Tag: champions trophy

  • ಇಂದು ನಡೆಯಲಿದೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ- ಮಿಸ್ ಮಾಡ್ಕೊಬೇಡಿ!

    ಇಂದು ನಡೆಯಲಿದೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ- ಮಿಸ್ ಮಾಡ್ಕೊಬೇಡಿ!

    ಬೆಂಗಳೂರು: ಬಹು ದಿನಗಳ ನಂತರ ಸಾಂಪ್ರದಾಯಿಕ ಬದ್ದ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

    ಈಗಾಗಲೇ ಐಸಿಸಿ ಚಾಂಪಿಯನ್ ಟ್ರೋಪಿ ಪಂದ್ಯಾವಳಿಗಳು ಲಂಡನ್‍ನಲ್ಲಿ ಆರಂಭಗೊಂಡಿವೆ. 2016ರ ವಿಶ್ವ ಟಿ-ಟ್ವೆಂಟಿಯ ನಂತರ ಭಾರತ ಮತ್ತು ಪಾಕ್ ಎರಡು ದೇಶಗಳ ನಡುವೆ ರೋಚಕ ಪಂದ್ಯ ನಡೆಯಲಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಸಹ ಇಂದಿನ ಪಂದ್ಯಕ್ಕೆ ಮಹತ್ವ ನೀಡಿದೆ.

    ಭಾರತ ಹಾಗೂ ಪಾಕಿಸ್ತಾನ ಒಟ್ಟು ಮೂರು ಬಾರಿ ಚಾಂಪಿಯನ್ಸ್ ಟ್ರೋಫಿಗೆ ಸೆಣಸಿದ್ದು, ಒಂದು ಬಾರಿ ಭಾರತ ಗೆದ್ರೆ ಪಾಕಿಸ್ತಾನ 2 ಬಾರಿ ಗೆದ್ದಿದೆ. ಈಗ 2ನೇ ಜಯಕ್ಕೆ ಭಾರತ ಕಾತರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಯುವರಾಜ್ ಸಿಂಗ್ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ರೆ, ಹಾರ್ದಿಕ್ ಪಾಂಡ್ಯ, ಜಸ್ಪೀತ್ ಬೂಮ್ರಾ ಬಾಲ್ ದಾಳಿಗೆ ಸಜ್ಜಾಗಿದ್ದಾರೆ.

    ಅತ್ತ ಪಾಕಿಸ್ತಾನ ತಂಡದ ಆಟಗಾರರು ಸಹ ನಾವೇನು ಕಡಿಮೆಯಿಲ್ಲ ಎಂದು ಅವರು ಅಖಾಡಕ್ಕಿಳಿಯಲು ಸನ್ನದ್ಧರಾಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬರ್ಮಿಂಗ್ ಹ್ಯಾಮ್‍ನಲ್ಲಿ ರಿಯಲ್ ವಾರ್ ನಡೆಯಲಿದೆ.

  • ಇಂಡೋ, ಪಾಕ್ ಕ್ರಿಕೆಟ್: ಗೆಲುವು ಯಾರಿಗೆ? ಹಿಂದಿನ ಪಂದ್ಯಗಳಲ್ಲಿ ಗೆದ್ದವರು ಯಾರು?

    ಇಂಡೋ, ಪಾಕ್ ಕ್ರಿಕೆಟ್: ಗೆಲುವು ಯಾರಿಗೆ? ಹಿಂದಿನ ಪಂದ್ಯಗಳಲ್ಲಿ ಗೆದ್ದವರು ಯಾರು?

    ಎಜ್‍ಬಾಸ್ಟನ್: ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಭಾನುವಾರ ಇಂಗ್ಲೆಂಡಿನ ಎಜ್‍ಬಾಸ್ಟನ್ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ 3 ಗಂಟೆಗೆ ಆರಂಭವಾಗಲಿರುವ ಈ ಪಂದ್ಯ ವೀಕ್ಷಿಸಲು ಜನರು ಈಗ ತುದಿಗಾಲಿನಲ್ಲಿ ನಿಂತಿದ್ದಾರೆ.

