Tag: Chandra Mohan

  • ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’  ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’ ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್,  ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್ ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

    ಚಂದ್ರ ಮೋಹನ್ (Chandra Mohan) ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್  (Forrest) ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

    ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್  ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

  • ಹೃದಯಾಘಾತದಿಂದ ನಟ ಚಂದ್ರಮೋಹನ್ ನಿಧನ

    ಹೃದಯಾಘಾತದಿಂದ ನಟ ಚಂದ್ರಮೋಹನ್ ನಿಧನ

    ತೆಲುಗು (Telugu) ಸಿನಿಮಾ ರಂಗದ ಖ್ಯಾತ ನಟ ಚಂದ್ರ ಮೋಹನ್ (Chandra Mohan) ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ (Death). 82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗಿ ವಿಧಿವಶರಾಗಿದ್ದಾರೆ.

    ತೆಲುಗು ಚಿತ್ರೋದ್ಯಮದಲ್ಲಿ ದಾಖಲೆ ಎನ್ನುವಷ್ಟು ಸಿನಿಮಾಗಳಲ್ಲಿ ಚಂದ್ರ ಮೋಹನ್ ನಟಿಸಿದ್ದಾರೆ. ಈವರೆಗೂ 900ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 1966ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ರಂಗುಲ ರತ್ನಂ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಆನಂತರ ತಿರುಗಿ ನೋಡಿದ ಇತಿಹಾಸವೇ ಇರಲಿಲ್ಲ.

    ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು ಚಂದ್ರಮೋಹನ್. ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.

  • ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    1980, ಹುಟ್ಟುಹಬ್ಬದ ಶುಭಾಶಯಗಳು, ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ‘ಗಟ್ಟಿಮೇಳ’ (Gattimela) ನಟಿ ಶರಣ್ಯ ಶೆಟ್ಟಿ ಅವರು ಇತ್ತೀಚಿಗೆ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಸಿನಿಮಾಗೆ ನಾಯಕಿಯಾಗುವ ಮೂಲಕ ಸಿಹಿಸುದ್ದಿ ನೀಡಿದ್ರು. ಈಗ ‘ಅಕಿರ’ ಹೀರೋ ಅನೀಶ್ ತೇಜೇಶ್ವರ್‌ಗೆ (Anish Tejeshwar) ಹೀರೋಯಿನ್ ಆಗಿದ್ದಾರೆ.

    ಕಿರುತೆರೆಯ ಜನಪ್ರಿಯ ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವಿಲನ್ ಆಗಿ ವೇದಾಂತ್- ಅಮೂಲ್ಯಗೆ ಟಕ್ಕರ್ ಕೊಡ್ತಿದ್ದರು. ಅವರ ಪಾತ್ರ ಮುಕ್ತಾಯವಾಗುತ್ತಿದ್ದಂತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾಗಿದ್ದರು. ಪ್ರಿಯಾಂಕಾ ಉಪೇಂದ್ರ ಅವರ ಜೊತೆ ‘1980’ ಚಿತ್ರದಲ್ಲಿ ನಟಿ ಗಮನ ಸೆಳೆದರು. ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ನಟಿ ಒಪ್ಪಿಕೊಳ್ತಿದ್ದಾರೆ. ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಡಿಫರೆಂಟ್ ರೋಲ್‌ಗಳನ್ನ ನಟಿ ಓಕೆ ಅಂತಿದ್ದಾರೆ.

