Tag: Chandan Kumar

  • `ಬಿಗ್ ಬಾಸ್’ ಖ್ಯಾತಿಯ ಕವಿತಾ ಗೌಡ -ಚಂದನ್ ಹೊಸ ಹೋಟೆಲ್ ಓಪನ್

    `ಬಿಗ್ ಬಾಸ್’ ಖ್ಯಾತಿಯ ಕವಿತಾ ಗೌಡ -ಚಂದನ್ ಹೊಸ ಹೋಟೆಲ್ ಓಪನ್

    `ಲಕ್ಷ್ಮಿ ಬಾರಮ್ಮ’ (Lakshmi Baramma) ಖ್ಯಾತಿಯ ಚಂದನ್ ಕುಮಾರ್ (Chandan Kumar) ಮತ್ತು ಕವಿತಾ (Kavitha Gowda) ತಮ್ಮ ಹೊಸ ಹೋಟೆಲ್‌ಗೆ ಚಾಲನೆ ನೀಡಿದ್ದಾರೆ. ಸೀರಿಯಲ್, ಸಿನಿಮಾ ಅಂತಾ ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಹೋಟೆಲ್ ಉದ್ಯಮದತ್ತ ಮುಖ ಮಾಡಿದ್ದಾರೆ.

    ರೀಲ್ ಮತ್ತು ರಿಯಲ್ ಕಪಲ್ ಆಗಿರುವ ಕವಿತಾ, ಚಂದನ್ ಈಗ ʻಮೈಸೂರು ರೋಡ್ ಮಂಡಿಪೇಟೆ ಪಲಾವ್ʼ ಎಂಬ ಹೊಸ ಹೋಟೆಲ್ ಉದ್ಘಾಟನೆ ಮಾಡಿದ್ದಾರೆ. ಒಬ್ಬರನೊಬ್ಬರು ಪ್ರೀತಿಸಿ, ಹಸೆಮಣೆ ಏರಿದ್ದ ಜೋಡಿ ನಟನೆ ಮತ್ತು ಉದ್ಯಮ ಎರಡಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಸಾಗುತ್ತಿದ್ದಾರೆ. ಇದನ್ನೂ ಓದಿ: ಯಶ್ ಮುಂದಿನ ಸಿನಿಮಾ, ಐರಾ ಪ್ರೊಡಕ್ಷನ್ ಹೌಸ್ ಬಗ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್

    ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರು ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಇದೀಗ ಎರಡು ಹೋಟೆಲ್‌ನ ಜವಬ್ದಾರಿಯನ್ನ ಈ ಜೋಡಿಯ ಮೇಲಿದೆ.

    ಈ ಜೋಡಿಯ ಹೊಸ ಹೆಜ್ಜೆಗೆ ಆಪ್ತರು, ಅಭಿಮಾನಿಗಳು ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ಚಂದನ್ ಕುಮಾರ್ `ಬಿರಿಯಾನಿ ಹೋಟೆಲ್‌’ನಲ್ಲಿ ಕಳ್ಳತನ

    ನಟ ಚಂದನ್ ಕುಮಾರ್ `ಬಿರಿಯಾನಿ ಹೋಟೆಲ್‌’ನಲ್ಲಿ ಕಳ್ಳತನ

    ಕಿರುತೆರೆ ಮತ್ತು ಸ್ಯಾಂಡಲ್‌ವುಡ್‌ನಲ್ಲಿ ಛಾಪೂ ಮೂಡಿಸಿರುವ ನಟ ಚಂದನ್ ಕುಮಾರ್ ಮತ್ತೆ ಸುದ್ದಿಯಲ್ಲಿದ್ದಾರೆ. ತೆಲುಗು ಸೀರಿಯಲ್ ವಿವಾದ ಬೆನ್ನಲ್ಲೇ ಇದೀಗ ಮತ್ತೆ ಚಂದನ್ ಸುದ್ದಿಯಲ್ಲಿದ್ದಾರೆ. ಚಂದನ್ ಕುಮಾರ್ ಬಿರಿಯಾನಿ ಹೋಟೆಲ್‌ನಲ್ಲಿ ಕಳ್ಳತನವಾಗಿದೆ.

    ಚಂದನ್ ಕುಮಾರ್ ನಟನೆಯ ಜೊತೆ ಉದ್ಯಮ ಕ್ಷೇತ್ರದಲ್ಲೂ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಇನ್ನು ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ನಿನ್ನೆ ರಾತ್ರಿ ಈ ಹೋಟೆಲ್‌ನಲ್ಲಿ ಕಳ್ಳತನ ಆಗಿದೆ. ನಿನ್ನೆ ತಡರಾತ್ರಿ ನಟ ಚಂದನ್ ದೊನ್ನೆ ಬಿರಿಯಾನಿ ಹೋಟೆಲ್ ಸೇರಿ ನಾಲ್ಕೈದು ಅಂಗಡಿಗಳಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಖದೀಮರ ದುಷ್ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

    ಇನ್ನು ಬಿರಿಯಾನಿ ಹೋಟೆಲ್‌ನಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಂದನ್ ಕುಮಾರ್ ದೂರು ದಾಖಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತೆಲುಗಿನಲ್ಲಿ ಚಂದನ್ ಬ್ಯಾನ್? ಪ್ರಕರಣದಲ್ಲಿ ಏನಿದು ಹೊಸ ಟ್ವಿಸ್ಟ್!

