Tag: Chandanavana

  • ದೊಡ್ಮಗನೆ ಫೇವರೇಟ್ ಅಂತಿದೆ ನಮ್ ಅಜ್ಜಿ: ಭಾವುಕ ವೀಡಿಯೋ ಪೋಸ್ಟ್ ಮಾಡಿದ ಕ್ರೇಜಿಸ್ಟಾರ್ ಪುತ್ರ

    ದೊಡ್ಮಗನೆ ಫೇವರೇಟ್ ಅಂತಿದೆ ನಮ್ ಅಜ್ಜಿ: ಭಾವುಕ ವೀಡಿಯೋ ಪೋಸ್ಟ್ ಮಾಡಿದ ಕ್ರೇಜಿಸ್ಟಾರ್ ಪುತ್ರ

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ತಮ್ಮ ಇನ್ ಸ್ಟಾ ಪೇಜ್ ನಲ್ಲಿ ಭಾವುಕ ವೀಡಿಯೋವೊಂದನ್ನು ಹಾಕಿದ್ದಾರೆ. ತಮ್ಮ ಅಜ್ಜಿ ಪಟ್ಟಮ್ಮಾಳ್ (ಅಪ್ಪನ ತಾಯಿ) ಇರುವ ಆ ವೀಡಿಯೋದಲ್ಲಿಯ ಒಂದು ಅಚ್ಚರಿಯ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ನಿಧನರಾಗಿರುವ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್, ಊಟ ಮಾಡುವ ಸನ್ನಿವೇಶದಲ್ಲಿ ನಿನ್ನ ಫೇವರೇಟ್ ಯಾರು ಅಂತ ಪ್ರಶ್ನೆಯೊಂದು ಕೇಳಿ ಬರುತ್ತದೆ. ಒಂದು ಕ್ಷಣವೂ ಯೋಚಿಸದ ಆ ತಾಯಿ ದೊಡ್ಮಗನೇ ನನ್ನ ಫೇವರೇಟ್ ಅಂತಾರೆ. ಪಟ್ಟಮ್ಮಾಳ್ ಅವರಿಗೆ ಇಬ್ಬರು ಮಕ್ಕಳು ಹಿರಿಯ ಮಗ ರವಿಚಂದ್ರನ್, ಎರಡನೇ ಮಗ ಬಾಲಾಜಿ. ಈ ಇಬ್ಬರು ಮಕ್ಕಳಲ್ಲಿ ಹಿರಿಯ ಮಗನೆ ಫೇವರೇಟ್ ಎಂದು ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: ನವೀನ್ ವ್ಯಕ್ತಿತ್ವ ಪ್ರಶಂಸಿಸಿದ ಚಂದನವನದ ಮೋಹಕತಾರೆ

    ರವಿಚಂದ್ರನ್ ಅವರಿಗೆ ಮಾತ್ರವಲ್ಲ, ಮೊಮ್ಮಗ ಮನೋರಂಜನ್ ಮೇಲೆಯೂ ಅವರಿಗೆ ಸಾಕಷ್ಟು ಅಕ್ಕರೆಯಂತೆ. ಹಾಗಾಗಿ ಅಜ್ಜಿಯೊಂದಗಿನ ಭಾವನಾತ್ಮಕ ಕ್ಷಣಗಳನ್ನು ಮನೋರಂಜನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಕೊನೆ ಉಸಿರು ಎಳೆಯುವತನಕ ಇಡೀ ಕುಟುಂಬವನ್ನು ಒಟ್ಟಾಗಿ ಇಟ್ಟವರು. ಅತೀ ಮುಖ್ಯವಾಗಿ ನನ್ನ ಅಪ್ಪನ ಜೊತೆ ಅವರಿಗೆ ಇದ್ದ ಬಾಂಧವ್ಯ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ನನ್ನ ಅಜ್ಜಿ ಈ ವೀಡಿಯೋದಲ್ಲೂ ನನ್ನ ದೊಡ್ಡ ಮಗನೇ ನನ್ನ ಫೇವರೇಟ್ ಅಂತಿದ್ದಾರೆ. ಅಂದು, ಇಂದು, ಎಂದೆಂದೂ ನೀವೇ ನನ್ನ ಶಕ್ತಿ. ಅಮ್ಮ ಓಂ ಶಾಂತಿ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.Ravichandran's son Manoranjan, who is breaking news about marriage » Jsnewstimes

    ಪಟ್ಟಮ್ಮಾಳ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹಲವು ವರ್ಷಗಳಿಂದ ರವಿಚಂದ್ರನ್ ಅಮ್ಮನ ಆರೈಕೆಯಲ್ಲಿದ್ದರು. ತನ್ನ ತಾಯಿ ಜೊತೆಗಿನ ಸಂಬAಧ ಕುರಿತು ಮಾತನಾಡುವಾಗ ರವಿಚಂದ್ರನ್ ತಮ್ಮ ತಾಯಿಯನ್ನು ಬಹಳ ಅಚ್ಚುಕೊಂಡಿದ್ದರು. ಸಂದರ್ಶನವೊದರಲ್ಲಿ ಮಾತನಾಡುವಾಗ ತಾಯಿ ಬಗ್ಗೆ ಮಾತನಾಡಿದ್ದ ಅವರು, ನನ್ನ ತಾಯಿ ಕೊಮಾದಲ್ಲಿ ಇದ್ದಾಗಲೂ ಅಮ್ಮಾ ಎಂದ ತಕ್ಷಣ ನನ್ನತ್ತ ನೋಡುತ್ತಿದ್ದರು ಎಂದು ಭಾವುಕರಾಗಿದ್ದರು. ಇದನ್ನೂ ಓದಿ: ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

    ಮನೋರಂಜನ್ ಅವರು ‘ಸಾಹೇಬ’ ಸಿನಿಮಾ ಮೂಲಕ ಚಂದನವನವನ್ನು ಪ್ರವೇಶಿಸಿದ್ದರು. ಇತ್ತೀಚೆಗೆ ರಿಲೀಸ್ ಆದ ‘ಮುಗಿಲ್ ಪೇಟೆ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದು, ಚಂದನವನದ ಭರವಸೆಯ ನಟ ಎಂಬ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

  • ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ

    ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ

    ಶೂಟಿಂಗ್ ನಿಂದ ಬಿಡುವು ತಗೆದುಕೊಂಡಿರುವ ಹರಿಪ್ರಿಯಾ, ಸದ್ಯ ಟೆಂಪಲ್ ರನ್ ಮಾಡುತ್ತಿದ್ದಾರೆ. ಶಿವರಾತ್ರಿ ದಿನ ಸಾಮಾನ್ಯವಾಗಿ ಹರಿಪ್ರಿಯಾ ಸದ್ಗುರು ಆಶ್ರಮದಲ್ಲಿ ಕಾಲ ಕಳೆಯುತ್ತಿದ್ದರು. ಈ ಬಾರಿ ಅವರು ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಂತರ ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಆಚಾರ್ ಅವರಿಂದ ಪ್ರಸಾದ ಸ್ವೀಕರಿಸಿದರು.

    ಶ್ರೀಕೃಷ್ಣನ ದರ್ಶನ ಪಡೆದ ನಂತರ ಹರಿಪ್ರಿಯಾ ಅಲ್ಲಿರುವ ಆನೆಯೊಂದಿಗೆ ಸ್ವಲ್ಪ ಹೊತ್ತು ಸಮಯ ಕಳೆದಿದ್ದಾರೆ. ಆನೆಯೊಂದಿಗೆ ತೀರಾ ಆತ್ಮಿಯವಾಗಿರುವ ಫೋಟೋಗಳನ್ನು ಅವರು ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶಿಲ್ಪಾ ಶೆಟ್ಟಿ ಧರಿಸಿರುವ ಗೌನ್ ಬೆಲೆಯಷ್ಟು ಗೊತ್ತಾ? ಲಕಲಕ ಹೊಳಿತಿದ್ದಾಳೆ ರವಿಮಾಮನ ಬೆಡಗಿ

    ಚಂದನವನ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಹರಿಪ್ರಿಯಾ ತಮ್ಮ ನಟನೆಯಿಂದ ಸೈ ಎನಿಸಿಕೊಂಡಿದ್ದಾರೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಸಿನಿಮಾದ ನಂತರ ಹರಿಪ್ರಿಯಾ ಮತ್ತೆ ಯಾವ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಈ ಸಮಯವನ್ನು ಅವರು ಪ್ರವಾಸ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡಲು ಮೀಸಲಿಟ್ಟಿದ್ದಾರೆ.

    ‘ವ್ಯಾಪಾರಿ’ ಸಿನಿಮಾಗಳ ಮೂಲಕ ಅಭಿಮಾನಿಗಳ ಹೃದಯ ಗೆದ್ದಿರುವ ಹರಿಪ್ರಿಯಾ, ನಂತರದ ದಿನಗಳಲ್ಲಿ ಕಲಾತ್ಮಕ ಚಿತ್ರಗಳತ್ತ ವಾಲಿದರು. ಅವರ ನಟನೆಯ ‘ಸೂಜಿದಾರ’, ‘ಅಮೃತಮತಿ’ ಚಿತ್ರಗಳು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾದವು. ಅದರಲ್ಲೂ ‘ಅಮೃತಮತಿ’ ಚಿತ್ರ ಅವರಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಚಿತ್ರೋತ್ಸವಗಳ ಪ್ರಶಸ್ತಿಗಳನ್ನು ತಂದುಕೊಟ್ಟಿತು. ಈ ನಟಿ ಚಂದನವನದ ಬಹುತೇಕ ಸ್ಟಾರ್ ನಟರ ಜೊತೆಗೆಗೂ ನಟಿಸಿದ್ದು, ತಮ್ಮ ನೇರ ನುಡಿಯಿಂದ ಹೆಸರುವಾಸಿಯಾಗಿದ್ದಾರೆ. ಇದನ್ನೂ ಓದಿ: ದೇಶ ವಿದೇಶದಲ್ಲಿ ಜೇಮ್ಸ್ ಅಬ್ಬರ ಶುರು – ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್!

  • ನಿಜ ಜೀವನದಲ್ಲಿಯೂ ಹೀರೋಯಿನ್ ಆದ ಶ್ವೇತಾ ಶ್ರೀವಾತ್ಸವ್!

    ನಿಜ ಜೀವನದಲ್ಲಿಯೂ ಹೀರೋಯಿನ್ ಆದ ಶ್ವೇತಾ ಶ್ರೀವಾತ್ಸವ್!

    ಚಂದನವನದ ಸಿಂಪಲ್ ಬ್ಯೂಟಿ ಶ್ವೇತಾ ಶ್ರೀವಾತ್ಸವ್ ಸಿನಿಮಾ ಜೊತೆಗೆ ಸಮಾಜಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ನೀವು ನಿಜ ಜೀವದಲ್ಲಿಯೂ ಹೀರೋಯಿನ್ ಆಗಿದ್ದೀರಾ ಎಂದು ಪ್ರಶಂಸುತ್ತಿದ್ದಾರೆ.

