Tag: Channapatna

  • ಯೋಗೇಶ್ವರ್‌ಗೆ ಗೆಲುವು – ಮದ್ದೂರಿನ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿಪಿವೈ ಪತ್ನಿ

    ಯೋಗೇಶ್ವರ್‌ಗೆ ಗೆಲುವು – ಮದ್ದೂರಿನ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿಪಿವೈ ಪತ್ನಿ

    – ಚನ್ನಪಟ್ಟಣದ ಮನೆ ಮಗನನ್ನ ಗೆಲ್ಲಿಸಿದ್ದಾರೆ ಎಂದ ಶೀಲಾ ಯೋಗೇಶ್ವರ್‌

    ಮಂಡ್ಯ: ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ‌ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿ.ಪಿ ಯೋಗೇಶ್ವರ್‌ (CP Yogeshwar) ಪತ್ನಿ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

    ಚುನಾವಣೆ ಪೂರ್ವದಲ್ಲೇ ದೇಗುಲಕ್ಕೆ ಭೇಟಿ ನೀಡಿದ್ದ ಕುಟುಂಬ ಸಿಪಿವೈ ಗೆಲುವಿಗಾಗಿ ಹರಕೆ ಕಟ್ಟಿಕೊಂಡಿತ್ತು. ಅದರಂತೆ ದೇವಸ್ಥಾನಕ್ಕೆ ಬಂದು ಹೊಳೆ ಆಂಜನೇಯನಿಗೆ ಒಂದೂಕಾಲು ರೂಪಾಯಿ ಕಟ್ಟಿ ಹರಕೆ ತೀರಿಸಿದ್ದಾರೆ. ಬಳಿಕ ದೀಪ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಪಿವೈ ಪತ್ನಿ ಶೀಲಾಗೆ (Sheela Yogeshwar) ಶಾಸಕ ಉದಯ್ ಪತ್ನಿ ವಿನೂತ್ ಸಾಥ್ ನೀಡಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಕಷ್ಟದ ಸಂದರ್ಭದಲ್ಲಿ ಮಾತೃ ಪಕ್ಷ ಕೈಹಿಡಿಯಿತು. ಚನ್ನಪಟ್ಟಣ ಜನರ ಆಶಿರ್ವಾದದಿಂದ ಯೋಗೇಶ್ವರ್‌ ಗೆದ್ದಿದ್ದಾರೆ. ನನ್ನ ಪತಿಯ ಜನ್ಮ ಭೂಮಿ ಹಾಗೂ ಕರ್ಮ ಭೂಮಿ ಚನ್ನಪಟ್ಟಣ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

    ನಾವು ಸಾಮಾನ್ಯ ಕುಟುಂಬದಿಂದ ಬಂದವ್ರು. ಪತಿಯ ಜನಸೇವೆ ಗುರುತಿಸಿ ಜನ ಕೈ ಹಿಡಿದಿದ್ದಾರೆ. ಎರಡು ಸರಿ ಸೋಲು ಅನುಭವಿಸಿದ್ವಿ ಈ ಬಾರಿ ಭರವಸೆ ಇತ್ತು. ಚನ್ನಪಟ್ಟಣದ ಜನ ತಮ್ಮ ಮನೆ ಮಗನನ್ನ ಗೆಲ್ಲಿಸಿದ್ದಾರೆ. ನಮ್ಮದೇ ಸರ್ಕಾರ ಇರೋದ್ರಿಂದ ಜನ ಸೇವೆ ಮಾಡಬಹುದು. ಸಾಕಷ್ಟು ಅಭಿವೃದ್ಧಿ ಬಗ್ಗೆ ಜನರ ನಿರೀಕ್ಷೆ ಇದೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ

    ಇಂದು ಆರ್.ಅಶೋಕ್ ಮಂಡ್ಯ ಪ್ರವಾಸ:
    ವಿಪಕ್ಷ ನಾಯಕ ಆರ್‌. ಅಶೋಕ್‌ ಇಂದು (ನ.24) ಮಂಡ್ಯ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕೇತ್ರದ ತಗ್ಗಹಳ್ಳಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹ ಪಾಲ್ಗೊಳ್ಳಲಿದ್ದಾರೆ.

    ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ನೂರಕ್ಕು ಹೆಚ್ಚು ಬೇರೆ ಬೇರೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ವಿಜಯೋತ್ಸವದ ವೇಳೆ ಅಗ್ನಿ ಅವಘಡ – ನೂತನ ಶಾಸಕನಿಗೆ ಗಾಯ 

  • ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರವೂ ಕಾಂಗ್ರೆಸ್ ಪಾಲು – ಫಲಕೊಡದ ಗೌಡರ ತಂತ್ರ, ಕೈಹಿಡಿದ ಮುಸ್ಲಿಂ ಮತ!

