Tag: Chandu

  • ದರ್ಶನ್ ಫ್ಯಾಮಿಲಿ ಕುಡಿ ಶೀಘ್ರದಲ್ಲೇ ಹೀರೋ ಆಗಿ ಎಂಟ್ರಿ?

    ದರ್ಶನ್ ಫ್ಯಾಮಿಲಿ ಕುಡಿ ಶೀಘ್ರದಲ್ಲೇ ಹೀರೋ ಆಗಿ ಎಂಟ್ರಿ?

    ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟರಾಗಿದ್ದ ತೂಗುದೀಪ ಶ್ರೀನಿವಾಸ್ ಅವರ ಬಳಿಕ ಅವರ ಮಕ್ಕಳಿಬ್ಬರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಹಿರಿಯ ಮಗ ದರ್ಶನ್ (Darshan) ಖ್ಯಾತ ನಟನಾಗಿದ್ರೆ, ಕಿರಿಯ ಮಗ ದಿನಕರ್ ಖ್ಯಾತ ನಿರ್ದೇಶಕನಾಗಿ ಗುರುತಿಸಿಕೊಂಡರು. ಇದೀಗ ತೂಗುದೀಪ ಶ್ರೀನಿವಾಸ್‌ (Thoogudeepa Srinivas) ಮೊಮ್ಮಗ ಅಂದರೆ ಮಗಳ ಮಗ ಚಂದು (Chandu) ಅಲಿಯಾಸ್ ಚಂದ್ರಕುಮಾರ್ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಡಲು ವೇದಿಕೆ ರೆಡಿಯಾಗಿದೆ. ದರ್ಶನ್, ಸೋದರಳಿಯನನ್ನು ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಅಂದಹಾಗೆ ಚಂದು ಈಗಾಗ್ಲೇ ಪರಿಚಯವಿರುವ ಮುಖ. ಯಾಕಂದ್ರೆ ಹಲವು ವರ್ಷಗಳಿಂದ ಸೋದರಮಾವ ದರ್ಶನ್ ಅವರ ಜೊತೆಯಲ್ಲೇ ಚಂದು ಇದ್ದರು. ಈಗಲೂ ಇದ್ದಾರೆ. ಇದೇ ಚಂದು, ಕಾಟೇರ ಸಿನಿಮಾದಲ್ಲಿ ಕಾಟೇರನ ಬಾಲ್ಯದ ಪಾತ್ರಕ್ಕಾಗಿ ಬಣ್ಣ ಹಚ್ಚಿದ್ರು. ಬಹಳ ವರ್ಷಗಳಿಂದ ಚಂದು ಸಿನಿಮಾ ಜಗತ್ತಿಗೆ ಎಂಟ್ರಿ ಕೊಡಲು ಸಿದ್ಧರಾಗಿದ್ದು, ತೆರೆಯ ಹಿಂದಿನ ಕಾರ್ಯಗಳನ್ನ ಮಾವನ ಸಿನಿಮಾಗಳಿಂದ ನೋಡುತ್ತಲೇ ಬಂದಿದ್ದಾರೆ. ಇದೀಗ ದರ್ಶನ್ ಅಕ್ಕನ ಮಗ ಚಂದು ಹೀರೋ ಆಗಿ ಎಂಟ್ರಿ ಕೊಡಲು ಸಿದ್ಧರಾಗಿದ್ದು, ಆ ಚಿತ್ರ ಇದೇ ಬರುವ ಶ್ರಾವಣ ಮಾಸಕ್ಕೆ ಆರಂಭವಾಗುತ್ತೆ ಎನ್ನಲಾಗುತ್ತಿದೆ. ಇದನ್ನೂ ಓದಿ: `ಎಕ್ಕ’ ಸಿನಿಮಾ ರಿಲೀಸ್‌ಗೆ ದಿನಗಣನೆ – ಮಂತ್ರಾಲಯ ರಾಯರ ದರ್ಶನ ಪಡೆದ ಯುವ ರಾಜ್‌ಕುಮಾರ್

    ನೋಟದಲ್ಲಿ ದರ್ಶನ್‌ರನ್ನೇ ಹೋಲುವ ದಚ್ಚು ಅಕ್ಕನ ಮಗ ಚಂದು, ಹೀರೋ ಆಗಿ ಎಂಟ್ರಿ ಕೊಡಲು ಏನ್ ಬೇಕೋ ಅದೆಲ್ಲ ಸಿದ್ಧತೆಯನ್ನು ಹಲವು ವರ್ಷಗಳಿಂದ ಮಾಡ್ಕೊಂಡೇ ಬಂದಿದ್ದಾರೆ. ಇದನ್ನೂ ಓದಿ: ಒಳ ಉಡುಪು ಕಾಣುವಂತ ಉಡುಗೆಯಲ್ಲಿ ದೇಹಸಿರಿ ತೋರಿಸಿದ ಉರ್ಫಿ – ಪಡ್ಡೆಗಳು ಕಂಗಾಲು