    ‘ಕೃಷ್ಣಂ ಪ್ರಣಯ ಸಖಿ’ ಗೋಲ್ಡನ್ ಹೀರೋಗೆ ಸೆಕೆಂಡ್ ಹೀರೋಯಿನ್ ಆಗಿದ್ದರು ಶರಣ್ಯ ಪಾತ್ರಕ್ಕೆ ಮಹತ್ವವಿದೆ. ಮಾಡ್ರನ್ ಅವತಾರದಲ್ಲಿ ಶರಣ್ಯ ನಟಿಸಿದ್ದಾರೆ. ಗಣೇಶ್‌ಗೆ ಮಾಲಿವುಡ್ ನಟಿ ಮಾಳವಿಕಾ ಮತ್ತು ಶರಣ್ಯ ಶೆಟ್ಟಿ (Sharanya Shetty) ನಾಯಕಿಯರಾಗಿದ್ದಾರೆ. ಭಿನ್ನವಾಗಿರುವ ತ್ರಿಕೋನ ಪ್ರೇಮಕಥೆಯನ್ನ ಇಲ್ಲಿ ನೋಡಬಹುದಾಗಿದೆ. ಈ ಬೆನ್ನಲ್ಲೇ ಮತ್ತೊಂದು ಬ್ರೇಕಿಂಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ಅಕಿರ, ರಾಮಾರ್ಜುನ, ವಾಸು ನಾನು ಪಕ್ಕಾ ಕಮರ್ಷಿಯಲ್, ಚಿತ್ರಗಳ ಮೂಲಕ ಸಂಚಲನ ಮೂಡಿಸಿರುವ ಅನೀಶ್ ತೇಜೇಶ್ವರ್‌ಗೆ ನಾಯಕಿಯಾಗಿ ಶರಣ್ಯ ಶೆಟ್ಟಿ ಸೆಲೆಕ್ಟ್ ಆಗಿದ್ದಾರೆ. ಈ ಸಿನಿಮಾದಲ್ಲಿ ಪಕ್ಕಾ ಸಂಪ್ರಾದಾಯಿಕ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ನಟನೆಗೆ ಹೆಚ್ಚು ಒತ್ತಿರುವ ವಿಭಿನ್ನ ರೋಲ್‌ಗೆ ನಟಿ ಜೀವತುಂಬುತ್ತಿದ್ದಾರೆ. ಹೆಸರಿಡದ ಈ ಹೊಸ ಪ್ರಾಜೆಕ್ಟ್, ಜುಲೈ 18ರಿಂದ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಸಾಂಗ್ ಶೂಟ್ ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ‘ಬ್ರಹ್ಮಚಾರಿ’ ಸಿನಿಮಾ ನಿರ್ದೇಶಕ ಚಂದ್ರ ಮೋಹನ್‌ (Chandra Mohan) ಈ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.

    ಸ್ಟಾರ್ ನಟರ ಸಿನಿಮಾಗಳಿಗೆ ನಾಯಕಿಯಾಗುವ ಮೂಲಕ ಶರಣ್ಯ ಶೆಟ್ಟಿ ಬಂಪರ್ ಆಫರ್ಸ್ ಗಿಟ್ಟಿಸಿಕೊಳ್ತಿದ್ದಾರೆ. ಚಿತ್ರರಂಗದಲ್ಲಿ ಮೊದಲೇ ಶೆಟ್ರ ಹವಾ ಜೋರಾಗಿದೆ. ಶರಣ್ಯ ಶೆಟ್ಟಿ ಅವರು ಅದೆಷ್ಟರ ಮಟ್ಟಿಗೆ ಮೋಡಿ ಮಾಡುತ್ತಾರೆ ಅಂತಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪಾಧ್ಯಕ್ಷನಾದ ಖ್ಯಾತ ಹಾಸ್ಯನಟ ಚಿಕ್ಕಣ್ಣ : ಹೀರೋ ಆಗಿ ಲಾಂಚ್

    ಉಪಾಧ್ಯಕ್ಷನಾದ ಖ್ಯಾತ ಹಾಸ್ಯನಟ ಚಿಕ್ಕಣ್ಣ : ಹೀರೋ ಆಗಿ ಲಾಂಚ್

    ನ್ನಡದ ಹೆಸರಾಂತ ಹಾಸ್ಯನಟ ಚಿಕ್ಕಣ್ಣ ಸ್ಯಾಂಡಲ್‌ವುಡ್‌ನ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಕೂಡ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರು ಹೀರೋ ಆಗಿ ಲಾಂಚ್ ಆಗಿದ್ದಾರೆ. ಈ ಹಿಂದೆ ಶರಣ್ ಜೊತೆ ಚಿಕ್ಕಣ್ಣ ‘ಅಧ್ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಮುಂದುವರಿದ ಭಾಗವೇ ‘ಉಪಾಧ್ಯಕ್ಷ’ ಸಿನಿಮಾವಂತೆ.

