Tag: chandigarh

  • ಮಧ್ಯರಾತ್ರಿ ಪತಿ, ಪತ್ನಿ ನಡುವೆ ಜಗಳ – ಪತ್ನಿಯನ್ನು ಸಮಾಧಾನಿಸಲು ಹೋಗಿ ಇಬ್ರೂ ಆತ್ಮಹತ್ಯೆ

    ಮಧ್ಯರಾತ್ರಿ ಪತಿ, ಪತ್ನಿ ನಡುವೆ ಜಗಳ – ಪತ್ನಿಯನ್ನು ಸಮಾಧಾನಿಸಲು ಹೋಗಿ ಇಬ್ರೂ ಆತ್ಮಹತ್ಯೆ

    – 14 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದ ಜೋಡಿ

    ಚಂಢೀಗಡ್: ಕೌಟುಂಬಿಕ ಕಲಹದಿಂದ ಪತಿ-ಪತ್ನಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ.

    ನೀರಜ್(37) ಹಾಗೂ ನಿಶಾ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಬುಧವಾರ ರಾತ್ರಿ ಸುಮಾರು 12 ಗಂಟೆಗೆ ನೀರಜ್ ಹಾಗೂ ನಿಶಾ ನಡುವೆ ಜಗಳ ನಡೆದಿತ್ತು. ಬಳಿಕ ಇಬ್ಬರು ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    14 ವರ್ಷಗಳ ಹಿಂದೆ ನೀರಜ್ ಹಾಗೂ ನಿಶಾ ಪ್ರೀತಿಸಿ ಮದುವೆಯಾಗಿದ್ದರು. ನೀರಜ್ ಫೋಟೋಗ್ರಾಫರ್ ಕೆಲಸ ಮಾಡುತ್ತಿದ್ದನು. ಮದುವೆಯಾದ ಬಳಿಕ ಇಬ್ಬರು ಯಮುನಾನಗರದಲ್ಲಿ ವಾಸಿಸುತ್ತಿದ್ದರು. ಈ ದಂಪತಿಗೆ 8 ಹಾಗೂ 14 ವರ್ಷದ ಪುತ್ರರು ಇದ್ದಾರೆ. ಪೋಷಕರ ಪ್ರಕಾರ ಇಬ್ಬರು ಯಾವಾಗಲೂ ಜಗಳವಾಡುತ್ತಿದ್ದರು.

    ಬುಧವಾರ ರಾತ್ರಿ ಕೂಡ ನೀರಜ್ ಹಾಗೂ ನಿಶಾ ನಡುವೆ ಜಗಳವಾಗಿದೆ. ಜಗಳದಿಂದ ಕೋಪಗೊಂಡು ನಿಶಾ ಯಮುನಾನಗರ ರೈಲ್ವೆ ನಿಲ್ದಾಣದ ಹಳಿಗೆ ತಲುಪಿದ್ದಳು. ಆಕೆಯನ್ನು ಸಮಾಧಾನ ಮಾಡಲು ನೀರಜ್ ಹಿಂದೆಯೇ ಹೋದನು. ಬಳಿಕ ಅಲ್ಲಿಯೂ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಅಲ್ಲಿಗೆ ಬಂದ ಫಿರೋಜ್‍ಪುರ-ಧನ್‍ಬಾದ್ ಎಕ್ಸ್ ಪ್ರೆಸ್ ರೈಲಿನ ಎದುರು ಜಿಗಿದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಶಾ ತಂದೆ ಧನಿರಾಮ್, ಇಬ್ಬರ ನಡುವೆ ಯಾವಾಗಲೂ ಜಗಳವಾಗುತ್ತಿತ್ತು. ಹಾಗಾಗಿ ಅವರಿಬ್ಬರು ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿರಬಹುದು. ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಜಿಆರ್‌ಪಿ ಪೊಲೀಸ್ ಅಧಿಕಾರಿ ಧರ್ಮಪಾಲ್, ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅವರ ಪೋಷಕರಿಗೆ ಮೃತದೇಹಗಳನ್ನು ರವಾನಿಸಲಾಗಿದೆ.

  • ಬಾಲಕನಿಗೆ ನಾಯಿ ಕಚ್ಚಿದ್ದಕ್ಕೆ ಮಾಲೀಕನ ಮೇಲೆ ಬಿತ್ತು ಕೇಸ್

    ಬಾಲಕನಿಗೆ ನಾಯಿ ಕಚ್ಚಿದ್ದಕ್ಕೆ ಮಾಲೀಕನ ಮೇಲೆ ಬಿತ್ತು ಕೇಸ್

    ಚಂಡೀಗಢ: ನೆರೆ ಮನೆಯ ಬಾಲಕನಿಗೆ ನಾಯಿ ಕಚ್ಚಿದ್ದಕ್ಕೆ ಮಾಲೀಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಪಂಜಾಬ್‍ನಲ್ಲಿ ನಡೆದಿದೆ.

