Tag: Chandrayana 3

  • ಈಗ ಇಸ್ರೋದಿಂದ ಸೂರ್ಯನ ಅಧ್ಯಯನ – ಆದಿತ್ಯ ಉಡಾವಣೆಗೆ ಮುಹೂರ್ತ ಫಿಕ್ಸ್

    ಈಗ ಇಸ್ರೋದಿಂದ ಸೂರ್ಯನ ಅಧ್ಯಯನ – ಆದಿತ್ಯ ಉಡಾವಣೆಗೆ ಮುಹೂರ್ತ ಫಿಕ್ಸ್

    ನವದೆಹಲಿ : ಯಶಸ್ವಿ ಚಂದ್ರಯಾನದ (Chandrayana-3) ಬಳಿಕ ಸೂರ್ಯನ (Sun) ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಬೆಳಗ್ಗೆ11:50 ಕ್ಕೆ ಆದಿತ್ಯ L1 (Aditya L1) ಅನ್ನು ಉಡಾವಣೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ISRO) ಮಾಹಿತಿ ಹಂಚಿಕೊಂಡಿದ್ದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ ರಾಕೆಟ್ ಉಡಾವಣೆಯಾಗಲಿದೆ ಎಂದು ಹೇಳಿದೆ.

    ‘ಆದಿತ್ಯ-L1’ ಬಾಹ್ಯಾಕಾಶ ನೌಕೆಯನ್ನು ಎರಡು ವಾರಗಳ ಹಿಂದೆಯೇ ಶ್ರೀಹರಿಕೋಟಾಕ್ಕೆ ಕಳುಹಿಸಿ ಕೊಡಲಾಗಿದ್ದು ಅಂತಿಮ ಹಂತದ ತಯಾರಿಗಳು ನಡೆಯುತ್ತಿವೆ. ಆದಿತ್ಯ-L1 ಭೂಮಿಯಿಂದ ಸುಮಾರು 15 ಲಕ್ಷ ಕಿಲೋಮೀಟರ್ ದೂರ ಕ್ರಮಿಸಿ ಸೂರ್ಯನ ಹೊರಗಿನ ಪದರಗಳು (ಕರೊನಾ) ಮತ್ತು ಬೇರೆ ನಕ್ಷತ್ರಗಳ ಬಗ್ಗೆ ಅಧ್ಯಯನ ಮಾಡಲಿದೆ. ಇದಕ್ಕಾಗಿ ಬಾಹ್ಯಾಕಾಶ ನೌಕೆಯು ದ್ಯುತಿಗೋಳ, ವರ್ಣಗೋಳ (ಸೂರ್ಯನ ಗೋಚರ ಮೇಲ್ಮೈಗಿಂತ ಸ್ವಲ್ಪ ಮೇಲೆ) ಮತ್ತು ಸೂರ್ಯನ ಹೊರಗಿನ ಪದರವನ್ನು (ಕರೋನಾ) ವಿವಿಧ ತರಂಗ ಬ್ಯಾಂಡ್‌ಗಳಲ್ಲಿ ವೀಕ್ಷಿಸಲು ಸಹಾಯ ಮಾಡುವ ಏಳು ಪೇಲೋಡ್‌ಗಳನ್ನು ಒಯ್ಯುತ್ತದೆ. ಇದನ್ನೂ ಓದಿ: India VS Pakistan:ಎರಡೂ ದೇಶಗಳು ಯುರೋಪಿಯನ್ ದೇಶಗಳ ಮಟ್ಟಕ್ಕೆ ಬೆಳೆದಿರೋದು ಸಂತೋಷ ತಂದಿದೆ: ನೀರಜ್ ಚೋಪ್ರಾ

