Tag: Chandanavana

  • ಚಿರು ಜಾಗ ತುಂಬುವುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ: ಮೇಘನಾ ರಾಜ್

    ಚಿರು ಜಾಗ ತುಂಬುವುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ: ಮೇಘನಾ ರಾಜ್

    – ನಮ್ಮ ಕುಟುಂಬ ಮಾತ್ರವಲ್ಲ ಚಿರುನಾ ಯಾರು ಮರೆಯಲ್ಲ

    ಚಂದನವನದ ಹೆಸರಾಂತ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ ಎರಡು ವರ್ಷ. ಚಿರು ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳು ಇಂದು ಧ್ರುವ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸಿ, ಎರಡನೇ ವರ್ಷದ ಕಾರ್ಯ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದನವನದ ನಟಿ, ಚಿರು ಪತ್ನಿ ಮೇಘನಾ ರಾಜ್ ಭಾವನ್ಮಾಕವಾಗಿ ಮಾತನಾಡಿದ್ದು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.

    ಮೇಘನಾ ಹೇಳಿದ್ದೇನು?
    ನಾನು ಚಿರುನ ಹೇಗೆ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾತಿನಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಅದು ಎಲ್ಲರಿಗೂ ಗೊತ್ತಿದೆ. ಆ ಜಾಗವನ್ನು ಯಾರು ತುಂಬುವುದಕ್ಕೆ ಸಾಧ್ಯವಿಲ್ಲ. ಚಿರು ಜಾಗ ತುಂಬುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ. ಅದು ಅವರಿಂದ ಮಾತ್ರ ಸಾಧ್ಯ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಇಂದು ನಾನು ಒಂದು ವಿಷಯ ಹೇಳುವುದಕ್ಕೆ ಇಷ್ಟಪಡುತ್ತೇನೆ. 2 ವರ್ಷ ಅಲ್ಲ, ಇನ್ನೂ ನೂರಾರು ವರ್ಷ ಹೋದ್ರೂ ಚಿರುನಾ ನಮ್ಮ ಕುಟುಂಬ ಮಾತ್ರವಲ್ಲ, ಯಾರಿಂದಲೂ ಮರೆಯುವುದಕ್ಕೆ ಸಾಧ್ಯವಿಲ್ಲ. ನಾವು ಮಾತ್ರವಲ್ಲ ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಚಿರುನನ್ನು ಮರೆಯಲು ಸಾಧ್ಯವಿಲ್ಲ.

    ಇಂದು ಅವರಿಗೋಸ್ಕರ ಬಂದು, ಅವರನ್ನು ದೇವರ ಸ್ಥಾನದಲ್ಲಿಟ್ಟು ನೋಡುತ್ತಿದ್ದಾರೆ. ನಮ್ಮೆಲ್ಲರಿಗೂ ಅವರು ದೇವರೇ, ಈಗ ನೀವೆಲ್ಲ ಅವರನ್ನು ದೇವರ ಸ್ಥಾನದಲ್ಲಿಟ್ಟು ನೋಡುತ್ತಿದ್ದೀರ. ಈ ದಿನವನ್ನು ಅವರಿಗಾಗಿ ಮೀಸಲಿಡಬೇಕು ಎಂದು ಹಲವು ಜನರು ಬರುತ್ತಿರುವುದಕ್ಕೆ ನನ್ನ ಮನಸ್ಸಿನಲ್ಲಿ ಸಣ್ಣದೊಂದು ಖುಷಿಯಿದೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    meghana raj

    ಅಭಿಮಾನಿಗಳಿಗೆ ಕೇಳಿದ್ದೇನು?
    ಚಿರು ಬಗ್ಗೆ ನಿಮಗೆ ಇರುವಂತಹ ಪ್ರೀತಿ, ರಾಯನ್‍ಗೆ ನೀವು ಕೊಡುವ ಆರ್ಶೀವಾದವನ್ನು ಇದೇ ರೀತಿ ಮುಂದುವರೆಸಬೇಕು. ನಮ್ಮ ಕುಟುಂಬ ಇನ್ನೂ ಮುಂದೆ ಹೋಗುವುದಕ್ಕೆ ನೀವು ನಮಗೆ ಪ್ರೋತ್ಸಾಹ ಕೊಡಬೇಕು. ನಾನು ನಿಮ್ಮನ್ನು ನೋಡಿ ಸ್ಫೂರ್ತಿ ಪಡೆದುಕೊಳ್ಳುತ್ತೇನೆ. ನಾನು ಮುಂದೆ ನುಗ್ಗುವುದಕ್ಕೆ ಶಕ್ತಿಕೊಡಿ ಎಂದು ಕೇಳಿಕೊಳ್ಳುತ್ತೇನೆ. ಚಿರುಗಾಗಿ ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ತಿಳಿಸಿದರು.

  • ಪೊಲೀಸರೊಂದಿಗೆ ಹಾಡಿ ಕುಣಿದ ಹ್ಯಾಟ್ರಿಕ್ ಹೀರೋ : ‘ಟಗರು-2’ ಸುಳಿವು ಕೊಟ್ಟ ಶಿವಣ್ಣ

    ಪೊಲೀಸರೊಂದಿಗೆ ಹಾಡಿ ಕುಣಿದ ಹ್ಯಾಟ್ರಿಕ್ ಹೀರೋ : ‘ಟಗರು-2’ ಸುಳಿವು ಕೊಟ್ಟ ಶಿವಣ್ಣ

    ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೋಮವಾರ(ಇಂದು) ಮಂಗಳೂರಿಗೆ ಬಂದಿದ್ದರು. ದೇವಸ್ಥಾನವೊಂದರ ದರ್ಶನಕ್ಕೆ ಬಂದಿದ್ದ ಶಿವಣ್ಣ ಮಂಗಳೂರು ನಗರ ಪೊಲೀಸರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ನಗರದ ಎಸ್‍ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಶಿವಣ್ಣ ಎಂಟ್ರಿಯಾಗುತ್ತಿದ್ದಂತೆ ‘ಟಗರು’ ಸಿನಿಮಾದ ಹಾಡಿನ ಮೂಲಕ ಶಿವಣ್ಣ ಅವರನ್ನು ಮಂಗಳೂರು ಪೊಲೀಸರು ಸ್ವಾಗತಿಸಿದರು. ಶಿವಣ್ಣನಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದರು. ಸಂವಾದಕ್ಕೂ ಮೊದಲು ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭ ಅಪ್ಪು ನೆನಪು ಮಾಡಿಕೊಂಡ ಶಿವಣ್ಣ ಭಾವುಕರಾದರು. ಬಳಿಕ ಪುನೀತ್ ಬಗ್ಗೆ ನೋವಿನ ನೆನಪು ಮಾಡಿಕೊಳ್ಳುವುದಕ್ಕಿಂತ ಅಪ್ಪುನ ಸೆಲೆಬ್ರೇಟ್ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ನೇತ್ರತ್ವದಲ್ಲಿ ಚುನಾವಣೆ: ನಳಿನ್ 