    ಚಂಡೀಗಢದ ಶಿವಾಲಿಕ್ ಅವೆನ್ಯೂ ಪ್ರದೇಶದ ನಿವಾಸಿ ಅಮರಿಂದರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಮರಿಂದರ್ ಪಕ್ಕದ ಮನೆಯ ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಮರಿಂದರ್ ಸಾಕಿದ ಲಾಬ್ರಡರ್ ನಾಯಿ ನನ್ನ ಮಗ ರೆಹತ್‍ಪ್ರೀತ್(6)ಗೆ ಕಚ್ಚಿ ತೀವ್ರ ಗಾಯಗೊಳಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಶನಿವಾರ ಮನೆಯ ಮುಂದೆ ನನ್ನ ಮಗ ರೆಹತ್‍ಪ್ರೀತ್ ಆಟವಾಡುತ್ತಿದ್ದನು. ಈ ವೇಳೆ ಅಮರಿಂದರ್ ತಾನು ಸಾಕಿದ್ದ 1 ಲಾಬ್ರಡರ್ ಹಾಗೂ 1 ಪಿಟ್‍ಬುಲ್ ನಾಯಿಯನ್ನು ಕರೆದುಕೊಂಡು ವಾಕಿಂಗ್ ಹೋಗುತ್ತಿದ್ದನು. ಆಗ ಏಕಾಏಕಿ ಲಾಬ್ರಡರ್ ನಾಯಿ ನನ್ನ ಮಗನ ಮೇಲೆ ದಾಳಿ ಮಾಡಿತು. ಆತನ ಕಾಲು ಹಾಗೂ ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿತು ಎಂದು ಆರೋಪಿಸಿದ್ದಾರೆ.

    ತಕ್ಷಣ ಅಮರಿಂದರ್ ಕೂಡ ಮಗನ ರಕ್ಷಣೆಗೆ ಬಂದು ನಾಯಿಯನ್ನು ಎಳೆದುಕೊಂಡು ಹೋದ. ಬಳಿಕ ನಾನು ತಕ್ಷಣ ಮಗನನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಿದೆ. ಅಮರಿಂದರ್ ನಿರ್ಲಕ್ಷ್ಯ ತೋರಿ, ನಾಯಿಯ ಚೈನ್ ಬಿಗಿಯಾಗಿ ಹಿಡಿದುಕೊಳ್ಳದೆ ವಾಕಿಂಗ್ ಬಂದಿದ್ದನು. ಆದ್ದರಿಂದ ನಾಯಿ ಆತನಿಂದ ಬಿಡಿಸಿಕೊಂಡು ಏಕಾಏಕಿ ಮಗನ ಮೇಲೆ ದಾಳಿ ಮಾಡಿತು ಎಂದು ಬಾಲಕನ ತಂದೆ ಆರೋಪಿಸಿದ್ದು, ಬುಧವಾರ ಅಮರಿಂದರ್ ವಿರುದ್ಧ ದೂರು ನೀಡಿದ್ದಾರೆ.

    ಈ ಸಂಬಂಧ ಪೊಲೀಸರು ಅಮರಿಂದರ್ ವಿರುದ್ಧ ಐಪಿಸಿ ಸೆಕ್ಷನ್ 323, 28 ಮತ್ತು 506 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕಾಯ್ದೆಗಳು ಪ್ರಾಣಿಗಳ ಬಗ್ಗೆ ನಿರ್ಲಕ್ಷ್ಯ ದೋರಣೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳಿಗೆ ಸಂಬಂಧಿಸಿದೆ.

  • ಅಣ್ಣ ಓಡಿಹೋಗಿ ಮದ್ವೆಯಾಗಿದ್ದಕ್ಕೆ ತಮ್ಮನನ್ನು ಕಂಬಕ್ಕೆ ಕಟ್ಟಿ, ಸುಟ್ಟರು

    ಅಣ್ಣ ಓಡಿಹೋಗಿ ಮದ್ವೆಯಾಗಿದ್ದಕ್ಕೆ ತಮ್ಮನನ್ನು ಕಂಬಕ್ಕೆ ಕಟ್ಟಿ, ಸುಟ್ಟರು

    – ರೈಲ್ ಮಿಲ್‍ನಲ್ಲಿ ಸಜೀವ ದಹನ
    – ಮೂವರು ಆರೋಪಿಗಳು ಅರೆಸ್ಟ್

    ಚಂಡೀಗಢ: ಅಣ್ಣ ಯುವತಿಯೋರ್ವಳನ್ನು ಪ್ರೀತಿಸಿ ಓಡಿಹೋಗಿ ಮದುವೆಯಾದ ಸಿಟ್ಟಿಗೆ ತಮ್ಮನನ್ನು ಯುವತಿ ಕಡೆಯವರು ಕಂಬಕ್ಕೆ ಕಟ್ಟಿ, ಸಜೀವ ಸುಟ್ಟ ಅಮಾನವೀಯ ಘಟನೆ ಪಂಜಾಬ್‍ನಲ್ಲಿ ನಡೆದಿದೆ.

