು ಸ್ವಾತಂತ್ರ್ಯವೇ ಇಲ್ಲ. ಏನೋ ಹೇಳಿದರೆ, ಇನ್ನೇನೋ ಅರ್ಥ ಮಾಡಿಕೊಳ್ಳುವುದು. ಒಟ್ಟಿನಲ್ಲಿ ನೆಗೆಟಿವ್‍ನ್ನು ಒಬ್ಬನ ಮೇಲೆ ಹಾಕಿ ಸುಮ್ಮನಾಗಿಬಿಡುತ್ತಾರೆ. ಅವನ ಮಾತನ್ನು ಕೇಳಿಸಿಕೊಂಡರೆ ಸ್ಟೋರೇಜ್‍ಗೆ ಜಾಗ ಇರಲ್ಲ, ಅಂತಹವನು ನನಗೆ ಬ್ಲೇಡ್ ರಾಜ ಎನ್ನುತ್ತಾನೆ ಎಂದು ಚಕ್ರವರ್ತಿ ಅವರು ಮಂಜು ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ನೀವು ಪ್ರತಿ ವಿಚಾರವನ್ನು ವಿವರವಾಗಿ ಹೇಳುವುದರಿಂದ ಅವರಿಗೆ ಆ ರೀತಿ ಅನ್ನಿಸಿರುತ್ತದೆ. ಹೆಚ್ಚು ಮಾತನಾಡುತ್ತಾರೆ ಅನ್ನಿಸುತ್ತದೆ. ಬ್ಲೇಡ್ ರಾಜ ಎನ್ನುವುದು ಕೆಟ್ಟ ಶಬ್ದ ಏನಲ್ಲ ಎಂದು ವೈಷ್ಣವಿ ಸಮಾಧಾನ ಪಡಿಸಲು ಮುಂದಾಗುತ್ತಾರೆ. ಆಗ ಅರ್ಥವಿಲ್ಲದೆ ಮಾತನಾಡುವವರಿಗೆ ಬ್ಲೇಡ್ ರಾಜ ಎನ್ನುತ್ತಾರೆ. ಹೀಗಾಗಿ ನಾನು ಇನ್ಮೆಲೆ ಹೆಚ್ಚು ಮಾತಾಡಲ್ಲ ಎಂದು ಚಕ್ರವರ್ತಿ ಹೇಳಿದ್ದಾರೆ. ಈ ಮೂಲಕ ಮನೆ ಮಂದಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

  • ದಿವ್ಯಾ ಜೊತೆ ಹೆಚ್ಚಿದ್ರೂ ಎಲ್ಲರ ಜೊತೆ ಬೆರೀತಾನೆ, ಅರವಿಂದ್ ಒಳ್ಳೆ ಹುಡ್ಗ ಗುರು

    ದಿವ್ಯಾ ಜೊತೆ ಹೆಚ್ಚಿದ್ರೂ ಎಲ್ಲರ ಜೊತೆ ಬೆರೀತಾನೆ, ಅರವಿಂದ್ ಒಳ್ಳೆ ಹುಡ್ಗ ಗುರು

    ರವಿಂದ್ ದಿವ್ಯಾ ಉರುಡುಗ ಜೊತೆ ಎಷ್ಟೇ ಇದ್ದರೂ ಎಲ್ಲರನ್ನೂ ಸಂಭಾಳಿಸುತ್ತಾನೆ, ಮಾತನಾಡಿಸುತ್ತಾನೆ, ನಮಗೂ ಟೈಮ್ ಕೊಡುತ್ತಾನೆ. ದಿವ್ಯಾ ಉರುಡುಗ ಬಂದ್ರೆ ಅರವಿಂದ್ ಸರಿ ಹೋಗಬಹುದು ಎಂದು ಚಕ್ರವರ್ತಿ ಚಂದ್ರಚೂಡ್ ಮತ್ತೆ ಬಿಗ್ ಮನೆಯಲ್ಲಿ ದಿವ್ಯಾ ನೆನಪಿಸಿಕೊಂಡಿದ್ದಾರೆ.

    ಹುಡ್ಗ-ಹುಡ್ಗಿ ಜೋಡಿಯಾಗಿದ್ರೆ ಒಂದು ರೀತಿಯ ಪ್ಯಾಂಪರಿಂಗ್ ಇರುತ್ತೆ, ಹುರುಪಿನಿಂದ ಟಾಸ್ಟ್ ಮಾಡುತ್ತಾರೆ. ಆದರೆ ನಮಗೆ ಪೇರ್ ಇಲ್ಲದಕ್ಕೆ ಹೀಗೆ ಆಗುತ್ತಿದೆ. ಈಗ ದಿವ್ಯಾ ಇಲ್ಲದ್ದಕ್ಕೆ ಅರವಿಂದ್ ಎನರ್ಜಿ ಕುಸಿಯುತ್ತಿದೆ. ವೈಷ್ಣವಿ ಹಾಗೂ ಅರವಿಂದ್‍ಗೂ ಪೇರ್ ಆಗಲ್ಲ. ಈಗ ದಿವ್ಯಾ ಬಂದ್ರೆ ಅರವಿಂದ್ ಸರಿ ಹೋಗಬಹುದು. ಆದರೆ ಅರವಿಂದ್ ತುಂಬಾ ಒಳ್ಳೆ ಹುಡುಗ ಗುರು, ನನಗೆ ಒಬ್ಬಬ್ಬರ ಬಗ್ಗೆ ಹೇಳಿ ಎಂದು ಕೇಳಿದರೆ, ಸರಿಯಾಗಿ ಹೇಳುತ್ತೇನೆ. ಇವರೆಗೆಲ್ಲ ಹೆದರುವುದಿಲ್ಲ ಎಂದು ಚಕ್ರವರ್ತಿ ನೇರವಾಗಿ ಮಾತನಾಡಿದ್ದಾರೆ.

    ಮಂಜು ಪಾವಗಡ ಬಗ್ಗೆ ಸಹ ಚಕ್ರವರ್ತಿ ಅಸಮಾಧಾನ ಹೊರ ಹಾಕಿದ್ದಾರೆ. ಮನೆಯ ಎಂಟರ್‍ಟೈನರ್, ವಿದೂಷಕ ಎನ್ನುವುದು ತಿಳಿದ ವಿಚಾರ. ಆದರೆ ಮಂಜು ತಮ್ಮ ಹಾಸ್ಯ ಪ್ರಜ್ಞೆ ಬಗ್ಗೆ ಮೈಮರೆತಿದ್ದಾರೆ. ಹೀಗಾಗಿ ಮನೆಯಲ್ಲಿ ಗುಸುಗುಸು ಶುರುವಾಗಿದ್ದು, ಒಂದು ಹುಡುಗಿಗಾಗಿ ಎನರ್ಜಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಎಂದು ಚಕ್ರವರ್ತಿ ಹೇಳಿದ್ದಾರೆ.

    ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿಯವರು ಎಲ್ಲ ಸ್ಪರ್ಧಿಗಳ ಬಗ್ಗೆ ಮಾತನಾಡುತ್ತಿರುವಾಗ ಮಂಜು ಪಾವಗಡ ಬಗ್ಗೆ ಸಹ ಮಾತನಾಡಿದ್ದು, ವಿದೂಷಕರಾಗಿ ಕೆಲಸ ಮಾಡುವುದು ತುಂಬಾ ಕಷ್ಟ. ಮತ್ತೊಬ್ಬರನ್ನು ನಗಿಸುವುದು ಸುಲಭವಲ್ಲ, ಆದರೆ ಒಂದು ಹುಡುಗಿಗಾಗಿ ಮಂಜು ತನ್ನ ಎನರ್ಜಿ ಹಾಳು ಮಾಡಿಕೊಳ್ಳುತ್ತಿದ್ದಾನೆ. ಗೆಲ್ಲುವ ಅವಕಾಶ ಕಳೆದುಕೊಳ್ಳುತ್ತಿದ್ದಾನೆ ಎಂದು ಚಕ್ರವರ್ತಿ ಬೇಸರ ವ್ಯಕ್ತಪಡಿಸಿದ್ದಾರೆ. ಕೇವಲ ಚಕ್ರವರ್ತಿ ಮಾತ್ರವಲ್ಲ, ಈ ಹಿಂದೆ ಕಿಚ್ಚ ಸುದೀಪ್ ಸಹ ಮಂಜುಗೆ ನೇರವಾಗಿ ಹೇಳಿದ್ದರು. ನೀವು ಒಬ್ಬ ಎಂಟರ್‍ಟೈನರ್, ಹಾಸ್ಯ ಕಲಾವಿದರು ಎನ್ನುವುದನ್ನೇ ಮರೆಯುತ್ತಿದ್ದೀರಿ ಎಂದು ಎಚ್ಚರಿಸಿದ್ದರು. ಆದರೂ ಮಂಜು ಮಾತ್ರ ಎಚ್ಚರವಾಗಿಲ್ಲ.

    ಮಂಜು ಬಗ್ಗೆ ಮುಂದುವರಿದು ಮಾತನಾಡಿರುವ ಚಕ್ರವರ್ತಿ, ದಿವ್ಯಾ ಸುರೇಶ್ ಹೋದರೆ ಮಂಜು ಕಥೆ ಅಷ್ಟೇ ಎಂದು ಚಕ್ರವರ್ತಿ ಹೇಳುತ್ತಾರೆ. ಇಲ್ಲ ದಿವ್ಯಾ ಹೋದರೆ ಮತ್ತೊಬ್ಬರನ್ನು ಜೊತೆ ಮಾಡಿಕೊಳ್ಳುತ್ತಾನೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

    ಇಂದು ಎಲ್ಲ ಸ್ಪರ್ಧಿಗಳ ಜೊತೆ ಮಾತನಾಡಿದ ಕಣ್ಮಣಿ ಸಹ ಮಂಜುಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಹಾಸ್ಯ ಕಲಾವಿದರಾಗಿ ಎಲ್ಲರನ್ನೂ ನಗಿಸಲು ಇನ್ನೂ ಎಷ್ಟು ದಿನಗಳು ಬೇಕು ಎಂದು ಪ್ರಶ್ನಿಸಿದ್ದಾರೆ. ಆಗ ನಾನು ಮನೆಯಲ್ಲಿದ್ದರೆ ಸೋಮವಾರದಿಂದ ನಗಿಸುತ್ತೇನೆ ಎಂದು ಮಂಜು ಹೇಳಿದ್ದಾರೆ. ಆದರೆ ಈಗ ಒಂದು ವಾರ ವೇಸ್ಟ್ ಆಯಿತಲ್ಲ ಎಂದು ಕಣ್ಮಣಿ ಬೇಸರ ವ್ಯಕ್ತಪಡಿಸಿದ್ದಾರೆ.

  • ಹೊರಗಡೆ ತುಂಬಾ ಜನ ‘ಬೇಕಾದವರಿದ್ದಾರೆ’, ಅದಕ್ಕಾಗಿ ಬಂದಿಲ್ಲ

    ಹೊರಗಡೆ ತುಂಬಾ ಜನ ‘ಬೇಕಾದವರಿದ್ದಾರೆ’, ಅದಕ್ಕಾಗಿ ಬಂದಿಲ್ಲ

    ಳೆದ ಕೆಲ ದಿನಗಳಿಂದ ಪ್ರಿಯಾಂಕಾ ಹಾಗೂ ಶಮಂತ್ ಜೋಡಿ ಕುರಿತು ಸಖತ್ ಚರ್ಚೆಯಾಗುತ್ತಿದ್ದು, ಚಕ್ರವರ್ತಿ ಇವರಿಬ್ಬರನ್ನು ಸೇರಿಸಲು ಹರಸಾಹಸಪಡುತ್ತಿದ್ದಾರೆ. ಆದರೆ ಪ್ರಿಯಾಂಕಾ ಮಾತ್ರ ನಾಚುತ್ತಲೇ ತಿರಸ್ಕರಿಸುತ್ತಿದ್ದಾರೆ. ಇಬ್ಬರೂ ಪರೋಕ್ಷವಾಗಿ ಮಾತನಾಡುವ ಮೂಲಕ ಗಮನಸೆಳೆಯುತ್ತಿದ್ದಾರೆ. ಈ ಮಧ್ಯೆ ಕನ್ವಿನ್ಸ್ ಮಾಡಲು ಬಂದ ಚಕ್ರವರ್ತಿ ಅವರಿಗೆ ನಗುತ್ತಲೇ ತಕ್ಕ ಉತ್ತರ ನೀಡಿದ್ದಾರೆ.

    ನಿನ್ನೆ ನಾನು ಹೇಳಿದ್ದಕ್ಕೆ ಶಮಂತ್ ತುಂಬಾ ಡಿಸ್ಟರ್ಬ್ ಆಗಿಬಿಟ್ಟಿದ್ದಾನೆ, ಹಾಗೆ ಹೇಳಬೇಡಿ ಸರ್ ಎಂದು ಜಗಳ ಮಾಡಿದ. ನನಗೆ ಇಂಟರೆಸ್ಟ್ ಇಲ್ಲ, ಹೋಗಿ ನೇರವಾಗಿ ಹೇಳುತ್ತೇನೆ ಅವರಿಗೆ ಎಂದು ರೇಗಾಡಿದ ಎಂದು ಚಕ್ರವರ್ತಿ ಪ್ರಿಯಾಂಕಾಗೆ ಹೇಳಿದ್ದಾರೆ. ಇದಕ್ಕೆ ಕೋಪದಿಂದಲೇ ಉತ್ತರಿಸಿದ ಪ್ರಿಯಾಂಕಾ, ನೀವು ನಿನ್ನೆ ತುಂಬಾ ಅತಿಯಾಗಿ ಮಾತನಾಡಿದಿರಿ ಎಂದು ಹೇಳಿದ್ದಾರೆ. ಇದಕ್ಕೆ ಚಕ್ರವರ್ತಿ ಉತ್ತರಿಸಿ ನನಗೇನು ಗೊತ್ತು, ನೀನು ಲವ್ ಸಿಂಬಲ್ ಮಾಡಿದ್ದಕ್ಕೆ ಆ ರೀತಿ ಅಫೆಕ್ಷನ್ ಇರಬಹುದು ಎಂದುಕೊಂಡೆ ಎಂದಿದ್ದಾರೆ. ತಕ್ಷಣವೇ ಉತ್ತರಿಸಿದ ಪ್ರಿಯಾಂಕಾ, ನನಗೆ ಹೊರಗಡೆ ತುಂಬಾ ಜನ ಬೇಕಾದವರಿದ್ದಾರೆ, ಈ ಮನೆಗೆ ಅದಕ್ಕೋಸ್ಕರ ಬಂದಿಲ್ಲ. ಆ ರೀತಿ ಯೋಚನೆಗಳೂ ಬರಲ್ಲ ಎಂದು ಖಾರವಾಗಿ ಪ್ರತಿಕ್ರಿಸಿದ್ದಾರೆ.

