Tag: Champion

  • IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    IPL 2024: ಚಾಂಪಿಯನ್‌ KKRಗೆ 20 ಕೋಟಿ ರೂ., ಆರೆಂಜ್‌, ಪರ್ಪಲ್‌ ಕ್ಯಾಪ್‌‌ ಗೆದ್ದವ್ರಿಗೆ ಸಿಕ್ಕಿದ್ದೆಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

    ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯವು ಭಾನುವಾರ‌ ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯಗಳಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಇದರೊಂದಿಗೆ ಐಪಿಎಲ್ 2024 ರ ಫೈನಲ್ ಪಂದ್ಯದ ವಿಜೇತ ತಂಡಕ್ಕೆ 20 ಕೋಟಿ ರೂ. ಮತ್ತು ರನ್ನರ್ ಅಪ್ ತಂಡಕ್ಕೆ 13 ಕೋಟಿ ರೂ. ಬಹುಮಾನ ಲಭಿಸಿದೆ. ಇದಲ್ಲದೇ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್, ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್ ಮುಂತಾದ ಹಲವು ಪ್ರಶಸ್ತಿಗಳನ್ನು ನೀಡಲಾಗಿದ್ದು, ಯಾವ ಆಟಗಾರ ಯಾವ ಪ್ರಶಸ್ತಿ ಪಡೆದಿದ್ದಾರೆ ಎಂಬುದರ ಡೀಟೈಲ್‌ ಇಲ್ಲಿದೆ.

    ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಆಲ್‌ರೌಂಡರ್ ನಿತೀಶ್ ರೆಡ್ಡಿ (Nitish Kumar Reddy) ಉದಯೋನ್ಮುಖ ಆಟಗಾರನಾಗಿ ಆಯ್ಕೆಯಾದರು. ಅವರಿಗೆ 10 ಲಕ್ಷ ರೂ. ಹಾಗೂ ಟ್ರೋಫಿಯನ್ನು ನೀಡಲಾಯಿತು. ಈ ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಕ್ಕಾಗಿ ಅಭಿಷೇಕ್ ಶರ್ಮಾ (Abhishk Sharma) ಅವರು ಸೂಪರ್ ಸಿಕ್ಸರ್‌ ಆಗಿ ಆಯ್ಕೆಯಾದರು. ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಜೇಕ್ ಫ್ರೇಸರ್ ಮೆಕ್ಗರ್ಕ್ (Jake Fraser-McGurk) ಗೆದ್ದರು. ಇದಲ್ಲದೆ ಆರೆಂಜ್ ಕ್ಯಾಪ್ ಮತ್ತೊಮ್ಮೆ ವಿರಾಟ್ ಕೊಹ್ಲಿಗೆ (Virat Kohli) ದಕ್ಕಿತು ಮತ್ತು ಹರ್ಷಲ್ ಪಟೇಲ್ (Harshal Patel)  ಪರ್ಪಲ್ ಕ್ಯಾಪ್ ಅನ್ನು ತನ್ನದಾಗಿಸಿಕೊಂಡರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    IPL 2024 ಪ್ರಶಸ್ತಿಗಳ ಸಂಪೂರ್ಣ ಪಟ್ಟಿ
    * ಕೋಲ್ಕತ್ತಾ ನೈಟ್ ರೈಡರ್ಸ್ (ವಿಜೇತರು) – 20 ಕೋಟಿ ರೂ. ಮತ್ತು ಟ್ರೋಫಿ
    * ಸನ್ ರೈಸರ್ಸ್ ಹೈದರಾಬಾದ್ (ರನ್ನರ್ ಅಪ್) – 12.5 ಕೋಟಿ ರೂ. ಮತ್ತು ಟ್ರೋಫಿ
    * ನಿತೀಶ್ ರೆಡ್ಡಿ (ಉದಯೋನ್ಮುಖ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಸನ್‌ರೈಸರ್ಸ್ ಹೈದರಾಬಾದ್ ( ಫೇರ್‌ಪ್ಲೇ ಪ್ರಶಸ್ತಿ) – 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (Dream11 ಗೇಮ್ ಚೇಂಜರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಅಭಿಷೇಕ್ ಶರ್ಮಾ (ಸೀಸನ್‌ನ ಸೂಪರ್ ಸಿಕ್ಸರ್)- 10 ಲಕ್ಷ ರೂ.
    * ರಮಣದೀಪ್ ಸಿಂಗ್ (ಪರಿಪೂರ್ಣ ಕ್ಯಾಚ್)- 10 ಲಕ್ಷ ರೂ. ಮತ್ತು ಟ್ರೋಫಿ
    * ಜೇಕ್ ಫ್ರೇಸರ್ ಮೆಕ್ಗರ್ಕ್ (ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ವೆಂಕಟೇಶ್ ಅಯ್ಯರ್ (ಕ್ರೆಡ್ ಪವರ್ ಪ್ಲೇಯರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
    * ಹರ್ಷಲ್ ಪಟೇಲ್ (24 ವಿಕೆಟ್)- 10 ಲಕ್ಷ ರೂ. ಮತ್ತು ಪರ್ಪಲ್ ಕ್ಯಾಪ್
    * ವಿರಾಟ್ ಕೊಹ್ಲಿ (741 ರನ್) – 10 ಲಕ್ಷ ರೂ. ಮತ್ತು ಆರೆಂಜ್ ಕ್ಯಾಪ್
    * ಸುನಿಲ್ ನರೈನ್ (ಅತ್ಯಂತ ಮೌಲ್ಯಯುತ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
    * ಪಿಚ್ ಮತ್ತು ಗ್ರೌಂಡ್ ಅವಾರ್ಡ್ – ರಾಜೀವ್ ಗಾಂಧಿ ಸ್ಟೇಡಿಯಂ ಹೈದರಾಬಾದ್- 50 ಲಕ್ಷ

    ಐಪಿಎಲ್ 2024 ಅಂಕಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳ ಮೇಲೂ ಹಣದ ಮಳೆ ಸುರಿಯಿತು. ತೃತೀಯ ಸ್ಥಾನ ಪಡೆದ ಸಂಜು ಸ್ಯಾಮ್ಸನ್ ತಂಡ 7 ಕೋಟಿ ರೂ., ನಾಲ್ಕನೇ ಸ್ಥಾನ ಪಡೆದ RCB 6.5 ಕೋಟಿ ರೂ. ಬಹುಮಾನ ಪಡೆಯಿತು. ಎರಡನೆಯದಾಗಿ, ಅತ್ಯುತ್ತಮ ಪಿಚ್ ಮತ್ತು ಗ್ರೌಂಡ್ ಪ್ರಶಸ್ತಿಯನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ನೀಡಲಾಯಿತು.

