Tag: chandragrahana

  • ಚಂದ್ರಗ್ರಹಣ ಎಫೆಕ್ಟ್: ಹೆರಿಗೆ ಆಸ್ಪತ್ರೆ ಖಾಲಿ ಖಾಲಿ!

    ಚಂದ್ರಗ್ರಹಣ ಎಫೆಕ್ಟ್: ಹೆರಿಗೆ ಆಸ್ಪತ್ರೆ ಖಾಲಿ ಖಾಲಿ!

    ವಿಜಯಪುರ: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ವಿಜಯಪುರ ನಗರದ ಬಹುತೇಕ ಹೆರಿಗೆ ಆಸ್ಪತ್ರೆಗಳು ಖಾಲಿ-ಖಾಲಿಯಾಗಿದೆ.

    ನಗರದ ಆಸ್ಪತ್ರೆಗಳಲ್ಲಿ ತುಂಬು ಗರ್ಭಿಣಿ ಸ್ತ್ರೀಯರಿಗೆ ಸಿಸೇರಿಯನ್ ಗಾಗಿ ದಿನಾಂಕ ನೀಡಿದ್ದರೂ ಯಾರೊಬ್ಬರು ಆಸ್ಪತ್ರೆಯತ್ತ ತಲೆ ಹಾಕುತ್ತಿಲ್ಲ. ಸಿಸೇರಿಯನ್ ಗಾಗಿ ನಿಗದಿಪಡಿಸಿದ ಡೇಟ್‍ಗಳು ಗ್ರಹಣದ ಹಿನ್ನೆಲೆಯಲ್ಲಿ ರದ್ದಾಗಿದೆ. ಇದನ್ನು ಓದಿ: ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

    ಗರ್ಭಿಣಿಯರ ಮನೆಯವರು ಹೆರಿಗೆಗೆ ನಿರಾಕರಣೆ ಮಾಡಿದ್ದು, ಬಹುತೇಕ ಆಸ್ಪತ್ರೆಗಳು ಖಾಲಿ ಖಾಲಿಯಾಗಿವೆ. ಇನ್ನು ಕೆಲವರು ಶನಿವಾರಕ್ಕೆ ಸಿಸೇರಿಯನ್ ಮುಂದೂಡಿದ್ದಾರೆ.

    ಚಂದ್ರ ಗ್ರಹಣದಿಂದಾಗಿ ಮುಂದೆ ಹುಟ್ಟಲಿರುವ ಮಗುವಿಗೆ ಕಂಟಕವಾಗುತ್ತದೆ ಎಂದು ಭಾವಿಸಿ ಗರ್ಭಿಣಿಯರು ದೇವರ ನಾಮ ಸ್ಮರಣೆಯ ಮೊರೆ ಹೋಗಿದ್ದಾರೆ. ಸ್ತ್ರೋತ್ರ ಪುಸ್ತಕಗಳನ್ನು ಓದುತ್ತ ಕುಳಿತ ಗರ್ಭಿಣಿ ಸ್ತ್ರೀಯರು ದೇವರ ನಾಮಸ್ಮರಣೆಯಲ್ಲಿ ತಲ್ಲೀನರಾಗಿದ್ದಾರೆ. ಇದನ್ನು ಓದಿ: ಗ್ರಹಣ ಎಫೆಕ್ಟ್ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ

  • ಗ್ರಹಣ ಎಫೆಕ್ಟ್ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ

    ಗ್ರಹಣ ಎಫೆಕ್ಟ್ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ

    ಬೆಂಗಳೂರು: ವಾರಾಂತ್ಯ ಬಂದರೆ ಬೆಂಗಳೂರಿನ ರಸ್ತೆಗಳಲ್ಲಿ ಜಾಸ್ತಿ ಜನಸಂದಣಿ ಇರುತ್ತದೆ. ಆದರೆ ಶುಕ್ರವಾರ ಸಂಜೆ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಗರದ ರಸ್ತೆಗಳು ಖಾಲಿ ಖಾಲಿಯಾಗಿದೆ.

    ಹಲವು ಅಂಗಡಿಗಳು ಮುಚ್ಚಿದ್ದು, ಟ್ರಾಫಿಕ್ ಜಾಮ್ ನ ಸಂಕಷ್ಟಕ್ಕೆ ಗ್ರಹಣದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.

    ದೇವಾಲಯಗಳು ಇರುವ ಕಡೆ ಸ್ವಲ್ಪ ಟ್ರಾಫಿಕ್ ಹೆಚ್ಚಾಗಿದೆ. ರಸ್ತೆಯಲ್ಲಿ ಸರತಿ ಸಾಲು ಉದ್ದವಾಗಿದ್ದರಿಂದ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯವಾಗುತ್ತಿದೆ.

    ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ಯಾರೂ ಶಕ್ತಿ ಸೌಧಕ್ಕೆ ಬಂದಿರಲಿಲ್ಲ. ಹಲವು ಸಚಿವರ ಕೊಠಡಿಗಳು ಬಂದ್ ಆಗಿತ್ತು. ವಿಧಾನಸೌಧದ ಮೊಗಸಾಲೆ, ಕಾರಿಡಾರ್ ಗಳೂ ಕೂಡ ಖಾಲಿ ಖಾಲಿಯಾಗಿವೆ.

  • ಶುಕ್ರವಾರ ಚಂದ್ರಗ್ರಹಣ : ಯಾವ ರಾಶಿಯವರಿಗೆ ಏನಾಗುತ್ತೆ? ಇಲ್ಲಿದೆ ವಿವರ

    ಶುಕ್ರವಾರ ಚಂದ್ರಗ್ರಹಣ : ಯಾವ ರಾಶಿಯವರಿಗೆ ಏನಾಗುತ್ತೆ? ಇಲ್ಲಿದೆ ವಿವರ

    – ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು

    – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ

    ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ 27 ರ ಹುಣ್ಣಿಮೆಯ ರಾತ್ರಿ 11.54 ರಿಂದ 3.40 ರವೆಗೆ ಸಂಭವಿಸುವ ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಯಾವ ರಾಶಿಗಳಿಗೆ ಕೆಡುಕನ್ನುಂಟು ಮಾಡಲಿದೆ, ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳುವ ಮಾರ್ಗ ಹೇಗೆ..? ಜ್ಯೋತಿಷಿಗಳು ಏನ್ ಹೇಳ್ತಾರೆ ಹುಣ್ಣಿಮೆ ಚಂದಿರನ ರಾಶಿಗಳ ಜೊತೆಗಿನ ಆಟ ಹೇಗಿರುತ್ತದೆ ಎನ್ನುವುದನ್ನು ಖ್ಯಾತ ಜ್ಯೋತಿಷಿಗಳು ವಿವರಿಸಿದ್ದಾರೆ.

