Tag: Chaluvaraya Swamy

  • ಮಂಡ್ಯ ಬಿಟ್ಟು ಬೇರೆ ಯಾವ ಜಿಲ್ಲೆ ಜನರಿಗೂ ಹೆಚ್‌ಡಿಕೆ ಭರವಸೆ ಮೇಲೆ ನಂಬಿಕೆಯಿಲ್ಲ – ಚಲುವರಾಯಸ್ವಾಮಿ

    ಮಂಡ್ಯ ಬಿಟ್ಟು ಬೇರೆ ಯಾವ ಜಿಲ್ಲೆ ಜನರಿಗೂ ಹೆಚ್‌ಡಿಕೆ ಭರವಸೆ ಮೇಲೆ ನಂಬಿಕೆಯಿಲ್ಲ – ಚಲುವರಾಯಸ್ವಾಮಿ

    ಮಂಡ್ಯ: ಮಂಡ್ಯ ಬಿಟ್ಟು ಬೇರೆ ಯಾವ ಜಿಲ್ಲೆಯಲ್ಲೂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಭರವಸೆಯ ಮೇಲೆ ಜನರಿಗೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಕಾಲೆಳೆದಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ಕ್ಷೇತ್ರದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ನನಗೆ 123 ಸೀಟು ಬಂದರೆ ಪಂಚರತ್ನ (Pancharathna) ಯೋಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಾಗೂ 123 ಸೀಟು ಬರಲಿಲ್ಲ ಅಂದರೆ ನೀವ್ಯಾರು ನನ್ನನ್ನು ಏನೂ ಕೇಳಬಾರದು ಎಂದು ಕೂಡಾ ಹೇಳಿದ್ದಾರೆ. ಬೆಳಗಾವಿ, ಮಂಗಳೂರು, ಗುಲ್ಬರ್ಗ, ಕೋಲಾರದಲ್ಲಿ ಅವರು ಭರವಸೆ ಕೇಳಲ್ಲ. ಬರೀ ಮಂಡ್ಯದಲ್ಲಿ ಕೇಳಿದರೆ ಏನು ಪ್ರಯೋಜನ ಎನ್ನುವ ಮೂಲಕ ಈ ಬಾರಿ ಮಂಡ್ಯ ಜನರು ಜೆಡಿಎಸ್ (JDS) ಬೆಂಬಲಿಸದೆ ಕಾಂಗ್ರೆಸ್ (Congress) ಬೆಂಬಲಿಸಿ ಎಂದರು. ಇದನ್ನೂ ಓದಿ: ನನ್ನ ಹೇಳಿಕೆ ತಿರುಚಿದ್ದಾರೆ: ಡಿಕೆಶಿನ ಹೈಕಮಾಂಡ್ ಸಿಎಂ ಮಾಡಲ್ಲ ಹೇಳಿಕೆಗೆ ಸಿದ್ದು ಸ್ಪಷ್ಟನೆ 

    31 ಜಿಲ್ಲೆಯ ಎಲ್ಲಾ ವರ್ಗದ ಜನ ಅವರ ಭರವಸೆಯ ಬಗ್ಗೆ ನಂಬಿಕೆ ಇಟ್ಟರೆ ಜೆಡಿಎಸ್‌ಗೆ 123 ಸೀಟ್ ಬರಬಹುದು. ಆದರೆ ಮಂಡ್ಯ ಬಿಟ್ಟು ಬೇರೆ ಯಾವ ಜಿಲ್ಲೆಯಲ್ಲೂ ಅವರ ಭರವಸೆಯ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸಿಎಂ ಆಗೋ ಕನಸು ನನಸಾಗಲ್ಲ: ಬೊಮ್ಮಾಯಿ

    ಕುಮಾರಸ್ವಾಮಿ ಅವರಿಗೆ ಯಾವ ಪಕ್ಷವೂ ಅಧಿಕಾರಕ್ಕೆ ಬರಬಾರದು. ನಮ್ಮನ್ನು ಮಧ್ಯದಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ಅಂದುಕೊಂಡಿದ್ದಾರೆ. ಕಳೆದ ಬಾರಿ ಮಂಡ್ಯ ಜಿಲ್ಲೆಯ ಜನರ ಆಶೀರ್ವಾದದಿಂದ 37 ಸೀಟ್ ಬಂತು. ಹೀಗಾಗಿ ಕಾಂಗ್ರೆಸ್, ಬಿಜೆಪಿ (BJP) 113 ಸೀಟ್ ದಾಟಲಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಕುಮಾರಸ್ವಾಮಿಯವರ ಮನೆಗೆ ಹೋಗಿ ಅವರನ್ನು ಸಿಎಂ ಮಾಡಿತ್ತು. ಆದರೆ ಅವರು ಸರಿಯಾಗಿ ಅಧಿಕಾರ ಮಾಡಲಿಲ್ಲ. ಈ ಬಾರಿಯಾದರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಶಾಸಕ ಟಿ.ಡಿ ರಾಜೇಗೌಡ ಹಂಚಿದ್ದ ಕುಕ್ಕರ್ ಬ್ಲಾಸ್ಟ್- ರೊಚ್ಚಿಗೆದ್ದ ಹಳ್ಳಿಗರು

  • ಹೆಚ್‍ಡಿಕೆ ಬರೀ ಹಿಟ್ & ರನ್, ದಾಖಲೆ ಇದ್ರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

    ಹೆಚ್‍ಡಿಕೆ ಬರೀ ಹಿಟ್ & ರನ್, ದಾಖಲೆ ಇದ್ರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

    ಚಾಮರಾಜನಗರ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರದ್ದು, ಬರೀ ಹಿಟ್ ಅಂಡ್ ರನ್ ಕೇಸ್. ಎಲ್ಲ ತಮಗೇ ಗೊತ್ತಿದೆ ಅನ್ಕೊಂಡಿದ್ದಾರೆ ನನ್ನತ್ರ ಸಿಡಿ ಇದೆ, ಕ್ಯಾಸೆಟ್ ಇದೆ ಅಂತಾರೆ. ಇದ್ದರೆ ಬಿಡುಗಡೆ ಮಾಡಲಿ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಲೋಕಲ್ ರಾಜಕೀಯ ಮಾಡುತ್ತಾ ಮೈಲೇಜ್ ತೆಗೆದುಕೊಳ್ಳಲು ಹೊರಟಿದ್ದಾರೆ. ಇವರಿಗೆ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳು ಬೇಕಿಲ್ಲ ಎಂದು ಆರೋಪಿಸಿದರು.