    ವಿಶೇಷ ಏನೆಂದರೆ 2013ರ ಚಾಂಪಿಯನ್ಸ್ ಟ್ರೋಫಿ ವೇಳೆ ಇದೇ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ಜಯಗಳಿಸಿತ್ತು. ಹೀಗಾಗಿ 50 ಓವರ್‍ಗಳ ಪಂದ್ಯವಾಗಿರುವುದರಿಂದ ಈ ಹಿಂದಿನ ಮೂರು ದೊಡ್ಡ ಟೂರ್ನಿಯಲ್ಲಿ ಯಾವ ತಂಡ ಗೆದ್ದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    2015ರ ವಿಶ್ವಕಪ್:
    ಆಸ್ಟ್ರೇಲಿಯಾದ ಆಡಿಲೆಡ್‍ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಭಾರತ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 107 ರನ್(126 ಎಸೆತ, 8 ಬೌಂಡರಿ) ಹೊಡೆದಿದ್ದರು. 301ರನ್‍ಗಳ ಗುರಿಯನ್ನು ಪಡೆದ ಪಾಕಿಸ್ತಾನ 47 ಓವರ್‍ಗಳಲ್ಲಿ 224 ರನ್‍ಗಳಿಗೆ ಆಲೌಟ್ ಆಯ್ತು. ಮೊಹಮ್ಮದ್ ಶಮಿ 35 ರನ್‍ಗಳಿಗೆ 4 ವಿಕೆಟ್ ಪಡೆದಿದ್ದರು. ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತ್ತು. ಈ ಮೂಲಕ 6 ವಿಶ್ವಕಪ್‍ನಲ್ಲಿ ಭಾರತ ಪಾಕ್ ವಿರುದ್ಧ ಜಯಗಳಿಸಿದ ಸಾಧನೆ ಮಾಡಿತು.

    2014ರ ಏಷ್ಯಾಕಪ್:
    ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಏಷ್ಯ ಕಪ್‍ನಲ್ಲಿ ಭಾರತವನ್ನು ಒಂದು ವಿಕೆಟ್‍ನಿಂದ ಪಾಕಿಸ್ತಾನ ಸೋಲಿಸಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತ್ತು. ಭಾರತದ ಪರ ಅಂಬಾಟಿ ರಾಯಡು 58 ರನ್ ಹೊಡೆದಿದ್ದರೆ, ರವೀಂದ್ರ ಜಡೇಜಾ ಔಟಾಗದೇ 52 ರನ್ ಹೊಡೆದಿದ್ದರು. ಪಾಕಿಸ್ತಾನ 49.4 ಓವರ್ ಗಳಲ್ಲಿ 249 ರನ್ ಗಳಿಸಿ 1 ವಿಕೆಟ್‍ಗಳ ಜಯವನ್ನು ಸಂಪಾದಿಸಿತ್ತು. ಮೊಹಮ್ಮದ್ ಹಫೀಸ್ 75ರನ್ ಭಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    2013ರ ಚಾಂಪಿಯನ್ಸ್ ಟ್ರೋಫಿ:
    ಇಂಗ್ಲೆಂಡಿನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 165 ರನ್‍ಗಳಿಗೆ ಆಲೌಟ್ ಆಗಿತ್ತು. ಮಳೆ ಬಂದ ಹಿನ್ನೆಲೆಯಲ್ಲಿ ಡಕ್‍ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ 22 ಓವರ್ ಗಳಲ್ಲಿ 102 ರನ್‍ಗಳ ಟಾರ್ಗೆಟ್ ನೀಡಲಾಗಿತ್ತು. ಭಾರತ 19.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ವಿಜಯಿ ಆಯ್ತು. 8 ಓವರ್ ಎಸೆದು 2 ಮೇಡನ್ ಮಾಡಿ 19 ರನ್ ನೀಡಿ 2 ವಿಕೆಟ್ ಪಡೆದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

  • ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು

    ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು

    ಲಂಡನ್: ಚಾಂಪಿಯನ್ಸ್ ಟ್ರೋಫಿಯ ತನ್ನ 2ನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಟೀಂ ಇಂಡಿಯಾ ಈ ಪಂದ್ಯವನ್ನು 240 ರನ್ ಗಳ ಅಂತರದಿಂದ ಗೆದ್ದಿದೆ.

    ಜೂನ್ 4ರಂದು ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಾಡಲಿದೆ.

    325 ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡಕ್ಕೆ 3ನೇ ಓವರ್ ನಲ್ಲೇ ಉಮೇಶ್ ಯಾದವ್ ಮೊದಲ ಆಘಾತ ನೀಡಿದರು. ಮೊದಲ ವಿಕೆಟ್ ಪತನವಾದಾಗ ಬಾಂಗ್ಲಾ ಮೊತ್ತ 11 ರನ್ ಆಗಿತ್ತು. ಇದೇ ಮೊತ್ತಕ್ಕೆ ಮತ್ತೆ 2 ವಿಕೆಟ್ ಪತನವಾದವು. ಬಾಂಗ್ಲಾದ 4 ಆಟಗಾರರು ಸೊನ್ನೆ ಸುತ್ತಿದರು. ಕೇವಲ ಮೂವರು ಆಟಗಾರರು ಮಾತ್ರ ಎರಡಂಕಿಗಳ ರನ್ ಗಳಿಸಿದರು.