     

    ಹುಣ್ಣಿಮೆ ಚಂದಿರನ ವಕ್ರದೃಷ್ಟಿ ಯಾವ ರಾಶಿಯ ಮೇಲೆ ಬೀರಲಿದೆ?: ವಿಳಂಬಿ ನಾಮ ಸಂವತ್ಸರದ ಆಷಾಢ ಶುಕ್ಲ ಹುಣ್ಣಿಮೆಯಂದು ಉತ್ತರಾಷಾಢ ಮತ್ತು ಶ್ರವಣ ನಕ್ಷತ್ರಗಳಲ್ಲಿ ಮಕರ ರಾಶಿ, ಮೇಷ, ವೃಷಭ ಮತ್ತು ಮಿಥುನ ಲಗ್ನದಲ್ಲಿ ಈ ಚಂದ್ರಗ್ರಹಣ ಸಂಭವಿಸಲಿದೆ. ಇದು ನಾಲ್ಕು ರಾಶಿಗಳ ಮೇಲೆ ತೀರಾ ಕೆಡುಕು, ನಾಲ್ಕು ರಾಶಿಗಳಿಗೆ ಮಿಶ್ರ ಫಲ ಹಾಗೂ ನಾಲ್ಕು ರಾಶಿಗಳಿಗೆ ಕೊಂಚ ಶುಭದಾಯಕವಾಗಿದೆ. ಆದ್ರೇ ಇದು ಭೂಮಂಡಲವನ್ನೇ ಅಲುಗಾಡಿಸುವಂತೆ ಮಾಡುವ ಚಂದಿರನ ಹೊಳಪನ್ನು ಮರೆಮಾಚುವ ಈ ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು ಬಹುತೇಕ ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ.

    ಚಂದ್ರಗ್ರಹಣ ಯಾವ ರಾಶಿಗಳ ಮೇಲೆ ಏನು ಪ್ರಭಾವ?: ಈ ಚಂದ್ರಗ್ರಹಣ ನಕ್ಷತ್ರ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದು, ಯಾವ ರಾಶಿಯವರಿಗೆ ಚಂದ್ರನ ಪ್ರಭಾವ ಇರುತ್ತೋ ಅವ್ರಿಗೆ ಕೆಡುಕು, ಚಿಂತೆ, ಅನಾರೋಗ್ಯ, ಮಾನಹಾನಿ ಸೇರಿದಂತೆ ನಾನಾ ಕಂಟಕ ತಲೆದೋರಲಿದೆ ಅಂತಾ ಖ್ಯಾತ ಜ್ಯೋತಿಷಿಗಳಾದ ಸೋಮಸುಂದರ ದೀಕ್ಷಿತ್ ಹೇಳಿದ್ದಾರೆ. ಮುಖ್ಯವಾಗಿ ಉತ್ತರಾಷಾಢ, ಕೃತಿಕಾ, ಉತ್ತರ, ಶ್ರವಣ, ರೋಹಿಣಿ, ಹಸ್ತ ನಕ್ಷತ್ರದವರಿಗೆ ತೀವ್ರ ತೊಂದರೆ ಕಾಡಲಿದ್ದು, ರಾಶಿ ಪ್ರಕಾರ ಮಕರ, ಧನಸ್ಸು, ವೃಷಭ, ಸಿಂಹ ರಾಶಿಯವರಿಗೆ ದೋಷದ ಫಲ ಹೆಚ್ಚಾಗಿ ಆಗುತ್ತದೆ. ಕೆಲವು ರಾಶಿಗೆ ಕೆಡುಕು ಮಾಡುವ ಈ ಚಂದ್ರಗ್ರಹಣ ವೃಶ್ಚಿಕ, ಮೀನ, ತುಲಾ ರಾಶಿಯವರಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ ಎನ್ನುವುದು ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರವಾದ್ರೂ ದ್ವಾದಶ ರಾಶಿಗಳಿಗೂ ಕಂಟಕ ಎದುರಾಗೋದ್ರಿಂದ ಎಲ್ಲರಿಗೂ ಗ್ರಹಣ ದೋಷ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ.

     

    ಆನ್ ಲೈನ್ ಬುಕ್ಕಿಂಗ್ ಶುರು!: ಚಂದ್ರಗ್ರಹಣದ ನೆರಳು ಬೀಳುವ ಸೂಚನೆ ಸಿಕ್ಕಾಗ ಮನುಷ್ಯ ಜೀವ ತಲ್ಲಣಿಸುತ್ತೆ. ಈ ಗ್ರಹಣ ದೋಷದಿಂದ ಪಾರಾಗುವ ಬಗೆ ಹೇಗೆ? ಬದುಕಿನ ಗಂಡಾಂತರ ನಿವಾರಣೆಯಾಗಲು ಏನು ಮಾಡಬೇಕು ಅನ್ನೋದು ಪ್ರತಿಯೊಬ್ಬರ ಪ್ರಶ್ನೆ. ಖಂಡಿತಾ ಇದಕ್ಕೆಲ್ಲ ಮಾರ್ಗೋಪಾಯಗಳಿವೆ. ಗ್ರಹಣ ದೋಷ ನಿವಾರಣೆಗಾಗಿ ಆಯಾಯ ರಾಶಿ ನಕ್ಷತ್ರಗಳ ದೋಷ ನಿವಾರಣೆಗಾಗಿ ದೇಗುಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಸಿದ್ಧತೆಗಳು ಈಗಾಗಲೇ ನಡೆಯುತ್ತಿದೆ. ಈಗಾಗಲೇ ಬಹುತೇಕ ದೇಗುಲಗಳ ಮುಂದೆ ಗ್ರಹಣ ದೋಷ ನಿವಾರಣಾ ಪೂಜೆಯ ವಿವರದ ಬ್ಯಾನರ್ ಬಿದ್ದಾಗಿದೆ. ಅಷ್ಟೇ ಯಾಕೆ ಕೆಲ ದೇಗುಲದಲ್ಲಿ ಗ್ರಹಣ ದೋಷ ಪೂಜೆ ನಿವಾರಣೆಗಾಗಿ ಅನ್ ಲೈನ್ ಬುಕ್ಕಿಂಗ್ ಗೆ ಜನ ಮುಗಿಬೀಳುತ್ತಿದ್ದಾರೆ ಎಂದು ಉಮಾಮಹೇಶ್ವರಿ ದೇವಸ್ಥಾನದ ಸೂರ್ಯಪ್ರಕಾಶ ಗುರೂಜಿ ಹೇಳಿದ್ದಾರೆ.