    ಬಳಿಕ ನಡೆದ ಸಂವಾದದಲ್ಲಿ ಪೊಲೀಸರ ಪ್ರಶ್ನೆಗಳಿಗೆ ಶಿವರಾಜ್‍ಕುಮಾರ್ ಉತ್ತರ ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದಾಗ, ಪೊಲೀಸ್ ಪಾತ್ರದಲ್ಲಿ ‘ಟಗರು-2’ ಸಿನಿಮಾ ಮೂಲಕ ನಾನು ಕಾಣಿಸಿಕೊಳ್ಳಬಹುದು ಎಂದು ಹೇಳಿದರು. ಈ ಮೂಲಕ ಅಭಿಮಾನಿಗಳಿಗೆ ‘ಟಗರು-2’ ಸಿನಿಮಾ ಬರುವ ಸುಳಿವು ನೀಡಿದರು. ಕರಾವಳಿ ಜಿಲ್ಲೆಯ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದ ದಿನಗಳನ್ನು ಮೆಲುಕು ಹಾಕಿದ ಶಿವಣ್ಣ ಮಂಗಳೂರು ನನ್ನ ಫೇವರೇಟ್ ಸ್ಥಳಗಳಲ್ಲಿ ಒಂದು ಎಂದು ಹೇಳಿದರು.

    ಅಪ್ಪುವನ್ನು ನೆನೆದ ಶಿವರಾಜ್‍ಕುಮಾರ್ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ’ ಹಾಡನ್ನು ಹಾಡಿದರು. ಈ ನಡುವೆ ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಶಿವಣ್ಣ ಸಮ್ಮುಖದಲ್ಲಿ ‘ಟಗರು ಬಂತು ಟಗರು’ ಹಾಡನ್ನು ಎನರ್ಜಿಟಿಕ್ ಆಗಿ ಹಾಡಿದ್ರು. ಕಮೀಷನರ್ ಹಾಡು ಹಾಡುತ್ತಿದ್ದಂತೆ ಶಿವಣ್ಣ ಅದೇ ಹಾಡಿಗೆ ಸಖತ್ ಸ್ಟೆಪ್ ಸಹ ಹಾಕಿದರು. ಸಂವಾದದಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಸಹ ಜೊತೆಯಾಗಿ ಸ್ಟೆಪ್ ಹಾಕಿದರು. ಇದನ್ನೂ ಓದಿ: ದೇಶದಲ್ಲಿ ಆಗಲಿ, ಪ್ರಪಂಚವಾಗಲಿ ಎಲ್ಲರಿಗೂ ಮಾತೃ ಭಾಷೆಯೇ ಮೊದಲು: ಶಿವಕುಮಾರ್ ಉದಾಸಿ 

    ಹಾಡು ಹಾಡಿ, ಡ್ಯಾನ್ಸ್ ಮಾಡಿ ಶಿವಣ್ನ ಖಾಕಿಯನ್ನು ರಂಜಿಸಿದರು. ಒಟ್ಟಿನಲ್ಲಿ ಅಲ್ಪಾವಧಿಯಲ್ಲಿ ನಡೆದ ಕಾರ್ಯಕ್ರಮ ಎಲ್ಲರ ಸಂಭ್ರಮ, ಭಾವುಕತೆಗೆ ಸಾಕ್ಷಿಯಾಯಿತು.

  • ಗರ್ಭಿಣಿ ಮಹಿಳೆಯ ಮೊದಲ ಕೆಲಸದ ರಹಸ್ಯ ಬಿಚ್ಚಿಟ್ಟ ನಟಿ ಪ್ರಣಿತಾ

    ಗರ್ಭಿಣಿ ಮಹಿಳೆಯ ಮೊದಲ ಕೆಲಸದ ರಹಸ್ಯ ಬಿಚ್ಚಿಟ್ಟ ನಟಿ ಪ್ರಣಿತಾ

    ಹುಭಾಷಾ ನಟಿ ಪ್ರಣಿತಾ ಸುಭಾಷ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಸಿನಿಮಾಗಿಂತ ಹೆಚ್ಚು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ ನಡುವೆ ಸೋಮವಾರ ಪ್ರಣಿತಾ ಸೋಶಿಯಲ್ ಮೀಡಿಯಾದಲ್ಲಿ ತಾವು ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಸುದ್ದಿ ತಿಳಿದ ಅಭಿಮಾನಿಗಳು, ಸೆಲೆಬ್ರಿಟಿಗಳು ಫುಲ್ ಖುಷ್ ಆಗಿ ಕಾಮೆಂಟ್ ಮಾಡಿದ್ದರು. ಅಲ್ಲದೇ ಈ ನಟಿ ಮಹಿಳೆಯರು ಗರ್ಭಿಣಿ ಎಂದು ತಿಳಿದ ತಕ್ಷಣ ಏನು ಮಾಡ್ತಾರೆ ಗೊತ್ತಾ ಎಂಬುದು ಫೋಟೋ ಶೇರ್ ಮಾಡುವ ಮೂಲಕ ತಿಳಿಸಿದ್ದಾರೆ.

    ಇನ್ಸ್ಟಾಗ್ರಾಮ್‌ನಲ್ಲಿ ತಮ್ಮ ಮೊದಲ ಬೇಬಿ ಬೊಮ್ಬ್ ಫೋಟೋ ಶೇರ್ ಮಾಡಿದ ಈ ನಟಿ, ಪ್ರೆಗ್ನೆಂಟ್ ಎಂದು ತಿಳಿದಾಗ ನೀವು ಮಾಡುವ ಮೊದಲ ಕೆಲಸವೆಂದರೆ, ನೀವು ಪ್ರತಿ ಬಾರಿ ಕನ್ನಡಿಯಲ್ಲಿ ನಿಮ್ಮ ಹೊಟ್ಟೆಯನ್ನು ನೋಡಿಕೊಳ್ಳುವುದು ಎಂದು ಬರೆದು ವಿಶೇಷ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋದಲ್ಲಿ ಪ್ರಣಿತಾ ಕನ್ನಡಿ ಮುಂದೆ ನಿಂತುಕೊಂಡು ತಮ್ಮ ಬೇಬಿ ಬಂಪ್ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ಪ್ರಣೀತಾ ತಮ್ಮ ತಾಯ್ತನದ ಆನಂದ ಸವಿಯಲು ಎಷ್ಟು ಕಾತುರದಿಂದ ಕಾಯುತ್ತಿದ್ದಾರೆ ಎಂಬುದು ತಿಳಿಯುತ್ತೆ. ಇದನ್ನೂ ಓದಿ: ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್ 


    ಫೋಟೋ ನೋಡಿದ ಅಭಿಮಾನಿಗಳು, ಫೋಟೋಗಳನ್ನು ಹೆಚ್ಚು ಶೇರ್ ಮಾಡಬೇಡಿ ಮೇಡಮ್ ದೃಷ್ಟಿ ತಗಲುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ.

