Tag: chandrashekhar

  • ಸ್ಯಾಂಡಲ್‍ವುಡ್‍ಗೆ ಮತ್ತೊಂದು ಆಘಾತ – ಹಿರಿಯ ನಿರ್ಮಾಪಕ ಚಂದ್ರಶೇಖರ್ ಇನ್ನಿಲ್ಲ

    ಸ್ಯಾಂಡಲ್‍ವುಡ್‍ಗೆ ಮತ್ತೊಂದು ಆಘಾತ – ಹಿರಿಯ ನಿರ್ಮಾಪಕ ಚಂದ್ರಶೇಖರ್ ಇನ್ನಿಲ್ಲ

    ಬೆಂಗಳೂರು: ನಿಮಿಶಾಂಬ ಪ್ರೊಡಕ್ಷನ್ಸ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಮೃತಪಟ್ಟಿದ್ದಾರೆ.

    23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಹೀಗಾಗಿ ಅವರನ್ನು ಮಣಿಪಾಲ್ ಸೆಂಟರ್ ಗೆ ದಾಖಲು ಮಾಡಲಾಗಿತ್ತು. ಕೋವಿಡ್ ವಾಸಿಯಾಗಿತ್ತಾದ್ರೂ, ಇದ್ದಕ್ಕಿದ್ದಂತೆ ಶ್ವಾಸಕೋಶದಲ್ಲಿ ಉಲ್ಬಣಗೊಂಡು ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.

    ಚಂದ್ರಶೇಖರ್ ಅವರು ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಸಿನಿಮಾವೊಂದನ್ನ ಅನೌನ್ಸ್ ಮಾಡಿದ್ರು. ಆದರೆ ವಿಧಿಯಾಟ ಬೇರೆನೇ ಆಗಿದೆ. ಈ ಮೂಲಕ ಇತ್ತೀಚೆಗಷ್ಟೇ ಕೋವಿಡ್ ಗೆ ಬಲಿಯಾದ ಕೋಟಿ ನಿರ್ಮಾಪಕ ರಾಮು ಅವರ ಜೊತೆಗೆ ಉದ್ಯಮ ಮತ್ತೊಂದು ಅನ್ನದಾತನ್ನ ಕಳೆದುಕೊಂಡಂತಾಗಿದೆ.

  • ಜನಾರ್ದನ ರೆಡ್ಡಿ ಬಳಿ ಕ್ಷಮೆಯಾಚಿಸಿದ ವಕೀಲ ಚಂದ್ರಶೇಖರ್..!

    ಜನಾರ್ದನ ರೆಡ್ಡಿ ಬಳಿ ಕ್ಷಮೆಯಾಚಿಸಿದ ವಕೀಲ ಚಂದ್ರಶೇಖರ್..!

    ಬೆಂಗಳೂರು: ಅಂಬಿಡೆಂಟ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರು ಶನಿವಾರ ತಮ್ಮ ವಕೀಲರ ಜೊತೆ ಬಂದು ಸಿಸಿಬಿ ಎದುರು ಹಾಜರಾಗಿದ್ದರು. ಈ ಬೆನ್ನಲ್ಲೇ ಇದೀಗ ವಕೀಲ ಚಂದ್ರಶೇಖರ್ ಅವರು ರೆಡ್ಡಿ ಬಳಿ ಕ್ಷಮೆ ಕೇಳಿದ್ದಾರೆ.

    ಹಿರಿಯ ಪೊಲೀಸ್ ಅಧಿಕಾರಿಗಳ ಮಾತು ನಂಬಿ ರೆಡ್ಡಿ ಕೆಟ್ಟು ಹೋದ್ರಂತೆ. ಯಾಕಂದ್ರೆ ವಿಚಾರಣೆಗೆ ಹಾಜರಾಗಿ, ಬಂಧಿಸಲ್ಲ ಎಂಬ ಆಶ್ವಾಸನೆ ಮೇರೆಗೆ ರೆಡ್ಡಿ ಬಂದಿದ್ದಾರಂತೆ. ಆದರೆ ವಿಚಾರಣೆ ಸದರ್ಭದಲ್ಲಿ ಆಗಿದ್ದೇ ಬೇರೆ. ತಡರಾತ್ರಿವರೆಗೂ ಸುದೀರ್ಘ ವಿಚಾರಣೆ ನಡೆದಿದೆ. ಇದರಿಂದ ಬೇಸತ್ತ ರೆಡ್ಡಿ ಅವರಿಗೆ ಪಶ್ಚಾತಾಪವಾಗಿದೆಯಂತೆ.