    ಶನಿವಾರ ಪಂಜಾಬ್‍ನ ಮಾನ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಜಸ್ಪ್ರೀತ್ ಸಿಂಗ್(16) ಮೃತ ದುರ್ದೈವಿ. ಆರೋಪಿಗಳನ್ನು ಜಶನ್ ಸಿಂಗ್, ಗುರ್ಜಿತ್ ಸಿಂಗ್ ಹಾಗೂ ರಾಜು ಸಿಂಗ್ ಎಂದು ಗುರುತಿಸಲಾಗಿದೆ. ಜಸ್ಪ್ರೀತ್ ಅಣ್ಣ ಕುಲ್ವಿಂದರ್ ಸಿಂಗ್ ಹಾಗೂ ಆರೋಪಿ ಜಶನ್ ತಂಗಿ ರಾಜೋ ಕೌರ್ ಪ್ರೀತಿಸುತ್ತಿದ್ದರು. ಇಬ್ಬರೂ ಕೂಡ ದಲಿತ ಸಮುದಾಯದವರಾಗಿದ್ದರೂ ರಾಜೋ ಮನೆಯವರಿಗೆ ಕುಲ್ವಿಂದರ್ ಇಷ್ಟವಿರಲಿಲ್ಲ. ಹೀಗಾಗಿ ಎರಡು ವರ್ಷದ ಹಿಂದೆ ಕುಲ್ವಿಂದರ್ ಮತ್ತು ರಾಜೋ ಓಡಿ ಹೋಗಿ ಮದುವೆಯಾಗಿದ್ದರು. ಆದರೆ ಅವರಿಬ್ಬರನ್ನು ಗ್ರಾಮಕ್ಕೆ ಬರಲು ಮನೆಯವರು ಬಿಡುತ್ತಿರಲಿಲ್ಲ. ಇದನ್ನೂ ಓದಿ:ದಲಿತ ಯುವಕನನ್ನು ಪ್ರೀತಿಸಿದ ಮಗಳನ್ನು ಜೀವಂತ ಸುಟ್ಟ ತಾಯಿ

    ಅಲ್ಲದೆ ಈ ವಿಷಯಕ್ಕೆ ರಾಜೋ ಕುಟುಂಬ ಗ್ರಾಮದಲ್ಲಿ ತಲೆತಗ್ಗಿಸುವಂತಾಗಿತ್ತು. ಇದರ ನಡುವೆ ಜಸ್ಪ್ರೀತ್ ಪದೇ ಪದೇ ರಾಜೋ ಕುಟುಂಬಕ್ಕೆ ಇದೇ ವಿಚಾರಕ್ಕೆ ಹಿಯಾಳಿಸುತ್ತಿದ್ದನು. ಈ ಬಗ್ಗೆ ತಿಳಿದು ಬೇರೆ ಊರಿನಲ್ಲಿ ಪತ್ನಿ, ಮಗುವಿನೊಂದಿಗೆ ವಾಸಿಸುತ್ತಿದ್ದ ಜಶನ್ ಗ್ರಾಮಕ್ಕೆ ಮರುಳಿದ್ದನು. ಮೊದಲೇ ಅಣ್ಣ ಮರ್ಯಾದೆ ಹಾಳು ಮಾಡಿದ್ದಾನೆ, ಈಗ ತಮ್ಮ ಹೀಯಾಳಿಸುತ್ತಿದ್ದಾನೆ ಎಂದು ಜಶನ್ ಕೋಪಕೊಂಡಿದ್ದನು.

    ಇದೇ ಸಿಟ್ಟಲ್ಲಿ ಶನಿವಾರ ರಾತ್ರಿ ಜಸ್ಪ್ರೀತ್ ಒಬ್ಬನೇ ಸಿಕ್ಕಾಗ ಆತನನ್ನು ಜಶನ್ ಹಾಗೂ ಆತನ ಸ್ನೇಹಿತರು ಎಳೆದುಕೊಂಡು ಹೋಗಿದ್ದರು. ಮುಚ್ಚಿದ್ದ ರೈಸ್ ಮಿಲ್‍ನೊಳಗೆ ಜಸ್ಪ್ರೀತ್‍ನನ್ನು ಕರೆದೊಯ್ದು, ಕಂಬಕ್ಕೆ ಆತನನ್ನು ಕಟ್ಟಿ ಬೆಂಕಿ ಹಚ್ಚಿದ್ದರು. ಪರಿಣಾಮ ಜಸ್ಪ್ರೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಇದನ್ನೂ ಓದಿ:22 ವರ್ಷದ ಮಗಳಿಗೆ ವಿದ್ಯುತ್ ಶಾಕ್ ನೀಡಿ, ಕತ್ತು ಸೀಳಿದ ಪಾಪಿ ತಂದೆ

    ಇತ್ತ ಜಸ್ಪ್ರೀತ್ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಪೊಲೀಸರಿಗೆ ದೂರು ಕೊಟ್ಟಿದ್ದರು. ಜಸ್ಪ್ರೀತ್ ಹುಡುಕಾಟದಲ್ಲಿದ್ದ ಪೊಲೀಸರು ಭಾನುವಾರ ಆತನ ಮೃತದೇಹ ರೈಸ್ ಮಿಲ್‍ನಲ್ಲಿ ಪತ್ತೆಹಚ್ಚಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು, ಮೂವರನ್ನು ಪೊಲೀಸರು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • 1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಪ್ರಾಣ ಬಿಟ್ಟ 78 ವರ್ಷದ ಸ್ಪರ್ಧಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಪ್ರಾಣ ಬಿಟ್ಟ 78 ವರ್ಷದ ಸ್ಪರ್ಧಿ

    ಚಂಢೀಗಡ: 78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ.

    ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

    1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಬಕ್ಷೀಶ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

    ಕಳೆದ ಶನಿವಾರ ಈ ಅಥ್ಲೆಟಿಕ್ ಮೀಟ್ ಆಯೋಜಿಸಲಾಗಿತ್ತು. 1500 ಮೀ. ಓಟದಲ್ಲಿ ಬಕ್ಷೀಶ್ ಚಿನ್ನದ ಪದಕ ಗೆದ್ದಿದ್ದರು ಎಂದು ಸಂಬಂಧಿ ಮಹಿಂದರ್ ಸಿಂಗ್ ವರ್ಕ್ ತಿಳಿಸಿದ್ದಾರೆ. ಬಕ್ಷೀಶ್ ತಮ್ಮ ಓಟವನ್ನು ಪೂರ್ಣಗೊಳಿಸಿದ್ದು ಸಂತಸ ತಂದಿದೆ ಎಂದು ಜೊತೆಯಲ್ಲಿದ್ದವರಿಗೆ ಹೇಳಿದ್ದರು.

    ವಿಶ್ರಾಂತಿ ಪಡೆಯಲು ಬಕ್ಷೀಶ್ ಮೊದಲು ತಮ್ಮ ಉಡುಪನ್ನು ಧರಿಸಲು ಹೋಗಿದ್ದರು. ಆದರೆ ಅವರಿಗೆ ತಮ್ಮ ಉಡುಪನ್ನು ಧರಿಸಲು ಆಗಲಿಲ್ಲ. ಈ ವೇಳೆ ಬಕ್ಷೀಶ್ ಅಲ್ಲಿಯೇ ಕುಸಿದು ಬಿದ್ದರು. ಬಕ್ಷೀಶ್‍ಗೆ ಓಡುವುದು ಎಂದರೆ ತುಂಬಾ ಇಷ್ಟ. ಅಲ್ಲದೆ ಅವರು ಯಾವಾಗಲೂ ನಾನು ಸತ್ತರೆ ಮೈದಾನದಲ್ಲಿಯೇ ಆಟಗಾರನಾಗಿ ಸಾಯಬೇಕು ಎಂದು ಹೇಳುತ್ತಿದ್ದರು ಎಂದು ಬಕ್ಷೀಶ್ ಸ್ನೇಹಿತರು ತಿಳಿಸಿದ್ದಾರೆ.

    ಬಕ್ಷೀಶ್ ಸಿಂಗ್ ಮೊದಲು ಸೈನ್ಯೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿವೃತ್ತಿ ಪಡೆದ ಬಳಿಕ ಅವರು ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ. 1982ರಲ್ಲಿ ಅವರು ಕ್ರೀಡೆಯಲ್ಲಿ ಭಾಗವಹಿಸಲು ಶುರು ಮಾಡಿದ್ದರು. ಬಕ್ಷೀಸ್ ಅವರು ಇವರೆಗೂ 200ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಬಕ್ಷೀಶ್ 800, 1500 ಹಾಗೂ 5000 ಮೀ. ಓಡುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದರು.

  • ಬಾಲಕಿಯನ್ನು ಮಂಚಕ್ಕೆ ಕಟ್ಟಿ 16ರ ಬಾಲಕನಿಂದ ರೇಪ್

    ಬಾಲಕಿಯನ್ನು ಮಂಚಕ್ಕೆ ಕಟ್ಟಿ 16ರ ಬಾಲಕನಿಂದ ರೇಪ್

    ಚಂಡೀಗಢ: 16 ವರ್ಷದ ಬಾಲಕ ತನ್ನ ಸೋದರ ಸಂಬಂಧಿಯನ್ನು ಮಂಚಕ್ಕೆ ಹಗ್ಗದಿಂದ ಕಟ್ಟಿ ಅತ್ಯಾಚಾರವೆಸಗಿದ ಘಟನೆ ಹರಿಯಾಣಾದ ಗುರುಗ್ರಾಮದಲ್ಲಿ ನಡೆದಿದೆ.

    ಬಾಲಕ ಗುರುವಾರ ತನ್ನ ಸೋದರ ಸಂಬಂಧಿಯ ಮೇಲೆ ಅತ್ಯಾಚಾರ ಮಾಡಿದ್ದನು. ಶುಕ್ರವಾರ 15 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಳು. ಬಳಿಕ ಶಿಕ್ಷಕರು ಆಕೆಯನ್ನು ಎಚ್ಚರಗೊಳಿಸಿ ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ವಿವರಿಸಿದಳು.

