Tag: chandana anantha krishna

  • ‘ಭಾವ ತೀರ ಯಾನ’ ಚಿತ್ರದ ಮೂಲಕ ಹಿರಿತೆರೆಗೆ ಕಾಲಿಟ್ಟ ‘ಲಕ್ಷ್ಮಿ ನಿವಾಸ’ ನಟಿ

    ‘ಭಾವ ತೀರ ಯಾನ’ ಚಿತ್ರದ ಮೂಲಕ ಹಿರಿತೆರೆಗೆ ಕಾಲಿಟ್ಟ ‘ಲಕ್ಷ್ಮಿ ನಿವಾಸ’ ನಟಿ

    ‘ಬಿಗ್ ಬಾಸ್ ಸೀಸನ್ 7’ರ (Bigg Boss Kannada 7)  ಸ್ಪರ್ಧಿ ಚಂದನಾ ಅನಂತಕೃಷ್ಣ (Chandana Ananthakrishna) ಪ್ರಸ್ತುತ ‘ಲಕ್ಷ್ಮಿ ನಿವಾಸ’ (Lakshmi Nivasa Serial) ಸೀರಿಯಲ್ ಮೂಲಕ ಮೋಡಿ ಮಾಡ್ತಿದ್ದಾರೆ. ಇದೀಗ ಕಿರುತೆರೆಯಿಂದ ಹಿರಿತೆರೆಗೆ ನಟಿ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ:ರೇವ್ ಪಾರ್ಟಿ ಸಂಕಷ್ಟ- ಹೇಮಾ ಕೂದಲು ಸ್ಯಾಂಪಲ್ ಟೆಸ್ಟ್‌ಗೆ ಮುಂದಾದ ಪೊಲೀಸ್ರು

    ನನ್ನ ಆಸೆನೂ ಒಂದು ದಿನ ಸಮುದ್ರನೇ ಆಗಿತ್ತು, ಆದ್ರೆ ಸಮುದ್ರದ ನೀರು ಕುಡಿಯೋಕೆ ಎಲ್ಲಾಗತ್ತೆ ಹೇಳಿ!? ಎಂದು ಡೈಲಾಗ್ ಮೂಲಕ ‘ಭಾವ ತೀರ ಯಾನ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಟಿಯ ಲುಕ್ ಮತ್ತು ಸಿನಿಮಾದ ಡೈಲಾಗ್ ಪ್ರೇಕ್ಷಕರಿಗೆ ಮೆಚ್ಚುಗೆ ಆಗಿದೆ. ಇದನ್ನೂ ಓದಿ:‘ಚಿಲ್ಲಿ ಚಿಕನ್’ ಟೀಸರ್ ರಿಲೀಸ್ : ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ

     

    View this post on Instagram

     

    A post shared by Aroha Films (@aroha_films)

    ಮಯೂರ ಅಂಬೆಕಲ್ಲು ಮತ್ತು ತೇಜಸ್ ಕಿರಣ್ ಅವರು ನಿರ್ಮಾಣ ಮಾಡುತ್ತಿರುವ ‘ಭಾವ ತೀರ ಯಾನ’ (Bhaava Theera Yaana) ಚಿತ್ರದಲ್ಲಿ ಚಂದನಾ ಲೀಡ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಧೃತಿ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಸದ್ಯ ನಟಿಯ ಮೊದಲ ಸಿನಿಮಾದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

    ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ (Bigg Boss)  ಸೇರಿದಂತೆ ರಿಯಾಲಿಟಿ ಶೋನ ನಿರೂಪಕಿಯಾಗಿಯೂ ಕೂಡ ಗುರುತಿಸಿಕೊಂಡಿದ್ದರು.

  • Bharjari Bachelors ಶೋನಿಂದ ಹೊರಬಂದ ಚಂದನಾ ಅನಂತಕೃಷ್ಣ

    Bharjari Bachelors ಶೋನಿಂದ ಹೊರಬಂದ ಚಂದನಾ ಅನಂತಕೃಷ್ಣ

    ‘ಬಿಗ್ ಬಾಸ್’ (Bigg Boss Kannada) ಬೆಡಗಿ ಚಂದನಾ ಅನಂತಕೃಷ್ಣ (Chandana Ananthakrishna) ಭರ್ಜರಿ ಬ್ಯಾಚುಲರ್ಸ್ (Bharjari Bachelors) ಶೋನಿಂದ ಹೊರಬಂದಿದ್ದಾರೆ. ಜನಪ್ರಿಯ ಶೋನಿಂದ ಸಡನ್ ಆಗಿ ಕ್ವಿಟ್ ಮಾಡಿರೋದ್ದಕ್ಕೆ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು?

