Tag: Chandan Shetty

  • ಮತ್ತೆ ಕನ್ನಡದ ವಿಚಾರಕ್ಕೆ ಟ್ರೋಲ್ ಆದ ನಿವೇದಿತಾ ಗೌಡ

    ಮತ್ತೆ ಕನ್ನಡದ ವಿಚಾರಕ್ಕೆ ಟ್ರೋಲ್ ಆದ ನಿವೇದಿತಾ ಗೌಡ

    ಕಿರುತೆರೆಯ ದೊಡ್ಮನೆಯ ಶೋನ ಚಂದನದ ಗೊಂಬೆ ನಿವೇದಿತಾ ಗೌಡ ಮತ್ತೆ ಕನ್ನಡದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸದ್ಯ ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿರುವ `ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ನಿವೇದಿತಾ ಮಾತನಾಡಿರುವ ಈ ಮಾತು ಇದೀಗ ಸಿಕ್ಕಾಪಟ್ಟೆ ಸಂಚಲನ ಮೂಡಿಸುತ್ತಿದೆ.

    ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಸದ್ಯ ಸಿನಿಮಾಗಳಲ್ಲಿ ನಟಿಸಲು ತೆರೆಮರೆಯಲ್ಲಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಇನ್ನೊಂದ್ ಕಡೆ ಗಿಚ್ಚಿ ಗಿಲಿಗಿಲಿ ಶೋನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ವಾರಾಂತ್ಯದಲ್ಲಿ ಪ್ರಸಾರವಾಗುವ ಸಂಚಿಕೆಯ ಪ್ರೋಮೋ ನೆಟ್ಟಿಗರನ್ನ ಸೆಳೆಯುತ್ತಿದೆ. ಶೋನಲ್ಲಿ ಚಂದನ್ ಶೆಟ್ಟಿ ಸ್ಪೆಷಲ್ ಎಂಟ್ರಿ ಕೊಟ್ಟಿದ್ದಾರೆ.

    ಅತಿಥಿಯಾಗಿ ಚಂದನ್ ಶೆಟ್ಟಿ `ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ನಿರೂಪಕ ನಿಮ್ಮ ಪಾದ ಪೂಜೆ ಆಗಿಲ್ವಾ ಚಂದನ್ ಅಂತಾ ಕೇಳಿದ್ದಾರೆ. ಆಗ ಚಂದನ್, ಇಲ್ಲಾ ಇನ್ನೂ ಆಗಿಲ್ಲ ಎಂದಿದ್ದಾರೆ. ನಿವೇದಿತಾ ಸಂಜೆ ಮನೆಗೆ ಹೋದ್ಮಲೆ ಭೀಮನ ಅಮಮಾಸೆ, ಅವಮಾಸೆ ಮಾಡ್ತಿನಿ ಅಂತಾ ಪದ ಬಳಕೆ ಮಾಡಿದ್ದಾರೆ. ನಟಿ ಶೃತಿ ಅವರು ಈ ಪೂಜೆ ಆಚರಣೆಯನ್ನ ನಿವಿಗೆ ಕೇಳಿದ್ದಾರೆ. ತಟ್ಟೆ ಇಟ್ಟು, ತಟ್ಟೆಯ ಮೇಲೆ ಕಾಲಿಟ್ಟು ನೀರು ಹಾಕಿ, ಉಜ್ಜಬೇಕು ಎಂದಿದ್ದಾರೆ. ನಿವೇದಿತಾ ಅವರ ಈ ಮಾತು ಪ್ರೇಕ್ಷಕರನ್ನ ನಗೆಯಗಡಲಲ್ಲಿ ತೇಲಿಸಿದೆ. ಇದನ್ನೂ ಓದಿ:ಚಿತ್ರರಂಗದಲ್ಲಿ ಶಿವಣ್ಣ- ರವಿಚಂದ್ರನ್ ಬರ್ತಡೇ ಸಂಭ್ರಮಕ್ಕೆ ಭರ್ಜರಿ ಪ್ಲ್ಯಾನ್

    ಒಂದ್‌ಕಡೆ ನಿವೇದಿತಾ ಮಾತು ಒಂದಿಷ್ಟು ಜನ ತಮಾಷೆಯಾಗಿ ತೆಗೆದುಕೊಂಡ್ರೆ, ಮತ್ತೊಂದಿಷ್ಟು ಜನ ನಿವಿಯ ಕನ್ನಡ ಕೇಳಿ ಸೋಷಿಯಲ್ ಮೀಡಿಯಾದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Breaking- ಅಭಿಮಾನಿಗಳಿಗೆ ನಿವೇದಿತಾ ಗೌಡ ಗುಡ್ ನ್ಯೂಸ್