    ಇದಕ್ಕಾಗಿಯೇ ಬರಲ್ಲ, ಆ ರೀತಿ ಸಂಭವಿಸಬಹುದು ಎಂದು ಚಕ್ರವರ್ತಿ ಸಮರ್ಥಿಸಿಕೊಳ್ಳಲು ಹೋಗಿದ್ದಾರೆ. ನಿಮಗೆ ನೀವೇ ಹೇಗೆ ಯೋಚನೆ ಮಾಡುತ್ತೀರಿ ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ. ಹಾಗೆ ಅನ್ನಿಸಿದ್ದಕ್ಕೆ ಬಂದು ನಿನ್ನನ್ನು ಕೇಳಿದೆ, ಹಾಗೆ ಅನ್ನಿಸಿಲ್ಲ ಎಂದು ಗೊತ್ತಾದ ಮೇಲೆ ಬಿಟ್ಟಾಕಿದೆ ಎಂದು ಚಕ್ರವರ್ತಿ ಹೇಳಿದ್ದಾರೆ. ನೀವು ಅಷ್ಟು ಬುದ್ಧಿವಂತರಾಗಿ ಹೀಗೆ ಮಾಡಿದರೆ ಹೇಗೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಈ ಬಗ್ಗೆ ಶಮಂತ್ ಸಹ ಬೇಡ ಸರ್ ನಂಗೆ ಇಂಟರೆಸ್ಟ್ ಇಲ್ಲ ಅಂದ, ಸರಿ ಫ್ರೆಂಡ್ ಆಗಿರಿ ಎಂದು ಹೇಳಿದೆ ಎಂದು ಚಕ್ರವರ್ತಿ ಹೇಳುತ್ತಾರೆ.

    ಹಾಗಾದರೆ ನಮಗೆ ಇಂಟರೆಸ್ಟ್ ಇದೆ ಅಂತಾನಾ ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ. ಆಗ ನನಗೆ ಮೂರ್ನಾಲ್ಕು ದಿನದಿಂದ ಹಾಗೆ ಅನ್ನಿಸುತ್ತಿತ್ತು, ನಿಮ್ಮಿಬ್ಬರ ನಡುವೆ ಅಫೆಕ್ಷನ್ ಇದೆ ಎಂದು ಭಾಸವಾಗಿತ್ತು ಎಂದು ಚಕ್ರವರ್ತಿ ಹೇಳಿದ್ದಾರೆ. ಅಲ್ಲದೆ ನೀನು ಬಿಗ್ ಬಾಸ್‍ನಲ್ಲಿ ಅಥವಾ ಎಲ್ಲಿ ಪರಿಚಯವಾಗಿದ್ದಿಯಾ ಗೊತ್ತಿಲ್ಲ, ಒಟ್ನಲ್ಲಿ ನೀನು ಚೆನ್ನಾಗಿರಬೇಕು ಅಷ್ಟೇ. ಇದಕ್ಕಾಗಿ ನಮ್ಮ ಕೈಲಾಗಿದ್ದನ್ನು ನಾವು ಮಾಡುತ್ತೇವೆ, ನಮಗೆ ದೇವರು ಶಕ್ತಿ, ಅಸ್ಥಿತ್ವ ಕೊಟ್ಟಿದ್ದಾನೆ ಎಂದು ಚಕ್ರವರ್ತಿ ಹೇಳುತ್ತಿದ್ದಾರೆ. ಇದಕ್ಕೆ ಉತ್ತರಿಸಿದ ಪ್ರಿಯಾಂಕಾ ಅದನ್ನು ಇಂತಹ ಕೆಲಸಗಳಿಗೆ ಉಪಯೋಗಿಸಬೇಡಿ, ಬೇರೆ ಕೆಲಸಗಳಿವೆ ಅವುಗಳನ್ನು ಮಾಡಿ, ನಾವು ಯಾರನ್ನು ಮದುವೆ ಆಗಬೇಕು ಎಂಬುದು ನಮಗೆ ಗೊತ್ತಿದೆ ಎಂದು ತಕ್ಕ ಉತ್ತರ ನೀಡಿದ್ದಾರೆ.

  • ನಿನ್ ಮೇಲೆ ಆ ಹುಡುಗಿಗೆ ಲವ್ ಇದೆ ಕಣೋ

    ನಿನ್ ಮೇಲೆ ಆ ಹುಡುಗಿಗೆ ಲವ್ ಇದೆ ಕಣೋ

    ಬಿಗ್ ಬಾಸ್ ಮನೆಯಲ್ಲಿ ಬರೀ ಜೋಡಿಯದ್ದೇ ಮಾತು. ಅರವಿಂದ್ ಹಾಗೂ ದಿವ್ಯಾ ಉರುಡುಗ ಒಂದು ಕಡೆಯಾದರೆ, ಮಂಜು ಹಾಗೂ ದಿವ್ಯಾ ಸುರೇಶ್ ಅವರದ್ದೇ ಮತ್ತೊಂದು ಜೋಡಿ. ಇದನ್ನು ಕಂಡು ಶಮಂತ್‍ಗೆ ಮಾತ್ರ ಸಖತ್ ಹೊಟ್ಟೆ ಉರಿ. ನನಗೂ ಯಾರೂ ಜೋಡಿ ಆಗುತ್ತಿಲ್ಲವಲ್ಲ ಎಂಬ ಕೊರಗು. ಇದನ್ನು ಹಲವು ಬಾರಿ ದಿವ್ಯಾ ಉರುಡುಗ ಬಳಿ ಹೇಳಿಕೊಂಡಿದ್ದಾರೆ ಸಹ. ಆದರೆ ಇದೀಗ ಜೋಡಿಯಾಗುವ ಸೂಚನೆಯನ್ನು ನೀಡಿದ್ದಾರೆ, ಇದಕ್ಕೆ ಸ್ವತಃ ಚಕ್ರವರ್ತಿ ಅವರು ಆರಂಭ ಹಾಡಿದ್ದಾರೆ.

    ಹೌದು ಶಮಂತ್ ಹಾಗೂ ಪ್ರಿಯಾಂಕಾ ವಿಚಾರದಲ್ಲಿ ಚಕ್ರವರ್ತಿ ಮಾತನಾಡಿದ್ದು, ಇಬ್ಬರ ನಡುವಿನ ಕುರಿತು ವಿರಸದ ಬಗ್ಗೆ ಮಾತನಾಡುವಾಗ ಲವ್ ವಿಷಯವನ್ನೂ ತಿಳಿಸಿದ್ದಾರೆ. ಆಟವಾಡಿಕೊಂಡು, ತಿನ್ಕೊಂಡು ಇದ್ರೆ ಬಿಗ್ ಬಾಸ್ ಬೇಗ ಮನೆಯಿಂದ ಆಚೆ ಕಳುಹಿಸುತ್ತಾರೆ ಎಂದೆ ಅದ್ಕೆ ಪ್ರಿಯಾಂಕಾ ಬೇಜಾರಾಗಿದ್ದಾರೆ ಎಂದು ಶಮಂತ್ ಹೇಳುತ್ತಾರೆ. ಇದಕ್ಕೆ ಉತ್ತರಿಸಿದ ಚಕ್ರವರ್ತಿ ಅವರು, ನೀನು ಆಟವಾಡಿಕೊಂಡು, ತಿನ್ಕೊಂದು ಇರೋದು ನೀನು, ಆ ಹಡುಗಿಗೆ ಯಾಕೆ ಹೇಳ್ತಿಯಾ ಎಂದು ಕೇಳಿದ್ದಾರೆ.

