Tag: Chandan Shetty

  • ಹಾಸ್ಟೆಲ್ ನಲ್ಲಿ ಅಕ್ಕಿ ಹಿಟ್ಟು ಮುಖಕ್ಕೆ ಬಳಸುತ್ತಿದ್ದೆ, ಫಸ್ಟ್ ಟೈಮ್ ರೊಟ್ಟಿ ಮಾಡಿದ್ದೀನಿ : ನಿವೇದಿತಾ ಗೌಡ

    ಹಾಸ್ಟೆಲ್ ನಲ್ಲಿ ಅಕ್ಕಿ ಹಿಟ್ಟು ಮುಖಕ್ಕೆ ಬಳಸುತ್ತಿದ್ದೆ, ಫಸ್ಟ್ ಟೈಮ್ ರೊಟ್ಟಿ ಮಾಡಿದ್ದೀನಿ : ನಿವೇದಿತಾ ಗೌಡ

    ವಾರಕ್ಕೊಂದು ಹೊಸ ಹೊಸ ಅಡುಗೆ ಮಾಡುವ ಮೂಲಕ ನಿವೇದಿತಾ ಗೌಡ (Nivedita Gowda) ಪಾಕ ಪ್ರಪಂಚಕ್ಕೂ ಕಾಲಿಡುತ್ತಿದ್ದಾರೆ. ತಮಗೆ ಗೊತ್ತಿರುವ, ಕೇಳಿರುವ ಅಡುಗೆಯನ್ನೂ ಮಾಡುವ ಅವರು ಈ ಬಾರಿ ಅಕ್ಕಿ ರೊಟ್ಟಿ ಮಾಡುವುದಕ್ಕೆ ಮುಂದಾಗಿದ್ದಾರೆ. ತಾವು ಅಕ್ಕಿ ರೊಟ್ಟಿಯನ್ನು ಹೇಗೆ ಮಾಡಿದ್ದಾರೆ ಎನ್ನುವುದನ್ನು ಶೂಟ್ ಮಾಡಿ, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ವಿಡಿಯೋ ಈಗ ಸಖತ್ ವೈರಲ್ ಕೂಡ ಆಗಿದೆ.

    ಅಕ್ಕಿ ರೊಟ್ಟಿ (Akki Rotti) ಹೇಗೆ ಮಾಡುವುದೋ ಗೊತ್ತಿಲ್ಲ, ಆದರೂ ಮಾಡುತ್ತಿರುವೆ ಎಂದು ಮಾತು ಶುರು ಮಾಡುವ ನಿವೇದಿತಾ, ತಮ್ಮ ಉದ್ದನೆಯ ಉಗುರುಗಳ ಬಗ್ಗೆ ಹೇಳುತ್ತಾರೆ. ಬೆರಳಿನಲ್ಲಿ ಉಗುರುಗಳು ಉದ್ದ ಇರುವ ಕಾರಣಕ್ಕಾಗಿ ಅಕ್ಕಿ ಹಿಟ್ಟು ಹೇಗೆ ಕಲಸುತ್ತೇನೋ ಗೊತ್ತಿಲ್ಲ. ಉಗುರುಗಳು ಸಪೋರ್ಟ್ ಮಾಡುತ್ತಿಲ್ಲವೆಂದು ಕಾಮಿಡಿ ಮಾಡುತ್ತಾರೆ. ಅಲ್ಲದೇ, ಹಾಸ್ಟೆಲ್ ನಲ್ಲಿ ಇದ್ದಾಗ ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳಲು ಬಳಸುತ್ತಿದ್ದೆ. ಇದೇ ಮೊದಲ ಬಾರಿಗೆ ರೊಟ್ಟಿ ಮಾಡಲು ಬಳಸುತ್ತಿರುವುದಾಗಿಯೂ ಅವರು ಹೇಳುತ್ತಾರೆ. ಇದನ್ನೂ ಓದಿ: ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ಈರುಳ್ಳಿ ಹೆಚ್ಚುವಾಗ ಮೆಡಿಕಲ್ ವಿದ್ಯಾರ್ಥಿಗಳನ್ನು ನೆನಪಿಸಿಕೊಳ್ಳುವ ನಿವೇದಿತಾ ‘ಮೆಡಿಕಲ್ ಸ್ಟೂಡೆಂಟ್ ಪ್ರಾಣಿಗಳನ್ನು ಕಟ್ ಮಾಡುತ್ತಾರಲ್ಲ, ನನಗೆ ಆ ಫೀಲ್ ಆಗುತ್ತಿದೆ ಎನ್ನುತ್ತಾರೆ. ಅಲ್ಲದೇ, ತಮಗೆ ಸಬ್ಬಸಗಿ ಅಂದರೆ ತುಂಬಾ ಇಷ್ಟ. ಅದರ ಘಮಲು ಇನ್ನೂ ಇಷ್ಟ ಎಂದು ಆ ಸೊಪ್ಪನ್ನು ಪರಿಚಯಿಸುತ್ತಾರೆ. ಕರಿಬೇವು ಹಿಡಿದುಕೊಂಡು, ಅಯ್ಯೋ ಇದು ನನಗೆ ಸಖತ್ ಕನ್ಫ್ಯೂಸ್ ಮಾಡುತ್ತಿದೆ ಎಂದು ಹೇಳುತ್ತಾರೆ. ಒಂದು ರೀತಿಯಲ್ಲಿ ತಮಾಷೆಯಾಗಿಯೇ ನರೇಟ್ ಮಾಡುತ್ತಾ ಹೋಗಿದ್ದಾರೆ ನಿವಿ.