    ಹತ್ತಿರ ಹತ್ತಿರ 4 ತಿಂಗಳು ಆದಿತ್ಯ-ಎಲ್1 ಕ್ರಮಿಸಿದ ಬಳಿಕ ಡೇಟಾವನ್ನು ಇಸ್ರೋಗೆ ಕಳುಹಿಸಲಿದೆ.  ಆದಿತ್ಯ-ಎಲ್1 ರಾಷ್ಟ್ರೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಿದ್ದವಾಗಿರುವ ಸ್ವದೇಶಿ ಪ್ರಯತ್ನವಾಗಿದೆ. ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ ಪೇಲೋಡ್‌ನ ನಿರ್ಮಾಣದ ಪ್ರಮುಖ ಸಂಸ್ಥೆಯಾಗಿದೆ. ಪುಣೆಯ ಖಗೋಳವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಅಂತರ-ವಿಶ್ವವಿದ್ಯಾನಿಲಯ ಕೇಂದ್ರವೂ ಸೌರ ನೇರಳಾತೀತ ಇಮೇಜರ್ ಪೇಲೋಡ್ ಅನ್ನು ಮಿಷನ್ ಗಾಗಿ ಅಭಿವೃದ್ಧಿಪಡಿಸಿದೆ.

    ಕ್ರೋಮೋಸ್ಪಿಯರ್ ಕೀಗಳು ಮತ್ತು ಎಕ್ಸ್-ರೇ ಪೇಲೋಡ್‌ಗಳನ್ನು ಬಳಸಿಕೊಂಡು ಸೂರ್ಯನ ಜ್ವಾಲೆಗಳನ್ನು ಮೇಲ್ವಿಚಾರಣೆ ಮಾಡಿ ಮಾಹಿತಿಯನ್ನು ಒದಗಿಸುತ್ತದೆ. ಪಾರ್ಟಿಕಲ್ ಡಿಟೆಕ್ಟರ್ ಮತ್ತು ಮ್ಯಾಗ್ನೆಟೋಮೀಟರ್ ಪೇಲೋಡ್ ಚಾರ್ಜ್ಡ್ ಕಣಗಳು ಮತ್ತು L-1 ಸುತ್ತ ಹೊರಗಿನ ಕಕ್ಷೆಯನ್ನು ತಲುಪುವ ಕಾಂತಕ್ಷೇತ್ರದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಬಾಹ್ಯಾಕಾಶ ನೌಕೆಯನ್ನು ಸೂರ್ಯ-ಭೂಮಿಯ ಬಾಹ್ಯ ಕಕ್ಷೆಯಲ್ಲಿ ಇರಿಸಲು ಯೋಜಿಸಲಾಗಿದೆ.

    ಆದಿತ್ಯ L1 ಮಿಷನ್ ಸೂರ್ಯನನ್ನು ಮತ್ತು ನಮ್ಮ ಗ್ರಹದ ಮೇಲೆ ಅದರ ಪ್ರಭಾವವನ್ನು ಅರ್ಥಮಾಡಿಕೊಳ್ಳುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ನೌಕೆಯಿಂದ ಸಂಗ್ರಹಿಸಲಾದ ಡೇಟಾವು ಸೂರ್ಯನ ಡೈನಾಮಿಕ್ಸ್ ಮತ್ತು ಬಾಹ್ಯಾಕಾಶ ಹವಾಮಾನದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸಲಿದೆ.