    ಈ ರೀತಿ ಮಾಡ್ತಾರೆ ಅನ್ನೋದು ಗೊತ್ತಿದ್ರೆ ಬೇಲ್ ತೆಗೆದುಕೊಂಡೆ ವಿಚಾರಣೆಗೆ ಬರುತ್ತಿದ್ದೆ ಅಂತ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. ರೆಡ್ಡಿಯ ಈ ಮಾತಿನಿಂದ ತಾನೂ ಬೇಸರಗೊಂಡ ವಕೀಲ ಚಂದ್ರಶೇಖರ್ ಕೂಡಲೇ ರೆಡ್ಡಿ ಬಳಿ ಕ್ಷಮೆ ಕೇಳಿದ್ದಾರೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ವಿಚಾರಣೆಗೆ ಕರೆತಂದು ತಪ್ಪು ಮಾಡಿದೆ ಎಂದು ವಕೀಲರು ರೆಡ್ಡಿ ಬಳಿ ತಮ್ಮ ಅಲವತ್ತುಕೊಂಡಿದ್ದಾರೆ. ವಿಚಾರಣೆ ನೆಪದಲ್ಲಿ ಹಿಂಸೆ ಕೊಡ್ತಿದ್ದಾರೆ. ಕೋರ್ಟ್ ನಲ್ಲೇ ಉತ್ತರ ಕೋಡೋಣಾ ಅಂತ ವಕೀಲರು ಹೇಳಿದ್ದಾರೆ. ಈ ವೇಳೆ ರೆಡ್ಡಿ, ಆಗಿದ್ದು ಆಗಿ ಹೋಯಿತು ಎಂದು ವಕೀಲರ ಮಾತಿಗೆ ತಲೆದೂಗಿದ್ದಾರೆ. ರೆಡ್ಡಿಯ ಜೊತೆಯಲ್ಲಿಯೇ ಐವರು ವಕೀಲರು ರಾತ್ರಿ ಕಳೆದಿದ್ದಾರೆ. ಒಟ್ಟಿನಲ್ಲಿ ಕಳೆದ ಒಂದು ವಾರದಿಂದ ಸಿಗದೆ ಸತಾಯಿಸಿದ ರೆಡ್ಡಿಗೆ ಸತತ 15 ಗಂಟೆಗಳಿಂದ ಸಿಸಿಬಿ ಗ್ರಿಲ್ ಮಾಡಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಮನಗರದಲ್ಲಿ ಗೆಲ್ಲೋದಕ್ಕಿಂತ ಪಕ್ಷ ಕಟ್ಟಲು ಹೋಗಿದ್ವಿ: ಆರ್.ಅಶೋಕ್

    ರಾಮನಗರದಲ್ಲಿ ಗೆಲ್ಲೋದಕ್ಕಿಂತ ಪಕ್ಷ ಕಟ್ಟಲು ಹೋಗಿದ್ವಿ: ಆರ್.ಅಶೋಕ್

    ಮಂಡ್ಯ: ಹಣದ ಆಮಿಷದಿಂದ ಬೆನ್ನಿಗೆ ಚೂರಿ ಹಾಕಿ ರಾಮನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಓಡಿ ಹೋಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಅವರು, ಇದೊಂದು ರಾಜಕೀಯ ವ್ಯಭಿಚಾರ. ಈ ತರದ ಘಟನೆ ರಾಜ್ಯ ತಲೆತಗ್ಗಿಸುವಂತದ್ದು. ಇದರಲ್ಲಿ ಭಾಗಿಯಾದ ಕಾಂಗ್ರೆಸ್‍ನವರು ತಲೆ ತಗ್ಗಿಸಬೇಕು. ಮುಂದೊಂದು ದಿನ ಅವರಿಗೂ ಇದೇ ರೀತಿ ಆಗುತ್ತದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನು ಓದಿ: ಉಪಚುನಾವಣೆಗೆ ಸ್ಫೋಟಕ ಟ್ವಿಸ್ಟ್-ಚುನಾವಣೆ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

    ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ 12 ಜನ ರಾಮನಗರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕಿಂತ ಶಕ್ತಿ ಕೊಡಲು ಸಾಧ್ಯವಿಲ್ಲ. ಸತ್ತರೆ ನನ್ನ ಹೆಣ ಕೂಡ ಜೆಡಿಎಸ್‍ಗೆ ಹೋಗಲ್ಲ ಅಂತ ಚಂದ್ರಶೇಖರ್ ಅವರ ತಂದೆ ಹೇಳಿದ್ದರು. ಆದರೆ ಈಗ ಚಂದ್ರಶೇಖರ್ ನಡೆದುಕೊಂಡಿರುವ ರೀತಿ ಮುಂದೆ ಅವರಿಗೆ ಕಾನೂನಿನ ರೀತಿ ತೊಡಕಾಗಬಹುದು. ನಾವೇನು ರಾಮನಗರ ಗೆಲ್ಲತ್ತೇವೆ ಅಂತಾ ಹೋಗಿಲ್ಲ. ಪಕ್ಷ ಕಟ್ಟಲು ಹೋಗಿದ್ದೆವು ಎಂದು ಅಶೋಕ್ ಅಸಮಾಧಾನ ಹೊರಹಾಕಿದರು.

    ಈ ಬೆಳವಣಿಗೆಯಿಂದ ಇದೇ ಅವಧಿಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ಹಿನ್ನಡೆ ಆಗಲ್ಲ. ಇದಕ್ಕೆ ಪೂರಕವಾಗಿ ಬೇರೆ ನಿರ್ಧಾರ ಕೈಗೊಳ್ಳಲು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ನಾಯಕ ಜೊತೆಗೆ ಮಾತುಕತೆ ನಡೆಸುತ್ತೇವೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಅವರ ಗೆಲವು ಕಷ್ಟವಿದೆ. ಹೀಗಾಗಿ ನಾವು ಅಲ್ಲಿ ಹೊಸ ತಂತ್ರ ಹೂಡಲಿದ್ದೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/SUz3348T4QA

  • ಕಡೆಯ ಕ್ಷಣದಲ್ಲಿ ರಾಮನಗರದಲ್ಲಿ ಬಿಜೆಪಿಗೆ ಆಪರೇಷನ್ ನಡೆದಿದ್ದು ಹೇಗೆ?

    ಕಡೆಯ ಕ್ಷಣದಲ್ಲಿ ರಾಮನಗರದಲ್ಲಿ ಬಿಜೆಪಿಗೆ ಆಪರೇಷನ್ ನಡೆದಿದ್ದು ಹೇಗೆ?

    ಬೆಂಗಳೂರು: ರಾಜ್ಯ ಉಪಚುನಾವಣೆ ಘೋಷಣೆ ಆಗುತ್ತಿದಂತೆ ಮತ್ತೆ ಅಧಿಕಾರ ಪಡೆಯುವ ಕನಸು ಕಂಡಿದ್ದ ಬಿಜೆಪಿ ನಾಯಕರಿಗೆ ಪಕ್ಷದ ರಾಮನಗರ ಕ್ಷೇತ್ರದ ಅಭ್ಯರ್ಥಿ ಎಲ್ ಚಂದ್ರಶೇಖರ್ ಕಾಂಗ್ರೆಸ್‍ಗೆ `ಘರ್‌ವಾಪಸಿ’ ಆಗಿದ್ದಾರೆ. ಚುನಾವಣೆಯ ಕೊನೆಯ ಹಂತದಲ್ಲಿ ಬಿಜೆಪಿಗೆ ಅಭ್ಯರ್ಥಿಯನ್ನೇ ವಾಪಸ್ ಕರೆತರುವ ಮೂಲಕ ಡಿಕೆ ಸಹೋದರರು ಶಾಕ್ ನೀಡಿದ್ದು, ಈ ಆಪರೇಷನ್ ಬಿಜೆಪಿಯಲ್ಲಿ ತಳಮಳವನ್ನು ಉಂಟುಮಾಡಿದೆ.

    ರಾಮನಗರದಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದ ಎಲ್ ಚಂದ್ರಶೇಖರ್ ಅವರು ಬಿಜೆಪಿ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರ ಮುಂದಾಳತ್ವದಲ್ಲಿ ಯಡಿಯೂರಪ್ಪನವವರನ್ನು ಭೇಟಿ ಮಾಡಿ ಪಕ್ಷ ಸೇರಿದ್ದರು. ಆದರೆ ಚುನಾವಣೆಯಲ್ಲಿ ಚಂದ್ರಶೇಖರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಳಿಕ ಪಕ್ಷದ ಪರ ಪ್ರಚಾರಕ್ಕೆ ರಾಮನಗರಕ್ಕೆ ಬಿಜೆಪಿ ನಾಯಕರು ಆಗಮಿಸಿರಲಿಲ್ಲ. ಇದರಿಂದ ಕಂಗೆಟ್ಟ ಚಂದ್ರಶೇಖರ್ ರಾತ್ರೋ ರಾತ್ರಿ ರಸ್ತೆ ಮಧ್ಯೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಬುಧವಾರ ರಾತ್ರಿ 11.30ಕ್ಕೆ ಡಿಕೆ ಸುರೇಶ್‍ಗೆ ಫೋನ್ ಮಾಡಿದ ಚಂದ್ರಶೇಖರ್ ಮಾತುಕತೆ ನಡೆಸಲು ಅವಕಾಶ ಕೋರಿದ್ದರು.