    ಡ್ಯಾನ್ಸ್ ಕೋರಿಯೋಗ್ರಾಫರ್ ರುದ್ರಾ (Rudra) ಅವರಿಗೆ ಜೋಡಿಯಾಗಿ ಪ್ರತಿ ವಾರ ವೀಕೆಂಡ್‌ನಲ್ಲಿ ನಿಮ್ಮೆಲ್ಲರೆದುರು ಬಂದು ನಿಮ್ಮನ್ನ ರಂಜಿಸುತ್ತಿದ್ದರು. ಆದರೆ ಧಿಡೀರ್ ಅಂತಾ ಲಾಸ್ಟ್ ವೀಕ್ ಎಪಿಸೋಡ್‌ನಲ್ಲಿ ಚಂದನಾ ಅವರು ಈ ಶೋ ಕ್ವಿಟ್ ಮಾಡುತ್ತೇನೆ ಎಂದು ವೇದಿಕೆ ಮೇಲೆ ಅನೌನ್ಸ್ ಮಾಡಿದ್ದಾರೆ. ಈ ವಾಹಿನಿಯಲ್ಲೇ ಹೊಚ್ಚ ಹೊಸ ಪ್ರಾಜೆಕ್ಟ್‌ ಜೊತೆ ಮತ್ತೆ ನಿಮ್ಮೆಲ್ಲರ ಎದುರು ಬರುತ್ತೇನೆ ಅಂತಾ ಕ್ವಿಟ್ ಮಾಡುವುದರ ಜೊತೆಗೆ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ಕೂಡ ಮಾತನಾಡಿದ್ದಾರೆ.

    ಶೋ ಕ್ವಿಟ್ ಮಾಡ್ತಿದ್ದೀನಿ ಅಂತಾ ನಾನು ಮತ್ತೆ ಬರದೇ ಇರಲ್ಲಾ. ಮತ್ತೆ ನಿಮ್ಮನ್ನ ರಂಜಿಸೋಕೆ ಹೊಸ ಪಾತ್ರದಲ್ಲಿ ಬಂದೇ ಬರುತ್ತೀನಿ ಅದು ಕೂಡ ಅತೀ ಶೀಘ್ರದಲ್ಲೇ ಅಂತಾ ಹೇಳಿದ್ದಾರೆ. ಇದನ್ನೂ ಓದಿ:ಗುರು ರಾಯರ ಸನ್ನಿಧಿಯಲ್ಲಿ ‘ಚಿನ್ನದ ಮಲ್ಲಿಗೆ ಹೂವೇ’ ಟೀಮ್

    ಚಂದನಾ ಅವರು ಈ ಹಿಂದೆ ‘ರಾಜ ರಾಣಿ’ (Raja Rani) ಸೀರಿಯಲ್ ನಾಯಕಿಯಾಗಿ ಗಮನ ಸೆಳೆದಿದ್ದರು. ಬಳಿಕ ಬಿಗ್ ಬಾಸ್ ಶೋ ಆದ್ಮೇಲೆ ಹೂ ಮಳೆ(Hoo Male) ಧಾರಾವಾಹಿಯ ನಾಯಕಿಯಾಗಿ ಪ್ರೇಕ್ಷಕರ ಮನಗೆದ್ದಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖುಷಿಯಿಂದ ಹೋಗಿ ಬನ್ನಿ ರವಿ ಸರ್: ಭೂಮಿ ಶೆಟ್ಟಿ

