Tag: chandigarh

  • ಚಂಡೀಗಢ ಕೇಸ್‌ನಲ್ಲಿ ಪ್ರತಿಧ್ವನಿಸಿದ ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ಯೋಜನೆ

    ಚಂಡೀಗಢ ಕೇಸ್‌ನಲ್ಲಿ ಪ್ರತಿಧ್ವನಿಸಿದ ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ಯೋಜನೆ

    ನವದೆಹಲಿ: ಬೆಂಗಳೂರಿನ (Bengaluru) ಅವ್ಯವಸ್ಥಿತ ನಗರೀಕರಣ (Haphazard Urban Planning) ವಿಚಾರ ಸುಪ್ರೀಂಕೋರ್ಟ್‍ನಲ್ಲಿ (Supreme Court) ಪ್ರತಿಧ್ವನಿಸಿದೆ.

    ಚಂಡೀಘಡದಲ್ಲಿ (Chandigarh) ಅಪಾರ್ಟ್‍ಮೆಂಟ್‍ಗಳ ವಿಂಗಡಣೆ ಮತ್ತು ಉಪವಿಂಗಡಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಬಿವಿ ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಈ ವೇಳೆ, ಒಂದು ಕಾಲದಲ್ಲಿ ದೇಶದ ಅತ್ಯುತ್ತಮ ನಗರಗಳಲ್ಲಿ ಒಂದೆಂದು ಪರಿಗಣಿತವಾಗಿದ್ದ ಬೆಂಗಳೂರು ಈಗ ಹೇಗೆ ಹಾಳಾಗಿದೆ ನೋಡಿ. ಬೆಂಗಳೂರಿನ ಅವ್ಯವಸ್ಥಿತ ನಗರೀಕರಣ ಒಂದು ಎಚ್ಚರಿಕೆಯ ಕರೆಗಂಟೆ ಈ ಬಗ್ಗೆ ಶಾಸಕಾಂಗ, ಕಾರ್ಯಾಂಗ ಗಮನ ಹರಿಸಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    ಯಾವುದೇ ನಗರದ ಅಭಿವೃದ್ಧಿಗೆ ಅನುಮತಿ ನೀಡುವ ಮೊದಲು, ಆ ಅಭಿವೃದ್ಧಿ ಕೆಲಸಗಳು ಪರಿಸರದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

    ಚಂಡೀಘಡದಲ್ಲಿ ನಡೆಯುತ್ತಿರುವ ಅಪಾರ್ಟ್‍ಮೆಂಟ್‌ಗಳು ನಗರದ ವಿನ್ಯಾಸಕ ಕಾರ್ಬುಸಿಯ ಪರಿಕಲ್ಪನೆಗೆ ವಿರುದ್ಧವಾಗಿದೆ. ಇದು ಚಂಢೀಘಡದ ಹಸಿರು ಪ್ರದೇಶಕ್ಕೆ ಘಾಸಿ ಉಂಟು ಮಾಡುತ್ತಿದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಿಡ್ನಿ ಕಸಿ ಮಾಡಿಸಿಕೊಂಡು 4 ವರ್ಷದ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ

    ಕಿಡ್ನಿ ಕಸಿ ಮಾಡಿಸಿಕೊಂಡು 4 ವರ್ಷದ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ

    ಡೆಹ್ರಾಡೂನ್: 2018ರಲ್ಲಿ ಮೇದೋಜೀರಕ ಗ್ರಂಥಿ, (ಪ್ಯಾಂಕ್ರಿಯಾಸ್) ಮತ್ತು ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ಉತ್ತರಾಖಂಡದ ಮಹಿಳೆಯೊಬ್ಬರು (Uttarakhand woman) ಇತ್ತೀಚೆಗಷ್ಟೆ ಚಂಡೀಗಢದ (Chandigarh) ಪಿಜಿಐಎಂಇಆರ್ (PGIMER) ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