    ಇತ್ತ ಚಂದ್ರಶೇಖರ್ ಮನವಿ ಮೇರೆಗೆ ಮಾತುಕತೆ ನಡೆಸಲು ಸಮ್ಮತಿ ಸೂಚಿಸಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ನಗರದ ಕೆಂಗೇರಿ ಬಳಿ ಭೇಟಿ ಮಾಡಿದ್ದರು. ಇಬ್ಬರ ನಡುವೆಯೂ ಸುಮಾರು 4 ಗಂಟೆಯಷ್ಟು ಕಾಲ ಮಾತುಕತೆ ನಡೆದ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆ ಆಗುವ ಕುರಿತು ಚಂದ್ರಶೇಖರ್ ಅವರಿಗೆ ಡಿಕೆ ಸುರೇಶ್ ಆಫರ್ ನೀಡಿದ್ದರು. ಈ ಮಾತಿಗೆ ಒಪ್ಪಿಗೆ ಸೂಚಿಸಿದ ಚಂದ್ರಶೇಖರ್ ಅವರು ಬಿಜೆಪಿಯಲ್ಲಿದ್ದು ಸೋತು ಮೂಲೆಗುಂಪು ಆಗುವುದರ ಬದಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದೇ ಉತ್ತಮ ಎಂದು ತಿಳಿಸಿ ಮರಳಿ ಕಾಂಗ್ರೆಸ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಡಿಕೆ ಸುರೇಶ್ ಅವರ ಸಮ್ಮುಖದಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಂದ್ರಶೇಖರ್ ಅವರು ಬಿಜೆಪಿ ನಾಯಕರ ವಿರುದ್ಧ ಆರೋಪಗಳ ಸುರಿಮಳೆಗೈದು, 15 ದಿನಗಳಲ್ಲೇ ಬಿಜೆಪಿ ಪಕ್ಷದಲ್ಲಿನ ಒಳಜಗಳಗಳಿಂದ ತಮಗೆ ಬೇಸರ ಉಂಟಾಗಿದೆ ಎಂದು ಹೇಳಿದ್ದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ನಿರ್ಣಯಕೈಗೊಂಡಿದ್ದಾಗಿ ಸ್ಪಷ್ಟನೆ ನೀಡಿದ್ದರು.

    ಇತ್ತ ಎಲ್ ಚಂದ್ರಶೇಖರ್ ಸೇರ್ಪಡೆ ವೇಳೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವುದು ಹಾಗೂ ಪ್ರಚಾರ ಸಭೆಯಲ್ಲಿ ಭಾಗವಹಿಸುವ ಕುರಿತು ಹೇಳಿದ್ದಾರೆ ಎನ್ನಲಾಗಿದೆ. ಇತ್ತ ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದಿರುವ ಪರಿಣಾಮ ರಾಮನಗರದ ಉಪಚುನಾವಣೆ ತನ್ನ ಕುತೂಹಲವನ್ನು ಕಳೆದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಕೆಶಿ ಹವಾ ಏನಿದ್ರೂ ಕನಕಪುರದಲ್ಲಿ ಮಾತ್ರ- ಬಿಜೆಪಿ ಸೇರ್ಪಡೆ ಬಳಿಕ ಚಂದ್ರಶೇಖರ್ ಹೇಳಿಕೆ

    ಡಿಕೆಶಿ ಹವಾ ಏನಿದ್ರೂ ಕನಕಪುರದಲ್ಲಿ ಮಾತ್ರ- ಬಿಜೆಪಿ ಸೇರ್ಪಡೆ ಬಳಿಕ ಚಂದ್ರಶೇಖರ್ ಹೇಳಿಕೆ

    ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರದಲ್ಲಿ ಅವರ ಪ್ರಭಾವ ಇದ್ದಿದ್ದರೆ ಪಕ್ಷದ ಅಭ್ಯರ್ಥಿಗಳು ಸೋಲುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದ ಮುಖಂಡ ಚಂದ್ರಶೇಖರ್ ಅವರು ಹೇಳಿದ್ದಾರೆ.

