Tag: Chandra Layout

  • ತ್ರಿವಳಿ ತಲಾಖ್ ನಿಷೇಧದ ಬಳಿಕವೂ ಹೆಂಡತಿಗೆ ತಲಾಖ್ ನೀಡಿದ ಗಂಡ

    ತ್ರಿವಳಿ ತಲಾಖ್ ನಿಷೇಧದ ಬಳಿಕವೂ ಹೆಂಡತಿಗೆ ತಲಾಖ್ ನೀಡಿದ ಗಂಡ

    – ಕಾನೂನು, ಖಾಕಿ ನನ್ನನ್ನು ಏನು ಮಾಡಲಾಗುವುದಿಲ್ಲ ಅಂತ ದರ್ಪ ಮೆರೆದ ಗಂಡ

    ಬೆಂಗಳೂರು: ದೇಶದಲ್ಲಿ ತ್ರಿವಳಿ ತಲಾಖ್ (Triple Talaq) ನಿಷೇಧವಿದ್ದರೂ ಚಂದ್ರಲೇಔಟ್‌ನ ಗಂಗೊಂಡನಹಳ್ಳಿಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿದೆ.

    ತ್ರಿವಳಿ ತಲಾಖ್ ನಿಷೇಧ ಬಳಿಕವೂ ವ್ಯಕ್ತಿ ತನ್ನ ಹೆಂಡತಿಗೆ ಫೋನ್ ಮಾಡಿ ಮೂರು ಬಾರಿ ತಲಾಖ್ ಎಂದು ಉಚ್ಛರಿಸಿ ಕರೆ ಕಟ್ ಮಾಡಿದ್ದಾನೆ. ಇಲ್ಲಿಗೆ ಎಂಟು ವರ್ಷದ ದಾಂಪತ್ಯ ಜೀವನ ಕೇವಲ 10 ಸೆಕೆಂಡ್‌ನಲ್ಲಿ ಮುರಿದು ಬಿದ್ದಿದೆ. ಹೊಸ ಕಾನೂನಿನ ಬಳಿಕವೂ ಬದುಕು ಅಂತ್ಯದ ಬಗ್ಗೆ ಆತಂಕದಿಂದ ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಇತ್ತ ವಿಚ್ಛೇದನ ನೀಡಿದ ಪತಿ ಕಾನೂನು, ಖಾಕಿ ಏನು ಮಾಡಲ್ಲವೆಂದು ಹೆಂಡತಿಗೆ ಅವಾಜ್ ಹಾಕಿದ್ದಾನೆ. ಇದನ್ನೂ ಓದಿ: ತ್ರಿವಳಿ ತಲಾಖ್‌ ಪದ್ಧತಿಯಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ದಯನೀಯವಾಗಿದೆ: ಕೇಂದ್ರ

    ಶಾಬಜ್ ಅಲಿ ಎಂಟು ವರ್ಷದ ಹಿಂದೆ ಯುವತಿಯೊಬ್ಬಳ್ಳನ್ನು ಮದುವೆಯಾಗಿದ್ದ. ಹೆಂಡತಿ ಜೊತೆ ಅನ್ಯೋನ್ಯವಾಗಿ ಬದುಕು ಸಾಗಿಸುತ್ತಿದ್ದ. ಮಕ್ಕಳಾಗಿಲ್ಲ ಅಂತ ಆಗಾಗ ಹೆಂಡತಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ. ಐದು ಮಾಂಸದ ಅಂಗಡಿಗಳನ್ನು ಇಟ್ಟುಕೊಂಡು ಶಾಬಜ್ ವ್ಯಾಪಾರ ಮಾಡುತ್ತಿದ್ದ. ‘ಅಂಗಡಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳಿ ಅಂತ ಹೇಳಿದ್ದಕ್ಕೆ ಕೋಪಗೊಂಡು ದ್ವೇಷ ಬೆಳೆಸಿದ್ದಾನೆ’ ಅಂತ ಮಾವ ಆರೋಪಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧ ಬಳಿಕವೂ ನನ್ನ ಮಗಳ ಜೀವನ ಹಾಳಾಯ್ತು. ಕಾನೂನು ಹೋರಾಟ ಮುಂದುವರಿಸ್ತೀವಿ ಅಂತ ಸಂತ್ರಸ್ತೆ ತಂದೆ ತಿಳಿಸಿದ್ದಾರೆ.

