Tag: Chandramukhi

  • ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

    ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

    ಟಿ ನಯನತಾರಾಗೆ (Nayanthara) ಡಾಕ್ಯುಮೆಂಟರಿ ವಿಚಾರದಲ್ಲಿ ಪದೇ ಪದೇ ನೋಟಿಸ್ (Legal Notice) ಜಾರಿ ಆಗುತ್ತಿದೆ. ನಯನತಾರಾ ಕುರಿತಂತೆ ನೆಟ್ ಫ್ಲಿಕ್ಸ್ ನಲ್ಲಿ ಡಾಕ್ಯುಮೆಂಟರಿ ಪ್ರಸಾರವಾಗುತ್ತಿದ್ದು, ಈ ಹಿಂದೆ ತಮ್ಮ ಸಿನಿಮಾದ ಕೆಲವು ದೃಶ್ಯಗಳನ್ನು ಈ ಡಾಕ್ಯುಮೆಂಟರಿಯಲ್ಲಿ ಬಳಸಲಾಗಿದೆ ಅಂತ ನಟ ಧನುಷ್ ನೋಟಿಸ್ ನೀಡಿದ್ದರು. ಐದು ಕೋಟಿ ರೂಪಾಯಿ ಪರಿಹಾರ ಕೂಡ ಕೇಳಿದ್ದರು. ಆ ಕೇಸ್ ಇನ್ನೂ ಕೋರ್ಟ್ ನಲ್ಲಿ ಇದೆ.

    ಧನುಷ್ ನಿರ್ಮಾಣದಲ್ಲಿ ನಯನತಾರಾ ನಟನೆಯಲ್ಲಿ ಮೂಡಿ ಬಂದಿದ್ದ ನಾನುಂ ರೌಡಿ ದಾ ಸಿನಿಮಾದ ಕೆಲವು ದೃಶ್ಯಗಳನ್ನು ಡಾಕ್ಯುಮೆಂಟರಿಯಲ್ಲಿ ಅಳವಡಿಸಲಾಗಿತ್ತು. ಕಾಪಿರೈಟ್ ಉಲ್ಲಂಘನೆ ಆಗಿದೆ ಅನ್ನುವ ಕಾರಣಕ್ಕಾಗಿ ಧನುಷ್ ಸಂಸ್ಥೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತ ನೋಟಿಸ್ ಜಾರಿ ಮಾಡಿತ್ತು.

    ಇದೀಗ ಅದೇ ಡಾಕ್ಯುಮೆಂಟರಿಗೆ ಸಂಬಂಧಿಸಿದಂತೆ ಮತ್ತೊಂದು ಸಿನಿಮಾ ಟೀಮ್ ನಿಂದ ನಯನತಾರಾಗೆ ನೋಟಿಸ್ ಕಳುಹಿಸಲಾಗಿದೆ. ಆಪ್ತಮಿತ್ರ ಸಿನಿಮಾದ ರಿಮೇಕ್ ಚಂದ್ರಮುಖಿ (Chandramukhi) ಸಿನಿಮಾದ ಕೆಲವು ದೃಶ್ಯಗಳನ್ನು ನಯನತಾರಾ ಅವರ ಡಾಕ್ಯುಮೆಂಟರಿಯಲ್ಲಿ ಬಳಸಿಕೊಳ್ಳಲಾಗಿದೆ ಎನ್ನುವ ಕಾರಣಕ್ಕಾಗಿ ನಿರ್ಮಾಣ ಸಂಸ್ಥೆಯು ನೋಟಿಸ್ ಕೊಟ್ಟಿದೆ. ಐದು ಕೋಟಿ ರೂಪಾಯಿ ಪರಿಹಾರ ಕೊಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