    ಅಧ್ಯಕ್ಷ ಸಿನಿಮಾದಲ್ಲಿ ಶರಣ್ ಅಧ್ಯಕ್ಷನಾಗಿ ರಂಜಿಸಿದ್ದರೆ, ಚಿಕ್ಕಣ್ಣ ಉಪಾಧ್ಯಕ್ಷನಾಗಿ ನಗೆಯ ಕಚಗುಳಿ ಇಟ್ಟಿದ್ದರು. ಇಬ್ಬರದ್ದೂ ಲವ್ ಸ್ಟೋರಿ ಬೇರೆ ಇತ್ತು. ಅಧ್ಯಕ್ಷ ಸಿನಿಮಾದಲ್ಲಿ ಶರಣ್‌ಗೆ ಮದುವೆ ಆಗುತ್ತದೆ. ಆನಂತರ ನಡೆಯುವ ಕಥೆಯೇ ಉಪಾಧ್ಯಕ್ಷ ಸಿನಿಮಾವಂತೆ. ಹಾಗಾಗಿ ಈ ಸಿನಿಮಾದಲ್ಲಿ ಕೇವಲ ಚಿಕ್ಕಣ್ಣ ಮಾತ್ರ ಇರಲಿದ್ದಾರೆ. ಇದನ್ನೂ ಓದಿ: ಅಮ್ಮ ಅಂತಾ ಎಷ್ಟೇ ಹೇಳಿಕೊಟ್ಟರೂ ಕೊನೆಗೆ ಅಪ್ಪ ಎಂದು ಕರೆದ ರಾಯನ್

    ಇಂದಿನಿಂದ ಸಿನಿಮಾದ ಶೂಟಿಂಗ್ ಶುರುವಾಗಲಿದ್ದು, ಚಂದ್ರಮೋಹನ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ. ಉಮಾಪತಿ ಈ ಸಿನಿಮಾದ ನಿರ್ಮಾಪಕರು. ಅಂದುಕೊಂಡಂತೆ ಆಗಿದ್ದರೆ, ಈ ಮೊದಲೇ ಸಿನಿಮಾದ ಶೂಟಿಂಗ್ ನಡೆಯಬೇಕಿತ್ತು. ಕೊರೊನಾ ಕಾರಣದಿಂದಾಗಿ ತಡವಾಯಿತು. ಇದೀಗ ಪಕ್ಕಾ ಸಿದ್ಧತೆಯೊಂದಿಗೆ ಸಿನಿಮಾ ಟೀಮ್ ಚಿತ್ರೀಕರಣಕ್ಕೆ ತೆರಳುತ್ತಿದೆ. ಮೊದಲ ಹಂತದ ಶೂಟಿಂಗ್ ಮೈಸೂರು ಸುತ್ತಮುತ್ತ ನಡೆಯಲಿದೆಯಂತೆ.