    ಒಂದು ವರ್ಷದ ಹಿಂದೆ ಇನ್ನೊಂದು ಮದುವೆಯಾಗಿದ್ದನಂತೆ. ಆ ಮಹಿಳೆಗೂ ತಲಾಖ್ ನೀಡಿ, ಇದೀಗಾ ಪತ್ನಿಗೂ ತಲಾಖ್ ನೀಡಿದ್ದಾನೆ. ಇಸ್ಲಾಂ ಧರ್ಮದ ಮಸೀದಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಯ್ತು. ಈ ಸಭೆಯಲ್ಲೂ ತಲಾಖ್ ಸ್ವೀಕಾರ ಆಗಿದೆ ಎಂದಿದ್ದಾರೆ. ಸಂತ್ರಸ್ತೆ ಸಂಬಂಧಿಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಶಾಬಜ್ ಅಲಿ ಕಡೆಯವ್ರು ಮಹಿಳೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದಾರೆ.

    ಮುಸ್ಲಿಂ ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯದಿಂದ ಮುಕ್ತಿ ಕಲ್ಪಿಸಲು ತ್ರಿವಳಿ ತಲಾಖ್ ನಿಷೇಧ ಕಾಯಿದೆ ನೆರವಾಗಿದೆ. ಭಾರತದಲ್ಲಿ ತ್ರಿವಳಿ ತಲಾಖ್ (ತ್ವರಿತ ತಲಾಖ್) ನಿಷೇಧವು 2019 ರ ಕಾಯ್ದೆಯಿಂದ ಕಾನೂನುಬದ್ಧವಾಗಿದ್ದು, ತ್ವರಿತ ವಿಚ್ಛೇದನವನ್ನು ಅಪರಾಧ ಎಂದು ಘೋಷಿಸಲಾಗಿದೆ. 2017 ರಲ್ಲಿ ಸುಪ್ರೀಂ ಕೋರ್ಟ್ ತಲಾಖ್‌ನ್ನು ಅಸಾಂವಿಧಾನಿಕ ಎಂದು ಘೋಷಿಸಿತು. ಇದು ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಮತ್ತು ತ್ವರಿತ ವಿಚ್ಛೇದನದ ಪದ್ಧತಿಯನ್ನು ಕೊನೆಗೊಳಿಸಲು ಕೈಗೊಂಡ ಒಂದು ಕ್ರಮವಾಗಿದೆ. ಇದನ್ನೂ ಓದಿ: ತ್ರಿವಳಿ ತಲಾಖ್‌ ನಿಷೇಧ, ವಿಚ್ಛೇದನಕ್ಕೆ ಏಕರೂಪದ ಕಾನೂನಿಗಾಗಿ ಸುಪ್ರೀಂಗೆ ಮುಸ್ಲಿಂ ಮಹಿಳೆ ಮನವಿ

    ಅಪರಾಧ ಏನು? ಶಿಕ್ಷೆ ಪ್ರಮಾಣ ಎಷ್ಟು?
    ಈ ಕಾಯ್ದೆಯಡಿ ತ್ರಿವಳಿ ತಲಾಖ್ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಾತಿನ ಮೂಲಕ, ಬರಹದ ಮೂಲಕ, ಮೆಸೇಜ್, ಇ-ಸಂದೇಶಗಳ ಮೂಲಕ ತಲಾಖ್ ನೀಡಲಾಗ್ತಿತ್ತು. ಇನ್ನು ಈ ನಿಯಮ ಉಲ್ಲಂಘಿಸಿದರೆ, ಗರಿಷ್ಟ ಮೂರು ವರ್ಷದವರೆಗೆ ಜೈಲು ಹಾಗೂ ದಂಡವಿದೆ. ಅಲ್ಲದೇ, ತ್ರಿವಳಿ ತಲಾಖ್ ಸಂತ್ರಸ್ಥೆಯು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿತ್ತಾಳೆ. ಸಂತ್ರಸ್ತೆಯು ಮಕ್ಕಳನ್ನ ವಶಕ್ಕೆ ಪಡೆಯುವ ಹಕ್ಕು ಹೊಂದಿರುತ್ತಾಳೆ.

    ತ್ರಿವಳಿ ತಲಾಖ್ ನಿಷೇಧ ಕಾಯಿದೆಯ ಬಳಿಕವೂ ಈ ವ್ಯಕ್ತಿ ಹೆಂಡತಿಗೆ ತಲಾಖ್ ನೀಡಿದ್ದಾನೆ. ಸದ್ಯ ಮಹಿಳೆ ಹಾಗೂ ಕುಟುಂಬ ಚಂದ್ರಲೇಔಟ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

  • PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

    PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬಸ್ ನುಗ್ಗಿಸಲು ಪ್ರಯತ್ನಿಸಿದ ಬಸ್ ಚಾಲಕನನ್ನು (Bus Driver) ಅಮಾನತುಗೊಳಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆದೇಶಿಸಿದ್ದಾರೆ.