    ಇದೇ ಚಂದು, ದರ್ಶನ್ ಅಭಿನಯಿಸುತ್ತಿರುವ ಡೆವಿಲ್ (Devil) ಸಿನಿಮಾದಲ್ಲೂ ಚಂದು ಪುಟ್ಟ ಪಾತ್ರ ಮಾಡಬೇಕಿತ್ತು. ಆದರೆ ಅಭಿಮಾನಿಗಳ ಅತಿರೇಕ ವರ್ತನೆಯಿಂದ ಚಂದು ಅವರನ್ನು ಸಿನಿಮಾದಿಂದ ಕೈ ಬಿಟ್ಟಿದ್ದಾಗಿ ಖುದ್ದು ದರ್ಶನ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮುಖಾಂತರ ಹೇಳಿಕೊಂಡಿದ್ದರು. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

    ಇದೀಗ ದರ್ಶನ್ ತಮ್ಮ ಸಹೋದರಿಯ ಪುತ್ರನ ಕನಸು ನನಸು ಮಾಡುತ್ತಿದ್ದಾರೆ. ತಮ್ಮದೇ ಬ್ಯಾನರ್ ಮೂಲಕವೇ ಚಂದುವನ್ನ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರಂತೆ. ನಿರ್ದೇಶನ ಯಾರದ್ದು ಸೇರಿದಂತೆ ಇನ್ನಿತರ ವಿಚಾರಗಳು ಒಂದೊಂದಾಗೇ ರಿವೀಲ್ ಆಗಬೇಕಿದೆ.

  • ಅಟೆಂಪ್ಟ್ ಟು ಮರ್ಡರ್ ಹವಾ ಜೋರು!

    ಅಟೆಂಪ್ಟ್ ಟು ಮರ್ಡರ್ ಹವಾ ಜೋರು!

    ಬೆಂಗಳೂರು: ಕನ್ನಡದಲ್ಲಿ ಸತ್ಯಕಥೆಗಳನ್ನಾಧರಿಸಿದ ಸಿನಿಮಾಗಳು ಆಗಾಗ ತೆರೆ ಕಾಣುತ್ತಿರುತ್ತವೆ. ಇದೀಗ ಅದೇ ಸಾಲಿನಲ್ಲಿ ಸೇರ್ಪಡೆಯಾಗುವ ಎಟಿಎಂ (ಅಟೆಂಪ್ಟ್ ಟು ಮರ್ಡರ್) ಚಿತ್ರ ಬಿಡುಗಡೆಯಾಗುವ ಸನ್ನಾಹದಲ್ಲಿದೆ.

    ಅಮರ್ ನಿರ್ದೇಶನದ ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ಜನರನ್ನು ಸೆಳೆದಿವೆ. ಈಗಾಗಲೇ ರವಿ ದೇವ್ ಸಂಗೀತ ನಿರ್ದೇಶನದ ಮೂರು ಹಾಡುಗಳು ಟ್ರೆಂಡ್ ಸೆಟ್ ಮಾಡಿವೆ. ಅಂದಹಾಗೆ ಈ ಕಥೆಯಲ್ಲಿ ವಿಲನ್ ಪಾತ್ರದತ್ತಲೇ ಫೋಕಸ್ ಇರೋದರಿಂದ ವಿಲನ್ ಎಂಟ್ರಿಗೆಂದೇ ವಿಶೇಷವಾದೊಂದು ಹಾಡು ಮಾಡಲಾಗಿದೆಯಂತೆ. ಅದೂ ಕೂಡಾ ಜನರಿಗಿಷ್ಟವಾಗಿದೆ. ಆನಂದ್ ಆಡಿಯೋ ಹೊರ ತಂದಿರೋ ಈ ಹಾಡುಗಳೇ ಚಿತ್ರದ ಬಗ್ಗೆ ಪ್ರೇಕ್ಷಕರನ್ನು ಕಾತರರನ್ನಾಗಿಸುವಲ್ಲಿ ಯಶಸ್ವಿಯಾಗಿವೆ.

    ಇದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯೊಂದನ್ನು ಆಧರಿಸಿದ ಚಿತ್ರ. ಕಾಪೋರೇಷನ್ ವೃತ್ತದಲ್ಲಿ ಎಟಿಎಂ ಒಂದರಲ್ಲಿ ಮಹಿಳೆಯ ಮೇಲೆ ಮಾರಣಾಂತಿಕವಾದ ಹಲ್ಲೆ ನಡೆದಿತ್ತಲ್ಲಾ? ಅದೇ ಘಟನೆಯನ್ನಾಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಕಮರ್ಷಿಯಲ್ ಅಂಶಗಳಾಚೆಗೆ ಈ ಚಿತ್ರವನ್ನು ಭಿನ್ನ ಬಗೆಯಲ್ಲಿ ರೂಪಿಸಲಾಗಿದೆಯಂತೆ.