    ವಿಚಿತ್ರ ಅಂದ್ರೆ ಮನುಕುಲಕ್ಕೆ ಮಾತ್ರವಲ್ಲ, ದೇಗುಲದ ಗರ್ಭಗುಡಿಯೊಳಗೂ ದೇವರಿಗೆ ಗ್ರಹಣದ ಸಂದರ್ಭದಲ್ಲಿ ಬಂಧನ ಭೀತಿ. ದರ್ಭೆಯಲ್ಲಿ ದೇವರನ್ನು ಬಂಧಿಸಿಡಲಾಗುತ್ತೆ. ಆದರೆ ಜನರ ವಿಪರೀತ ಭಯದಿಂದಾಗಿ ಕೆಲ ದೇಗುಲದಲ್ಲಿ ಜುಲೈ 27ರಲ್ಲಿ ಮಿಡ್ ನೈಟ್ ಪೂಜೆ ಪ್ರಾರ್ಥನೆಗಳು ಯಾಗ ಹೋಮಗಳು ಕೂಡ ನಡೆಯಲಿದೆ.

    ಗ್ರಹಣ ದೋಷ ನಿವಾರಣೆ ಹೇಗೆ?: ಗ್ರಹಣ ದೋಷ ನಿವಾರಣೆಗಾಗಿ ಜುಲೈ 28ರ ಬೆಳಗಿನ ಜಾವ ಎಲ್ಲಾ ದೇಗುಲದಲ್ಲೂ ಹೋಮ ಹವನ ನಡೆಯಲಿದೆ. ದೇವರ ಜಪ ಪೂಜೆಯ ಜೊತೆಗೆ ಚಂದ್ರಗ್ರಹ ಶಾಂತಿಗೆ, ಅಕ್ಕಿ, ಬಿಳಿವಸ್ತ್ರ, ಹಾಲು ದಾನ, ಉಪ್ಪು ಹಾಕದ ಮೊಸರನ್ನ ದಾನ, ಶ್ರೀ ದುರ್ಗಾಸ್ತುತಿ ಹಾಗೂ ಕೇತುಗ್ರಹ ಶಾಂತಿಗೆ ಹುರುಳಿಕಾಳು, ಚಿತ್ರವಸ್ತ್ರ, ಶ್ರೀ ಗಣೇಶನಿಗೆ ಕೆಂಪು ಕಣಿಗಲೆ ಹೂವು ಸಮರ್ಪಣೆ, ಮೃತ್ಯುಂಜಯ ಜಪ ಮಾಡಬೇಕು ಎಂದು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ.

    ಗ್ರಹಣದ ದಿನ ಊಟ, ತಿಂಡಿ ಹೇಗೆ?: ಗ್ರಹಣದ ದಿನ ಮಧ್ಯಾಹ್ನ 2.30ರ ತನಕ ಭೋಜನ ಮಾಡಬಹುದು. ಅನಾರೋಗ್ಯ ಇರುವವರು ರಾತ್ರಿ 7.30ರೊಳಗೆ ಭೋಜನ ಮುಗಿಸುವುದು ಒಳ್ಳೆಯದು ಅನ್ನುವ ಸಲಹೆಯನ್ನು ನೀಡಿದ್ದಾರೆ. ಗ್ರಹಣದ ಸಂದರ್ಭದಲ್ಲಿ ಭೋಜನ ನಿಷಿದ್ಧ. ಗ್ರಹಣದ ಬಳಿಕ ತಣ್ಣೀರ ಸ್ನಾನವನ್ನು ಮಾಡಿ ಶಿವನ ದರ್ಶನ ಪಡೆದರೆ ಗ್ರಹಣ ದೋಷ ನಿವಾರಣೆಯಾಗಲಿದೆ ಎಂದು ಜ್ಯೋತಿಷಿಗಳು ಹೇಳುತ್ತಿದ್ದಾರೆ. ಇನ್ನು ಮನುಷ್ಯರಿಗೆ ಮಾತ್ರವಲ್ಲ ದೇಗುಲದಲ್ಲೂ ಗ್ರಹಣ ದೋಷ ನಿವಾರಣೆಗಾಗಿ ದೇವರಿಗೆ ದರ್ಭೆಯ ಪೂಜೆಯ ಬಳಿಕ ಸಂಪ್ರೋಕ್ಷಣಾ ವಿಧಿ ವಿಧಾನ ನಡೆಯಲಿದ್ದು, ಕ್ಷುದ್ರಗೊಂಡ ದೇವರನ್ನು ತಣಿಸಲು ಎಳನೀರಿನ ಅಭಿಷೇಕ, ಕ್ಷೀರಾಭಿಷೇಕಗಳು ನಡೆಯಲಿದೆ. ಇಡೀ ದೇಗುಲದ ಪ್ರಾಂಗಣ, ಗರ್ಭಗುಡಿಯನ್ನು ಶುದ್ಧೀಕರಿಸಲಾಗುತ್ತೆ. ಹೀಗೆ ಗ್ರಹಣದ ದೋಷ ನಿವಾರಣೆಗೆ ನಾನಾ ಮಾರ್ಗಗಳು ಇವೆ.