    Breaking- ಅಭಿಮಾನಿಗಳಿಗೆ ನಿವೇದಿತಾ ಗೌಡ ಗುಡ್ ನ್ಯೂಸ್

    ಬಿಗ್ ಬಾಸ್ ರಿಯಾಲಿಟಿ ಶೋನಿಂದ ಗಮನ ಸೆಳೆದು ಅಪಾರ ಅಭಿಮಾನಿಗಳ ಮನಗೆದ್ದಿರುವ ನಿವೇದಿತಾ ಗೌಡ ಸದ್ಯ ವೈಯಕ್ತಿಕ ಜೀವನ, ನಟನೆ ಅಂತಾ ಫುಲ್ ಬ್ಯುಸಿಯಾಗಿದ್ದಾರೆ. ಈಗ ತಮ್ಮ ಅಭಿಮಾನಿಗಳಿಗೆ ನಿವೇದಿತಾ, ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಕನ್ನಡ ಕಿರುತೆರೆಯ ದೊಡ್ಮನೆ ಶೋ ಮೂಲಕ ಸಿಕ್ಕಾಪಟ್ಟೆ ನೇಮು ಫೇಮು ಗಿಟ್ಟಿಸಿಕೊಂಡಿರುವ ನಿವಿ, ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್‌ಗಟ್ಟಲೇ ಫಾಲೋವರ್ಸ್ ಇದ್ರೂ, ಇದುವರೆಗೂ ಯಾವುದೇ ಸಿನಿಮಾದಲ್ಲಿ ನಿವೇದಿತಾ ಕಾಣಿಸಿಕೊಂಡಿರಲಿಲ್ಲ. ಈಗ ಬೆಳ್ಳಿಪರದೆಯಲ್ಲಿ ಮಿಂಚಲು ಚಂದನದ ಗೊಂಬೆ ನಿವಿ ಸಜ್ಜಾಗಿದ್ದಾರೆ. ಇದನ್ನೂ ಓದಿ:ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    ಇತ್ತೀಚೆಗಷ್ಟೇ ನಿವೇದಿತಾ ಮಿಸೆಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ನಂತರ ಸಾಲು ಸಾಲು ಸಿನಿಮಾ ಅವಕಾಶಗಳು ಹರಿದು ಬರುತ್ತಿದೆ. ಕನ್ನಡ ಸೇರಿದಂತೆ ತೆಲುಗು ಮತ್ತು ತಮಿಳಿನಲ್ಲಿ ಸಿನಿಮಾ ಆಫರ್ಸ್‌ ಅರಿಸಿ ಬಂದಿದೆ. ಈಗಾಗಲೇ ಕಥೆ ಕೇಳಿ, ಥ್ರಿಲ್ ಆಗಿರುವ ನಿವೇದಿತಾ ಕಂಟೆಂಟ್ ಕೇಳಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಪವರ್‌ಫುಲ್ ಪಾತ್ರದಲ್ಲಿ ಟಾಲಿವುಡ್ ಸಿನಿಮಾರಂಗದಲ್ಲಿ ರಂಜಿಸಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಿನಿಮಾದಲ್ಲಿಯೇ ಭಿನ್ನ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ಸಿನಿಮಾದ ಬಗ್ಗೆ ನಟಿ ನಿವೇದಿತಾ ಅವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ಮನೇಲಿ ಇರದೇ ಹೋದರೆ ನಿವೇದಿತಾ ಗೌಡಗೆ ಭಯಂಕರ ಭಯವಂತೆ

    ಚಂದನ್ ಶೆಟ್ಟಿ ಮನೇಲಿ ಇರದೇ ಹೋದರೆ ನಿವೇದಿತಾ ಗೌಡಗೆ ಭಯಂಕರ ಭಯವಂತೆ

    ನಿನ್ನೆಯಷ್ಟೇ ಮಿಸೆಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿರುವ ನಟಿ ನಿವೇದಿತಾ ಗೌಡ, ತಮ್ಮ ಖಾಸಗಿ ಬದುಕಿನ ಬಗ್ಗೆ ಹತ್ತು ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಮನೆಯಲ್ಲಿ ಒಂಟಿಯಾಗಿ ಇರುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ. ರಾತ್ರಿ ಹೊತ್ತು ಪತಿ ಚಂದನ್ ಶೆಟ್ಟಿ ಮನೆಯಲ್ಲಿ ಇರದೇ ಇದ್ದರೆ, ಇಡೀ ರಾತ್ರಿ ನಿದ್ದೆಯೇ ಬರುವುದಿಲ್ಲ ಎನ್ನುವ ಸಂಗತಿಯನ್ನೂ ಅವರು ಹೇಳಿದ್ದಾರೆ.

    ರಾತ್ರಿ ಹೊತ್ತು ಒಬ್ಬಳೆ ಮನೆಯಲ್ಲಿ ಇದ್ದರೆ ತುಂಬಾ ಭಯವಾಗುತ್ತದೆ. ಹಾಗಾಗಿ ಇಡೀ ಮನೆ ಬೆಳಕಿನಿಂದ ತುಂಬಿರುತ್ತದೆ. ಅಷ್ಟೂ ಲೈಟ್ಸ್ ಆನ್ ಮಾಡಿಕೊಂಡೇ ಮನೆತುಂಬಾ ಓಡಾಡಿಕೊಂಡಿರುತ್ತೇನೆ. ನನ್ನಿಷ್ಟದ ವೆಬ್ ಸೀರಿಸ್ ನೋಡುತ್ತೇನೆ. ಒಂದೊಂದು ವೆಬ್ ಸೀರಿಸ್ ಅನ್ನು ಹತ್ತಿಪ್ಪತ್ತು ಬಾರಿ ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈ ಸಲುವಾಗಿಯೇ ಆದಷ್ಟು ಒಂಟಿಯಾಗಿ ಇರದಂತೆ ಪತಿ ಎಚ್ಚರಿಕೆ ವಹಿಸುತ್ತಾರೆ ಎಂದೂ ಗಂಡನ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ

    ಮಿಸೆಸ್ ಇಂಡಿಯಾ ತಯಾರಿ ಬಗ್ಗೆಯೂ ಅವರು ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಸೌಂದರ್ಯ ಸ್ಪರ್ಧೆಯಲ್ಲಿ ಭಾಗಿ ಆಗಬೇಕು ಎನ್ನುವುದು ಅವರ ಚಿಕ್ಕಂದಿನ ಕನಸಾಗಿತ್ತಂತೆ. ಅದಕ್ಕೆ ಪ್ರೋತ್ಸಾಹ ನೀಡಿದ್ದು ಅವರು ತಾಯಿ ಎನ್ನುವುದನ್ನೂ ಹೇಳಿದ್ದಾರೆ. ಹಲವು ದಿನಗಳಿಂದ ಕಷ್ಟಪಟ್ಟು ಮಿಸೆಸ್‍ ಇಂಡಿಯಾ ಸ್ಪರ್ಧೆಗಾಗಿ ತಯಾರಿ ನಡೆಸಿದ್ದನ್ನೂ ಅವರು ಹಂಚಿಕೊಂಡಿದ್ದಾರೆ. ಕೊನೆಗೂ ಆ ಟೈಟಲ್ ಅನ್ನು ಗೆಲ್ಲುವಲ್ಲಿ ಸಫಲರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಿಸೆಸ್ ಇಂಡಿಯಾ ಆದ ಚಂದನ್ ರಾಣಿ ನಿವೇದಿತಾ ಗೌಡ

    ಮಿಸೆಸ್ ಇಂಡಿಯಾ ಆದ ಚಂದನ್ ರಾಣಿ ನಿವೇದಿತಾ ಗೌಡ

    ಬಿಗ್‍ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ, ರ‍್ಯಾಪರ್ ಚಂದನ್ ಶೆಟ್ಟಿ ಅವರ ಜೊತೆ ಸಪ್ತಪದಿ ತುಳಿದು ಸಾಂಸಾರಿಕ ಜೀವನದಲ್ಲಿ ಖುಷಿಯಾಗಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ಇವರು ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಕಳೆದ 2 ತಿಂಗಳಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಇವರು ಈಗ ಗೆಲುವಿನ ನಗೆ ಬೀರಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಪ್ಡೇಟ್‍ಗಳ ಬಗ್ಗೆ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುವ ಮುದ್ದು ಬೊಂಬೆ ನಿವೇದಿತಾ ಗೌಡ ಈಗ ಮಿಸೆಸ್ ಇಂಡಿಯಾ ಆಗಿದ್ದಾರೆ. ಮಿಸೆಸ್ ಇಂಡಿಯಾ ಆಗಲು ಅವರು ಮಾಡುತ್ತಿದ್ದ ತಯಾರಿಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ನಿವೇದಿತಾ ಗೆಲುವಿನ ಕಿರೀಟವನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಇದನ್ನೂ ಓದಿ: ಆಮೀರ್ ಖಾನ್ ಮನೆಯ ಔತಣ ಕೂಟದಲ್ಲಿ ಧನುಷ್‌ ನಟನೆಯ ಹಾಲಿವುಡ್ ಚಿತ್ರತಂಡ

     

    View this post on Instagram

     

    A post shared by Mrs. India Inc (@mrsindiainc)

    ಮಿಸೆಸ್ ಇಂಡಿಯಾ ಆಗಿರುವ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ ನಿವೇದಿತಾ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಎಲ್ಲರಿಗೂ ಗೊತ್ತಿರುವಂತೆ ನಿವೇದಿತಾ ಗೌಡ ಒಂದು ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದಾರೆ. ಅದರಲ್ಲಿ ಅವರು ಹೋಮ್ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್ ಕಲೆಕ್ಷನ್ ಸೇರಿದಂತೆ ಹಲವಾರು ರೀತಿಯ ವೀಡಿಯೋಗಳನ್ನು ಮಾಡಿ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ಬಾರಿ ಮಿಸೆಸ್ ಇಂಡಿಯಾಗೆ ಅವರು ಹೇಗೆಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ, ಅವರ ಡಯೆಟ್ ಏನು ಎಂಬ ಬಗ್ಗೆ ಹೇಳಿದ್ದರು. ಇದನ್ನೂ ಓದಿ: ಸೊಳ್ಳೆ ಪರದೆ ಡ್ರೆಸ್ ಧರಿಸಿ ಬಂದ ಉರ್ಫಿ ಜಾವೇದ್‌ಗೆ ನೆಟ್ಟಿಗರಿಂದ ಫುಲ್ ಕ್ಲಾಸ್

    ಅಲ್ಲದೇ, ಈ ವೀಡಿಯೋದಲ್ಲಿ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಏನು ಮಾಡುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ. ಹೇಗೆ ನೈಸರ್ಗಿಕವಾಗಿ ಮುಖದ ಅಂದವನ್ನು ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನ ತೋರಿಸಿದ್ದಾರೆ. ಫೇಸ್ ಮಸಾಜ್‍ಗಳನ್ನು ಹೇಳಿಕೊಟ್ಟಿದ್ದು, ಯಾವುದರಿಂದ ಏನು ಲಾಭ ಎಂಬುದನ್ನ ಸಹ ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹಾಲಿವುಡ್ ನಿರ್ದೇಶಕನ ಕನ್ನಡ ಸಿನಿಮಾ ರೋಡ್ ಕಿಂಗ್