    ಇವತ್ತು ಅಕ್ಕಿರೊಟ್ಟಿ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದಂತೆಯೇ ಪತಿ ಚಂದನ್ ಶೆಟ್ಟಿ (Chandan Shetty) ಬೆಳಗ್ಗೆಯೇ ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದಾರಂತೆ. ಹಾಗಾಗಿ ಅಕ್ಕಿ ರೊಟ್ಟಿ ತಿನ್ನಲು ಯಾರೂ ಇಲ್ಲ, ನಾನು ಅಡುಗೆ (Cooking) ಮಾಡುತ್ತಿದ್ದೇನೆ ಎಂದು ಕೇಳುತ್ತಿದ್ದಂತೆಯೇ ಚಂದನ್ ಹೊರಟೇ ಬಿಟ್ಟರು. ಇದೀಗ ನಾನು ಮಾಡಿದ ಅಕ್ಕಿರೊಟ್ಟಿಯನ್ನು ನಾನೇ ತಿನ್ನಬೇಕು ಎಂದು ಚಂದನ್ ಕಾಲು ಎಳೆಯುತ್ತಾರೆ. ಈವರೆಗೂ ಗಂಡನ ಮೇಲೆಯೇ ಎಲ್ಲ ಪ್ರಯೋಗ ಮಾಡಿದ ನಿವೇದಿತಾ, ಆ ವೇಳೆಯಲ್ಲಿ ಚಂದನ್ ಇಲ್ಲದೇ ಇರುವುದಕ್ಕೆ ಬೇಸರಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

    ನಿರ್ಮಾಪಕ ಕೆ.ಮಂಜು (, K. Manju) ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” (Rana) ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ (Jogi Prem) ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

    ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ.  ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್ (Shreyash). ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

    ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತ್‌ ಆಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty)  ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ. ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ (Nandakishor) ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11ಕ್ಕೆ ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

    ಹಾಡು (Song) ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11ರಂದು ಬಿಡುಗಡೆಯಾಗಲಿದೆ. ತಂಡದವರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್. ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್, ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಿವೇದಿತಾ ಗೌಡ ‘ಸ್ಮೋಕ್’ ಮಾಡಿಲ್ಲ, ಹೊಗೆ ಬಿಟ್ಟಿದ್ದಕ್ಕೆ ಕಾರಣ ಬೇರೆಯೇ ಇದೆ

    ನಿವೇದಿತಾ ಗೌಡ ‘ಸ್ಮೋಕ್’ ಮಾಡಿಲ್ಲ, ಹೊಗೆ ಬಿಟ್ಟಿದ್ದಕ್ಕೆ ಕಾರಣ ಬೇರೆಯೇ ಇದೆ

    ರಡು ದಿನಗಳ ಹಿಂದೆಯಷ್ಟೇ ‘ಗಿಚ್ಚಿ ಗಿಲಿ ಗಿಲಿ’ ರಿಯಾಲಿಟಿ ಶೋ ರನ್ನರ್ ಅಪ್ ಆಗಿ ಹೊರ ಹೊಮ್ಮಿರುವ ನಟಿ ನಿವೇದಿತಾ ಗೌಡ (Nivedita Gowda),  ಶೂಟಿಂಗ್ ಇರದೇ ಇರುವ ಕಾರಣಕ್ಕಾಗಿ ಬೆಂಗಳೂರಿನ ವಿವಿಪುರಂನಲ್ಲಿರುವ (VV Puram) ಫುಡ್ ಸ್ಟ್ರೀಟ್‍ ಗೆ ಭೇಟಿ ನೀಡಿದ್ದಾರೆ. ಅಲ್ಲಿ ಹತ್ತಾರು ಬಗೆಯ ತಿಂಡಿ, ಚಾಟ್ಸ್ ಸವಿದಿದ್ದಾರೆ. ಕೊನೆಯಲ್ಲಿ ಬಾಯಿಯಿಂದ ಹೊಗೆ ಬಿಟ್ಟು ಎಲ್ಲರನ್ನೂ ಕನ್ಫೂಸ್ ಮಾಡಿದ್ದಾರೆ. ಇದೀಗ ಆ ವಿಡಿಯೋ ಟ್ರೋಲ್ ಆಗುತ್ತಿದೆ.