    ತೆಲುಗಿನಲ್ಲಿ ಚಂದನ್ ಬ್ಯಾನ್? ಪ್ರಕರಣದಲ್ಲಿ ಏನಿದು ಹೊಸ ಟ್ವಿಸ್ಟ್!

    ತೆಲುಗು ಧಾರಾವಾಹಿ ಸೆಟ್‌ನಲ್ಲಿ ಚಂದನ್ ಕುಮಾರ್ ಮೇಲಿನ ಹಲ್ಲೆ ವಿಚಾರ ಸಿಕ್ಕಾಪಟ್ಟೆ ಸಂಚಲನ ಮೂಡಿಸುತ್ತಿರವ ಬೆನ್ನಲ್ಲೇ ಹೊಸ ವಿಚಾರವೊಂದು ಸಖತ್ ಸುದ್ದಿ ಮಾಡುತ್ತಿದೆ. ಚಂದನ್ ತೆಲುಗು ಸೀರಿಯಲ್‌ನಿಂದ ಹೊರ ಬರುವ ಮುಂಚೆನೇ ಅವರನ್ನ ಬ್ಯಾನ್ ಮಾಡಿದ್ರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.

    ಕನ್ನಡ ನಟ ಚಂದನ್ ಮೇಲೆ ಹಲ್ಲೆ ವಿಚಾರವಾಗಿ ಈಗಾಗಲೇ ಹಲವಾರು ಸುದ್ದಿಗಳು ಹರಿದಾಡಿದೆ. ಚಂದನ್ ಸಹ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ ಮಾಡದ ತಪ್ಪಿಗೆ ತನ್ನ ಮೇಲೆ ತೆಲುಗು ಸೀರಿಯಲ್ ಸೆಟ್‌ನಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ, ಈ ಕಾರಣದಿಂದ ನಾನು ಮತ್ತೆಂದೂ ತೆಲುಗಿನ ಸಿರೀಯಲ್‌ಗೆ ಹೋಗಲ್ಲ ಎಂದು ಚಂದನ್ ಹೇಳಿದ್ದರು. ಆದರೆ ಇದೀಗ ತೆಲುಗಿನ ಟಿಲಿವಿಶನ್ ಟೆಕ್ನೀಶಿಯನ್ಸ್ ಮತ್ತು ವರ್ಕರ್ಸ್ ಫೆಡರೇಶನ್ ಬರೆದಿರುವ ಪತ್ರವೊಂದು ವೈರಲ್ ಆಗಿದ್ದು, ಈ ಕಥೆಗೆ ಬೇರೆ ಟ್ವಿಸ್ಟ್ ಸಿಕ್ಕಿದೆ.

    ಚಂದನ್ ನಟನೆಯ ತೆಲುಗು ಸೀರಿಯಲ್ ಒಂದರ ಚಿತ್ರೀಕರಣ ನಡೆಯುತ್ತಿತ್ತು. ಆಗ ಸಹಾಯಕ ನಿರ್ದೇಶಕ 3 ರಿಂದ 4 ಬಾರಿ ಶಾಟ್‌ಗೆ ಬರುವಂತೆ ಹೇಳಿದ್ದಾರೆ. ಆಗ ಚಂದನ್, ಹೇಳಿದ್ದನ್ನೇ ಎಷ್ಟು ಬಾರಿ ಹೇಳ್ತೀಯಾ ಅಂತ ಜಗಳ ಮಾಡಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಸಹಾಯಕ ನಿರ್ದೇಶಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪತ್ರದ ವಿಚಾರ ಹೊರ ಬಂದ ಬೆನ್ನಲ್ಲೆ ಚಂದನ್ ಪ್ರೆಸ್ ಮೀಟ್ ಮಾಡೋದಕ್ಕೆ ಮೊದಲೇ ಬ್ಯಾನ್ ಆಗಿದ್ರಾ ಎಂಬ ಹೊಸ ಪ್ರಶ್ನೆ ಹುಟ್ಟಿಕೊಂಡಿದೆ. ಇದನ್ನೂ ಓದಿ: ಬಾಲಿವುಡ್ ಸೂಪರ್ ಸ್ಟಾರ್ಸ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ನಂದ ಕಿಶೋರ್