    ಸೋಮವಾರ ಈ ನಟಿ, ನನ್ನ ಪತಿಯ 34ನೇ ಹುಟ್ಟುಹಬ್ಬದಂದು ಒಂದು ವಿಶೇಷ ಸುದ್ದಿಯನ್ನು ಹೇಳುತ್ತಿದ್ದೇನೆ. ನಮ್ಮ ಮನೆಗೆ ದೇವರ ಆರ್ಶಿವಾದದಿಂದ ವಿಶೇಷ ಅತಿಥಿಯ ಆಗಮನವಾಗುತ್ತಿದೆ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ನಲ್ಲಿ ಪ್ರಣೀತಾ ಅವರು ತಮ್ಮ ಪತಿ ನಿತಿನ್ ರಾಜ್ ಮೇಲೆ ಕುಳಿತುಕೊಂಡು ನಮ್ಮ ಪ್ರೆಗ್ನೆನ್ಸಿ ರಿಪೋರ್ಟ್ ತೋರಿಸಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿತ್ತು.

    2021ರ ಮೇ 30ರಂದು ಪ್ರಣಿತಾ ಮತ್ತು ನಿತಿನ್ ತಮ್ಮ ಅತ್ಯಾಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈಗ ಹೊಸದೊಂದು ಜೀವದ ಆಗಮನ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ರಮ್ಯಾ ಭೇಟಿ ಮಾಡಿದ ಮತ್ತೋರ್ವ ನಟಿ : ಸಂಜೆಗೆ ಧನ್ಯವಾದ ಎಂದ ಅಮೃತಾ 

  • ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್

    ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆನ್ಸಿ ರಿಪೋರ್ಟ್

    ಹುಭಾಷಾ ನಟಿ ಪ್ರಣೀತಾ ಸುಭಾಷ್ 2021ರ ಮೇ 30ರಂದು ಅತ್ಯಾಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈ ಸಂತಸದ ವಿಚಾರವನ್ನು ಕೊರೊನಾ ಕಾರಣದಿಂದ ಅಭಿಮಾನಿಗಳಿಗೆ ತಡವಾಗಿ ತಿಳಿಸಿದ್ದರು. ಈಗ ತಾವು ಗರ್ಭಿಣಿಯಾಗುತ್ತಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

    ಈ ಕುರಿತು ಪ್ರಣೀತಾ ಇನ್‍ಸ್ಟಾಗ್ರಾಮ್‍ನಲ್ಲಿ, ನನ್ನ ಪತಿಯ 34ನೇ ಹುಟ್ಟುಹಬ್ಬದಂದು ಒಂದು ವಿಶೇಷ ಸುದ್ದಿಯನ್ನು ಹೇಳುತ್ತಿದ್ದೇನೆ. ನಮ್ಮ ಮನೆಗೆ ಏಂಜಲ್ಸ್ ಬರುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‍ನಲ್ಲಿ ಪ್ರಣೀತಾ ಅವರು ತಮ್ಮ ಪತಿ ನಿತಿನ್ ರಾಜ್ ಜೊತೆ ಕುಳಿತುಕೊಂಡು ನಮ್ಮ ಪ್ರೆಗ್ನೆನ್ಸಿ ರಿಪೋರ್ಟ್ ತೋರಿಸಿದ್ದಾರೆ. ಈ ಫೋಟೋದಲ್ಲಿ ಪ್ರಣೀತಾ ಕ್ಯೂಟ್ ಆಗಿ ಕಾಣಿಸುತ್ತಿದ್ದಾರೆ. ಇದನ್ನೂ ಓದಿ: ಆಲಿಯಾ, ರಣಬೀರ್ ಮದುವೆ: 200 ಬೌನ್ಸರ್ ನೇಮಕ, ಹೊಸ ಮನೆ ಸೇರಿ RK ಸ್ಟುಡಿಯೋ ಫುಲ್ ಲಕಲಕ

    ಈ ಹಿಂದೆ ಪ್ರಣೀತಾ ತಮ್ಮ ಮದುವೆ ವಿಷಯವನ್ನು ತಡವಾಗಿ ತಿಳಿಸಿದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದ ಈ ನಟಿ, ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮದುವೆಗೆ ಯಾರನ್ನು ಆಮಂತ್ರಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಲ್ಲದೆ ಮದುವೆಗೆ ಒಂದು ದಿನ ಮುಂಚೆಯಷ್ಟೇ ದಿನ ನಿಗದಿ ಮಾಡಿರುವುದಾಗಿತ್ತು ಎಂದು ಬರೆದು ಮದುವೆ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು.

    ಈ ಫೋಟೋ ನೋಡಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೆಲವು ಅಭಿಮಾನಿಗಳು ಪ್ರಣೀತಾಗೆ ಟಿಪ್ಸ್‌ಗಳನ್ನು ಕೊಡುತ್ತಿದ್ದಾರೆ. ಇದನ್ನೂ ಓದಿ:  ಅಪ್ಪು ಮನೆಗೆ ಭೇಟಿ ಕೊಟ್ಟ ಟಾಲಿವುಡ್ ಕಾಮಿಡಿ ಸ್ಟಾರ್ ಬ್ರಹ್ಮಾನಂದಂ, ಅಲಿ 

  • ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’  ಟೀಸರ್ ಏಪ್ರಿಲ್ 2 ರಂದು ರಿಲೀಸ್ ಆಗುತ್ತಿದೆ.

    ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬೀನೇಷನ್‍ನಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ವಿಕ್ರಾಂತ್ ರೋಣ’. ಈ ಸಿನಿಮಾದ ಅಪ್ಡೇಟ್‍ಗಾಗಿ ಅಭಿಮಾನಿಗಳು ಕಾಯುತ್ತಿದ್ದು, ಸ್ಟಾರ್ ಜೋಡಿಯ ಸಿನಿಮಾ ಹೇಗೆ ಇರುತ್ತೆ ಎಂದು ಉತ್ಸಾಹದಲ್ಲಿ ಇದ್ದಾರೆ. ಮಂಗಳವಾರ(ಇಂದು) ಅನೂಪ್ ಭಂಡಾರಿ ಅವರು ‘ವಿಕ್ರಾಂತ್ ರೋಣ’ ಬಗ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಟ್ವಿಟ್ಟರ್‍ನಲ್ಲಿ ಅನೂಪ್, ಅಂನೌನ್ಸಿನ್ಗ್ ದಿ ಅರೈವಲ್ ಆಫ್ ದಿ ಡೆವಿಲ್! ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಏಪ್ರಿಲ್ 2ರಂದು 9:55ಕ್ಕೆ ರಿಲೀಸ್ ಆಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಒತ್ತಡಕ್ಕೆ ಕೊನೆಗೂ ಮಣಿದ ‘ವಿಕ್ರಾಂತ್ ರೋಣ’ :ಏಪ್ರಿಲ್ ಮೊದಲ ವಾರದಲ್ಲಿ ಟೀಸರ್

    ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅಭಿಮಾನಿಗಳು ರೀ-ಟ್ವೀಟ್ ಮಾಡಿದ್ದು, ನಮ್ಮ ಬಾಸ್, ನಮ್ಮ ಕಿಚ್ಚ ಎಂದು ಬರೆದುಕೊಂಡು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಿಚ್ಚನ ಅಪ್ಡೇಟ್‍ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಭಂಡಾರಿ ಅವರ ಟ್ವೀಟ್ ನೋಡಿ ಫುಲ್ ಖುಷ್ ಆಗಿದ್ದಾರೆ. ಇದನ್ನು ಕಿಚ್ಚ ಸಹ ಶೇರ್ ಮಾಡಿಕೊಂಡಿದ್ದಾರೆ. ಕಿಚ್ಚನನ್ನು ತೆರೆಮೇಲೆ ನೋಡಬೇಕೆಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತುಕೊಂಡಿದ್ದಾರೆ.

    ‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದರಿಂದ, ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೇ ಈ ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ತಯಾರಾಗಿರುವುದು ಮತ್ತೊಂದು ವಿಶೇಷ. ಏಕಕಾಲಕ್ಕೆ ಹಾಲಿವುಡ್ ಮತ್ತು ಭಾರತೀಯ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

  • ಉಪ್ಪಿ, ರಾಮ್ ಗೋಪಾಲ್ ವರ್ಮಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿದೆ ಭೂಗತಲೋಕ

    ಉಪ್ಪಿ, ರಾಮ್ ಗೋಪಾಲ್ ವರ್ಮಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿದೆ ಭೂಗತಲೋಕ

    ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾಗೆ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಉಪ್ಪಿ ಮತ್ತು ವರ್ಮಾ ಇಬ್ಬರು ಭಿನ್ನವಾಗಿ ಸಿನಿಮಾ ತೋರಿಸುವುದಲ್ಲಿ ಫೇಮಸ್. ಈಗ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿಬರುತ್ತಿರುವುದಕ್ಕೆ ಸಿನಿರಂಗದಲ್ಲಿ ಭಾರೀ ಸದ್ದು ಮಾಡಿದೆ. ಈ ಕುರಿತು ವರ್ಮಾ ಅವರು ಖುದ್ದಾಗಿ ಅನೌನ್ಸ್ ಮಾಡಿದ್ದಾರೆ.

    ರಾಮ್ ಗೋಪಾಲ್ ವರ್ಮಾ ತಮ್ಮ ಟ್ವಟ್ಟರ್‌ನಲ್ಲಿ, ನನ್ನ ಮುಂದಿನ ಸಿನಿಮಾ ಉಪೇಂದ್ರ ಜೊತೆ ಮಾಡುತ್ತಿದ್ದೇನೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ಭಾರತದ ಕ್ರಿಮಿನಲ್ ಇತಿಹಾಸದಲ್ಲಿ ವಿಸ್ಮಯಕಾರಿಯಾಗಿ ವಿಶಿಷ್ಟವಾದ ದರೋಡೆಕೋರನನ್ನು ಆಧರಿಸಿ ‘ಆರ್’ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ಮಾಡುತ್ತಿದ್ದೇವೆ. ಇದನ್ನು ಎ ಸ್ವ್ಕೇರ್ ಪ್ರೋಡಕ್ಷನ್ಸ್ ನಿರ್ಮಿಸಿದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    ರಾಮ್ ಗೋಪಾಲ್ ವರ್ಮಾ ಅವರು ಶೇರ್ ಮಾಡಿರುವ ‘ಆರ್’ ಸಿನಿಮಾದ ಒಂದೆರಡು ಗ್ಲಿಂಪ್‌ಗಳನ್ನು ಹಾಕಿದ್ದು, ಅದರಲ್ಲಿ ಉಪ್ಪಿ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೀಡಿಯೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ವೀಡಿಯೋದಲ್ಲಿ, ಉಪೇಂದ್ರ ಚಾಕುವಿನಿಂದ ತನ್ನ ಬೆರಳುಗಳನ್ನು ಹುಜ್ಜುವುದು, ನಂತರ ಅದನ್ನು ಚುಂಬಿಸುವುದನ್ನು ಕಾಣಬಹುದು. ಈ ಗ್ಲಿಂಪ್‍ಗಳು ವಿಶಿಷ್ಟವಾದ ಖಉಗಿ ಶೈಲಿಯಲ್ಲಿವೆ.

    ಈ ಸಿನಿಮಾದಲ್ಲಿ ಉಪೇಂದ್ರ ಅವರು ಬೆಂಗಳೂರಿನಲ್ಲಿ ಮಾತ್ರವಲ್ಲದೆ ಮುಂಬೈನ ಮಾಫಿಯಾ ಮತ್ತು ದುಬೈನ ಡಿ ಕಂಪನಿಯನ್ನು ಹೆದರಿಸುವ ಭಯಾನಕ ದರೋಡೆಕೋರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತದ ಕ್ರಿಮಿನಲ್ ಇತಿಹಾಸದಲ್ಲಿ ‘ಆರ್ ಡೇರ್‍ಡೆವಿಲ್’ ಅತ್ಯಂತ ಯಶಸ್ವಿ ದರೋಡೆಕೋರ.