    ಇಷ್ಟೆಲ್ಲಾ ಆದ್ರೂ ನಗ್ತಿದಾರೆ ಅಂದ್ರೆ ಪ್ರಿಯಾಂಕಾಗೆ ನಿನ್ನ ಮೇಲೆ ಲವ್ ಇದೆ ಎಂದು ಚಕ್ರವರ್ತಿ ಹೇಳಿದ್ದು, ಇದಕ್ಕೆ ಪ್ರಶಾಂತ್ ಸಂಬರಗಿ ಸಹ ಸಾಥ್ ನೀಡಿ, ಪ್ರೀತಿ ಇದೆ ಇಬ್ಬರೂ ಹಂಚಿಕೊಳ್ಳಲು ಆಗುತ್ತಿಲ್ಲ ಎಂದಿದ್ದಾರೆ. ಪ್ರಿಯಾಂಕಾಗೆ ಶಮಂತ್ ಬಗ್ಗೆ ಅಫೆಕ್ಷನ್ ಇದೆ, ಅವರ ಬಾಡಿ ಲಾಂಗ್ವೇಜ್, ನಗೆ, ಮಾತನಾಡುವುದು, ಕಾಮಿಡಿ ಮಾಡುವುದು ಎಲ್ಲವನ್ನೂ ನೋಡಿದರೆ ಇವರಿಬ್ಬರ ಮಧ್ಯೆ ಲವ್ ಇದೆ ಅನ್ನಿಸುತ್ತಿದೆ ಎಂದು ಮಾತನಾಡಿಕೊಂಡಿದ್ದಾರೆ.

    ಅಲ್ಲದೆ ನಿನಗೆ ಅವನ ಬಗ್ಗೆ ಅಫೆಕ್ಷನ್ ಇಲ್ವೇನಮ್ಮ ನಿಜ ಹೇಳು ಎಂದು ಚಕ್ರವರ್ತಿ ನೇರವಾಗಿ ಪ್ರಿಯಾಂಕಾಗೆ ಕೇಳುತ್ತಾರೆ. ನಾನು ಮನೋಶಾಸ್ತ್ರಜ್ಞ, ಬಾಡಿ ಲಾಂಗ್ವೇಜ್, ಕಣ್ಣುಗಳನ್ನು ನೋಡಿದರೆ ಗೊತ್ತಾಗಿ ಬಿಡುತ್ತೆ. ಒಂದೇ ಟೀಮ್‍ನಲ್ಲಿದ್ದು ನಮ್ಮನ್ನು ಯಾಕೆ ಹೀಗೆ ಸಾಯಿಸುತ್ತೀರಿ, ನಿರ್ಧಾರ ಮಾಡಿ ಎಂದಿದ್ದಾರೆ. ಅಲ್ಲದೆ ಪ್ರಿಯಾಂಕಾ ಹಾರ್ಟ್ ಸಿಂಬಾಲ್ ಮಾಡಿದ್ದಕ್ಕೆ ಅದು ನಿನಗೇ ಮಾಡಿದ್ದು ಎಂದು ಚಕ್ರವರ್ತಿ ಶಮಂತ್‍ಗೆ ಹೇಳುತ್ತಾರೆ.

    ಅದೇನು ಸಮಾಧಾನ ಮಾಡಿಕೊಂಡು ಮನವೊಲಿಸಿಕೊಳ್ಳಿ ಎನ್ನುತ್ತಾರೆ, ಆಗ ಶಮಂತ್ ಬೈಯಿಸಿಕೊಂಡು ನಾನೇ ಸಮಾಧಾನ ಮಾಡಲೇ ಎಂದು ಪ್ರಶ್ನಿಸುತ್ತಾರೆ. ಒಂದು ಹುಡುಗಿ ನಿನಗಾಗಿ ಲವ್ ಸಿಂಬಲ್ ಮಾಡಿದೆ ಎಂದರೆ ಇದಕ್ಕಿಂತ ಹಿಂಟ್ ಕೊಡಲು ಸಾಧ್ಯವಿಲ್ಲ. ನಾನು, ಪ್ರಶಾಂತ್ ಸೇರಿ ಮದುವೆ ಮಾಡಿಸುತ್ತೇವೆ ತಲೆ ಕೆಡಿಸಿಕೊಳ್ಳಬೇಡಿ. ನಿನ್ನ ಮೇಲೆ ಆ ಹುಡುಗಿಗೆ ಲವ್ ಇದೆ ಕಣೋ ಎಂದು ಶಮಂತ್‍ಗೆ ಚಕ್ರವರ್ತಿ ಹೇಳುತ್ತಾರೆ.

    ಇಷ್ಟಕ್ಕೆ ಸುಮ್ಮನಾಗದ ಚಕ್ರವರ್ತಿ ಅವರು, ಪ್ರಿಯಾಂಕಾಗೆ ಕಂಗ್ರಾಟ್ಸ್ ಹೇಳುತ್ತಾರೆ, ಆಗ ಪ್ರಿಯಾಂಕಾ ಯಾವ ಖುಷಿಗೆ ಎನ್ನುತ್ತಾರೆ. ತೀರ್ಮಾನ ಮಾಡಿದೆಯಲ್ಲ ಅದ್ಕೆ ಎಂದು ಚಕ್ರವರ್ತಿ ಹೇಳುತ್ತಾರೆ. ಆಗ ನಾಚಿದ ಪ್ರಿಯಾಂಕ ತಗ್ದು ಬಿಟ್ಟಾ ಅಂದ್ರೆ, ಹುಚ್ಚಾ ನಿಮಗೆ, ಕಾಮನ್ ಸೆನ್ಸ್ ಇಲ್ವಾ ಎಂದು ಕಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶಮಂತ್ ಒಳ್ಳೆ ಹುಡುಗ ಕಣಮ್ಮ ಎಂದು ಪ್ರಿಯಾಂಕಾಗೆ ಹೇಳುತ್ತಾರೆ ಚಕ್ರವರ್ತಿ, ನಾನು ಅವನಿಗೆ ಕನ್ವೆನ್ಸ್ ಮಾಡುತ್ತೇನೆ ನೀನು ಮುಂದುವರಿ ಎಂದು ಮತ್ತೆ ಪ್ರಿಯಾಂಕಾಗೆ ಹೇಳುತ್ತಾರೆ.