    ಉಪಗ್ರಹ 1,500 ಕೆಜಿ (3,300 LB) ತೂಕ ಹೊಂದಿದೆ. ಈ ಉಪಗ್ರಹ ಹೊಂದಿರುವ ಪೇಲೋಡ್‌ಗಳು ಸೂರ್ಯನ ವಾತಾವರಣ ಮತ್ತು ಭೂಮಿಯ ಮೇಲೆ ಅದರ ಪರಿಣಾಮವನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ. ಈ ಪೇಲೋಡ್‌ಗಳು ಸೌರ ಬಿರುಗಾಳಿ ಮತ್ತು ಇತರ ಬಾಹ್ಯಾಕಾಶ ಹವಾಮಾನದ ಕುರಿತು ನಿಖರವಾದ ಮಾಹಿತಿ ನೀಡಿ, ನಮ್ಮ ಉಪಗ್ರಹಗಳು ಮತ್ತು ತಂತ್ರಜ್ಞಾನಗಳು ಹಾಳಾಗದಂತೆ ಕಾಪಾಡಲು ನೆರವಾಗುತ್ತವೆ. ಸೂರ್ಯನ ಅನ್ವೇಷಣೆ ಮಾಡಬೇಕಾದರೆ ಅಷ್ಟೆಲ್ಲಾ ತಾಪಮಾನವನ್ನ ಗ್ರಹಿಸಿ ಡೇಟಾ ಕಳುಹಿಸಬೇಕು ಅಂದರೆ ಉಪಗ್ರಹವೂ ಅಷ್ಟೇ ಸಾಮರ್ಥ್ಯ ಹೊಂದಿರಬೇಕಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಲ್ಯಾಂಡಿಂಗ್‌ಗೆ ಶುಭಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್

    ಚಂದ್ರಯಾನ-3 ಲ್ಯಾಂಡಿಂಗ್‌ಗೆ ಶುಭಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್

    ಚಂದ್ರಯಾನ-3 (Chandrayana 3) ಯಶಸ್ಸಿನ ಹೊಸ್ತಿಲಲ್ಲಿದೆ. ಇಂದು ಚಂದ್ರನ ಮೇಲೆ ಇಸ್ರೋದ ವಿಕ್ರಮ್ ಇಳಿಯಲಿದೆ. ಹೀಗಿರುವಾಗ ಇಸ್ರೋದ ಸಾಧನೆಯನ್ನು ಸ್ಯಾಂಡಲ್‌ವುಡ್ ಕಲಾವಿದರು ಕೊಂಡಾಡಿದ್ದಾರೆ. ಯಾರೆಲ್ಲಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಇಲ್ಲಿದೆ ಮಾಹಿತಿ.

    ಎಲ್ಲಾ ಭಾರತೀಯರಿಗೂ ಇದು ಹೆಮ್ಮೆಯ ಕ್ಷಣವಿದು. ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡ್ ಆಗುತ್ತಿದೆ. ನಾವೆಲ್ಲರೂ ಇದಕ್ಕೆ ಹೆಮ್ಮೆ ಪಡಬೇಕು. ಇಸ್ರೋ ಆಲ್ ದಿ ಬೆಸ್ಟ್ ಎಂದು ಶಿವಣ್ಣ (Shivarajkumar) ಶುಭಕೋರಿದ್ದಾರೆ.

    ಚಂದ್ರಯಾನ -3 ಬಗ್ಗೆ ಡಾಲಿ (Daali) ರಿಯಾಕ್ಟ್ ಮಾಡಿದ್ದಾರೆ. ನಮ್ಮ ವಿಜ್ಞಾನಿಗಳ ಎಲ್ಲ ಪರಿಶ್ರಮ ಸಾರ್ಥಕವಾಗುವ ಗಳಿಗೆ ಅದು. ನಮ್ಮ ಇಸ್ರೋ ವಿಜ್ಞಾನಿಗಳು ತುಂಬಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಅವರಿಗೆ ಧನ್ಯವಾದ ಇನ್ನೂ ಇಂತಹ ಅನೇಕ ಕೆಲಸಗಳು ಅವರಿಂದ ಆಗಲಿ. ಜಗತ್ತಿನಲ್ಲಿ ಎಲ್ಲವೂ ಒಂದೇ ಬಾರಿಗೆ ಸಕ್ಸಸ್ ಆಗಲ್ಲ. ಕೆಲವೊಮ್ಮೆ ವಿಫಲವಾಗುತ್ತೆ. ಹಾಗೆಯೇ ನಮ್ಮ ಇಸ್ರೋ ಚಂದ್ರಯಾನ 3 ಸಕ್ಸಸ್ ಆಗುತ್ತೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ:ನಾನು ಮದುವೆಗೂ ಮುನ್ನ ಗರ್ಭಿಣಿ ಆಗಿದ್ದೆ, ಆದಿಲ್ ಮೋಸ ಮಾಡಿದ: ನಟಿ ರಾಖಿ