    Why Ram Gopal Varma would not wish his own mom on Mother's Day: 'Gave birth to a good for nothing bum like me' | Bollywood - Hindustan Times

    ಉಪ್ಪಿ ಮತ್ತು ರಾಮ್ ಗೋಪಾಲ್ ವರ್ಮಾ ಅವರ ಕಾಂಬಿನೇಷನ್ ಮೂಡಿಬರುತ್ತಿರುವ ಈ ಸಿನಿಮಾಗೆ ‘ಆರ್’ ಎಂದು ಹೆಸರು ಕೊಟ್ಟಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಈ ಸ್ಟಾರ್ ಜೋಡಿ ಸಿನಿರಸಿಕರನ್ನು ಯಾವ ರೀತಿ ಕಮಾಲ್ ಮಾಡುತ್ತೆ ಎಂಬುದನ್ನು ಕಾದು ನೋಡಬೇಕು. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

  • ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಚಂದನವನದ ಸಿಂಡ್ರೆಲಾ ರಾಧಿಕಾ ಪಂಡಿತ್ ತಮ್ಮ ಅದ್ಭುತ ನಟನೇ ಜೊತೆಗೆ ಸರಳತೆಯಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಾರೆ. ಪತಿ ರಾಕಿಂಗ್ ಸ್ಟಾರ್ ಯಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಸಿನಿಮಾದಲ್ಲಿ ಅಷ್ಟು ಕಾಣಿಸಿಕೊಳ್ಳದಿಂದ್ರೂ, ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಯಾವಾಗಲೂ ಕನೆಕ್ಟ್ ಆಗಿರುತ್ತಾರೆ. ಮದುವೆಯಾದ ನಂತರ ಇಬ್ಬರು ಸ್ಟಾರ್ ಕಪಲ್‍ಗಳು ಸಿನಿಮಾ ಜೊತೆಗೆ ಜನಸಾಮಾನ್ಯರಿಗೆ ಸಹಾಯವಾಗುವ ಕೆಲಸಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ಇಂದು ಸಹ ರಾಧಿಕಾ ಎದೆಹಾಲನ್ನು ದಾನ ಮಾಡುವುದು ಎಷ್ಟು ಮುಖ್ಯ ಎಂಬುದನ್ನು ಅಭಿಮಾನಿಗಳಿಗೆ ತಿಳಿಸಿದ್ದು, ಎದೆಹಾಲು ದಾನ ಮಾಡಿ ಎಂದು ಸಂದೇಶ ಕೊಟ್ಟಿದ್ದಾರೆ.

    ಎದೆಹಾಲು ಮಕ್ಕಳಿಗೆ ಎಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂಬುದನ್ನು ಕುರಿತು ರಾಧಿಕಾ ವೀಡಿಯೋ ಮಾಡಿದ್ದು, ತಮ್ಮ ಇನ್‍ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದರು. ಈ ವೀಡಿಯೋವನ್ನು ವೈದ್ಯರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ಮಕ್ಕಳಿಗೆ ಎದೆ ಹಾಲು ತುಂಬಾನೆ ಮುಖ್ಯ
    ಈ ವೀಡಿಯೋದಲ್ಲಿ ರಾಧಿಕಾ, ಜೀವನ ಅತ್ಯಮೂಲ್ಯ ಉಡುಗೊರೆಗಳಲ್ಲಿ ಎದೆಹಾಲು ಕೂಡ ಒಂದು. ಎದೆಹಾಲಿನಲ್ಲಿ ಇರುವ ಅಂಶಗಳನ್ನು ಮತ್ಯಾವುದಕ್ಕೂ ಹೋಲಿಸಲು ಸಾಧ್ಯವಿಲ್ಲ. ಆಗಷ್ಟೇ ಹುಟ್ಟಿರುವ ಮಕ್ಕಳಿಗೆ ಎದೆ ಹಾಲು ತುಂಬಾನೆ ಮುಖ್ಯ. ಪೋಷಕಾಂಶಗಳು ಹಾಗೂ ರೋಗ ನಿರೋಧಕ ಶಕ್ತಿಯ ಗುಣಗಳು ಈ ಎದೆ ಹಾಲಿನಲ್ಲಿ ಮಾತ್ರ ಇದೆ ಎಂದು ತಿಳಿಸಿದ್ದಾರೆ.

    ಎದೆ ಹಾಲು ದಾನ ಮಾಡಿ
    ಎಳೆ ಮಕ್ಕಳಿಗೆ ಎದೆಹಾಲು ತುಂಬಾನೇ ಮುಖ್ಯ. ಭಾರತದಲ್ಲಿ ಅದೆಷ್ಟೋ ಮಕ್ಕಳು ಈ ಎದೆ ಹಾಲು ಸಿಗದೆ ವಂಚಿತರಾಗುತ್ತಾರೆ. ಇಂತಹವರಿಗಾಗಿ ಎದೆ ಹಾಲು ದಾನ ಮಾಡಿ ಎಂದು ಹೇಳಿದ್ದಾರೆ. ಅಂತಹ ಮಕ್ಕಳಿಗೆ ಸಹಾಯ ಮಾಡಲಿ ಅಂತಾನೇ ಮಿಲ್ಕ್ ಬ್ಯಾಂಕ್ ಶುರುಮಾಡಿದ್ದಾರೆ ಎಂದು ಮಿಲ್ಕ್ ಬ್ಯಾಂಕ್ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

    ಯಾವ ತಾಯಂದಿರಲ್ಲಿ ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಇದೆ. ಯಾವ ತಾಯಂದಿರು ಎದೆಹಾಲನ್ನು ದಾನ ಮಾಡಬಹುದು ಅಂತಹವರಿಂದ ತುಂಬಾನೇ ಸಹಾಯ ಆಗುತ್ತೆ. ನಿಮ್ಮ ಜಿಲ್ಲೆಗಳಲ್ಲಿ ಈ ಮಿಲ್ಕ್ ಬ್ಯಾಂಕ್ ಇರುತ್ತೆ. ಅಲ್ಲಿ ಬಂದು ನೀವು ಎದೆಹಾಲು ದಾನ ಮಾಡಿದರೆ, ಅದೆಷ್ಟೋ ಮಕ್ಕಳಿಗೆ ಸಹಾಯ ಆಗುತ್ತೆ ಎಂದು ಮಹತ್ವದ ಮಾಹಿತಿಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’ ‌

    ‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಎಂಬ ಉದ್ದೇಶದಿಂದ ಮಾರ್ಚ್ 27 ರಂದು ಎದೆ ಹಾಲು ದಾನದ ಬಗ್ಗೆ ಮಾಹಿತಿ ನೀಡಲು ಬೆಂಗಳೂರಿನಲ್ಲಿ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸುವಂತೆ ವೀಡಿಯೋ ಮೂಲಕ ಅಭಿಮಾನಿಗಳಿಗೆ ರಾಧಿಕಾ ಸಂದೇಶ ಕೊಟ್ಟಿದ್ದಾರೆ.

  • ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್

    ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್

    ಚಂದನವನದ ಕೃಷ್ಣ ಅಜಯ್ ರಾವ್ ‘ಲವ್ ಯೂ ರಚ್ಚು’ ಸಿನಿಮಾದಲ್ಲಿ ಪ್ರೇಕ್ಷಕರಿಗೆ ಕೊನೆಯಬಾರಿ ಬೆಳ್ಳಿಪರದೆ ಮೇಲೆ ಕಾಣಿಸಿಕೊಂಡು ರಂಜಿಸಿದ್ದರು. ಈ ಸಿನಿಮಾ ನಂತರ ಅಜಯ್ ತಮ್ಮ ಮುಂದಿನ ಪ್ರಾಜೇಕ್ಟ್ ಬಗ್ಗೆ ಯಾವುದೇ ಮಾಹಿತಿ ಬಿಟ್ಟಿರಲಿಲ್ಲ. ಅಭಿಮಾನಿಗಳಿಗೆ ಅಚ್ಚರಿ ಮೂಡಿಸಲು ತಮ್ಮ ಎಲ್ಲ ಕೆಲಸಗಳನ್ನು ಮೌನವಾಗಿ ಮಾಡುತ್ತಿದ್ದರು. ಈ ಹಿನ್ನೆಲೆ ಅಜಯ್ ತಮ್ಮ ಕೈಯಲ್ಲಿರುವ ಎರಡು ಸಿನಿಮಾ ಮುಗಿದ ನಂತರ ಸಿನಿಲೋಕದಲ್ಲಿ ಹೊಸಜರ್ನಿ ಪ್ರಾರಂಭ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

    Love u rachu / ಮೂಹೂರ್ತ muhurtha exclusive /rachitha ram /ajay rao / gurudeshpande /shankar s raj... - YouTube

    ಅಜಯ್‍ಗೆ ನಟನೆ ಜೊತೆ ನಿರ್ದೇಶನದಲ್ಲಿಯೂ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ತಮ್ಮ ಚೊಚ್ಚಲ ನಿರ್ದೇಶನ ಸಿನಿಮಾವನ್ನು ಈ ವರ್ಷದ ಕೊನೆಯಲ್ಲಿ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಪ್ರಸ್ತುತ ಎರಡು ಹೊಸ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅಜಯ್ ಈ ಸಿನಿಮಾ ಸಂಪೂರ್ಣ ಮುಗಿದ ತಕ್ಷಣ ತಮ್ಮ ನಿರ್ದೇಶದ ಮೊದಲ ಸಿನಿಮಾ ಕೈಗೆತ್ತಿಕೊಳ್ಳಲು ಸಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಹಾಲಿವುಡ್ ಖ್ಯಾತ ನಟಿ ಜೊತೆ ಸೆಕ್ಸ್ ಮಾಡಿದ್ದೇನೆ ಎಂಬ ಹೇಳಿಕೆಗೆ 50 ಲಕ್ಷ ಆಫರ್: ಖ್ಯಾತ ನಟ ಬಿಚ್ಚಿಟ್ಟ ರಹಸ್ಯ

    ಈ ಕುರಿತು ಪ್ರತಿಕ್ರಿಯಿಸಿದ ಅಜಯ್, ಮಂಜು ಸ್ವರಾಜ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ. ಈ ಸಿನಿಮಾ ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರವು ರೆಟ್ರೋ ಲವ್ ಸ್ಟೋರಿಯಾಗಿದ್ದು, ಕಾದಂಬರಿ ಆಧರಿತ ಸಿನಿಮಾವಾಗಿದೆ. ಇದರ ಜೊತೆಗೆ ಇನ್ನೊಂದು ಒಳ್ಳೆ ಸ್ಕ್ರಿಪ್ಟ್‍ಗಾಗಿ ಹುಡುಕುತ್ತಿದ್ದೇನೆ. ನನ್ನ ಟೀಮ್ ಸಹ ಇದಕ್ಕಾಗಿ ಸಾಕಷ್ಟು ಕೆಲಸಮಾಡುತ್ತಿದೆ. ಮಂಜು ಅವರ ಸಿನಿಮಾ ಮುಗಿದ ತಕ್ಷಣ ಈ ಸಿನಿಮಾದ ಕೆಲಸ ಶುರು ಮಾಡುವ ಯೋಚನೆ ಇದೆ. ಈ ಎರಡನೇ ಸಿನಿಮಾ ಮುಗಿಸಿದ ನಂತರ, ನಾನು ಅಂತಿಮವಾಗಿ ನಿರ್ದೇಶಕನಾಗಿ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತೇನೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

    ನನ್ನ ನಟನೆಯ ಎಲ್ಲ ಸಿನಿಮಾಗಳ ಚಿತ್ರೀಕರಣ ಮುಗಿದ ನಂತರವಷ್ಟೆ ನಿರ್ದೇಶದ ಕಡೆ ಹೆಚ್ಚು ಯೋಚನೆ ಮಾಡಲು ಸಾಧ್ಯವಾಗುತ್ತೆ. ಅದಕ್ಕಾಗಿಯೇ ನಾನು ಕಥೆಯನ್ನು ಬರೆಯುತ್ತಿದ್ದೇನೆ. ಶೀಘ್ರದಲ್ಲೇ ಸ್ಕ್ರಿಪ್ಟ್ ಸಿದ್ಧಪಡಿಸುವ ಭರವಸೆ ಇದೆ. ವರ್ಷದ ಅಂತ್ಯದಲ್ಲಿ ನನ್ನ ನಿರ್ದೇಶನದ ಕೆಲಸವನ್ನು ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ಟೇಜ್‌ನತ್ತ ನುಗ್ಗಿದ ಫ್ಯಾನ್ಸ್‌ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ- RRR ಪ್ರೀ-ರಿಲೀಸ್‌ ಇವೆಂಟ್‌ ತಡವಾಗಿ ಆರಂಭ 

  • ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್

    ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್

    ನ್ನಡ ಚಿತ್ರರಂಗವೇ ಎಂದೂ ಮರೆಯಲು ಅಸಾಧ್ಯವಾದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿನಾಯದ ಸಿನಿಮಾ ಮತ್ತೆ ಚಂದನವನದಲ್ಲಿ ರೀ-ರಿಲೀಸ್ ಆಗುತ್ತಿದೆ. ಕನ್ನಡ ಸಿನಿಲೋಕದಲ್ಲೇ ವಿಜೃಂಭಿಸಿದ ‘ಕೃಷ್ಣ ನೀ ಬೇಗನೆ ನಾರೋ’ ಸಿನಿಮಾ ಮತ್ತೆ ರಿಲೀಸ್ ಆಗುತ್ತಿದೆ. ಈ ಸುದ್ದಿ ಕೇಳಿ ದಾದಾನ ಅಭಿಮಾನಿಗಳು ಖುಷ್ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.