  • ಕಣ್ಣು ಕುಕ್ಕುವಂತೆ ಪಡ್ಡೆಹುಡುಗರ ನಿದ್ದೆಗೆಡಿಸಿದ ಸೇಸಮ್ಮ ನಯಾ ಲುಕ್

    ಕಣ್ಣು ಕುಕ್ಕುವಂತೆ ಪಡ್ಡೆಹುಡುಗರ ನಿದ್ದೆಗೆಡಿಸಿದ ಸೇಸಮ್ಮ ನಯಾ ಲುಕ್

    ನೀಲಿ ತಾರೆಯಾಗಿ ಗುರುತಿಸಿಕೊಂಡಿದ್ದ ಸನ್ನಿ ಲಿಯೋನ್ (Sunny Leone) ಅವರು ಬಾಲಿವುಡ್ (Bollywood) ಸಿನಿಮಾ, ರಿಯಾಲಿಟಿ ಶೋ ಅಂತಾ ಸಿನಿಪರದೆಯಲ್ಲಿ ಮಿಂಚಿದ್ದರು. ಇದೀಗ ಪಡ್ಡೆಹುಡುಗರ ಮೋಹಕ ನಟಿ ಹಾಟ್ ಫೋಟೋಶೂಟ್ ಮೂಲಕ ಎಲ್ಲರ ಕಣ್ಣು ಕುಕ್ಕುವಂತೆ ಮಿಂಚ್ತಿದ್ದಾರೆ.

    ಪೋರ್ನ್ ಸ್ಟಾರ್ ಆಗಿ ಗಮನ ಸೆಳೆದ ಸನ್ನಿ ಇದೀಗ ಬಾಲಿವುಡ್‌ನ ಬೇಡಿಕೆಯ ನಟಿಮಣಿಯರಲ್ಲಿ ಒಬ್ಬರಾಗಿ ಸದ್ದು ಮಾಡ್ತಿದ್ದಾರೆ. ಹಿಂದಿ, ಸೌತ್ ಸಿನಿಮಾಗಳ ಜೊತೆ ಕನ್ನಡ ಚಿತ್ರಕ್ಕೂ ಕೂಡ ಮನ್ನಣೆ ಕೊಡ್ತಿದ್ದಾರೆ. ಕಳೆದ ವರ್ಷ ಕನ್ನಡದ ಡಿಂಗರ್ ಬಿಲ್ಲಿ ಎಂಬ ಹಾಡಿನಲ್ಲಿ ಮಸ್ತ್ ಆಗಿ ಡ್ಯಾನ್ಸ್ ಮಾಡಿ ಜನಮನ ಗೆದ್ದಿದ್ದರು. ಇದನ್ನೂ ಓದಿ:ಶಿವಣ್ಣ ಜೊತೆ ಅಜಯ್ ರಾವ್ : ಫಸ್ಟ್ ಲುಕ್ ರಿಲೀಸ್

    ಸನ್ನಿ ಲಿಯೋನ್‌ಗೂ ಕನ್ನಡ ಸಿನಿಮಾಗೂ ನಂಟಿದೆ. ಕನ್ನಡ ಸಿನಿಮಾಗೆ ನಟಿ ಆದ್ಯತೆ ಕೊಡುತ್ತಾರೆ. ಪ್ರೇಮ್ ಅಡ್ಡಾದ ಡಿಕೆ (Dk) ಸಿನಿಮಾದಲ್ಲಿ ಸೇಸಮ್ಮಳಾಗಿ ಹೆಜ್ಜೆ ಹಾಕಿದ್ರು. ಬಳಿಕ ‘ಲವ್ ಯೂ ಆಲಿಯಾ’ ಚಿತ್ರದಲ್ಲಿ ಸೃಜನ್ ಲೋಕೇಶ್‌ಗೆ (Srujan Lokesh) ಜೊತೆ ಸನ್ನಿ ಸೊಂಟ ಬಳುಕಿದ್ದರು. ಬಳಿಕ ಚಾಂಪಿಯನ್ ಸಿನಿಮಾದಲ್ಲಿ ಡಿಂಗರ್ ಬಿಲ್ಲಿಯಾಗಿ ಬೇಬಿ ಡಾಲ್ ಕುಣಿದಿದ್ರು.

    ಹೀರೋಯಿನ್, ಮಹಿಳಾ ಪ್ರಧಾನ ಸಿನಿಮಾ, ಐಟಂ ಡ್ಯಾನ್ಸ್ ಎಲ್ಲದ್ದಕ್ಕೂ ನಟಿ ಆಧ್ಯತೆ ಕೊಡುತ್ತಾ ಮುಂದೆ ಸಾಗುತ್ತಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡಿದ್ದಾರೆ.

    ಇದೀಗ ಸನ್ನಿ ಲಿಯೋನ್ ಹೊಸ ಫೋಟೋಶೂಟ್‌ವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ, ಇಂಟರ್‌ನೆಟ್ ಶೇಕ್ ಮಾಡ್ತಿದೆ. ಕಪ್ಪು ಬಣ್ಣದ ಉಡುಗೆಯಲ್ಲಿ ಸನ್ನಿ ಹಾಟ್ ಹಾಟ್ ಆಗಿ ಪೋಸ್ ಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಸನ್ನಿ ನಯಾ ಲುಕ್‌ನಿಂದ ಇಂಟರ್‌ನೆಟ್ ಬೆಂಕಿ ಹಚ್ಚಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ (Aditi Prabhudev) ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” (Champion) ಚಿತ್ರದ ಟ್ರೇಲರ್ (Trailer)ಡೈನಾಮಿಕ್ ಸ್ಟಾರ್ ದೇವರಾಜ್ (Devraj) ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಈ ಕುರಿತು ಚಿತ್ರತಂಡವು ಹಲವು ವಿಚಾರಗಳನ್ನು ಹಂಚಿಕೊಂಡಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. 2019 ರಲ್ಲಿ ಈ ಚಿತ್ರ ಆರಂಭವಾಯಿತು. ನಂತರ ಕೋವಿಡ್.. ಆನಂತರ ನಮ್ಮ ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಅವರ ಹಠಾತ್ ನಿಧನ. ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌. ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ಸಚಿನ್ ಕುಟುಂಬದವರು ಸಾಕಷ್ಟು ಜನ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಮಿಯಲ್ಲಿ ನಮಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರ ಬೆಂಬಲ ಕೂಡ ನಮ್ಮಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ್.