    ಸೋಷಿಯಲ್ ಮೀಡಿಯಾದಲ್ಲಿ ನಿವಿ ಯಾವಾಗಲೂ ಬ್ಯುಸಿ. ಒಂದಿಲ್ಲೊಂದು ಚಟುವಟಿಕೆಗಳನ್ನು ಮಾಡುತ್ತಲೇ ಅವುಗಳನ್ನು ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಲೇ ಇರುತ್ತಾರೆ. ರೀಲ್ಸ್ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದವರು, ಇದೀಗ ತಿಂಡಿ, ತಿನಿಸು ಮಾಡುವುದು ಹೇಗೆ ಎನ್ನುವುದನ್ನು ಹೇಳಿಕೊಡುತ್ತಿದ್ದಾರೆ. ಮಾಡಿದ ಅಡುಗೆಯನ್ನು ಚಂದನ್ (Chandan Shetty) ಮೇಲೆ ಪ್ರಯೋಗ ಮಾಡಿಯೇ ಸೇಡು ತೀರಿಸಿಕೊಳ್ಳುತ್ತಾರೆ. ಇದನ್ನೂ ಓದಿ:ಮತ್ತೆ ಒಂದಾದ ʻಪಂಚರಂಗಿ’ ದಿಗಂತ್‌- ನಿಧಿ ಸುಬ್ಬಯ್ಯ ಜೋಡಿ

    ಫುಡ್ ಬಗ್ಗೆ ಮಾತನಾಡಿದಾಗೆಲ್ಲ ನಿವಿ ಅಭಿಮಾನಿಗಳು ನೀವು ವಿವಿಪುರಂ ಫುಡ್ ಸ್ಟ್ರೀಟ್‍ ಗೆ (Food Street) ಹೋಗಿಲ್ಲವಾ? ಎಂದು ಎಲ್ಲರೂ ಕೇಳುತ್ತಿದ್ದರಂತೆ. ಈವರೆಗೂ ಅವರು ಅಲ್ಲಿಗೆ ಹೋಗಿಲ್ಲವಂತೆ. ಹಾಗಾಗಿ ಗಿಚ್ಚಿಗಿಲಿಗಿಲಿ ಮುಗಿಯುತ್ತಿದ್ದಂತೆಯೇ ಫುಡ್ ಸ್ಟ್ರೀಟ್ ಗೆ ಬಂದು, ಅಲ್ಲಿನ ವಿವಿಧ ತಿಂಡಿ ತಿನಿಸುಗಳನ್ನು ಸವಿದಿದ್ದಾರೆ. ಮೂವತ್ತಕ್ಕೂ ಹೆಚ್ಚು ಬಗೆಯ ತಿಂಡಿಗಳು ಇಲ್ಲಿದ್ದರೂ, ನನಗೆ ಐದಾರು ಮಾತ್ರ ತಿನ್ನುವುದಕ್ಕೆ ಸಾಧ್ಯವೆಂದು ಹೇಳಿದ್ದಾರೆ. ಅಲ್ಲದೇ, ಬೇರೆ ಬೇರೆ ತಿಂಡಿ ತಿನಿಸುಗಳ ಬಗ್ಗೆಯೂ ಪರಿಚಯ ಮಾಡಿಕೊಟ್ಟಿದ್ದಾರೆ.

    ಚಾಟ್ಸ್ (Chats)ತಿನ್ನುವುದು ಮುಗಿಯುತ್ತಿದ್ದಂತೆಯೇ ಸ್ಮೋಕಿಂಗ್ (Smoke) ಐಸ್ ಕ್ರೀಮ್ ಕೂಡ ಸವಿದಿದ್ದು, ಐಸ್ ಕ್ರೀಮ್ ತಿನ್ನುವಾಗ ಬರುವ ಹೊಗೆಯನ್ನು ಕ್ಯಾಮೆರಾ ಮುಂದೆ ಬಿಟ್ಟಿದ್ದಾರೆ. ಹಾಗಾಗಿ ನಿವೇದಿತಾ ಸ್ಮೋಕ್ ಮಾಡಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೆ, ಅವರು ತಿಂದಿದ್ದು ಹೊಗೆ ಬರುವ ಐಸ್ ಕ್ರೀಮ್ ಎನ್ನುವುದು ಅವರು ಹಾಕಿರುವ ವಿಡಿಯೋ ನೋಡಿಯೇ ಗೊತ್ತಾಗುತ್ತದೆ. ಏನೇ ಆಗಲಿ, ನಿವಿ ಸಖತ್ ಎಂಜಾಯ್ ಮಾಡಿದ್ದಾರೆ ಫುಡ್ ಸ್ಟ್ರೀಟ್ ನಲ್ಲಿ.

    Live Tv
    [brid partner=56869869 player=32851 video=960834 autoplay=true]

  • ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಗಾಗಲೇ ಒಂದು ಸಿನಿಮಾದಲ್ಲಿ ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಚಂದನ್ ಶೆಟ್ಟಿ (Chandan Shetty) ನಟಿಸಿದ್ದಾರೆ. ಈಗ ಮತ್ತೊಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.‌ ನವರಸನ್ (Navarasan) ನಿರ್ಮಾಣದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ಅಕ್ಟೋಬರ್ 10ರಿಂದ ಚಿತ್ರೀಕರಣ ಆರಂಭವಾಗಲಿದೆ.

    ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ಪ್ರಮುಖ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ “ದಮಯಂತಿ” ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ‌.

    ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ (Kiran Kumar) ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ.ನಾಯಕಿಯ ಆಯ್ಕೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕಾಗಿ ಹಾಡಿದ ಚಂದನ್ ಹಾಗೂ ಮಂಗ್ಲಿ

    ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕಾಗಿ ಹಾಡಿದ ಚಂದನ್ ಹಾಗೂ ಮಂಗ್ಲಿ

    ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” (Triple Riding) ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ (Chandan Shetty) ಹಾಗೂ ಮಂಗ್ಲಿ(Mangli) ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.  ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

    ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ (Ganesh) ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್” ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಇದೆ. ನಾಲ್ಕು  ಹಾಡುಗಳಿದೆ‌. ಆದರಲ್ಲಿ ಒಂದು ಹಾಡು ಇಂದು ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು (Song) ಒಂದಕ್ಕಿಂತ ಒಂದು ಚೆನ್ನಾಗಿದೆ. ಸಾಯಿಕಾರ್ತಿಕ್ ಈ ಸಂಗೀತ ನಿರ್ದೇಶಕರು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಸುಮಧುರವಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಸಿನಿಮಾ‌ ಮಾಡಿದ್ದೇವೆ. ಅದಕ್ಕೆ ಕಾರಣರಾದ ನಿರ್ಮಾಪಕ ರಾಮ್ ಗೋಪಾಲ್ ಅವರಿಗೆ ಧನ್ಯವಾದ. ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು ನಿರ್ದೇಶಕ ಮಹೇಶ್ ಗೌಡ.

    ನಿರ್ದೇಶಕ ಮಹೇಶ್ (Mahesh Gowda) ನನಗೆ “ಮುಂಗಾರು ಮಳೆ” ಯಿಂದ ಪರಿಚಯ. ಆ ಚಿತ್ರಕ್ಕೆ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗಲೇ ನನಗೆ ಒಂದು ಕಥೆ ಮಾಡುತ್ತೀನಿ ಎಂದಿದ್ದರು‌. ಹದಿನಾಲ್ಕು ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದರು. ಒಳ್ಳೆಯ ಪಾತ್ರ ಕೊಟ್ಟಿರುವುದಕ್ಕೆ ಧನ್ಯವಾದ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ಅವರಿಗೆ ಒಳ್ಳೆಯದಾಗಲಿ. ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟು, ಟರ್ನ್ ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್” ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಇದರಲ್ಲಿ ನೋಡಬಹುದು.  ಈ ಚಿತ್ರದಲ್ಲಿ ಮೂವರು ನಾಯಕಿಯರು. ಅದಿತಿ ಪ್ರಭುದೇವ,  ಮೇಘ ಶೆಟ್ಟಿ ಹಾಗೂ ರಚನಾ ಇಂದರ್. ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ನೋಡಿ ಹರಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

    ನನ್ನದು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ. ಗಣೇಶ್ ಸರ್ ಜೊತೆ ನನ್ನ ಮೊದಲ ಸಿನಿಮಾ. ಹಾಡು ಹಾಗೂ ಸಿನಿಮಾ ಎರಡು ಚೆನ್ನಾಗಿದೆ ಎಂದು ಮೇಘ ಶೆಟ್ಟಿ ತಿಳಿಸಿದರು. “ಲವ್ ಮಾಕ್ಟೇಲ್” ನಂತರ ನಾನು‌ ಒಪ್ಪಿಕೊಂಡ ಚಿತ್ರ ಇದು. ಹಠಮಾರಿ ಹೆಣ್ಣಿನ ಪಾತ್ರ ನನ್ನದು. ಏನಾದರೂ ಬೇಕೆಂದರೆ ಅದು ಬೇಕು ಎಂದು ಪಡೆದುಕೊಳ್ಳುತ್ತೇನೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ಎಂದರು ರಚನಾ ಇಂದರ್. ಇದನ್ನೂ ಓದಿ:ಮಸ್ತಾಗಿದೆ `ಕಬ್ಜ’ ಟೀಸರ್: ಹೇಗಿದೆ ಗೊತ್ತಾ ಉಪೇಂದ್ರ- ಸುದೀಪ್ ಜುಗಲ್‌ಬಂದಿ

    ಗಣೇಶ್ ಸರ್ ಗೆ ಈ ಹಿಂದೆ ಎರಡು ಹಾಡು ಹಾಡಿದೆ. ಇದು ಮೂರನೇ ಹಾಡು. ಸಾಯಿಕಾರ್ತಿಕ್ ತುಂಬಾ ಚೆನ್ನಾಗಿ ಸಂಗೀತ ನೀಡಿದ್ದಾರೆ. ಹಾಡು ಹಾಗೂ ಸಿನಿಮಾ ಎರಡೂ ಹಿಟ್ ಆಗಲಿ ಎಂದು ಚಂದನ್ ಶೆಟ್ಟಿ ಹಾರೈಸಿದರು. ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಮ್ ಗೋಪಾಲ್ ವೈ.ಎಂ. ಹಾಡುಗಳ ಹಾಗೂ ಹಾಡಿರುವವರ ಬಗ್ಗೆ ಸಂಗೀತ ನಿರ್ದೇಶಕ  ಸಾಯಿಕಾರ್ತಿಕ್ ಮಾತನಾಡಿದರು. ಚಿತ್ರತಂಡದ ಅನೇಕ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