    ಸದ್ಯ ಬಿಡುಗಡೆಯ ಸರದಿಯಲ್ಲಿ ನಿಂತಿರುವ ಚಿತ್ರಗಳಲ್ಲಿ ಅಟೆಂಪ್ಟ್ ಟು ಮರ್ಡರ್ (ಎಟಿಎಂ) ಪ್ರೇಕ್ಷಕರ ಗಮನ ಸೆಳೆದಿರುವ ಚಿತ್ರವಾಗಿ ಮುಖ್ಯವಾಗಿದೆ. ಬೆಂಗಳೂರಿನಲ್ಲಿ ವರ್ಷಾಂತರಗಳ ಹಿಂದೆ ನಡೆದು ದೇಶವನ್ನೇ ಬೆಚ್ಚಿಬೀಳಿಸಿದ್ದ ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರದ ಕಥೆ ಹೆಣೆಯಲಾಗಿದೆ ಅಂತ ನಿರ್ದೇಶಕ ಅಮರ್ ಆರಂಭದಲ್ಲಿ ಹೇಳಿಕೊಂಡಿದ್ದರು. ಹಾಗಾದರೆ ಅದು ಎಟಿಎಂಗೆ ನುಗ್ಗಿದ ದುಷ್ಕರ್ಮಿ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣವಾ? ಎಂಬ ಪ್ರಶ್ನೆ ಕಾಡೋದು ಸಹಜ. ಆದರೆ ಈ ವಿಚಾರದ ನಿಗೂಢವನ್ನು ಈವರೆಗೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಒಂದು ವೇಳೆ ಅದೇ ಘಟನೆಯೇ ಆಗಿದ್ದರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಚಿತ್ರ ಮೂಡಿ ಬಂದಿದೆ ಎಂಬುದು ಚಿತ್ರತಂಡದ ಭರವಸೆ.

    ಇದು ಒಂದು ಕ್ರೈಂ ಓರಿಯಂಟೆಡ್ ಚಿತ್ರ ಎಂಬಂತೆ ಕಂಡರೂ ಈ ಚಿತ್ರದಲ್ಲೆಲ್ಲೂ ಕೊಲೆಗಳನ್ನು ವೈಭವೀಕರಿಸಿಲ್ಲವಂತೆ. ಅಸಲಿಗೆ ಕೊಲೆ ನಡೆಯುತ್ತದಾ ಎಂಬುದನ್ನೇ ಚಿತ್ರ ತಂಡ ಸಸ್ಪೆನ್ಸ್ ಆಗಿಟ್ಟಿದೆ. ಈ ನೈಜ ಘಟನೆಗೆ ಸಿನಿಮಾ ಟಚ್ ನೀಡಿರೋ ನಿರ್ದೇಶಕರು ಅದರ ಜೊತೆಗೆ ನವಿರಾದೊಂದು ಪ್ರೇಮ ಕಥೆಯನ್ನೂ ಹೇಳಿದ್ದಾರಂತೆ. ಈ ಕಾರಣದಿಂದಲೇ ಈ ಚಿತ್ರ ವಿಶೇಷವಾಗಿ ಮೂಡಿ ಬಂದಿದೆ ಎಂಬುದು ನಿರ್ದೇಶಕರ ಅಭಿಪ್ರಾಯ. ಇನ್ನುಳಿದಂತೆ ವಿನಯ್ ಈ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಾಯಕ ನಟನಾಗಬೇಕೆಂಬ ಕನಸು ಹೊತ್ತು ಆ ನಿಟ್ಟಿನಲ್ಲಿ ವರ್ಷಾಂತರಗಳ ಕಾಲ ಶ್ರಮ ವಹಿಸಿರುವ ವಿನಯ್ ಎಟಿಎಂ ಚಿತ್ರದ ಮೂಲಕ ಅದು ಕೈಗೂಡಿದ ಖುಷಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಬಹು ಮುಖ್ಯವಾದ ಪಾತ್ರದಲ್ಲಿ ನಟಿಸಿರುವ ಧನ್ಯತೆ ವಿನಯ್ ಅವರಲ್ಲಿದೆ. ಈ ಚಿತ್ರದ ಮತ್ತೋರ್ವ ನಟ ಚಂದು ಗೌಡ. ಪ್ರಸ್ತುತ ಲಕ್ಷ್ಮೀಬಾರಮ್ಮ ಸೀರಿಯಲ್ ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿರುವ ಇವರ ಪಾತ್ರದ ಹೆಸರೂ ಚಂದು. ಈ ಪಾತ್ರದ ಮೂಲಕವೇ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿರೋ ಇವರು ಎರಡು ವರ್ಷಗಳಿಂದ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಇವರಿಗಿಲ್ಲಿ ಶೋಭಿತಾ ಎಂಬಾಕೆ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಐಟಿ ಕಂಪೆನಿ ಹುಡುಗಿಯಾಗಿ ನಟಿಸಿರೋ ಶೋಭಿತಾಗೂ ಇದು ಮೊದಲ ಚಿತ್ರ.