    ಕೊನೆಗೆ ಬಾಂಗ್ಲಾದೇಶ 23.5 ಓವರ್ ಗಳಲ್ಲಿ 84 ರನ್ ಗಳಿಸಿ ಆಲೌಟಾಯಿತು. ಟೀಂ ಇಂಡಿಯಾ ಪರವಾಗಿ ಭುವನೇಶ್ವರ್ ಕುಮಾರ್ 3, ಉಮೇಶ್ ಯಾದವ್ 3, ಮೊಹಮ್ಮದ್ ಶಮಿ, ಅಶ್ವಿನ್, ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಗಳಿಸಿದರು.

    ಇಂದಿನ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಮಾಡಿದರೆ, ಮಹೇಂದ್ರ ಸಿಂಗ್ ಧೋನಿ ಫೀಲ್ಡರ್ ಆಗಿ ಕಣಕ್ಕಿಳಿದಿದ್ದರು.

    ಲಂಡನ್ ನ ಓವಲ್ ಕ್ರೀಡಾಂಗಣದಲ್ಲಿ ನಡೆದ ಟೀಂ ಇಂಡಿಯಾದ 2ನೇ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಬ್ಯಾಟಿಂಗ್ ಮಾಡಲು ಇಳಿದ ಭಾರತದ ಮೊದಲ ವಿಕೆಟ್ 2ನೇ ಓವರ್ ನಲ್ಲೇ ಪತನವಾಯಿತು. 3 ಎಸೆತಗಳಲ್ಲಿ 1 ರನ್ ಗಳಿಸಿದ್ದ ರೋಹಿತ್ ಶರ್ಮಾ ರುಬೆಲ್ ಹೊಸೈನ್ ಎಸೆತಕ್ಕೆ ಬೌಲ್ಡ್. ನಂತರ ಬ್ಯಾಟ್ ಮಾಡಲು ಆಗಮಿಸಿದ ಅಜಿಂಕ್ಯಾ ರಹಾನೆ 21 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿ ಔಟಾದರು. ಆದರೆ 3ನೇ ವಿಕೆಟ್ ಗೆ ಶಿಖರ್ ಧವನ್ ಹಾಗೂ ದಿನೇಶ್ ಕಾರ್ತಿಕ್ ಉತ್ತಮ ಜೊತೆಯಾಟ ನೀಡಿದರು. ಈ ನಡುವೆ ಶಿಖರ್ ಧವನ್ 67 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ ಧವನ್ 60 ರನ್ ಗಳಿಸಿದರು.

    ಎಚ್ಚರಿಕೆಯ ಆಟವಾಡಿದ ದಿನೇಶ್ ಕಾರ್ತಿಕ್ 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 77 ಎಸೆತಗಳಲ್ಲಿ 94 ರನ್ ಗಳಿಸಿ ರಿಟೈರ್ಡ್ ಔಟಾದರು. ಬಳಿಕ ಆಗಮಿಸಿದ ಕೇದಾರ್ ಜಾಧವ್ 31 ರನ್ ಗಳಿಸಿದರೆ, ನಂತರ ಬ್ಯಾಟಿಂಗ್ ಮಾಡಲು ಇಳಿದ ಹಾರ್ದಿಕ್ ಪಾಂಡ್ಯ ಬಿರುಸಿನ ಆಟಕ್ಕೆ ಇಳಿದರು. ಕೇವಲ 54 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 80 ರನ್ ಮಾಡಿ ಅಜೇಯರಾಗಿ ಉಳಿದರು. ಪಾಂಡ್ಯಾಗೆ ಉತ್ತಮ ಜೊತೆಯಾಟ ನೀಡಿದ ರವೀಂದ್ರ ಜಡೇಜಾ 36 ಎಸೆತಗಳಲ್ಲಿ 31 ರನ್ ಗಳಿಸಿದರು. ನಿಗದಿತ 50 ಓವರ್ ಮುಗಿದಾಗ ಭಾರತ 7 ವಿಕೆಟ್ ಕಳೆದುಕೊಂಡು 324 ರನ್ ಗಳಿಸಿತ್ತು.