    ಇಡೀ ಜಗತ್ತು ಕ್ರಿಯೆಟ್ ಆಗಿರೋದು ವಿಜ್ಞಾನದ ಮುಖಾಂತರ. ನಾನು ಸೈನ್ಸ್ ತುಂಬಾ ನಂಬುವವನು. ಇವತ್ತು ನಮ್ಮ ವಿಜ್ಞಾನಿಗಳು ತಯಾರಿಸುವಂತಹ ಉಪಗ್ರಹ ಉಡಾವಣೆ ಆಗೋದ್ರಲ್ಲಿದೆ. ನಾವೆಲ್ಲರೂ ಭಾರತೀಯರು ಹೆಮ್ಮೆ ಪಡುವಂತಹ ವಿಷಯವಿದು ಎಂದು ನೀನಾಸಂ ಸತೀಶ್ (Ninasum Satish) ಶುಭಹಾರೈಸಿದ್ದಾರೆ. ಇದನ್ನೂ ಓದಿ:Yash 19 ಸಿನಿಮಾ KVN ನಿರ್ಮಾಣ ಮಾಡ್ತಿದ್ಯಾ? ಇಲ್ಲಿದೆ ಸೀಕ್ರೆಟ್

    ನಟಿ, ರಾಜಕಾರಣಿ ಸುಮಲತಾ ಕೂಡ ಚಂದ್ರಯಾನ 3 ಬಗ್ಗೆ ಮಾತನಾಡಿದ್ದಾರೆ. ಚಂದ್ರನ ಮೇಲೆ ಚಂದ್ರಯಾನ 3 ಲ್ಯಾಂಡ್ ಆಗುತ್ತಿದೆ. ಶುಭ ಘಳಿಗೆ ನೋಡಲು 140 ಕೋಟಿ ಜನರು ಕಾಯ್ತಿದ್ದಾರೆ. ಚಂದ್ರಯಾನ 3 ಯಶಸ್ಸಾಗಲಿ ಭಾರತೀಯರಿಗೆ ಇಂದು ಹೆಮ್ಮೆಯ ಕ್ಷಣ. ತಂಡಕ್ಕೆ ಆಲ್ ದಿ ಬೆಸ್ಟ್ ಎಂದಿದ್ದಾರೆ.

    ಇಂದು ಸಂಜೆ ಚಂದ್ರಯಾನ 3 ಚಂದ್ರ ಮಂಡಲದ ಮೇಲೆ ಲ್ಯಾಂಡ್ ಆಗುತ್ತೆ. ಆ ಲ್ಯಾಂಡಿಂಗ್ ಯಶಸ್ವಿಯಾಗಲಿ. ಆಲ್ ದಿ ಬೆಸ್ಟ್ ಇಸ್ರೋ ಎಂದು ರಮೇಶ್ ಅರವಿಂದ್ (Ramesh Aravind) ವಿಶ್ ಮಾಡಿದ್ದಾರೆ.

    ಇವತ್ತು ತುಂಬಾನೇ ವಿಶೇಷವಾಗಿರುವ ದಿನ, ನನ್ನ ಸಿನಿಮಾ ಲಾಂಚ್ ಆಗುತ್ತಿದೆ. ಜೊತೆಗೆ ಇವತ್ತು ಇಡೀ ದೇಶ ಹೆಮ್ಮೆ ಪಡುವಂತಹ ದಿನ ಅಂತಾ ಹೇಳಬಹುದು. ಚಂದ್ರಯಾನ 3 ಸಕ್ಸಸ್‌ಫುಲ್ ಆಗುವಂತಹ ದಿನ. ನನ್ನ ಕಡೆಯಿಂದ ಆಲ್ ದಿ ಬೆಸ್ಟ್ ಹೇಳ್ತೀನಿ ಎಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ(Roopesh Shetty) ಹೇಳಿದ್ದಾರೆ.