    ಪ್ರಶಾಂತ್‌ ಅಮಾನತಾದ ಚಾಲಕ. ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಯಾವ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಾಳೆ ಎಂಬ ಕುರಿತು ಸ್ಪಷ್ಟತೆ ದೊರೆತಿಲ್ಲ. ಬಳಿಕ ಬಸ್ ಚಾಲಕ ಮತ್ತು ಯುವತಿ ನಡುವೆ ಜಗಳ ನಡೆದು ಬಸ್ ಚಾಲಕನನ್ನು ಪ್ರಶ್ನೆ ಮಾಡಲು ಯುವತಿ ಸಿಗ್ನಲ್‌ನಲ್ಲಿ ಬಸ್ ಅಡ್ಡಗಟ್ಟಿದ್ದಳು. ಆದರೆ, ಯುವತಿಯನ್ನು ಲೆಕ್ಕಿಸದೇ ಚಾಲಕ ಬಸ್ ನುಗ್ಗಿಸಲು ಮುಂದಾಗಿದ್ದಾನೆ. ಸ್ವಲ್ಪದರಲ್ಲೇ ಯುವತಿ ಪಾರಾಗಿದ್ದು, ಚಾಲಕನ ಕೃತ್ಯದಿಂದ ಜನ ಬೆಚ್ಚಿಬಿದ್ದಿದ್ದಾರೆ. ಡಿಪೋ ನಂಬರ್ 17, ಚಂದ್ರಾಲೇಔಟ್ ಡಿಪೋಗೆ ಸೇರಿದ ಬಸ್ ಇದಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

    ಮೇ 23ರಂದು ಸಂಜೆ 5:40ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏಕಾಏಕಿ ಯುವತಿಯ ಮೇಲೆ ಬಸ್ ಹತ್ತಿಸಲು ಹೊರಟಿದ್ದ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ನಿಮ್ಮ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಬಿತ್ತರಿಸಿತ್ತು. ಘಟನೆ ಬಗ್ಗೆ ವರದಿ ಬಿತ್ತರಿಸಿದ 10 ನಿಮಿಷದಲ್ಲೇ ಚಾಲಕನನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

  • ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

    ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

    – ಲಕ್ಷ ಲಕ್ಷ ಕೊಟ್ರೂ ಮನೆ ಕಳೆದುಕೊಳ್ಳಬೇಕಾದ ಆತಂಕ

    ಬೆಂಗಳೂರು: ಬ್ಯಾಂಕ್‌ ಸಾಲ ಇದ್ದ ಕಟ್ಟವನ್ನು ಲೀಸ್‌ಗೆ ಪಡೆದು 17 ಕುಟುಂಬಗಳು ಬೀದಿಗೆ ಬಂದಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ ನಡೆದಿದೆ.

    ಚಂದ್ರಲೇಔಟ್‌ನ ಗಂಗೊಂಡನಹಳ್ಳಿಯಲ್ಲಿ ಕಳೆದ ಆರೇಳು ವರ್ಷದ ಹಿಂದೆ ಸುಧಾ ಎಂಬಾಕೆ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಎರಡೂ ಕೋಟಿ ರೂ.ವರೆಗೆ ಸಾಲ ಪಡೆದು ಕಟ್ಟಡ ನಿರ್ಮಾಣ ಮಾಡಿದ್ದರು. ಕಟ್ಟಡದಲ್ಲಿ ಒಟ್ಟು 17 ಮನೆಗಳಿದ್ದು, ಎಲ್ಲಾವನ್ನು ಲೀಸ್‌ಗೆ ನೀಡಿದ್ದರು. ಕಟ್ಟಡದ ಮೇಲೆ ಸಾಲ ಇರುವ ವಿಚಾರ ಗೊತ್ತಿಲ್ಲದೇ 17 ಕುಟಂಬಗಳು, ಲಕ್ಷ ಲಕ್ಷ ಹಣ ನೀಡಿ ಮನೆಗಳನ್ನ ಲೀಸ್‌ಗೆ ಹಾಕಿಕೊಂಡು ಸಂಕಷ್ಟಕ್ಕೆ ಸಿಲುಕಿವೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

    ಮಾಲಕಿ ಕಳೆದ ಹಲವು ತಿಂಗಳಿನಿಂದ ಸಾಲ ಮರುಪಾವತಿ ಮಾಡದ ಕಾರಣ ಬ್ಯಾಂಕ್‌ನವರು ಕಟ್ಟಡ ಸೀಸ್‌ಗೆ ಮುಂದಾಗಿದ್ದಾರೆ. ಮೂರು ಬಾರಿ ಮಾಲಕಿಗೆ ‌ನೋಟಿಸ್‌ ಕೊಟ್ಟರು. ಸಾಲ ಮರುಪಾವತಿ ಮಾಡದ ಕಾರಣ ಬ್ಯಾಂಕ್ ಸಿಬ್ಬಂದಿ ಸೀಜ್‌ಗೆ ಮುಂದಾಗಿದ್ದಾರೆ. ಈ ವೇಳೆ ಮನೆಯಲ್ಲಿದ್ದವರು ವಿರೋಧ ವ್ಯಕ್ತಪಡಿಸಿದರು. ಒಪ್ಪದ ಸಿಬ್ಬಂದಿ ಮನೆಗಳಿಗೆ ಬೀಗ ಹಾಕಲು ಮುಂದಾಗಿದ್ದಾರೆ.