    Live Tv

  • ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಗಾಗಲೇ ಕನ್ನಡದಲ್ಲಿ ಸಾಕಷ್ಟು ಬಯೋಪಿಕ್ ಚಿತ್ರಗಳು ಬಂದಿವೆ. ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಲಿದೆ. ಇದು ಪೂರ್ಣ ಪ್ರಮಾಣದಲ್ಲಿ ಬಯೋಪಿಕ್ ಅಲ್ಲದೇ, ಇದ್ದರೂ, ಮಾಜಿ ರೌಡಿ, ಹಾಲಿ ಕನ್ನಡಪರ ಹೋರಾಟಗಾರನೊಬ್ಬನ ಕಥೆಯನ್ನು ಚಿತ್ರ ಮಾಡಲಾಗುತ್ತಿದೆ. ಆದರೆ, ಆ ಡಾನ್ ಯಾರು? ಏನು ಕಥೆ ಎನ್ನುವ ವಿಚಾರ ಮಾತ್ರ ಚಿತ್ರತಂಡ ಗುಟ್ಟಾಗಿ ಇಟ್ಟಿದೆ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಭೂಗತ ಜಗತ್ತಿನ ಚಟುವಟಿಕೆಯಲ್ಲಿದ್ದ ಕೆಲವರು ಕನ್ನಡ ಪರ ಸಂಘಟನೆ ಕಟ್ಟಿಕೊಂಡು, ಹೋರಾಟ ಮಾಡುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ. ಆದರೆ, ಈ ಸಿನಿಮಾ ಯಾರ ಕುರಿತಾದದ್ದು ಎನ್ನುವುದೇ ಸಸ್ಪೆನ್ಸ್.  ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಪೆಂಟಗನ್ ಸಿನಿಮಾ ಮೂಡಿ ಬರುತ್ತಿದೆ. ಐದು ಜನ ನಿರ್ದೇಶಕರು, ಐದು ಕಥೆಗಳನ್ನು ಈ ಸಿನಿಮಾದಲ್ಲಿ  ಹೇಳುತ್ತಿದ್ದಾರೆ. ಆ ಐದು ಕಥೆಗಳಲ್ಲಿ ಒಂದು ಕನ್ನಡ ಪರ ಹೋರಾಟಗಾರನ ಕುರಿತಾದದ್ದುಆಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಚೂರಿಕಟ್ಟೆ ಖ್ಯಾತಿಯ ರಾಘು ಶಿವಮೊಗ್ಗ, ಆಕಾಶ್ ‍ಶ್ರೀವತ್ಸ, ಚಂದ್ರ  ಮೋಹನ್, ಕಿರಣ್ ಕುಮಾರ್ ತಲಾ ಒಂದೊಂದು ಕಥೆಗೆ ನಿರ್ದೇಶನ ಮಾಡಿದ್ದರೆ, ಕನ್ನಡ ಪರ ಹೋರಾಟಗಾರನ ಕಥೆಗೆ ಗುರು ದೇಶಪಾಂಡೆ ನಿರ್ದೇಶಕರು. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಈಗಾಗಲೇ ನಾಲ್ಕೂ ಕಥೆಗಳ ಚಿತ್ರೀಕರಣ ಮುಗಿದಿದ್ದು, ಐದನೇ ಕಥೆಯಾದ ಕನ್ನಡ ಪರ ಹೋರಾಟಗಾರನ ಕಥೆಯ ಚಿತ್ರೀಕರಣ ಕೂಡ ಕೊನೆಯ ಹಂತದಲ್ಲಿದೆ. ಈ ಪಾತ್ರವನ್ನು ಖ್ಯಾತ ನಟ ಕಿಶೋರ್ ಮಾಡುತ್ತಿದ್ದಾರೆ. ಅಲ್ಲದೇ, ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಗುರುತಿಸಿಕೊಂಡಿರುವ, ನಟಿ ಅಶ್ವಿನಿ ಗೌಡ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

  • ಡಬಲ್ ಇಂಜನ್ನಿನ ಮಜವೇ ಬೇರೆ!

    ಡಬಲ್ ಇಂಜನ್ನಿನ ಮಜವೇ ಬೇರೆ!

    – ನಗುವಿನೊಂದಿಗೆ ಗಾಢ ಕುತೂಹಲಗಳ ನಾಕಾಬಂಧಿ!