    ನಾನು ಚಿತ್ರದಲ್ಲಿ ನಟಿಸುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಏಕೆಂದರೆ ನನ್ನ ತಂದೆ, ತಮ್ಮ ಎಲ್ಲಾ ಆರ್ಮಿಯಲ್ಲಿದ್ದಾರೆ. ನಾನು ಸಹ ಪರೀಕ್ಷೆ ಬರೆದಿದ್ದೆ. ಆದರೆ ಸೆಲೆಕ್ಟ್ ಆಗಲಿಲ್ಲ. ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ನನ್ನ ಸ್ನೇಹಿತ ಶಿವಾನಂದ, ಕೊಟ್ಟ ಮಾತಿನಂತೆ “ಚಾಂಪಿಯನ್” ಚಿತ್ರದ ಮೂಲಕ ನನ್ನನ್ನು ಹೀರೋ ಮಾಡಿದ್ದಾರೆ.  ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.  ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಸರ್ ಗೆ, ಸಮಾರಂಭಕ್ಕೆ ಆಗಮಿಸಿರುವ ಲಹರಿ ವೇಲು ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ಮುಂದಿನ ತಿಂಗಳ ಹದಿನಾಲ್ಕು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಪ್ರೋತ್ಸಾಹ ನೀಡಿ ಎಂದರು ನಾಯಕ ಸಚಿನ್ ಧನಪಾಲ್ (Sachin Dhanapal). ಇದನ್ನೂ ಓದಿ:ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ನಾನು ಈ ಚಿತ್ರದಲ್ಲಿ ನಟಿಸಲು ಪ್ರಮುಖ ಕಾರಣ ನಿರ್ದೇಶಕ ಶಾಹುರಾಜ್ ಶಿಂಧೆ. ಇಂದು ಅವರಿಲ್ಲದಿರುವುದು ತುಂಬಾ ದುಃಖದ ವಿಷಯ.  ಉತ್ತರ ಕರ್ನಾಟಕದ ನಿರ್ಮಾಪಕ ಶಿವಾನಂದ್ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಸ್ನೇಹಿತನಿಗಾಗಿ ಅವರು ಚಿತ್ರ ನಿರ್ಮಾಣ ಮಾಡಿರುವುದು ನಿಜಕ್ಕೂ ಖುಷಿಯ ವಿಚಾರ.  ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು. ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಿದಾಗ ನಾನು, ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದು ಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು ನಟ ದೇವರಾಜ್.ಲಹರಿ ವೇಲು “ಚಾಂಪಿಯನ್” ಗೆ ಶುಭ ಕೋರಿದರು. ಛಾಯಾಗ್ರಾಹಕ ಸರವಣನ್ ನಟರಾಜನ್ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್ ಚಿತ್ರದ ಬಗ್ಗೆ ‌ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ

    ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ

    ಮುಂಬೈ: 15ನೇ ಐಪಿಎಲ್ ಆವೃತ್ತಿಗೆ ಹೊಸ ತಂಡಗಳಾಗಿ ಸೇರ್ಪಡೆಗೊಂಡರೂ ಅಬ್ಬರ ಆಟದಿಂದ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮಿಂಚುತ್ತಿವೆ. ಆದರೆ 5 ಬಾರಿ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಸತತ 5 ಪಂದ್ಯಗಳಲ್ಲಿ ಸೋತು, ಟೀಕೆಗಳಿಗೆ ಗುರಿಯಾಗಿದೆ.

    ರೋಹಿತ್ ಶರ್ಮಾ ನಾಯಕತ್ವವಿದ್ದರೆ ಗೆಲುವು ಬಹುತೇಕ ಖಚಿತ ಎನ್ನುತ್ತಿದ್ದವರು, ಸರಣಿ ಸೋಲಿನಿಂದಾಗಿ ಟೀಕೆ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ರೋಹಿತ್ ಶರ್ಮಾಗೆ ಬ್ಯಾನ್ ಭೀತಿ ಶುರುವಾಗಿದೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ

    ROHITH SHARMA (1)

    ಹೌದು. ರೋಹಿತ್ ಶರ್ಮಾ ಸರಣಿ ಪಂದ್ಯಗಳಲ್ಲಿ ತಮ್ಮ ನಾಯಕತ್ವ ವಿಫಲವಾಗುತ್ತಿರುವ ತಲೆ ಬಿಸಿಯ ನಡುವೆಯೇ ಪಂದ್ಯದಿಂದ ನಿಷೇಧವಾಗುವ ಭಯದಲ್ಲಿದ್ದಾರೆ. ಈ ನಿಷೇಧದಿಂದ ತಪ್ಪಿಸಿಕೊಳ್ಳಲು ಮುಂದಿನ ಪಂದ್ಯಗಳಲ್ಲಿ ಎಚ್ಚರಿಕೆಯ ಆಟವನ್ನು ಆಡಲೇಬೇಕಿರುವ ರೋಹಿತ್ ಶರ್ಮಾ ನಿಷೇಧದಿಂದ ತಪ್ಪಿಸಿಕೊಳ್ಳುತ್ತಾರಾ ಎನ್ನುವುದು ಕಾದುನೋಡಬೇಕಿದೆ.

    ಲಕ್ನೋ ವಿರುದ್ಧ ಗೆಲವು ಅನಿವಾರ್ಯ: ಸತತ 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂದಿನ ಲಕ್ನೋ ಸೂಪರ್‌ಜೈಂಟ್ಸ್ ತಂಡ ವಿರುದ್ಧ ಗೆಲ್ಲುವುದು ಅನಿವಾರ್ಯವಾಗಿದೆ. ಅದಕ್ಕಾಗಿ ರೋಹಿತ್ ಶರ್ಮಾ ಹೊಸ ಆಲೋಚನಾ ಕ್ರಮ ಅನುಸರಿಸಲಿದ್ದಾರೆ. ಈ ಕುರಿತು ನೆನ್ನೆಯಷ್ಟೇ ಪ್ರತಿಕ್ರಿಯೆಯನ್ನೂ ನೀಡಿದ್ದರು.

    IPL

    ಬ್ಯಾನ್ ಭೀತಿಗೆ ಕಾರಣವೇನು?: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಈವರೆಗೆ ನಡೆದ ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದು, ದಂಡ ತೆತ್ತಿದೆ. ಈ ಬಾರಿ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಿತ್ತು. ಇದೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂ. ದಂಡ ಕೂಡ ವಿಧಿಸಲಾಗಿತ್ತು. ಇನ್ನೂ ಕೊನೆಯದ್ದಾಗಿ ಆಡಿದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ನಿಧಾನಗತಿಯ ಬೌಲಿಂಗ್‌ನಿಂದ 24 ಲಕ್ಷ ದಂಡ ತೆತ್ತಿದ್ದಾರೆ ಹಾಗೂ ತಂಡದ ಉಳಿದ ಆಟಗಾರರಿಗೆ 6 ಲಕ್ಷ ದಂಡ ವಿಧಿಸಲಾಗಿದೆ ಈ ಎಲ್ಲ ಕಾರಣಗಳು ಅವರನ್ನು ಬ್ಯಾನ್ ಸಂಕಷ್ಟಕ್ಕೆ ತಂದಿಟ್ಟಿವೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?