    ಶ್ವೇತಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದು, ತಮ್ಮ ಅಪ್ಡೇಟ್‍ಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇನ್‍ಸ್ಟಾಗ್ರಾಮ್ ನಲ್ಲಿ ಶ್ವೇತಾ, ದಯೆ ಒಂದು ಆಯ್ಕೆಯಾಗಿದೆ. ದಯೆ ಯಾವಾಗಲೂ ಮುಖ್ಯ ಎಂದು ಬರೆದುಕೊಂಡಿದ್ದಾರೆ. ಈ ವೇಳೆ ತನ್ನ ಹೊಸ ಯೋಜನೆ ಬಗ್ಗೆ ಹೇಳಿಕೊಂಡಿರುವ ಅವರು, ಹೊಸ ಯೋಜನೆ, ಹೊಸ ಸ್ನೇಹ, ಹೊಸ ಪ್ರಾರಂಭ ಎಂದು ಬರೆದು ತಿಳಿಸಿದ್ದಾರೆ. ಶ್ವೇತಾ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಕ್ಕಳಿಗೆ ಅನ್ನದಾಸೋಹ ಮಾಡಿಸುತ್ತಿರುವ ದೃಶ್ಯ ಫೋಟೋಗಳಲ್ಲಿ ನೋಡಬಹುದು. ಇದನ್ನೂ ಓದಿ: ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

     

    View this post on Instagram

     

    A post shared by Shwetha Srivatsav (@shwethasrivatsav)

    ಈ ಮೂಲಕ ಅಭಿಮಾನಿಗಳಿಗೆ ನಾನು ಹೊಸದೊಂದು ಯೋಜನೆಯನ್ನು ಮಾಡುತ್ತಿದ್ದೇನೆ. ಅದು ಸಮಾಜಕ್ಕೆ ಒಳ್ಳೆಯದಾಗುವ ಸೇವಾ ಕಾರ್ಯ ಎಂಬುದು ಫೋಟೋ ನೋಡಿದರೆ ಅರ್ಥವಾಗುತ್ತೆ. ಈ ಕುರಿತು ಸೂಕ್ಷ್ಮವಾಗಿ ಶ್ವೇತಾ ಸೋಶಿಯಲ್ ಮೀಡಿಯಾದಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಅಲಿಯಾ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

    ಪೋಸ್ಟ್ ನೋಡಿದ ನೆಟ್ಟಿಗರು, ನೀವು ನಿಜ ಜೀವನದ ಹೀರೋಯಿನ್ ಮೇಡಮ್. ಆಲ್ ದಿ ಬೆಸ್ಟ್, ಗುಡ್ ಲಕ್ ಎಂದು ಕಮೆಂಟ್ ಮಾಡಿದ್ದಾರೆ.

  • ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

    ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

    ನಿಖಿಲ್ ಕುಮಾರಸ್ವಾಮಿ ನಂತರ ಮತ್ತೊಬ್ಬ ರಾಜಕಾರಣಿ ಪುತ್ರ ದುಷ್ಯಂತ್ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

    ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಪುತ್ರ ದುಷ್ಯಂತ್ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಬಣ್ಣದ ಲೋಕಕ್ಕೆ ತಂದೆಯ ರಾಜಕೀಯ ಕ್ಷೇತ್ರದ ಹೆಸರನ್ನು ಬಳಸಿಕೊಳ್ಳದೇ ತಮ್ಮದೇ ಮಾರ್ಗದಲ್ಲಿ ಸಾಗುವ ನಿಟ್ಟಿನಲ್ಲಿ ದುಷ್ಯಂತ್ ಕಳೆದ ಮೂರ್ನಾಲ್ಕು ವರ್ಷಗಳಿಂದ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    Suni's big 'bazaars'

    ದುಷ್ಯಂತ್ ಅವರಿಗೆ ಚಂದನವನದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ. ಸುನಿ ಅವರು ಈಗಾಗಲೇ ‘ಬಜಾರ್’ ಸಿನಿಮಾ ಮೂಲಕ ಧನ್ವಿರ್ ಅವರನ್ನು ಚಂದನವನಕ್ಕೆ ಪರಿಚಯ ಮಾಡಿಸಿದ್ದು, ಮತ್ತೊಬ್ಬ ಯುವ ನಟನನ್ನು ಕನ್ನಡ ಪ್ರೇಕ್ಷಕರಿಗೆ ಪರಿಚಯಿಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಅಲಿಯಾ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

    ಸುನಿ ನಿದೇಶನದ ‘ಸಖತ್’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆಯಾಗಿದ್ದು, ಈ ಸಿನಿಮಾಗೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಕಾಮಿಡಿ ಸ್ಟಾರ್ ಶರಣ್ ನಟನೆಯ ‘ಅವತಾರ ಪುರುಷ’ ಸಿನಿಮಾ ಶೂಟಿಂಗ್ ಮುಗಿದಿದ್ದು, ರಿಲೀಸ್‍ಗೆ ರೆಡಿಯಾಗಿದೆ. ಈ ನಡುವೆ ಸುನಿ ಹೊಸ ಸಿನಿಮಾವನ್ನು ಮಾಡಲು ಸಜ್ಜಾಗಿದ್ದಾರೆ. ಇದಕ್ಕೆ ‘ಗತವೈಭವ’ ಎಂಬ ಪವರ್‌ಫುಲ್ ಟೈಟಲ್ ಸಹ ಕೊಟ್ಟಿದ್ದು, ಈ ಸಿನಿಮಾಗೆ ದುಷ್ಯಂತ್ ಬಣ್ಣ ಹಚ್ಚುತ್ತಿದ್ದಾರೆ. ಈ ಮೂಲಕ ಬಣ್ಣದ ಲೋಕಕ್ಕೆ ಬರಲು ಫುಲ್ ರೆಡಿಯಾಗುತ್ತಿದ್ದಾರೆ.

    ಸಖತ್​ ಆಗಿದೆ 'ಸಖತ್' ಟೀಸರ್​; ಪ್ರೇಕ್ಷಕರ ತಲೆಗೆ ಕುತೂಹಲದ ಹುಳ ಬಿಟ್ಟ ಗಣೇಶ್​, ಸಿಂಪಲ್​ ಸುನಿ | Sakath movie teaser: Golden star Ganesh and Simple Suni promise super entertainment | TV9 Kannada

    ನಟನೆ ಕುರಿತು ಮಾತನಾಡಿದ ಅವರು, 2017ರಲ್ಲೇ ನಾನು ನಟನಾಗಬೇಕು ಎಂದು ನಿರ್ಧರಿಸಿ ಸಿನಿಮಾಗಾಗಿ ನನ್ನನ್ನು ನಾನು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ‘ಟೆಂಟ್ ಸಿನಿಮಾ’ ಅಭಿನಯ ಶಾಲೆಯಲ್ಲಿ ಮೂರು ವರ್ಷದ ಕೋರ್ಸ್ ಮಾಡಿದ್ದೇನೆ. ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಸಿನಿಮಾ ವಿಷಯವಾಗಿ ಕಲಿತಿದ್ದೇನೆ. ಬೀದಿ ನಾಟಕ, ಕಿರುಚಿತ್ರ, ಮ್ಯೂಸಿಕ್ ವೀಡಿಯೋ ಹೀಗೆ ನಟನೆಗೆ ಒತ್ತು ಕೊಡುವಂತಹ ಹಲವು ಕೆಲಸಗಳನ್ನು ಮಾಡಿದ್ದೇನೆ ಎಂದು ವಿವರಿಸಿದರು.