    2018 ರವರೆಗೆ 23 ವರ್ಷದ ಸರೋಜ್ ಶರ್ಮಾ ಅವರು ಅನಾರೋಗ್ಯದಿಂದ ಸಂಕಷ್ಟದ ಬದುಕು ನಡೆಸುತ್ತಿದ್ದರು. ಹಲವಾರು ವರ್ಷಗಳ ಕಾಲ ಟೈಪ್ -1 ಮಧುಮೇಹ (Type-1 diabetes) ರೋಗಿಯಾಗಿದ್ದರು. ನಂತರ 2016 ರಲ್ಲಿ ಮೂತ್ರಪಿಂಡ (Kidney) ಮತ್ತು ಮೇದೋಜೀರಕ ಗ್ರಂಥಿ ಫೇಲ್ಯೂರ್ ಆಗಿತ್ತು. ಇದಕ್ಕೆ ಡಯಾಲಿಸಿಸ್ ಮಾಡಿಸಿಕೊಂಡು ಬದುಕುಳಿದಿದ್ದರು. 2018ರಲ್ಲಿ ವೈದ್ಯರು ದಾನ ಮಾಡಿದ ಮೂತ್ರಪಿಂಡಗಳು ಮತ್ತು ಮೇದೋಜೀರಕ ಗ್ರಂಥಿ ಆಪರೇಷನ್ ಮಾಡಿದ ನಂತರ ಅವರ ಜೀವನ ಸಾಧಾರಣ ಸ್ಥಿತಿಗೆ ಬಂತು.

    ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢದ ಪೋಸ್ಟ್ ಗ್ರಾಜುಯೇಟ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್‍ನ ವೈದ್ಯರು ಸರೋಜ್ ಶರ್ಮಾ ಅವರನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಿದ್ದರು.  ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಖರ್ಗೆ – ಕಡೆಯ ಹಂತದಲ್ಲಿ ಕಣಕ್ಕಿಳಿಯುವ ಸಾಧ್ಯತೆ

    ತಮ್ಮ ಮೂತ್ರಪಿಂಡ ಮತ್ತು ಮೇದೋಜೀರಕ ಗ್ರಂಥಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಪಿಜಿಐಎಂಇಆರ್‍ಯ ಡಾ. ಆಶಿಶ್ ಶರ್ಮಾ ಅವರನ್ನು 2020ರಲ್ಲಿ ಸರೋಜ್ ಅವರು ಸಂಪರ್ಕಿಸಿದ್ದರು. ಶಸ್ತ್ರಚಿಕಿತ್ಸೆ ಬಳಿಕ ನನ್ನ ಜೀವನ ಸುಲಭವಾಗಿದೆ. ಋತುಚಕ್ರ ಕೂಡ ನಿಯಂತ್ರಣದಲ್ಲಿದೆ. ಇದನ್ನೂ ಓದಿ: 6 ತಿಂಗಳಿಂದ ಕಚೇರಿಗೆ ಬರದೇ ಸಂಬಳ ಪಡೀತಿದ್ದ ಮಹಿಳಾ ಅಧಿಕಾರಿ ವಜಾಗೊಳಿಸಿದ ಬ್ರಿಜೇಶ್ ಪತಕ್

    ಬಳಿಕ 2020ರಲ್ಲಿ ವಿಕಾಸ್ ಶರ್ಮಾ ಅವರನ್ನು ಸರೋಜ್ ಶರ್ಮಾ ವಿವಾಹವಾದರು. ಮದುವೆ ನಂತರ ಸರೋಜ್ ಗರ್ಭಧಾರಣೆ ಬಗ್ಗೆ ಅನುಮಾನ ಹೊಂದಿದ್ದರಿಂದ ಮತ್ತೆ ಅವರು ಡಾ. ಆಶಿಶ್ ಶರ್ಮಾ ಅವರನ್ನು ಸಂಪರ್ಕಿಸಿದ್ದರು. ಇದೀಗ ಮದುವೆಯಾದ ಎರಡು ವರ್ಷಗಳ ನಂತರ ಸರೋಜ್, ಸೆಪ್ಟೆಂಬರ್ 28 ರಂದು ಚಂಡೀಗಢದ ಪಿಜಿಐಎಂಇಆರ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸ್ತ್ರೀರೋಗತಜ್ಞರಾದ ಡಾ.ಸೀಮಾ ಚೋಪ್ರಾ ಅವರು, ಕಿಡ್ನಿ ಕಸಿ ಮಾಡಿದ ಕಾರಣ ಗರ್ಭಧಾರಣೆ ಬಹಳ ಅಪಾಯವಾಗಿತ್ತು. ಆದರೆ ಸುರಕ್ಷಿತವಾದ ಹೆರಿಗೆಗಾಗಿ ನಾವು ಸಿಸೇರಿಯನ್ ಮಾಡಿದ್ದೇವೆ. ಮಗು 2.5 ಕೆಜಿ ತೂಕ ಇದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    ಚಂಡೀಗಢ: ಮೊಹಾಲಿಯಲ್ಲಿರುವ ಚಂಡೀಗಢ ವಿವಿಯ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಹ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಬೆದರಿಕೆ ಹಾಕಿದ್ದರಿಂದಲೇ ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂಬ ಸಂಗತಿ ತನಿಖೆ ವೇಳೆ ಬಯಲಾಗಿದೆ.