    ಜವಾಬ್ದಾರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಸುಮಲತಾ ಕೆಸರೆರಚಾಟ ಸರಿಯಲ್ಲ. ತಮ್ಮ ವೈಫಲ್ಯತೆಗಳನ್ನು ಮುಚ್ಚಿಕೊಳ್ಳಲು ಇಬ್ಬರೂ ಬೀದಿಜಗಳ ಆಡುತ್ತಿದ್ದಾರೆ. ಜನರು ಸಂಕಷ್ಟದಲ್ಲಿರುವಾಗ ಇವರು ಜಗಳ ಆಡುವ ಅವಶ್ಯಕತೆ ಇದೆಯಾ..? ಕೋವಿಡ್ ಸಂಕಷ್ಟದಲ್ಲಿ ಇವರು ಯಾರ ಮನೆ ಬಳಿ ಹೋಗಿದ್ದಾರೆ, ಯಾರ ಕಷ್ಟ ಆಲಿಸಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್‍ಗೆ ನಾನೇನು ಗುಲಾಮನಾಗಿದ್ನಾ: ಫೋಟೋ ವೈರಲ್‍ಗೆ ಹೆಚ್‍ಡಿಕೆ ಪ್ರಶ್ನೆ

    ಹೀಗೆ ಪರಸ್ಪರ ಜಗಳ ಆಡುವುದು ಇಬ್ಬರಿಗು ಗೌರವ ಅಲ್ಲ. ಜನರ ಹಿತಾಸಕ್ತಿ ದೃಷ್ಟಿಯಿಂದ ಕೆಲಸ ಮಾಡುವುದು ಬಿಟ್ಟು ಹೀಗೆ ಜಗಳವಾಡುತ್ತಿದ್ದರೆ ಜನ ನಗಲ್ಲವೇ ಎಂದ ಅವರು, ಮನ್ಮುಲ್ ಹಗರಣ ಇದೆ. ಸಕ್ಕರೆ ಕಾರ್ಖಾನೆ ವಿಚಾರ ಇದೆ. ಕೆ.ಅರ್.ಎಸ್ ವಿಚಾರ ಇದೆ. ಇದೆಲ್ಲವನ್ನು ಬಿಟ್ಟು ಬೀದಿ ಜಗಳ ಆಡುವುದು ಎಷ್ಟು ಸರಿ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

    ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಸತ್ಯ ಎಂದ ಅವರು, ಕೆ.ಆರ್.ಎಸ್ ಗೆ ಹಾನಿಯುಂಟು ಮಾಡುವ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕು. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯ ಕೊನೆಯಲ್ಲಿ ಅಕ್ರಮಗಣಿಗಾರಿಕೆ ಬಯಲಿಗೆ ಬಂತು. ಅವರು ಕೂಡ ತನಿಖೆಗೆ ಆದೇಶ ಕೊಟ್ಟಿದ್ದರು. ಆ ಬಳಿಕ ಕುಮಾರಸ್ವಾಮಿ ನಂತರ ಯಡಿಯೂರಪ್ಪ ಸಿಎಂ ಆದರು. ಅದು ಅಲ್ಲಿಗೆ ನಿಂತು ಹೋಯಿತು. ಸರ್ಕಾರ ಹೀಗೆ ಉದಾಸೀನ ಮಾಡಿದರೆ ಈ ರೀತಿ ಕೆಸರೆರೆಚಾಟ ನಡೆಯುತ್ತಾ ಇರುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

  • ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್

    ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್

    – ದೇವೇಗೌಡ್ರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು

    ಮಂಡ್ಯ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದರೋಡೆ ಮಾಡುವುದಕ್ಕೆ ನಾವು ಹೇಳಿದ್ವಾ, ಇದಕ್ಕೆಲ್ಲ ನಾನು ಹೊಣೆಯೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ ಎನ್ನುವ ಮೂಲಕ ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಎಲ್ಲರೂ ತಮ್ಮ ಮೊಬೈಲ್ ಸ್ವಿಚ್ಛ್ ಆಫ್ ಮಾಡಿದ್ದರು. ಒಕ್ಕಲಿಗ ಸಮಾಜದ ನಾಯಕರು, ಯುವಕರು ಹಾಗೂ ನಾನು ಆ ಸಭೆಗೆ ಹೋಗಿಲ್ಲ ಎಂದು ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ದೂಷಣೆ ಮಾಡುತ್ತಿದ್ದಾರೆ. ಇಂತಹ ದರೋಡೆ ಮಾಡಲು ನಾವು ಹೇಳಿದ್ವಾ. ದರೋಡೆ ಮಾಡಿ ಸಾರ್ವಜನಿಕರಿಗೆ ಹಂಚುತ್ತಾರಾ. ಇದಕ್ಕೆ ನಾನು ಹೊಣೆನಾ..? ನಾನು ಸಭೆಗೆ ಯಾಕೆ ಹೋಗಬೇಕಿತ್ತು..? ಎಂದೆಲ್ಲ ಹೆಚ್‍ಡಿಕೆ ಅವರು ಮಾತನಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಎಷ್ಟು ಸತ್ಯ, ಸುಳ್ಳು ಎಂದು ನನಗೆ ಗೊತ್ತಿಲ್ಲ. ಹೀಗಾಗಿ ಸತ್ಯ ಗೊತ್ತಿಲ್ಲದೇ ನಾನು ಮಾತನಾಡುವುದು ತಪ್ಪು ಎಂದು ಗಂಭೀರ ಆರೋಪ ಮಾಡಿ ಯಾರೋ ಹೇಳುತ್ತಿದ್ದಾರೆಂದು ಹೇಳಿ ಚಲುವರಾಯಸ್ವಾಮಿ ಜಾರಿಕೊಂಡಿದ್ದಾರೆ.

    ಹೆಚ್‍ಡಿಕೆ ಅವರು ಸಿಎಂ ಪಟ್ಟ ಉಳಿಸಲು ಎಲ್ಲರನ್ನೂ ಎದುರಾಕಿಕೊಂಡರು. ಇಂದು ಡಿಕೆಶಿ ಜೊತೆಯಲ್ಲಿ ಕುಮಾರಸ್ವಾಮಿ ನಿಲ್ಲಲಿಲ್ಲ. ಕುಮಾರಸ್ವಾಮಿ ಅವರಿಗೆ ಇಂತಹ ಕಷ್ಟ ಬಂದಿದ್ದರೆ ಡಿಕೆಶಿ ಸ್ಟೇಷನ್ ಹತ್ತಿರನೇ ಕೂರುತ್ತಿದ್ದರು. ಆದರೆ ಡಿಕೆಶಿಗೆ ಮಾನಸಿಕವಾಗಿ ಧೈರ್ಯ ತುಂಬ ಬಹುದಿತ್ತು. ಒಕ್ಕಲಿಗ ಸಂಘಟನೆಗಳಿಂದ ನಡೆದ ಹೋರಾಟಕ್ಕೂ ಸಪೋರ್ಟ್ ಮಾಡಲಿಲ್ಲ. ಅದನ್ನು ಬಿಟ್ಟು ಅಂದು ಚನ್ನಪಟ್ಟಣದಲ್ಲಿ ಕಾರ್ಯಕ್ರಮವನ್ನು ಹಾಕಿಕೊಂಡರು. ಉದ್ದೇಶ ಪೂರ್ವಕವಾಗಿ ಚನ್ನಪಟ್ಟಣಕ್ಕೆ ಹೋಗಿದ್ರಾ ಅಥವಾ ಹೋರಾಟಕ್ಕೆ ಹೋಗುವ ಜನರನ್ನು ಅವೈಡ್ ಮಾಡೋದಕ್ಕೆ ಹೋಗಿದ್ರಾ ಎಂದು ಡಿಕೆಶಿ ಪರ ಒಕ್ಕಲಿಗ ಸಮುದಾಯದ ಹೋರಾಟಕ್ಕೆ ಗೈರಾದ ಹೆಚ್‍ಡಿಕೆಗೆ ಮಾಜಿ ಸಚಿವರು ಪ್ರಶ್ನೆ ಮಾಡಿದರು.