    2019ರಲ್ಲಿ ರಂಗಕರ್ಮಿ ಕೃಷ್ಣ ಅವರ ಆ್ಯಕ್ಟಿಂಗ್ ವಕ್ರ್ಶಾಪ್‍ನಲ್ಲಿ ಪಾಲ್ಗೊಂಡಿದ್ದೆ. ಪುಷ್ಕರ್ ಆ್ಯಕ್ಟಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ನಟನೆಯನ್ನು ಕಲಿತಿದ್ದೇನೆ. ನೀನಾಸಂನ ಧನಂಜಯ ಅವರ ಬಳಿಯೂ ಒಂದಷ್ಟು ದಿನಗಳ ಕಾಲ ನಟನಾ ಪಟ್ಟುಗಳನ್ನು ತಿಳಿದುಕೊಂಡಿದ್ದೇನೆ. ಟಗರು ರಾಜು, ಭೂಷಣ್ ಕುಮಾರ್ ಹೀಗೆ ಹಲವರಿಮ್ ಡ್ಯಾನ್ಸ್ ಕಲಿತ್ತಿದ್ದೇನೆ. ಮಾರ್ಷಲ್ ಆರ್ಟ್ಸ್, ಜಿಮ್ನಾಸ್ಟಿಕ್ ಸೇರಿದಂತೆ ಒಬ್ಬ ನಾಯಕ ಏನೇನು ಕಲಿತಿರಬೇಕೋ ಅವೆಲ್ಲವನ್ನೂ ಕಲಿತು ನಂತರ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸೋದರಸಂಬಂಧಿ ಮದುವೆಯಲ್ಲಿ ಯಶ್ ಫ್ಯಾಮಿಲಿ ಫುಲ್ ಮಿಂಚಿಂಗ್!

    Simple Suni Upcoming Movies : 'ಅವತಾರ್ ಪುರುಷ' ಬಳಿಕ ಸಿಂಪಲ್ ಸುನಿ ಮುಂದಿನ ಸಿನಿಮಾಗಳು - Kannada Filmibeat

    ‘ಗತವೈಭವ’ ಸಿನಿಮಾ ಕುರಿತು ಮಾತನಾಡಿದ ಸುನಿ, ಈ ಸಿನಿಮಾದಲ್ಲಿ ಹೆಚ್ಚು ಪ್ರೇಮಕಥೆಯನ್ನು ಎಣೆಯಲಾಗಿದೆ. ಸೈಂಟಿಫಿಕ್ ಥ್ರಿಲ್ಲರ್ ರೀತಿಯಲ್ಲಿ ಸ್ಟೋರಿಯನ್ನು ಹೇಳಲಾಗಿದೆ. ದುಷ್ಯಂತ್ ಜೊತೆ ನಾನು ‘ರಾಬಿನ್ ಹುಡ್’ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾವನ್ನು ಕೆಲವು ಕಾರಣಗಳಿಂದ ಮುಂದೆ ಹಾಕಿದ್ದೇವೆ. ‘ಗತವೈಭವ’ ಸ್ಟೋರಿ ‘ದುಷ್ಯಂತ್’ ಅವರಿಗೆ ಸೂಟ್ ಆಗುತ್ತೆ. ಈ ಸಿನಿಮಾಗಾಗಿ ಅವರು ತುಂಬಾ ಶ್ರಮವನ್ನು ಪಡುತ್ತಿದ್ದಾರೆ. ನನ್ನ ‘ಅವತಾರ ಪುರುಷ’ ಸಿನಿಮಾ ಬಿಡುಗಡೆಯಾದ ನಂತರ ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ ಎಂದು ತಿಳಿಸಿದರು.

  • UAEನಿಂದ ಗೋಲ್ಡನ್ ವೀಸಾ ಪಡೆದ ಪ್ರಣಿತಾ!

    UAEನಿಂದ ಗೋಲ್ಡನ್ ವೀಸಾ ಪಡೆದ ಪ್ರಣಿತಾ!

    ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ.

    ಬಹುಭಾಷಾ ನಟಿಯಾಗಿರುವ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ ಅವಕಾಶಗಳು ಇರುತ್ತೆ. ಆ ಗೌರವವನ್ನು ಕನ್ನಡದ ನಟಿ ಪ್ರಣಿತಾ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಇದನ್ನೂ ಓದಿ: ವೈರಲ್ ಆಯ್ತು ಶಾರೂಖ್ ನ್ಯೂಲುಕ್ – ರಿಯಲ್ ಫೋಟೋ ರಿಲೀಸ್!

    ದಕ್ಷಿಣ ಭಾರತದ ಖ್ಯಾತ ನಟಿಯಾಗಿರುವ ಪ್ರಣಿತಾ 2010 ರಂದು ‘ಪೊರ್ಕಿ’ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಪಾದರ್ಪಣೆ ಮಾಡಿದರು. ನಂತರ ಹಲವು ಕನ್ನಡ ಸ್ಟಾರ್ ನಟರ ಜೊತೆ ನಟಿಸಿದ ಈ ತಾರೆ ಟಾಲಿವುಡ್, ಕಾಲಿವುಡ್ ನಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅಲ್ಲದೆ ದಕ್ಷಿಣ ಭಾರತದ ಬಹುತೇಕ ಸ್ಟಾರ್ ನಟರ ಜೊತೆ ಇವರು ನಟಿಸಿದ್ದಾರೆ. ಪ್ರಸ್ತುತ ಸಮಾಜಸೇವೆ ಎಂದು ಈ ನಟಿ ಬ್ಯುಸಿಯಾಗಿದ್ದಾರೆ. ಕೊರೊನಾ ಸಮಯದಲ್ಲಿಯೂ ಪ್ರಣಿತಾ ಜನರಿಗೆ ಸಹಾಯ ಮಾಡಿದ್ದಾರೆ.