    ಆರೋಪಿಗಳಾದ ಸನ್ನಿ ಮೆಹ್ತಾ ಮತ್ತು ಆತನ ಸ್ನೇಹಿತ ರಂಕಜ್ ವರ್ಮಾ, ಹಾಸ್ಟೆಲ್‌ನ ಸಾಮಾನ್ಯ ಶೌಚಗೃಹದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಬೆತ್ತಲೆ ದೃಶ್ಯಗಳನ್ನು ಚಿತ್ರೀಕರಿಸಿ, ಹಂಚಿಕೊಳ್ಳದಿದ್ದರೇ ನಿನ್ನ ಖಾಸಗಿ ವೀಡಿಯೋಗಳನ್ನ ವೈರಲ್ ಮಾಡುವುದಾಗಿ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದರು. ಆದ್ದರಿಂದಲೇ ಸಹ ವಿದ್ಯಾರ್ಥಿನಿ ಇತರರ ಖಾಸಗಿ ವೀಡಿಯೋಗಳನ್ನ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಈ ಪ್ರಕರಣದಲ್ಲಿ ಪಂಜಾಬ್ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಮೂವರಲ್ಲಿ 23 ವರ್ಷದ ಆರೋಪಿಯೊಬ್ಬ ಬಂಧಿತ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಎಂದು ತಿಳಿದುಬಂದಿದೆ. 31 ವರ್ಷದ ಇನ್ನೊಬ್ಬ ಆರೋಪಿ ಆತನ ಸ್ನೇಹಿತನಾಗಿದ್ದಾನೆ.

    ಏನಿದು ಘಟನೆ? 
    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ. ಈ ಬೆನ್ನಲ್ಲೇ ತನಿಖೆಗೆ ವಿಶೇಷ ತಂಡ ನಿಯೋಜನೆ ಮಾಡುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣ ಬೆಳಕಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ (Hostel Toilet) ವಾಶ್ ರೂಂ ಬಳಸೋದಕ್ಕೂ ಹೆದರುತ್ತಿದ್ದಾರೆ.

    ಹಾಸ್ಟೆಲ್ ವಿದ್ಯಾರ್ಥಿನಿಯರ (Hostel Students) ಸ್ನಾನದ ವೀಡಿಯೋ ಲೀಕ್ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು 5 ದಿನ ಬಂದ್ ಮಾಡಲಾಗಿದೆ. ಸೆ.24ರವರೆಗೆ ವಿವಿಯನ್ನು ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ.