    ಬ್ಯಾಂಕ್ ಸಿಬ್ಬಂದಿಗೆ ಹೆದರಿ ಹಲವರು ಮನೆಗಳ ಒಳಗಿಂದ ಲಾಕ್ ಮಾಡಿಕೊಂಡು ಮನೆಯಿಂದ ಆಚೆ ಬಾರದೇ ಹೆದರಿದ್ದರು. ಈ ಬಗ್ಗೆ ಕಟ್ಟಡದ ಮಾಲೀಕರಿಗೆ ಮಾಹಿತಿ ನೀಡಿದರು. ಮಾಲಕಿ ಮಾತ್ರ ಸಬೂಬು ನೀಡಿ ಜಾರಿಕೊಳ್ಳುತ್ತಿದ್ದಾರಂತೆ.‌ ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

    ಇಡೀ ಕಟ್ಟಡದ ಪ್ರತಿ ಮನೆಯೂ 10 ರಿಂದ 30 ಲಕ್ಷಗಳ ವರೆಗೆ ಹಣ ನೀಡಿದ್ದಾರೆ. ಅತ್ತ ಬ್ಯಾಂಕ್‌ನವರು ನಿವಾಸಿಗಳಿಗೆ ಎರಡು ದಿನ ಸಮಯಾವಕಾಶ ನೀಡಿ ಹೋಗಿದ್ದು, ಎರಡು ದಿನದಲ್ಲಿ ಮನೆ ಖಾಲಿ ಮಾಡುವಂತೆ ಗಡುವು ನೀಡಿದ್ದಾರೆ. ಸದ್ಯ ಬ್ಯಾಂಕ್ ಸಿಬ್ಬಂದಿ ಗಡುವಿನಿಂದ ಆತಂಕಕ್ಕೆ ಒಳಗಾಗಿರುವ ನಿವಾಸಿಗಳು, ವಾಪಸ್ ಹಣವು ಸಿಗದೇ, ಮನೆಯೂ ಇಲ್ಲದಂತಾದರೆ ಏನು ಮಾಡುವುದು ಎಂದು ಅತಂತ್ರ ಸ್ಥಿತಿಯಲ್ಲಿದ್ದಾರೆ.

  • ಹತ್ತೇ ಸೆಕೆಂಡ್‌ನಲ್ಲಿ ಲಕ್ಷಾಧಿಪತಿಯಾದ ಯುವಕ – ಬರಿಗೈಲಿ ಬಂದವನಿಗೆ ಸಿಕ್ಕಿದ್ದು ಬರೋಬ್ಬರಿ 94 ಲಕ್ಷ ಹಣ

    ಹತ್ತೇ ಸೆಕೆಂಡ್‌ನಲ್ಲಿ ಲಕ್ಷಾಧಿಪತಿಯಾದ ಯುವಕ – ಬರಿಗೈಲಿ ಬಂದವನಿಗೆ ಸಿಕ್ಕಿದ್ದು ಬರೋಬ್ಬರಿ 94 ಲಕ್ಷ ಹಣ

    – 300ಕ್ಕೂ ಹೆಚ್ಚು ಕ್ಯಾಮೆರಾ ಪರಿಶೀಲಿಸಿ ಪ್ರಕರಣ ಬೇಧಿಸಿದ ಪೊಲೀಸರು

    ಬೆಂಗಳೂರು: ಬರಿಗೈಯಲ್ಲಿ ಅಂಗಡಿಯೊಂದಕ್ಕೆ ಬಂದ ಯುವಕನಿಗೆ ಬರೋಬ್ಬರಿ 94 ಲಕ್ಷ ರೂ. ಇದ್ದ ಹಣದ ಬ್ಯಾಗ್ ಸಿಕ್ಕಿದ್ದು, ಹತ್ತೇ ಸೆಕೆಂಡ್‌ನಲ್ಲಿ ಲಕ್ಷಾಧಿಪತಿಯಾದ ಘಟನೆ ಬೆಂಗಳೂರಿನ (Bengaluru) ಚಂದ್ರಲೇಔಟ್‌ನಲ್ಲಿ (Chandra Layout) ನಡೆದಿದೆ.