    ಯಾಕೆ ನಾವು ಹೊರಗಡೆ ಹೋಗೋಕೆ ಆಸೆನಾ ನಿಮಗೆ, ನಾವಿಬ್ರೂ ಹೊಡೆದಾಡಿಕೊಂಡು ರಕ್ತ ಬರಿಸಿಕೊಂಡ್ರೆ ಹೊರಗಡೆ ಕಳುಹಿಸುತ್ತಾರೆ ಎಂದು ಪ್ರಿಯಾಂಕಾ ಸಿಟ್ಟಾಗುತ್ತಾರೆ. ಸೆನ್ಸ್ ಇಲ್ವಾ ನಿಮಗೆ, ಏನ್ ತಮಾಷೆ ನಿಮಗೆ ಮಾಡೋಕೆ ಬೇರೆ ಕೆಲಸ ಇಲ್ವಾ? ಚೆನ್ನಾಗಿ ಆಟ ಆಡ್ತಿಲ್ಲ, 500 ರೂ. ಕಳೆದುಕೊಂಡಿದ್ದೀರಿ ಎಂದು ಚಕ್ರವರ್ತಿ ವಿರುದ್ಧ ಪ್ರಿಯಾಂಕಾ ರೇಗಾಡುತ್ತಾರೆ. ಆದರೂ ನಿನ್ ಜೀವನ ಅಲ್ವೇನಮ್ಮ ಎಂದು ಚಕ್ರವರ್ತಿ ಹೇಳುತ್ತಾರೆ, ನನ್ನ ಜೀವನ ಹಾಳಾಗಿ ಹೋಗಲಿ, ನೀವ್ಯಾರು ನನಗೆ ಕೇರ್ ಮಾಡೋಕೆ, ನನಗೆ ನಮ್ಮ ಮನೆಯಲ್ಲಿ ಇದ್ದಾರೆ. ಈ ತರ ಕೇರ್ ಮಾಡೋಕೆ ನೀವ್ಯಾರು, ಎಷ್ಟು ತಾಕತ್ ನಿಮಗೆ? ಎಂದು ರೇಗಾಡುತ್ತಾರೆ. ಇಲ್ವಾ, ತಮಾಷೆ ಮಾಡಿದ್ದಾ? ನಾನು ಸೀರಿಯಸ್ಸಾಗಿ ತಿಳಿದುಕೊಂಡೆ ಎಂದು ಚಕ್ರವರ್ತಿ ಹೇಳುತ್ತಾರೆ. ಇದನ್ನೇ ಶುಭ ಪೂಂಜಾ ಅಣಗಿಸಿ, ರಂಜಿಸಿದ್ದಾರೆ.

    ಬಳಿಕ ಶಮಂತ್ ಬಳಿ ಬಂದು, ನಾನ್ ಮಾತಾಡಿದಿನಿ ಬಾ ಮಗ ಫುಲ್ ಸೆಟ್ಲ್ ಮೆಂಟ್ ಮಾಡಿದಿನಿ. ಎಲ್ಲಾ ಸರಿ ಮಾಡಿದೆ, ಒಕೆ ಅಂತೆ ಬಾ, 735 ಮದುವೆ ಮಾಡಿಸಿದ್ದೇನೆ ಇದು 736ನೇಯದ್ದು. ಲವ್ ಮ್ಯಾರೇಜ್, ಓಡೋಗಿರೋ ಮ್ಯಾರೇಜ್ 735 ಮಾಡ್ಸಿದಿನಿ, ಇವನದ್ದು 736ನೇಯದ್ದು. ವಧುವಿನ ಕಡೆಯಿಂದ ಒಕೆ ಆಗಿದೆ, ವರನದ್ದೇ ಸಮಸ್ಯೆ ಎಂದು ಹೇಳುತ್ತಾರೆ. ಬೆಳಗ್ಗೆ ನಾನು ರಿಸಲ್ಟ್ ಹೇಳಬೇಕು ಬಾರಪ್ಪ ಸಪರೇಟ್ ಆಗಿ ಮಾತನಾಡೋಣ, ನೀನು ನನ್ನ ಪುಟ್ಟ ತಮ್ಮ ಬಾರೋ ಎಂದು ಶಮಂತ್‍ಗೆ ಚಕ್ರವರ್ತಿ ಕರೆದಿದ್ದಾರೆ. ನಾನು ಈ ರೂಟಲ್ಲಿ ಹೋಗಬೇಕಾ ಬೇಡವೇ ಎಂಬ ಕನ್ಫ್ಯೂಶನ್‍ನಲ್ಲೇ ಇದ್ದೇ, ಈಗ ರೂಟ್ ಕ್ಲಿಯರ್ ಆಯ್ತು ಎಂದು ಕೊನೆಯದಾಗಿ ಮನೆ ಮಂದಿಗೆ ಚಕ್ರವರ್ತಿ ಹೇಳಿದ್ದಾರೆ.

     

  • ಚಕ್ರವರ್ತಿಗೆ ವಿಲನ್ ಎಂದ ಸಂಬರಗಿ

    ಚಕ್ರವರ್ತಿಗೆ ವಿಲನ್ ಎಂದ ಸಂಬರಗಿ

    ಬಿಗ್ ಮನೆಯಲ್ಲಿ ಸ್ಪರ್ಧಿಗಳು ಫುಲ್ ಮಜಾ ಮಾಡುತ್ತಿದ್ದು, ಟಾಸ್ಕ್ ಜೊತೆಗೆ ಉತ್ತಮ ಮನರಂಜನೆಯನ್ನೂ ನೀಡುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿಯವರ ಸ್ನೇಹ ಸಹ ಗಮನಸೆಳೆಯುತ್ತಿದೆ. ಆದರೆ ಇದೀಗ ಇದ್ದಕ್ಕಿದ್ದಂತೆ ಸಂಬರಗಿ ಅವರು ಚಕ್ರವರ್ತಿ ಅವರಿಗೆ ವಿಲನ್ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

    ಟಾಸ್ಕ್‍ಗಳ ಮಧ್ಯೆ ಸ್ಪರ್ಧಿಗಳು ಅವರ ಆಪ್ತರೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದರು. ಆದರೆ ಇದೀಗ ಲಿವಿಂಗ್ ಏರಿಯಾದಲ್ಲಿ ಸೇರುವ ಮೂಲಕ ಹರಟೆ ಹೊಡೆದಿದ್ದಾರೆ. ಈ ವೇಳೆ ಪ್ರಶಾಂತ್ ಸಂಬರಗಿ ಅವರು ಸಿನಿಮಾದ ಪರಿಕಲ್ಪನೆ ಕುರಿತು ಮಾತನಾಡಿದ್ದು, ಯಾರಿಗೆ ಯಾವ ಪಾತ್ರ ಹೊಂದುತ್ತದೆ ಎಂಬುದನ್ನು ತಿಳಿಸಿದ್ದಾರೆ. ಈ ವೇಳೆ ಚಕ್ರವರ್ತಿ ಅವರಿಗೆ ವಿಲನ್ ಎಂದು ಹೇಳಿದ್ದು, ಅರವಿಂದ್ ಹೀರೋ, ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್ ಇಬ್ಬರನ್ನೂ ಹೀರೋಯಿನ್ ಎಂದಿದ್ದಾರೆ. ವೈಷ್ಣವಿಗೆ ಮಾತ್ರ ಹೀರೋಯಿನ್ ಅಮ್ಮ ಎಂದು ಹೇಳಿ ನಗಿಸಿದ್ದಾರೆ.