    ನಿನ್ನೆ ರಾತ್ರಿಯಷ್ಟೇ ವೀಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದು, ಆಕೆಯಿಂದ ವೀಡಿಯೋ ಕಳಿಸಿಕೊಂಡಿದ್ದ ಬಾಯ್‌ಫ್ರೆಂಡ್‌ನನ್ನು ಬಂಧಿಸಲಾಗಿದೆ. ಆದರೂ ವಿದ್ಯಾರ್ಥಿಗಳ ಆಕ್ರೋಶ ಕಡಿಮೆಯಾಗಿಲ್ಲ. ವೀಡಿಯೋ ಲೀಕ್ ಆದಾಗಿನಿಂದಲೂ ವಿದ್ಯಾರ್ಥಿನಿಯರು ವಾಶ್‌ರೂಂ ಗಳಲ್ಲಿ ಸ್ನಾನ ಮಾಡಲು ಹೆದರುತ್ತಿದ್ದಾರೆ. ಹಾಗಾಗಿ ಪೊಲೀಸರು (Police) ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾಗಳಿವೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್‌ ಬೆನ್ನಲ್ಲೇ ಹಾಸ್ಟೆಲ್‌ ತೊರೆಯುತ್ತಿರುವ ವಿದ್ಯಾರ್ಥಿನಿಯರು – 5 ದಿನ ವಿವಿ ಬಂದ್‌

    ಇದೇ ವೇಳೆ ವಿದ್ಯಾರ್ಥಿನಿಯೋರ್ವಳು ಮಾತನಾಡಿ, ನಾನು ಡೇ ಸ್ಕಾಲರ್, ಖಂಡಿತವಾಗಿಯೂ ಇಲ್ಲಿನ ವಿದ್ಯಾರ್ಥಿಗಳಿಗೆ ಭಯವಿದೆ. ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಲಂಚ ನೀಡಿದೆ. ಆದ್ದರಿಂದ ಪೊಲೀಸರು ವಿದ್ಯಾರ್ಥಿನಿಯರಿಗೆ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಪ್ರಕರಣ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagawant mann) ತನಿಖೆಗೆ ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರು (Panjab Police) ಸಹ ಉನ್ನತಮಟ್ಟದಲ್ಲಿ ತನಿಖೆ ನಡೆಸಲು ವಿಶೇಷ ತಂಡ ನಿಯೋಜಿಸುವುದಾಗಿ ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಚಂಡೀಗಢ: ವಿಶ್ವವಿದ್ಯಾಲಯದಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ (Private Video) ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಕಳಿಸಿದ್ದ ಹುಡುಗಿ ಹಾಗೂ ಆಕೆಯ ಬಾಯ್‌ಫ್ರೆಂಡ್‌ (BoyFriend) ಇಬ್ಬರನ್ನೂ ಪಂಜಾಬ್‌ ಪೊಲೀಸರು (Panjab Police) ಬಂಧಿಸಿದ್ದಾರೆ.

    ವಿವಿಯಲ್ಲಿ ನಡೆದ ಘಟನೆಯಿಂದಾಗಿ ಪರಸ್ಪರ ಪರಿಚಯವಿಲ್ಲದ ವಿದ್ಯಾರ್ಥಿಗಳಲ್ಲಿ ಭಾರೀ ಆತಂಕವನ್ನೇ ಉಂಟುಮಾಡಿದೆ. ತನ್ನ ವೈಯಕ್ತಿಕ ವೀಡಿಯೋವನ್ನು ಕಳಿಸಿದ್ದ ವಿದ್ಯಾರ್ಥಿನಿ ಹಾಗೂ ಬಾಯ್‌ ಫ್ರೆಂಡ್‌ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ (Speical Investigation Team) ನಿಯೋಜಿಸುವುದಾಗಿ ಭರವಸೆ ನೀಡಿದ್ದರೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಪಂಜಾಬ್‌ ಪೊಲೀಸರು ತಿಳಿಸಿದ್ದಾರೆ.

    ಘಟನೆ ಕುರಿತು ಇಂದು ಮಧ್ಯಾಹ್ನ ಸ್ಪಷ್ಟನೆ ನೀಡಿದ್ದ ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ, ವಿದ್ಯಾರ್ಥಿಗಳ 60 ಆಕ್ಷೇಪಾರ್ಹ ಎಂಎಂಎಸ್‌ಗಳು ಕಂಡುಬಂದಿದೆ ಎನ್ನುತ್ತಿರುವ ವದಂತಿ ಸಂಪೂರ್ಣ ಸುಳ್ಳು ಹಾಗೂ ಆಧಾರ ರಹಿತವಾದುದು. ವಿವಿಯಲ್ಲಿ ವಿದ್ಯಾರ್ಥಿನಿ ಚಿತ್ರೀಕರಿಸಿದ ವೈಯಕ್ತಿಕ ವೀಡಿಯೋವನ್ನು ಹೊರತುಪಡಿಸಿ, ಉಳಿದ ಯಾವುದೇ ಆಕ್ಷೇಪಾರ್ಹ ವೀಡಿಯೋಗಳು ಕಂಡುಬಂದಿಲ್ಲ. ಅಲ್ಲದೇ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋವನ್ನು ತನ್ನ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ದಾಳೆ ಎಂದು ಹೇಳಿದ್ದರು.