    ಖುಷಿಯಿಂದ ಹೋಗಿ ಬನ್ನಿ ರವಿ ಸರ್: ಭೂಮಿ ಶೆಟ್ಟಿ

    – ಅಪ್ಪನ ಸ್ಥಾನ ತುಂಬಿದ್ರು ಅಂದ್ರು ಚಂದನಾ

    ಬೆಂಗಳೂರು: ರವಿ ಸರ್ ನಾವು ನಿಮ್ಮನ್ನು ತುಂಬಾನೇ ಇಷ್ಟಪಡುತ್ತೇವೆ. ಖುಷಿಯಿಂದ ಹೋಗಿ ಬನ್ನಿ ಸರ್ ಎಂದು ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

    ರವಿ ಬೆಳಗೆರೆ ನಿಧನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರವಿ ಸರ್ ನಮ್ಮಿಂದ ದೂರ ಹೋಗಿರಬಹುದು. ಆದರೆ ಪುಸ್ತಕಗಳಲ್ಲಿ ಹಾಗೂ ನಮ್ಮಲ್ಲಿ ಅವರು ಯಾವತ್ತೂ ಅಮರರಾಗಿರುತ್ತಾರೆ. ಅವರು ಜೊತೆ ಬಿಗ್ ಬಾಸ್ ಮನೆಯಲ್ಲಿ ಕಳೆದ ಒಂದು ವಾರ ಅದು ಜೀವನಪರ್ಯಂತ ಅನುಭವವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನನಗೇನಾಗುತ್ತೆ, ಎಷ್ಟೋ ವರ್ಷ ಬದುಕಿರುತ್ತೇನೆ ಕಣ್ರೋ ಅಂದಿದ್ರು- ದೀಪಿಕಾ ದಾಸ್ ಕಣ್ಣೀರು

    ಒಂದು ಒಳ್ಳೆಯ ಮೆಮೊರಿ ಕೂಡ ಆಗಿದೆ. ಕೊನೆಗೆ ಉಳಿಯೋದು ಬರೀ ನೆನಪು ಮಾತ್ರ ಅಂತಾರಲ್ವ. ಅದು ಯಾವತ್ತಿಗೂ ನಿಜವಾದ ಮಾತು. ಬೇಜಾರಾಗುತ್ತದೆ, ಆದರೆ ರವಿ ಸರ್ ನಾವು ನಿಮ್ಮನ್ನು ತುಂಬಾನೇ ಇಷ್ಟಪಡುತ್ತೇವೆ. ಖುಷಿಯಿಂದ ಹೋಗಿ ಬನ್ನಿ ಸರ್ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಚಂದನ ಅನಂತಕೃಷ್ಣ ಮಾತನಾಡಿ, ರವಿ ಸರ್ ನಿಧನದ ಬಗ್ಗೆ ಬೆಳಗ್ಗೆ ಗೊತ್ತಾಯ್ತು. ಬಿಗ್ ಬಾಸ್ ಮನೆಯಲ್ಲಿ ಅವರೊಂದಿಗೆ ಕಳೆದ ದಿನಗಳು ನಿಜಕ್ಕೂ ಮರೆಯಲಾದರಂತಹ ದಿನಗಳಾಗಿವೆ. ಅವರಿಂದ ತುಂಬಾ ಕಲಿತಿದ್ದೇವೆ. ಅಲ್ಲದೆ ಸ್ಫೂರ್ತಿ ಪಡೆದವು. ಆ ಒಂದು ವಾರ ಹೇಗೆ ಹೋಯಿತು ಅಂತಾನೇ ನಮಗೆ ಗೊತ್ತಾಗಿಲ್ಲ. ನಾವು ಅದೃಷ್ಟವಂತರು. ಅಲ್ಲಿ ಅವರು ನಮಗೆ ಅಪ್ಪನ ಸ್ಥಾನ ತುಂಬಿದ್ರು ಎಂದು ಭಾವುಕರಾದ್ರು.

    ಡಯಾಬಿಟಿಸ್ ಹಾಗೂ ಕಾಲುಗಳ ನೋವಿನಿಂದ ಬಳಲುತ್ತಿದ್ದ ರವಿ ಬೆಳಗೆರೆ ಅವರು ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಈಗಾಗಲೇ ಅವರ ಮೃತದೇಹವನ್ನು ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಸಂಜೆ ಸಂಜೆ 4 ಗಂಟೆ ಒಳಗೆ ಬನಶಕಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದನ್ನೂ ಓದಿ: ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ: ಯೋಗರಾಜ್ ಭಟ್