    ಡಿ.ಕೆ.ಶಿವಕುಮಾರ್ ಮಾಡಬಾರದ ಕ್ರೈಮ್ ಮಾಡಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆಗೆ ಮಾಡಿಕೊಳ್ಳಲು ಡಿಕೆಶಿ ಬಿಡಲಿಲ್ಲ. ಕಾಂಗ್ರೆಸ್ ರಕ್ಷಣೆ ಮಾಡಿಕೊಳ್ಳಲು ನಿಂತಿದ್ದರು. ಈ ಸಿಟ್ಟು ಡಿಕೆಶಿ ಬಿಜೆಪಿ ನಾಯಕರಿಗೆ ಇತ್ತು. ಹಿಂದೆ ದೇವೇಗೌಡರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು. ಹೀಗೆ ಇಲ್ಲದೆಲ್ಲ ಚರ್ಚೆ ನಡೆಯುತ್ತಿದೆ. ಒಂದಲ್ಲೊಂದು ದಿನ ಸತ್ಯ ಹೊರಗಡೆ ಬರುತ್ತದೆ. ಜಾಣ್ಮೆಯಿಂದಲೇ, ಪರೋಕ್ಷವಾಗಿ ಡಿಕೆಶಿ ಬಂಧನಕ್ಕೆ ದೇವೇಗೌಡರ ಕುಟುಂಬ ಕಾರಣ ಎಂದು ಚಲುವರಾಯಸ್ವಾಮಿ ಆರೋಪ ಮಾಡಿದರು.

    ದೇವೇಗೌಡರು ಹೇಳೋದೆಲ್ಲ ಸುಳ್ಳು. ಅವರಿಂದ ಅನೇಕರಿಗೆ ನೋವಾಗಿದೆ. ಜನರಿಗೆ ಮನವರಿಕೆ ಆಗುವವರೆಗೂ ಇದು ನಡೆಯುತ್ತಲೇ ಇರುತ್ತದೆ. ಜನರಿಗೆ ಅರ್ಥವಾದಾಗ ಎಲ್ಲವೂ ಸರಿಹೋಗುತ್ತದೆ. ಆ ದಿನ ಬೇಗ ಬರುತ್ತದೆ. ಜಿ.ಟಿ ದೇವೇಗೌಡರು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಶ್ರೀನಿವಾಸ್ ಕೂಡ ಸಿಡಿದೆದ್ದು ಹಲವು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಜೆಡಿಎಸ್ ವರಿಷ್ಠರಿಗೆ ಯಾರೇ ಹೋದರೂ, ಬಂದ್ರೂ ತೆಲೆಕೆಡಿಸಿಕೊಳ್ಳಲ್ಲ. ಈ ಭಾಗದ ಜನ ತಮ್ಮನ್ನು ನಂಬುತ್ತಾರೆ, ಯಾವುದೇ ಸರ್ಕಾರಗಳಲ್ಲಿ ಕಿಂಗ್ ಮೇಕರ್ ಆಗುತ್ತೇವೆ ಅಂದುಕೊಂಡಿದ್ದಾರೆ. ಅಂತಿಮವಾಗಿ ಮತದಾರರೇ ತೀರ್ಮಾನ ಮಾಡಬೇಕು ಎಂದರು.

    ಒಕ್ಕಲಿಗರು ಬೆಳೆಯಲು ದೇವೇಗೌಡರು ಬಿಡಲ್ಲ ಎಂಬ ನಾರಾಯಣಗೌಡ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಬಹಳ ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಬಹಳಷ್ಟು ಒಕ್ಕಲಿಗರು ಪರಿಸ್ಥಿತಿ ಎದುರಿಸಿದ್ದಾರೆ. ಮಾಜಿ ಮಂತ್ರಿಯಾಗಿ ಸ್ವಲ್ಪ ಗುರುತಿಸಿಕೊಂಡವರು ಜೆಡಿಎಸ್ ನಲ್ಲಿ ಉಳಿದಿಲ್ಲ. ಜೆಡಿಎಸ್ ಅನ್ನು ಸಾರ್ವತ್ರಿಕ ಪಕ್ಷವಾಗಿ, ರಾಜಕೀಯ ಪಕ್ಷವಾಗಿ ಬೆಳೆಸಲಿಲ್ಲ. ಪಕ್ಷವನ್ನು ಕೇವಲ ಕುಟುಂಬದ ಹಿಡಿತಕ್ಕೆ ಸೀಮಿತಗೊಳಿಸಿದರು. ಆದ್ದರಿಂದ ಯಾರೂ ಬೆಳೆಯಲು ಸಾಧ್ಯವಾಗಲಿಲ್ಲ ಎಂದು ಗರಂ ಆದರು.

  • ಭವಿಷ್ಯದ ರಾಜಕಾರಣಕ್ಕಾಗಿ ‘ಕೈ’ ಹಿಡಿಯುತ್ತಾರಾ ನೂತನ ಸಂಸದೆ ಸುಮಲತಾ?

    ಭವಿಷ್ಯದ ರಾಜಕಾರಣಕ್ಕಾಗಿ ‘ಕೈ’ ಹಿಡಿಯುತ್ತಾರಾ ನೂತನ ಸಂಸದೆ ಸುಮಲತಾ?

    ಮಂಡ್ಯ: ಮಾಜಿ ಸಚಿವ ಚಲುವರಾಯಸ್ವಾಮಿ ಹುಟ್ಟು ಹಬ್ಬಕ್ಕೆ ಶುಭಕೋರಿ ಮಂಡ್ಯ ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್‍ಗಳಲ್ಲಿ ಸುಮಲತಾ ಫೋಟೋ ರಾರಾಜಿಸುತ್ತಿದ್ದು, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸುಮಲತಾ ಪರ ಪ್ರಚಾರ ಮಾಡಿದ್ದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಚರ್ಚೆ ಮತ್ತೆ ಜಿಲ್ಲೆಯಲ್ಲಿ ಜೋರಾಗಿ ಕೇಳಿ ಬರುತ್ತಿದೆ.

    ಇಂದು ಚಲುವರಾಯಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ಮಂಡ್ಯ ನಗರದ ಹಲವೆಡೆ ಶುಭಕೋರಿ ಫ್ಲೆಕ್ಸ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ತಮ್ಮ ಭವಿಷ್ಯದ ರಾಜಕೀಯ ದೃಷ್ಟಿಯಿಂದ ಕಾಂಗ್ರೆಸ್ ಕೈ ಹಿಡಿಯಲಿದ್ದಾರಾ ಎಂಬ ಚರ್ಚೆ ಕೂಡ ಶುರುವಾಗಿದೆ.