    ನಂಬಿಕೆಯಿಲ್ಲದವರು ಹೀಗೆ ಮಾಡಿ!: ನಮಗೆ ಗ್ರಹಣದ ಬಗ್ಗೆ ನಂಬಿಕೆಯಿಲ್ಲ. ಇವೆಲ್ಲವನ್ನೂ ನಂಬಲು ನಾವು ಸಿದ್ಧವಿಲ್ಲ ಎನ್ನುವವರೂ ಇದ್ದಾರೆ. ಅಂಥವರು ಆಕಾಶದಲ್ಲಿ ನಡೆಯುವ ವಿಸ್ಮಯಕ್ಕೆ ಸಾಕ್ಷಿಯಾಗಲು ವಿಪರೀತ ಭಯವೂ ಬೇಕಾಗಿಲ್ಲ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟ ವಿಚಾರ. ನಭದ ಕೌತುಕ ಕಣ್ತುಂಬಿಸಿಕೊಳ್ಳುವ ಉತ್ಸಾಹವಿದ್ದರೆ ದಿಗಂತದತ್ತ ದೃಷ್ಟಿ ಹಾಯಿಸಿ. ದೋಷ, ಸಮಸ್ಯೆ, ಕಂಟಕ ಎಲ್ಲವನ್ನೂ ಮರೆತು ಬಾನಂಗಳದ ಚಂದಮಾಮನ ಇನ್ನೊಂದು ಅವತಾರವನ್ನು ನೋಡಿ ಎಂಜಾಯ್ ಮಾಡಿ.

     

  • ಶುಕ್ರವಾರ ಮಧ್ಯಾಹ್ನದ ನಂತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ ಬಂದ್

    ಶುಕ್ರವಾರ ಮಧ್ಯಾಹ್ನದ ನಂತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ ಬಂದ್

    ತುಮಕೂರು: ಚಂದ್ರಗ್ರಹಣದಿಂದಾಗಿ ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯವನ್ನು ಶುಕ್ರವಾರ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಗೊರವನಹಳ್ಳಿಯ ಮಹಾಲಕ್ಷ್ಮೀ ದೇವಾಲಯವು ಬಂದ್ ಆಗಲಿದ್ದು, ಶುಕ್ರವಾರ ಮಧ್ಯಾಹ್ನ 12.30 ರಿಂದ ಶನಿವಾರ ಮುಂಜಾನೆಯವರೆಗೂ ದೇವಸ್ಥಾನವನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    ನಾಳೆ ಆಷಾಢ ಮಾಸದ ಶುಕ್ರವಾರ ನಿಮಿತ್ತ ಭಕ್ತರು ಹೆಚ್ಚಾಗಿ ದೇವಾಲಯಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಭಕ್ತರಿಗೆ ದೇವರ ದರ್ಶನ ಸಿಗದೇ ತೊಂದರೆಯುಂಟಾಗಬಾರದೆಂದು ಆಡಳಿತ ಮಂಡಳಿಯು, ಮುಂಜಾನೆಯಿಂದ ಮಧ್ಯಾಹ್ನ 12-30ರವರೆಗೆ ದೇವಿಯ ದರ್ಶನಕ್ಕೆ ಅನುವುಮಾಡಿಕೊಟ್ಟಿದೆ. ಬಳಿಕ ಮಧ್ಯಾಹ್ನದ ಮಹಾಮಂಗಳಾರತಿಯ ನಂತರ ದೇವಸ್ಥಾನವನ್ನು ಸಂಪೂರ್ಣವಾಗಿ ಮುಚ್ಚಿ, ರಾತ್ರಿ ನಡೆಯಬೇಕಿದ್ದ ಪೂಜೆಗಳನ್ನು ನಾಳಿನ ಮಟ್ಟಿಗೆ ನಿಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಶನಿವಾರ ಮುಂಜಾನೆ 5 ಗಂಟೆಗೆ ಎಂದಿನಂತೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಗ್ರಹಣ ದೋಷ ಮುಕ್ತಿಗೆ ದೇವಾಲಯದ ಶುಚಿತ್ವ ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಈಗಾಗಲೇ ಆಡಳಿತ ಮಂಡಳಿಯಿಂದ ಶುಕ್ರವಾರ ದೇವಾಲಯ ಮುಚ್ಚುವ ಕುರಿತು ಪ್ರಕಟಣೆಯನ್ನ ದೇವಾಲಯದ ಆವರಣದ ಅಂಟಿಸಿದೆ. ಶನಿವಾರ ಶುಚಿತ್ವ ಬಳಿಕ ಎಂದಿನಂತೆ ದೇವಿಗೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಹಾಗೂ ಅಷ್ಟಾವಧಾನ ಸೇವೆಗಳು ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

  • ಜುಲೈ 27ರ ಚಂದ್ರಗ್ರಹಣ – ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ?

    ಜುಲೈ 27ರ ಚಂದ್ರಗ್ರಹಣ – ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ?

    – ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು
    – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ

    ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ 27 ರ ಹುಣ್ಣಿಮೆಯ ರಾತ್ರಿ 11.54 ರಿಂದ 3.40 ರವೆಗೆ ಸಂಭವಿಸುವ ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಯಾವ ರಾಶಿಗಳಿಗೆ ಕೆಡುಕನ್ನುಂಟು ಮಾಡಲಿದೆ, ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳುವ ಮಾರ್ಗ ಹೇಗೆ..? ಜ್ಯೋತಿಷಿಗಳು ಏನ್ ಹೇಳ್ತಾರೆ ಹುಣ್ಣಿಮೆ ಚಂದಿರನ ರಾಶಿಗಳ ಜೊತೆಗಿನ ಆಟ ಹೇಗಿರುತ್ತದೆ ಎನ್ನುವುದನ್ನು ಖ್ಯಾತ ಜ್ಯೋತಿಷಿಗಳು ವಿವರಿಸಿದ್ದಾರೆ.

    ಹುಣ್ಣಿಮೆ ಚಂದಿರನ ವಕ್ರದೃಷ್ಟಿ ಯಾವ ರಾಶಿಯ ಮೇಲೆ ಬೀರಲಿದೆ?: ವಿಳಂಬಿ ನಾಮ ಸಂವತ್ಸರದ ಆಷಾಢ ಶುಕ್ಲ ಹುಣ್ಣಿಮೆಯಂದು ಉತ್ತರಾಷಾಢ ಮತ್ತು ಶ್ರವಣ ನಕ್ಷತ್ರಗಳಲ್ಲಿ ಮಕರ ರಾಶಿ, ಮೇಷ, ವೃಷಭ ಮತ್ತು ಮಿಥುನ ಲಗ್ನದಲ್ಲಿ ಈ ಚಂದ್ರಗ್ರಹಣ ಸಂಭವಿಸಲಿದೆ. ಇದು ನಾಲ್ಕು ರಾಶಿಗಳ ಮೇಲೆ ತೀರಾ ಕೆಡುಕು, ನಾಲ್ಕು ರಾಶಿಗಳಿಗೆ ಮಿಶ್ರ ಫಲ ಹಾಗೂ ನಾಲ್ಕು ರಾಶಿಗಳಿಗೆ ಕೊಂಚ ಶುಭದಾಯಕವಾಗಿದೆ. ಆದ್ರೇ ಇದು ಭೂಮಂಡಲವನ್ನೇ ಅಲುಗಾಡಿಸುವಂತೆ ಮಾಡುವ ಚಂದಿರನ ಹೊಳಪನ್ನು ಮರೆಮಾಚುವ ಈ ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು ಬಹುತೇಕ ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ.