    ಬಾಲಕಿ ಘಟನೆ ಬಗ್ಗೆ ಶಿಕ್ಷಕರಿಗೆ ಹೇಳಿದ ನಂತರ ಅವರು ಆಕೆಯ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಬಾಲಕಿಯ ತಾಯಿ ತನ್ನ ಅತ್ತಿಗೆಯ ಮಗನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಅತ್ತಿಗೆಗೆ ಹುಷಾರಿಲ್ಲದ ಕಾರಣ ಮನೆಯ ಕೆಲಸ ಮಾಡಲು ಮಹಿಳೆ ತನ್ನ ಮಗಳನ್ನು ಅವರ ಮನೆಗೆ ಕಳುಹಿಸಿದ್ದರು. ಬಾಲಕಿ ಮನೆಗೆ ಬಂದ ನಂತರ ಅತ್ತಿಗೆ ತನ್ನ ಮಗನನ್ನು ಆಕೆಯ ಬಳಿ ಬಿಟ್ಟು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು.

    ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿದ ಬಾಲಕ, ಬಾಲಕಿಯನ್ನು ಎಳೆದು ಆಕೆಯ ಕೈ, ಕಾಲುಗಳನ್ನು ಮಂಚಕ್ಕೆ ಕಟ್ಟಿ ಅತ್ಯಾಚಾರ ಮಾಡಿದ್ದಾನೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಬಾಲಕನನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

  • ಕಂಬಕ್ಕೆ ಕಟ್ಟಿ ಥಳಿಸಿ, ನೀರು ಕೇಳಿದ್ದಕ್ಕೆ ಮೂತ್ರ ಕುಡಿಸಿದ್ರು- ವ್ಯಕ್ತಿ ಸಾವು

    ಕಂಬಕ್ಕೆ ಕಟ್ಟಿ ಥಳಿಸಿ, ನೀರು ಕೇಳಿದ್ದಕ್ಕೆ ಮೂತ್ರ ಕುಡಿಸಿದ್ರು- ವ್ಯಕ್ತಿ ಸಾವು

    ಚಂಡೀಗಢ: ತಮ್ಮೊಂದಿಗೆ ಗಲಾಟೆ ಮಾಡಿದ್ದಾನೆ ಎಂದು ಕಿಡಿಗೇಡಿಗಳು ದಲಿತ ವ್ಯಕ್ತಿಯೋರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಕುಡಿಯಲು ನೀರು ಕೇಳಿದಾಗ ಬಲವಂತವಾಗಿ ಮೂತ್ರ ಕುಡಿಸಿದ ಅಮಾನುಷ ಘಟನೆ ಪಂಜಾಬ್‍ನಲ್ಲಿ ನಡೆದಿದೆ. ತೀವ್ರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಾವನ್ನಪ್ಪಿದ್ದಾನೆ.

    ನವೆಂಬರ್ 7ರಂದು ಪಂಜಾಬ್‍ನ ಸಂಗೂರ್‌ನಲ್ಲಿ ಈ ಘಟನೆ ನಡೆದಿತ್ತು. 37 ವರ್ಷದ ದಲಿತ ವ್ಯಕ್ತಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿತ್ತು. ಅಷ್ಟೇ ಅಲ್ಲದೆ ಆತನಿಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದರು. ಗಂಭೀರ ಗಾಯಗೊಂಡಿದ್ದ ಸಂತ್ರಸ್ತನಿಗೆ ಚಂಡೀಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ 9 ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ದಲಿತ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

    ಚಂಗಲಿವಾಲಾ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ತ ಹಾಗೂ ಗ್ರಾಮದ ರಿಂಕು, ಆತನ ಸ್ನೇಹಿತರೊಡನೆ ವಾಗ್ವಾದ ನಡೆದಿತ್ತು. ಈ ಗಲಾಟೆ ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಅಂತ್ಯಗೊಂಡಿತ್ತು. ಆದರೆ ಇದಾದ ಬಳಿಕ ಮಾತುಕತೆಗೆಂದು ರಿಂಕು ಸಂತ್ರಸ್ತನನ್ನು ತನ್ನ ಮನೆಗೆ ಕರೆಸಿಕೊಂಡಿದ್ದನು. ಈ ವೇಳೆ ಸಂತ್ರಸ್ತನ ಮೇಲೆ ನಾಲ್ವರು ಸೇರಿ ಹಲ್ಲೆ ನಡೆಸಿ, ಕಂಬಕ್ಕೆ ಕಟ್ಟಿದ್ದರು. ಆಗ ಬಾಯರಿಕೆಯಿಂದ ಸಂತ್ರಸ್ತ ನೀರು ಕೇಳಿದಾಗ ಬಲವಂತವಾಗಿ ಆತನಿಗೆ ರಿಂಕು ಮತ್ತು ಆತನೊಟ್ಟಿಗೆ ಇದ್ದವರು ಮೂತ್ರ ಕುಡಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ಈ ಘಟನೆಯಲ್ಲಿ ಭಾಗಿಯಾದ ಆರೋಪಿಗಳಾದ ರಿಂಕು, ಅಮರ್‍ಜೀತ್ ಸಿಂಗ್, ಲಕ್ಕಿ, ಬೀಟಾ ತಲೆಮರಿಸಿಕೊಂಡಿದ್ದು, ನಾಲ್ವರ ಮೇಲೂ ಸೆಕ್ಷನ್ 302 (ಕೊಲೆ) ಆರೋಪದ ಅಡಿ ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ ರಾಜ್ಯದ ಪರಿಶಿಷ್ಟ ಜಾತಿ ಆಯೋಗ ಕೂಡ ಈ ಕುರಿತು ವಿವರ ಕೇಳಿದೆ ಎನ್ನಲಾಗಿದೆ.

  • ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

    ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

    ಚಂಡೀಗಢ: ಭಾರೀ ಪ್ರಮಾಣದಲ್ಲಿ ರೈತರು ತಮ್ಮ ಜಮೀನಿನಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ಪರಿಣಾಮ ರಾಜ್ಯದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಪಂಜಾಬ್ ಸರ್ಕಾರ ಹೊಸ ಉಪಾಯ ಮಾಡಿದೆ. ಕೃಷಿ ತ್ಯಾಜ್ಯ ಸುಡದೇ ಇದ್ದರೆ ಆ ರೈತರ ಪ್ರತಿ ಎಕ್ರೆಗೆ 2,500 ರೂ. ಪರಿಹಾರ ಧನವನ್ನು ನೀಡಲು ಮುಂದಾಗಿದೆ.

    ಮಾಯುಮಾಲಿನ್ಯದ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಉಸಿರಾಡಲು ಜನ ತೊಂದರೆ ಪಡುತ್ತಿದ್ದಾರೆ. ಹೀಗಾಗಿ ಪಂಜಾಬ್ ಸರ್ಕಾರ ರೈತರಿಗೆ ಪರಿಹಾರ ಧನ ಘೋಷಿಸಿ ಕೃಷಿ ತ್ಯಾಜ್ಯ ಸುಡದಂತೆ ಮನವಿ ಮಾಡಿಕೊಂಡಿದೆ. ಕೃಷಿ ತ್ಯಾಜ್ಯವನ್ನು ಸುಡದೇ ಇದ್ದರೆ ಪ್ರತಿ ಎಕ್ರೆಗೆ 2,500 ರೂಪಾಯಿ ರೈತರಿಗೆ ನೀಡುವುದಾಗಿ ಹೇಳಿದೆ.

    ಈ ಬಗ್ಗೆ ಕೃಷಿ ಇಲಾಖೆಯ ಕಾರ್ಯದರ್ಶಿ ಕಹಾನ್ ಸಿಂಗ್ ಪನ್ನು ಮಾತನಾಡಿ, ಬಾಸ್‍ಮತಿ ಹಾಗೂ ಇತರೆ ಭತ್ತದ ಬೆಳೆಯನ್ನು ಬೆಳೆಯುವ ರೈತರು 5 ಎಕ್ರೆ ಜಮೀನು ಹೊಂದಿದ್ದರೆ. ಅಲ್ಲಿ ಅವರು ಕೃಷಿ ತ್ಯಾಜ್ಯ ಸುಡದಿದ್ದರೆ, ಅವರ ಪ್ರತಿ ಎಕ್ರೆಗೆ 2,500 ರೂ. ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಈ ಪರಿಹಾರ ಧನವನ್ನು ಪಡೆಯಲು ರೈತರು ನ. 30ರ ಒಳಗೆ ಸಂಬಂಧಪಟ್ಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೇಕಾದ ದಾಖಲೆಗಳನ್ನು ಒಪ್ಪಿಸಬೇಕಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಯೇ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ದಾಖಲೆಗಳನ್ನು ನೀಡಿದ ಬಳಿಕ ಪರಿಹಾರ ಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಎಂದು ಪನ್ನು ಅವರು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೆ ಸರ್ಕಾರದ ಆದೇಶವನ್ನು ಮೀರಿ ರೈತರು ಕೃಷಿ ತ್ಯಾಜ್ಯವನ್ನು ಸುಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಿಲಾಗಿದೆ.

  • ಮದುವೆ ನಿರಾಕರಿಸಿದ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ

    ಮದುವೆ ನಿರಾಕರಿಸಿದ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ

    ಚಂಡೀಗಢ್: ಮದುವೆ ಆಗಲು ನಿರಾಕರಿಸಿದ್ದಕ್ಕೆ ತರಬೇತುದಾರ ಬಾಕ್ಸಿಂಗ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ಘಟನೆ ಮಂಗಳವಾರ ಹರಿಯಾಣದ ಪಟೌದಿಯಲ್ಲಿ ನಡೆದಿದೆ.