    ಮೈತ್ರಿ ಸರ್ಕಾರದ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಕಿತ್ತಾಟ ಬಿಜೆಪಿಗೆ ವರದಾನವಾಗಿ ಪರಿಣಾಮಿಸಿದ್ದು, ಸ್ಥಳೀಯ ಕಾರ್ಯಕರ್ತರ ಮೈತ್ರಿ ವಿರೋಧದಿಂದ ಉಂಟಾಗಿರುವ ಅತೃಪ್ತರಿಗೆ ಬಿಜೆಪಿ ಮುಖಂಡರು ಗಾಳ ಬೀಸಿದ್ದಾರೆ. ಮೊದಲ ಹಂತದಲ್ಲಿ ರಾಮನಗರದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು, ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    ಬಿಜೆಪಿ ಸೇರ್ಪಡೆ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚಂದ್ರಶೇಖರ್, ಕಳೆದ 28 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೇವೆ ಸಲ್ಲಿಸಿದ್ದೆ. ಪ್ರತಿ ಚುನಾವಣೆಯಲ್ಲೂ ಪಕ್ಷ ಸೂಚಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮ ವಹಿಸುತ್ತಿದ್ದೆ. ಆದರೆ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮಾಡಿಕೊಂಡಿರುವ ಒಳಒಪ್ಪಂದದಿಂದ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಅದ್ದರಿಂದ ನಾನು ಕಾರ್ಯಕರ್ತರ ಒತ್ತಡ ಮೇಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

    ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಅವರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಡಿಕೆ ಶಿವಕುಮಾರ್ ಅವರ ಭಯ ಇಲ್ಲ, ರಾಮನಗರದಲ್ಲಿ ಭಯದ ಪ್ರಶ್ನೆಯೇ ಇಲ್ಲ. ಡಿಕೆಶಿ ಪ್ರಭಾವ ಏನಿದ್ದರೂ ಕನಕಪುರದಲ್ಲಿ ಮಾತ್ರ. ರಾಮನಗರ, ಚನ್ನಪಟ್ಟಣ, ಮಾಗಡಿಯಲ್ಲಿ ಅವರ ಪ್ರಭಾವ ಇದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ತೊರೆಯುವ ಕುರಿತು ನಮ್ಮ ತಂದೆಯವರೊಂದಿಗೆ ನಾನು ಚರ್ಚೆ ನಡೆಸಿದ್ದೇನೆ. ನನ್ನ ತಂದೆಯ ರಾಜಕಾರಣವೇ ಬೇರೆ, ನನ್ನ ರಾಜಕಾರಣವೇ ಬೇರೆ. ಇಂತಹ ಸಂದರ್ಭದಲ್ಲಿ ಹಲವು ಉದಾಹರಣೆಗಳನ್ನು ನೀಡಲು ಸಿದ್ಧವಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬೆಳವಣಿಗೆ ಕಾರ್ಯನಿರ್ವಹಿಸುತ್ತೇನೆ ಎಂದರು.

    ಯಾವುದೇ ಬೇಡಿಕೆ ಇಲ್ಲ: ಬಿಜೆಪಿ ಪಕ್ಷದ ಸೇರ್ಪಡೆ ವೇಳೆ ಯಾವುದೇ ಬೇಡಿಕೆಯನ್ನು ನಾನು ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಚಂದ್ರಶೇಖರ್ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಒಳ ಮೈತ್ರಿ ವಿರುದ್ಧ ನಾನು ಈ ತೀರ್ಮಾನ ತೆಗೆದುಕೊಂಡಿದ್ದೇನೆ. ಈ ನಿರ್ಧಾರಕ್ಕೆ ಕ್ಷೇತ್ರ ಜನರು, ಮತದಾರರು ಹಾಗೂ ಸ್ನೇಹಿತರು ಬೆಂಬಲ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪನವರು ನಮ್ಮ ನಾಯಕರು. ನನಗೆ ಬೆಂಬಲ ನೀಡಿ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸಮರ್ಥವಾಗಿ ಸ್ಪರ್ಧೆಯನ್ನು ಎದುರಿಸಿ ಗೆದ್ದು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿರ್ಮಾಪಕರ ವಿರುದ್ಧ ಸಿಂಧು ಲೋಕನಾಥ್ ಕೋರ್ಟ್ ಮೊರೆ!