    ಚಂದ್ರಗ್ರಹಣ ಯಾವ ರಾಶಿಗಳ ಮೇಲೆ ಏನು ಪ್ರಭಾವ?: ಈ ಚಂದ್ರಗ್ರಹಣ ನಕ್ಷತ್ರ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದು, ಯಾವ ರಾಶಿಯವರಿಗೆ ಚಂದ್ರನ ಪ್ರಭಾವ ಇರುತ್ತೋ ಅವ್ರಿಗೆ ಕೆಡುಕು, ಚಿಂತೆ, ಅನಾರೋಗ್ಯ, ಮಾನಹಾನಿ ಸೇರಿದಂತೆ ನಾನಾ ಕಂಟಕ ತಲೆದೋರಲಿದೆ ಅಂತಾ ಖ್ಯಾತ ಜ್ಯೋತಿಷಿಗಳಾದ ಸೋಮಸುಂದರ ದೀಕ್ಷಿತ್ ಹೇಳಿದ್ದಾರೆ. ಮುಖ್ಯವಾಗಿ ಉತ್ತರಾಷಾಢ, ಕೃತಿಕಾ, ಉತ್ತರ, ಶ್ರವಣ, ರೋಹಿಣಿ, ಹಸ್ತ ನಕ್ಷತ್ರದವರಿಗೆ ತೀವ್ರ ತೊಂದರೆ ಕಾಡಲಿದ್ದು, ರಾಶಿ ಪ್ರಕಾರ ಮಕರ, ಧನಸ್ಸು, ವೃಷಭ, ಸಿಂಹ ರಾಶಿಯವರಿಗೆ ದೋಷದ ಫಲ ಹೆಚ್ಚಾಗಿ ಆಗುತ್ತದೆ. ಕೆಲವು ರಾಶಿಗೆ ಕೆಡುಕು ಮಾಡುವ ಈ ಚಂದ್ರಗ್ರಹಣ ವೃಶ್ಚಿಕ, ಮೀನ, ತುಲಾ ರಾಶಿಯವರಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ ಎನ್ನುವುದು ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರವಾದ್ರೂ ದ್ವಾದಶ ರಾಶಿಗಳಿಗೂ ಕಂಟಕ ಎದುರಾಗೋದ್ರಿಂದ ಎಲ್ಲರಿಗೂ ಗ್ರಹಣ ದೋಷ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ.

    ಆನ್ ಲೈನ್ ಬುಕ್ಕಿಂಗ್ ಶುರು!: ಚಂದ್ರಗ್ರಹಣದ ನೆರಳು ಬೀಳುವ ಸೂಚನೆ ಸಿಕ್ಕಾಗ ಮನುಷ್ಯ ಜೀವ ತಲ್ಲಣಿಸುತ್ತೆ. ಈ ಗ್ರಹಣ ದೋಷದಿಂದ ಪಾರಾಗುವ ಬಗೆ ಹೇಗೆ? ಬದುಕಿನ ಗಂಡಾಂತರ ನಿವಾರಣೆಯಾಗಲು ಏನು ಮಾಡಬೇಕು ಅನ್ನೋದು ಪ್ರತಿಯೊಬ್ಬರ ಪ್ರಶ್ನೆ. ಖಂಡಿತಾ ಇದಕ್ಕೆಲ್ಲ ಮಾರ್ಗೋಪಾಯಗಳಿವೆ. ಗ್ರಹಣ ದೋಷ ನಿವಾರಣೆಗಾಗಿ ಆಯಾಯ ರಾಶಿ ನಕ್ಷತ್ರಗಳ ದೋಷ ನಿವಾರಣೆಗಾಗಿ ದೇಗುಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಸಿದ್ಧತೆಗಳು ಈಗಾಗಲೇ ನಡೆಯುತ್ತಿದೆ. ಈಗಾಗಲೇ ಬಹುತೇಕ ದೇಗುಲಗಳ ಮುಂದೆ ಗ್ರಹಣ ದೋಷ ನಿವಾರಣಾ ಪೂಜೆಯ ವಿವರದ ಬ್ಯಾನರ್ ಬಿದ್ದಾಗಿದೆ. ಅಷ್ಟೇ ಯಾಕೆ ಕೆಲ ದೇಗುಲದಲ್ಲಿ ಗ್ರಹಣ ದೋಷ ಪೂಜೆ ನಿವಾರಣೆಗಾಗಿ ಅನ್ ಲೈನ್ ಬುಕ್ಕಿಂಗ್ ಗೆ ಜನ ಮುಗಿಬೀಳುತ್ತಿದ್ದಾರೆ ಎಂದು ಉಮಾಮಹೇಶ್ವರಿ ದೇವಸ್ಥಾನದ ಸೂರ್ಯಪ್ರಕಾಶ ಗುರೂಜಿ ಹೇಳಿದ್ದಾರೆ.

    ವಿಚಿತ್ರ ಅಂದ್ರೆ ಮನುಕುಲಕ್ಕೆ ಮಾತ್ರವಲ್ಲ, ದೇಗುಲದ ಗರ್ಭಗುಡಿಯೊಳಗೂ ದೇವರಿಗೆ ಗ್ರಹಣದ ಸಂದರ್ಭದಲ್ಲಿ ಬಂಧನ ಭೀತಿ. ದರ್ಭೆಯಲ್ಲಿ ದೇವರನ್ನು ಬಂಧಿಸಿಡಲಾಗುತ್ತೆ. ಆದರೆ ಜನರ ವಿಪರೀತ ಭಯದಿಂದಾಗಿ ಕೆಲ ದೇಗುಲದಲ್ಲಿ ಜುಲೈ 27ರಲ್ಲಿ ಮಿಡ್ ನೈಟ್ ಪೂಜೆ ಪ್ರಾರ್ಥನೆಗಳು ಯಾಗ ಹೋಮಗಳು ಕೂಡ ನಡೆಯಲಿದೆ.