    ಆಂಗ್ರಿ ಮ್ಯಾನ್ ಆಗಿಯೇ ಸಿನಿಲೋಕಕ್ಕೆ ಕಾಲಿಟ್ಟ ಸಂಪತ್ ಕುಮಾರ್ ನಂತರ ಇಡೀ ಸಿನಿರಸಿಕರ ಮನದಲ್ಲಿ ದಾದಾ ಆಗಿ ಮೆರೆಯುತ್ತಿದ್ದಾರೆ. ವಿಷ್ಣು ಅವರ ಸೃಜನಶೀಲ ನಡೆ, ಕನ್ನಡ ಸಿನಿಮಾರಂಗಕ್ಕೆ ಅವರು ಕೊಟ್ಟ ಕೊಡುಗೆಯನ್ನು ಯಾರು ಮರೆಯುವಂತಿಲ್ಲ. ಇವರು ಮಾಡಿದ ಆಲ್ ಮೋಸ್ಟ್ ಸಿನಿಮಾಗಳು ಸಿನಿಲೋಕದಲ್ಲಿ ಹೊಸದೊಂದು ಅಲೆಯನ್ನು ಸೃಷ್ಟಿ ಮಾಡಿತ್ತು.

    ವಿಷ್ಣು ಸಿನಿಮಾಗೆ ಮತ್ತೆ ಬಿಡುಗಡೆ ಭಾಗ್ಯ

    ಅದೇ ರೀತಿ 1986ರಲ್ಲಿ ತೆರೆಕಡ ‘ಕೃಷ್ಣ ನೀ ಬೇಗನೆ ಬಾರೋ’ ಸಿನಿಮಾ ಮತ್ತೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈ ಸಿನಿಮಾವನ್ನು ಭಾರ್ಗವ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾ 1983ರಲ್ಲಿ ಹಿಂದಿಯಲ್ಲಿ ರಿಲೀಸ್ ಆದ ‘ಸೌತೇನ್’ ಸಿನಿಮಾದ ರಿಮೇಕ್ ಆಗಿದ್ದರೂ, ‘ಕೃಷ್ಣ ನೀ ಬೇಗನೆ ಬಾರೋ’ ಸಿನಿಮಾದಲ್ಲಿನ ಕಲಾವಿದರ ಅಭಿನಾಯ ಮೂಲ ನಟರನ್ನು ಮರೆಸಿತ್ತು. ಹಿಂದಿಯಾ ‘ಸೌತೇನ್’ ನಲ್ಲಿಯೂ ದಿಗ್ಗಜರೇ ನಟಿಸಿದ್ದರೂ, ಕನ್ನಡದ ಕಲಾವಿದರೂ ಕಮಾಲ್ ಮಾಡಿದ್ದರು.

    ಈ ಸಿನಿಮಾದಲ್ಲಿ ವಿಷ್ಣುವರ್ಧನ್, ಭವ್ಯ, ಕಿಮ್ ಮತ್ತು ಮುಖ್ಯಮಂತ್ರಿ ಚಂದ್ರು ನಟಿಸಿದ್ದರು. ಅಲ್ಲದೇ ಬಾಕ್ಸಾಫೀಸ್‍ನಲ್ಲಿ ಸೂಪರ್ ಹಿಟ್ ಆಗಿದ್ದು, ಕನ್ನಡ ಕಲಾವಿದರ ಬಗ್ಗೆ ಇಡೀ ಭಾರತೀಯ ಚಿತ್ರರಂಗ ಮಾತನಾಡುವಂತೆ ಮಾಡಿತ್ತು. ಅದಕ್ಕೆ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲಾಗುತ್ತಿದೆ.

    10 Interesting Facts about Vishnuvardhan – DADA of Kannada Cinema - MetroSaga

    ಹೊಸ ರೂಪದಲ್ಲಿ ಕೃಷ್ಣ!
    ‘ಕೃಷ್ಣ ನೀ ಬೇಗನೆ ಬಾರೋ’ ಸಿನಿಮಾವನ್ನು ಮುನಿರಾಜು ಅವರು ರೀ-ರಿಲೀಸ್ ಮಾಡುತ್ತಿದ್ದ, ಈ ಸಿನಿಮಾಗೆ ಹೊಸ ರೂಪವನ್ನು ನೀಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಕೃಷ್ಣ ನೀ ಬೇಗನೆ ಬಾರೋ’ ಸಿನಿಮಾವನ್ನು ನಾನು ಸಿನಿಮಾಸ್ಕೋಪ್, 7.1 ಸೌಂಡ್ ಎಫೆಕ್ಟ್, ಡಿ ಐ, ಕಲರಿಂಗ್ ಎಲ್ಲವನ್ನು ಮಾಡಿಸಿ, ಹೊಚ್ಚ ಹೊಸ ಸಿನಿಮಾದ ಹಾಗೆ ಮಾಡಿದ್ದೇನೆ. ಆಗ ಈ ಸಿನಿಮಾ ಈಸ್ಟ್‍ಮನ್ ಕಲರ್ ಇತ್ತು. ಈಗಿನ ಟ್ರೆಂಡ್‍ಗೆ ತಕ್ಕಂತೆ ಸಿನಿಮಾಗಳನ್ನು ಮಾಡುತ್ತಿದ್ದೇನೆ. ಏಪ್ರಿಲ್ ಮೊದಲವಾರ ಅಥವಾ ಎರಡನೇ ವಾರ ಈ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಫ್ಯಾನ್ಸ್ ಒತ್ತಾಯ!
    ನಾನು ಹೆಚ್ಚು ಅಣ್ಣಾವ್ರ ಸಿನಿಮಾಗಳನ್ನು ರೀ-ರಿಲೀಸ್ ಮಾಡುತ್ತಿದ್ದೆ. ಆದರೆ ದಾದಾನ ಸಿನಿಮಾಗಳನ್ನು ರಿಲೀಸ್ ಮಾಡಬೇಕು ಎಂದು ಅಭಿಮಾನಿಗಳು ಕೇಳಿಕೊಂಡರು. ಅದಕ್ಕೆ ಈ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ. ಹೊಸ ರೀತಿಯಲ್ಲಿ ಸಿನಿಮಾವನ್ನು ತಯಾರು ಮಾಡುತ್ತಿದ್ದೇನೆ. ಈ ಸಿನಿಮಾವನ್ನು ಅದ್ದೂರಿಯಾಗಿ ರಿಲೀಸ್ ಮಾಡಬೇಕು ಎಂದುಕೊಂಡಿದ್ದೇನೆ. ಅಪ್ಪು ಸಿನಿಮಾವಿರುವುದರಿಂದ ಏಪ್ರಿಲ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ನಿರ್ಧಾರಿಸಿದ್ದೇನೆ ಎಂದು ತಿಳಿಸಿದರು. ಒಟ್ಟಿನಲ್ಲಿ ಈ ಸುದ್ದಿ ಕೇಳಿದ ಅಭಿಮಾನಿಗಳು ಸಖತ್ ಖುಷಿಯಲ್ಲಿ ಇದ್ದಾರೆ.

  • ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’

    ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’

    ವಾಸುದೇವ ರೆಡ್ಡಿ ಚೊಚ್ಚಲ ನಿರ್ದೇಶನದಲ್ಲಿ ತೆರೆ ಕಾಣಲು ಸಜ್ಜಾಗಿರುವ ಸಿನಿಮಾ ‘ಮೈಸೂರು’. ಮಾರ್ಚ್ 4ರಂದು ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಮನಸ್ಸಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಸಂಗೀತಮಯ ಸಿನಿಮಾದಲ್ಲಿ ಹಾಡುಗಳು ಒಂದಕ್ಕಿಂತ ಒಂದು ಮನಸೆಳೆದಂತೆ ಹಾಡಿನ ಜೊತೆಗೆ ಕಲರ್ ಫುಲ್ ಲೊಕೇಶನ್ ಗಳು ಕಣ್ಮನ ಸೆಳೆಯುತ್ತಿವೆ. ಇಂತಹ ಚೆಂದದ ಲೊಕೇಶನ್‍ಗಳನ್ನು ಮೈಸೂರಿಗಾಗಿಯೇ ಸೆರೆ ಹಿಡಿದಿದ್ದಾರೆ ಕ್ಯಾಮೆರಾ ಮ್ಯಾನ್ ಭಾಸ್ಕರ್.ವಿ.ರೆಡ್ಡಿ.

    ‘ಮೈಸೂರು’ ಎಂಬ ಶೀರ್ಷಿಕೆ ಮೂಲಕವೇ ಕ್ಯೂರಿಯಾಸಿಟಿ ಬಿಲ್ಡ್ ಮಾಡಿರುವ ನಿರ್ದೇಶಕರು ಹೆಸರಿಗೆ ತಕ್ಕಂತೆ ಮೈಸೂರನ್ನು ಅಷ್ಟೇ ಸೊಗಸಾಗಿ ತೆರೆ ಮೇಲೆ ತಂದಿದ್ದಾರೆ. ಇದೆಲ್ಲ ಸಾಧ್ಯವಾಗಿದ್ದು, ಛಾಯಾಗ್ರಾಹಕ ಭಾಸ್ಕರ್.ವಿ.ರೆಡ್ಡಿ ಅವರಿಂದ. ಮ್ಯೂಸಿಕಲ್ ಲವ್ ಸ್ಟೋರಿಗೆ ತಕ್ಕಂತೆ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಪ್ರಮುಖವಾಗಿ ಮೈಸೂರಿನಲ್ಲಿ ಹೆಚ್ಚಿನ ಚಿತ್ರೀಕರಣ ನಡೆಸಿದ್ದು, ಶ್ರೀರಂಗಪಟ್ಟಣ. ಸಕಲೇಶಪುರ, ಹೊನ್ನಾವರ, ಕಟಕ್, ಒಡಿಶಾ ಸೇರಿದಂತೆ ಹಲವು ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸಿನಿಪ್ರಿಯರಿಗೆ ಖಂಡಿತ ಈ ಸಿನಿಮಾ ವಿಶ್ಯುವಲ್ ಟ್ರೀಟ್ ನೀಡುತ್ತೆ ಎನ್ನುವುದು ಭಾಸ್ಕರ್ ವಿ ರೆಡ್ಡಿ ಅವರ ಅನಿಸಿಕೆಯಾಗಿದೆ. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಇಂದು ಚಾಲನೆ

    ಚಿತ್ರರಂಗದಲ್ಲಿ ಅಸೋಸಿಯೇಟ್ ಕ್ಯಾಮೆರಾಮ್ಯಾನ್ ಆಗಿ ದುಡಿದ ಅನುಭವ ಭಾಸ್ಕರ್.ವಿ.ರೆಡ್ಡಿ ಅವರಿಗಿದೆ. ಪವನ್ ಒಡೆಯರ್ ನಟನೆಯ ‘ಪ್ರೀತಿ ಗೀತಿ ಇತ್ಯಾದಿ’ ಸಿನಿಮಾ ಮೂಲಕ ಸ್ವತಂತ್ರ ಛಾಯಾಗ್ರಹಕರಾಗಿ ಗುರುತಿಸಿಕೊಂಡರು. ನಂತರ ತಮ್ಮ ಅದ್ಭುತ ಕ್ಯಾಮೆರಾ ಕೈಚಳಕದಲ್ಲಿ ಪ್ರೇಮ ಗೀಮಾ ಜಾನೆದೋ, ಅನ್ನದಾತ ಸೇರಿದಂತೆ ಒರಿಯಾ ಭಾಷೆಯ ಸಿನಿಮಾಗಳಿಗೂ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹೀಗೆ ಸಾಕಷ್ಟು ಅನುಭವ ಹೊಂದಿರುವ ಭಾಸ್ಕರ್.ವಿ.ರೆಡ್ಡಿ ಮೈಸೂರು ಸಿನಿಮಾವನ್ನು ಸೊಗಸಾಗಿ ಸೆರೆ ಹಿಡಿದಿದ್ದಾರೆ.

    ಮಾರ್ಚ್ 4ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದಲ್ಲಿ ಸಂಹಿತ್ ಹಾಗೂ ಪೂಜಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ಒಂದಕ್ಕಿಂತ ಒಂದು ಸುಂದರವಾಗಿ ಮೂಡಿಬಂದಿವೆ. ರಮಣಿ ಸುಂದರೇಶನ್, ಅನಿಲ್ ಕೃಷ್ಣ ಮತ್ತು ವಿಜಯ್ ರಾಜ್ ಐದು ಹಾಡುಗಳನ್ನು ಮೈಸೂರಿಗಾಗಿಯೇ ರೂಪಿಸಿದ್ದಾರೆ. ರಾಜೇಶ್ ಕೃಷ್ಣನ್, ಉಷಾ ಪ್ರಕಾಶ್, ಇಶಾ ಸುಚಿ, ಪಂಚಮ್, ಚೇತನ್ ನಾಯಕ್, ಪವನ್ ಪಾರ್ಥ ಮುಂತಾದವರು ಹಾಡುಗಳಿಗೆ ದನಿಯಾಗಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

    ತಾರಾಗಣದಲ್ಲಿ ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಸೂರ್ಯ, ರವಿಶಂಕರ್, ಜ್ಯೂನಿಯರ್ ನರಸಿಂಹರಾಜು, ಜಯಶ್ರೀ, ಒಡಿಶಾದ ಖ್ಯಾತ ನೃತ್ಯ ಕಲಾವಿದೆ ಪ್ರತಿಭಾ ಫಂಡಾ ಮುಂತಾದವರ ತಾರಾಗಣವಿದೆ. ಎಸ್.ಆರ್.ಕಂಬೈನ್ಸ್ ಬ್ಯಾನರ್ ನಡಿ ನಿರ್ದೇಶಕರಾದ ವಾಸುದೇವ್ ರೆಡ್ಡಿ ಬಂಡವಾಳ ಹೂಡಿ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ.