ಬೆಂಗಳೂರು: ಇನ್ಮುಂದೆ ಪೊಲೀಸ್ ಪೇದೆಗಳ ಟೋಪಿ ಬದಲಾವಣೆಯಾಗುತ್ತಿದ್ದು, ಇನ್ಸ್ಪಕ್ಟರ್ ಗಳಿಗಿದ್ದ ಕ್ಯಾಪ್ ಮಾದರಿಯಲ್ಲಿ ಟೋಪಿ ಕೊಡಲಾಗುತ್ತಿದೆ.
ಈ ಹಿಂದೆ ಇದ್ದ ಕ್ಯಾಪ್ಗಳು ಆರೋಗ್ಯಕರವಾಗಿರಲಿಲ್ಲ. ಅಷ್ಟೇ ಅಲ್ಲದೇ ಕ್ಯಾಪ್ಗಳು ಹೆಚ್ಚಿನ ತೂಕ ಇತ್ತು. ಇದರಿಂದಾಗಿ ಕುತ್ತಿಗೆ ನೋವು, ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಹಾಗಾಗಿ ಗೃಹ ಇಲಾಖೆ ಬದಲಾವಣೆ ಮಾಡುವಂತೆ ಮನವಿ ಮಾಡಿಕೊಂಡಿತ್ತು. ಇದನ್ನು ಓದಿ: ಮಹಿಳಾ ಪೊಲೀಸರ ಖಾಕಿ ಸೀರೆ, ಸಲ್ವಾರ್ ಯೂನಿಫಾರ್ಮ್ ಗೆ ಬ್ರೇಕ್!
ಇದಕ್ಕೆ ಸರ್ಕಾರ ಒಪ್ಪಿದರೆ ಎಲ್ಲಾ ಪೊಲೀಸರಿಗೆ ಟೋಪಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಡಿಜಿ ಐಜಿಪಿ ಕಚೇರಿಯಲ್ಲಿ ಟೋಪಿಯನ್ನು ತೊಟ್ಟು ಬದಲಾವಣೆ ಪ್ರಯೋಗವನ್ನು ನಡೆಸಿದರು. ಇದನ್ನು ಓದಿ:ಡೊಳ್ಳು ಹೊಟ್ಟೆ ಬೆಳೆಸಿಕೊಂಡಿರುವ ಪೊಲೀಸರೇ ಎಚ್ಚರ!
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಚಾರ್ಜ್ ಹಾಗೂ ಕೆಲ ಶಾಸಕರು ಹಳೆ ನೋಟುಗಳ ಬದಲಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಒನ್ ಕೇಂದ್ರದ ಮೂಲಕ 2016 ನವೆಂಬರ್ ನಿಂದ 141 ದಿನಗಳಲ್ಲಿ 500 ಹಾಗೂ ಒಂದು ಸಾವಿರ ಮುಖ ಬಲೆಯ 410 ಕೋಟಿ ರೂ. ಹಳೆ ನೋಟುಗಳನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ, ಡಿ.ಕೆ.ಜಾರ್ಜ್ ಹಾಗೂ ಶಾಸಕರು ಭಾಗಿಯಾಗಿದ್ದಾರೆ ಎಂದು ಲೋಕಾಯುಕ್ತ, ಎಸಿಬಿ, ಜಾರಿ ನಿರ್ದೇಶನಾಲಯಕ್ಕೆ ರಮೇಶ್ ಅವರು ದೂರು ನೀಡಿದ್ದಾರೆ.
235 ಪುಟಗಳ ದಾಖಲೆ ಬಿಡುಗಡೆ ಮಾಡಿದ ಎನ್.ಆರ್.ರಮೇಶ್ ಅವರು, ಬೆಂಗಳೂರು ಒನ್ನಲ್ಲಿ 96 ವಿವಿಧ ಇಲಾಖೆಗಳ ಸೇವೆ ಮತ್ತು ಹಣ ಪಾವತಿ ವ್ಯವಸ್ಥೆ ಇದೆ. ಹೀಗಾಗಿ ಅಲ್ಲಿ ಪಾವತಿಯಾಗುತ್ತಿದ್ದ ಹಣವನ್ನು ತಾವು ಪಡೆದು, ನಿಷೇಧಗೊಂಡಿರುವ ನೋಟುಗಳನ್ನು ಅದರಲ್ಲಿ ಸೇರಿಸುವ ಮೂಲಕ ನೂರಾರು ಕೋಟಿ ಹಗರಣ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಚಾಮರಾಜನಗರ: ಮಕ್ಕಳು ಪಠ್ಯಪುಸ್ತಕ ನೋಡಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯನ್ನು ಜಾರಿಗೆ ತರುವ ಯೋಚನೆ ರೂಪಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಶಿಕ್ಷಕರಿಗೆ ಹೇಳಿದ್ದಾರೆ.
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸದ್ಯದ ಪ್ರಾಥಮಿಕ ಶಿಕ್ಷಣದ ಪರೀಕ್ಷಾ ಪದ್ಧತಿ (ಕ್ಲೋಸ್ಡ್ ಬುಕ್ ಎಕ್ಸಾಮ್) ಅವೈಜ್ಞಾನಿವಾಗಿದೆ. ಹೀಗಾಗಿ ಮಕ್ಕಳು ನೇರವಾಗಿ ಪುಸ್ತಕ ತೆರೆದು ಪರೀಕ್ಷೆ ಬರೆಯುವ ಪದ್ಧತಿ (ಓಪನ್ ಬುಕ್ ಎಕ್ಸಾಮ್) ಜಾರಿಗೆ ತರಬೇಕಾಗಿದೆ ಎಂದು ಅವರು ಹೇಳಿದರು.
ನನ್ನ ಹೊಸ ಯೋಜನೆಗಳಿಗೆ ಶಿಕ್ಷಕರು ಬದಲಾಗಬೇಕೇ ಹೊರತು ವಿದ್ಯಾರ್ಥಿಗಳಲ್ಲ. ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳೇ ಕೇಂದ್ರ ಬಿಂದು, ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ಶಿಕ್ಷಕರಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೀಗಾಗಿ ಈ ವ್ಯವಸ್ಥೆಯನ್ನು ಬದಲಾಯಿಸುತ್ತೇನೆ ಎಂದು ಭರವಸೆ ನೀಡಿದರು.
ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇಟ್ಟಿರುತ್ತಾರೆ, ವಿದ್ಯಾರ್ಥಿಗಳು ಅತ್ತ ಇತ್ತ ನೋಡುವಂತಿಲ್ಲ ಎನ್ನುವ ನಿಬಂಧನೆ ಮಕ್ಕಳ ಮೇಲೆ ಹೇರಲಾಗುತ್ತಿದೆ. ವಿದ್ಯಾರ್ಥಿಗಳು ಕ್ರಿಮಿನಲ್ಗಳಲ್ಲ. ಹೀಗಾಗಿ ಶಿಕ್ಷಣ ವ್ಯವಸ್ಥೆ ಹಾಗೂ ಪರೀಕ್ಷಾ ವಿಧಾನ ಬದಲಾವಣೆಗೆ ಶಿಕ್ಷಣ ತಜ್ಞರು ಮತ್ತು ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದರು.
ಪರೀಕ್ಷೆಯಲ್ಲಿ ಪುಸ್ತಕ ನೋಡದೆ ಬರೆದವರು ಬುದ್ಧಿವಂತರು, ಉಳಿದವರು ದಡ್ಡರು ಎನ್ನುವ ಧೋರಣೆ ಸರಿಯಲ್ಲ. ಪಾಠ ಮಾಡಿದ ಬಳಿಕ ಮಕ್ಕಳಿಗೆ ಪ್ರಶ್ನೆಗಳಿಗೆ ಉತ್ತರ ಬರೆಯುವಂತೆ ಹೇಳಬಾರದು. ಶಿಕ್ಷಕರೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಮಕ್ಕಳಿಗೆ ನೀಡಿ, ಪುಸ್ತಕ ನೋಡಿ ಉತ್ತರ ಬರೆಯುವಂತೆ ಸಲಹೆ ನೀಡಬೇಕು. ಆಗಲೂ ಉತ್ತರ ಬರೆಯಲು ಸಾಧ್ಯವಾಗದ ಮಕ್ಕಳಿಗೆ ಪಕ್ಕದ ಸಹಪಾಠಿಯನ್ನು ಕೇಳಿ ಉತ್ತರ ಬರೆಯುಂತೆ ತಿಳಿಸಬೇಕು. ಈ ವಿಧಾನದಿಂದ ಮಕ್ಕಳಲ್ಲಿರುವ ಪರೀಕ್ಷಾ ಭಯ ದೂರವಾಗುವುದರ ಜೊತೆಗೆ ಸೃಜನಶೀಲತೆ ಹೆಚ್ಚಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಇಂದು ಇಂಗ್ಲಿಷ್ ಸಂವಹನ ಅಗತ್ಯವಾಗಿದೆ. ಹೀಗಾಗಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಇಂಗ್ಲಿಷ್ ಕಲಿಕೆಯಾಗಬೇಕು. ಕನ್ನಡದ ಜೊತೆಗೆ ಇಂಗ್ಲಿಷ್ ಶಿಕ್ಷಣವನ್ನು ಹೇಗೆ ನೀಡಬಹುದು ಎನ್ನುವ ಕುರಿತು ಶಿಕ್ಷಣ ತಜ್ಞರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಸಚಿವರು ಹೇಳಿದರು.
ಮೊಬೈಲ್ಗಳನ್ನು ಮುಖ್ಯಶಿಕ್ಷಕರ ಕೊಠಡಿಯಲ್ಲಿ ಇಟ್ಟು ತರಗತಿಗೆ ಹೋಗಬೇಕು. ಕೇವಲ ಶಿಕ್ಷಕರಷ್ಟೇ ಅಲ್ಲ ಮಕ್ಕಳು ಕೂಡಾ ನಿಯಮ ಪಾಲಿಸಬೇಕು. ತರಗತಿಯಲ್ಲಿ ಮೊಬೈಲ್ನಿಂದ ಕಿರಿಕಿರಿ ಉಂಟಾಗುತ್ತದೆ ಎನ್ನುವ ಉದ್ದೇಶ ಅಷ್ಟೇ. ನಾನೇನು ಮೊಬೈಲ್ ವಿರೋಧಿಯಲ್ಲ. ಯಾವ ಸಮಯದಲ್ಲಿ ಬೇಕಾದರು ನಾನು ಶಾಲೆಗೆ ಭೇಟಿ ನೀಡಬಹುದು ಎಂದು ಶಿಕ್ಷಕರಿಗೆ ಎಚ್ಚರಿಕೆ ನೀಡಿದರು.