    ಗ್ರಹಣ ದೋಷ ನಿವಾರಣೆ ಹೇಗೆ?: ಗ್ರಹಣ ದೋಷ ನಿವಾರಣೆಗಾಗಿ ಜುಲೈ 28ರ ಬೆಳಗಿನ ಜಾವ ಎಲ್ಲಾ ದೇಗುಲದಲ್ಲೂ ಹೋಮ ಹವನ ನಡೆಯಲಿದೆ. ದೇವರ ಜಪ ಪೂಜೆಯ ಜೊತೆಗೆ ಚಂದ್ರಗ್ರಹ ಶಾಂತಿಗೆ, ಅಕ್ಕಿ, ಬಿಳಿವಸ್ತ್ರ, ಹಾಲು ದಾನ, ಉಪ್ಪು ಹಾಕದ ಮೊಸರನ್ನ ದಾನ, ಶ್ರೀ ದುರ್ಗಾಸ್ತುತಿ ಹಾಗೂ ಕೇತುಗ್ರಹ ಶಾಂತಿಗೆ ಹುರುಳಿಕಾಳು, ಚಿತ್ರವಸ್ತ್ರ, ಶ್ರೀ ಗಣೇಶನಿಗೆ ಕೆಂಪು ಕಣಿಗಲೆ ಹೂವು ಸಮರ್ಪಣೆ, ಮೃತ್ಯುಂಜಯ ಜಪ ಮಾಡಬೇಕು ಎಂದು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ.

    ಗ್ರಹಣದ ದಿನ ಊಟ, ತಿಂಡಿ ಹೇಗೆ?: ಗ್ರಹಣದ ದಿನ ಮಧ್ಯಾಹ್ನ 2.30ರ ತನಕ ಭೋಜನ ಮಾಡಬಹುದು. ಅನಾರೋಗ್ಯ ಇರುವವರು ರಾತ್ರಿ 7.30ರೊಳಗೆ ಭೋಜನ ಮುಗಿಸುವುದು ಒಳ್ಳೆಯದು ಅನ್ನುವ ಸಲಹೆಯನ್ನು ನೀಡಿದ್ದಾರೆ. ಗ್ರಹಣದ ಸಂದರ್ಭದಲ್ಲಿ ಭೋಜನ ನಿಷಿದ್ಧ. ಗ್ರಹಣದ ಬಳಿಕ ತಣ್ಣೀರ ಸ್ನಾನವನ್ನು ಮಾಡಿ ಶಿವನ ದರ್ಶನ ಪಡೆದರೆ ಗ್ರಹಣ ದೋಷ ನಿವಾರಣೆಯಾಗಲಿದೆ ಎಂದು ಜ್ಯೋತಿಷಿಗಳು ಹೇಳುತ್ತಿದ್ದಾರೆ. ಇನ್ನು ಮನುಷ್ಯರಿಗೆ ಮಾತ್ರವಲ್ಲ ದೇಗುಲದಲ್ಲೂ ಗ್ರಹಣ ದೋಷ ನಿವಾರಣೆಗಾಗಿ ದೇವರಿಗೆ ದರ್ಭೆಯ ಪೂಜೆಯ ಬಳಿಕ ಸಂಪ್ರೋಕ್ಷಣಾ ವಿಧಿ ವಿಧಾನ ನಡೆಯಲಿದ್ದು, ಕ್ಷುದ್ರಗೊಂಡ ದೇವರನ್ನು ತಣಿಸಲು ಎಳನೀರಿನ ಅಭಿಷೇಕ, ಕ್ಷೀರಾಭಿಷೇಕಗಳು ನಡೆಯಲಿದೆ. ಇಡೀ ದೇಗುಲದ ಪ್ರಾಂಗಣ, ಗರ್ಭಗುಡಿಯನ್ನು ಶುದ್ಧೀಕರಿಸಲಾಗುತ್ತೆ. ಹೀಗೆ ಗ್ರಹಣದ ದೋಷ ನಿವಾರಣೆಗೆ ನಾನಾ ಮಾರ್ಗಗಳು ಇವೆ.

    ನಂಬಿಕೆಯಿಲ್ಲದವರು ಹೀಗೆ ಮಾಡಿ!: ನಮಗೆ ಗ್ರಹಣದ ಬಗ್ಗೆ ನಂಬಿಕೆಯಿಲ್ಲ. ಇವೆಲ್ಲವನ್ನೂ ನಂಬಲು ನಾವು ಸಿದ್ಧವಿಲ್ಲ ಎನ್ನುವವರೂ ಇದ್ದಾರೆ. ಅಂಥವರು ಆಕಾಶದಲ್ಲಿ ನಡೆಯುವ ವಿಸ್ಮಯಕ್ಕೆ ಸಾಕ್ಷಿಯಾಗಲು ವಿಪರೀತ ಭಯವೂ ಬೇಕಾಗಿಲ್ಲ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟ ವಿಚಾರ. ನಭದ ಕೌತುಕ ಕಣ್ತುಂಬಿಸಿಕೊಳ್ಳುವ ಉತ್ಸಾಹವಿದ್ದರೆ ದಿಗಂತದತ್ತ ದೃಷ್ಟಿ ಹಾಯಿಸಿ. ದೋಷ, ಸಮಸ್ಯೆ, ಕಂಟಕ ಎಲ್ಲವನ್ನೂ ಮರೆತು ಬಾನಂಗಳದ ಚಂದಮಾಮನ ಇನ್ನೊಂದು ಅವತಾರವನ್ನು ನೋಡಿ ಎಂಜಾಯ್ ಮಾಡಿ.

  • ವರ್ಷದ ಮೊದಲ ಚಂದ್ರಗ್ರಹಣ ದರ್ಶನ-  ಮಧ್ಯರಾತ್ರಿವರೆಗೂ ನಭದಲ್ಲಿ ಕೇತುಗ್ರಸ್ತನ ಕೌತುಕ

    ವರ್ಷದ ಮೊದಲ ಚಂದ್ರಗ್ರಹಣ ದರ್ಶನ- ಮಧ್ಯರಾತ್ರಿವರೆಗೂ ನಭದಲ್ಲಿ ಕೇತುಗ್ರಸ್ತನ ಕೌತುಕ

    ಬೆಂಗಳೂರು: ವರ್ಷದ ಮೊದಲ ಚಂದ್ರಗ್ರಹಣಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ಸುಮಾರು 2 ಗಂಟೆಗಳವರೆಗೆ ಚಂದ್ರಗ್ರಹಣನಿಗೆ ಕೇತುಗ್ರಸ್ತ ಚಂದ್ರಗ್ರಹಣವಾಗಿತ್ತು. ರಾತ್ರಿ 10.52ಕ್ಕೆ ಆರಂಭವಾದ ಗ್ರಹಣ ರಾತ್ರಿ 12.48ಕ್ಕೆ ಕೊನೆಯಾಯಿತು.