    IPL 2022 RR VS LSG

    ಎಂಐಗೆ ಒಂದು ಪಂದ್ಯ ನಿಷೇಧ?: ಮುಂಬೈ ಇಂಡಿಯನ್ಸ್ ಈಗಾಗಲೇ 2 ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದು, ಮುಂದಿನ ಪಂದ್ಯದಲ್ಲೂ ಇದೇ ರೀತಿ ನಿಧಾನಗತಿಯ ಬೌಲಿಂಗ್ ಮಾಡಿಸಿದರೆ ರೋಹಿತ್ ಶರ್ಮಾ ಐಪಿಎಲ್ ನಿಯಮದ ಪ್ರಕಾರ 30 ಲಕ್ಷ ರೂ. ದಂಡ ತೆರುವ ಜೊತೆಗೆ, ಮುಂದಿನ ಒಂದು ಪಂದ್ಯದಲ್ಲಿ ನಿಷೇಧಕ್ಕೆ ಒಳಗಾಗಲಿದ್ದಾರೆ ಎಂದು ಐಪಿಎಲ್ ಮಂಡಳಿ ಎಚ್ಚರಿಕೆ ನೀಡಿದೆ.

    ದಂಡ ವಿಧಿಸುವುದು ಏಕೆ?: ಐಪಿಎಲ್ ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. ಐಪಿಎಲ್ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: 3 ವಿಕೆಟ್‌ ಕಿತ್ತು ರೋಚಕ ತಿರುವು – ತಾಯಿಯ ಬಗ್ಗೆ ರಶೀದ್‌ ಖಾನ್‌ ಭಾವನಾತ್ಮಕ ಮಾತು

    IPL 2022 RCB VS MI

    ಏನಿದು ಸ್ಟ್ರೆಟಜಿಕ್‌ ಟೈಮ್‌ಔಟ್?: ಪ್ರತಿ ಪಂದ್ಯದಲ್ಲಿ 3 ನಿಮಿಷದ 4 ಸ್ಟ್ರೆಟಜಿಕ್‌ ಟೈಮ್ ಔಟ್ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ ಬೌಲಿಂಗ್ ತಂಡ 6-9 ಓವರ್ ಮಧ್ಯೆ, 2ನೇ ಸ್ಟ್ರೆಟಜಿಕ್‌ ಟೈಮ್ ಔಟ್ ಅನ್ನು ಬ್ಯಾಟಿಂಗ್ ತಂಡ 13-16 ಓವರ್ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.

    ದಂಡ ಯಾಕೆ?: ಐಪಿಎಲ್ ಅಂದ್ರೆ ಬಿಸಿನೆಸ್. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್ ಬಹಳ ಮುಖ್ಯ. ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್ ಮಾಡಿದರೆ ಅದು ಐಪಿಎಲ್ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.

  • ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್

    ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್

    ನ್ಯೂಯಾರ್ಕ್: ಯಎಸ್ ಓಪನ್ ಅರ್ಹತಾ ಸುತ್ತಿನಲ್ಲಿ ಆಡಲು ನ್ಯೂಯಾರ್ಕ್‍ಗೆ ಆಗಮಿಸಿದ್ದ ಎಮ್ಮಾ ರಾಡುಕಾನು, ತಾನು ಪ್ರಶಸ್ತಿ ಸುತ್ತಿಗೇರುತ್ತೇನೆ ಎಂಬ ವಿಶ್ವಾಸವಿಲ್ಲದೆ ಮೊದಲೇ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದರು. ಆದರೆ ಟೂರ್ನಿಯುದ್ದಕ್ಕೂ ಅದ್ಭುತ ಸಾಧನೆ ತೋರಿ ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಮಹಿಳಾ ಸಿಂಗಲ್ಸ್ ಚಾಂಪಿಯನ್ ಆಗುವ ಮೂಲಕ ರಾಡುಕಾನು ಹೊಸ ತಾರೆಯಾಗಿ ಹೊರಹೊಮ್ಮಿದ್ದಾರೆ.

    18ರ ಹರೆಯದ ಎಮ್ಮಾ ರಾಡುಕಾನು ಫೈನಲ್‍ನಲ್ಲಿ ಕೆನಡಾದ 19 ವರ್ಷದ ಲೈಲಾ ಆ್ಯನಿ ಫರ್ನಾಂಡೆಜ್ ವಿರುದ್ಧ 6-4, 6-3 ಸೆಟ್‍ಗಳ ಗೆಲುವಿನೊಂದಿಗೆ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಬ್ರಿಟನ್‍ನ ಯುವತಾರೆ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‍ಗೆ ಅಚ್ಚರಿಯಾಗಿ ಆಯ್ಕೆಗೊಂಡ ಆಟಗಾರರಿವರು

    ಫೈನಲ್‍ನಲ್ಲಿ ಎದುರಾಳಿಯಾಗಿ ಆಡಿದ ಈ ಇಬ್ಬರು ಆಟಗಾರ್ತಿಯರು ಕೂಡ 3 ವರ್ಷಗಳ ಹಿಂದೆ ವಿಂಬಲ್ಡನ್ ಕಿರಿಯರ ನಡುವಿನ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಇದೀಗ ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ನಲ್ಲಿ ಎದುರಾಳಿಯಾಗಿ ಆಡಿ ಎಮ್ಮಾ ರಾಡುಕಾನು, ಲೈಲಾ ಆ್ಯನಿ ಫರ್ನಾಂಡೆಜ್ ವಿರುದ್ಧ ಗೆದ್ದು ಬೀಗಿದ್ದಾರೆ. ರೋಚಕವಾಗಿ ಸಾಗಿದ ಫೈನಲ್ ಪಂದ್ಯಾಟ 1 ಗಂಟೆ 51 ನಿಮಿಷಗಳ ಕಾಲ ನಡೆಯಿತು. ಇಬ್ಬರು ಆಟಗಾರ್ತಿಯರು ಕೂಡ ಜಿದ್ದಾಜಿದ್ದಿಯಲ್ಲಿ ಕಾದಾಡಿ ಪ್ರೇಕ್ಷಕರನ್ನು ರಂಜಿಸಿದರು.