    ಪ್ರಮೋದ್ ಎಂಬಾತ ಸೈಟ್ ಖರೀದಿಸುವ ಸಲುವಾಗಿ 94 ಲಕ್ಷ ರೂ. ಕೂಡಿಸಿಟ್ಟಿದ್ದ. ಈತ ಚಂದ್ರಲೇಔಟ್ ನಿವಾಸಿಯಾಗಿದ್ದು, ಹಣವನ್ನು ಎಣಿಸಲು ಸ್ನೇಹಿತನ ಅಂಗಡಿಗೆ ತೆಗೆದುಕೊಂಡು ಹೋಗಲು ಮುಂದಾಗಿದ್ದ. ಅಲ್ಲದೇ ವಕೀಲರ ಕಚೇರಿಗೆ ತೆರಳಲು ರೆಡಿಯಾಗಿದ್ದ. ಬಾಕ್ಸ್‌ನಲ್ಲಿ ಹಣವನ್ನು ಹಾಕಿಕೊಂಡು ಮನೆಯಿಂದ ಹೊರಟ ಪ್ರಮೋದ್ ಮನೆ ಕೆಳಗೆ ಬಂದು ಕಾರಿನ ಡೋರ್ ತೆಗೆಯಲೆಂದು ಕೈಯಲ್ಲಿದ್ದ ಹಣದ (Money) ಬ್ಯಾಗ್ (Bag) ಅನ್ನು ಪಕ್ಕದಲ್ಲೇ ಇದ್ದ ಅಪರಿಚಿತ ಆ್ಯಕ್ಟಿವಾ ಸ್ಕೂಟಿ ಮೇಲೆ ಇರಿಸಿದ್ದಾನೆ. ಬಳಿಕ ದಾಖಲೆಗಳಿದ್ದ ಬ್ಯಾಗ್ ಅನ್ನು ಮಾತ್ರ ಕಾರಿನಲ್ಲಿ ಹಾಕಿಕೊಂಡು ಹಣದ ಬ್ಯಾಗ್ ಅನ್ನು ಮರೆತು ಹೋಗಿದ್ದಾನೆ. ಇದನ್ನೂ ಓದಿ: ಡೀಲ್‍ನಲ್ಲಿ ‘ವಿಶ್ವನಾಥ್‌ ಜೀʼ ಪಾತ್ರಧಾರಿ ಚನ್ನನಾಯ್ಕ್ ತನ್ನ ಪಾತ್ರದ ಬಗ್ಗೆ ವಿವರಿಸಿದ್ದು ಹೀಗೆ..

    ಬೈಕ್ ಮಾಲೀಕ ವರುಣ್ ಗೌಡ ಬೈಕ್ ಬಳಿ ಬಂದು ನೋಡಿದಾಗ ಬ್ಯಾಗ್ ಕಾಣಿಸಿದ್ದು, ಓಪನ್ ಮಾಡಿ ನೋಡಿದಾಗ ಹಣದ ಕಂತೆ ಕಂಡಿದೆ. ವರುಣ್ ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಡಿಪಾರ್ಟ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಹಣದ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಶ್ರೀನಗರದಲ್ಲಿರುವ ಮನೆಯಲ್ಲಿ ಹಣವನ್ನು ಹಾಗೆ ಇಟ್ಟುಕೊಂಡಿದ್ದ ವರುಣ್ 94 ಲಕ್ಷ ರೂ. ಹಣ ಏನು ಮಾಡಬೇಕು ಎನ್ನುವ ಗೊಂದಲದಲ್ಲೇ ಐದು ದಿನ ಕಳೆದಿದ್ದ. ಇದನ್ನೂ ಓದಿ: ಐಸಿಸ್ ಉಗ್ರನೊಂದಿಗೆ ನಿರಂತರ ಸಂಪರ್ಕ – ಎನ್‍ಐಎಯಿಂದ ಯಾದಗಿರಿ ವ್ಯಕ್ತಿ ವಿಚಾರಣೆ

    ವರುಣ್ ಈ ಹಣದಿಂದ ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಖರೀದಿಗೂ ಪ್ಲಾನ್ ಮಾಡಿಕೊಂಡಿದ್ದ. ಆದರೆ ಎಲ್ಲಿಯೂ ಹಣ ಕೊಡದೇ ಮನೆಯಲ್ಲಿಯೇ ಇಟ್ಟುಕೊಂಡಿದ್ದ. ಇತ್ತ ಸ್ನೇಹಿತನ ಅಂಗಡಿ ಬಳಿ ಹೋಗಿ ಕಾರು ಪರಿಶೀಲಿಸಿದ ಪ್ರಮೋದ್‌ಗೆ ಹಣ ಇಲ್ಲದೇ ಇರುವುದನ್ನು ಕಂಡು ಶಾಕ್ ಆಗಿದೆ. ಬಳಿಕ ಪ್ರಮೋದ್ ಮನೆಯ ಬಳಿ ವಾಪಸ್ ಬಂದು ನೋಡಿದಾಗ ಬೈಕ್, ಹಣ ಎರಡೂ ಇರಲಿಲ್ಲ. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