    ಮಾಜಿ ಸಚಿವ ಸಲುವರಾಯಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಕೋರಿ ಹಾಕಲಾಗಿರುವ ಫ್ಲೆಕ್ಸ್ ಗಳಲ್ಲಿ ಚುನಾವಣೆಯಲ್ಲಿ ಸುಮಲತಾ ಪರ ಪ್ರಚಾರ ನಡೆಸಿ ಕಾಂಗ್ರೆಸ್‍ನಿಂದ ಉಚ್ಚಾಟನೆಗೊಂಡ ಮುಖಂಡರೇ ಪ್ರಮುಖರಾಗಿದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಉಚ್ಚಾಟಿತ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ, ಮಾಜಿ ಶಾಸಕ ಎಚ್.ಬಿ.ರಾಮು ಹಲವರ ಫೋಟೋ ಹಾಕಲಾಗಿದೆ.

    ಇದರೊಂದಿಗೆ ಫ್ಲೆಕ್ಸ್ ಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಜೊತೆ ಸುಮಲತಾ ಫೋಟೊ ಕೂಡ ಇದೆ. ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಇದ್ದರೂ ಮುಂಬರುವ ದಿನಗಳಲ್ಲಿ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮತ್ತೆ ಮಂಡ್ಯದಲ್ಲಿ ಕೈ ಸೇರ್ಪಡೆಯಾಗುವದು ಅನುಮಾನವಿಲ್ಲ. ಇದಕ್ಕೆ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಗಳಲ್ಲಿ ಸುಮಲತಾ ರಾರಾಜಿಸುತ್ತಿರುವುದೇ ಸಾಕ್ಷಿಯಾಗಿದೆ ಎಂಬ ಮಾತು ಕ್ಷೇತ್ರದ ರಾಜಕೀಯ ವಲಯದಿಂದ ಕೇಳಿ ಬಂದಿದೆ.

    ಇತ್ತ ಸುಮಲತಾ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವುದು ಬಿಡುವುದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ಮಂಡ್ಯ ಜನರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿದ್ದಾರೆ. ಜನರು ಏನು ಹೇಳುತ್ತಾರೆ ಅದನ್ನೇ ಅವರು ತೀರ್ಮಾನಿಸುತ್ತಾರೆ ಎಂದರು.

  • ಎಲೆಕ್ಷನ್‍ನಲ್ಲಿ ಓಡಾಡಿದ್ದೀರಿ, ರೆಸ್ಟ್ ಮಾಡಿ- ಸುಮಲತಾಗೆ ಚಲುವರಾಯಸ್ವಾಮಿ ಸಲಹೆ

    ಎಲೆಕ್ಷನ್‍ನಲ್ಲಿ ಓಡಾಡಿದ್ದೀರಿ, ರೆಸ್ಟ್ ಮಾಡಿ- ಸುಮಲತಾಗೆ ಚಲುವರಾಯಸ್ವಾಮಿ ಸಲಹೆ

    -ನಮ್ಮ ಪರವೇ ಸಮೀಕ್ಷಾ ವರದಿಗಳಿವೆ ಎಂದ ಮಾಜಿ ಸಚಿವ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಹೋರಾಟ ಕಂಡುಬಂದಿದ್ದ ಮಂಡ್ಯ ಕ್ಷೇತ್ರದಲ್ಲಿ ಸದ್ಯ ಸೋಲು ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ಇದೇ ವೇಳೆ ಇಂದು ಮದುವೆ ಕಾರ್ಯಕ್ರಮವೊಂದರಲ್ಲಿ ಸುಮಲತಾ ಅಂಬರೀಶ್ ಮತ್ತು ಮಾಜಿ ಚಲುವರಾಯಸ್ವಾಮಿ ಅವರು ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಮಂಡ್ಯದ ಕನಕ ಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸುಮಲತಾ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಪರಸ್ಪರ ಭೇಟಿಯಾದರು. ಭೇಟಿ ವೇಳೆ ಚುನಾವಣೆಯ ಸಂದರ್ಭದಲ್ಲಿ ಸಾಕಷ್ಟು ಓಡಾಡಿದ್ದೀರಿ. ಹೀಗಾಗಿ ಈವಾಗ ಸ್ಪಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸುಮಲತಾಗೆ ಚಲುವರಾಯ ಸ್ವಾಮಿ ಸಲಹೆ ನೀಡಿದ್ದಾರೆ.

    ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯ ಸ್ವಾಮಿ, ಸ್ವಾಭಿಮಾನದ ಗೆಲುವು ಎಂದು ಎಲ್ಲಾ ಸರ್ವೆ ರಿಪೋರ್ಟ್ ನಮ್ಮ ಪರ ಬಂದಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸುಮಲತಾ ಪರ ನಿಂತಿದ್ದಾರಾ ಎಂಬ ಅನುಮಾನ ಮೂಡಲು ಕಾರಣರಾದರು.

    ಎಲ್ಲರೂ ಅವರಿಗೆ ಬೇಕಾದಂತೆ ಅಭಿಪ್ರಾಯ ಪಡುತ್ತಿದ್ದಾರೆ. ಸರ್ಕಾರ ಇದ್ದು, ಸಚಿವರು, ಶಾಸಕರು, ಮುಖ್ಯಮಂತ್ರಿ, ಮಾಜಿ ಪ್ರಧಾನಿ, ಮುಖ್ಯಮಂತ್ರಿ ಕುಟುಂಬ ಇಷ್ಟು ಜನ ಮಂಡ್ಯದಲ್ಲಿ ಕೆಲಸ ಮಾಡಿದ್ದಾರೆ. ಇಷ್ಟು ಜನ ಕೆಲಸ ಮಾಡಿ ಫಲಿತಾಂಶ ಬರುವ ಮೊದಲೇ ಗೆಲುವು ನಮ್ಮದು ಅಂದರೆ ಯಾರು ಒಪ್ಪುತ್ತಾರೆ? ಮಂಡ್ಯ ಜನ ತೀರ್ಮಾನ ಮಾಡಿ ಆಗಿದ್ದು, ಅದರ ಪ್ರಕಟಣೆಗಾಗಿ ಕಾಯುತ್ತಿದ್ದೇವೆ. ಅಲ್ಲಿವರೆಗೂ ಕಾಯುವ ತಾಳ್ಮೆಯನ್ನ ಜಿಲ್ಲೆಯ ಜನರು ನಮಗೆ ಕಲಿಸಿದ್ದಾರೆ. ಸುಮಲತಾ ಪರವಾಗಿ ದರ್ಶನ್, ಯಶ್ ಸೇರಿದಂತೆ ಜಿಲ್ಲೆಯ ಹಲವು ಸಂಘಟನೆಗಳು ಹಾಗೂ ಎಲ್ಲ ವರ್ಗದವರು ದುಡಿದಿದ್ದಾರೆ ಎಂದರು. ಇದೇ ವೇಳೆ ಸುಮಲತಾ, ನಿಖಿಲ್ ಪರ ಯಾರು ಬೆಟ್ಟಿಂಗ್ ಕಟ್ಟಬಾರದು. ಯಾರೆ ಸೋತರು ನಮ್ಮ ಜಿಲ್ಲೆಯವರಿಗೆ ನಷ್ಟ ಆಗುತ್ತದೆ. ಹೀಗಾಗಿ ಬೆಟ್ಟಿಂಗ್ ಬೇಡ ಎಂದು ಮನವಿ ಮಾಡಿದರು.