    ಹಾಲಿವುಡ್ ನಿರ್ದೇಶಕನ ಕನ್ನಡ ಸಿನಿಮಾ ರೋಡ್ ಕಿಂಗ್

    ನ್ನಡ ಚಿತ್ರರಂಗದಲ್ಲಿ ಹಲವು ಪ್ರಯೋಗಗಳು ನಡೆಯುತ್ತಿರುತ್ತದೆ. ಆದರೆ ಈ ಬಾರಿ ವಿಭಿನ್ನ ಹಾಗೂ ಈ ಹಿಂದೆ ನಡೆದಿರದ ಪ್ರಯೋಗವೊಂದು ಕನ್ನಡ ಚಿತ್ರರಂಗದದಲ್ಲಿ ನಡೆದಿದೆ. ಸ್ಕೈಪ್(ಅಂತರಜಾಲ)ದ ಮೂಲಕವೇ ಇಡೀ ಚಿತ್ರದ ಚಿತ್ರೀಕರಣ ನಡೆದಿದೆ.  ಈ ಚಿತ್ರದ ನಾಯಕ ಮತೀನ್ ಹುಸೇನ್ ಮೂಲತಃ ಯು ಎಸ್ ಎ ನಿವಾಸಿ. ಕೆಲವು ವರ್ಷಗಳ ನಂತರ ಮುಂಬೈಗೆ ಆಗಮಿಸಿದ್ದ ಮತೀನ್,  ಆನಂತರ ಅನುಪಮ್ ಖೇರ್ ಫಿಲ್ಮ್ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ತರಭೇತಿ ಪಡೆಯುತ್ತಾರೆ. ಆ ಬಳಿಕ ಕನ್ನಡದಲ್ಲಿ ಸಿನಿಮಾ ಮಾಡಲು ಮುಂದಾಗುತ್ತಾರೆ. ನಿರ್ದೇಶನಕ್ಕಾಗಿ ಹಾಲಿವುಡ್ ನ ಖ್ಯಾತ ನಿರ್ದೇಶಕ ರಾಂಡಿ ಕೆಂಟ್ ಅವರನ್ನು ಸಂಪರ್ಕಿಸುತ್ತಾರೆ. ರಾಂಡಿ ಕೆಂಟ್ ಒಪ್ಪುತ್ತಾರೆ. ಆದರೆ ವೀಸಾ ತೊಂದರೆಯಿಂದ ರಾಂಡಿ ಕೆಂಟ್ ಇಲ್ಲಿಗೆ ಬರಲಾಗುವುದಿಲ್ಲ.‌ ಆಗ, ಈಗಿನ ತಂತ್ರಜ್ಞಾನ ಬಳಸಿಕೊಂಡು ಅಲ್ಲಿಂದಲೇ ಸ್ಕೈಪ್ ಮೂಲಕ ನಿರ್ದೇಶನ‌ ಮಾಡಲು ಆರಂಭಿಸುತ್ತಾರೆ. ಕಲಾವಿದರು ಬೆಂಗಳೂರಿನಲ್ಲಿ. ನಿರ್ದೇಶಕ ಲಾಸ್ ಎಂಜಲೀಸ್ ನಲ್ಲಿ. ಹೀಗೆ “ರೋಡ್ ಕಿಂಗ್” ಚಿತ್ರ ಸಿದ್ದವಾಗುತ್ತದೆ.

    ಮತೀನ್ ಹುಸೇನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ರುಕ್ಷರ್ ದಿಲ್ಹಾನ್ (ರನ್ ಆಂತೋನಿ ಖ್ಯಾತಿ) ನಾಯಕಿಯಾಗಿ ನಟಿಸಿದ್ದಾರೆ. ಲವ್ ಬ್ರೇಕಪ್ ನಿಂದ ಎಕ್ಸ್ ಸಿಂಡ್ರೋಮ್ ಗೆ ತುತ್ತಾದ ಯುವಪ್ರೇಮಿಗಳ ಸುತ್ತ ಹೆಣೆದಿರುವ ಕಥೆಯಿದು. ರೊಮ್ಯಾಂಟಿಕ್, ಥ್ರಿಲ್ಲರ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಹಲವು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಈ ಚಿತ್ರ ಸೆಪ್ಟೆಂಬರ್ ನಲ್ಲಿ ಕರ್ನಾಟಕದಾದ್ಯಂತ ತೆರೆ ಕಾಣುತ್ತಿದೆ. ಇದನ್ನೂ ಓದಿ:ಪತ್ನಿ ಪ್ರಿಯಾಗೆ ಕಿಚ್ಚ ಸುದೀಪ್ ಥ್ಯಾಂಕ್ಸ್ ಹೇಳಿದ್ಯಾಕೆ?

    ಜನಪ್ರಿಯ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿ, ಹಾಡಿರುವ “ಕೊಡು ನನಗೆ” ಎಂಬ ಹಾಡು ಕೂಡ ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಅರೀಫ್ ಲಲಾನಿ ಈ ಚಿತ್ರದ ಛಾಯಾಗ್ರಹಕರು. ಹಾಲಿವುಡ್ ನ ಖ್ಯಾತ ಚಿತ್ರಗಳಿಗೆ ಸೌಂಡ್ ಡಿಸೈನರ್ ಆಗಿ ಕಾರ್ಯನಿರ್ವಹಿಸಿರುವ ಸ್ಕಾಟ್ ವಾಲ್ಫ್ ಈ ಚಿತ್ರಕ್ಕೂ ಸೌಂಡ್‌ ಡಿಸೈನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ಕಾಟ್ ವಾಲ್ಫ್ ಅವರ ಸೌಂಡ್ ಡಿಸೈನ್ “ರೋಡ್ ಕಿಂಗ್” ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು

    `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ ಸ್ಯಾಂಡಲ್‌ವುಡ್ ತಾರೆಯರು

    ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ `ವಿಕ್ರಾಂತ್ ರೋಣ’ ಸಿನಿಮಾ ಸಾಕಷ್ಟು ವಿಚಾರಗಳಿಂದ ಅಟ್ರಾಕ್ಟ್ ಮಾಡುತ್ತಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರೋ `ರಾ ರಾ ರಕ್ಕಮ್ಮಾ’ ಸಾಂಗ್ ಅಂತೂ ಸಿನಿರಸಿಕರಿಗೆ ಮೋಡಿ ಮಾಡುತ್ತಿದೆ. ಸದ್ಯ ರಕ್ಕಮ್ಮಾ ಫೀವರ್ ಜೋರಾಗಿದ್ದು, ಈ ಹಾಡಿಗೆ ಸ್ಯಾಂಡಲ್‌ವುಡ್ ಸಲೆಬ್ರೆಟಿಸ್ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋಗಳ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಕಮಾಲ್ ಮಾಡುತ್ತಿದೆ.