    ಹಣ ಕಳೆದುಕೊಂಡ ಪ್ರಮೋದ್ ಚಂದ್ರಲೇಔಟ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೈಕ್ ಹೊರಟ ಮಾರ್ಗದಲ್ಲಿರುವ 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ಮಾಡಿದ್ದಾರೆ. ಕೊನೆಗೂ ಆರೋಪಿಯನ್ನು ಸೆರೆ ಹಿಡಿದು 94 ಲಕ್ಷ ರೂ. ಹಣವನ್ನು ರಿಕವರಿ ಮಾಡಿದ್ದಾರೆ. ವರುಣ್ ತಾನಾಗಿಯೇ ಆ ಹಣ ತಂದು ಪೊಲೀಸರಿಗೆ ಕೊಟ್ಟಿದ್ದರೆ ಹೀರೋ ಆಗುತ್ತಿದ್ದ. ಆದರೆ ಮನೆಯಲ್ಲಿ ಹಣ ಇಟ್ಟುಕೊಂಡು ಈಗ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಅಪಘಾತಕ್ಕೀಡಾಗಿ ಮೃತಪಟ್ಟ ಅಜ್ಜಿ ಪ್ರಕರಣಕ್ಕೆ ಟ್ವಿಸ್ಟ್- ಮೊಮ್ಮಗನಿಂದಲೇ ಕೊಲೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಣ್ಣಮ್ಮ ದೇವಿ ಮೆರವಣಿಗೆಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

    ಅಣ್ಣಮ್ಮ ದೇವಿ ಮೆರವಣಿಗೆಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

    ಬೆಂಗಳೂರು: ರಾಜ್ಯದಲ್ಲಿ ಆಜಾನ್ ಮತ್ತು ಸುಪ್ರಭಾತ ನಡುವಿನ ಧರ್ಮ ದಂಗಲ್ ನಡುವೆ ಭಾವೈಕ್ಯತೆ ಸಾರುವ ದೃಶ್ಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ.

    ಬೆಂಗಳೂರಿನ ಚಂದ್ರಾಲೇಔಟ್‍ನ ಗಂಗೋಂಡನಹಳ್ಳಿ ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯ ಪರಿಣಾಮ ಯಾವುದೇ ಜಾತ್ರೆ ಮಹೋತ್ಸವಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಅಣ್ಣಮ್ಮದೇವಿ ಜಾತ್ರೆ ಮಹೋತ್ಸವ ನಡೆಯಿತು. ವಿಶೇಷ ಅಂದರೆ ಗಂಗೊಂಡನಹಳ್ಳಿ ಹಿಂದೂಗಳಿಗಿಂತ ಹೆಚ್ಚಾಗಿ ಮುಸ್ಲಿಮರೇ ವಾಸವಾಗಿದ್ದಾರೆ. ಅಣ್ಣಮ್ಮ ಜಾತ್ರೆ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಮರು ಎನ್ನುವ ಯಾವುದೇ ಭೇದ, ಭಾವ ಇಲ್ಲದೇ ಪರಸ್ಪರ ಕೈ, ಕೈ ಹಿಡಿದುಕೊಂಡು ದೇವಿ ಮುಂದೆ ಭರ್ಜರಿ ಡಾನ್ಸ್ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

    ಮೆರವಣಿಗೆ ಪ್ರಾರಂಭದಿಂದ ಕೊನೆಯವರೆಗೂ ಮುಸ್ಲಿಮರು ಮೆರವಣಿಗೆಯಲ್ಲಿ ಭಾಗಿಯಾಗಿ ಹಿಂದೂಗಳಿಗೆ ಸಾಥ್ ನೀಡಿ ಭಕ್ತಿ ಭಾವದಿಂದ ಅಣ್ಣಮ್ಮ ತಾಯಿ ಕೃಪೆಗೆ ಪಾತ್ರರಾಗಿದ್ದಾರೆ. ದಿನ ಬೆಳಗಾದರೆ, ಧರ್ಮ-ಧರ್ಮಗಳ ನಡುವಿನ ಕಿತ್ತಾಟದ ನಡುವೆ ಈ ರೀತಿ ಭಾವೈಕ್ಯತೆ ಸಾರುವ ಅಪರೂಪದ ಘಟನೆಯಿಂದ ಎರಡು ಧರ್ಮದ ಜನರು ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ: ಲಕ್ಷ್ಮಣ ಸವದಿಯ ಮುಂದಿನ ರಾಜಕೀಯ ಹಾದಿ ಏನು?

  • ಕೆಲಸ ಮಾಡುತ್ತಿದ್ದ ವೇಳೆ ಮಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು

    ಕೆಲಸ ಮಾಡುತ್ತಿದ್ದ ವೇಳೆ ಮಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು

    ಬೆಂಗಳೂರು: ಕೆಲಸ ಮಾಡುತ್ತಿದ್ದ ವೇಳೆ ಮಷಿನ್‍ಗೆ ಯುವತಿ ವೇಲ್ ಸಿಲುಕಿಕೊಂಡು ಸಾವನ್ನಪ್ಪಿರುವ ಘಟನೆ ಚಂದ್ರಾಲೇಔಟ್‍ನಲ್ಲಿ ನಡೆದಿದೆ.