  • ಅಪ್ಪು ಜೊತೆಗೆ ಕೊನೆ ಕ್ಷಣದ ವೀಡಿಯೋ ಹಂಚಿಕೊಂಡ ನವರಸ ನಾಯಕ!

    ಅಪ್ಪು ಜೊತೆಗೆ ಕೊನೆ ಕ್ಷಣದ ವೀಡಿಯೋ ಹಂಚಿಕೊಂಡ ನವರಸ ನಾಯಕ!

    ಬೆಂಗಳೂರು: ಚಂದನವನದ ನವರಸ ನಾಯಕ ಜಗ್ಗೇಶ್ ದಿ.ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಜೊತೆಗೆ ಕಾಲ ಕಳೆದ ಕೊನೆಯ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಚಂದನವನದ ಅಪ್ಪು ಅಗಲಿ 4 ತಿಂಗಳು ಆಗುತ್ತಿದ್ರೂ ಕನ್ನಡಿಗರ ಮನಸ್ಸಿನಲ್ಲಿ ಅವರು ಎಂದೂ ಅಮರರಾಗಿರುತ್ತಾರೆ. ಅಪ್ಪುಗೆ ಜಗ್ಗೇಶ್ ಬಹಳ ಆಪ್ತ. ಅಪ್ಪು ಅವರೊಂದಿಗೆ ಜಗ್ಗೇಶ್ ಮಧುರ ಕ್ಷಣಗಳನ್ನು ಕಳೆದಿದ್ದಾರೆ. ಅಪ್ಪು ಅವರನ್ನು ಕಳೆದುಕೊಂಡಗಿನಿಂದ ಜಗ್ಗೇಶ್ ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಜೊತೆಗೆ ಕಾಲ ಕಳೆದ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

    ಅದೇ ರೀತಿ ಜಗ್ಗೇಶ್ ಇಂದು ಸಹ ಅಪ್ಪು ಜೊತೆ ಕಾಲ ಕಳೆದ ವಿಶೇಷ ವೀಡಿಯೋವನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಮಂತ್ರಾಲಯದಲ್ಲಿ 2021ರ ಏಪ್ರಿಲ್ 5ರ ಸೋಮವಾರ ಪುನೀತನ ಜೊತೆಯ ಕೊನೆಯ ಕ್ಷಣ. ಕರೆದು ಕೂರಿಸಿಕೊಂಡದ್ದು ಸಂತೋಷ ಆನಂದರಾಮನನ್ನು. ಈ ಅಪರೂಪದ ವೀಡಿಯೋ ಕಳಿಸಿದ ಮಂತ್ರಾಲಯ ಪ್ರೋ.ನರಸಿಂಹಾಚಾರ್ಯ ರವರಿಗೆ ಧನ್ಯವಾದ. ಪುನೀತ ಅಲ್ಲಿಯೇ ರಾಯರ ಜೊತೆ ಉಳಿದುಬಿಟ್ಟ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಈ ವೀಡಿಯೋದಲ್ಲಿ ಶ್ರೀ ಅವರ ಮುಂದೆ ಜಗ್ಗೇಶ್ ಕುಳಿತುಕೊಂಡಿರುತ್ತಾರೆ. ಅಲ್ಲೇ ಇದ್ದ ಅಪ್ಪು ಮೊದಲು ಶ್ರೀ ಮುಂದೆ ನಿಂತುಕೊಂಡಿದ್ದು, ನಂತರ ಜಗ್ಗೇಶ್ ಅವರು ಹೇಳಿದಂತೆ ಅವರ ಮುಂದೆ ಕುಳಿತುಕೊಳ್ಳುತ್ತಾರೆ. ಈ ವೀಡಿಯೋ ನೋಡಿದ ಅಭಿಮಾನಿಗಳು ಅಪ್ಪು ‘ವಿ ಮಿಸ್ ಯು’ ಎಂದು ಬರೆದು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಬೈಪಾಸ್ ಶಸ್ತ್ರಚಿಕಿತ್ಸೆಯಿಂದ ಗುಣಮುಖ- ಹಿತೈಷಿಗಳಿಗೆ ಸುನಿಲ್ ಧನ್ಯವಾದ

    ಇನ್ನೊಬ್ಬ ಅಭಿಮಾನಿ, ಈ ನೆನಪುಗಳನ್ನು ಅಳಿಸಲು ನಿಮಗೆ ತುಂಬಾ ಕಷ್ಟವಾಗುತ್ತದೆ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಸರ್. ದೇವರು ಅವರಿಗೆ ಒಂದು ಅವಕಾಶ ನೀಡಬೇಕಿತ್ತು. ಟೆಕ್ ಕೇರ್ ಜಗ್ಗೇಶ್ ಸರ್ ಎಂದು ಕಾಮೆಂಟ್ ಮಾಡಿದ್ದಾರೆ. ಜಗ್ಗೇಶ್ ಅವರು ಪ್ರಸ್ತುತ ‘ರಾಘವೇಂದ್ರಸ್ಟೋರ್ಸ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

  • ಮುದ್ದು ಮಗಳಿಗೆ ಕನ್ನಡ ಕಲಿಸುತ್ತಿದ್ದಾರೆ ರಾಕಿಂಗ್ ಸ್ಟಾರ್

    ಮುದ್ದು ಮಗಳಿಗೆ ಕನ್ನಡ ಕಲಿಸುತ್ತಿದ್ದಾರೆ ರಾಕಿಂಗ್ ಸ್ಟಾರ್

    ಬೆಂಗಳೂರು: ಚಂದನವನದ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುದ್ದು ಮಗಳು ಐರಾ ಗೆ ಅ, ಆ, ಇ, ಈ ಕಲಿಸುತ್ತಿದ್ದಾರೆ.