     

    View this post on Instagram

     

    A post shared by Ashika Ranganath (@ashika_rangnath)

    `ವಿಕ್ರಾಂತ್ ರೋಣ’ ಚಿತ್ರದ ಸುದೀಪ್ ಮತ್ತು ಜಾಕ್ವೆಲಿನ್ ನಟನೆಯ `ರಾ ರಾ ರಕ್ಕಮ್ಮಾ’ ಸಾಂಗ್ ರಿಲೀಸ್ ಆಗಿ ಮಿಲಿಯನ್ ಗಟ್ಟಲೇ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ಹಾಡಷ್ಟೇ ಟ್ರೆಂಡ್ ಆಗಿರೋದಲ್ಲ, ಈ ಹಾಡಿನ ರೀಲ್ಸ್ ಕೂಡ ಟ್ರೇಂಡ್ ಆಗಿದೆ. ಸಿನಿಪ್ರೇಕ್ಷಕರಷ್ಟೇ ಫಿದಾ ಆಗಿರೋದಲ್ಲ, ಇಡೀ ಚಿತ್ರರಂಗವೇ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಿನಿ ಸಲೆಬ್ರೆಟಿಸ್ ಕೂಡ ರಕ್ಕಮ್ಮ ಹಾಡಿಗೆ ಜಬರ್‌ದಸ್ತ್ ಆಗಿ ಹೆಜ್ಜೆ ಆಗಿದ್ದಾರೆ. ಇದನ್ನೂ ಓದಿ: ಲೀಕ್ ಆಯ್ತು ನಯನತಾರಾ-ವಿಘ್ನೇಶ್ ಶಿವನ್ ಮದುವೆ ಆಮಂತ್ರಣ

     

    View this post on Instagram

     

    A post shared by Vaishnavi (@iamvaishnavioffl)

    `ಬಿಗ್ ಬಾಸ್’ ಖ್ಯಾತಿಯ ನಟಿ ವೈಷ್ಣವಿ ಗೌಡ, `ರಾ ರಾ ರಕ್ಕಮ್ಮಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬ್ಲಾಕ್ ಕಲರ್ ಡ್ರೆಸ್‌ನಲ್ಲಿ ಜದರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಬಿಗ್ ಬಾಸ್‌ನ ಮತ್ತೊರ್ವ ಜೋಡಿ ಚಂದನ ಮತ್ತು ವಾಸುಕಿ ವೈಭವ್ ಕೂಡ ರಕ್ಕಮ್ಮಾ ಹಾಡಿಗೆ ಹೆಜ್ಜೆ ಹಾಕಿರೋದು ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

    ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ, ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಕೂಡ `ವಿಕ್ರಾಂತ್ ರೋಣ’ ಹಾಡಿಗೆ ಬೋಲ್ಡ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಬಾರೀ ವೈರಲ್ ಆಗುತ್ತಿದೆ. ಚಂದನವನದ ಪಟಾಕಿ ಪೋರಿ ಆಶಿಕಾ ರಂಗನಾಥ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಒಟ್ನಲ್ಲಿ ಚಿತ್ರರಂಗದ ತಾರೆಯರೆಲ್ಲ `ರಾ ರಾ ರಕ್ಕಮ್ಮ’ ಹಾಡಿಗೆ ಎಂಜಾಯ್ ಮಾಡ್ತಾ ಜಬರ್‌ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

  • ಚಂದನದ ಗೊಂಬೆ ನಿವೇದಿತಾ ಗೌಡಗೆ ಫುಲ್ ಕ್ಲಾಸ್

    ಚಂದನದ ಗೊಂಬೆ ನಿವೇದಿತಾ ಗೌಡಗೆ ಫುಲ್ ಕ್ಲಾಸ್

    ಬಿಗ್ ಬಾಸ್ ಸ್ಪರ್ಧೆ ನಿವೇದಿತಾ ಗೌಡ ಇದೀಗ ಫುಲ್ ಬ್ಯುಸಿಯಾಗಿದ್ದಾರೆ. ಒಂದು ಕಡೆ ರಿಯಾಲಿಟಿ ಶೋ ಮತ್ತೊಂದು ಕಡೆ ಅವರೇ ನಂಬಿಕೊಂಡಿರುವ ರೀಲ್ಸ್ ಕಮಿಟ್ಮೆಂಟ್ ಗಳು ಇದರ ನಡುವೆ ಮತ್ತೊಂದು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ದಿನವೀಡಿ ಆ ಸಾಹಸ ಕೆಲಸದಲ್ಲೇ ಬ್ಯುಸಿಯಾಗಿದ್ದಾರೆ. ಅದೇನು ಅನ್ನುವುದನ್ನು ಅವರು ಅಭಿಮಾನಿಗಳಿಗೆ ನಿತ್ಯವೂ ವಿಡಿಯೋ ಅಥವಾ ಫೋಟೋ ಮೂಲಕ ಅಪ್ ಡೇಟ್ ಕೊಡುತ್ತಲೇ ಇರುತ್ತಾರೆ. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಸದ್ಯ ಕಾಮಿಡಿ ಶೋವೊಂದರಲ್ಲಿ ಕಲಾವಿದೆಯಾಗಿ ನಟಿಸುತ್ತಿರುವ ನಿವೇದಿತಾ ಗೌಡ, ಈ ನಡುವೆ ಮಿಸ್ಟ್ರೆಸ್ ಇಂಡಿಯಾ ಶೋನಲ್ಲಿ ಭಾಗಿಯಾಗುವ ಕನಸು ಕಂಡಿದ್ದಾರೆ. ಕೇವಲ ಭಾಗಿ ಆಗುವುದು ಮಾತ್ರವಲ್ಲ, ಅದಕ್ಕಾಗಿ ತರಬೇತಿಯನ್ನೂ ಪಡೆದುಕೊಳ್ಳುತ್ತಿದ್ದಾರೆ. ತಾವು ಏನೆಲ್ಲ ತರಬೇತಿ ಪಡೆಯುತ್ತಿದ್ದೇನೆ ಎನ್ನುವುದನ್ನು ಕೇವಲ ನಿವೇದಿತಾ ಗೌಡ ಮಾತ್ರವಲ್ಲ, ಅವರಿಗೆ ತರಬೇತಿ ಕೊಡುತ್ತಿರುವ ಸಂಸ್ಥೆಯು ಕೂಡ ಹಲವು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದೆ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