  • ‘ನನಗೆ ಮಕ್ಕಳು ಮಾಡಿಕೊಳ್ಳೊ ಪ್ಲ್ಯಾನ್ ಇಲ್ಲ’ ಎಂದ ಚೆಂದನದ ಗೊಂಬೆ ನಿವೇದಿತಾ ಗೌಡ

    ‘ನನಗೆ ಮಕ್ಕಳು ಮಾಡಿಕೊಳ್ಳೊ ಪ್ಲ್ಯಾನ್ ಇಲ್ಲ’ ಎಂದ ಚೆಂದನದ ಗೊಂಬೆ ನಿವೇದಿತಾ ಗೌಡ

    ಮಾಜಿ ಬಿಗ್ ಬಾಸ್ ಸ್ಪರ್ಧಿ (Bigg Boss) , ಗಾಯಕ ಚಂದನ್ ಶೆಟ್ಟಿ ಅವರ ಪತ್ನಿ ನಿವೇದಿತಾ ಗೌಡ (Niveditha Gowda) ಆಗಾಗ್ಗೆ ಸೋಷಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಲೇ ಇರುತ್ತಾರೆ. ಅಲ್ಲದೇ, ರೀಲ್ಸ್ ಮೂಲಕ ರಂಜಿಸುತ್ತಾರೆ. ಸದಾ ಚಟುವಟಿಕೆಯಿಂದಲೇ ಇರುವ ನಿವೇದಿತಾ ಗೌಡ, ಇತ್ತೀಚೆಗಷ್ಟೇ ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಮಾತನಾಡಿದ್ದು, ಅಭಿಮಾನಿಗಳು ಪದೇ ಪದೇ ಈ ಪ್ರಶ್ನೆ ಕೇಳುವ ಬಗ್ಗೆ ಅವರು ನೆನಪಿಸಿಕೊಂಡಿದ್ದಾರೆ.

    ಅಭಿಮಾನಿಯೊಬ್ಬ ನೀವು ಮಕ್ಕಳನ್ನು (Kids) ಹೊಂದುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ ಅಷ್ಟೇ ಕೂಲ್ ಆಗಿಯೇ ಉತ್ತರಿಸಿರುವ ನಿವೇದಿತಾ, ‘ಸದ್ಯಕ್ಕೆ ಮಕ್ಕಳನ್ನು ಮಾಡಿಕೊಳ್ಳುವ ಯಾವುದೇ ಪ್ಲ್ಯಾನ್ (Planning) ಇಲ್ಲ. ಇನ್ನೂ ನಾನು ಜೀವನವನ್ನು ಎಂಜಾಯ್ ಮಾಡಬೇಕು. ಟೂರ್ ಮಾಡಬೇಕು. ಎಲ್ಲವೂ ಆದ ನಂತರವೇ ನೋಡೋಣ’ ಎಂದು ಉತ್ತರಿಸಿದ್ದಾರೆ. ಪದೇ ಪದೇ ಇದೇ ಪ್ರಶ್ನೆಯನ್ನೂ ಹಲವರು ಕೇಳಿದ್ದಾರೆ. ಇಷ್ಟು ಬೇಗ ನಾನು ಯಾಕೆ ಮಗು ಮಾಡಿಕೊಳ್ಳಬೇಕು ಎಂದು ಅವರೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಬ್ಯೂಟಿಫುಲ್ ಹುಡುಗಿಯರ ನಡುವೆ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಒಲವಿನ ಟೀಸರ್

    ಮದುವೆಯಾದ ನಂತರ ನೆಚ್ಚಿನ ನಟ ನಟಿಯರು ಯಾವಾಗ ಮಗು ಮಾಡಿಕೊಳ್ಳುತ್ತಾರೆ ಎನ್ನುವ ಕುತೂಹಲ ಹಲವರದ್ದು. ಹಾಗಾಗಿ ಇಂತಹ ಪ್ರಶ್ನೆಗಳನ್ನು ಅಭಿಮಾನಿಗಳು ಅವಕಾಶ ಸಿಕ್ಕಾಗ ಕೇಳಿಕೊಳ್ಳುತ್ತಲೇ ಇದ್ದಾರೆ. ಸಂಜನಾ, ಪ್ರಣಿತಾ, ರಾಧಿಕಾ ಪಂಡಿತ್ ಸೇರಿದಂತೆ ಹಲವು ನಟಿಯರು ಮದುವೆಯ ನಂತರ ಪಕ್ಕಾ ಪ್ಲ್ಯಾನ್ ಮಾಡಿಕೊಂಡೆ ತಾಯಿ ಆಗಿದ್ದಾರೆ. ಹಾಗಾಗಿ ನಿವೇದಿತಾ ಗೌಡಗೂ ಕೂಡ ಅಭಿಮಾನಿಗಳು ಈ ರೀತಿಯ ಪ್ರಶ್ನೆಗಳನ್ನು ಕೇಳುವುದು ಸಹಜವಾಗಿದೆ.