    ಲಿವಿಂಗ್ ಏರಿಯಾದಲ್ಲಿದ್ದಾಗ ಈಗ ಫಿಲಂ ಮಾಡೋಣ ಎಂದು ಹೇಳಿ, ಹೀರೋ ಅರವಿಂದ್, ಹೀರೋಯಿನ್ ಇಬ್ಬರು ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್. ವಿಲನ್ ಚಕ್ರವರ್ತಿ, ಮಂಜು ಪೊಲೀಸ್ ಇನ್‍ಸ್ಪೆಕ್ಟರ್. ನಿಧಿ ಸುಬ್ಬಯ್ಯ ಡ್ಯಾನ್ಸರ್, ನಾನು ಸುಪಾರಿ ಕೊಡಲು ಹುಡುಗಿ ಅಣ್ಣ ವಿಲನ್. ಪ್ರಿಯಾಂಕ ಹಿರೋಯಿನ್ ಅಣ್ಣನ ಪತ್ನಿ ಎಂದು ಹೇಳಿದ್ದಾರೆ. ಅಲ್ಲದೆ ಶಮಂತ್ ಇಬ್ಬರೂ ಹುಡುಗಿಯರಿಗೆ ಸ್ಕೆಚ್ ಹಾಕುವವನು ಎಂದಿದ್ದಾರೆ. ಶುಭ ಪೂಂಜಾ ಹಳೆ ಲವ್ ಸ್ಟೋರಿ ಫ್ಲ್ಯಾಶ್ ಬ್ಯಾಕ್ ಎಂದು ಹೇಳಿದ್ದಾರೆ, ತಕ್ಷಣವೇ ಶಮಂತ್ ವೈಷ್ಣವಿ ಹೀರೋಯಿನ್ ಅಮ್ಮ ಎಂದು ಹೇಳಿದ್ದಾರೆ.

    ಹೀಗೆ ಒಂದು ಸಿನಿಮಾ ಮಾಡಿದರೆ ಮನೆ ಮಂದಿ ಯಾವ್ಯಾವ ಪಾತ್ರ ನಿಭಾಯಿಸಬಹುದು ಎಂದು ಊಹಿಸಿದ್ದಾರೆ. ಒಟ್ಟಿನಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ನೀಡಿದ್ದಾರೆ.

  • ಬೈದ್ರೋ, ಮೆಟ್ಟಲ್ಲಿ ಹೊಡೆದ್ರೋ ಕನ್ಫ್ಯೂಸ್ ಆಯ್ತು

    ಬೈದ್ರೋ, ಮೆಟ್ಟಲ್ಲಿ ಹೊಡೆದ್ರೋ ಕನ್ಫ್ಯೂಸ್ ಆಯ್ತು

    ಬಿಗ್ ಬಾಸ್‍ನ ವೀಕೆಂಡ್ ಎಪಿಸೋಡ್‍ಗಳಲ್ಲಿ ಸುದೀಪ್ ಭಾಗವಹಿಸುತ್ತಿಲ್ಲ. ಅನಾರೋಗ್ಯದ ಕಾರಣ ಅವರು ವೀಕೆಂಡ್ ಪಂಚಾಯಿತಿಗೆ ಹಾಜರಾಗಿಲ್ಲ. ಇದರಿಂದ ವೀಕ್ಷಕರಿಗಿಂತ ಹೆಚ್ಚು ಮನೆ ಮಂದಿಗೆ ಬೇಸರವಾಗಿದೆ. ಹೀಗಿರುವಾಗಲೇ ವಾಯ್ಸ್ ನೋಟ್ ಮೂಲಕ ಕಿಚ್ಚ ಸ್ಪರ್ಧಿಗಳಿಗೆ ಸರ್ಪೈಸ್ ಹಾಗೂ ಶಾಕ್ ನೀಡಿದ್ದಾರೆ. ಸ್ಪರ್ಧಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಲೇ ವೀಕ್ನೆಸ್ ಬಗ್ಗೆ ಸಹ ತಿಳಿಸಿದ್ದಾರೆ.

    ಎಲ್ಲ ಸ್ಪರ್ಧಿಗಳ ಬಗ್ಗೆ ಕಿಚ್ಚ ಮಾತನಾಡಿದ್ದು, ಮನೆಯ ಬುದ್ಧಿವಂತರೆಂದೇ ಕರೆಸಿಕೊಳ್ಳುವ ಚಕ್ರವರ್ತಿ ಅವರ ಬಗ್ಗೆ ಸಹ ಹೇಳಿದ್ದಾರೆ. ಚಕ್ರವರ್ತಿಯವರು ನಂತರದಲ್ಲಿ ಈ ಬಗ್ಗೆ ಮಾರ್ಮಿಕವಾಗಿ ಹೇಳಿದ್ದಾರೆ. ತುಂಬಾ ತಿಳುವಳಿಕೆ ಇರುವವರು ನೀವು, ಆದರೂ ಒಂದು ಕಿವಿ ಮಾತು, ನಿಮ್ಮ ಮಾತು ಹಾಗೂ ತಿಳುವಳಿಕೆ ನಿಜವಾಗಿಯೂ ಚೆನ್ನಾಗಿದೆ. ಕೆಲವು ಸಲ ಬುದ್ಧಿ ಹೆಚ್ಚಾದಾಗಲೂ ಲೈಫ್ ದಾರಿ ತಪ್ಪಬಹುದು ಎನ್ನುವುದು ಗೊತ್ತಿರಲಿ ಎಂದು ಸುದೀಪ್ ಎಚ್ಚರಿಸಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿ ಚಕ್ರವರ್ತಿ, ಥ್ಯಾಂಕ್ಯೂ ಸರ್ ಅಳವಡಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಇಷ್ಟಾದ ಬಳಿಕ ಮನೆಯಲ್ಲಿನ ತಮ್ಮ ಸ್ನೇಹಿತ ಪ್ರಶಾಂತ್ ಸಂಬರಿಗಿಯವರೊಂದಿಗೆ ಮಾತನಾಡುವ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಥ್ಯಾಂಕ್ಯೂ ಸರ್ ತಿದ್ದಿಕೊಳ್ಳುವೆ ಎನ್ನುವುದರ ಜೊತೆಗೆ ಬೈದ್ರೋ ಮೆಟ್ಟಲ್ಲಿ ಹೊಡೆದರೋ ಕನ್ಫ್ಯೂಶನ್ ಆಯ್ತು, ಒಂದು ಕಡೆಯಿಂದ ಕ್ಲಿಯರ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ಎಲ್ಲರಿಗೂ ಎರಡು ಲೈನ್ ಹೊಗಳಿಕೆ, ಎರಡು ಲೈನ್ ಒದೆ. ನನಗೆ ಮಾತ್ರ ಪರ್ಫೆಕ್ಟ್ ಆಗಿ ಹೇಳಿದರು ಎಂದು ಸಂಬರಗಿ ಜೊತೆ ಮಾತನಾಡಿಕೊಂಡಿದ್ದಾರೆ.