    ನಟ ಚಂದನ್ ಈಗಾಗಲೇ ಹೇಳಿರುವ ವಿಚಾರವೇ ಬೇರೆ, ಈ ಪತ್ರದಲ್ಲಿ ಇರೋದೇ ಬೇರೇ. ಚಂದನ್ ಪ್ರೆಸ್ ಮೀಟ್ ಮಾಡುವ ಮುನ್ನವೇ ಬ್ಯಾನ್ ಆಗಿದ್ರಾ ಎಂಬ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಷ್ಟಕ್ಕೂ ಅಸಲಿ ವಿಚಾರವೇನು ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಬೇಗ ಚೇತರಿಸಿಕೊಳ್ಳಿ ಅಮ್ಮ: ವಿವಾದದ ಬೆನ್ನಲ್ಲೇ ಚಂದನ್ ಕುಮಾರ್ ಹೊಸ ಪೋಸ್ಟ್

    ಬೇಗ ಚೇತರಿಸಿಕೊಳ್ಳಿ ಅಮ್ಮ: ವಿವಾದದ ಬೆನ್ನಲ್ಲೇ ಚಂದನ್ ಕುಮಾರ್ ಹೊಸ ಪೋಸ್ಟ್

    ಸ್ಯಾಂಡಲ್‌ವುಡ್ ನಟ ಚಂದನ್ ಕುಮಾರ್ ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಆಕ್ಟೀವ್ ಆಗಿದ್ದಾರೆ. ತೆಲುಗಿನ `ಶ್ರೀಮತಿ ಶ್ರೀನಿವಾಸ್’ ಸೀರಿಯಲ್ ಶೂಟಿಂಗ್ ವೇಳೆ ಚಂದನ್ ಕಿರಿಕ್ ಮಾಡಿಕೊಂಡಿದ್ದರು. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ತಿರುಗಿ ಬಿದ್ದಿದ್ದರು. ಈ ಕುರಿತ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು ಎಂದು ಚಂದನ್ ಭಾವುಕರಾಗಿದ್ದಾರೆ.

    ತೆಲುಗಿನ ಸೀರಿಯಲ್ ಶೂಟಿಂಗ್ ವೇಳೆ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್‌ಗೆ ಕಪಾಳಮೋಕ್ಷ ಕೂಡ ಮಾಡಲಾಯಿತು. ಈ ಕುರಿತ ವಿಡಿಯೋ ಕೂಡ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ಓದಿ:ಹುಲಿ ಜೊತೆ `777 ಚಾರ್ಲಿ’ ನಟಿ ಸಂಗೀತಾ ಶೃಂಗೇರಿ


    ಅಮ್ಮನಿಗೆ ಅನಾರೋಗ್ಯದ ಟೆನ್ಷನ್‌ನಲ್ಲಿ ಇದ್ದೆ. ಅಂದು ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್‌ಗೆ ತೆರಳಿದ್ದೆ. ಆಗ ಕ್ಯಾಮೆರಾ ಮ್ಯಾನ್ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ  ಸೋಶಿಯಲ್ ಮೀಡಿಯಾದಲ್ಲಿ ಅವರು ತನ್ನ ತಾಯಿಯ ಜತೆಯಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. `ಲವ್ ಯೂ ಸೋ ಮಚ್’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ಮನೆಯ ಹೊಸ್ತಿಲಲ್ಲಿ ಬಿಗ್‌ ಬಾಸ್‌ ಖ್ಯಾತಿಯ ಕವಿತಾ ಗೌಡ- ಚಂದನ್

    ಹೊಸ ಮನೆಯ ಹೊಸ್ತಿಲಲ್ಲಿ ಬಿಗ್‌ ಬಾಸ್‌ ಖ್ಯಾತಿಯ ಕವಿತಾ ಗೌಡ- ಚಂದನ್

    ಸ್ಯಾಂಡಲ್‌ವುಡ್‌ನ ರಿಯಲ್ ಕಪಲ್ ಕವಿತಾ ಗೌಡ ಮತ್ತು ಚಂದನ್ ಕುಮಾರ್ ಹೊಸ ಮನೆಯ ಹೊಸ ಬದುಕಿನ ಹೊಸ್ತಿಲಲ್ಲಿದ್ದಾರೆ. ಕಳೆದ ವರ್ಷ ಹಸೆಮಣೆ ಏರಿದ್ದ ಈ ಜೋಡಿ, ಇದೀಗ ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