    ಮೊದ ಮೊದಲು ಆತ್ಮವಿಶ್ವಾಸದ ಕುರಿತು ನಿವೀ ತರಬೇತಿ ಪಡೆದಿದ್ದಾರಂತೆ. ಆನಂತರ, ಸ್ಟೈಲೀಶ್ ಮ್ಯಾನರಿಸಂ, ಕ್ಯಾಟ್ ವಾಕ್ ಹೇಗೆ ಮಾಡೋದು, ಕಾಸ್ಟ್ಯೂಮ್‍ ಸೆನ್ಸ್, ಹೀಗೆ ಹಲವು ಹಂತಗಳಲ್ಲಿ ಈ ಕುರಿತು ತರಬೇತಿ ಪಡೆಯುತ್ತಿದ್ದಾರಂತೆ. ಈ ತರಬೇತಿ ಪಡೆಯುವುದಕ್ಕಾಗಿ ತಾವು ಎಷ್ಟೊಂದು ಕಷ್ಟ ಪಡುತ್ತಿದ್ದೇನೆ ಎನ್ನುವ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ. ಹಾಗಾಗಿ ಫುಲ್ ಕ್ಲಾಸಿನಲ್ಲೇ ದಿನಗಳನ್ನು ಕಳೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ನಾಲ್ಕೈದು ವರ್ಷ ಪ್ರಶಾಂತ್ ನೀಲ್ ತೆಲುಗಿನಲ್ಲೇ ಲಾಕ್ : ಮತ್ತೆ ರಕ್ತದ ಹಿಂದೆ ಬಿದ್ದ ಕೆಜಿಎಫ್ ಡೈರೆಕ್ಟರ್

    ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗುವುದು ಅವರ ಕನಸಾಗಿತ್ತಂತೆ. ಅದಕ್ಕೆ ಈಗ ಅವಕಾಶ ಸಿಕ್ಕಿದೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಇಷ್ಟೊಂದು ತರಬೇತಿ ಪಡೆಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ತಮ್ಮಲ್ಲಿ ಏನೆಲ್ಲ ಬದಲಾವಣೆ ಆಗುತ್ತಿದೆ ಎನ್ನುವ ಕುರಿತು ಅವರು ಆಯಾ ಹಂತದ ಫೋಟೋ ಶೂಟ್ ಕೂಡ ಮಾಡಿಸಿಕೊಳ್ಳುತ್ತಿದ್ದಾರಂತೆ.

  • ಬುಸುಗುಡುತ್ತಿದ್ದ ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಈ ಹಾಡಿಗೆ ಒಂದಾದರು

    ಬುಸುಗುಡುತ್ತಿದ್ದ ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಈ ಹಾಡಿಗೆ ಒಂದಾದರು