    ನಿರ್ಮಾಪಕರ ವಿರುದ್ಧ ಸಿಂಧು ಲೋಕನಾಥ್ ಕೋರ್ಟ್ ಮೊರೆ!

    ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಿಂಧು ಲೋಕನಾಥ್ ಅವರು ಇದೀಗ ನಿರ್ಮಾಪಕರೊಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. “ಹೀಗೊಂದು ದಿನ” ಚಿತ್ರದ ನಿರ್ಮಾಪಕ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿರುವ ಸಿಂಧು ಲೋಕನಾಥ್ ಅವರ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.

    ನಿರ್ಮಾಪಕರು ಸಿಂಧೂ ಅವರಿಗೆ ಎರಡು ಲಕ್ಷ ರೂ. ಸಂಭಾವನೆಯ ಚೆಕ್ ನೀಡಿದ್ದರು. ಆದ್ರೆ ಚೆಕ್ ಅನ್ನು ಸಿಂಧು ಅವರು ಬ್ಯಾಂಕ್‍ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಹೀಗಾಗಿ ನಟಿ, ನಿರ್ಮಾಪಕರ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ.

    ಸಿನಿಮಾ ಮಾರ್ಚ್ ನಲ್ಲೇ ರಿಲೀಸ್ ಆದ್ರೂ ಸಂಭಾವನೆ ಮಾತ್ರ ಇನ್ನೂ ಕ್ಲಿಯರ್ ಆಗಿಲ್ಲ ಅಂತ ನಟಿ ಆರೋಪ ಮಾಡುತ್ತಿದ್ದಾರೆ. ಸಿಂಪಲ್ಲಾಗ್ ಇನ್ನೊಂದು ಲವ್ ಸ್ಟೋರಿಯ ಪ್ರವೀಣ್, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಜಾ ರಾವ್, ಗುರುಪ್ರಸಾದ್, ಶೋಭರಾಜ್, ಮಿತ್ರ, ಗಿರಿ, ಬಾಲಾಜಿ ಮನೋಹರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಗುಪ್ತ ಸಂಗೀತ ನೀಡಿದ್ದಾರೆ. ರಾಮಕೃಷ್ಣ ರಣಗಟ್ಟಿ ಗೀತ ಸಾಹಿತ್ಯ ನೀಡಿದ್ದಾರೆ. ವಿಕಾಸ್ ಅವರ ಕಥೆಗೆ, ನಿರ್ದೇಶಕ ವಿಕ್ರಮ್ ಯೋಗಾನಂದ್ ಅವರೇ ಛಾಯಾಗ್ರಹಕರು, ಸಂಕಲನಕಾರರು ಹಾಗೂ ವಿಷುವಲ್ ಎಫೆಕ್ಟ್ ಸಹ ನೀಡಿದ್ದಾರೆ. ಇದನ್ನೂ ಓದಿ: ಮದ್ವೆ ನಂತರ ಸಿಂಧು ಲೋಕನಾಥ್ ಬಾಳಲ್ಲಿ ‘ಹೀಗೊಂದು ದಿನ’

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    Heegondhu Dina | Kannada Movie | Sindhu Loknath | Vikram Yoganand
  • ಅನ್‍ಕಟ್ ಮೂವಿ ‘ಹೀಗೊಂದ್ ದಿನ’ ಬರ್ತಿದೆ ನೋಡಿ!

    ಅನ್‍ಕಟ್ ಮೂವಿ ‘ಹೀಗೊಂದ್ ದಿನ’ ಬರ್ತಿದೆ ನೋಡಿ!

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಹೊಸಾ ಆಲೋಚನೆ, ಹೊಸಾ ಪ್ರಯೋಗಗಳ ಪರ್ವ ಕಾಲವೊಂದು ಶುರುವಾಗಿದೆಯಲ್ಲಾ? ಅದರ ಕೊಂಡಿಯಂತೆ ತಯಾರಾಗಿ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಚಿತ್ರ `ಹೀಗೊಂದ್ ದಿನ’!