    ಏನಿದು ಘಟನೆ?
    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಬುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ, ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ. ವೀಡಿಯೋ ಕಳಿಸಿದ್ದ ಹುಡುಗಿಯನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು, ನಿರಂತರ ತನಿಖೆಯಿಂದಾಗಿ ಇಂದು ರಾತ್ರಿ ಬಾಯ್‌ಫ್ರೆಂಡ್‌ನನ್ನೂ ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಚಂಡೀಗಡ (Chandigarh) ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ ಎನ್ನಲಾದ ತಲೆತಗ್ಗಿಸುವ ಕೆಲಸ, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವ ವಿದ್ಯಾಲಯದ ಆವರಣದಲ್ಲಿ ಈ ಘಟನೆಯ ಕುರಿತು ಪ್ರತಿಭಟಿಸಲಾಗುತ್ತಿದ್ದು, ತಪ್ಪತಸ್ಥರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಇನ್ನೂ 60 ಹುಡುಗಿಯರು ಈ ಸಂಕಷ್ಟಕ್ಕೆ ಸಿಲುಕೊಳ್ಳಲಿದ್ದಾರೆ ಎನ್ನುವುದು ಮತ್ತಷ್ಟು ಆತಂಕ್ಕೆ ಕಾರಣವಾಗಿದೆ.

    ಚಂಡೀಗಡ ವಿವಿಯ (University)  ಹಾಸ್ಟೇಲ್ ನಲ್ಲಿ ಹುಡುಗಿಯೊಬ್ಬಳು, ಬಾತ್ ರೂಮ್ ಗೆ ಹೋಗುವ ಹುಡುಗಿಯರ ಖಾಸಗಿ ವಿಡಿಯೋಗಳನ್ನು (Private Video) ಚಿತ್ರಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಅಲ್ಲದೇ, 60ಕ್ಕೂ ಹೆಚ್ಚು ಇಂತಹ ವಿಡಿಯೋಗಳು ಇನ್ನೂ ಇವೆ ಎಂದು ಹೇಳಿದ್ದಾಳೆ ಎನ್ನಲಾಗುತ್ತಿದೆ. ಹಾಗಾಗಿ, ಯಾರದೆಲ್ಲ ವಿಡಿಯೋ ಆಚೆ ಬಂದು, ಇನ್ನೇನು ಆವಾಂತರ ಸೃಷ್ಟಿ ಆಗತ್ತೋ ಅನ್ನುವ ಆತಂಕ ವಿವಿ ಆವರಣದಲ್ಲಿರುವ ಹುಡುಗಿಯರದ್ದು. ಇದನ್ನೂ ಓದಿ:ಟಿವಿ ಬಿಗ್ ಬಾಸ್‌ಗೆ ಈ ಕಿರುತೆರೆ ನಟಿ ಬರೋದು ಪಕ್ಕಾ

    ಈ ವಿಷಯ ತಿಳಿಯುತ್ತಿದ್ದಂತೆಯೇ ನಟ ಸೋನು ಸೋದ್ (Sonu Sodh), ನೊಂದವರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಈ ಕೃತ್ಯವನ್ನು ಖಂಡಿಸಿದ್ದಾರೆ. ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಮನವಿ ಮಾಡಿರುವ ಅವರು, ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡಿ ಎಂದು ವಿಶೇಷವಾಗಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ

    ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ

    ಚಂಡೀಗಢ: ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿಗಳ ಆಕ್ಷೇಪಾರ್ಹ (Videos Leaked) ವೀಡಿಯೋಗಳನ್ನು ಸೋರಿಕೆ ಮಾಡಿದ ಆರೋಪ ಹೊತ್ತಿರುವ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋ ಬಿಟ್ಟು ಬೇರೆ ಯಾವುದೇ ವೀಡಿಯೋ ರೆಕಾರ್ಡ್ (Video Record) ಮಾಡಿಲ್ಲ. ಅಲ್ಲದೇ ಆಕೆ ತನ್ನ ವೈಯಕ್ತಿಕ ವೀಡಿಯೋ ಹಂಚಿಕೊಂಡಿದ್ದು ಆಕೆಯ ಬಾಯ್‌ಫ್ರೆಂಡ್‌ಗೆ ಎಂದು ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ (SR Bawa) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ (Hostel) ಸುಮಾರು 60 ವಿದ್ಯಾರ್ಥಿನಿಯರು (Girls Students) ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ (Protest) ಬುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

    ಘಟನೆ ಬಳಿಕ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಆರೋಪವನ್ನು ಚಂಡೀಗಢ ವಿಶ್ವವಿದ್ಯಾನಿಲಯವು ತಳ್ಳಿಹಾಕಿದೆ. ಒಬ್ಬ ಹುಡುಗಿಗೆ ಮಾತ್ರ ಪ್ರಜ್ಞೆ ತಪ್ಪಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿ ಆರೋಗ್ಯ ಸ್ಥಿರವಾಗಿದೆ ಎಂದು ಖಾಸಗಿ ವಿಶ್ವವಿದ್ಯಾನಿಲಯದ ಅಧಿಕಾರಿಗಳು ಹೇಳಿದ್ದಾರೆ.

    ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ, ವಿದ್ಯಾರ್ಥಿಗಳ 60 ಆಕ್ಷೇಪಾರ್ಹ ಎಂಎಂಎಸ್‌ಗಳು ಕಂಡುಬಂದಿದೆ ಎನ್ನುತ್ತಿರುವ ವದಂತಿ ಸಂಪೂರ್ಣ ಸುಳ್ಳು ಹಾಗೂ ಆಧಾರ ರಹಿತವಾದುದು. ವಿವಿಯಲ್ಲಿ ವಿದ್ಯಾರ್ಥಿನಿ ಚಿತ್ರೀಕರಿಸಿದ ವೈಯಕ್ತಿಕ ವೀಡಿಯೋವನ್ನು ಹೊರತುಪಡಿಸಿ, ಉಳಿದ ಯಾವುದೇ ಆಕ್ಷೇಪಾರ್ಹ ವೀಡಿಯೋಗಳು ಕಂಡುಬಂದಿಲ್ಲ. ಅಲ್ಲದೇ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋವನ್ನು ಸ್ವತಃ ತನ್ನ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಚಂಡೀಗಢ ವಿಶ್ವವಿದ್ಯಾನಿಲಯವು ಸ್ವಯಂಪ್ರೇರಿತವಾಗಿ ತನಿಖೆಯನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಿದೆ ಎಂದು ಬಾವಾ ತಿಳಿಸಿದ್ದಾರೆ.

    ಉನ್ನತಮಟ್ಟದ ತನಿಖೆಗೆ ಆದೇಶ: ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ನಮ್ಮ ಹೆಣ್ಣುಮಕ್ಕಳು ನಮ್ಮ ಹೆಮ್ಮೆ. ಆದರೆ ಚಂಡೀಗಢದ ಘಟನೆ ವಿಷಾದನೀಯವಾಗಿದೆ. ಘಟನೆ ಬಗ್ಗೆ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಾನು ನಿರಂತರವಾಗಿ ಆಡಳಿತಾಧಿಕಾರಿಗಳ ಸಂಪರ್ಕದಲ್ಲಿ ಇರುತ್ತೇನೆ. ಹಾಗಾಗಿ ವದಂತಿಗಳನ್ನು ತಪ್ಪಿಸುವಂತೆ ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.