    ಸೋಮವಾರ ಹುಣ್ಣಿಮೆ. ಹುಣ್ಣಿಮೆ ದಿನದಂದು ಬಾನಿನಲ್ಲಿ ಹೊಳೆದು ರಾತ್ರಿ ಕಳೆದು ಬೆಳಕು ನೀಡಬೇಕಿದ್ದ ಚಂದಿರ ಎರಡು ತಾಸು ಕರಿ ಚೆಂಡಿನಂತಾಗಿದ್ದ. ಸೂರ್ಯ-ಚಂದ್ರನ ನಡುವೆ ಭೂಮಿ ಬಂದ ಕಾರಣ ಕೆಲ ಹೊತ್ತು ಚಂದಿರ ತನ್ನ ಪ್ರಭೆಯನ್ನೇ ಕಳೆದುಕೊಂಡು ಕತ್ತಲಲ್ಲಿ ಮರೆಯಾಗಿದ್ದ. ಭಾರತೀಯ ಸಂಪ್ರದಾಯದಲ್ಲಿ ಚಂದ್ರಗ್ರಹಣಕ್ಕೆ ಸಾಕಷ್ಟು ಮಹತ್ವವವಿದೆ.

    ಧಾರ್ಮಿಕ ದೃಷ್ಟಿಕೋನದಲ್ಲಿ ನೋಡೋದಾದ್ರೆ, ಹೇವಿಳಂಬಿ ಸಂವತ್ಸರದ ಶ್ರಾವಣ ಮಾಸದ ಹುಣ್ಣಿಮೆ ದಿನವಾದ ನಿನ್ನೆ ಶ್ರವಣ ನಕ್ಷತ್ರ, ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಸಂಭವಿಸಿದೆ. ಈ ಹೊತ್ತಲ್ಲಿ ಉಪವಾಸ ಆಚರಣೆ ಮಾಡಲಾಯಿತು. ಹಲವಾರು ಕಡೆಗಳಲ್ಲಿ ದೇವರ ದರ್ಶನ ಇರಲಿಲ್ಲ. ಇತ್ತ ವೈಜ್ಞಾನಿಕ ಲೋಕಕ್ಕೂ ಇದು ಕೌತುಕ ಕ್ಷಣವಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನೆಹರು ತಾರಾಲಯ ಸೇರಿದಂತೆ ಹಲವಾರು ಕಡೆಗಳಲ್ಲಿ ದೂರದರ್ಶಕದ ಮೂಲಕ ಚಂದಿರನನ್ನು ವೀಕ್ಷಿಸಿ ಸಂಭ್ರಮಪಟ್ಟರು.

    ಬೆಂಗಳೂರಿನ ವಿಶೇಷ ಪ್ರಸಿದ್ಧ ಕಾಡುಮಲ್ಲೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆದಿದೆ. ಈಶ್ವರನಿಗೆ ಪ್ರಿಯವಾದ ಬಿಲ್ವಪತ್ರೆ, ಹಾಲಿನ ಅಭಿಷೇಕ ಮಾಡಲಾಯ್ತು. ಇನ್ನು ನರಸಿಂಹಸ್ವಾಮಿ ದೇವಸ್ಥಾನದಲ್ಲೂ ವಿಶೇಷ ಹೋಮ-ಹವನ ನಡೆದಿದೆ. ಮಂಗಳೂರಲ್ಲಿ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೀತು. ದೇವಿಯ ಸ್ವಯಂ ಭೂಲಿಂಗಕ್ಕೆ ವಿಶೇಷ ಅರ್ಚನೆ ಮಾಡಲಾಯಿತು.

    ಅರಮನೆ ನಗರಿ ಮೈಸೂರಲ್ಲೂ ಚಂದ್ರಗ್ರಹಣ ದರ್ಶನ ಪಡೆದ್ರು. ಗ್ರಹಣದ ಹೊತ್ತಲ್ಲಿ ಸಾಂಸ್ಕøತಿಕ ನಗರಿಯ ದೇವಸ್ಥಾನಗಳಲ್ಲಿ ಪೂಜೆಗಳು ನಡೆದಿದ್ದು ವಿಶೇಷವಾಗಿತ್ತು. ಅಮೃತೇಶ್ವರ ದೇವಾಲಯದಲ್ಲಿ ಗ್ರಹಣ ಶಾಂತಿ ನಡೀತು. ದೇವರಾಜ ಮೊಹಲ್ಲಾದಲ್ಲಿರುವ ಸತ್ಯನಾರಾಯಣ ದೇವರ ಸನ್ನಿಧಿಯಲ್ಲಿ ಇವತ್ತು ಬೆಳಗ್ಗೆ 9 ಗಂಟೆಗೆ ಗೃಹತ್ ಶಾಂತಿ ಹೋಮ ನಡೆಯಲಿದೆ. ಇದರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ.

    ಬಳ್ಳಾರಿಯಲ್ಲಿರುವ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರೆವೇರಿತು. ನಸುಕಿನ ಜಾವ 4.30ರಿಂದಲೇ ಕನಕದುರ್ಗಮ್ಮನ ವಿಶೇಷ ಅರ್ಚನೆ ಅರ್ಪಿಸಲಾಯಿತು. ಚಂದ್ರಗ್ರಹಣದ ಬಳಿಕ ನಡೆದ ಮೊದಲ ಪೂಜೆಯಲ್ಲಿ ಭಾಗಿಯಾದ ನೂರಾರು ಭಕ್ತರು ಪುನೀತರಾದರು.