    ಬಾಂಗ್ಲಾದೇಶ ತಂಡದ ಪರವಾಗಿ ರುಬೆಲ್ ಹೊಸೈನ್ 3, ಸುನ್ಸಮುಲ್ ಇಸ್ಲಾಂ 2, ಮುಸ್ತಫಿಜುರ್ ರಹಮಾನ್ 1 ವಿಕೆಟ್ ಗಳಿಸಿದರು.

     

     

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ?

    ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.

    ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನ ನೀಡಲಿದ್ದು, ದ್ವಿತೀಯ ಸ್ಥಾನಿ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.)ಬಹುಮಾನ ಸಿಗಲಿದೆ.

    ಸೆಮಿಫೈನಲ್‍ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಗಲಿದೆ.

    2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿದೆ. ಜೂನ್1 ರಿಂದ ಜೂನ್ 18ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ.

    2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.

    ಇದನ್ನೂ ಓದಿ: ಐಪಿಎಲ್ ಕ್ರಿಕೆಟ್: ಟಿವಿ ಸ್ಕ್ರೀನ್‍ನಲ್ಲಿ ಕಾಣೋ ಕೆಂಪು, ಹಸಿರು ಪಟ್ಟಿಯ ಅರ್ಥ ಏನು?
    ಇದನ್ನೂ ಓದಿ: ಐಪಿಎಲ್‍ನ ಜಸ್ಟ್ 10 ಸೆಕೆಂಡ್ ಜಾಹಿರಾತಿಗೆ ಎಷ್ಟು ಹಣ? ನಗದು ಬಹುಮಾನ ಎಷ್ಟು?

  • ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

    ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವ 15 ಜನ ಸದಸ್ಯರ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.

    ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ 6 ಜನ ಬ್ಯಾಟ್ಸ್ ಮನ್‍ಗಳಿಗೆ ಸ್ಥಾನ ನೀಡಲಾಗಿದ್ದು, ವಿಕೆಟ್ ಕೀಪರ್, ಆಲ್‍ರೌಂಡರ್ಸ್ ಮತ್ತು ಸ್ಪಿನ್ನರ್ ವಿಭಾಗದಲ್ಲಿ ತಲಾ ಇಬ್ಬರಿಗೆ ಸ್ಥಾನ ಕಲ್ಪಿಸಲಾಗಿದೆ. ಜೊತೆಗೆ ಐವರು ವೇಗಿಗಳನ್ನು ಆಯ್ಕೆ ಸಮಿತಿ ತಂಡದಲ್ಲಿ ಇರಿಸಿದೆ.

    ಐಸಿಸಿಯ ನೂತನ ಹಣಕಾಸು ಹಂಚಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿದ್ದ ಕಾರಣವನ್ನು ಮುಂದಿಟ್ಟುಕೊಂಡು ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾ ಕಳುಹಿಸಲು ಹಿಂದೇಟು ಹಾಕಿತ್ತು. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿಯ ಎಚ್ಚರಿಕೆಯ ನಂತರ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.

    ಭುಜದ ನೋವಿಗೆ ತುತ್ತಾಗಿ ಸದ್ಯ ಇಂಗ್ಲೆಂಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಲ್ ರಾಹುಲ್ ಫಿಟ್ ಆಗದ ಕಾರಣ ಅವರ ಬದಲಿಗೆ ಅಜಿಂಕ್ಯಾ ರಹಾನೆ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟ್ಸ್ ಮನ್‍ಗಳ ಪೈಕಿ ಗೌತಮ್ ಗಂಭೀರ್ ಮತ್ತು ಶಿಖರ್ ಧವನ್ ನಡುವೆ ಸ್ಪರ್ಧೆ ಇತ್ತು. ಆದರೆ ಆಯ್ಕೆ ಸಮಿತಿ ಶಿಖರ್ ಧವನ್ ಅವರಿಗೆ ಸ್ಥಾನ ನೀಡಿದ್ದಾರೆ.

    ಜೂನ್ 1 ರಿಂದ 18ರ ವರೆಗೆ 18 ದಿನಗಳ ಅವಧಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‍ನ 3 ಕ್ರಿಕೆಟ್ ಮೈದಾನಗಳಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಪಂದ್ಯಗಳು ನಡೆಯಲಿವೆ.

    ಟೀಂ ಇಂಡಿಯಾ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂಮ್ರಾ ಮತ್ತು ಮನೀಷ್ ಪಾಂಡೆ.