    ಇದು ನಾಚಿಗೇಡಿನ ಸಂಗತಿ: ಚಂಡೀಗಢ ಘಟನೆಯ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇದು ಅತ್ಯಂತ ನಾಚಿಗೇಡಿನ ಸಂಗತಿ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತ ಹೆಣ್ಣುಮಕ್ಕಳಿಗೆ ಧೈರ್ಯವಿದೆ. ಅವರು ಯಾವುದಕ್ಕೂ ಹೆದರಬೇಕಿಲ್ಲ. ನಾವು ಅವರೊಂದಿಗೆ ಇದ್ದೇವೆ ಎಂದು ಟ್ವೀಟ್ ಮೂಲಕ ಭರವಸೆಯ ನುಡಿಗಳನ್ನಾಡಿದ್ದಾರೆ.

    ಆಕೆ ವೀಡಿಯೋ ರೆಕಾರ್ಡ್ ಮಾಡಿಲ್ಲ: ಈವರೆಗೆ ನಡೆದ ತನಿಖೆಯಲ್ಲಿ ಆರೋಪಿಯ ಒಂದು ವೀಡಿಯೋ ಮಾತ್ರ ಇದೆ. ಆಕೆ ಬೇರೆಯವರ ಯಾವುದೇ ವೀಡಿಯೋಗಳನ್ನ ರೆಕಾರ್ಡ್ ಮಾಡಿಲ್ಲ. ಈಗಾಗಲೇ ಎಲ್ಲಾ ಇಲೆಕ್ಟ್ರಾನಿಕ್ ಸಾಧನಗಳು ಹಾಗೂ ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಿದ್ದೇವೆ. ಸದ್ಯ ಈವರೆಗೆ ಸಾವು-ನೋವುಗಳಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಆದರೆ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾದ ಓರ್ವ ವಿದ್ಯಾರ್ಥಿನಿ ಆತಂಕದಲ್ಲಿದ್ದು, ನಮ್ಮ ತಂಡವು ಆಕೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಹಾಗಾಗಿ ಯಾರೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಸೋರಿಕೆ (Leaked Videos) ಮಾಡಿದ್ದು, ಇದರ ಹಿನ್ನೆಲೆ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದೆ.

    ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    ಈ ಘಟನೆಯಿಂದಾಗಿ ನೊಂದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಆದರೆ ಈ ವದಂತಿಯನ್ನು ನಿರಾಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

    ಇದೀಗ ನಡೆಯುತ್ತಿರುವ ಭಾರೀ ಪ್ರತಿಭಟನೆಯ ಬಗ್ಗೆ ಶಾಂತಿ ಕಾಪಾಡುವಂತೆ ಪಂಜಾಬ್ ಶಿಕ್ಷಣ ಸಚಿವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತವಾಗಿರಬೇಕು. ನಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಇದು ಅತ್ಯಂತ ಸೂಕ್ಷ್ಮ ವಿಚಾರ. ನಮ್ಮ ಸಹೋದರಿಯರು ಹಾಗೂ ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿರುವುದಾಗಿದೆ. ಸಾಮಾಜಿಕ ಮಾಧ್ಯಮಗಳ ಬಗ್ಗೆ ನಾವು ತುಂಬಾ ಜಾಗರೂಕರಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್

    Live Tv
    [brid partner=56869869 player=32851 video=960834 autoplay=true]

  • ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು!

    ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು!

    ಚಂಡೀಗಢ: ಚಂಡೀಗಢದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಹೆಸರಿನಿಂದ ಮರುನಾಮಕಾರಣ ಮಾಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ನಿರ್ಧರಿಸಿದೆ.

    ಈ ಬಗ್ಗೆ ಉಭಯ ಸರ್ಕಾರಗಳ ಸಭೆ ನಡೆದಿದ್ದು, ಹರಿಯಾಣದ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಉಪಸ್ಥಿತರಿದ್ದರು.