    ಕಿರುತೆರೆಯ `ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಮೂಲಕ ಮನೆಮಾತಾಗಿದ್ದ ಚಿನ್ನು ಮತ್ತು ಚಂದನ್ ಜೋಡಿ, ರಿಯಲ್ ಲೈಫ್‌ನಲ್ಲೂ ಪ್ರೀತಿಸಿ, ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ಮೇ 14ರಂದು ಸರಳವಾಗಿ ಮದುವೆಯಾಗಿದ್ದರು. ಇಬ್ಬರು ಕಲಾವಿದರಾಗಿರುವುದರಿಂದ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಒಬ್ಬರ ಸಿನಿಮಾಗೆ ಇನ್ನೊಬ್ಬರು ಸಾಥ್ ನೀಡುತ್ತಾ ಜೊತೆಯಾಗಿ ಸಾಗುತ್ತಿದ್ದಾರೆ. ಇದೀಗ ಬಿಗ್ ಬಾಸ್ ಖ್ಯಾತಿಯ ಕವಿತಾ ಮತ್ತು ಚಂದನ್ ಹೊಸ ಜೀವನದ ಜತೆ ಹೊಸ ಮನೆಯ ಹೊಸ್ತಿಲಲ್ಲಿದ್ದಾರೆ. ಇದನ್ನೂ ಓದಿ: ಪ್ರಾಣಿ, ಪಕ್ಷಿಗಳ ಜೊತೆ ರಾಕಿಭಾಯ್ ಕುಟುಂಬ: ವಿಡಿಯೋ ಹಂಚಿಕೊಂಡ ಯಶ್

    ಬೆಂಗಳೂರಿನ ನಾಯಂಡಹಳ್ಳಿಯ ಬಳಿ ನಿನ್ನೆಯಷ್ಟೇ (ಜೂ.18) ಕವಿತಾ ಮತ್ತು ಚಂದನ್ ಗೃಹಪ್ರವೇಶ ಮಾಡಿದ್ದಾರೆ. ಇದೇ ಖುಷಿಯಲ್ಲಿ ಹೊಸ ಮನೆಯ, ಹೊಸ ಬದುಕಿನ ಹೊಸ್ತಿಲಲ್ಲಿ ಎಂದು ಅಡಿಬರಹ ನೀಡಿ ವಿಶೇಷ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ನೆಚ್ಚಿನ ಜೋಡಿಯ ಸಂತಸ ನೋಡಿ ಫ್ಯಾನ್ಸ್ ಕೂಡ ಶುಭ ಹಾರೈಸುತ್ತಿದ್ದಾರೆ.

    Live Tv

  • ಚಂದನ್ ಕುಮಾರ್ ಫಿಟ್ನೆಸ್‍ಗೆ ಫ್ಯಾನ್ಸ್ ಫಿದಾ

    ಚಂದನ್ ಕುಮಾರ್ ಫಿಟ್ನೆಸ್‍ಗೆ ಫ್ಯಾನ್ಸ್ ಫಿದಾ

    ಬೆಂಗಳೂರು: ಕೇವಲ 2 ತಿಂಗಳಲ್ಲಿ ಸ್ಯಾಂಡಲ್‍ವುಡ್ ನಟ ಚಂದನ್ ಕುಮಾರ್ ದೇಹದ ಟ್ರಾನ್ಸ್​ಫಾರ್ಮೇಷನ್​ ನೋಡಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಅನೇಕರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಫಿಟ್ನೆಸ್ ಕಳೆದುಕೊಂಡಿದ್ದಾರೆ. ಇದರಲ್ಲಿ ಚಂದನ್ ಕುಮಾರ್ ಕೂಡ ಒಬ್ಬರು. ಆದರೆ ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

    ಜೂನ್ 21ರ ಫೋಟೋದಲ್ಲಿ ಚಂದನ್‍ಗೆ ಹೊಟ್ಟೆ ಬಂದಿತ್ತು. ಆದರೆ ಆಗಸ್ಟ್ 26ರ ಫೋಟೋದಲ್ಲಿ ಅವರು ಸಖತ್ ಫಿಟ್ ಆಗಿದ್ದಾರೆ. ಈ ಫೋಟೋ ನೋಡಿದ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ. ಇನ್ನೂ ಕೆಲವರು ನೀವೇ ನಮಗೆ ಸ್ಫೂರ್ತಿ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

    ಚಂದನ್ ಕುಮಾರ್ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊರೊನಾ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್ ತೆಗೆದುಕೊಂಡರು. ಈ ಕಾರಣಕ್ಕೆ ತೆಲುಗು ಧಾರಾವಾಹಿಯಿಂದ ಹೊರ ಬಂದರು. ಹೀಗಾಗಿ ಚಂದನ್ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೆ ಅವರಿಗೆ ಜಿಮ್‍ಗೆ ತೆರಳೋಕು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ದೇಹ ಶೇಪ್ ಕಳೆದುಕೊಂಡಿತ್ತು. ಆದರೆ ಸತತ ಎರಡು ತಿಂಗಳು ಜಿಮ್‍ನಲ್ಲಿ ಬೆವರು ಹರಿಸಿದ್ದಾರೆ. ಈ ಮೂಲಕ ಅವರ ಬಾಡಿಯನ್ನು ಕರಗಿಸಿದ್ದಾರೆ.