    ಸದಭಿರುಚಿಯ ಸಿನಿಮಾಸಕ್ತರ ವಲಯದಲ್ಲಿ ಸಣ್ಣಗೆ ಈ ಸಿನಿಮಾ ಕುರಿತಾಗಿ ನಿರೀಕ್ಷೆ ಜೀವ ಪಡೆದುಕೊಳ್ಳುತ್ತಿದೆ. ಯಾವುದೇ ಚಿತ್ರದ ಪಾಲಿಗಾದರೂ ತಾನೇ ತಾನಾಗಿ ಹುಟ್ಟಿಕೊಳ್ಳುವ ಇಂಥಾ ನಿರೀಕ್ಷೆಯೇ ಗೆಲುವಿನ ಮೊದಲ ಮೆಟ್ಟಿಲು. ಅಂಥಾದ್ದೊಂದು ಮೆಟ್ಟಿಲೇರಿ ನಿಂತಿರುವ ಖುಷಿಯಲ್ಲಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಸೇರಿದಂತೆ ಚಿತ್ರತಂಡ ಈ ವಾರ ತೆರೆಗೆ ಬರುತ್ತಿರುವ ಸಿನಿಮಾದ ಫಲಿತಾಂಶಕ್ಕಾಗಿ ಕಾದಿದ್ದಾರೆ.

    ಹಾಗೆ ನೋಡಿದರೆ, ಹೀಗೊಂದು ದಿನ ಹೆಚ್ಚು ಸೌಂಡ್ ಮಾಡಲು ಕಾರಣ ಇದು ಅನ್ ಕಟ್ ಮೂವಿ ಅನ್ನೋದಕ್ಕೆ. ಅಂದಹಾಗೆ ಅನ್ ಕಟ್ ಮೆಥಡ್ಡಿನಲ್ಲಿ ಒಂದು ಚಿತ್ರವನ್ನು ರೂಪಿಸೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ನಿರ್ದೇಶಕರು ಸೇರಿದಂತೆ ಇಡೀ ಚಿತ್ರತಂಡ ಸಮರ್ಥವಾಗಿ ನಿಭಾಯಿಸಿದ ಖುಷಿಯಲ್ಲಿದೆ. ಇದು ಎರಡು ಗಂಟೆಯಲ್ಲಿ ನಡೆಯೋ ಕಥಾ ಹಂದರ ಹೊಂದಿರೋ ಚಿತ್ರ. ಒಂದ್ಯಾವುದೋ ಗುರಿಯಿಟ್ಟುಕೊಂಡು ಮನೆಯಿಂದ ಹೊರ ಬೀಳೋ ಹುಡುಗಿಯ ಸುತ್ತಾ ಎರಡು ಘಂಟೆಗಳ ಕಾಲ ನಡೆಯುವ ವಿದ್ಯಮಾನ ಈ ಚಿತ್ರದ ಮುಖ್ಯ ವಿಚಾರ.

    ಇದಕ್ಕಾಗಿ ದಿನಾ ಬೆಳಗ್ಗೆ ಆರರಿಂದ ಎಂಟು ಘಂಟೆವರೆಗೆ ಶೂಟ್ ಮಾಡಲಾಗುತ್ತಿತ್ತಂತೆ. ಅಷ್ಟೂ ಜನ ಕಲಾವಿದರು ಹೊಸಾ ಪ್ರಯೋಗವೆಂಬ ಕಾರಣದಿಂದ ಸಾಥ್ ನೀಡಿದ್ದಾರೆಂಬ ತೃಪ್ತಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಅವರದ್ದು.

    ಸಿಂಧು ಲೋಕನಾಥ್ ಮುಖ್ಯಭೂಮಿಕೆಯಲ್ಲಿರುವ ಹೀಗೊಂದು ದಿನ ಪಕ್ಕಾ ಮಹಿಳಾ ಪ್ರಧಾನವಾದ ಚಿತ್ರ. ಕಥಾ ಹಂದರವೂ ಸೇರಿದಂತೆ ಎಲ್ಲ ವಿಚಾರಗಳಲ್ಲಿಯೂ ಹೊಸತನ ಹೊಂದಿದೆ. ಈವರೆಗೆ ಒಂದಷ್ಟು ಪಾತ್ರಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದ ಸಿಂಧು ಲೋಕನಾಥ್ ಈ ಚಿತ್ರದಲ್ಲಿ ಇಲ್ಲಿವರೆಗಿನ ಅಷ್ಟೂ ಪಾತ್ರಗಳಿಗಿಂತಲೂ ಭಿನ್ನವಾದ, ಸವಾಲಾದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರಂತೆ.