    ಹೀಗೆ ಸುದೀಪ್ ಅವರು ಮನೆಯವರೆಲ್ಲರನ್ನೂ ಸುದೀಪ್ ಹೊಗಳುವುದರ ಜೊತೆಗೆ ಅವರ ವೀಕ್ನೆಸ್ ಬಗ್ಗೆ ಸಹ ತಿಳಿಸಿದ್ದಾರೆ. ಪ್ರಶಾಂತ್ ಸಂಬರಗಿ ಬಗ್ಗೆ ಸಹ ಮಾತನಾಡಿರುವ ಕಿಚ್ಚ, ಅಳೋ ಮಗುಗೆ ಹಾಲು ಜಾಸ್ತಿ ಸಿಗುತ್ತೆ, ಹಾಗಂತ ಅಳೋದು ಜಾಸ್ತಿ ಆದರೆ, ನೋಡುವವರಿಗೆ ಎರಡು ತಟ್ಟೋಣ ಅನ್ಸುತ್ತೆ ಎಂದು ಹೇಳುವ ಮೂಲಕ ಪ್ರಶಾಂತ್ ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ಚಾಟಿ ಬೀಸಿದ್ದಾರೆ. ಇದಕ್ಕೆ ಉತ್ತರಿಸಿರುವ ಪ್ರಶಾಂತ್ ಸಂಬರಗಿ ಜಾಸ್ತಿ ಮಾಡಿಲ್ಲ ಸರ್, ಜಾಸ್ತಿ ಆಗಿದ್ರೆ ಸರಿಪಡಿಸಿಕೊಳ್ಳುತ್ತೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

  • ದೊಡ್ಮನೆ ಸ್ಪರ್ಧಿಗಳ ಬಗ್ಗೆ ಕಮೆಂಟ್ ಪಾಸ್ ಮಾಡಿದ ಪ್ರಶಾಂತ್!

    ದೊಡ್ಮನೆ ಸ್ಪರ್ಧಿಗಳ ಬಗ್ಗೆ ಕಮೆಂಟ್ ಪಾಸ್ ಮಾಡಿದ ಪ್ರಶಾಂತ್!

    ಬಿಗ್‍ಬಾಸ್ ಮನೆಯಲ್ಲಿ 36 ಗಂಟೆಗಳ ಕಾಲ ಊಟ ಮಾಡುವುದಿಲ್ಲ ಎಂದು ಪ್ರತಿಭಟನೆ ನಡೆಸುತ್ತಿರುವ ಪ್ರಶಾಂತ್ ಸಂಬರ್ಗಿ ಮನೆಯ ಸದಸ್ಯರ ಬಗ್ಗೆ ಕಮೆಂಟ್ ಮಾಡಿದ್ದಾರೆ. ಸ್ನೇಹಿತ ಚಕ್ರವರ್ತಿ ಚಂದ್ರಚೂಡ್ ಜೊತೆ ಲಿವಿಂಗ್ ಏರಿಯಾದಲ್ಲಿ ಕುಳಿತು ಪ್ರಶಾಂತ್ ಮಾತನಾಡುತ್ತಿರುತ್ತಾರೆ. ಈ ವೇಳೆ ಚಕ್ರವರ್ತಿ ಚಂದ್ರಚೂಡ್ ಮನೆಯ ಸ್ಪರ್ಧಿಗಳ ಹೆಸರನ್ನು ಒಂದೊಂದಾಗಿ ಹೇಳಿಕೊಂಡು ಹೋಗುತ್ತಾರೆ. ಇದಕ್ಕೆ ಪ್ರತಿಯಾಗಿ ಪ್ರಶಾಂತ್ ಸಂಬರಗಿ ಉತ್ತರಿಸುತ್ತಾ ಹೋಗಿದ್ದಾರೆ.

    ಮೊದಲಿಗೆ ದಿವ್ಯಾ ಸುರೇಶ್ ಎಂದು ಚಕ್ರವರ್ತಿ ಹೇಳಿದಾಗ, ಗ್ಯಾಲರಿಯಲ್ಲಿ ಆಡುತ್ತಿದ್ದಾಳೆ ಮಂಜು ಶಿಷ್ಯೆ, ನಾನು ಡಿಫರೆಂಟ್, ನಾನು ಕಾನ್ಫಿಡೆಂಟ್ ಅಂತ ತೋರಿಸುವ ಭರದಲ್ಲಿ ನೀಚ ಸ್ವಭಾವ ಎಕ್ಸ್‍ಪೋಸ್ ಆಗುತ್ತಿದೆ. ಗೆಲ್ಲವುದೊಂದೇ ಗುರಿ, ಮಾರ್ಗ ಯಾವುದು ಬೇಕಾದರೂ ಆಗಬಹುದು ಎಂದು ಆಟ ಆಡುತ್ತಿದ್ದಾಳೆ ಅಂತ ಪ್ರಶಾಂತ್ ಹೇಳುತ್ತಾರೆ.

    ನಂತರ ಡಿಯು ಎಂದಾಗ, ಪ್ರಶಾಂತ್ ಅರವಿಂದನ ಮಡಿಲಿನಲ್ಲಿ ಅವನ ಜೊತೆಗೆ ನಾನು ಸಾಗುವೆ ಎನ್ನುತ್ತಾರೆ. ಮಂಜು ಪಾವಗಡ ಹೆಸರು ಬಂದಾಗ, ದುಷ್ಟ, ಅಹಂಕಾರಿ, ಹಾಸ್ಯ ಬಿಟ್ಟು ಎಲ್ಲ ಮಾಡುತ್ತಿದ್ದಾನೆ. ಇನ್ನೂ ರಘು ಉಸರವಳ್ಳಿ. ಪ್ರಿಯಾಂಕ, ಸುಂದರವಾಗಿದ್ದಿನಿ ಎಂಬ ಜಂಬ, ನಾನು ಡಿಫರೆಂಟ್ ಆಗಿದ್ದೇನೆ ಎಂದು ತೋರಿಸಿಕೊಳ್ಳಲು ಹೊರಟಿದ್ದಾರೆ. ಲೋ ಬುದ್ಧಿ, ಲೋ ಹೈಕ್ಯೂ ಇರುವುದರಿಂದ ನಿರ್ಧಾರಗಳು ಕರೆಕ್ಟ್ ಅಂದುಕೊಂಡು ಫೆಲ್ ಆಗುತ್ತಿರುವ ಹುಡುಗಿ ಎನ್ನುತ್ತಾರೆ.

    ಟ್ಯಾಲೆಂಟೆಂಡ್, ಕಂಪೆಷನೆಟ್, ಎಕ್ಸ್ ಪ್ರೆಸ್ ಮಾಡದೇ ಇರುವಂತಹ ಹುಡುಗ ಎಂದು ಶಮಂತ್‍ಗೆ ಹೇಳುತ್ತಾರೆ. ಚಕ್ರವರ್ತಿಯವರು ಅವರ ಹೆಸರನ್ನೇ ಸೂಚಿಸಿದಾಗ ಅತೀ ಬುದ್ಧಿವಂತಿಕೆ ಮಾತಿನ ಚಾತುರ್ಯದಿಂದ ಗೆಲ್ಲಬಹುದು ಎಂದು ತಿಳಿದು ಎಲ್ಲರನ್ನು ದುಷ್ಮನ್ ಮಾಡಿಕೊಳ್ಳುತ್ತಿರುವ ವ್ಯಕ್ತಿ ಎಂದು ಪ್ರಶಾಂತ್ ಅಭಿಪ್ರಾಯ ತಿಳಿಸುತ್ತಾರೆ.

    ಹಾಗಾದರೆ ಪ್ರಶಾಂತ್ ಸಂಬರ್ಗಿ ಎಂದು ಚಕ್ರವರ್ತಿ ಕೇಳಿದಾಗ, ಶಕ್ತಿ, ಯುಕ್ತಿಗಿಂತ ಮನುಷ್ಯತ್ವ ಮೇಲೂ ಅಂತ ಆಡುತ್ತಿರುವ ಎಮೋಷನಲ್ ಫೂಲ್ ಎಂದು ತಮಗೆ ತಾವೇ ಪ್ರಶಾಂತ್ ಹೇಳಿದ್ದಾರೆ.