    ಭಾರತ ದೇಶದಲ್ಲಿ ಇವತ್ತು ಖುಷಿ ಪಡುವಂತಹ, ಜಗತ್ತೇ ನಮ್ಮನ್ನ ಮೆಚ್ಚಿಕೊಳ್ಳುವಂತಹ ಚಂದ್ರಯಾನ 3 ಯಶಸ್ವಿಯಾಗಿ ಪೂರೈಸುತ್ತಾರೆ ಎಂಬ ನಂಬಿಕೆಯಿದೆ. ನಾವು ಚಿಕ್ಕವರು ಇರುವಾಗ ಚಂದಮಾಮನನ್ನ ತೋರಿಸಿ ಊಟ ಮಾಡಿಸುತ್ತಾ ಇದ್ದರು. ಈಗ ಚಂದ್ರನಲ್ಲಿ ಏನೇನಿದೆ ಎಂಬ ಕುತೂಹಲವನ್ನ ತೋರಿಸುತ್ತಾ ಹೋದರು. ಭಾರತ 4ನೇ ರಾಷ್ಟ್ರವಾಗಿದ್ರು. ಚಂದ್ರನ ದಕ್ಷಿಣ ಭಾಗಕ್ಕೆ ಹೋಗುತ್ತಿರುವ ಮೊದಲ ರಾಷ್ಟ್ರವಾಗಿದೆ. ಇಸ್ರೋಗೆ ಶುಭವಾಗಲಿ ಎಂದು ನಟಿ ತಾರಾ ಹಾರೈಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಕಾಯುತ್ತಿದ್ದೇನೆ- ಕರೀನಾ ಕಪೂರ್

    ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಕಾಯುತ್ತಿದ್ದೇನೆ- ಕರೀನಾ ಕಪೂರ್

    ಚಂದ್ರಯಾನ- 3 (Chandrayaan-3)  ಆಗಸ್ಟ್ 23ರಂದು ಲ್ಯಾಂಡ್ ಆಗುತ್ತಿದೆ. ಇಡೀ ದೇಶವೇ ಈ ಕ್ಷಣಕ್ಕಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ. ಎಲ್ಲಾ ಭಾರತೀಯರಿಗೆ ಹೆಮ್ಮೆಯ ಕ್ಷಣ ಎಂದು ಚಂದ್ರಯಾನ ಬಗ್ಗೆ ನಟಿ ಕರೀನಾ ಕಪೂರ್ (Kareena Kapoor)  ಮಾತನಾಡಿದ್ದಾರೆ. ಇದನ್ನೂ ಓದಿ:ಮೀನು ತಿನ್ನಿ, ನಿಮ್ಮ ಕಣ್ಣು ಐಶ್ವರ್ಯಾ ರೈ ರೀತಿ ಕಾಣುತ್ತದೆ- ಸಚಿವ ವಿಜಯ್ ಕುಮಾರ್ ಗವಿತ್

    ಇಸ್ರೋ ಚಂದ್ರನ ಮೇಲೆ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಿದ್ಧತೆ ನಡೆಯುತ್ತಿದೆ. ಸಾಮಾನ್ಯರಿಂದ ಹಿಡಿದು ಅನೇಕ ಸಿನಿ ತಾರೆಯರು ಕೂಡ ಇಸ್ರೋ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಈ ಬಗ್ಗೆ ಕರೀನಾ ಕಪೂರ್ ಕೂಡ ರಿಯಾಕ್ಟ್ ಮಾಡಿ, ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಕಾಯುತ್ತಿದ್ದೇನೆ. ಎಲ್ಲಾ ಭಾರತೀಯರಿಗೆ ಇದು ಹೆಮ್ಮೆಯ ಕ್ಷಣವಾಗಿದೆ. ನಾನು ಮಕ್ಕಳ ಜೊತೆ ಕುಳಿತು ನೋಡುವೆ ಎಂದು ಮಾತನಾಡಿದ್ದಾರೆ.