    ಬೆಂಗಳೂರಿನ ಚಂದ್ರಾಲೇಔಟ್‍ನಲ್ಲಿ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಯುವತಿ ಶಾಜಿಯಾ ಬಾನು ಕೆಲಸ ಮಾಡುತ್ತಿದ್ದರು. ಈ ವೇಳೆ ಶಾಜಿಯಾ ಬಾನು ಅವರ ವೇಲ್ ಮಷಿನ್‍ಗೆ ಸಿಲುಕಿ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ ಫ್ಯಾಕ್ಟರಿ ಸಿಬ್ಬಂದಿ ಶಾಜಿಯಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಾಟ – ಇಬ್ಬರು ಆರೋಪಿಗಳು ಸೆರೆ

    ಶಾಜಿಯಾ ಬಾನು ಸಾವಿನ ಹಿನ್ನೆಲೆ ಫ್ಯಾಕ್ಟರಿ ಮಾಲೀಕನ ವಿರುದ್ಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಬ್ಬಂದಿಗಳು ಫ್ಯಾಕ್ಟರಿ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ತಲೆಯನ್ನ ಗೋಡೆಗೆ ಹೊಡೆದು ಭೀಕರವಾಗಿ ರೌಡಿಶೀಟರ್ ಹತ್ಯೆ

    ತಲೆಯನ್ನ ಗೋಡೆಗೆ ಹೊಡೆದು ಭೀಕರವಾಗಿ ರೌಡಿಶೀಟರ್ ಹತ್ಯೆ

    ಬೆಂಗಳೂರು: ತಲೆಯನ್ನ ಗೋಡೆಗೆ ಹೊಡೆದು ಭೀಕರವಾಗಿ ರೌಡಿ ಶೀಟರ್‍ನನ್ನು ಹತ್ಯೆಗೈದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

    ಚಂದ್ರಲೇಔಟ್ ಪೊಲೀಸ್ ಠಾಣೆಯ ಮಣಿ ಆಲಿಯಾಸ್ ಸುಬ್ರಮಣಿ ಕೊಲೆಯಾದ ರೌಡಿ ಶೀಟರ್. ಇಂದು ಬೆಳಗ್ಗಿನ ಜಾವ ಆತನ ಮನೆಯಲ್ಲೇ ಕೊಲೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

    ಸುಬ್ರಮಣಿ ದರೋಡೆ, ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆತನ ವಿರುದ್ಧ ಚಂದ್ರಲೇಔಟ್ ಪೊಲೀಸ್ ಠಾಣೆ ಅನೇಕ ಪ್ರಕರಣಗಳು ದಾಖಲಾಗಿದ್ದವು. ಆದರೆ ಇಂದು ಬೆಳಗ್ಗೆ ಆತನ ಮನೆ ನುಗ್ಗಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ತಲೆಯನ್ನು ಗೋಡೆಗೆ ಹೊಡೆದು ಮುಖ ಗುರುತು ಸಿಗದಂತೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ.

    ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೌಡಿಶೀಟರ್ ಸುಬ್ರಮಣಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

  • ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ- 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಕಾಲು ಕಟ್

    ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ- 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಕಾಲು ಕಟ್

    ಬೆಂಗಳೂರು: ಮಹಾನಗರಿ ಬೆಂಗಳೂರಲ್ಲಿ ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಸಂಭವಿಸಿದೆ.

    ಚಂದ್ರಲೇಔಟ್ ಮುಖ್ಯ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಇನೋವಾ ಕಾರು ರಸ್ತೆ ಬದಿಯಲಿದ್ದ ಒಂದು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಅಂಗಡಿಗೂ ಗುದ್ದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಾಲುಗಳು ತುಂಡಾಗಿವೆ.

    ಬ್ಯಾಟರಾಯನಪುರ ಸಂಚಾರಿ ಪೊಲೀಸರು ಇನೋವಾ ಕಾರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸಿದ್ದಾರೆ.

  • ಬೈಕ್‍ನಲ್ಲಿ ಬಂದು ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗ್ತಿದ್ದ ಕಾಮುಕ ಟೆಕ್ಕಿ ಅರೆಸ್ಟ್!

    ಬೈಕ್‍ನಲ್ಲಿ ಬಂದು ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗ್ತಿದ್ದ ಕಾಮುಕ ಟೆಕ್ಕಿ ಅರೆಸ್ಟ್!

