Tag: chaluvarayaswami

  • ಅವರು ಏನೇನು ಮಾಡ್ತಾರೋ ಮಾಡಲಿ ನೋಡೋಣ: ಜೆಡಿಎಸ್ ವರಿಷ್ಠರ ವಿರುದ್ಧ ಚಲುವರಾಯಸ್ವಾಮಿ ಕಿಡಿ

    ಅವರು ಏನೇನು ಮಾಡ್ತಾರೋ ಮಾಡಲಿ ನೋಡೋಣ: ಜೆಡಿಎಸ್ ವರಿಷ್ಠರ ವಿರುದ್ಧ ಚಲುವರಾಯಸ್ವಾಮಿ ಕಿಡಿ

    ಮಂಡ್ಯ: ಜಿಲ್ಲೆಯ ವಿಷಯ ಬಂದಾಗ ದ್ವೇಷದ ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ಅವರು ಏನೇನು ಮಾಡುತ್ತಾರೋ ಮಾಡಲಿ ನೋಡೋಣ ಎಂದು ಜೆಡಿಎಸ್ ವರಿಷ್ಠರ ವಿರುದ್ಧ ಮಾಜಿ ಶಾಸಕ ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಾಗಮಂಗಲ ತಾಲೂಕಿನ, ಬೆಳ್ಳೂರು ಪಟ್ಟಣ ಪಂಚಾಯತ್ ಒಟ್ಟು 13 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ ಪಕ್ಷದ ಏಳು ಸದಸ್ಯರು ಗೆಲುವು ಸಾಧಿಸಿದ್ದಾರೆ. ಆದರೆ ಬೆಳ್ಳೂರು ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್‍ಟಿಗೆ ಮೀಸಲಾಗಿದೆ. ಪಕ್ಷೇತರಾಗಿ ಸ್ಪರ್ಧಿಸಿ ಗೆಲುವು ಸ್ಪರ್ಧಿಸಿರುವ ರಾಮಲಿಂಗಯ್ಯ ಮಾತ್ರ ಎಸ್‍ಟಿ ಪಂಗಡಕ್ಕೆ ಸೇರಿದವರಾಗಿದ್ದು, ಬಹುಮತ ಪಡೆದ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ರಾಮಲಿಂಗಯ್ಯ ಜೆಡಿಎಸ್ ಶಾಸಕ ಸುರೇಶ್‍ಗೌಡ ಬೆಂಬಲಿಗರಾಗಿದ್ದು ಪರೋಕ್ಷವಾಗಿ ಜೆಡಿಎಸ್ ಅಧಿಕಾರ ಹಿಡಿದಂತಾಗುತ್ತಿದೆ ಎಂದರು.

    ತಮ್ಮ ಸ್ವಕ್ಷೇತ್ರ ನಾಗಮಂಗಲದಲ್ಲಿ ತಮ್ಮ ಬೆಂಬಲಿಗರಿಗೆ ಆಗುತ್ತಿರುವ ಅನ್ಯಾಯದಿಂದ ಬೇಸರಗೊಂಡ ಅವರು ಜಿಲ್ಲೆಯ ವಿಷಯ ಬಂದಾಗ ದ್ವೇಷದ ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ಇದೇನು ನಮಗೆ ಹೊಸದಲ್ಲ. ಪರಿಸ್ಥಿತಿ ಗೊತ್ತಿರುವುದರಿಂದ ನಾವೇನು ಮಾಡುವಂತಿಲ್ಲ. ಅವರು ಏನೇನು ಮಾಡ್ತಾರೋ ಮಾಡಲಿ ನೋಡೋಣ ಎಂದು ಕಿಡಿಕಾರಿದ್ದಾರೆ.

    ಜೆಡಿಎಸ್‍ನವರು ನಾಲ್ಕು ಜನ ಗೆದ್ದಿದ್ದಾಗ ಎಸ್‍ಟಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ಮಾಡಿಸಿಕೊಂಡು ಬರುತ್ತಾರೆ ಅಂದರೆ ಅದರಲ್ಲಿ ರಹಸ್ಯ ಏನಿಲ್ಲ. ಇದನ್ನೆಲ್ಲ ಜನ ನೋಡಲಿ. ನಾವು ಅವರಿಗೆ ಏನು ಕೇಳಲು ಹೋಗಲ್ಲ. ಬೇಡಿಕೆಯನ್ನೂ ಸಲ್ಲಿಸುವುದಿಲ್ಲ. ಜಿಲ್ಲೆ ವಿಚಾರ ಬಂದಾಗ ಜನತಾದಳ ಸರ್ಕಾರ, ಮಂತ್ರಿಗಳು, ಶಾಸಕರು ಏನು ಬೇಕಾದರು ತೀರ್ಮಾನ ತೆಗೆದುಕೊಳ್ಳಬಹುದು. ಅಷ್ಟೇ ಅಲ್ಲದೇ ಈಗ ಆಗಿರುವ ಬೆಳವಣಿಗೆ ಬಗ್ಗೆ ನಾನು ಯಾರ ಗಮನಕ್ಕೂ ತರುವುದಿಲ್ಲ. ಸ್ವತಂತ್ರ ಅಭ್ಯರ್ಥಿ ರಾಮಲಿಂಗಯ್ಯ ಕೂಡ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೆಡಿಎಸ್‍ನಿಂದ ಅಮಾನತ್ತಾದ ಶಾಸಕರು ಮದುವೆಗಿಂತ ಮುಂಚೆಯೇ ಪ್ರಸ್ಥ ಮಾಡ್ಕೊಳ್ತಿದ್ದಾರೆ- ಮಾಜಿ ಶಾಸಕ ಸುರೇಶ್ ಗೌಡ