    ಈ ಬಗ್ಗೆ ಪಂಜಾಬ್‍ನ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರನ್ನು ಇಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳೆರಡು ಒಪ್ಪಿಕೊಂಡಿವೆ. ಈ ವಿಷಯದ ಕುರಿತು ಇಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಾವರ್ಕರ್ ಪಾರ್ಕ್ ನಿರ್ಮಾಣ – ಸ್ವಾತಂತ್ರ್ಯ ಸೇನಾನಿ ಎಂದು ಒಪ್ಪಿದ್ದ ಕಾಂಗ್ರೆಸ್ಸಿಗರು

    ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೆಸರಿಡಲು ಸಲಹೆ ನೀಡಿರುವುದು ಇದೇ ಮೊದಲಲ್ಲ. 2016ರಲ್ಲಿ ಹರಿಯಾಣ ವಿಧಾನಸಭೆಯು ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಲು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು: ಕಟೀಲ್

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    ಚಂಡೀಗಢ: ಮದುವೆಯಾಗಲು ನಿರಾಕರಿಸಿದ್ದಕ್ಕೆ 17 ವರ್ಷದ ಹುಡುಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಅಂಬಾಲಾ ಕ್ಯಾಂಟ್‍ನಲ್ಲಿ ನಡೆದಿದೆ.

    ಆರೋಪಿಯು ಪಂಜೋಖ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ನಾಲಾ ಗ್ರಾಮದ ನಿವಾಸಿಯಾಗಿದ್ದು, ಮೃತ ಹುಡುಗಿಯ ತಂದೆ ನೀಡಿದ ದೂರಿನ ಮೇರೆಗೆ 21 ವರ್ಷದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ದೇವೇಗೌಡರು, ಅವರ ಕುಟುಂಬ ಬಿಟ್ಟು ರಾಜಕಾರಣ ಮಾಡಲು ಆಗಲ್ಲ: ಸೂರಜ್‍ರೇವಣ್ಣ

    crime

    ಟೀ ವ್ಯಾಪಾರಿಯಾಗಿರುವ ಹುಡುಗಿಯ ತಂದೆ, ಯುವಕ ಮತ್ತು ಅವರ ಮಗಳು ಪ್ರೀತಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ತಿಳಿದುಬಂದಿದೆ. ತಮ್ಮ ಮಗಳು ತನ್ನ ಸಹೋದರನ ಬಳಿ ಯುವಕ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ ಎಂದು ಹೇಳಿಕೊಂಡಿದ್ದಳು. ಆದರೆ ನಂತರದ ದಿನಗಳಲ್ಲಿ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ. ಇದನ್ನೂ ಓದಿ: ಯುವತಿ ಮೇಲೆ ಗೆಳತಿಯ ಸಹೋದರನಿಂದ್ಲೆ ಅತ್ಯಾಚಾರ- ಮದ್ವೆ ಕ್ಯಾನ್ಸಲ್ ಭಯದಿಂದ ಆತ್ಮಹತ್ಯೆಗೆ ಯತ್ನ

    ಈ ವಿಚಾರವನ್ನು ನನ್ನ ಮಗಳು ಸಹೋದರನೊಂದಿಗೆ ಹಂಚಿಕೊಂಡಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಆಕೆಯನ್ನು ಸಮಾಧಾನ ಮಾಡಲು ಸಹೋದರ ಪ್ರಯತ್ನಿಸುತ್ತಿದ್ದನು. ಆದರೆ ಆಗಸ್ಟ್ 8ರಂದು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ನಂತರ ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಸಮೀಪದ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿ ಮರುದಿನವೇ ಡಿಸ್ಚಾರ್ಜ್ ಮಾಡಿದ್ದರು. ಮನೆಯಲ್ಲಿಯೇ ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ಔಷಧಗಳನ್ನು ನೀಡಿದ್ದರು. ಆದರೆ ಶುಕ್ರವಾರ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹೀಗಾಗಿ ಅವಳನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿರುವುದಾಗಿ ತಿಳಿಸಿದ್ದಾರೆ.

    ಹುಡುಗಿಯ ತಂದೆ ನೀಡಿದ ದೂರಿನ ಮೇರೆಗೆ ಶುಕ್ರವಾರ ಭಾರತೀಯ ದಂಡ ಸಂಹಿತೆ ಸೆಕ್ಷನ್ 306ರ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದಾಗಿ ಪರಾವ್ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಸೂರಜ್ ಕುಮಾರ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]