    ಯಶ್ ನಟನೆಯ ಜೊತೆಗೆ ತಮ್ಮ ಕುಟುಂಬಕ್ಕೂ ಅಷ್ಟೇ ಸಮಯವನ್ನು ಮೀಸಲಿಡುತ್ತಾರೆ. ಇಂದು ಯಶ್ ಫ್ಯಾಮಿಲಿ ಜೊತೆ ಮನೆಯಲ್ಲೇ ಎಂಜಾಯ್ ಮಾಡುತ್ತಿದ್ದು, ಮಗಳಿಗೆ ಕನ್ನಡ ಕಲಿಸಿಕೊಂಡುತ್ತಿದ್ದಾರೆ. ಈ ಮುದ್ದಾದ ವೀಡಿಯೋವನ್ನು ಚಂದನವನದ ಸಿಂಡ್ರೆಲಾ ರಾಧಿಕಾ ಪಂಡಿತ್ ಇನ್‍ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ವೀಕೆಂಡ್ ಸ್ವೆಷಲ್ ಕ್ಲಾಸ್’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ, ತಾವಿದ್ದಲ್ಲಿಂದಲೇ ನನಗೆ ಹರಸಿ: ನಿಖಿಲ್ ಕುಮಾರಸ್ವಾಮಿ

    ವೀಡಿಯೋದಲ್ಲಿ ಯಶ್ ಸೋಫಾ ಮೇಲೆ ಕುಳಿತುಕೊಂಡಿದ್ದು, ಅವರ ತೊಡೆಯ ಮೇಲೆ ಐರಾ ಕುಳಿತುಕೊಂಡಿದ್ದಾಳೆ. ಆಗ ಯಶ್ ಐರಾಗೆ ಅ, ಆ, ಇ, ಈ ಎಂದು ಕನ್ನಡ ವರ್ಣಮಾಲೆಗಳನ್ನು ಹೇಳಿಕೊಂಡುತ್ತಾರೆ. ಆಗ ಐರಾ ಸಹ ಯಶ್ ಹೇಳಿದ ರೀತಿಯಲ್ಲಿಯೇ ಕ್ಯೂಟ್ ಆಗಿ ಹೇಳುತ್ತಾಳೆ. ಯಶ್ ಮಗಳನ್ನು ಸೂಪರ್ ಎಂದು ಹೈ ಫೈವ್ ಕೊಡುತ್ತಾರೆ.

     

    View this post on Instagram

     

    A post shared by Radhika Pandit (@iamradhikapandit)

    ಈ ವೀಡಿಯೋ ನೋಡಿದ ನೆಟ್ಟಿಗರು, ಕ್ಲಾಸ್ ಸೂಪರ್, ನಮ್ ಐರಾ ಸಕ್ಕತ್ ಫಾಸ್ಟ್ ಎಂದು ಕಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಯಶ್‍ಗೆ ಕನ್ನಡದ ಮೇಲಿನ ಅಭಿಮಾನವನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ:  ಕೆಜಿಎಫ್ ಸಿನಿಮಾದ ಹಾಡಿಗೆ ಕಿಲಿ ಪೌಲ್ ಮಸ್ತ್ ಸ್ಟೆಪ್ಸ್

    ಎರಡುವಾರದ ಹಿಂದೆಯಷ್ಟೇ 36ನೇ ವಸಂತಕ್ಕೆ ಕಾಲಿಟ್ಟ ಯಶ್ ಸಖತ್ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರ ಹುಟ್ಟುಹಬ್ಬದ ಪ್ರಯುಕ್ತ ಯಶ್ ಅಭಿಮಾನಿಗಳು ಹಸಿರು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಶಸ್ವಿಯಾಗಿ ನಡೆಯಿತು. ಯಶ್ ಅವರ ‘ಕೆಜಿಎಫ್-2’ ಸಿನಿಮಾಗಾಗಿ ಸಿನಿಮಾರಂಗವೇ ಕಾಯುತ್ತಿದ್ದು, ಇದೇ ವರ್ಷ ಏಪ್ರಿಲ್ 14 ರಂದು ಸಿನಿಮಾ ರಿಲೀಸ್ ಆಗುತ್ತೆ ಎಂದು ಚಿತ್ರತಂಡ ತಿಳಿಸಿದೆ.

  • ಶುಭಾನನ್ನು ನೋಡಲು ಹಳ್ಳಿಗೆ ಹೋದ ನೀತು

    ಶುಭಾನನ್ನು ನೋಡಲು ಹಳ್ಳಿಗೆ ಹೋದ ನೀತು

    ಬೆಂಗಳೂರು: ಚಂದನವನದ ನಟಿ ಶುಭಾಪೂಂಜಾರನ್ನು ನೋಡಲು ಸ್ನೇಹಿತೆ ನೀತು ಅವರ ಹಳ್ಳಿಗೆ ಹೋಗಿದ್ದಾರೆ.