    ದಾಖಲೆಗಳ ಒಡತಿ ರಾಡುಕಾನು
    ರಾಡುಕಾನು ಗ್ರ್ಯಾಂಡ್ ಸ್ಲ್ಯಾಮ್ ಗೆಲುವಿನೊಂದಿಗೆ ಹಲವು ದಾಖಲೆಗಳ ಒಡತಿಯಾಗಿದ್ದಾರೆ. ಅರ್ಹತಾ ಸುತ್ತಿನಲ್ಲಿ ಆಡಿ ಗೆದ್ದು, ಪ್ರಶಸ್ತಿ ಸುತ್ತಿಗೇರಿ ವಿಜಯಿಯಾದ ಮೊದಲ ಆಟಗಾರ್ತಿ ಎಂಬ ನೂತನ ದಾಖಲೆ ಬರೆದರು. ಈ ಮೊದಲು 150ನೇ ರ್ಯಾಕಿಂಗ್ ಹೊಂದಿದ್ದ ರಾಡುಕಾನು ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಬಳಿಕ ವಿಶ್ವ ರ‍್ಯಾಕಿಂಗ್ ನಲ್ಲಿ 23ನೇ ಸ್ಥಾನಕ್ಕೇರಿದ್ದು, 1977ರಲ್ಲಿ ವರ್ಜೀನಿಯಾ ವೇಡ್ ಬಳಿಕ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಬ್ರಿಟನ್‍ನ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ತಂದೆ-ತಾಯಿಯನ್ನ ವಿಮಾನದಲ್ಲಿ ಕರೆದೊಯ್ದ ಚಿನ್ನದ ಹುಡುಗ

    https://twitter.com/usopen/status/1436815112778567681?ref_src=twsrc%5Etfw%7Ctwcamp%5Etweetembed%7Ctwterm%5E1436815112778567681%7Ctwgr%5E%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fusopen%2Fstatus%2F1436815112778567681%3Fref_src%3Dtwsrc5Etfw

    2004ರ ಬಳಿಕ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಅತೀ ಕಿರಿಯ ಆಟಗಾರ್ತಿಯಾಗಿದ್ದು, 2004ರಲ್ಲಿ ರಷ್ಯಾದ ಮರಿಯಾ ಶರಪೋವಾ 17ನೇ ವಯಸ್ಸಿನಲ್ಲಿ ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದು ದಾಖಲೆ ನಿರ್ಮಿಸಿದ್ದರು. ರಾಡುಕಾನು ಅರ್ಹತಾ ಸುತ್ತಿನಿಂದ ಹಿಡಿದು ಪ್ರಶಸ್ತಿ ಸುತ್ತಿನ ವರೆಗೂ ತಮ್ಮ ಅಜೇಯ ಓಟವನ್ನು ಮುಂದುವರಿಸಿ ಒಂದು ಸೆಟ್‍ಗಳನ್ನು ಸೋಲದೇ 10 ಪಂದ್ಯಗಳನ್ನು ಗೆದ್ದು 18.38 ಕೋಟಿ ರೂ. ಬಹುಮಾನದ ಒಡತಿಯಾದರು.

  • ಧಾರವಾಡದ ಪೋರ ದುಬೈನಲ್ಲಿ ಅಬಾಕಸ್ ಚಾಂಪಿಯನ್

    ಧಾರವಾಡದ ಪೋರ ದುಬೈನಲ್ಲಿ ಅಬಾಕಸ್ ಚಾಂಪಿಯನ್

    ಧಾರವಾಡ: ಕಳೆದ ವಾರವಷ್ಟೇ ಜಿಲ್ಲೆಯ ಯುವತಿಯೋರ್ವಳು ಭಾರತೀಯ ಸೈನ್ಯಕ್ಕೆ ಸೇರಿದ್ದು ಸುದ್ದಿಯಾಗಿತ್ತು. ಈಗ ಇದೇ ವಿದ್ಯಾಕಾಶಿ ಧಾರವಾಡದ ಬಾಲಕನೋರ್ವ ದುಬೈನಲ್ಲಿ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಬಂದಿದ್ದಾನೆ.

    ಹೌದು, ನಗರದ ತಡಸಿನಕೊಪ್ಪದ ಗ್ಲೋಬಲ್ ಸ್ಕೂಲ್ ಆಫ್ ಎಕ್ಸಲೆನ್ಸಿ ಶಾಲೆಯ ನಾಲ್ಕನೇ ತರಗತಿ ಬಾಲಕ ವೇದ ರಾಯ್ಕರ್, ದುಬೈ ಚಾಂಪಿಯನ್‍ಶಿಪ್ ಗೆದ್ದು ಬಂದಿದ್ದಾನೆ. 16 ರಾಷ್ಟ್ರದ 2000 ಮಕ್ಕಳ ನಡುವೆ ಸ್ಪರ್ಧಿಸಿ ಪ್ರಶಸ್ತಿ ಜಯಿಸಿ ಶಾಲೆಗೆ ಹೆಮ್ಮೆ ತಂದಿದ್ದಾನೆ.

    ಕಳೆದ ಮೂರು ವರ್ಷಗಳಿಂದ ನಗರದ ಶಿಕ್ಷಕಿ ತನುಜಾ ಬಳಿ ಅಬಾಕಸ್ ತರಬೇತಿ ಪಡೆಯಿತ್ತಿರುವ ವೇದ, ದುಬೈ ಚಾಂಪಿಯನ್ ಆಗುವ ಮೊದಲು ಕೂಡಾ ಹಲವು ಟ್ರೋಫಿ ಗೆದ್ದು ಬಂದಿದ್ದಾನೆ.

    ಚೆನ್ನೈ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನಡೆದಿರುವ ಅಬಾಕಸ್ ಸ್ಪರ್ಧೆಯಲ್ಲಿ ವೇದ ಚಾಂಪಿಯನ್ ಆಗಿದ್ದ. ಈ ಬಾರಿ ಅವನ ಜ್ಞಾನವನ್ನು ನೋಡಿದ ಪೋಷಕರು ದುಬೈಗೆ ಕಳಿಸಿದ್ದರು. ಕಳೆದ ತಿಂಗಳು ನಡೆದ ಈ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ ಚಾಂಪಿಯನ್‍ಶಿಪ್ ಟ್ರೋಫಿ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾನೆ.

  • ಡಬ್ಲ್ಯುಎಫ್ ವರ್ಲ್ಡ್ ಟೂರ್ 2018 – ಪಿವಿ ಸಿಂಧು ಚಾಂಪಿಯನ್

    ಡಬ್ಲ್ಯುಎಫ್ ವರ್ಲ್ಡ್ ಟೂರ್ 2018 – ಪಿವಿ ಸಿಂಧು ಚಾಂಪಿಯನ್

    ಗುವಾಂಗ್‍ಜೌ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ 2018 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಈ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ.

    ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ಸಿಂಧು ಪಡೆದಿದ್ದು, ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಜಪಾನ್‍ನ ನಜೊಮಿ ಒಕುಹರಾರನ್ನು 21-19, 21-17ರ ಅಂತರದಲ್ಲಿ ಸೋಲಿಸಿದರು. ಇದರೊಂದಿಗೆ ವರ್ಷಾಂತ್ಯದಲ್ಲಿ ಮೊದಲ ಪ್ರಶಸ್ತಿ ಜಯಿಸಿದರು.

    ಇದಕ್ಕೂ ಮುನ್ನ ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‍ನ ರಚನಾಕ್ ಇಂಟನಾನ್ ರನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ಕಳೆದ ವರ್ಷದ ಇದೇ ಟೂರ್ನಿಯಲ್ಲಿ ಸಿಂಧು ಫೈನಲ್ ಪ್ರವೇಶಿಸಿ ಬೆಳ್ಳಿ ಪದಕಕ್ಕೆ ತೃಪ್ತಿ ಹೊಂದಿದ್ದರು. ಸಿಂಧು 2016 ಒಲಿಂಪಿಕ್ ಮತ್ತು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಪಡೆದು ಚಾಂಪಿಯನ್ ಆಗುವ ಹಂತದಲ್ಲಿ ಎಡವಿದ್ದರು.

    ಸದ್ಯ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಗೆಲ್ಲುವ ಮೂಲಕ ತಮ್ಮ ಈ ಹಿಂದಿನ ಸಾಧನೆಯನ್ನು ಉತ್ತಪಡಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ – ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

    ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ – ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

    ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ ದೀಕ್ಷಿತ್, ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಕೂಡ ಭಾಗಿಯಾಗಿದ್ದರು.

    ಈ ಬಾರಿಯ ಟೂರ್ನಿಯಲ್ಲಿ 16 ತಂಡಗಳು ಸೆಣಸಲಿದ್ದು, ನಾಲ್ಕು ಗುಂಪುಗಳಾಗಿ ತಂಡಗಳನ್ನು ವಿಂಗಡಿಸಲಾಗಿದೆ. ಕೆನಡಾ, ದಕ್ಷಿಣ ಆಫ್ರಿಕಾ, ಬೆಲ್ಜಿಯಂ ತಂಡಗಳೊಂದಿಗೆ ಭಾರತ ಟೂರ್ನಿಯ ಸಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಅರ್ಜೆಂಟೀನಾ, ನ್ಯೂಜಿಲೆಂಡ್, ಸ್ಪೇನ್, ಫ್ರಾನ್ಸ್ ತಂಡಗಳು ಎ, ಆಸ್ಟ್ರೇಲಿಯಾ, ಇಂಗ್ಲೆಂಡ್, ಐರ್ಲೆಂಡ್, ಚೀನಾ ತಂಡಗಳು ಬಿ ಹಾಗೂ ನೆದರ್ಲೆಂಡ್ಸ್, ಜರ್ಮನಿ, ಮಲೇಷ್ಯಾ, ಪಾಕಿಸ್ತಾನ ತಂಡಗಳು ಡಿ ಗುಂಪಿನಲ್ಲಿದೆ.

    ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಪುರುಷರ ಹಾಕಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ಭುವನೇಶ್ವರದ ಕಳಿಂಗಾ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದ್ದು, ಮೊದಲ ಪಂದ್ಯ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಭಾರತ-ದಕ್ಷಿಣ ಆಫ್ರಿಕಾ ಹಾಗೂ ಬೆಲ್ಜಿಯಂ-ಕೆನಡಾ ತಂಡಗಳು ಮುಖಾಮುಖಿ ಆಗಲಿವೆ. ಹಾಕಿ ವಿಶ್ವಕಪ್‍ನ 14ನೇ ಆವೃತ್ತಿಯ ಟೂರ್ನಿಗೆ ಆತಿಥ್ಯವಹಿಸಿಕೊಂಡಿರುವ ಭಾರತದ ಒಮ್ಮೆ ಮಾತ್ರ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದು, ಈ ಬಾರಿ ಭಾರತ ತವರು ಅಭಿಮಾನಿಗಳ ಬೆಂಬಲ ಸಿಗಲಿದೆ. ಉಳಿದಂತೆ ಭಾರತ 3ನೇ ಬಾರಿ ಹಾಕಿ ವಿಶ್ವಕಪ್ ಟೂರ್ನಿಯನ್ನು ಆಯೋಜಿಸುತ್ತಿದ್ದು, 8 ವರ್ಷಗಳ ನಂತರ ಈ ಬಾರಿ ಟೂರ್ನಿಯನ್ನು ನಡೆಸುತ್ತಿದೆ.

    ಇತ್ತೀಚೆಗಷ್ಟೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಜತೆ ಜಂಟಿ ಚಾಂಪಿಯನ್ ಆಗಿದ್ದ ಭಾರತ, 1975ರಲ್ಲಿ ಮಲೇಷ್ಯಾದಲ್ಲಿ ನಡೆದ ವಿಶ್ವಕಪ್ ನಲ್ಲಿ ಟ್ರೋಫಿ ಗೆದ್ದಿತ್ತು. ಅಂದು ತಂಡದ ಸಾರಥ್ಯವಹಿಸಿದ್ದ ಅಜಿತ್ ಪಾಲ್ ಸಿಂಗ್ ಸಾರಥ್ಯದಲ್ಲಿ ಚೊಚ್ಚಲ ಚಾಂಪಿಯನ್ ಆಗಿದ್ದ ಭಾರತ ಬಳಿಕ 2ನೇ ಬಾರಿ ಚಾಂಪಿಯನ್ ಆಗುವ ಕನಸು ಕಾಣುತ್ತಿದೆ. 43 ವರ್ಷಗಳಿಂದ ವಿಶ್ವಕಪ್ ಪದಕ ಪಡೆಯದ ಭಾರತಕ್ಕೆ ಈ ಬಾರಿ ತವರಿನ ಟೂರ್ನಿ ಚಾಂಪಿಯನ್ ಆಗಲು ಸುವರ್ಣಾವಕಾಶ ಲಭಿಸಿದ್ದು, ಮನ್ ಪ್ರೀತ್ ಸಿಂಗ್ ತಂಡದ ನಾಯಕತ್ವ ವಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊಟ್ಟ ಮಾತು ಉಳಿಸಿಕೊಂಡ ಮಾರ್ಕ್ ವಿಲಿಯಮ್ಸ್ – ಚಾಂಪಿಯನ್‍ಶಿಪ್ ಗೆದ್ದ ಬಳಿಕ ಬೆತ್ತಲೆ ಸುದ್ದಿಗೋಷ್ಠಿ

    ಕೊಟ್ಟ ಮಾತು ಉಳಿಸಿಕೊಂಡ ಮಾರ್ಕ್ ವಿಲಿಯಮ್ಸ್ – ಚಾಂಪಿಯನ್‍ಶಿಪ್ ಗೆದ್ದ ಬಳಿಕ ಬೆತ್ತಲೆ ಸುದ್ದಿಗೋಷ್ಠಿ

    ಶೇಫೀಲ್ಡ್: ವಿಶ್ವ ಸ್ನೂಕರ್ ಚಾಂಪಿಯನ್‍ಶಿಪ್‍ನ ಇತಿಹಾಸದಲ್ಲೇ ಅತ್ಯಂತ ಕಠಿಣ ಫೈನಲ್ ಎಂದೇ ಬಿಂಬಿತವಾಗಿದ್ದ ಪಂದ್ಯದಲ್ಲಿ ಗೆದ್ದು ಬೀಗಿದ ಮಾರ್ಕ್ ವಿಲಿಯಮ್ಸ್, ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್‍ಶಿಪ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಇಂಗ್ಲೆಂಡ್‍ನ ಶೇಫೀಲ್ಡ್ ನಲ್ಲಿ ನಡೆದ ಜಿದ್ದಾಜಿದ್ದಿನ ಅಂತಿಮ ಹಣಾಹಣಿಯಲ್ಲಿ ವಿಲಿಯಮ್ಸ್, ನಾಲ್ಕು ಬಾರಿಯ ಚಾಂಪಿಯನ್ ಜಾನ್ ಹಿಗ್ಗಿನ್ಸ್ ವಿರುದ್ಧ 18-16 ಅಂತರದಲ್ಲಿ ರೋಚಕವಾಗಿ ಗೆದ್ದು ಇತಿಹಾಸ ನಿರ್ಮಿಸಿದರು. 42 ವರ್ಷದ ವಿಲಿಯಮ್ಸ್, ಬರೋಬ್ಬರಿ 15 ವರ್ಷದ ಬಳಿಕ ಮತ್ತೆ ಚಾಂಪಿಯನ್‍ಪಟ್ಟಕ್ಕೇರುವ ಮೂಲಕ ಎಲ್ಲರ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದರು. ಮತ್ತೊಂದೆಡೆ ನಾಲ್ಕು ಬಾರಿಯ ಚಾಂಪಿಯನ್ ಜಾನ್ ಹಿಗ್ಗಿನ್ಸ್ ಸತತ ಎರಡನೇ ವರ್ಷವೂ ಫೈನಲ್‍ನಲ್ಲಿ ನಿರಾಸೆ ಅನುಭವಿಸಿದರು. ಕಳೆದ ವರ್ಷ ಮಾರ್ಕ್ ಸೆಲ್ಬಿಗೆ ಹಿಗ್ಗಿನ್ಸ್ ಶರಣಾಗಿದ್ದರು.

    ಬೆತ್ತಲೆ ಸುದ್ದಿಗೋಷ್ಠಿ:
    ಚಾಂಪಿಯನ್‍ಶಿಪ್‍ಗೂ ಮೊದಲು, ತಾನು ಗೆದ್ದರೆ ಬೆತ್ತೆಲೆಯಾಗಿ ಸುದ್ದಿಗೋಷ್ಠಿ ನಡೆಸುತ್ತೇನೆ ಎಂದು ಮಾರ್ಕ್ ವಿಲಿಯಮ್ಸ್ ಮಾತು ಕೊಟ್ಟಿದ್ದರು. ಚಾಂಪಿಯನ್‍ಶಿಪ್ ಮುಗಿದ ಬಳಿಕ ಟವಲ್ ಸುತ್ತಿ ಮಾಧ್ಯಮ ಕೊಠಡಿಗೆ ಆಗಮಿಸಿದ ವಿಲಿಯಮ್ಸ್, ಕೂತ ಬಳಿಕ ಟವಲ್‍ನ್ನೂ ತೆಗೆದು ಕೂಡ ಪಕ್ಕದಲಿದ್ದ ಆಸನದಲ್ಲಿರಿಸಿದರು. ಆದರೆ ಮಾಧ್ಯಮಗಳ ಲೋಗೋ ಇದ್ದ ಟೇಬಲ್‍ಗೆ ಹಾಕಲಾಗಿದ್ದ ಬಟ್ಟೆ ವಿಲಿಯಮ್ಸ್ ಮಾನ ಕಾಪಾಡಿತು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಲಿಯಮ್ಸ್, ಇಲ್ಲಿ ತುಂಬಾ ಚಳಿಯಾಗುತ್ತಿದೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಈ ಕ್ಷಣವನ್ನು ನನಗೆ ನಂಬಲು ಸಾಧ್ಯವಾಗುತ್ತಿಲ್ಲ. ಕಳೆದ ವರ್ಷ ನಾನು ಈ ಬಗ್ಗೆ ಕನಸನ್ನಷ್ಟೇ ಕಂಡಿದ್ದೆ. ಅದೀಗ ನನಸಾಗುತ್ತಿದೆ. ಮುಂದಿನ ವರ್ಷವೂ ನಾನೇ ಗೆದ್ದರೆ ಮತ್ತೆ ನಗ್ನನಾಗಿಯೇ ನಿಮ್ಮ ಮುಂದೆ ಬರುತ್ತೇನೆ ಎಂದು ವಿಲಿಯಮ್ಸ್ ಹೇಳಿದರು.

  • ಇಂಗ್ಲೀಷ್ ಪ್ರೀಮಿಯರ್ ಲೀಗ್: ಮ್ಯಾಂಚೆಸ್ಟರ್ ಸಿಟಿ ಚಾಂಪಿಯನ್

    ಇಂಗ್ಲೀಷ್ ಪ್ರೀಮಿಯರ್ ಲೀಗ್: ಮ್ಯಾಂಚೆಸ್ಟರ್ ಸಿಟಿ ಚಾಂಪಿಯನ್

    ಲಂಡನ್: ಪ್ರತಿಷ್ಠಿತ ಇಂಗ್ಲಿಷ್ ಪ್ರೀಮಿಯರ್ ಲೀಗ್ ಫುಟ್ಬಾಲ್ ಕೂಟದಲ್ಲಿ ಮ್ಯಾಂಚೆಸ್ಟರ್ ಸಿಟಿ ತಂಡ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

    ಮ್ಯಾಂಚೆಸ್ಟರ್ ಎತ್ತಿಹಾದ್ ಮೈದಾನದಲ್ಲಿ ನಿನ್ನೆ ತಡರಾತ್ರಿ ನಡೆದ ಪಂದ್ಯದಲ್ಲಿ ಅತಿಥೇಯ ಸಿಟಿ ತಂಡ ಹಡ್ಡರ್ಸ್‍ಫೀಲ್ಡ್ ತಂಡದ ವಿರುದ್ಧ ಗೋಲು ರಹಿತ ಡ್ರಾ ಸಾಧಿಸಿತು. ಆ ಮೂಲಕ ಸೀಸನ್‍ನಲ್ಲಿ ಆಡಿದ 36 ಪಂದ್ಯಗಳಲ್ಲಿ 30 ಪಂದ್ಯದಲ್ಲಿ ಜಯಭೇರಿ ಬಾರಿಸಿ, 4 ಪಂದ್ಯಗಳಲ್ಲಿ ಡ್ರಾಗೆ ತೃಪ್ತಿಪಟ್ಟುಕೊಂಡಿತು.

    ಕೇವಲ ಎರಡು ಪಂದ್ಯಗಳನ್ನು ಸೋತಿರುವ ಸಿಟಿ ಒಟ್ಟು 94 ಅಂಕಗಳನ್ನು ಕಲೆಹಾಕಿದೆ. ತವರು ಮೈದಾನದಲ್ಲಿ 102 ಗೋಲು ಗಳಿಸಿರುವ ಸಿಟಿ, ತವರಿನಾಚೆ 26 ಗೋಲು ದಾಖಲಿಸಿದೆ. ಆ ಮೂಲಕ ಇತರ ತಂಡಗಳಿಗಿಂತ ಒಟ್ಟು 76 ಗೋಲುಗಳ ಭಾರೀ ಅಂತರವನ್ನು ಕಾಯ್ದುಕೊಂಡಿದೆ.

    ಎರಡನೇ ಸ್ಥಾನದಲ್ಲಿರುವ ಮ್ಯಾಂಚೆಸ್ಟರ್ ಯುನೈಟೆಡ್ ತಂಡ 36 ಪಂದ್ಯಗಳಲ್ಲಿ 24 ಜಯಗಳಿಸಿದ್ದರೆ 7 ಪಂದ್ಯಗಳಲ್ಲಿ ಸೋಲು ಹಾಗೂ 5 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದು, 77 ಅಂಕಗಳಿಗಷ್ಟೇ ಸೀಮಿತಗೊಂಡಿದೆ. ಕಳೆದ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಚೆಲ್ಸಿಯಾ ತಂಡ ಈ ಬಾರಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

    ಎತ್ತಿಹಾದ್ ಮೈದಾನದಲ್ಲಿ ಇದೇ ಮೊದಲ ಬಾರಿ ಡ್ರಾ ಫಲಿತಾಂಶಕ್ಕೆ ತೃಪ್ತಿಪಟ್ಟುಕೊಂಡ ವಿನ್ಸೆಂಟ್ ಕೊಂಪೆನಿ ನಾಯಕತ್ವದ ಮ್ಯಾಂಚೆಸ್ಟರ್ ಸಿಟಿ ತಂಡಕ್ಕೆ ಕೂಟದಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇದ್ದು, 2004-05ರಲ್ಲಿ ಚೆಲ್ಸಿಯಾ ತಂಡ ನಿರ್ಮಸಿದ್ದ ಅತಿಹೆಚ್ಚು ಪಾಯಿಂಟ್ಸ್ (96) ಗಳಿಕೆಯ ದಾಖಲೆಯನ್ನು ಮುರಿಯುವ ತವಕದಲ್ಲಿದೆ.

    ಟ್ರೋಫಿ ಸ್ವೀಕರಿಸಿದ ಬಳಿಕ ಮಾತನಾಡಿದ ಕೋಚ್ ಪೆಪ್ ಗಾರ್ಡಿಯೋಲಾ, ಚಾಂಪಿಯನ್‍ಶಿಪ್ ಗೆಲ್ಲುವುದರ ಜೊತೆಜೊತೆಗೆ ನನ್ನ ತಂಡ ಕೆಲ ದಾಖಲೆಗಳನ್ನು ಮುರಿಯುವುದನ್ನು ನಾನು ಎದುರುನೋಡುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದರು. ಬಾರ್ಸಿಲೋನಾ, ಬಯಾರ್ನ್ ಮ್ಯೂನಿಚ್‍ನಂತಹ ಘಟಾನುಘಟಿಗೆ ತಂಡಗಳನ್ನು ಯಶಸ್ಸಿನ ತುತ್ತತುದಿಗೆ ಕೊಂಡೊಯ್ದಿದ್ದ ಕೋಚ್ ಗಾರ್ಡಿಯೋಲ ಸಿಟಿ ತಂಡವನ್ನು ಚಾಂಪಿಯನ್‍ಶಿಪ್ ಪಟ್ಟಕ್ಕೆ ಕೊಂಡೊಯ್ಯುವುದರ ಮೂಲಕ ತನ್ನ ವೃತ್ತಿ ಜೀವನದ ಟ್ರೋಫಿ ಗಳಿಕೆಯನ್ನು 22ಕ್ಕೇರಿಸಿದ್ದಾರೆ. ಇದರಲ್ಲಿ ಎರಡು ಚಾಂಪಿಯನ್ಸ್ ಲೀಗ್ ಕಿರೀಟವೂ ಸೇರಿದೆ.

    ನೆಲಕ್ಕೆ ಬಿದ್ದ ಟ್ರೋಫಿ..!
    ಪ್ರಶಸ್ತಿ ವಿತರಣಾ ಸಮಾರಂಭದ ವೇಳೆ ಚಾಂಪಿಯನ್‍ಶಿಪ್ ಟ್ರೋಫಿ ನೆಲಕ್ಕೆ ಬಿದ್ದ ಘಟನೆಯೂ ನಡೆಯಿತು. ತಂಡದ ಹಿರಿಯ ಆಟಗಾರ ಯಾಯಾ ಟೋರೆ ಸುತ್ತ ಸೇರಿದ್ದ ಸಿಟಿ ತಂಡದ ಇತರ ಆಟಗಾರರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು ಆದರೆ ಆಗಿನ್ನೂ ಟ್ರೋಫಿ ವಿತರಣೆಯಾಗಿರಲಿಲ್ಲ. ಸ್ಟ್ಯಾಂಡ್‍ನಲ್ಲಿಟ್ಟಿದ್ದ ಟ್ರೋಫಿ ಒಲೆಕ್ಸಾಂಡರ್ ಕ್ಸಿಂಚಾಂಕೋ ಬೆನ್ನು ತಾಗಿ ಕೆಳಕ್ಕೆ ಬಿತ್ತು. ಆ ಕ್ಷಣ ಕ್ಸಿಂಚಾಂಕೋ ಕಕ್ಕಾಬಿಕ್ಕಿಯಾದರು. ಬಳಿಕ ಸಂಘಟಕರು ಬಂದು ಟ್ರೋಫಿಯನ್ನು ಮೂಲ ಸ್ಥಾನದಲ್ಲಿರಿಸಿದರು.

    https://www.instagram.com/p/BicUu1HH_Mc/?utm_source=ig_embed%20(E£ï%20¸ÁÖUÁæªÀiï%20°APï)