    ಧನುಷ್ ನೋಟಿಸ್ ಕಳುಹಿಸಿದ್ದಕ್ಕೆ ಕೆಂಡ ಕಾರಿದ್ದರು ನಯನತಾರಾ. ಸೋಷಿಯಲ್ ಮೀಡಿಯಾದಲ್ಲಿ ಧನುಷ್ ವ್ಯಕ್ತಿತ್ವದ ಕುರಿತು ಬರೆದುಕೊಂಡಿದ್ದರು. ಈಗ ಚಂದ್ರಮುಖಿ ಸಿನಿಮಾ ಟೀಮ್ ಕುರಿತು ಯಾವ ರೀತಿಯಲ್ಲಿ ಪ್ರತಿಕ್ರಿಯೆ ಕೊಡುತ್ತಾರೋ ಕಾದು ನೋಡಬೇಕು.

  • ರಜನಿಕಾಂತ್ ಜೊತೆ ನಟಿಸುವ ಚಾನ್ಸ್ ಸಿಕ್ಕಿದ್ದು ಹೇಗೆ ಎಂದು ಅಸಲಿ ವಿಚಾರ ಬಿಚ್ಚಿಟ್ಟ ಅವಿನಾಶ್

    ರಜನಿಕಾಂತ್ ಜೊತೆ ನಟಿಸುವ ಚಾನ್ಸ್ ಸಿಕ್ಕಿದ್ದು ಹೇಗೆ ಎಂದು ಅಸಲಿ ವಿಚಾರ ಬಿಚ್ಚಿಟ್ಟ ಅವಿನಾಶ್

    ಕಿರುತೆರೆ ಜನಪ್ರಿಯ ಶೋ ‘ವೀಕೆಂಡ್ ವಿತ್ ರಮೇಶ್’ (Weekend With Ramesh) ಕಾರ್ಯಕ್ರಮದಲ್ಲಿ ಖ್ಯಾತ ನಟ ಅವಿನಾಶ್ ಅವರ ಯಶೋಗಾಥೆಯನ್ನ ತಿಳಿಸಿದ್ದಾರೆ. ಈ ವಾರದ ಅತಿಥಿಯಾಗಿ ಸಾಧಕರ ಸಾಲಿನಲ್ಲಿ ನಟ ಅವಿನಾಶ್ ಅಲಂಕರಿಸಿದ್ದಾರೆ. 37 ವರ್ಷಗಳ ಸಿನಿ ಜರ್ನಿಯಲ್ಲಿ ಬಹುಭಾಷಾ ನಟನಾಗಿ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವಿನಾಶ್ ನಟಿಸಿದ್ದಾರೆ. ಕಾಲಿವುಡ್‌ನಲ್ಲಿ ರಜನಿಕಾಂತ್ (Rajanikanth) ಜೊತೆ ನಟಿಸುವ ಅವಕಾಶ ಸಿಕ್ಕಿದ್ದು ಹೇಗೆ? ಎಂದು ಅವಿನಾಶ್ (Actor Avinash) ಬಿಚ್ಚಿಟ್ಟಿದ್ದಾರೆ.

    ಬಹುಭಾಷೆಗಳಲ್ಲಿ ನಟ, ಖಳನಟ, ಪೋಷಕ ಪಾತ್ರ ಸೇರಿದಂತೆ ನಾನಾ ಪಾತ್ರಗಳಲ್ಲಿ ಅವಿನಾಶ್ ನಟಿಸಿ ಗಮನ ಸೆಳೆದಿದ್ದಾರೆ. ‘ಚಂದ್ರಮುಖಿ’ ಚಿತ್ರದ ಮೂಲಕ ರಜನಿಕಾಂತ್ ಜೊತೆಗೆ ಅವಿನಾಶ್ ನಟಿಸಿದರು. ಅಸಲಿಗೆ, ಕನ್ನಡದ ‘ಆಪ್ತಮಿತ್ರ’ (Apthamitra Film) ಚಿತ್ರದ ರೀಮೇಕ್ ‘ಚಂದ್ರಮುಖಿ’ ಸಿನಿಮಾದಲ್ಲಿ ಅವಿನಾಶ್‌ಗೆ ಚಾನ್ಸ್ ಸಿಕ್ಕಿತ್ತು.

    ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ‘ಆಪ್ತಮಿತ್ರ’ ಚಿತ್ರದಲ್ಲಿ ಅವಿನಾಶ್ ಅವರು ಆಚಾರ್ಯ ರಾಮಚಂದ್ರ ಶಾಸ್ತ್ರಿ ಎಂಬ ಪಾತ್ರದಲ್ಲಿ ಅಭಿನಯಿಸಿದ್ದರು. ಅವರ ಈ ಪಾತ್ರ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಅವಿನಾಶ್ ಅವರ ಖಡಕ್ ನಟನೆ ಮೆಚ್ಚಿ, ‘ಆಪ್ತಮಿತ್ರ’ ಚಿತ್ರವನ್ನ ತಮಿಳಿನಲ್ಲಿ ‘ಚಂದ್ರಮುಖಿ’ (Chandramukhi) ಆಗಿ ರೀಮೇಕ್ ಮಾಡುವ ಸಂದರ್ಭದಲ್ಲಿ ಶಾಸ್ತ್ರಿಗಳ ಪಾತ್ರಕ್ಕೆ ಅವಿನಾಶ್ ಅವರೇ ಬೇಕು ಅಂತ ರಜನಿಕಾಂತ್ ಸೂಚಿಸಿದರಂತೆ. ಇದನ್ನೂ ಓದಿ:ಕುಟುಂಬ ಸಮೇತ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ

    ರಜನಿಕಾಂತ್ (Rajanikanth) ಜೊತೆಗೆ ಆಕ್ಟ್ ಮಾಡ್ತೀನಿ ಅಂತ ನಾನು ಕನಸು ಕೂಡ ಕಂಡಿರಲಿಲ್ಲ. ‘ಆಪ್ತಮಿತ್ರʼ ಆದ್ಮೇಲೆ ಅದರ ರೀಮೇಕ್‌ನಲ್ಲಿ ಅವಿನಾಶ್ ಅವರೇ ನಟಿಸಬೇಕು ಅಂತ ರಜನಿಕಾಂತ್ ಹೇಳ್ತಿದ್ದಾರೆ ಅಂತಲೇ ಸುದ್ದಿ ಬಂತು. ಆಮೇಲೆ ಪಿ.ವಾಸು ಅವರೂ ಕೂಡ ರಜನಿಕಾಂತ್ ಹೇಳ್ತಿದ್ದಾರೆ ನೀವೇ ಮಾಡಿ ಎಂದರು. ಈ ವಿಚಾರ ಕೇಳಿ ನನಗೆ ಸರ್ಪ್ರೈಸ್ ಆಯ್ತು. ಮೊದಲನೇ ದಿನ ಶೂಟಿಂಗ್‌ಗೆ ಹೋದೆ. ‌’ಚಂದ್ರಮುಖಿ’ ಸೆಟ್‌ನಲ್ಲೇ ನಾನು ಮೊದಲನೇ ಬಾರಿಗೆ ರಜನಿಕಾಂತ್ ಅವರನ್ನ ನೋಡಿದ್ದು ಎಂದು ಅವಿನಾಶ್ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಬಿಚ್ಚಿಟ್ಟಿದ್ದಾರೆ.

    ರಜನಿಕಾಂತ್‌, ಜ್ಯೋತಿಕಾ, ನಯನತಾರಾ, ಅವಿನಾಶ್‌ ನಟನೆಯ ಚಂದ್ರಮುಖಿ ಸಿನಿಮಾ ಕೂಡ ಸೂಪರ್‌ ಡೂಪರ್‌ ಹಿಟ್‌ ಆಗಿತ್ತು. ಅಲ್ಲೂ ಅವಿನಾಶ್‌ ಅವರ ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

  • ಮತ್ತೆ ನಾಗವಲ್ಲಿಯಾಗ್ತಾಳಾ ಸ್ವೀಟಿ?

    ಮತ್ತೆ ನಾಗವಲ್ಲಿಯಾಗ್ತಾಳಾ ಸ್ವೀಟಿ?

    ಚೆನ್ನೈ: ಸ್ವೀಟಿ ಅನುಷ್ಕಾ ಶೆಟ್ಟಿ ಮತ್ತೆ ನಾಗವಲ್ಲಿಯಾಗುತ್ತಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.

    ಬಾಹುಬಲಿ ನಂತರ ಅನುಷ್ಕಾ ಸಿನಿಮಾಗಳು ಯಶಸ್ಸನ್ನು ಕಾಣದ ಕಾರಣ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ. ಸ್ವೀಟಿ ಮುಂದೆ ಯಾವ ರೀತಿಯ ಸಿನಿಮಾದಲ್ಲಿ ಬಣ್ಣ ಹಂಚುತ್ತಾರೆ ಎಂದು ಅವರ ಅಭಿಮಾನಿಗಳಲ್ಲಿ ಕುತೂಹಲ ಇದ್ದೇ ಇದೆ. ಅದಕ್ಕೆ ತೆರೆ ಎಳೆಯುವಂತೆ ರಾಘವ ಲಾರೆನ್ಸ್ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಿದ್ದಾರೆ ಎಂಬ ಸುದ್ದಿ ಈಗ ಹರಿದಾಡುತ್ತಿದೆ.

    ಈ ಹಿಂದೆ 2006ರಲ್ಲಿ ತಮಿಳಿನಲ್ಲಿ ತೆರೆಕಂಡ ‘ಚಂದ್ರಮುಖಿ’ ಸಿನಿಮಾ ತೆಲುಗಿಗೂ ಡಬ್ ಆಗಿದ್ದು, ಆ ಸಿನಿಮಾದಲ್ಲಿ ಅನುಷ್ಕಾ ನಾಗವಲ್ಲಿಯಾಗಿ ಸಖತ್ ಮಿಂಚಿದ್ದರು. ಈಗ ಮತ್ತೆ ರಾಘವ ಲಾರೆನ್ಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ನಾಗವಲ್ಲಿ ಪಾತ್ರವಿದ್ದು, ಅದಕ್ಕೆ ಅನುಷ್ಕಾ ಅವರೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

    ಈ ಕುರಿತು ಲಾರೆನ್ಸ್ ಅವರು ಅನುಷ್ಕಾ ಜೊತೆ ಮಾತುಕತೆಯನ್ನು ಮಾಡಿದ್ದು, ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಅವರನ್ನು ಐತಿಹಾಸಿಕ ಮತ್ತು ಪೌರಾಣಿಕ ಸಿನಿಮಾಗಳಲ್ಲಿ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

    2018ರಲ್ಲಿ ಅನುಷ್ಕಾರ ‘ಭಾಗವತಿ’ ಸಿನಿಮಾ ತೆರೆಕಂಡಿತ್ತು. ನಂತರ ‘ನಿಶ್ಯಬ್ದಂ’ ಸಿನಿಮಾ ಒಟಿಟಿಗೆ ಸೀಮಿತವಾಗಿದ್ದು, ಮೂಕಿ ಪಾತ್ರದಲ್ಲಿ ಸ್ವೀಟಿ ನಟನೆ ತುಂಬಾ ಚೆನ್ನಾಗಿ ಮೂಡಿಬಂದಿದೆ. ಆದರೆ ಆ ಸಿನಿಮಾ ಕೂಡ ಅಷ್ಟು ಸದ್ದು ಮಾಡಲಿಲ್ಲ. ಅದಕ್ಕೆ ಅನುಷ್ಕಾ ತಮ್ಮ ಮುಂದಿನ ಪ್ರಾಜ್ಜೆಕ್ಟಲ್ಲಿ ಸಖತ್ ಕೇರ್ ಫುಲ್ ಆಗಿದ್ದಾರೆ.