    ನೀತು ಮತ್ತು ಶುಭಾ ಚಂದನವನದ ನಟಿಯರು. ಇವರಿಬ್ಬರು ಒಳ್ಳೆಯ ಸ್ನೇಹಿತರು. ಇತ್ತೀಚೆಗಷ್ಟೇ ಶುಭಾಪೂಂಜಾ ತಮ್ಮ ಬಹುಕಾಲದ ಗೆಳೆಯ ಸುಮಂತ್ ಜೊತೆ ಊರಿನ ಮಜಲಬೆಟ್ಟುಬೀಡುವಿನಲ್ಲಿರುವ ಮನೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಗೆ ನೀತು ಬಂದಿರಲಿಲ್ಲ. ಹೀಗಾಗಿ ನೀತು ಶುಭಾ ಇರುವ ಅವರ ಅಜ್ಜಿಯ ಮನೆಗೆ ಹೋಗಿ ಅವರನ್ನು ಭೇಟಿ ಮಾಡಿದ್ದಾರೆ. ನೀತು ಬಂದ ಕಾರಣ ಶುಭಾ ಫುಲ್ ಖುಷ್ ಆಗಿದ್ದು, ನೀತು ಜೊತೆಗೆ ಸಮಯ ಕಳೆದ ಫೋಟೋಗಳನ್ನು ಇನ್‍ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ಫೋಟೋ ಶೇರ್ ಮಾಡಿದ ಶುಭಾ, ಕೊನೆಗೂ ನಮ್ಮ ಮನೆಗೆ ನೀತು ಬಂದಿದ್ದಾಳೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ನೀತು ಸಹ ತಮ್ಮ ಇನ್‍ಸ್ಟಾ ಸ್ಟೋರಿಯಲ್ಲಿ, ವಧುವನ್ನು ಅವಳ ಊರಿನಲ್ಲೇ ಭೇಟಿಯಾದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಶುಭಾ ಮತ್ತು ನೀತು ತೋಟಕ್ಕೆ ಹೋಗಿರುವ ಫೋಟೋವನ್ನು ಇವರು ಶೇರ್ ಮಾಡಿಕೊಂಡಿದ್ದು, ಇಬ್ಬರು ಫುಲ್ ಎಂಜಯ್ ಮೂಡಿನಲ್ಲಿ ಇದ್ದಾರೆ. ಇನ್ನೊಂದು ಫೋಟೋದಲ್ಲಿ ಶುಭಾ, ಪತಿ ಸುಮಂತ್ ಮತ್ತು ಇತರೆ ಸ್ನೇಹಿತರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: 180 ಮಿಲಿಯನ್ ವರ್ಷದ ಹಳೆಯ ‘ಸೀ ಡ್ರ್ಯಾಗನ್’ ಅತೀ ದೊಡ್ಡ ಪಳೆಯುಳಿಕೆ ಪತ್ತೆ

    ಶುಭಾ ತಾನು ಮದುವೆಯಾದ ಪಾರಂಪರಿಕ ಮನೆಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಈ ಕುರಿತು ಇನ್‍ಸ್ಟಾದಲ್ಲಿ ಅವರು, ನನ್ನ ಮನೆ ಮಜಲಬೆಟ್ಟುಬೀಡು. ನಾನು ಮದುವೆಯಾದ ಮನೆಯನ್ನು ತೋರಿಸುವಂತೆ ಸಾಕಷ್ಟು ಜನ ಕೇಳಿದ್ದರು. ಇದು ನನ್ನ ಅಜ್ಜಿಯ ಮನೆ. ಇದು 800 ವರ್ಷಗಳ ಪರಂಪರೆ ಹೊಂದಿರುವ ಮನೆಯಾಗಿದೆ. ಈ ಮನೆಯಲ್ಲಿಯೇ ನಾನು ಬೆಳೆದಿದ್ದು, ನಾನು ಯಾವಾಗಲೂ ಈ ಮನೆಯಲ್ಲಿಯೇ ಮದುವೆಯಾಗಬೇಕೆಂದು ಅಂದುಕೊಂಡಿದ್ದೆ ಎಂದು ಬರೆದುಕೊಂಡಿದ್ದರು.

  • ಕ್ರಿಸ್‍ಮಸ್ ಮೂಡ್ ನಲ್ಲಿ ಸ್ಯಾಂಡಲ್‍ವುಡ್ ಸಿಂಡ್ರೆಲಾ ಕಿಡ್ಸ್

    ಕ್ರಿಸ್‍ಮಸ್ ಮೂಡ್ ನಲ್ಲಿ ಸ್ಯಾಂಡಲ್‍ವುಡ್ ಸಿಂಡ್ರೆಲಾ ಕಿಡ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಮಕ್ಕಳು ಕ್ರಿಸ್‍ಮಸ್ ಮೂಡ್ ನಲ್ಲಿ ಇದ್ದು, ಫುಲ್ ಎಂಜಾಯ್ ಮಾಡುತ್ತಿದ್ದಾರೆ.

    ರಾಧಿಕಾ ತಮ್ಮ ಮುದ್ದು ಮಕ್ಕಳು ಐರಾ ಮತ್ತು ಯಥರ್ವ್ ಕ್ರಿಸ್‍ಮಸ್ ಟ್ರೀ ಮುಂದೆ ನಿಂತುಕೊಂಡಿರುವ ಫೋಟೋವನ್ನು ಇನ್‍ಸ್ಟಾ ಸ್ಟೋರಿಗೆ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ರಾಧಿಕಾ ಜೊತೆಗೆ ಇಬ್ಬರು ಮಕ್ಕಳು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಮಂತ ಬೇಡ, ಕಷ್ಟದಲ್ಲಿರುವವನ ಜೊತೆ ಡೇಟಿಂಗ್ ಮಾಡಲು ಇಷ್ಟ: ಹರ್ನಾಜ್ ಸಂಧು

    ಫೋಟೋದಲ್ಲಿ ಮೊದಲು ಯಥರ್ವ್ ಕ್ರಿಸ್‍ಮಸ್ ಟ್ರೀ ಬಳಿ ಬಂದು ಅಲಂಕಾರವನ್ನು ನೋಡುತ್ತಿರುತ್ತಾನೆ. ನಂತರ ಐರಾ ಸಹ ಅವನ ಬಳಿಗೆ ಬಂದು ಕ್ರಿಸ್‍ಮಸ್ ಟ್ರೀಗೆ ಮಾಡಿರುವ ಅಲಂಕಾರನ್ನ ಬಹಳ ಕುತೂಹಲದಿಂದ ನೋಡುತ್ತಿರುತ್ತಾರೆ. ನಂತರ ತಾಯಿ ರಾಧಿಕಾ ಅವರಿಬ್ಬರ ಬಳಿ ಬಂದು ಆ ಅಲಂಕಾರವನ್ನು ತೋರಿಸುತ್ತಿರುವಂತೆ ಫೋಟೋದಲ್ಲಿ ಕಾಣುತ್ತೆ. ಒಟ್ಟಿನಲ್ಲಿ ಎಲ್ಲ ಫೋಟೋಗಳು ಮುದ್ದಾಗಿದ್ದು, ಮಕ್ಕಳು ಮಾತ್ರ ಈ ಅಲಂಕಾರವನ್ನು ಬಹಳ ಕುತೂಹಲದಿಂದ ನೋಡುವುದನ್ನು ನಾವು ಗಮನಿಸಬಹುದು.