  • ಮಾಸ್ಕ್ ಧರಿಸಿ ಮದುವೆಯಾದ ಚಂದನ್, ಕವಿತಾ ಗೌಡ

    ಮಾಸ್ಕ್ ಧರಿಸಿ ಮದುವೆಯಾದ ಚಂದನ್, ಕವಿತಾ ಗೌಡ

    ಬೆಂಗಳೂರು: ನಟ ಚಂದನ್ ಕುಮಾರ್, ನಟಿ ಕವಿತಾ ಗೌಡ ಧಾರಾವಾಹಿಯಲ್ಲಿ ಯಶಸ್ವಿ ಜೋಡಿಯಾಗಿ ಕಾಣಿಸಿಕೊಂಡಿದ್ದ ಇವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಏಪ್ರಿಲ್ ಒಂದರಂದು ಈ ಜೋಡಿ ಎಂಗೇಜ್‍ಮೆಂಟ್ ಕೂಡ ಮಾಡಿಕೊಂಡಿತ್ತು. ಇದೀಗ ಸರಳವಾಗಿ ಚಂದನ್ ಮತ್ತು ಕವಿತಾ ಸಪ್ತಪದಿ ತುಳಿದು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇಂದು ನೂತನ ದಂಪತಿಗಳು ಮಾಸ್ಕ್ ಧರಿಸಿಯೇ ಮದುವೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ. ಬೆಂಗಳೂರಿನ ಸಹಕಾರ ನಗರದಲ್ಲಿರುವ ಚಂದನ್ ಮನೆಯಲ್ಲಿ ಈ ಮದುವೆ ನೆರವೇರಿದೆ.

     

    View this post on Instagram

     

    A post shared by K A V I T H A (@iam.kavitha_official)

    ಏಪ್ರಿಲ್ ಒಂದರಂದು ಬೆಂಗಳೂರಿನ ಖಾಸಗಿ ಹೋಟೆಲ್‍ವೊಂದರಲ್ಲಿ ಚಂದನ್ ಮತ್ತು ಕವಿತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮವು ನೆರವೇರಿತ್ತು. ಆನಂತರ ಮೇ 13-14ರಂದು ನಾವು ಸಪ್ತಪದಿ ತುಳಿಯಲಿದ್ದೇವೆ ಎಂದು ಈ ಜೋಡಿ ಹೇಳಿಕೊಂಡಿತ್ತು. ಕನ್ನಡ ಕಿರುತೆರೆಯ ಯಶಸ್ವಿ ಧಾರಾವಾಹಿಯಲ್ಲಿ ಚಂದು ಮತ್ತು ಚಿನ್ನು ಪಾತ್ರಗಳಲ್ಲಿ ಮಿಂಚಿದವರು ಚಂದನ್ ಕುಮಾರ್ ಮತ್ತು ಕವಿತಾ ಗೌಡ. ಧಾರಾವಾಹಿಯಲ್ಲಿ ಯಶಸ್ವಿ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಈ ಸೆಲೆಬ್ರಿಟಿಗಳು ಈಗ ನಿಜಜೀವನದಲ್ಲೂ ಜೋಡಿಯಾಗಿದ್ದಾರೆ.

     

    View this post on Instagram

     

    A post shared by K A V I T H A (@iam.kavitha_official)

    ಪ್ರಸ್ತುತ ಕೊರೊನಾ ಲಾಕ್‍ಡೌನ್ ಇರುವುರಿಂದ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ, ಕೋವಿಡ್ ನಿಯಮಗಳ ಅನ್ವಯದಂತೆ ಚಂದನ್ ಮತ್ತು ಕವಿತಾ ಅವರ ವಿವಾಹವು ಸರಳವಾಗಿ ನಡೆದಿದೆ. ಚಂದನ್ ಮತ್ತು ಕವಿತಾ ಮಾಸ್ಕ್ ಧರಿಸಿಯೇ ಮದುವೆಯಾಗಿದ್ದು ವಿಶೇಷವಾಗಿತ್ತು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ, ಇದೀಗ ತಮ್ಮ ಪ್ರೀತಿಗೆ ಮದುವೆಯ ಮುದ್ರೆಯನ್ನು ಒತ್ತಿದೆ.

  • ನಾವಿಬ್ಬರು ಜೀವನದ ಬೆಸ್ಟ್ ಪಾರ್ಟ್ನರ್ಸ್: ಚಂದನ್ ಕುಮಾರ್

    ನಾವಿಬ್ಬರು ಜೀವನದ ಬೆಸ್ಟ್ ಪಾರ್ಟ್ನರ್ಸ್: ಚಂದನ್ ಕುಮಾರ್

    ಬೆಂಗಳೂರು: ಮದುವೆಯ ಬಗ್ಗೆ ಭಾರೀ ಗಾಸಿಪ್ ಎದ್ದಿದ್ದ ನಟ ಚಂದನ್ ಕುಮಾರ್ ಹಾಗೂ ನಟಿ ಕವಿತಾ ಗೌಡ ಕೊನೆಗೂ ಎಂಗೇಜ್ ಆಗುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ಹೌದು. ಇಂದು ಚಂದನ್ ಕುಮಾರ್ ಹಾಗೂ ಕವಿತಾ ಗೌಡ ನಿಶ್ಚಿತಾರ್ಥ ನಡೆದಿದೆ. ಈ ಮೂಲಕ ಇಬ್ಬರೂ ಹೊಸ ಬಾಳಿಗೆ ಅಡಿ ಇಡಲು ಮುನ್ನುಡಿ ಬರೆದಿದ್ದಾರೆ.  ಆದರೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುವ  ದಿನಾಂಕವನ್ನು ಬಹಿರಂಗಪಡಿಸಿಲ್ಲ.