    ಸದ್ಯ ನಿವೇದಿತಾ ಗೌಡ ರಿಯಾಲಿಟಿ ಶೋ, ರೀಲ್ಸ್ (Reels) ಅಂದುಕೊಂಡು ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ (Chandan Shetty) ಹೀರೋ ಆಗಿ ಲಾಂಚ್ ಆಗಿದ್ದಾರೆ. ಅಲ್ಲದೇ, ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಗಾಯಕರಾಗಿಯೂ ಸಿಕ್ಕಾಪಟ್ಟೆ ಬ್ಯುಸಿ. ಮಕ್ಕಳನ್ನು ಮಾಡಿಕೊಳ್ಳದೇ ಇರುವುದಕ್ಕೆ ಇದೆಲ್ಲವೂ ಕಾರಣ ಇರಬಹುದು.

    Live Tv
    [brid partner=56869869 player=32851 video=960834 autoplay=true]

  • ನಂದಕಿಶೋರ್ ನಿರ್ದೇಶನದ ‘ರಾಣ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನಂದಕಿಶೋರ್ ನಿರ್ದೇಶನದ ‘ರಾಣ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಕೆ.ಮಂಜು ಅರ್ಪಿಸುವ,  ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ನಂದಕಿಶೋರ್ (Nandakishore) ನಿರ್ದೇಶನದಲ್ಲಿ  ಶ್ರೇಯಸ್ ಕೆ ಮಂಜು (Shreyas) ನಾಯಕನಾಗಿ ‌ಅಭಿನಯಿಸಿರುವ “ರಾಣ” (Raana) ಚಿತ್ರ ನವೆಂಬರ್ 11 ರಂದು ರಾಜ್ಯಾದ್ಯಂತ  ಬಿಡುಗಡೆಯಾಗುತ್ತಿದೆ (Release). ‌ರೀಷ್ಮಾ ನಾಣಯ್ಯ (Reeshma Nanaiah) ಈ ಚಿತ್ರದ ನಾಯಕಿ. ರಜನಿ ಭಾರದ್ವಾಜ್,  ಅಶೋಕ್, ಗಿರಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ ಕುಮಾರ್, ನಯನ, ರಘು, ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ರವಿವರ್ಮ, ಚೇತನ್,ಡಿಸೋಜ ಡಿಫರೆಂಟ್ ಡ್ಯಾನಿ ಹಾಗೂ ಗಣೇಶ್ ಸಾಹಸ ಸಂಯೋಜನೆ ಮಾಡಿದ್ದಾರೆ. ಇದನ್ನೂ ಓದಿ:ಹೆರಿಗೆಯ ನಂತರ ಬದಲಾಯ್ತು ಪ್ರಣಿತಾ ಸುಭಾಷ್ ಲುಕ್

    ಚಿತ್ರದಲ್ಲಿ ಮೂರು ಹಾಡುಗಳಿದ್ದು, ಚಂದನ್ ಶೆಟ್ಟಿ (Chandan Shetty) ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ  ಇಮ್ರಾನ್ ಸರ್ದಾರಿಯಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೋರಾದಾಗೆಲ್ಲ ಶಾಪಿಂಗ್ ಮಾಡ್ತಾರಂತೆ ನಿವೇದಿತಾ ಗೌಡ

    ಬೋರಾದಾಗೆಲ್ಲ ಶಾಪಿಂಗ್ ಮಾಡ್ತಾರಂತೆ ನಿವೇದಿತಾ ಗೌಡ

    ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ನಿವೇದಿತಾ ಗೌಡ ವಿಂಟರ್ ಶಾಪಿಂಗ್ ಮಾಡಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಮೊನ್ನೆಯಷ್ಟೇ ನನಗೆ ಸಖತ್ ಬೋರ್ ಆಗಿತ್ತು. ಹಾಗಾಗಿ ಶಾಪಿಂಗ್ ಮಾಡಲು ಹೋಗಿದ್ದೆ ಎಂದು ಮಾತು ಶುರು ಮಾಡಿ, ಏನೆಲ್ಲ ಶಾಪಿಂಗ್ ಮಾಡಿದ್ದಾರೆ ಎನ್ನುವುದನ್ನೂ ತೋರಿಸಿದ್ದಾರೆ.