    ರೇಟಿಂಗ್: 4/5 
    ಬೆಂಗಳೂರು: ನೋಡುಗರನ್ನೆಲ್ಲ ಟ್ರೈಲರ್ ಮೂಲಕವೇ ತುದಿಗಾಲಲ್ಲಿ ನಿಲ್ಲಿಸಿದ್ದ ಚಂದ್ರ ಮೋಹನ್ ನಿರ್ದೇಶನದ ‘ಡಬಲ್ ಇಂಜಿನ್’ ಚಿತ್ರ ಬಿಡುಗಡೆಯಾಗಿದೆ. ತೆಳುವಾದ ಡಬಲ್ ಮೀನಿಂಗ್ ಡೈಲಾಗುಗಳ ಮೂಲಕವೇ ಕಚಗುಳಿ ಇಟ್ಟಿದ್ದರಿಂದ ಅಂಥಾ ನಿರೀಕ್ಷೆಯಿಟ್ಟುಕೊಂಡು ಬಂದವರನ್ನೂ ಮತ್ತೊಂದು ಜಗತ್ತಿಗೆ ಕರೆದೊಯ್ದು ಭರಪೂರ ನಗುವಿನ ಜೊತೆಗೇ ಗಂಭೀರ ವಿಚಾರಗಳನ್ನೂ ಪ್ರಸ್ತುತ ಪಡಿಸೋದು ಈ ಚಿತ್ರದ ನಿಜವಾದ ಸ್ಪೆಷಾಲಿಟಿ!

    ಭರಪೂರ ಹಾಸ್ಯದ ಮೂಲಕವೇ ಅತ್ಯಂತ ಗಂಭೀರ ವಿಚಾರವೊಂದನ್ನು ಹೇಳೋದು ಸವಾಲಿನ ವಿಚಾರ. ಆದರೆ ಅಂಥಾ ಕಲೆಯನ್ನು ಕರತಲಾಮಲಕ ಮಾಡಿಕೊಂಡಿರುವ ಚಂದ್ರಮೋಹನ್ ಅದರಲ್ಲಿ ಗೆದ್ದಿದ್ದಾರೆ. ಪ್ರತೀ ಹಳ್ಳಿಗಳಲ್ಲಿಯೂ ಸಾಮಾನ್ಯವಾಗಿ ಇರುವ ಪಡ್ಡೆಗಳಂಥಾದ್ದೇ ವ್ಯಕ್ತಿತ್ವ ಹೊಂದಿರುವ ಮೂವರು ಹುಡುಗರು. ತಲತಲಾಂತರಗಳಿಂದ ಮಾಡಿಕೊಂಡು ಬಂದರೆ ಹೊಲದ ಮಣ್ಣು ಬಾಯಿಗೆ ಬೀಳಬಹುದೇ ಹೊರತು ಕೈ ತುಂಬಾ ಕಾಸು ಮಾಡಲಾಗೋದಿಲ್ಲ ಎಂಬುದನ್ನು ಬಲವಾಗಿ ನಂಬಿ ಅಡ್ಡಾಡಿಕೊಂಡಿರೋ ಆ ಮೂವರು ಊರವರ ಕಣ್ಣಲ್ಲಿ ಕೆಲಸಕ್ಕೆ ಬಾರದವರು. ಇಂಥಾ ಮೂವರು ಹುಡುಗರೂ ಇದ್ದಕ್ಕಿದ್ದಂತೆ ಒಂದೇ ಏಟಿಗೆ ಕೋಟಿ ಕೋಟಿ ಕಾಸು ಮಾಡೋ ಆಸೆಯೊಂದಿಗೆ ಚಕ್ರಸುಳಿಯೊಂದಕ್ಕೆ ಪ್ರವೇಶ ಮಾಡುತ್ತಾರೆ.