    ಈ ಸಂಬಂಧ ನಿಶ್ಚಿತಾರ್ಥದ ಕೆಲ ಫೋಟೋಗಳನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿರುವ ಚಂದನ್, ಜೀವನ ಸಂಗಾತಿ ಒಬ್ಬ ಉತ್ತಮ ಗೆಳೆಯ/ಗೆಳತಿಯಂತಿರಬೇಕು ಎಂಬುದನ್ನು ನಾನು ಕೇಳಿದ್ದೇನೆ. ಆದರೆ ನಮ್ಮ ಜೀವನದಲ್ಲಿ ಅದು ರಿವರ್ಸ್ ಆಗಿದೆ. ನಾವಿಬ್ಬರೂ ಜೀವನದ ಉತ್ತಮ ಪಾರ್ಟ್ನರ್ಸ್ ಆಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

    ನಿನ್ನೆಯಷ್ಟೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ನಾವಿಬ್ಬರು ಏಪ್ರಿಲ್ 1 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದೇವೆಂದು ಬಹಿರಂಗಪಡಿಸಿದ್ದರು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷೀ ಬಾರಮ್ಮ’ ಧಾರವಾಹಿಯಲ್ಲಿ ನಟಿಸುತ್ತಿರುವಾಗಲೇ ಈ ಜೋಡಿ ಪ್ರೀತಿಯ ಬಲೆಗೆ ಬಿದ್ದಿದೆ ಎಂಬ ಗುಮಾನಿ ಹರಿದಾಡುತ್ತಿತ್ತು. ಆದರೆ ಚಂದನ್ ಮತ್ತು ಕವಿತಾ ನಾವಿಬ್ಬರೂ ಉತ್ತಮ ಸ್ನೇಹಿತರು ಎಂಬ ಅಭಿಪ್ರಾಯಗಳನ್ನು ತಿಳಿಸುತ್ತಿದ್ದರು. ಆದರೆ ಚಂದನ್ ‘ಏಪ್ರಿಲ್ 1ಕ್ಕೆ ನಾವು ಮೂರ್ಖರಾಗುತ್ತಿದ್ದೇವೆ’ ಎಂದು ಬರೆದುಕೊಂಡು ಕವಿತಾ ಗೌಡ ಜೊತೆಗಿರುವ ಫೋಟೋವನ್ನು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇವರಿಬ್ಬರೂ ನಿಜಕ್ಕೂ ಏಪ್ರಿಲ್ 1 ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿತ್ತು. ಈ ಕುತೂಹಲಗಳಿಗೆ ಜೋಡಿ ಇದೀಗ ಫುಲ್ ಸ್ಟಾಪ್ ಹಾಕಿದ್ದು, ಶೀಘ್ರವೇ ಹಸೆಮಣೆ ಏರಲಿದೆ.

  • ನಿಜಜೀವನದಲ್ಲೂ ಚಂದನ್‍ಗೆ ‘ಲಕ್ಷ್ಮೀ’ಯಾದ ಕವಿತಾ ಗೌಡ

    ನಿಜಜೀವನದಲ್ಲೂ ಚಂದನ್‍ಗೆ ‘ಲಕ್ಷ್ಮೀ’ಯಾದ ಕವಿತಾ ಗೌಡ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷೀ ಬಾರಮ್ಮ’ ಧಾರವಾಹಿಯಲ್ಲಿ ನಟ ಹಾಗೂ ನಟಿಯಾಗಿ ಒಟ್ಟಿಗೆ ಅಭಿನಯಿಸಿರುವ ಚಂದನ್ ಕುಮಾರ್ ಮತ್ತು ಕವಿತಾ ಗೌಡ ತಮ್ಮ ನಿಜಜೀವನದಲ್ಲಿ ಒಂದಾಗುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

    ಈ ಕುರಿತು ಚಂದನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ನಾವಿಬ್ಬರು ಏಪ್ರಿಲ್ 1 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದೇವೆಂದು ತಿಳಿಸಿದ್ದಾರೆ.