    ನಟಿ ಕರೀನಾ ಕಪೂರ್ ಹಾಡಿ ಹೊಗಳಿದ್ರೆ, ಪ್ರಕಾಶ್ ರಾಜ್ (Prakash Raj) ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅವರ ಪೋಸ್ಟ್ ಕೂಡ ಸಂಚಲನ ಸೃಷ್ಟಿಸಿದೆ. ಚಂದ್ರಯಾನ ಕುರಿತಂತೆ ಟ್ವೀಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ಚಾಯ್ ವಾಲಾ ಫೋಟೋ ಹಾಕಿದ್ದಾರೆ. ಅವರ ಈ ವರ್ತನೆಗೆ ಅನೇಕರು ಕಿಡಿಕಾರಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂದಿನ ವರ್ಷ ಇಸ್ರೋದಿಂದ ಚಂದ್ರಯಾನ-3

    ಮುಂದಿನ ವರ್ಷ ಇಸ್ರೋದಿಂದ ಚಂದ್ರಯಾನ-3

    ನವದೆಹಲಿ: 2021ರಲ್ಲಿ ಮೊದಲ ಆರು ತಿಂಗಳಲ್ಲಿಯೇ ಇಸ್ರೋ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸುಳಿವು ನೀಡಿದ್ದಾರೆ. ಚಂದ್ರಯಾನ-2 ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-3ಕ್ಕೆ ಇಸ್ರೋ ಸಿದ್ಧತೆ ನಡೆಸಿಕೊಂಡಿದೆ.

    ಚಂದ್ರಯಾನ-2ರಿಂದ ಕಲಿತ ಪಾಠದಿಂದ ಚಂದ್ರಯಾನ-3ನ್ನು ಸಿದ್ಧಗೊಳಿಸಲಾಗುತ್ತಿದೆ. 2021ರ ಮೊದಲ ಆರು ತಿಂಗಳಲ್ಲಿ ಚಂದ್ರಯಾನ-3 ನಭಕ್ಕೆ ಚಿಮ್ಮುವ ಸಾಧ್ಯತೆಗಳಿವೆ. ಚಂದ್ರಯಾನ-2 ಅಸಫಲತೆಯಲ್ಲಿ ಕಲಿತ ಹಲವು ಪಾಠಗಳಿಂದ ಚಂದ್ರಯಾನ-3 ಡಿಸೈನ್ ಮಾಡಲಾಗ್ತಿದೆ. ಕ್ಷಮತೆ, ತಂತ್ರಜ್ಞಾನ, ಸಂಪರ್ಕ ಸಾಧಕ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಚಂದ್ರಯಾನ-3 ಹೊಂದಲಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

    ಇದೇ ವೇಳೆ ಗಗನಯಾನದ ಬಗ್ಗೆಯೂ ಮಾಹಿತಿ ನೀಡಿರುವ ಜಿತೇಂದ್ರ ಸಿಂಗ್, ಮಾನವ ಸಹಿತ ಗಗನಯಾನ ಯೋಜನೆಗಾಗಿ ಕೆಲಸ ಆರಂಭಗೊಂಡಿದೆ. ಮೈಕ್ರೋಗ್ರೆವಿಟಿ ಹೊಂದಿದ 4 ಬಯೋಲಾಜಿಕಲ್ ಮತ್ತು 2 ಫಿಜಿಕಲ್ ಸೈನ್ಸ್ ಪ್ರಯೋಗ ಮಾಡಲಾಗುತ್ತಿದೆ. ನಾಲ್ವರು ಅಂತರಿಕ್ಷ ಯಾತ್ರಿಗಳಿಗೆ ಸ್ಪೇಸ್ ಫೈಲಟ್ ತರಬೇತಿ ಸಹ ಆರಂಭಗೊಂಡಿರುವ ಕುರಿತು ಮಾಹಿತಿ ನೀಡಿದರು.