    ಸ್ಯಾಂಡಲ್ ವುಡ್ ಸಂಗೀತ ಲೋಕದಲ್ಲಿ  ರಾಪ್ ಹಾಡುಗಳ ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಪ್ರಮುಖರು ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್. ಈ ಇಬ್ಬರು ಒಂದು ಕಾಲದಲ್ಲಿ ಒಟ್ಟಿಗೆ ಕನ್ನಡ ರಾಪ್ ಸಾಂಗ್ ಗಳನ್ನ ಸೃಷ್ಟಿಸಲು ಮುಂತಾದವರು. ಆದ್ರೆ ಕ್ರಮೆಣ ಅವರೊಂದು ದಾರಿ ಇವ್ರೊಂದು ದಾರಿಯಲ್ಲಿ ತಮ್ಮದೆ ಶೈಲಿಯಲ್ಲಿ ರಾಪ್ ಸಾಂಗ್ಸ್  ಕನ್ನಡಿಗರಿಗೆ ಕೊಟ್ಟವರು, ಕನ್ನಡದ ಜೊತೆಗೆ ಸಕಲ ಸಂಗೀತ ಪ್ರಿಯರಿಗೆ ಇಷ್ಟವಾದವರು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಈಗ ಇದೇ ಆಲ್ ಓಕೆ ಮತ್ತು ಚಂದನ್ ಶೆಟ್ಟಿ ಒಟ್ಟಿಗೆ ಸೇರಿ ಒಂದು ಹೊಸ ರಾಪ್ ಸಾಂಗ್ ಅನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ.  ಕಾಣೆಯಾದವರ ಬಗ್ಗೆ ಪ್ರಕಟಣೆಗಳು ಚಿತ್ರಕ್ಕಾಗಿ ಇಬ್ಬರೂ ಈ ಗೀತೆಯನ್ನು ಹಾಡಿದ್ದಾರೆ. ನಿನ್ನೆಯಷ್ಟೇ ಈ ಹಾಡಿನ ರೆಕಾರ್ಡಿಂಗ್‌ ಕಾರ್ಯ ಮುಗಿದಿದೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ಕಾಣೆಯಾದವರ ಬಗ್ಗೆ ಪ್ರಕಟಣೆ ವಿಶಿಷ್ಠ ಟೈಟಲ್ ನಿಂದ ಗಮನ ಸೆಳೆದಿರೋ ಸಿನಿಮಾ ಇದು. ರಾಂಬೋ 2 , ಕೃಷ್ಣ ರುಕ್ಕು ಸಿನಿಮಾ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಜೊತೆಗೆ ಫಸ್ಟ್ ಟೈಮ್ ಆ್ಯಕ್ಟಿಂಗ್ ಮಾಡಿರೋ ಸಿನಿಮಾ.  ಸ್ಯಾಂಡಲ್ ವುಡ್  ನ ಬಹು ಬೇಡಿಕೆಯ ಪೋಷಕ ಕಲಾವಿದರಾದ ರಂಗಾಯಣ ರಘು ,ಆರ್ಮುಗಂ ರವಿಶಂಕರ್, ತಬಲ ನಾಣಿ ಹಾಗೂ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ‘‘ಕಾಣೆಯಾದವರ ಬಗ್ಗೆ ಪ್ರಕಟಣೆ’’ ಸಿನಿಮಾದಲ್ಲಿ ವೆನಿಲಾ ಐಸ್  ಕ್ರೀಮ್ ಮೇಲೆ ಕಾಣೋ ಚರಿಯಂತೆ ಈ ಸಿನಿಮಾದಲ್ಲಿ ಚುಟು ಚುಟು ಬೆಡಗಿ , ಪಠಾಕಿ ಪೋರಿ ಆಶಿಕಾ ರಂಗನಾಥ್ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಒಂದು ಇಂಟರಸ್ಟಿಂಗ್ ಟ್ರೈಲರ್ ಬಿಟ್ಟು ಗಮ ಗಮನ ಸೇಳಿದ್ದಿದ್ದ ಕಾಣೆಯಾದವರ ಬಗ್ಗೆ ಪ್ರಕಟಣೆ ಟೀಮ್ ಈ ಬಾರಿ ಇಬ್ಬರು ಸ್ಟಾರ್ ರಾಪ್ ಸ್ಟಾರ್ಸ್ ಗಳನ್ನ ಒಟ್ಟು ಸೇರಿಸಿ ಹಾಡಿಸಿದ್ದಾರೆ.ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಕ್ರಾಂತಿ ಕುಮಾರ್ ಸಾಹಿತ್ಯದ ಸಿರಿಯಲ್ಲಿ ಒಂದು ಪಾರ್ಟಿ ಸಾಂಗ್ ಅನ್ನ ಆಲ್ ಓಕೆ ಮತ್ತು ಚಂದನ್ ಶೆಟ್ಟಿ ಅವರಿಂದ ಹಾಡಿಸಿದೆ ಚಿತ್ರತಂಡ. ಈ ಹಾಡಿನಲ್ಲಿ ರಂಗಯಾಣ ರಘು , ತಬಲ ನಾಣಿ , ರವಿಶಂಕರ್ ಹಾಗೂ ಚಿಕ್ಕಣ ರಾಪ್ ಸ್ಟಾರ್ ಗಳಂತೆ ಕುಣಿದಿರೋದು ವಿಶೇಷ.. ಈ ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾ ರಿಲೀಸ್ ಸಿದ್ಧವಾಗುತ್ತಿದ್ದು ಮುಂದಿನ ದಿನಗಳಲ್ಲಿ ಒಂದೊಳ್ಳೆ ಡೇಟ್ ನೋಡ್ಕೊಂಡು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.