    ಧಾರವಾಹಿಯಲ್ಲಿ ನಟಿಸುತ್ತಿರುವಾಗಲೇ ಈ ಜೋಡಿ ಪ್ರೀತಿಯ ಬಲೆಗೆ ಬಿದ್ದಿದೆ ಎಂಬ ಗುಮಾನಿ ಹರಿದಾಡುತ್ತಿತ್ತು. ಆದರೆ ಚಂದನ್ ಮತ್ತು ಕವಿತಾ ನಾವಿಬ್ಬರೂ ಉತ್ತಮ ಸ್ನೇಹಿತರು ಎಂಬ ಅಭಿಪ್ರಾಯಗಳನ್ನು ತಿಳಿಸುತ್ತಿದ್ದರು. ಆದರೆ ಇದೀಗ ಚಂದನ್ ಕುಮರ್ ‘ಏಪ್ರಿಲ್ 1ಕ್ಕೆ ನಾವು ಮೂರ್ಖರಾಗುತ್ತಿದ್ದೇವೆ’ ಎಂದು ಬರೆದುಕೊಂಡು ಕವಿತಾ ಗೌಡ ಜೊತೆಗಿರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇವರಿಬ್ಬರೂ ನಿಜಕ್ಕೂ ಏಪ್ರಿಲ್ 1 ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

    ಧಾರವಾಹಿಗಳಲ್ಲಿ ಎಲ್ಲರ ಮನೆಮನಗಳಲ್ಲಿ ಸ್ಥಾನ ಪಡೆದಿರುವ ಈ ಜೋಡಿ ಕೆಲದಿನಗಳ ಹಿಂದೆ ಫೋಟೋಶೂಟ್ ಕೂಡ ಮಾಡಿಸಿಕೊಂಡಿಸಿಕೊಂಡಿತ್ತು. ಹಾಗೂ ಒಟ್ಟಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಮಾರಂಭಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅಭಿಮಾನಿಗಳಲ್ಲಿ ಇವರಿಬ್ಬರು ಪ್ರೀತಿಮಾಡುತ್ತಿದ್ದಾರೆ ಎಂಬ ಅನುಮಾನವು ಮೂಡಿತ್ತು.

    ಇದಕ್ಕೆ ಪುಷ್ಟಿ ಕೊಡುವಂತೆ ಚಂದನ್ ಕುಮಾರ್, ಕವಿತಾ ಅವರ ಹುಟ್ಟುಹಬ್ಬದಂದು ಮಧ್ಯರಾತ್ರಿ ಕವಿತಾ ಮನೆಗೆ ತೆರಳಿ ಸರ್ಪ್ರೈಸ್ ನೀಡಿದ್ದರು. ಹಾಗೆ ಹಲವು ಟ್ರಿಪ್‍ಗಳನ್ನೂ ಹೋಗಿ ಎಂಜಾಯ್ ಮಾಡಿದ್ದರು ಇದನ್ನೇಲ್ಲ ಗಮನಿಸಿದಾಗ ಇವರಿಬ್ಬರ ನಡುವೆ ಪ್ರೀತಿಯ ಬಂಧ ಬೆಸೆದಿದೆ ಎಂಬ ಸಂದೇಹ ಕಾಡುತ್ತಿತ್ತು ಇದೀಗ ಈ ಸಂದೇಹ ಬಗೆಹರಿಯುವ ಹಂತಕ್ಕೆ ಬಂದು ನಿಂತಿದೆ.

    ಚಂದನ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಕವಿತಾ ಅವರ ಫೋಟೋ ಹಂಚಿಕೊಂಡು ಪೋಸ್ಟ್ ಹಾಕುತ್ತಿದ್ದಂತೆ ಹಲವು ನಟ-ನಟಿಯರು ಈ ಜೋಡಿಗೆ ಶುಭಹಾರೈಸಿದ್ದಾರೆ. ಈ ಎಲ್ಲಾ ಶುಭಾಶಯಗಳಿಗೆ ಚಂದನ್ ಧನ್ಯವಾದ ತಿಳಿಸಿದ್ದು, ಏಪ್ರಿಲ್ 1 ರಂದು ಯಾವ ರೀತಿ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡುತ್ತಾರೆ ಎಂದು ಕಾದು ನೋಡಬೇಕಾಗಿದೆ.

  • ಶ್ರುತಿಯನ್ನು ಲೈಫ್ ಸೂಪರ್ ಸ್ಟಾರ್ ಎಂದ ಚಂದನ್

    ಶ್ರುತಿಯನ್ನು ಲೈಫ್ ಸೂಪರ್ ಸ್ಟಾರ್ ಎಂದ ಚಂದನ್

    ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್, ಹಲವು ಸಿನಿಮಾ ಹಾಗೂ ಸೀರಿಯಲ್‍ಗಳಲ್ಲಿ ಬ್ಯುಸಿಯಾಗಿದ್ದು, ಇದೆಲ್ಲದರ ಜೊತೆಗೆ ಇದೀಗ ತಮ್ಮದೆಯಾದ ಹೊಸ ಬ್ಯುಸಿನೆಸ್ ಪ್ರಾರಂಭಿಸಿದ್ದಾರೆ. ಈ ವೇಳೆ ನಟಿ ಶ್ರುತಿಯವರನ್ನು ಹಾಡಿ ಹೊಗಳಿದ್ದಾರೆ.

    ನಟ ಚಂದನ್ ಕುಮಾರ್ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ತಮ್ಮದೇಯಾದ ಸ್ವಂತ ಬ್ಯುಸಿನೆಸ್ ಪ್ರಾರಂಭಿಸಿದ್ದು, ಬಿರಿಯಾನಿ ರೆಸ್ಟೋರೆಂಟ್‍ನ್ನು ಆರಂಭಿಸಿದ್ದು, ಇದಕ್ಕೆ ‘ದೊನ್ನೆ ಬಿರಿಯಾನಿ ಪ್ಯಾಲೆಸ್’ ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೇ ರೆಸ್ಟೋರೆಂಟ್ ಉದ್ಘಾಟನಾ ಕಾರ್ಯಕ್ರಮ ಮಾಡಿದ್ದು, ನಟ ಶಿವರಾಜ್ ಕುಮಾರ್ ಹಾಗೂ ನಟಿ ಶ್ರುತಿ ಅವರು ಓಪನಿಂಗ್ ಸೆರೆಮನಿಯಲ್ಲಿ ಭಾಗವಹಿಸಿದ್ದರು.

    ಈ ವೇಳೆ ತೆಗೆದ ಚಿತ್ರಗಳನ್ನು ಚಂದನ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಶ್ರುತಿ ಬಗ್ಗೆ ಭಾವನಾತ್ಮಕ ಸಾಲುಗಳನ್ನು ಬರೆದಿದ್ದಾರೆ. ನಾನು ಕಂಡ ಅದ್ಭುತ ಶಿಕ್ಷಕಿಯರಲ್ಲಿ ಮದರ್ ಇಂಡಿಯಾ ಶೃತಿ ಮೇಡಮ್ ಸಹ ಒಬ್ಬರು. ನನ್ನ ಜೀವನದಲ್ಲಿ ತುಂಬಾ ಸಲ ಹಾದು ಹೋಗುವವರು. ಇವರು ಜೀವನದ ನೈಜ ಸೂಪರ್ ಸ್ಟಾರ್. ಬಿಗ್ ಬಾಸ್ ದಿನಗಳಿಂದ ನಾನು ಅವರನ್ನು ಉತ್ತಮ ಮಾರ್ಗದರ್ಶಕಿ ಹಾಗೂ ಗೌರವಾನ್ವಿತ ಮಹಿಳೆ ಎಂದು ಯಾವಾಗಲೂ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಬಿಗ್ ಬಾಸ್ ಶೋ ಬಳಿಕವೂ ನಾವು ಅದೇ ರೀತಿಯಾಗಿದ್ದೇವೆ. ಮುಂದೆಯೂ ಇದೇ ರೀತಿಯಾಗಿ ಇರುತ್ತೇವೆ. ನನ್ನ ಜೀವನದ ಅತ್ಯಂತ ನಂಬಲಾಗದ ದಿನದ ಭಾಗವಾಗಿದ್ದಕ್ಕೆ ಧನ್ಯವಾದಗಳು ಶ್ರುತಿ ಮಾ, ಲೋಡ್ಸ್ ಆಫ್ ಲವ್ ಎಂದು ಭಾವನಾತ್ಮಕ ಸಾಲುಗಳನ್ನು ಬರೆದಿದ್ದಾರೆ.

    ಚಂದನ್ ಕುಮಾರ್ ಮಾಲೀಕತ್ವದ ದೊನ್ನೆ ಬಿರಿಯಾನಿ ಪ್ಯಾಲೆಸ್‍ನ 6ನೇ ಶಾಖೆ ಇದಾಗಿದ್ದು, ಬೆಂಗಳೂರಿನ ಸಹಕಾರ ನಗರದಲ್ಲಿ ತೆರೆಯಲಾಗಿದೆ. ನಟ ಶಿವರಾಜ್ ಕುಮಾರ್ ಹಾಗೂ ಶ್ರುತಿ ಉದ್ಘಾಟಿಸಿದ್ದಾರೆ. ಈ ಫೋಟೋಗಳು ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಪ್ರೇಮ ಬರಹ ಸಿನಿಮಾ ಮೂಲಕ ಗುರುತಿಸಿಕೊಂಡಿದ್ದ ಚಂದನ್, ಬಳಿಕ ಸೀರಿಯಲ್‍ಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಡಾರ್ಲಿಂಗ್ ಕೃಷ್ಣ ಹಾಗೂ ಭಾವನಾ ಮೆನನ್ ಅಭಿನಯದ ಕೃಷ್ಣಎಟ್‍ಜೀಮೇಲ್ ಡಾಟ್ ಕಾಂ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಮೂಲಕ ಸಿನಿ ಜರ್ನಿಯಲ್ಲಿ ಮತ್ತೊಂದು ಬ್ರೇಕ್‍ಗಾಗಿ ಕಾಯುತ್ತಿದ್ದಾರೆ.