    ಸರಿತಾ(25) ಮೃತಪಟ್ಟ ಯುವತಿ. ಸರಿತಾ ಟೇಕ್ವಾಂಡೋ (ಬಾಕ್ಸರ್) ಆಟಗಾರ್ತಿಯಾಗಿದ್ದು, ಆಕೆ ಬಾಕ್ಸಿಂಗ್ ಕಲಿಯುತ್ತಿದ್ದಳು. ಸರಿತಾಗೆ ಬಾಕ್ಸಿಂಗ್ ಹೇಳಿಕೊಡುತ್ತಿದ್ದ ತರಬೇತಿದಾರ ಸೋಮ್‍ಬೀರ್ ಆಕೆಯನ್ನು ಪ್ರೀತಿಸಲು ಶುರು ಮಾಡಿದ್ದನು.

    ಸೋಮ್‍ಬೀರ್ ಮದುವೆಯಾಗುವಂತೆ ಸರಿತಾ ಬಳಿ ಕೇಳಿಕೊಂಡಿದ್ದಾನೆ. ಆದರೆ ಸರಿತಾ ಇದಕ್ಕೆ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ತರಬೇತುದಾರ ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಅಲ್ಲದೆ ಆಕೆಯ ತಾಯಿಗೆ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ.

    ರಾಜ್ಯಮಟ್ಟದ ಕುಸ್ತಿ ಆಟಗಾರನಾಗಿರುವ ಸೋಮ್‍ಬೀರ್ ಆಗಾಗ ಸರಿತಾ ಮನೆಗೆ ಭೇಟಿ ನೀಡುತ್ತಿದ್ದನು. ಸೋಮ್‍ಬೀರ್ ವಿರುದ್ಧ ಬಿಲಾಸ್‍ಪುರ್ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಆತ ಯಾವಾಗಲೂ ನಶೆಯಲ್ಲಿ ತೇಲಾಡುತ್ತಿದ್ದನು.

    ಸೋಮ್‍ಬೀರ್, ಸರಿತಾಳನ್ನು ಮದುವೆ ಆಗಲು ಇಚ್ಛಿಸಿದ್ದನು. ಆದರೆ ಸರಿತಾ, ಸೋಮ್‍ಬೀರ್ ನಶೆ ಮಾಡುವುದನ್ನು ನೋಡಿದ್ದಳು. ಹಾಗಾಗಿ ಆಕೆ ಸೋಮ್‍ಬೀರ್ ನನ್ನು ಮದುವೆ ಆಗಲು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಸೋಮ್‍ಬೀರ್ ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ.

  • ಮದ್ವೆ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

    ಮದ್ವೆ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

    ಚಂಡೀಗಢ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟ ಘಟನೆ ಪಂಜಾಬ್‌ನ ಪರ‍್ಯಾಲಿಯಲ್ಲಿ ನಡೆದಿದೆ.

    ಸುನಂ-ಭವಾನಿಗಡ ಮಾರ್ಗದಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಪತಿ-ಪತ್ನಿ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದರು ಎಂದು ಹೇಳಲಾಗುತ್ತಿದೆ.

    ಚಾಲಕ ಕೆಟ್ಟು ನಿಂತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಲ್ಲದೆ ಈ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.

    ಅಪಘಾತದಲ್ಲಿ ಪತಿ, ಪತ್ನಿ, ಅವರ ಮಗ ಹಾಗೂ ಮೊಮ್ಮಗಳು ಪ್ರಯಾಣಿಸುತ್ತಿದ್ದರು. ಮೃತಪಟ್ಟ ವ್ಯಕ್ತಿಯನ್ನು ಹರೀಶ್ ಅದಾಲ್ಕಾ ಎಂದು ಗುರುತಿಸಲಾಗಿದ್ದು, ಇವರು ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ರಾತ್ರಿ ನಾಲ್ವರು ಭವಾನಿಗಡದಲ್ಲಿ ನಡೆದ ಮದುವೆ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

    ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕೊಳವೆಬಾವಿಯಿಂದ ಜೀವಂತವಾಗಿ ಹೊರಬಂದ ಬಳಿಕ ಸಾವನ್ನಪ್ಪಿದ 5ರ ಬಾಲಕಿ

    ಕೊಳವೆಬಾವಿಯಿಂದ ಜೀವಂತವಾಗಿ ಹೊರಬಂದ ಬಳಿಕ ಸಾವನ್ನಪ್ಪಿದ 5ರ ಬಾಲಕಿ

    ಚಂಡೀಗಢ: ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ್ದ. ಈ ಸಾವಿನ ನೋವು ಮಾಸುವ ಮುನ್ನವೇ ಹರ್ಯಾಣದಲ್ಲಿ 5 ವರ್ಷದ ಬಾಲಕಿಯೊಬ್ಬಳು ಕೊಳವೆಬಾವಿಗೆ ಬಿದ್ದ ಘಟನೆ ನಡೆದಿದೆ. ವಿಪರ್ಯಾಸವೆಂದರೆ ಎನ್‌ಡಿಆರ್‌ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಜೀವಂತವಾಗಿ ಹೊರತೆಗೆದ ಬಳಿಕ ಬಾಲಕಿ ಸಾವನ್ನಪ್ಪಿದ್ದಾಳೆ.