  • ವೇಶ್ಯೆಯರ ಮನೆಯಲ್ಲಿ ಕೆಲಸಕ್ಕೆ ಬಿಟ್ಟ ಭಯಾನಕ ಘಟನೆ ಬಿಚ್ಚಿಟ್ಟ ಚಕ್ರವರ್ತಿ..!

    ವೇಶ್ಯೆಯರ ಮನೆಯಲ್ಲಿ ಕೆಲಸಕ್ಕೆ ಬಿಟ್ಟ ಭಯಾನಕ ಘಟನೆ ಬಿಚ್ಚಿಟ್ಟ ಚಕ್ರವರ್ತಿ..!

    ಬಿಗ್‍ಬಾಸ್ ಮನೆಯಲ್ಲಿ ರಿಯಲ್ ಆಟ ಶುರುವಾಗಿ ದಿನಗಳೇ ಕಳೆದು ಹೋಗಿವೆ. ಈ ಮಧ್ಯೆ ಕೆಲವೊಂದು ಟಾಸ್ಕ್ ಗಳ ಮೂಲಕ ಸ್ಪರ್ಧಿಗಳು ತಾವು ಅನುಭವಿಸಿದ ನೈಜ ಘಟನೆಗಳನ್ನು ಬಿಚ್ಚಿಡುತ್ತಿದ್ದಾರೆ. ಅಂತೆಯೇ ಇದೀಗ ಚಕ್ರವರ್ತಿ ಚಂದ್ರಚೂಡ್ ಅವರು ಭಯಾನಕ ಘಟನೆಯೊಂದನ್ನು ಬಹಿರಂಗಪಡಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೆ ಒಳಪಡಿಸಿದ್ದಾರೆ.

    ಹೌದು. ಸ್ಪರ್ಧಿಗಳಿಗೆ ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್ ನಲ್ಲಿ ಸ್ಪರ್ಧಿಗಳು ತಮ್ಮ ಜೀವನದಲ್ಲಿ ಅನಿಭವಿಸಿದ ಕಹಿ ಘಟನೆಯನ್ನು ತೆರೆದಿಡಬೇಕಿತ್ತು. ಈ ಟಾಸ್ಕ್ ನಲ್ಲಿ ಮಾತನಾಡಲು ಆರಂಭಿಸಿದ ಚಕ್ರವರ್ತಿ, ಸ್ಪರ್ಧಿಗಳೇ ಅಚ್ಚರಿಯಿಂದ ನೋಡುವಂತಹ ಘಟನೆಯೊಂದನ್ನು ಬಿಚ್ಚಿಟ್ಟರು.

    ಚೆನ್ನೈ ರೈಲ್ವೆ ನಿಲ್ದಾಣದಲ್ಲಿದ್ದೆ. ಊಟ ಇಲ್ಲದೆ ಮೂರು ದಿನಗಳ ಕಾಲ ಹಸಿದುಕೊಂಡಿದ್ದೆ. ನಿಲ್ದಾಣದ ಕೆಳಗಡೆ ಇದ್ದ ಟೀ ಅಗಡಿ ಪಕ್ಕ ನಿರ್ಗತಿಕನಾಗಿ ಬೀಳಬೇಕಾದ ಪರಿಸ್ಥಿತಿ ಬಂದಿತ್ತು. ಮನೆಯ ಸಂಪರ್ಕ ಕಡಿತಗೊಂಡಿತ್ತು. ಈ ವೇಳೆ ನನಗೆ ಓರ್ವನ ಪರಿಚಯವಾಯಿತು. ಆತ ನನ್ನನ್ನು ವೇಶ್ಯೆಯರ ಮನೆಗೆ ಕೆಲಸಕ್ಕೆ ಬಿಡುತ್ತಾನೆ. ಅದು ನನ್ನ ಜೀವನದ ಅತ್ಯಂತ ಕ್ರೂರ ಸಂದರ್ಭ. ಆ ಮನೆಯಲ್ಲಿ 127 ಜನ ಇದ್ರು. ಅಲ್ಲಿ ಹದಿನಾಲ್ಕೂವರೆ ವರ್ಷದ ಹುಡುಗಿಯನ್ನು ಆಕೆಯ ಚಿಕ್ಕಪ್ಪ ಮಾರಿ ಹೋಗಿದ್ದ. ಕ್ರಮೇಣ ನನಗೂ ಅವಳಿಗೂ ಪರಿಚಯ ಆಯಿತು ಎಂದು ಚಕ್ರವರ್ತಿ ವಿವರಿಸಿದರು.

    ಪರಿಚಯ ಪ್ರೀತಿಗೆ ತಿರುಗಿದ್ದು, ನೀನು ಅಷ್ಟೊಂದು ಪ್ರೀತಿ ಮಾಡುವುದಾದರೆ ನನ್ನನ್ನು ಇಲ್ಲಿಂದ ತಪ್ಪಿಸಿಕೊಂಡು ಹೋಗು ಎಂದಳು. ಹೀಗಾಗಿ ನಾವಿಬ್ಬರು ಗಾರ್ಬೆಜ್ ವಾಹನದಲ್ಲಿ ಹೊರಟೆವು. ರೈಲ್ವೆ ನಿಲ್ದಾಣಕ್ಕೆ ಹೋದೆವು. ಆಗ ಹಣ ಕೂಡ ಇರಲಿಲ್ಲ. ಹೇಗೋ ಮಾಡಿ ಬೆಂಗಳೂರು ರೈಲು ಏರಿದೆವು. ಬಂಗಾರ ಪೇಟೆ ಬಳಿ ನಮ್ಮನ್ನು ಅಡ್ಡಹಾಕಿ, ಇಬ್ಬರಿಗೂ ಚೆನ್ನಾಗಿ ಥಳಿಸಿದರು. ಪರಿಣಾಮ ಆಕೆ ಸತ್ತು ಹೋದಳು, ನಾನು ಬದುಕಿದೆ ಎಂದು ಚಕ್ರವರ್ತಿ ಗದ್ಗದಿತರಾದರು.

    ಪೊಲೀಸ್ ಒಬ್ಬರು ನನ್ನನ್ನು ಬದುಕಿಸಿದರು. ನಂತರ ನಾನು ನೇರವಾಗಿ ಹಿಮಾಲಯಕ್ಕೆ ಹೋದೆ. ಎರಡು ವರ್ಷ ಇದ್ದು, ಬೆಂಗಳೂರಿಗೆ ವಾಪಸ್ಸಾದೆ. ಬಳಿಕ ಪತ್ರಕರ್ತ, ಹೋರಾಟಗಾರನಾದೆ. ಇದೇ ವೇಳೆ ವೇಶ್ಯೆಯರಿಗೆ ಏನಾದರೂ ಮಾಡಬೇಕು ಅಂದುಕೊಂಡು ಸುಮಾರು 25 ಮಂದಿ ವೇಶ್ಯೆಯರನ್ನು ಸೇರಿಸಿ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕವಾಡಿಸಿದೆ ಎಂದು ತನ್ನ ಜೀವನದ ಕಹಿ ಘಟನೆಯನ್ನು ಚಕ್ರವರ್ತಿ ಹೇಳಿಕೊಂಡರು. ಚಕ್ರವರ್ತಿಯ ಮಾತನ್ನು ಕೇಳಿಸಿಕೊಂಡ ಇತರ ಸ್ಪರ್ಧಿಗಳು ಮೂಕವಿಸ್ಮಿತರಾದರು.