    ಅಂದಹಾಗೆ ವಿಕ್ರಂ ಯೋಗಾನಂದ್ ನಿರ್ದೇಶನದ ಈ ಚಿತ್ರವನ್ನು ನಿರ್ಮಾಣ ಮಾಡಿರುವವರು ದಿವ್ಯದೃಷ್ಟಿ ಚಂದ್ರಶೇಖರ್. ಕನ್ನಡ ಚಿತ್ರರಂಗದಲ್ಲಿ ಹತ್ತು ವರ್ಷಗಳಿಂದ ಸಕ್ರಿಯರಾಗಿರುವ ಚಂದ್ರಶೇಖರ್ ಅಭಿರುಚಿಯ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಎರಡ್ಮೂರು ವರ್ಷಗಳಿಂದಲೂ ತಯಾರಿ ನಡೆಸಿದ್ದರು. ಕಡೆಗೂ ‘ಹೀಗೊಂದು ದಿನ’ ಚಿತ್ರದ ಮೂಲಕ ಆ ಕನಸು ನನಸಾಗಿಸಿಕೊಂಡಿದ್ದಾರೆ. ನಿರ್ಮಾಪಕರೂ ಸೇರಿದಂತೆ ಇಡೀ ಚಿತ್ರ ತಂಡ ಟ್ರೈಲರ್‍ಗೆ ಸಿಕ್ಕ ವ್ಯಾಪಕ ಪ್ರತಿಕ್ರಿಯೆ ಕಂಡು ಖುಷಿಗೊಂಡಿದ್ದಾರೆ. ಯಾರೇ ಯಶಸ್ವೀ ಪುರುಷರ ಹಿಂದೆ ಒಬ್ಬಳು ಹೆಣ್ಣಿರುತ್ತಾಳೆಂಬುದು ಲೋಕ ರೂಢಿಯ ಮಾತು. ಯಶಸ್ವೀ ಪುರುಷರ ಹಿಂದಿರುವ ಇಂಥಾ ಹೆಣ್ಣಿನ ತ್ಯಾಗವನ್ನು, ಕಷ್ಟವನ್ನು ಯಾರೂ ಮುನ್ನೆಲೆಗೆ ತಂದು ಮಾತಾಡೋದಿಲ್ಲ. ಆದರೆ ಈ ಚಿತ್ರದಲ್ಲಿ ಅಂಥಾ ಹೆಣ್ಣಿನ ಸೂಕ್ಷ್ಮ ಸಂಗತಿಗಳನ್ನು ರೋಚಕವಾದ ತಿರುವುಗಳ ಮೂಲಕ, ಚೆಂದದ ಕಥಾ ಹಂದರದ ಮೂಲಕ ವಿವರಿಸಲಾಗಿದೆಯಂತೆ. ಇನ್ನುಳಿದಂತೆ ಈ ಚಿತ್ರದಲ್ಲಿ ಘಟಾನುಘಟಿಗಳಾದ ನಟ ನಟಿಯರೇ ಅಭಿನಯಿಸಿದ್ದಾರೆ. ಶೋಭರಾಜ್, ಪದ್ಮಜಾ ರಾವ್, ಮಿತ್ರಾ ಮುಂತಾದ ನಟ ನಟಿಯರ ದಂಡೇ ಈ ಚಿತ್ರದಲ್ಲಿದೆ. ಈಗಾಗಲೇ ಟ್ರೈಲರ್ ಕೂಡಾ ಚಿತ್ರದ ಬಗ್ಗೆ ಕೌತುಕ ಹುಟ್ಟಿಸುವಲ್ಲಿ ಯಶ ಕಂಡಿದೆ. ಈ ಚಿತ್ರವನ್ನು ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆಂಬುದಷ್ಟೇ ಸದ್ಯದ ಕುತೂಹಲ.

    ವಿಕಾಸ್ ಅವರ ಕಥೆಗೆ, ನಿರ್ದೇಶಕ ವಿಕ್ರಮ್ ಯೋಗಾನಂದ್ ಅವರೇ ಛಾಯಾಗ್ರಹಕರು, ಸಂಕಲನಕಾರರು ಹಾಗೂ ವಿಷುವಲ್ ಎಫ್ಫೆಕ್ಟ್ ಸಹ ನೀಡಿದ್ದಾರೆ, ಅಭಿಲಾಷ್ ಗುಪ್ತ ಸಂಗೀತ, ರಾಮಕೃಷ್ಣ ರಣಗಟ್ಟಿ ಗೀತ ಸಾಹಿತ್ಯ ನೀಡಿದ್ದಾರೆ.