    ಹರ್ಯಾಣದ ಘರೌಂಡಾದ ಹರಿಸಿಂಗ್‌ಪುರ ಗ್ರಾಮದಲ್ಲಿ ಶಿವಾನಿ(5) ಕೊಳವೆಬಾವಿಗೆ ಬಿದ್ದಿದ್ದಳು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಶಿವಾನಿ 50-60 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಳು. ಆದರೆ ಪೋಷಕರು ಬಾಲಕಿ ಕಾಣೆಯಾಗಿದ್ದಾಳೆ ಎಂದು ಆಕೆಗಾಗಿ ಹುಡುಕಾಟ ನಡೆಸಿದಾಗ ಕೊಳವೆಬಾವಿಯಲ್ಲಿ ಮಗಳು ಬಿದ್ದಿರುವುದು ತಿಳಿದುಬಂದಿದೆ. ಇದನ್ನೂ ಓದಿ:ಟಿವಿ ನೋಡುವುದರಲ್ಲಿ ದಂಪತಿ ಬ್ಯುಸಿ- ಟಬ್‍ನಲ್ಲಿ ಬಿದ್ದು ಪುತ್ರಿ ಸಾವು

    ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಎನ್‌ಡಿಆರ್‌ಎಫ್ ತಂಡ ಬಾಲಕಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬಾಲಕಿ ಕೆಳಮುಖವಾಗಿ ಕೊಳವೆಬಾವಿಯಲ್ಲಿ ಬಿದ್ದಿದ್ದ ಕಾರಣ ರಕ್ಷಣಾ ಕಾರ್ಯಾಚರಣೆ ವೇಳೆ ಆಕೆಯ ಕಾಲುಗಳು ಮಾತ್ರ ಕ್ಯಾಮೆರಾದಲ್ಲಿ ಕಾಣಿಸುತ್ತಿದ್ದವು. ಇತ್ತ ಆಕೆಯ ಉಸಿರಾಟಕ್ಕಾಗಿ ಆಮ್ಲಜನಕವನ್ನು ಕೂಡ ಕೊಳವೆಬಾವಿಯಲ್ಲಿ ಒದಗಿಸಲಾಗಿತ್ತು.

    ಇಂದು ಬೆಳಗ್ಗೆ ಸತತ ಶ್ರಮದಿಂದ ಹರಸಾಹಸ ಪಟ್ಟು ಎನ್‌ಡಿಆರ್‌ಎಫ್ ತಂಡ ಬಾಲಕಿಯನ್ನು ಜೀವಂತವಾಗಿ ಹೊರತೆಗೆದಿದ್ದರು. ಆದರೆ ಕೊಳವೆಬಾವಿಯಲ್ಲಿ ಬಿದ್ದ ಪರಿಣಾಮ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಹೀಗಾಗಿ ಆಕೆಯನ್ನು ರಕ್ಷಣಾ ಪಡೆ ಆಸ್ಪತ್ರೆಗೆ ರವಾನಿಸಿದರೂ ಬಾಲಕಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಇದನ್ನೂ ಓದಿ:ಕೊನೆಗೂ ಬದುಕಿ ಬರಲಿಲ್ಲ ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ

    ಈ ಬಗ್ಗೆ ಹರ್ಯಾಣ ಸಿಎಂ ಟ್ವೀಟ್ ಮಾಡಿ ಬಾಲಕಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಘರೌಂಡಾದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 5 ವರ್ಷದ ಶಿವಾನಿ ಸಾವನ್ನಪ್ಪಿದ್ದಾಳೆ. ಆಕೆಯನ್ನು ಜಿಲ್ಲಾ ರಕ್ಷಣಾ ಪಡೆ ಹಾಗೂ ಎನ್‌ಡಿಆರ್‌ಎಫ್ ತಂಡ ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲಾಗಿತ್ತು. ಆಕೆಯನ್ನು ಆಸ್ಪತ್ರೆಗೂ ರವಾನಿಸಲಾಯಿತು. ಆದರೆ ಆಕೆಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಬಾಲಕಿಯ ಕುಟುಂಬಕ್ಕಾಗಿ ನಾನು ಪ್ರಾರ್ಥಿಸುತ್ತೇನೆ, ಅವರೊಂದಿಗೆ ನಾನಿದ್ದೇನೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಅ.25ರಂದು ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಕೊಳವೆಬಾವಿಯಲ್ಲಿ ಸುಜಿತ್(2) ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಕೊಳವೆಬಾವಿಯಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು. ನಾಲ್ಕು ದಿನಗಳ ಕಾಲ ಸುಜಿತ್‌ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವಂತವಾಗಿ ಹೊರಬರಲಿಲ್ಲ.

    ಕೊಳವೆ ಬಾವಿಯಿಂದ ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದರು. ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಯಿತು ಎಂದಿದ್ದರು.