    ಹೀಗೆಂದಾಕ್ಷಣ ಆ ಮೂವರು ಕೊಲೆ, ಸುಲಿಗೆ ಕಳ್ಳತನದಂಥಾ ಮಾಮೂಲಿ ಅನಾಹುತಕ್ಕೆ ಕೈ ಹಾಕುತ್ತಾರೆಂದುಕೊಂಡರೆ ಅದನ್ನು ಈ ಚಿತ್ರ ಸುಳ್ಳು ಮಾಡುತ್ತದೆ. ಈ ಹುಡುಗರು ತಕ್ಷಣಕ್ಕೆ ಊಹಿಸಲಾಗದಂಥಾದ್ದೊಂದು ಕೆಲಸಕ್ಕೆ ಕೈ ಹಾಕುತ್ತಾರೆ. ಅದುವೇ ಇಡೀ ಚಿತ್ರದ ಅಸಲೀ ಶಕ್ತಿ. ಡಬಲ್ ಎಂಜಿನ್ ಚಿತ್ರದಲ್ಲಿ ಕ್ಷಣ ಕ್ಷಣಕ್ಕೂ ಕುತೂಹಹಲವಿದೆ, ಯಾರೂ ಊಹಿಸಲು ಸಾಧ್ಯವಾಗದಂಥಾ ತಿರುವುಗಳಿವೆ. ಆದರೆ ಕಥೆ ಅದೆಷ್ಟೇ ಗಂಭೀರವಾಗಿ ಸಾಗಿದರೂ ಪ್ರತೀ ಕ್ಷಣವೂ ನಗುವಿಗೇನೂ ಕೊರತೆ ಇಲ್ಲ. ಮೂವರು ಹುಡುಗರ ಜೊತೆಗೊಬ್ಬಳು ಸುಂದರಾಂಗಿ, ಅವರ ಜೊತೆಗೆ ಪೊಲೀಸ್ ಅಧಿಕಾರಿಗಳು, ಪ್ರೀತಿಯನ್ನು ದಕ್ಕಿಸಿಕೊಳ್ಳುವ ಪಡಿಪಾಟಲು, ಯಾರನ್ನೋ ತೃಪ್ತಿಪಡಿಸುವ ಪ್ರಾಮಾಣಿಕತೆ, ಹೃದಯ ಮಿಡಿಯುವ ಸನ್ನಿವೇಶ ಎಲ್ಲವೂ ಇದೆ. ಅದೆಲ್ಲ ಇದ್ದರೂ ಎಲ್ಲಿಯೂ ಗೊಂದಲ ಕಾಡದಂತೆ, ಒಂದರೆ ಕ್ಷಣವೂ ಕಥೆಯನ್ನು ಸಡಿಲ ಬಿಡದಂತೆ ನಗುವಿನ ಜೊತೆಗೇ ರೋಚಕವಾಗಿ ಕಟ್ಟಿ ಕೊಡಲಾಗಿದೆ.

    ಮಗನ ಏಳಿಗೆಯನ್ನೇ ಏದುರು ನೋಡುವ ತಾಯಿ, ಒಂಟಿ ಹೆಣ್ಣನ್ನು ಬೇರೆಯದ್ದೇ ದೃಷ್ಟಿಯಿಂದ ಅಳೆಯೋ ಸಮಾಜ, ಹೆಣ್ಣೊಬ್ಬಳು ಸಿಕ್ಕರೆ ಬೇರೆಯದ್ದೇ ದಂಧೆಗಿಳಿಸಲು ಹಾತೊರೆಯೋ ದುಷ್ಟತನ… ಇದೆಲ್ಲವೂ ಡಬಲ್ ಎಂಜಿನ್‍ನಲ್ಲಿದೆ. ಡಬಲ್ ಮೀನಿಂಗಿನಾಚೆಗೆ ಸಮಾಜದ ಅಂಕುಡೊಂಕುಗಳಿಗೂ ಹಾಸ್ಯದ ಮೂಲಕವೇ ಕಣ್ಣಾಗಿರೋ ಈ ಚಿತ್ರ ಬಹುಶಃ ಎಷ್ಟು ಸಲ ನೋಡಿದರೂ ಒಂದು ಕುತೂಹಲವನ್ನು ಖಂಡಿತಾ ಉಳಿಸಿಕೊಳ್ಳುತ್ತದೆ!