    ದೇಶದ ಫಲಿತಾಂಶವೇ ಬೇರೆ ಬರಲಿದ್ದು, ಮಂಡ್ಯ ಜಿಲ್ಲೆಯ ಫಲಿತಾಂಶವೇ ಬೇರೆಯಾಗಲಿದೆ. ಎಲ್ಲಾ ಮಾಧ್ಯಮದವರು ಮಂಡ್ಯವನ್ನೇ ಹೆಚ್ಚು ತೋರಿಸಿದ್ದಾರೆ. ಈ ಶ್ರಮಕ್ಕೆ ಉತ್ತಮ ಫಲಿತಾಂಶ ಬಂದರೆ ಅರ್ಥ ಸಿಗುತ್ತದೆ. ಮಂಡ್ಯ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರುವ ಬಗ್ಗೆ ನಾನು ಮಾತನಾಡಲ್ಲ. ಫಲಿತಾಂಶ ಬಂದ ಮೇಲೆ ನಾನು ವಿಶ್ಲೇಷಣೆ ಮಾಡುತ್ತೇನೆ ಎಂದರು.

    ನನಗೆ ಬಂದಿರುವ ಮಾಹಿತಿ ಅನ್ವಯ ಪುಟ್ಟರಾಜು ಎರಡೂವರೆ ಲಕ್ಷ ಮತಗಳ ಅಂತರಕ್ಕಿಂತ ಕಡಿಮೆ ಬಂದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಿಖಿಲ್ ಸೋತರೆ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಲ್ಲ ಎಂದು ನಿವೃತ್ತಿ ಮಾತನ್ನು ಪರೋಕ್ಷವಾಗಿ ನೆನಪಿಸಿದರು. ಇದೇ ವೇಳೆ ಸಮ್ಮಿಶ್ರ ಸರ್ಕಾರ ಬಗ್ಗೆ ನಾನು ಯಾವುದೇ ಕಾಮೆಂಟ್ ಮಾಡಲ್ಲ. ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ನಿರಾಕರಿಸಿದ್ದ ಚಲುವರಾಯಸ್ವಾಮಿ ಅವರು ಮೌನವಹಿಸಿದ್ದರು. ಆದರೆ ಅವರ ಬೆಂಬಲಿಗರು ಸ್ವಾಭಿಮಾನಕ್ಕಾಗಿ ಸುಮಲತಾಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದರು.

    ಇದೇ ವೇಳೆ ಮಾತನಾಡಿದ ಸುಮಲತಾ, ಚುನಾವಣೋತ್ತರ ಸಮೀಕ್ಷೆ ವಿಚಾರವನ್ನು ನಾನು ಹೆಚ್ಚು ಗಭೀರವಾಗಿ ಪರಿಗಣಿಸುವುದಿಲ್ಲ. ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರ ಬರುತ್ತದೆ. ಮೇ 23ವರೆಗೂ ಕಾದು ನೋಡೋಣ ಎಂದರು.

    ಚಲುವರಾಯಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯವಾಗಿ ಏನೂ ಮಾತಾಡಿಲ್ಲ. ಚುನಾವಣೆ ಮುಗಿದಿದೆ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಸಲಗೆ ನೀಡಿದ್ದಾರೆ ಎಂದರು. ಇದೇ ವೇಳೆ ದರ್ಶನ್ ಅವರು ರೈತರಿಗೆ ಬೆಂಬಲ ಬೆಲೆ ನೀಡಬೇಕು ಎಂದು ಹೇಳಿಕೆಯನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಯಾವುದೇ ಸರ್ಕಾರ ಇದ್ದರು ಕೂಡ ಇದನ್ನು ಅನುಸರಿಸಬೇಕು ಎಂದರು.

  • ಮಂಡ್ಯ ನಾಯಕರ ಜೊತೆ ಸಿದ್ದರಾಮಯ್ಯ ನಡೆಸಿದ್ದ ಸಂಧಾನ ಸಭೆ ವಿಫಲ

    ಮಂಡ್ಯ ನಾಯಕರ ಜೊತೆ ಸಿದ್ದರಾಮಯ್ಯ ನಡೆಸಿದ್ದ ಸಂಧಾನ ಸಭೆ ವಿಫಲ

    ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಭಿನ್ನಮತ ಶಮನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರೆದಿದ್ದ ಸಭೆ ವಿಫಲವಾಗಿದೆ.

    ನಗರದ ಕಾವೇರಿ ನಿವಾಸದಲ್ಲಿ ಇಂದು ಮಂಡ್ಯ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪರಾಜಿತ ಅಭ್ಯರ್ಥಿಗಳ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಭೋಜನದೊಂದಿಗೆ ಮಂಡ್ಯ ರಾಜಕಾರಣದ ಬಗ್ಗೆ ಚರ್ಚೆ ಆರಂಭಿಸಲಾಗಿತ್ತು. ಈ ಸಭೆಯಲ್ಲಿ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಕೂಡ ಭಾಗಿಯಾಗಿದ್ದರು. ಇದನ್ನು ಓದಿ: ರಾಜ್ಯದಲ್ಲಿ ಮೈತ್ರಿ ಧರ್ಮ, ಆದ್ರೆ ಮಂಡ್ಯ ಬಿಟ್ಟು ಬಿಡಿ: ಚಲುವರಾಯಸ್ವಾಮಿ

    ಸಿಎಂ ಪುತ್ರ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ಮಾಡಲು ಮಾಜಿ ಶಾಸಕ ಚಲುವರಾಯಸ್ವಾಮಿ, ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ ಹಿಂದೇಟು ಹಾಕಿದ್ದಾರೆ. ಅಷ್ಟೇ ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಮೂರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

    ಬೇಡಿಕೆಗಳು ಏನು?:
    ನಮ್ಮ ಅನುಕೂಲಕ್ಕೆ ತಕ್ಕಂತೆ ರಾಜಿ ಮಾಡಿಕೊಂಡ್ರೆ ಕಾರ್ಯಕರ್ತರು ಜೊತೆಯಲ್ಲಿ ನಿಲ್ಲಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣ ವಾಪಾಸ್ ತೆಗೆಯಲು ವ್ಯವಸ್ಥೆ ಮಾಡಿ. ಜೆಡಿಎಸ್ ನಾಯಕರು ಭರವಸೆ ಕೊಡಲಿ ಆಮೇಲೆ ನೋಡೋಣ ಎಂದು ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಬೇಡಿಕೆಗಳನ್ನು ಆಲಿಸಿದ ಸಿದ್ದರಾಮಯ್ಯ, ಈ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಜೊತೆಗೆ ಮಾತನಾಡುತ್ತೇನೆ. ಹೀಗಾಗಿ ನಾಳೆ ರಾತ್ರಿ ಪುನಃ ಸಭೆ ನಡೆಯಲಿದ್ದು, ಎಲ್ಲರೂ ಭಾಗಿಯಾಗಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ರಾಜ್ಯದಲ್ಲಿ ಮೈತ್ರಿ ಧರ್ಮ, ಆದ್ರೆ ಮಂಡ್ಯ ಬಿಟ್ಟು ಬಿಡಿ: ಚಲುವರಾಯಸ್ವಾಮಿ