    ಬೆಂಗಳೂರು: ರಸ್ತೆಯಲ್ಲಿ ನಿಂತಿರುವ ಯುವತಿಯರ ಹಿಂಭಾಗಕ್ಕೆ ಹೊಡೆದು ಪರಾರಿಯಾಗುತ್ತಿದ್ದ ಕಾಮುಕನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ನಗರದ ಶ್ರೀಗಂಧಕಾವಲು ನಿವಾಸಿ ವಿನೀತ್ ಬಂಧಿತ ಆರೋಪಿ. ವಿನೀತ್ ಬೈಕ್ ನಲ್ಲಿ ವೇಗವಾಗಿ ಬಂದು ರಸ್ತೆಯ ಪಕ್ಕ ನಿಂತಿರುವ ಹುಡುಗಿಯರನ್ನು ಹಿಂಬದಿಯಿಂದ ಮುಟ್ಟಿ ಪರಾರಿಯಾಗುತ್ತಿದ್ದ. ವಿನೀತ್ ಬಿಇ ಮುಗಿಸಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾನೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿಯ ಹಿಂಭಾಗಕ್ಕೆ ಹೊಡೆದು ಫ್ಲೈಯಿಂಗ್ ಕಿಸ್ ಕೊಟ್ಟ ಕಾಮುಕ! 

    ಏಪ್ರಿಲ್ 10 ರಂದು ನಾಗರಭಾವಿ ಸರ್ಕಲ್ ಬಳಿ ಯುವತಿಯೊಬ್ಬರು ಊಟದ ಪಾರ್ಸೆಲ್‍ಗಾಗಿ ಕಾಯುತ್ತಾ ರಸ್ತೆಯ ಬದಿ ನಿಂತಿದ್ರು. ಈ ವೇಳೆ ಬೈಕ್‍ನಲ್ಲಿ ಬಂದ ವಿನೀತ್ ಯುವತಿಯ ಹಿಂಭಾಗ ಮುಟ್ಟಿ ಪರಾರಿಯಾಗಿದ್ದ. ಇದ್ರಿಂದ ಭಯಭೀತಳಾದ ಯುವತಿ ಪ್ರಾಂಶುಪಾಲರ ಜೊತೆ ಬಂದು ಮೇ 3ರಂದು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಇದನ್ನೂ ಓದಿ: 6 ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಂದು, ಮನೆಯಲ್ಲೇ ಮೃತದೇಹ ಬಚ್ಚಿಟ್ಟಿದ್ದ ಕಾಮುಕ 

    ಡ್ಯೂಟಿ ಬಳಿಕ ಹುಡುಗಿಯರನ್ನ ಚೇಡಿಸುತ್ತಿದ್ದ: ಖಾಸಗಿ ಕಂಪನಿಯೊಂದರಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ವಿನೀತ್ ತನ್ನ ಕೆಲಸ ಮುಗಿದ ಮೇಲೆ ರಸ್ತೆಯಲ್ಲಿ ಹೋಗುವ ಯುವತಿಯರನ್ನು ಚುಡಾಯಿಸುತ್ತಿದ್ದ ಹಾಗು ಜನಸಂದಂಣಿಯಿರುವ ಬಸ್‍ಗಳಲ್ಲಿ ಹತ್ತಿ ತನ್ನ ಲೈಂಗಿಕ ಆಸಕ್ತಿಯನ್ನು ತೃಪ್ತಿಪಡಿಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ.

    ಮೇ 3ರಂದು ದಾಖಲಾದ ದೂರಿನ್ವಯ ಚಂದ್ರಾಲೇಔಟ್ ಪೊಲೀಸರು ನಾಗರಭಾವಿ ಬಳಿಯ ಸಿಸಿಟಿವಿ ಪರಿಶೀಲನೆ ನಡೆಸಿ, ಕಾಮುಕ ವಿನೀತ್‍ನನ್ನು ಬಂಧಿಸಿದ್ದಾರೆ. ವಿನೀತ್ ವಿರುದ್ಧ ಐಪಿಸಿ ಸೆಕ್ಷನ್ 354, ಲೈಂಗಿಕ ಕಿರಿಕುಳ ಆರೊಪದಡಿ ದೂರು ದಾಖಲಿಸಿ ನ್ಯಾಯಂಗ ಬಂಧನದಲ್ಲಿ ಇರಿಸಲಾಗಿದೆ.

    ಇದನ್ನೂ ಓದಿ: ಹೆಂಡತಿಗೆ ವಯಾಗ್ರ ಮಾತ್ರೆ ತಿನ್ನಿಸಿ ಪೀಡಿಸ್ತಿದ್ನಂತೆ ಕಾಮುಕ ಪತಿ

    ಇದನ್ನೂ ಓದಿ:  ನನ್ನ ಗಂಡನಿಗೆ ಪುರುಷತ್ವ ಇಲ್ಲ ಎಂದು ಪೊಲೀಸರಿಗೆ ಪತ್ನಿ ದೂರು