Tag: Chamrajanagara

  • ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

    ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

    ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನವಾಗಿ ಇಂದಿಗೆ ಎರಡು ತಿಂಗಳಾಗಿದೆ. ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಅವರಿಂದ ಸಾಕಷ್ಟು ಜನ ಪ್ರೇರಣೆಗೊಂಡು ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದಾರೆ. ಪುನೀತ್ ಅವರ ತವರು ಜಿಲ್ಲೆ ಚಾಮರಾಜನಗರದಲ್ಲಿ ಎರಡು ತಿಂಗಳ ಅವಧಿಯಲ್ಲಿ 9,500ಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ.

    ಪುನೀತ್ ಅವರ ನೇತ್ರದಾನದಿಂದ ಸ್ಫೂರ್ತಿಗೊಂಡ ತವರು ಜಿಲ್ಲೆಯ ಜನತೆ ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದು, ನಿರೀಕ್ಷೆಗೂ ಮೀರಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. 46ನೇ ವಯಸ್ಸಿನಲ್ಲಿ ಅಪ್ಪು ನಿಧನ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಾದ್ಯಂತ 46 ಸಾವಿರ ಜನರನ್ನು ನೇತ್ರದಾನಕ್ಕೆ ನೊಂದಾಯಿಸುವ ಗುರಿ ಹೊಂದಿದೆ. ಇದನ್ನೂ ಓದಿ: ವೀಡಿಯೋ: ಮೇಕಪ್ ಆರ್ಟ್‍ನಿಂದ ಶಾರೂಖ್ ಆಗಿ ರೂಪಾಂತರಗೊಂಡ ಯುವತಿ

    ಚಾಮರಾಜನಗರ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ನೇತ್ರ ಸಂಗ್ರಹಣ ಕೇಂದ್ರ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ನೇತ್ರ ಸಂಗ್ರಹಣಾ ಕಾರ್ಯಕ್ಕೆ ವೈದ್ಯರು ಸೇರಿದಂತೆ ಸ್ವಯಂ ಸೇವಾ ಸಂಘಟನೆಗಳ ಸದಸ್ಯರ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. ಇದನ್ನೂ ಓದಿ:  ಮೊಬೈಲ್ ಕದ್ದಿದ್ದಕ್ಕೆ ಬಾಲಕಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

  • ಮದ್ವೆಯಾಗುವುದಾಗಿ ನಂಬಿಸಿ ರೇಪ್‌ – ಅಪ್ರಾಪ್ತೆ ಡೆಲಿವರಿಯಾದ ಬಳಿಕ ಕೃತ್ಯ ಬೆಳಕಿಗೆ

    ಮದ್ವೆಯಾಗುವುದಾಗಿ ನಂಬಿಸಿ ರೇಪ್‌ – ಅಪ್ರಾಪ್ತೆ ಡೆಲಿವರಿಯಾದ ಬಳಿಕ ಕೃತ್ಯ ಬೆಳಕಿಗೆ

    ಚಾಮರಾಜನಗರ: ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ಚಾಮರಾಜನಗರ ತಾಲೂಕಿನ ಗ್ರಾಮದ ಅಪ್ರಾಪ್ತೆಗೆ 17 ವರ್ಷ. ಹುಡುಗಿ ಕೂಲಿ ಕೆಲಸಕ್ಕೆಂದು ಸಿದ್ದಯ್ಯನಪುರದ ವ್ಯಕ್ತಿಗೆ ಸೇರಿದ ಜಮೀನಿಗೆ ಹೋಗುತ್ತಿದ್ದಾಗ ಅದೇ ಜಮೀನಿಗೆ ಬರುತ್ತಿದ್ದ ಉತ್ತುವಳ್ಳಿ ಗ್ರಾಮದ ಸಿದ್ದರಾಜು ಎಂಬಾತನ ಪರಿಚಯವಾಗಿದೆ.

    ಹುಡುಗಿಯನ್ನು ಪುಸಲಾಯಿಸಿದ ಸಿದ್ದರಾಜು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಬಾಲಕಿಯ ತಂದೆ ಕೆಲಸಕ್ಕೆಂದು ಪರ ಊರಿಗೆ ಹೋಗಿದ್ದು ಯಾವಾಗಲೋ ಒಮ್ಮೆ ಮನೆಗೆ ಬರುತ್ತಿದ್ದರು. ತಾಯಿ ಬುದ್ಧಿಮಾಂದ್ಯೆ ಆಗಿದ್ದ ಕಾರಣ ಮಗಳು ಗರ್ಭಿಣಿಯಾಗಿದ್ದ ವಿಷಯ ಪೋಷಕರಿಗೆ ತಿಳಿದಿರಲಿಲ್ಲ.

    ತಾನು ಗರ್ಭಿಣಿಯಾಗಿರುವ ವಿಷಯವನ್ನು ಬಾಲಕಿಯು ಸಹ ಮುಚ್ಚಿಟಿದ್ದಾಳೆ. ಆದರೆ ನಿನ್ನೆ ಸಂಜೆ ಈಕೆಗೆ ಹೊಟ್ಟೆನೋವು ಕಾಣಿಸಿಕೊಂಡು ಒದ್ದಾಡಿದ್ದಾಳೆ. ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಪೋಷಕರು ವಿಚಾರಿಸಿದಾಗ ತಾನು ಅತ್ಯಾಚಾರಕ್ಕೆ ಒಳಗಾಗಿರುವ ವಿಷಯ ತಿಳಿಸಿದ್ದಾಳೆ. ಹೆರಿಗೆಯಾಗುತ್ತಿದ್ದಂತೆ ಅಪ್ರಾಪ್ತೆ ಮತ್ತು ಮಗುವನ್ನು ಚಾಮರಾಜನಗರ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೃತ್ಯದ ಬಗ್ಗೆ ಚಾಮರಾಜನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಈಗ ದೂರು ದಾಖಲಾಗಿದೆ. ವಿಷಯ ಬಹಿರಂಗವಾಗುತ್ತಿದ್ದಂತೆ ಆರೋಪಿ ಸಿದ್ದರಾಜು ಬಾಲಕಿ ಗರ್ಭಣಿಯಾಗಲು ನಾನು ಕಾರಣವಲ್ಲ ಎಂದು ಹೇಳಿ ನಂತರ ನಾಪತ್ತೆಯಾಗಿದ್ದಾನೆ.

    ಬಾಲಕಿಯ ಹೇಳಿಕೆ ಆಧಾರದ ಮೇಲೆ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ನಾಪತ್ತೆಯಾಗಿರುವ ಸಿದ್ದರಾಜುವಿಗೆ ಬಲೆ ಬೀಸಲಾಗಿದೆ.