    ಅವರ ಬಳಿ ಕೆಂಪು ಬಣ್ಣದ ಡ್ರೆಸ್ ಇದೆಯಂತೆ. ಆ ಡ್ರೆಸ್ ಗೆ ಮ್ಯಾಚ್ ಆಗುವಂತಹ ಹೀಲ್ಸ್ ಬೇಕಿತ್ತಂತೆ. ಅದನ್ನು ಖರೀದಿಸಲು ಹೋಗಿ ಬೇರೆ ಏನೆಲ್ಲ ಪರ್ಚೇಸ್ ಮಾಡಬೇಕಾಯಿತು ಎಂಬುದನ್ನು ವಿವರಿಸಿದ್ದಾರೆ. ಶಾಪಿಂಗ್ ಮಾಡಿರುವ ವಸ್ತುಗಳನ್ನು ಅವರು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಕೂಡ ಆಗಿದೆ. ಇದನ್ನೂ ಓದಿ:ಮತ್ತೆ ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್

    ಕೆಂಪು ಬಣ್ಣದ ಹೀಲ್ಸ್ ಖರೀದಿಸಲು ಹೋಗಿದ್ದೆ. ಆದರೆ, ಅಂಗಡಿಗೆ ಹೋದಾಗ ಏನೆಲ್ಲ ಹೊಸ ಹೊಸ ವಸ್ತುಗಳು ಬಂದಿದ್ದವು. ಎಲ್ಲವನ್ನೂ ಖರೀದಿಸಬೇಕು ಅಂತ ಅನಿಸಿತು. ಅದರಲ್ಲೂ ನನಗೆ ಬ್ಯಾಗ್ ಗಳು ಅಂದರೆ ತುಂಬಾ ಇಷ್ಟ ಹಾಗಾಗಿ ಅಷ್ಟೊಂದು ಬ್ಯಾಗ್ ಖರೀದಿಸಿದೆ ಎಂದು ಹೇಳಿಕೊಂಡಿದ್ದಾರೆ. ಯಾವ ವಸ್ತುಗಾಗಿ ಶಾಪಿಂಗೆಗೆ ಹೋಗಿದ್ದೆನೋ, ಅದನ್ನು ಬಿಟ್ಟು ಬಿಳಿದೆಲ್ಲವನ್ನೂ ತಂದೆ ಎಂದು ಹೇಳಿಕೊಂಡಿದ್ದಾರೆ. ಕೆಂಪು ಹೀಲ್ಸ್ ಗಾಗಿ ಮತ್ತೊಮ್ಮೆ ಶಾಪಿಂಗ್ ಗೆ ಹೋಗಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ಜೊತೆಗೆ ‘ಮಾಯಗಾರ’ನ ಇಷ್ಟ ಪಡುತ್ತಿದ್ದಾರಂತೆ ಬೇಬಿ ಡಾಲ್ ನಿವೇದಿತಾ ಗೌಡ

    ಚಂದನ್ ಶೆಟ್ಟಿ ಜೊತೆಗೆ ‘ಮಾಯಗಾರ’ನ ಇಷ್ಟ ಪಡುತ್ತಿದ್ದಾರಂತೆ ಬೇಬಿ ಡಾಲ್ ನಿವೇದಿತಾ ಗೌಡ

    ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳನ್ನು ಎಂಗೇಜ್ ಆಗಿಡುವ ನಿವೇದಿತಾ ಗೌಡ ಹೊಸ ಹೊಸ ಸುದ್ದಿಗಳನ್ನು ಕೊಡುತ್ತಲೇ ಇರುತ್ತಾರೆ. ಅದರಲ್ಲೂ ರೀಲ್ಸ್ ನಲ್ಲಿ ಹೊಸ ಹಳೆ ಹಾಡಿಗೆ ಹೆಜ್ಜೆ ಹಾಕುತ್ತಾ, ಅಭಿಮಾನಿಗಳನ್ನು ರಂಜಿಸುತ್ತಾರೆ. ಈ ಸಲವೂ ಅವರು ವಿಶೇಷ ಹಾಡಿಗೆ ಸೊಂಟ ಬಳಕುಸಿದ್ದು, ಈ ವಿಡಿಯೋ ರಿಪೀಟ್ ಆದರೂ, ನನ್ನಿಷ್ಟದ ಹಾಡು ಎಂದು ಬರೆದುಕೊಂಡಿದ್ದಾರೆ.

    ರವಿಚಂದ್ರನ್ ಅಭಿನಯದ ರಾಮಾಚಾರಿ ಸಿನಿಮಾದ ‘ಆಕಾಶದಾಗೆ ಯಾರೋ ಮಾಯಗಾರನೋ’ ಹಾಡೆಂದರೆ ನಿವೇದಿತಾ ಗೌಡ ಅವರಿಗೆ ಅಚ್ಚುಮೆಚ್ಚಂತೆ. ಹಾಗಾಗಿಯೇ ರಾಮಚಾರಿಯ ಹುಡುಗಿ ಮಾಲಾಶ್ರೀ ಅವರ ಗೆಟಪ್ ನಲ್ಲೇ ಕಾಸ್ಟ್ಯೂಮ್ ಹಾಕಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಮಾಯಾಗಾರನ ಹಾಡು ಯಾವಾಗಲೂ ನನಗೆ ಇಷ್ಟವೆಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