    ರಾಜ್ಯದಲ್ಲಿ ಮೈತ್ರಿ ಧರ್ಮ, ಆದ್ರೆ ಮಂಡ್ಯ ಬಿಟ್ಟು ಬಿಡಿ: ಚಲುವರಾಯಸ್ವಾಮಿ

    ಬೆಂಗಳೂರು: ರಾಜ್ಯ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ವಿರುದ್ಧ ಬಂಡಾಯ ಹೂಡಿರುವ ಮಾಜಿ ಶಾಸಕರು ಮನವೊಲಿಕೆ ಕರೆದಿದ್ದ ಸಭೆ ವಿಫಲವಾಗಿದೆ. ಸಭೆ ಬಳಿಕ ಮಾತನಾಡಿದ ಮಾಜಿ ಶಾಸಕ ಚಲುವರಾಯಸ್ವಾಮಿ ಅವರು, ರಾಜ್ಯದಲ್ಲಿ ಮೈತ್ರಿ ಧರ್ಮ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

    ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಇಂದಿನ ಸಭೆ ಕೇವಲ ಪಕ್ಷದ ಸಭೆ ಆಗಿದ್ದು, ಮೈತ್ರಿ ಕುರಿತಾದ ಸಭೆ ಅಲ್ಲ. ಮಂಡ್ಯದ ಎಂಟು ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಾತ್ರ ಏನು ಇರುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಮುಂದುವರಿಯುತ್ತದೆ. ಆದರೆ ಮಂಡ್ಯ ಕ್ಷೇತ್ರವನ್ನು ಬಿಟ್ಟು ಬಿಡಿ ಈ ಬಗ್ಗೆ ಕೇಳಬೇಡಿ ಎಂದು ಮಾಧ್ಯಮಗಳಿಗೆ ಉತ್ತರಿಸಿದರು.

    ಚುನಾವಣೆಗೆ ಕೆಲ ದಿನಗಳಲೇ ಇರುವ ಕಾರಣ ಸಿದ್ದರಾಮಯ್ಯ ಅವರು ನಾಳೆಯಿಂದ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುತ್ತಾರೆ. ಮಂಡ್ಯ ಕ್ಷೇತ್ರದಲ್ಲಿ ನಮ್ಮ ಮೇಲೆ ಸಿದ್ದರಾಮಯ್ಯ ಅವರು ಡಿಪೆಂಡ್ ಆಗಿದ್ದರೆ ನಾವು ಕಾರ್ಯಕರ್ತರ ಮೇಲೆ ಡಿಪೆಂಡ್ ಆಗಿದ್ದೇವೆ. ಅದ್ದರಿಂದ ಕಾರ್ಯಕರ್ತರೊಂದಿಗೆ ಮಾತನಾಡಿ ತೀರ್ಮಾನಕ್ಕೆ ಬರುತ್ತೇವೆ. ಮತ್ತೆ ಸಭೆ ನಡೆಸಲು ಸಮಯ ಇಲ್ಲ ಎಂದರು.

    ಮಂಡ್ಯ ಮೈತ್ರಿ ವಿಚಾರದಲ್ಲಿ ಕುಮಾರಸ್ವಾಮಿ ಸೂಕ್ಷ್ಮವಾಗಿ ಹೇಳಿದ್ದಾರೆ. ಜನರ ತೀರ್ಮಾನಕ್ಕೆ ಬಿಟ್ಟು ಬಿಡೋಣ ಎಂದು ಅವರೇ ಹೇಳಬಹುದು ಎಂದು ನಿನ್ನೆಯೇ ತಿಳಿಸಿದ್ದೇನೆ. ಉಳಿದ ಕ್ಷೇತ್ರದಲ್ಲಿ ಮೈತ್ರಿಯಾಗಿ ಹೋಗೋಣ ಎಂದು ನಾನು ನಾಯಕರಿಗೆ ತಿಳಿಸಿದ್ದೇನೆ. ನಮ್ಮ ಕಾರ್ಯಕರ್ತರನ್ನು ಕೇಳದೆ ನಾವು ಯಾವ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಈ ಜಿಲ್ಲೆ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸೋಣ ಎಂದರು.

    ಶಿಸ್ತುಕ್ರಮಕ್ಕೆ ಸ್ವಾಗತ: ಇದೇ ವೇಳೆ ಅತೃಪ್ತರ ವಿರುದ್ಧ ಶಿಸ್ತು ಕ್ರಮದ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಯಕರ ಈ ನಿರ್ಧಾರವನ್ನು ನಾನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ನಮ್ಮ ನಾಯಕರು ಹೊಡೆದರೆ ಅದನ್ನೇ ಒಂದು ಆಶೀರ್ವಾದ ಎಂದು ಕೊಳ್ಳುತ್ತೇವೆ. ಮಂಡ್ಯದಲ್ಲಿ ನಮ್ಮ ಪಾತ್ರ ಇರಲ್ಲ ಎಂದು ಸ್ಪಷ್ಟಪಡಿಸಿದರು.

  • ಚಲುವರಾಯಸ್ವಾಮಿಯನ್ನ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ರು ಪುಟ್ಟರಾಜು

    ಚಲುವರಾಯಸ್ವಾಮಿಯನ್ನ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ರು ಪುಟ್ಟರಾಜು

    -ಅವ್ರ ತಲೆಯನ್ನು ನಾವ್ ಸರಿ ಮಾಡ್ತೀವಿ ಅಂದ್ರು ಸಚಿವರು

    ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ನಾಯಕರ ವಾಗ್ದಾಳಿ ಮುಂದುವರಿದಿದ್ದು, ಈ ಬಾರಿ ಬಹಿರಂಗ ಚರ್ಚೆಗೆ ಬರುವಂತೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಜಿ ಸಚಿವ ಚಲುವರಾಯಸ್ವಾಮಿ ಅವರಿಗೆ ಆಹ್ವಾನ ನೀಡಿದ್ದಾರೆ.