    ರಾಧಿಕಾ ಅವರಿಗೆ ಕೇಕ್ ಮಾಡುವುದು, ಕ್ರಾಫ್ಟ್ ವರ್ಕ್ ಮಾಡುವುದು, ಕ್ರಿಸ್‍ಮಸ್ ತಯಾರಿ ಮಾಡುವುದೆಲ್ಲ ಸಂಭ್ರಮ ತರುತ್ತೆ. ಎಷ್ಟೂ ಬಾರಿ ಅವರೇ ಕೇಕ್, ಕುಕ್ಕಿಸ್ ಮಾಡಿ ಇನ್‍ಸ್ಟಾ ದಲ್ಲಿ ಪೋಸ್ಟ್ ಅನ್ನು ಮಾಡಿದ್ದಾರೆ. ಇಂದು ಕ್ರಿಸ್‍ಮಸ್ ಆಗಿರುವುದರಿಂದ ರಾಧಿಕಾ ಮನೆಯಲ್ಲಿ ಕ್ರಿಸ್‍ಮಸ್ ಸಂಭ್ರಮವಿದ್ದು, ಆ ಫೋಟೋಗಳನ್ನು ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ: ನಿಖಿಲ್ ಕುಮಾರಸ್ವಾಮಿ

  • ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

    ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

    ಬೆಂಗಳೂರು: ಚಂದನವನದ ಕ್ಯೂಟ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಸೋಶಿಯಲ್ ಮಿಡಿಯಾದಲ್ಲಿ ಒಬ್ಬರನೊಬ್ಬರು ಕಾಲೆಳೆದುಕೊಂಡಿದ್ದಾರೆ.

    ರಾಧಿಕಾ ಇನ್‍ಸ್ಟಾಗ್ರಾಮ್ ನಲ್ಲಿ ಅವರು ಫಿಲ್ಮಿ ಸ್ಟೈಲ್‍ನಲ್ಲಿ ಕೊದಲನ್ನು ಹಾರಿಸುವ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಹೇರ್ ಕಮರ್ಷಿಯಲ್ ಅಲ್ಲ. ಕ್ಯಾಮೆರಾಮನ್ ಇದನ್ನು ಉಚಿತವಾಗಿ ಸೆರೆಹಿಡಿಯಲು ಮುಂದಾದಾಗ ನಾನು ಫಿಲ್ಮಿ ಸ್ಟೈಲ್ ನಲ್ಲಿ ಪೋಸ್ ಕೊಟ್ಟೆ ಎಂದು ಬರೆದು ಶೇರ್ ಮಾಡಿದರು.

     

    View this post on Instagram

     

    A post shared by Radhika Pandit (@iamradhikapandit)

    ಈ ಪೋಸ್ಟ್ ನೋಡಿದ ಯಶ್, ಹೌದು, 45 ಟೇಕ್ ಆದ ನಂತರ ನನಗೆ ಈ ವೀಡಿಯೋಗೆ ಚಾರ್ಜ್ ಮಾಡುವ ಇಚ್ಛೆ ಅಥವಾ ಶಕ್ತಿ ಇರಲಿಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಇವರಿಬ್ಬರ ಈ ಮುದ್ದು ಜಗಳ ನೋಡಿದ ನೆಟ್ಟಿಗರು ಫುಲ್ ಖುಷ್ ಆಗಿದ್ದು, ನಿಮ್ಮಂದು ಕ್ಯೂಟ್ ಜೋಡಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

    ಇವರಿಬ್ಬರ ಪ್ರೀತಿಯನ್ನು ನೋಡಿ ಅಭಿಮಾನಿಗಳು ಇದೇ ರೀತಿ ನಾವು ಇರಬೇಕು ಎಂದು ಇಷ್ಟ ಪಡುತ್ತಾರೆ. ಇನ್ನೂ ಜೋಡಿ ಇತ್ತೀಚೆಗೆ 5ನೇ ವರ್ಷದ ಮದುವೆ ಮದುವೆ ವಾರ್ಷಿಕೋತ್ಸವದ ಆಚರಿಸಿಕೊಂಡಿದ್ದರು. ಇದನ್ನೂ ಓದಿ:  ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

     

    View this post on Instagram

     

    A post shared by Radhika Pandit (@iamradhikapandit)

    ರಾಧಿಕಾ ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ ನೀವು ಧೈರ್ಯಶಾಲಿ ಸಂತೋಷದ ವ್ಯಕ್ತಿಯಾಗಿರುತ್ತೀರಿ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ ಎಂದು ಬರೆದು ಯಶ್ ಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದರು.

     

    View this post on Instagram

     

    A post shared by Radhika Pandit (@iamradhikapandit)

    ನಂತರ ಯಶ್ ಜೊತೆಗೆ ಆ್ಯನಿವರ್ಸರಿ ಸೆಲೆಬ್ರೆಷನ್ ನಲ್ಲಿ, ಛೆ.. ಯಶ್ ಜೊತೆಗೆ ನಾನು ಸೆಲ್ಫಿ ತೆಗೆದುಕೊಳ್ಳಲು ಎಷ್ಟು ಕಷ್ಟ ಪಟ್ಟಿದ್ದೇನೆ. ಈಗ ನಮಗೆ ಟಾಸ್ಕ್‍ಮಾಸ್ಟರ್ ಯಾರೆಂದು ತಿಳಿದಿದೆ ಎಂದು ಬರೆದು ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್