    1991ರಲ್ಲಿ ಬಿಡುಗಡೆಯಾದ ರಾಮಾಚಾರಿಯ ಬಹುತೇಕ ಹಾಡುಗಳು ಹಿಟ್. ಅದರಲ್ಲೂ ಮನೋ ಮತ್ತು ಎಸ್.ಜಾನಕಿ ಅವರ ಧ್ವನಿಯಲ್ಲಿ ಮೂಡಿ ಬಂದ  ಆಕಾಶದಾಗೆ ಯಾರೋ ಮಾಯಗಾರನೋ ಹಾಡು ಎವರ್ ಗ್ರೀನ್. ಈ ಹಾಡಿನಲ್ಲಿ ರವಿಚಂದ್ರನ್ ಮತ್ತು ಮಾಲಾಶ್ರೀ ಕಂಡ ರೀತಿಯು ಸೊಗಸು ಸೊಗಸು. ಈ ಕಾರಣಕ್ಕಾಗಿಯೇ ನಿವೇದಿತಾ ಗೌಡ ಅವರಿಗೂ ಈ ಹಾಡು ಇಷ್ಟವಂತೆ.

    Live Tv
    [brid partner=56869869 player=32851 video=960834 autoplay=true]

  • ಎಲ್ರ ಕಾಲೆಳಿಯತ್ತೆ ಕಾಲ ಹಾಡಿಗಾಗಿ ರೆಟ್ರೊ ಸ್ಟೈಲ್ ನಲ್ಲಿ ಕುಣಿದ ಚಂದನ್ ಶೆಟ್ಟಿ

    ಎಲ್ರ ಕಾಲೆಳಿಯತ್ತೆ ಕಾಲ ಹಾಡಿಗಾಗಿ ರೆಟ್ರೊ ಸ್ಟೈಲ್ ನಲ್ಲಿ ಕುಣಿದ ಚಂದನ್ ಶೆಟ್ಟಿ

    ಚಂದನ್ ಶೆಟ್ಟಿ ಇದೇ ಮೊದಲು ನಾಯಕನಾಗಿ ನಟಿಸುತ್ತಿರುವ  “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್ ವಿಜೇತ ಮಂಜು ಪಾವಗಡ ಮುಂತಾದವರು ಹಾಜರಿದ್ದರು.

    ನಮ್ಮ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಇಂದಿನಿಂದ ಪ್ರಚಾರ ಕಾರ್ಯ ಶುರುವಾಗಲಿದೆ.  ಇಂದು ನಮ್ಮ ಚಿತ್ರದ ಮೊದಲ ಹಾಡು (ಗೋಲ್ಡ್ ಫ್ಯಾಕ್ಟರಿ) ಬಿಡುಗಡೆಯಾಗಿದೆ. ಅದೊಂದು ಮದುವೆಯ ಆರತಕ್ಷತೆಯ ಹಾಡು. ಇದೇ ಕಲ್ಯಾಣ ಮಂಟಪದಲ್ಲಿ ಆ ಹಾಡಿನ ಚಿತ್ರೀಕರಣ ನಡೆದಿದ್ದರಿಂದ, ಅದರ ನೆನಪಿನಲ್ಲಿ ಇಲ್ಲೇ ಪತ್ರಿಕಾಗೋಷ್ಠಿ ಮಾಡುತ್ತಿದ್ದೇವೆ. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್ – ಪ್ರದೀಪ್ ಹಾಡಿದ್ದಾರೆ.  ಇಂದಿನಿಂದ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.

     

    ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಲ್ಲಿ ಚಂದನ್ ಮತ್ತು ಅರ್ಚನಾ ಅವರ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿದೆ. ಅವರು ನಟಿಸಬಾರದು. ಸಹಜವಾಗಿ ವರ್ತಿಸಬೇಕು ಎಂಬುದು ನನ್ನ ಆಸೆ ಆಗಿತ್ತು. ಹಾಗಾಗಿ, ವರ್ಕ್ ಶಾಪ್ ಮಾಡಿದೆ. ಇಬ್ಬರೂ ಬಹಳ ಸಹಜವಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಮತ್ತು ಚಿತ್ರತಂಡದವರ ಸಹಕಾರವಿಲ್ಲದಿದ್ದರೆ, ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ. ಪ್ರತಿಯೊಬ್ಬರಿಗೂ ನಾನು ಚಿರ ಋಣಿ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.

    ಇಂದು ನಮ್ಮ ಚಿತ್ರದ ಗೋಲ್ಡ್ ಫ್ಯಾಕ್ಟರಿ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ. ಅವರು ನನ್ನನ್ನು ಚೆನ್ನಾಗಿ ಮೌಲ್ಡ್ ಮಾಡಿದ್ದಾರೆ ಎಂದರು ನಾಯಕ ಚಂದನ್ ಶೆಟ್ಟಿ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ನಟಿಯಾಗಿ ಒಂದು ಕಾಮಿಡಿ ಚಿತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಬಹಳ ಆಸೆ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಚಿತ್ರದಲ್ಲಿ ಅದ್ಭುತವಾದ ತಾರಾಗಣವಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]