    ಇನ್ನು ರಾಯಚೂರಿನಲ್ಲಿರುವ ಗುರುರಾಘವೇಂದ್ರಸ್ವಾಮಿಗಳ ಮಂತ್ರಾಲಯದ ಮಠದಲ್ಲೂ ಪೂಜೆ ಪುನಸ್ಕಾರ ಜೋರಾಗಿದೆ. ಬೆಳಗ್ಗೆಯೇ ದೇಗುಲವನ್ನು ಶುಚಿಗೊಳಿಸಲಾಯ್ತು. ನಂತರ ವಿಶೇಷ ಪೂಜೆ ಆರಂಭವಾಗಿದೆ. ಆಗಸ್ಟ್ 12ರವರೆಗೆ ನಡೆಯಲಿರುವ ಆರಾಧನ ಮಹೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿರುವ ಭಕ್ತರು ಉರುಳು ಸೇವೆ ಭಕ್ತಿಯನ್ನು ಅರ್ಪಿಸಿದರು.

    ಇನ್ನು ಗೋಕರ್ಣದ ಮಹಾಬಲೇಶ್ವರ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ನವಧಾನ್ಯ ಅಭಿಷೇಕ, ಪಂಚಾಮೃತ ಅಭಿಷೇಕ, ನಾಗಾಭರಣ ಪೂಜೆ ನಡೀತು. ಖಂಡಾಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಾವಿರಾರು ಭಕ್ತರು ಕಾವೇರಿಯಲ್ಲಿ ತೀರ್ಥಸ್ನಾನ ಮಾಡಿದ್ರು. ಶ್ರೀರಂಗಪಟ್ಟಣದ ಘೋಸಾಯಿ ಘಟ್ಟದ ಕಾವೇರಿ ನದಿ ದಂಡೆಯಲ್ಲಿ ರಾತ್ರಿ 11 ಗಂಟೆಗೆ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ವಿಶೇಷ ಪೂಜೆ ನಡೀತು. ಗ್ರಹಣ ಬಿಟ್ಟ ಬಳಿಕ ಶಾಂತಿ ಹೋಮ ನಡೀತು.

    ಇತ್ತ ಚಿನ್ನದ ನಾಡು ಕೋಲಾರದಲ್ಲಿರುವ ಗಂಗಮ್ಮ ದೇವಸ್ಥಾನದಲ್ಲೂ ಬೆಳಗ್ಗೆಯಿಂದಲೇ ಹೋಮ-ಹವನ ನಡೆಯುತ್ತಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗ್ತಿದೆ. ಯಾದಗಿರಿಯಲ್ಲಿ ಹಳೇ ಕಾಲದ ಪದ್ಧತಿಯಂತೆ ಚಂದ್ರಗ್ರಹಣ ವೀಕ್ಷಿಸಿದ್ದು ವಿಶೇಷವಾಗಿತ್ತು. ತಟ್ಟೆಯಲ್ಲಿ ನೀರು ಹಾಕಿ ಅದರಲ್ಲಿ ಒಣಕೆ ನಿಲ್ಲಿಸಿದಾಗ ಒಣಕೆ ನೇರವಾಗಿ ನಿಂತ್ರೆ ಚಂದ್ರಗ್ರಹಣ ಪ್ರಾರಂಭವಾಗಿದೆ. ಒಣಕೆ ನೆಲಕ್ಕೆ ಬಿದ್ರೆ ಗ್ರಹಣ ಬಿಟ್ಟಿದೆ ಅನ್ನೋದು ಹಳೇ ಕಾಲದ ವಿಧಿ ವಿಧಾನ. ಇದೇ ಪದ್ಧತಿಯಲ್ಲಿ ಯಾದಗಿರಿ ನಗರದಲ್ಲಿ ಗ್ರಹಣ ವೀಕ್ಷಿಸಲಾಯಿತು.

    ಹಾಸನದಲ್ಲಿ ಗ್ರಹಣ ನಿಮಿತ್ತ ಹಾಸನಾಂಬ ರಸ್ತೆಯ ಪ್ರಸನ್ನ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನಡೀತು. ನವಗ್ರಹ ಜಪ, ಸೂರ್ಯಚಂದ್ರ ಮೃತ್ಯುಂಜಯ ಮಂತ್ರ ಪಠಿಸಿ ಮಧ್ಯರಾತ್ರಿವರೆಗೂ ಪ್ರಾರ್ಥಿಸಲಾಯ್ತು. ಖಂಡಗ್ರಾಸ ಚಂದ್ರಗ್ರಹಣ ಪ್ರಯುಕ್ತ ಹೊರನಾಡಿನ ಅನ್ನಪೂರ್ಣೇಶ್ವರಿ ಮತ್ತು ಶೃಂಗೇರಿ ದೇವಾಲಯಕ್ಕೆ ರಾತ್ರಿ 9 ಗಂಟೆಗೆ ಬಾಗಿಲು ಹಾಕಲಾಯ್ತು. ಗ್ರಹಣ ಆರಂಭವಾಗಿ ಮುಗಿಯುವ ಹೊತ್ತಿಗೆ ದೇವಸ್ಥಾನದ ದ್ವಾರಗಳನ್ನು ಆಧಿಶಕ್ತಿ ಅನ್ನಪೂರ್ಣೇಶ್ವರಿ ಮತ್ತು ಶಾರದಾಂಬೆಗೆ ವಿಶೇಷ ಪೂಜೆ ನೆರವೇರಿಸಲಾಯ್ತು. ಗ್ರಹಣ ಬಿಡುವವರೆಗೆ ಪೂಜೆ ನೆಡರವೇರಿತು.

    ತುಮಕೂರಲ್ಲಿ ಸಿಗ್ನಾ ಯುವ ಸಮುದಾಯ ವೇದಿಕೆ ಮತ್ತು ತುಮಕೂರು ವಿಜ್ಞಾನ ಕೇಂದ್ರ ಗ್ರಹಣದ ಹೊತ್ತಲ್ಲಿ ಊಟ ಆಯೋಜಿಸಿತ್ತು. ಈ ಮೂಲಕ ಗ್ರಹಣದ ಹೊತ್ತಲ್ಲಿ ಊಟ ಮಾಡಿದ್ರೆ ಕೇಡಾಗುತ್ತೆ ಅನ್ನೋ ಮೂಢನಂಬಿಕೆಯನ್ನು ಹೋಗಲಾಡಿಸುವ ಯತ್ನ ಮಾಡಿದ್ರು. ನಗರದ ಟೌನ್‍ಹಾಲ್ ವೃತ್ತದಲ್ಲಿ ಚಿತ್ರಾನ್ನ, ಉಪಿಟ್ಟು ಸೇವಿಸಿದ್ರು.