    ಚಲುವರಾಯಸ್ವಾಮಿ ಬೆಂಬಲಿಗರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವರು, ಈ ನಿರ್ಧಾರಕ್ಕೆ ಮುಂದಾಗಿದ್ದಾರೆ. ತಮ್ಮ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಗೆದ್ದವನು ಸೋತ, ಸೋತವನು ಸತ್ತ ಅನ್ನುವ ರೀತಿ ನಾವೆಲ್ಲ ರಾಜಕಾರಣ ಮಾಡಬೇಕಾಗಿದೆ. ಆ ಅರ್ಥದಲ್ಲಿ ಡೆಡ್ ಹಾರ್ಸ್ ಪದ ಬಳಸಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ:  ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡೋ ಹಾಗಾಗಿದೆ- ಚಲುವರಾಯ ಸ್ವಾಮಿಯನ್ನ ಸತ್ತ ಕುದುರೆಗೆ ಹೋಲಿಸಿದ್ರು ಸಚಿವ ಪುಟ್ಟರಾಜು

    ಕ್ಷೇತ್ರದ ಜನರು 52 ಸಾವಿರ ಮತಗಳ ಅಂತರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನೀನು ಸುಮ್ಮನಿರಪ್ಪ ಅಂತ ಹೇಳಿದ್ದಾರೆ. ಹೀಗಾಗಿ ನಾನು ಆ ರೀತಿ ಹೇಳಿಕೆ ನೀಡಿದೆ. ಅವರಿಗೆ ಅಗೌರವ ತರುವ ಉದ್ದೇಶದಿಂದ ಹಾಗೆ ಹೇಳಿಲ್ಲ. ಚಲುವರಾಯಸ್ವಾಮಿ ಅವರನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರನ್ನಾಗಿ ಮಾಡಿ, ರಾಜಕೀಯ ಶಕ್ತಿ ತುಂಬುತ್ತ ಬಂದವರು ಯಾರು ಎನ್ನುವುದರ ಬಗ್ಗೆ ಮಂಡ್ಯದಲ್ಲಿ ದೊಡ್ಡ ವೇದಿಕೆ ಹಾಕಿ ಬಹಿರಂಗ ಚರ್ಚೆ ಮಾಡಲು ನಾನು ಸಿದ್ಧ ಎಂದು ಕಿಡಿಕಾರಿದ್ದಾರೆ.

    ನಾನು ಯಾವುದೋ ಕಾಟ್ಪೋಟಿಗಳಿಗೆ (ಲೆಕ್ಕಕ್ಕೆ ಇಲ್ಲದವರಿಗೆ) ಉತ್ತರ ಕೊಡುವ ಅಗತ್ಯ ಇಲ್ಲ ಅಂತಾ ಹೇಳಿದ ಸಚಿವರು, ಚಲುವರಾಯಸ್ವಾಮಿ ಬೆಂಬಲಿಗರ ವಿರುದ್ಧ ಕಿಡಿಕಾರಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯಾರು ಕಾಲು ಹಿಡಿದುಕೊಂಡರು ಎನ್ನವುದಕ್ಕೆ ಮಾಜಿ ಶಾಸಕ ಎಚ್.ಬಿ.ರಾಮು ಅವರು ಸಾಕ್ಷಿ. ಬೇಕಾದರೆ ಅವರ ನೇತೃತ್ವದಲ್ಲಿಯೇ ಚರ್ಚೆ ನಡೆಯಲಿ ಅಂದ್ರು.

    ನಾನು ಚಲುವರಾಯಸ್ವಾಮಿ ಸ್ನೇಹಿತರು. ರಾಜಕೀಯ ವಿಚಾರದಲ್ಲಿ ಅವರು ನನಗೆ ಏನ್ ತೊಂದರೆ ಕೊಟ್ಟರೂ, ನಾನು ಅವರ ಬಗ್ಗೆ ಏನು ಮಾತನಾಡಿರುವೆ ಎನ್ನುವ ಬಗ್ಗೆ ಚರ್ಚೆಗೆ ನಾನು ಸಿದ್ಧ. ಹೊರತಾಗಿ ಯಾವನೋ ಇನ್ನೊಬ್ಬನ ಮಾತಿಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಅಂತ ನೇರವಾಗಿ ವಾಗ್ದಾಳಿ ನಡೆಸಿದ್ರು.

    ತಲೆಯಲ್ಲಿ ಮೆದುಳು ಇಟ್ಟುಕೊಂಡು ಮಾತನಾಡಬೇಕು ಎನ್ನುವ ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ನನ್ನ ತಲೆಯಲ್ಲಿ ಮೆದುಳು ಇರುವುದಕ್ಕೆ ಎದುರಾಳಿಯ ಅನುಕಂಪದ ಅಲೆ ಇದ್ದರೂ ಜನ ನನ್ನನ್ನ ಗೆಲ್ಲಿಸಿದ್ದಾರೆ. ಚಲುವರಾಯಸ್ವಾಮಿ ಅವರು ತಲೆ ಸರಿ ಮಾಡಿಸಿಕೊಳ್ಳಬೇಕಾಗಿದೆ. ಅವರ ತಲೆಯನ್ನು ನಾವು ಸರಿ ಮಾಡುತ್ತೇವೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪುಟ್ಟರಾಜುಗೆ ಕಾಮನ್ ಸೆನ್ಸ್ ಇಲ್ಲ, ಮೆದುಳೂ ಇಲ್ಲ- ಚೆಲುವರಾಯಸ್ವಾಮಿ ತಿರುಗೇಟು

    ಪುಟ್ಟರಾಜುಗೆ ಕಾಮನ್ ಸೆನ್ಸ್ ಇಲ್ಲ, ಮೆದುಳೂ ಇಲ್ಲ- ಚೆಲುವರಾಯಸ್ವಾಮಿ ತಿರುಗೇಟು

    ಬೆಂಗಳೂರು: ಸತ್ತ ಕುದುರೆ ಅಂತ ಲೇವಡಿ ಮಾಡಿದ್ದ ಸಣ್ಣ ನೀರಾವರಿ ಸಚಿವ ಪುಟ್ಟರಾಜು ಅವರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

    ಸಚಿವ ಪುಟ್ಟರಾಜು ಹೇಳಿಕೆಗೆ ನಗರದಲ್ಲಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಅವನಿಗೆ ಕಾಮನ್ ಸೆನ್ಸ್ ಇಲ್ಲ. ಮೆದುಳು ಇಲ್ಲ. ಸಚಿವನಾಗಿ ಹೀಗೆ ಮಾತಾಡೋದು ಸರಿಯಿಲ್ಲ ಅಂತ ವಾಗ್ದಾಳಿ ನಡೆಸಿದ್ರು.

    ಸೋತವರ ಬಗ್ಗೆ ಸಚಿವ ಪುಟ್ಟರಾಜು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಹಾಗಾದ್ರೆ ಎಂಪಿ ಎಲೆಕ್ಷನ್ ನಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಸೋತಿದ್ದು ಎಷ್ಟು ವೋಟ್ ನಿಂದ ಅಂತ ಪಾಪ ಅವನಿಗೆ ಗೊತ್ತಿಲ್ಲ ಅಂತ ತಿರುಗೇಟು ನೀಡಿದ್ರು.

    ಉಪ ಚುನಾವಣೆಯಲ್ಲಿ ಅಭ್ಯರ್ಥಿ ಹಾಕೋಣ ಅಂತ ನಾನು ಪಕ್ಷದ ನಾಯಕರಿಗೆ ಹೇಳಿದ್ದೇನೆ. ನಾನು ಸಮ್ಮಿಶ್ರ ಸರ್ಕಾರದ ಬಗ್ಗೆ ಎಲ್ಲೂ ಮಾತನಾಡಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಿಲ್ಲ ಅಂದ್ರೆ ಮನೆಯಲ್ಲಿ ಕುಳಿತು ಯಾರು ಬೇಕಾದ್ರೂ ಗೆಲ್ಲಬಹುದು. ಒಂದು ವೇಳೆ ಅಭ್ಯರ್ಥಿ ಹಾಕಿದ್ರೆ ಚುನಾವಣೆ ದಿನ ಫಲಿತಾಂಶ ಗೊತ್ತಾಗುತ್ತೆ ಅಂತ ಟಾಂಗ್ ಕೊಟ್ರು.