  • ಪತ್ನಿಯ ಹುಟ್ಟುಹಬ್ಬಕ್ಕೆ ಚಿಕ್ಕಮಗಳೂರಿಗೆ ಕರೆದುಕೊಂಡು ಹೋದ ಚಂದನ್ ಶೆಟ್ಟಿ

    ಪತ್ನಿಯ ಹುಟ್ಟುಹಬ್ಬಕ್ಕೆ ಚಿಕ್ಕಮಗಳೂರಿಗೆ ಕರೆದುಕೊಂಡು ಹೋದ ಚಂದನ್ ಶೆಟ್ಟಿ

    ಚಂದನದ ಗೊಂಬೆ ನಿವೇದಿತಾ ಗೌಡ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಬೆಂಗಳೂರಿಂದ ಚಿಕ್ಕಮಗಳೂರು ಅಂತಾ ಜಾಲಿ ಆಗಿ ರೈಡ್ ಮಾಡುತ್ತಾ ಬರ್ತಡೇ ಸಂಭ್ರಮವನ್ನು ಕುಟುಂಬದ ಜತೆ ನಿವೇದಿತಾ ಆಚರಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ಕನ್ನಡ ಕಿರುತೆರೆಯ ಬಿಗ್ ಬಾಸ್ ಸೀಸನ್ 5ರ ಮೂಲಕ ಬೆಳಕಿಗೆ ಬಂದ ಪ್ರತಿಭೆ ನಿವೇದಿತಾ ಗೌಡ, ದೊಡ್ಮನೆ ಶೋನಲ್ಲಿ ತಮ್ಮ ಮುದ್ದು ಮುದ್ದಾದ ಮಾತಿನಿಂದ ಸಖತ್ ಆಕ್ಟೀವ್ ಆಗಿ ಕಾಣಿಸಿಕೊಂಡು ನಿವೇದಿತಾ ಸಖತ್ ಸೌಂಡ್ ಮಾಡಿದ್ರು. ಬಳಿಕ ರ‍್ಯಾಪರ್ ಚಂದನ್ ಶೆಟ್ಟಿ ಅವರನ್ನು ಮದುವೆ ಆಗಿ ಖುಷಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ ನಿವಿ ತಮ್ಮ ಬರ್ತಡೇಯ ಖುಷಿಯ ಕ್ಷಣವನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಚಂದನ್ ಶೆಟ್ಟಿ ತಮ್ಮ ಪತ್ನಿಯ ಬರ್ತಡೇ ಸೆಲೆಬ್ರೇಶನ್ ಕುಟುಂಬ ಜತೆ ಕಲರ್‌ಫುಲ್ ಡೆಕೋರೇಷನ್ ಜತೆ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಬಳಿಕ ನಿವೇದಿತಾ ಬರ್ತಡೇ ನಿಮಿತ್ತ ಬೆಂಗಳೂರಿನಿಂದ ಚಿಕ್ಕಮಗಳೂರಿನಲ್ಲಿ ಜಾಲಿ ರೈಡ್ ಹೋಗಿದ್ದಾರೆ. ಸದ್ಯ ಈ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ನಿವೇದಿತಾ ಗೌಡ ಸದ್ಯ ಗಿಚ್ಚಿ ಗಿಲಿ ಗಿಲಿ ಶೋ ಜತೆ ಮಿಸೆಸ್ ಇಂಡಿಯಾ ಕಾಂಪಿಟಿಷನ್‌ಗೂ ತಯಾರಿ ಮಾಡಿಕೊಳ್ತಿದ್ದಾರೆ. ಚಂದನ್ ಶೆಟ್ಟಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

  • ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಬಿಗ್ ಬಾಸ್ ನಂತರ ಸಿಲೆಬ್ರಿಟಿಯಾದ ಸಾಮಾನ್ಯ ಹುಡುಗಿ ನಿವೇದಿತಾ ಗೌಡ, ರಾಪರ್ ಚಂದನ್ ಶೆಟ್ಟಿ ಅವರನ್ನು ಮದುವೆಯಾದ ನಂತರ ಇನ್ನೂ ಹೆಚ್ಚು ಸುದ್ದಿ ಮಾಡಿದ್ದರು. ಆನಂತರ ಅವರು ನಟನೆ, ಶೋಗಳಿಗಿಂತಲೂ ಅವರು ಹಾಕುತ್ತಿರುವ ವಿಡಿಯೋ, ಫೋಟೋಗಳಿಂದಾಗಿಯೇ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಮ್ಮಂದಿರ ದಿನದ ವಿಶೇಷ: ತನ್ನ ಪುಟ್ಟ ರಾಜಕುಮಾರನಿಗಾಗಿ ಭಾವನಾತ್ಮಕ ಸಾಲು ಬರೆದ ಕಾಜಲ್ 

    ಇನ್ಸ್ಟ್, ರೀಲ್ಸ್ ಗಳಲ್ಲಿ ನಿತ್ಯವೂ ಅವರು ಒಂದಿಲ್ಲೊಂದು ವಿಡಿಯೋ ಅಪ್ ಡೇಟ್ ಮಾಡುತ್ತಲೇ ಇರುತ್ತಾರೆ. ಅದರಲ್ಲೂ ಪತಿ ಚಂದನ್ ಶೆಟ್ಟಿ ಅವರನ್ನು ಕಿಚಾಯಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿರುವ ನಿವೇದಿತಾ, ಇದೀಗ ಹೊಸ ಜವಾಬ್ದಾರಿಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಮಿಸೆಸ್ ಇಂಡಿಯಾ ಆಗುವ ಕನಸು ಕಾಣುತ್ತಿದ್ದಾರಂತೆ.

    ಮಿಸೆಸ್ ಇಂಡಿಯಾ ಆಗಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಇದೀಗ ಅಂಥದ್ದೇ ಕನಸು ಕಾಣುತ್ತಿದ್ದಾರಂತೆ ನಿವೇದಿತಾ ಗೌಡ. ಅದಕ್ಕಾಗಿ ಅವರು ತರಬೇತಿಯನ್ನು ಪಡೆಯುತ್ತಿದ್ದಾರಂತೆ. ಕ್ಯಾಟ್ ವಾಕ್ ಹೇಗೆ ಮಾಡುವುದು ಎನ್ನುವುದರ ಕುರಿತು ಟ್ರೈನಿಂಗ್ ಪಡೆಯುತ್ತಿದ್ದು, ಆ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮಂದಿರ ದಿನದ ವಿಶೇಷ ಫೋಟೋ ಶೇರ್ ಮಾಡಿದ ಸಿಂಡ್ರೆಲಾ 

    ಮಿಸೆಸ್ ಇಂಡಿಯಾ ಆಗಲು ಏನೆಲ್ಲ ತಯಾರಿ ಬೇಕು, ಹೇಗಿರಬೇಕು? ಯಾವೆಲ್ಲ ತರಬೇತಿ ಪಡೆಯಬೇಕು ಎನ್ನುವುದರ ಕುರಿತು ನುರಿತ ತರಬೇತಿದಾರರಿಂದ ಅವರು ಟ್ರೈನಿಂಗ್ ಪಡೆಯುತ್ತಿದ್ದಾರಂತೆ. ಮುಂದಿನ ದಿನಗಳಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲೂ ನಿವೇದಿತಾ ಭಾಗಿಯಾಗಲಿದ್ದಾರಂತೆ.