    ಜೆಡಿಎಸ್‍ನಿಂದ ಅಮಾನತ್ತಾದ ಶಾಸಕರು ಮದುವೆಗಿಂತ ಮುಂಚೆಯೇ ಪ್ರಸ್ಥ ಮಾಡ್ಕೊಳ್ತಿದ್ದಾರೆ- ಮಾಜಿ ಶಾಸಕ ಸುರೇಶ್ ಗೌಡ

    ಮಂಡ್ಯ: ಜೆಡಿಎಸ್‍ನಿಂದ ಅಮಾನತ್ತಾದ ಶಾಸಕರು ಒಂದು ರೀತಿಯ ಆಧುನಿಕ ಶಾಸಕರಾಗಿದ್ದಾರೆ. ಅವರೀಗ ಲಿವ್ ಇನ್ ಟುಗೇದರ್ ಮಾಡುತ್ತಿದ್ದಾರೆ. ಮದುವೆಗಿಂತ ಮುಂಚೆಯೇ ಅವರು ಪ್ರಸ್ಥ ಮಾಡಿಕೊಳ್ಳುತ್ತಾರೆ ಎಂದು ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‍ಗೌಡ ವಾಗ್ದಾಳಿ ನಡೆಸಿದ್ದಾರೆ.

    ಜಮೀರ್ ಅಹಮದ್ ಜೊತೆಯಲ್ಲಿ ಚಲುವರಾಯಸ್ವಾಮಿ ನಾಗಮಂಗಲದಲ್ಲಿ ಬೈಕ್ ಜಾಥಾ ನಡೆಸಿದ್ರು. ಈ ವೇಳೆ ಕಾರ್ಯಕರ್ತರು ತಮ್ಮ ಕೈಯಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ರು. ಈ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಸೇರದೇ ಇದ್ದರೂ ಹಣಕ್ಕಾಗಿ ಯಾವ ಆಟ ಬೇಕಾದ್ರೂ ಆಡುತ್ತಾರೆ ಎಂದು ಟೀಕಿಸಿದರು.

    ಶಿಖಂಡಿ ರಾಜಕಾರಣಿ: ಸಿದ್ದರಾಮಯ್ಯ ಅವರ ಕೈಯಲ್ಲಿ ಅಧಿಕಾರ ಇರುವವರೆಗೂ ಅವರು ಅಲ್ಲಿರುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ವೀಕ್ ಆದ ನಂತರ ಬೇರೆ ಪಕ್ಷ ನೋಡುತ್ತಾರೆ. ಇವರಿಗೆ ನಿಯತ್ತು ನಂಬಿಕೆ ಇಲ್ಲ. ಚಲುವರಾಯಸ್ವಾಮಿಗೆ ಚಾಲೆಂಜ್ ಮಾಡುತ್ತೇನೆ. ಎಚ್‍ಎಎಲ್ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನನ್ನ ಮೇಲಿನ ಆರೋಪ ಸಾಬೀತು ಪಡಿಸಿದ್ರೆ ರಾಜಕೀಯ ಬಿಟ್ಟು ಹೋಗ್ತೀನಿ. ಇಲ್ಲದಿದ್ದರೆ ಅವನು ಬಿಟ್ಟು ಹೋಗ್ತಾನೆ. ಸಿದ್ದರಾಮಯ್ಯ ಇದ್ದಾರೆ ಎಂದು ನನ್ನ ಮೇಲೆ ಇಲ್ಲ ಸಲ್ಲದ ಕೇಸ್ ಹಾಕಿಸಿದ್ದಾರೆ. ಅವನೊಬ್ಬ ಶಿಖಂಡಿ ರಾಜಕಾರಣಿ ಎಂದು ಆಕ್ರೋಶ ಹೊರಹಾಕಿದ್ರು.

    ಚಲುವರಾಯಸ್ವಾಮಿ ಯಾವಾಗಲೂ ಹಿಂದಿನಿಂದ ಯುದ್ಧ ಮಾಡ್ತಾನೆ. ಶಿಖಂಡಿ ಆಗಲಿ ಯಾರೇ ಆಗಲಿ ನಮ್ಮೆದುರು ಬಂದಾಗ ತೀರಿಸಬೇಕಾಗುತ್ತೆ. ರಾಜಕೀಯವಾಗಿ ಚಲುವರಾಯಸ್ವಾಮಿಯನ್ನು ತೀರಿಸುವವನೇ ನಾನು. ನನ್ನದು ಒಂದೇ ಗುರಿ, ಒಂದೇ ಶಪಥ ಚಲುವರಾಯಸ್ವಾಮಿ ಸೋಲುವವರೆಗೂ ನಾನು ವಿರಮಿಸುವುದಿಲ್ಲ. ಚಲುವರಾಯಸ್ವಾಮಿ ಒಬ್ಬ ದುಷ್ಠ ವ್ಯಕ್ತಿ. ವೈಯಕ್ತಿಕವಾಗಿ ರಾಜಕೀಯವಾಗಿ ನಾನು ಚಲುವರಾಯಸ್ವಾಮಿ ದ್ವೇಷಿ ಎಂದು ಸುರೇಶ್‍ಗೌಡ ಹೇಳಿದರು.