    ದೇವೇಗೌಡರು ಆರ್.ಆರ್.ನಗರ ಹಾಗೂ ಜಯನಗರ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನ ಹಾಕಿದ್ರು. ನಂತ್ರ ಫ್ರೆಂಡ್ಲಿ ಫೈಟ್ ಅಂತ ಹೇಳಿದ್ರು. ಈಗಲೂ ಅಷ್ಟೇ ಅಭ್ಯರ್ಥಿಗಳನ್ನ ಹಾಕಲಿ ಫ್ರೆಂಡ್ಲಿ ಫೈಟ್ ನಡೆಯಲಿ ಅಂತ ಚೆಲುವರಾಯಸ್ವಾಮಿ ಹೇಳಿದ್ರು. ಇಷ್ಟಕ್ಕೆ ಸುಮ್ಮನಾಗದ ಚೆಲುವರಾಯಸ್ವಾಮಿ ಸಚಿವ ಪುಟ್ಟರಾಜು ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಅವನು ಹೇಗೆ ಎಂಪಿ ಆದ ಅಂತ ನನಗೆ ಗೊತ್ತು. ಎಂಎಲ್‍ಎ ಟಿಕೆಟ್ ತಗೊಂಡಿದ್ದು ಅಂತಾನೂ ಗೊತ್ತು. ಅವನಂತೆ ನಾನು ಮಾತಾಡೊಲ್ಲ ಅಂತ ಕಿಡಿಕಾರಿದ್ರು.

    ಕಾಂಗ್ರೆಸ್ ನ ಹಲವರಲ್ಲಿ ಮೈತ್ರಿ ಬೇಡ ಅನ್ನೋದು ಇದೆ. ಉಸ್ತುವಾರಿ ವೇಣುಗೋಪಾಲ್‍ಗೂ ಈ ವಿಷ್ಯ ತಿಳಿಸುತ್ತೇವೆ. ಮುಂದಿನದು ಪಕ್ಷಕ್ಕೆ ಬಿಟ್ಟ ವಿಚಾರ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡೋ ಹಾಗಾಗಿದೆ- ಚಲುವರಾಯ ಸ್ವಾಮಿಯನ್ನ ಸತ್ತ ಕುದುರೆಗೆ ಹೋಲಿಸಿದ್ರು ಸಚಿವ ಪುಟ್ಟರಾಜು

    ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡೋ ಹಾಗಾಗಿದೆ- ಚಲುವರಾಯ ಸ್ವಾಮಿಯನ್ನ ಸತ್ತ ಕುದುರೆಗೆ ಹೋಲಿಸಿದ್ರು ಸಚಿವ ಪುಟ್ಟರಾಜು

    ಮಂಡ್ಯ: ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡುವ ಹಾಗಾಗಿದೆ ಅಂತ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಸತ್ತ ಕುದುರೆಗೆ ಹೋಲಿಸಿದ್ದಾರೆ.

    ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಇತಿಹಾಸದಲ್ಲಿ 52 ಸಾವಿರ ಲೀಡ್ ನಲ್ಲಿ ನಾಗಮಂಗಲದಲ್ಲಿ ಗೆದ್ದಿದ್ದು ನೋಡಿದ್ದೀರಾ. ಚೆಲುವರಾಯಸ್ವಾಮಿ ಅವರನ್ನು ಜನರು ಸ್ವಲ್ಪ ಬಾಯಿಮುಚ್ಚಿಕೊಂಡು ಇರಲಿ ಅಂತ ಸೋಲಿಸಿ ಕಳುಹಿಸಿದ್ದಾರೆ. ಮೊದಲು ಅವರು ಅದನ್ನು ಮಾಡಲಿ ಅಂತ ಹೇಳಿದ್ರು.

    ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ನಮ್ಮ ಪಕ್ಷದಲ್ಲಿ ಸಮರ್ಥರಿದ್ದಾರೆ. ಸ್ಪರ್ಧೆಯೂ ಇದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಸಿಎಂ ಕುಮಾರಣ್ಣ ಅವರು ತೀರ್ಮಾನ ಮಾಡುತ್ತಾರೆ. ಹೀಗೆ ತೀರ್ಮಾನ ಮಾಡಿದ ಅಭ್ಯರ್ಥಿಯನ್ನು ಅತ್ಯಂತ ಅಂತರದಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ಗೆಲ್ಲಿಸಿಕೊಡುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ನೀವು ಯಾರನ್ನಾದ್ರೂ ಸೂಚಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾನೊಬ್ಬ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರಿಂದ ಸಮರ್ಥವಾಗಿ ನನ್ನ ಜವಾಬ್ದಾರಿಯನ್ನು ನಿಭಾಯಿಸಬೇಕು. ಆ ಹಿನ್ನೆಲೆಯಲ್ಲಿ ಇರುವಂತಹ ವಸ್ತು ಸ್ಥಿತಿಯನ್ನು ರಾಷ್ಟ್ರಧ್ಯಕ್ಷ, ಸಿಎಂ ಹಾಗೂ ರಾಜ್ಯಾಧ್ಯಕ್ಷರಿಗೆ ಮನವರಿಗೆ ಮಾಡಿಕೊಡುತ್ತೇನೆ. ಅದರ ಹಿನ್ನೆಲೆಯಲ್ಲಿ ಪಕ್ಷ ತೀರ್ಮಾನ ಮಾಡಿಕೊಡುತ್ತದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಅಂದ್ರು.

    ಮೈತ್ರಿ ಬೇಕು ಅಂತ ಮಂಡ್ಯದಲ್ಲಿ ಯಾರೂ ಗೋಗರೆಯುತ್ತಿಲ್ಲ. ಜನ ಕೊಟ್ಟ ತೀರ್ಪಿನಿಂದ ಅನಿವಾರ್ಯತೆ ಬಂದ ಕಾರಣ ಈ ರಾಜ್ಯದಲ್ಲಿ ಇಂದು ಸಮ್ಮಿಶ್ರ ಸರ್ಕಾರ ಆಗಿದೆ. ಆ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಸುಭದ್ರವಾಗಿದೆ. ಹೀಗಾಗಿ ಇಂದು ನಾವು ಯಾರ ಜೊತೆನೂ ಅಂಗಲಾಚುವ ಅಗತ್ಯತೆ ಇಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ನಾಯಕರು ಮೈತ್ರಿಗೆ ಸಮ್ಮತಿಸಿದ್ರು. ಹೀಗಾಗಿ ಎರಡೂ ಪಕ್ಷದ ನಾಯಕರು ತೀರ್ಮಾನಕ್ಕೆ ನಾನೂ ನಡೀಬೇಕಾಗುತ್ತದೆ. ಚಲುವರಾಯ ಸ್ವಾಮಿ ಅವರೂ ನಡೀಬೇಕಾಗಿದೆ ಅಂತ ಅವರು ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv