Tag: chamaraj nagara

  • ತೀರ್ಥಕ್ಷೇತ್ರಗಳಿಗೆ ಪಾದಯಾತ್ರೆ ಕೈಗೊಂಡ ಪ್ರಜ್ವಲ್, ನಿಖಿಲ್

    ತೀರ್ಥಕ್ಷೇತ್ರಗಳಿಗೆ ಪಾದಯಾತ್ರೆ ಕೈಗೊಂಡ ಪ್ರಜ್ವಲ್, ನಿಖಿಲ್

    ಹಾಸನ/ಚಾಮರಾಜನಗರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

    ಇಂದು ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರದಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಹೋಳೆನರಸಿಪುರದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಹುಟ್ಟೂರು ಹರದನಹಳ್ಳಿಗೂ ಹೋಗಿ ಮನೆದೇವರಿಗೆ ಪೂಜೆ ನೆರವೇರಿಸಿದರು. ಇವರು ಹಾಸನ, ಆಲೂರು, ಸಕಲೇಶಪುರ, ಶಿರಾಡಿಘಾಟ್ ಮಾರ್ಗವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ.

    ಎಲ್ಲಾ ತಾಲೂಕುಗಳಿಂದಲೂ ಬರುವ ಭಕ್ತರೊಟ್ಟಿಗೆ ಪಾದಯಾತ್ರೆ ನಡೆಸುತ್ತಾರೆ. ಪಾದಯಾತ್ರೆ ಮೂಲಕವಾಗಿಯೇ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪಕ್ಷದ ಜಲಧಾರೆ ಸೇರಿದಂತೆ ಜನಪರ ಕಾರ್ಯಗಳಿಗೆ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

    ಮಲೆ ಮಹದೇಶ್ವರ ಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿ: ಇತ್ತ ಮಹದೇಶ್ವರ ಬೆಟ್ಟಕ್ಕೆ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ನಾಳೆ ಹನೂರು ತಾಲೂಕು ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು 21 ಕಿಮೀ ಕಾಲ್ನಡಿಗೆ ಮೂಲಕ ತೆರಳಲಿದ್ದಾರೆ.  ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಮೊದಲ ವ್ಯಕ್ತಿ ಡಿ.ಕೆ ಶಿವಕುಮಾರ್: ಕೆ.ಎಸ್ ಈಶ್ವರಪ್ಪ

    ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ವೇಳೆಯಲ್ಲೇ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಶಿವರಾತ್ರಿ ಪಾದಯಾತ್ರೆ ಕೈಗೊಂಡಿದ್ದಾರೆ. ಇದು ಕಾಂಗ್ರೆಸ್ ಪಾದಯಾತ್ರೆಗೆ ಪರ್ಯಾಯವಾಗಿ ಜೆಡಿಎಸ್ ಯುವ ನಾಯಕರ ಶಿವರಾತ್ರಿ ಪಾದಯಾತ್ರೆಯಾಗಿದೆಯಾ ಎನ್ನುವುದನ್ನು ಕಾದು ನೋಡಬೇಕಾಗಿದೆ. ಒಟ್ಟಿನಲ್ಲಿ ಪ್ರಜ್ವಲ್, ನಿಖಿಲ್ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಬುಲೆಟ್ ಬೈಕ್‍ಗೆ ಗುದ್ದಿದ ಕಾರ್ – ಇಬ್ಬರು ಯುವ ಟೆಕ್ಕಿಗಳು ದುರ್ಮರಣ

  • ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹುಲಿ ಅಂದಾಜು ಪ್ರಕ್ರಿಯೆಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕೋಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ.

    ದೇಶದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲೂ ಆರಂಭವಾಗಿದೆ. ಇಂದಿನಿಂದ ಫೆಬ್ರವರಿ 8 ರವರಗೆ ಗಣತಿ ಪ್ರಕ್ರಿಯೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಾಂಸಹಾರಿ ಹಾಗೂ ಸಸ್ಯಹಾರಿ ಪ್ರಾಣಿಗಳ ಓಡಾಟಗಳ ಕುರಿತಾದ ಗುರುತುಗಳು, ಅವುಗಳ ಹಿಕ್ಕೆ, ಲದ್ದಿ, ಪಾದದ ಗುರುತು, ಪರಚಿದ ಗುರುತುಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ಬಂಡೀಪುರವನ್ನು ಮೂರು ಬ್ಲಾಕ್‍ಗಳನ್ನಾಗಿ ವಿಂಗಡಿಸಿ 112 ಗಸ್ತುಗಳಲ್ಲಿ ಗಣತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

    ಕೊರೊನಾ ಸಂದರ್ಭದಲ್ಲಿ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೊರಗಿನಿಂದ ಬಂದವರಿಂದ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ಗಣತಿ ಕಾರ್ಯದಲ್ಲಿ ಸ್ವಯಂಸೇವಕರ ಸೇವೆ ಬಳಸಿಕೊಳ್ಳುತ್ತಿಲ್ಲ. ಗಣತಿ ಕಾರ್ಯದಲ್ಲಿ ಉಪವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಅರಣ್ಯ ವೀಕ್ಷಕರು ಸೇರಿದಂತೆ 300 ಹೆಚ್ಚು ಮಂದಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

    ಹುಲಿಗಳ ಗಣತಿಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕಾಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ. ಎಂ ಸ್ಟ್ರೈಪ್ಸ್ ಆ್ಯಪ್‍ನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಭಾರತೀಯ ವನ್ಯಜೀವಿವ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಬಂಡೀಪುರದಲ್ಲಿ 40 ಮೊಬೈಲ್‍ಗಳಿಗೆ ಈ ತಂತ್ರಾಂಶ ಅಳವಡಿಸಲಾಗಿದೆ.

    ಅಂದಾಜು ಪ್ರಕ್ರಿಯೆಗೆ ನಿಯೋಜಿಸಲಾಗಿರುವ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಾಗುವ ಮಾಹಿತಿಗಳನ್ನು ಈ ಆ್ಯಪ್‍ನಲ್ಲಿ ದಾಖಲಿಸಲಿದ್ದು, ಹೆಚ್ಚಿನ ನಿಖರತೆ ಇರಲಿದೆ. ಇದನ್ನೂ ಓದಿ: ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

    ಈಗಾಗಲೇ ಕ್ಯಾಮೆರಾ ಟ್ರಾಪ್ ಮೂಲಕ ಹುಲಿ ಅಂದಾಜು ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಅಂತಿಮ ಹಂತದ ಅಂದಾಜು ಪ್ರಕ್ರಿಯೆ ಇದೀಗ ಆರಂಭಗೊಂಡಿದೆ. 2018ರಲ್ಲಿ ಕೈಗೊಂಡಿದ್ದ ನಾಲ್ಕನೇ ಅಖಿಲ ಭಾರತ ಮಟ್ಟದ ಗಣತಿ ಕಾರ್ಯ ಬಂಡಿಪುರ ಸಂರಕ್ಷಿತ ಪ್ರದೇಶದಲ್ಲಿ 173 ಹುಲಿಗಳನ್ನು ಗುರುತಿಸಲಾಗಿತ್ತು. ಈ ಬಾರಿ ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!