    ಬೆಂಗಳೂರು: ಹೆಚ್‌.ಡಿ ಕುಮಾರಸ್ವಾಮಿ (HD Kumaraswamy), ಬಸವರಾಜ ಬೊಮ್ಮಾಯಿ ಹಾಗೂ ಈ. ತುಕಾರಾಮ್‌ ಅವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ (By Election) ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು, ಹೈವೋಲ್ಟೇಜ್ ಕಣ ಚನ್ನಪಟ್ಟಣ.

    ಅಂತಿಮವಾಗಿ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿಯೂ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಇದನ್ನೂ ಓದಿ: ಜೈಲರ್‌ ಬಾಕ್ಸ್‌ನಿಂದ ಬ್ಯಾಲೆಟ್‌ ಬಾಕ್ಸ್‌ವರೆಗೆ – ಒಂದೇ ವರ್ಷದಲ್ಲಿ 2ನೇ ಬಾರಿ ಹೇಮಂತ್‌ ಸೊರೆನ್‌ ಸಿಎಂ

    ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮುಜುಗರ ಅನುಭವಿಸಿದ್ದಾರೆ. ದೇವೇಗೌಡರು ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ 6 ಸುತ್ತಿನ ವರೆಗೂ ಹಾವು – ಏಣಿ ಆಟ ನಡೆದಿತ್ತು. ಆದ್ರೆ 6ನೇ ಸುತ್ತಿನ ಬಳಿಕ ಫಲಿತಾಂಶದ ದಿಕ್ಕೇ ಬದಲಾಯಿತು. ಯೋಗೇಶ್ವರ್‌ ಸತತ ಮುನ್ನಡೆ ಸಾಧಿಸುತ್ತಾ ಹೋದ್ರು, ಇದರಿಂದ ಗೆಲುವು ʻಕೈʼ ಪಾಲಾಯಿತು.

    ಮೂರು ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದ್ರೆ, ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಸೋಲು ಗೆಲುವಿನ ಬಗ್ಗೆ ಎಂದಿನಂತೆ ರಾಜಕಾರಣಿಗಳು ಮಾತಾಡಿದರು. ಗೌಡರ ಒಕ್ಕಲಿಗ ನಾಯಕತ್ವವನ್ನು ಜನ ಕಿತ್ಕೊಂಡಿದ್ದಾರೆ ಎಂದು ಯೋಗೇಶ್ವರ್ ವ್ಯಾಖ್ಯಾನಿಸಿದರು. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್‌ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?

    ಚನ್ನಪಟ್ಟಣ ಫಲಿತಾಂಶ – ಯಾರಿಗೆ ಎಷ್ಟು ಮತ?
    * ಯೋಗೇಶ್ವರ್ – ಕಾಂಗ್ರೆಸ್ – ಗೆಲುವು – 1,12,642 ಮತ
    * ನಿಖಿಲ್ – ಎನ್‌ಡಿಎ – ಸೋಲು – 87,229 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ

    ಚನ್ನಪಟ್ಟಣ ಫಲಿತಾಂಶ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
    * 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
    * 5ನೇ ಸುತ್ತು – ನಿಖಿಲ್‌ಗೆ 1,306 ಮತಗಳ ಮುನ್ನಡೆ (ಗ್ರಾಮೀಣ)
    * 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ಟೌನ್)
    * 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ಟೌನ್)
    * 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು

    ಚನ್ನಪಟ್ಟಣ ಫಲಿತಾಂಶ ವಿಶ್ಲೇಷಣೆ
    * ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
    * ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
    * ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
    * ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿ’ಯರ `ಶಕ್ತಿ’
    * ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
    * ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
    * ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
    * ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ

    ಶಿಗ್ಗಾಂವಿಯಲ್ಲಿ 3 ದಶಕದ ಬಳಿಕ ʻಕೈʼ ಮೇಲು:
    ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಮೀರಿ ಮತಪ್ರಭುಗಳು ಅಚ್ಚರಿಯ ತೀರ್ಪು ನೀಡಿದ್ದಾರೆ. ಬಿಜೆಪಿಯ ಭದ್ರಕೋಟೆ ಛಿದ್ರವಾಗಿದೆ. 1994ರ ಬಳಿಕ ಇದೇ ಮೊದಲ ಬಾರಿಗೆ ಶಿಗ್ಗಾಂವಿ ಕಾಂಗ್ರೆಸ್ ಕೈ ಹಿಡಿದಿದೆ. ತಾವೇ ಕಟ್ಟಿರುವ ಕೋಟೆಯಲ್ಲಿ ಮಗನನ್ನು ಪ್ರತಿಷ್ಠಾಪಿಸಲು ಬೊಮ್ಮಾಯಿ ವಿಫಲರಾಗಿದ್ದಾರೆ. ಜನಾದೇಶ ಭರತ್ ಬೊಮ್ಮಾಯಿ ವಿರುದ್ಧ ಬಂದಿದೆ. ಮೊದಲ 7 ಸುತ್ತಿನವರೆಗೆ ಭರತ್ ಬೊಮ್ಮಾಯಿ ಲೀಡ್‌ನಲ್ಲಿದ್ದರು. ಆದ್ರೆ 8ನೇ ಸುತ್ತಿನ ನಂತ್ರ ಚಿತ್ರಣ ಬದಲಾಯ್ತು. ಅಂತಿಮವಾಗಿ ಕಾಂಗ್ರೆಸ್ ಜನಾದೇಶ ಕಾಂಗ್ರೆಸ್ ಪರ ಬಂತು. ಪರಿಣಾಮ ಯಾಸೀರ್ ಪಠಾಣ್ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡ್ತಿದ್ದಾರೆ. ಕಾಂಗ್ರೆಸ್ ಹಣ ಹರಿಸಿದ್ದು, ಮುಸ್ಲಿಮರು, ಕುರುಬರು ಕಾಂಗ್ರೆಸ್ ಪರ ನಿಂತಿದ್ದು ನಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ. ನಾನು ಡಿಸಿಎಂ ಅಲ್ದೇ ಇದ್ರೂ ಗೆಲ್ಸಿದ್ದೀನಿ ನೋಡಿ ಎನ್ನುತ್ತಾ ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟವೆಲ್ ಹಾಕಿದ್ದಾರೆ. ಬೆಳಗಾವಿಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಘೋಷಣೆ ಮೊಳಗಿವೆ.

    ಶಿಗ್ಗಾಂವಿ ಫಲಿತಾಂಶ ಹೇಗಿದೆ?
    * ಯಾಸೀರ್ ಪಠಾಣ್ – ಕಾಂಗ್ರೆಸ್ – ಗೆಲುವು – 1,00,756 ಮತ
    * ಭರತ್ ಬೊಮ್ಮಾಯಿ – ಬಿಜೆಪಿ – ಸೋಲು – 87,308 ಮತ
    * ಕಾಂಗ್ರೆಸ್ ಗೆಲುವಿನ ಅಂತರ – 13,448 ಮತ

    ಶಿಗ್ಗಾಂವಿ ರಿಸಲ್ಟ್ ಟ್ರೆಂಡ್ಸ್ ಹೇಗಿತ್ತು?
    * 1ನೇ ಸುತ್ತು – ಭರತ್‌ಗೆ 325 ಮತಗಳ ಮುನ್ನಡೆ
    * 7ನೇ ಸುತ್ತು – ಭರತ್‌ಗೆ 998 ಮತಗಳ ಮುನ್ನಡೆ
    * 8ನೇ ಸುತ್ತು – ಯಾಸೀರ್‌ಗೆ 1158 ಮತಗಳ ಮುನ್ನಡೆ
    * 18ನೇ ಸುತ್ತು – ಯಾಸೀರ್‌ಗೆ 13,448 ಮತಗಳ ಗೆಲುವು

    ಶಿಗ್ಗಾಂವಿ ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್ ಕೈಹಿಡಿದ ಅಹಿಂದ ಮತ
    * ಕುರುಬ, ಮುಸ್ಲಿಂ ಮತ ಚದುರದಂತೆ ಸಿಎಂ ಕಾರ್ಯತಂತ್ರ
    * ಯಾಸೀರ್‌ಗೆ ವರವಾದ ಗ್ಯಾರಂಟಿ ಮತ
    * ತಳಮಟ್ಟದಲ್ಲಿ ಸತೀಶ್ ಜಾರಕಿಹೊಳಿ ಸಂಘಟನೆ
    * ಫಲ ಕೊಡದ ಬೊಮ್ಮಾಯಿ ಕಾರ್ಯತಂತ್ರ
    * ಕುಟುಂಬ ರಾಜಕೀಯ ಒಪ್ಪದ ಮತದಾರ

    ಸಂಡೂರು ಕ್ಷೇತ್ರಕ್ಕೆ ಮೊದಲ ಮಹಿಳಾ ಶಾಸಕಿ:
    ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. 19 ಸುತ್ತುಗಳ ಮತ ಎಣಿಕೆಯಲ್ಲಿ ಆರಂಭದಿಂದ ಅನ್ನಪೂರ್ಣ, ಬಂಗಾರು ಹನುಮಂತು ನಡ್ವೆ ತುರುಸಿನ ಪೈಪೋಟಿ ಕಂಡುಬಂದಿತ್ತು. ಆದ್ರೆ 6 ಮತ್ತು 7ನೇ ಸುತ್ತು ಹೊರತು ಪಡಿಸಿದ್ರೆ, ಉಳಿದಂತೆ ಅನ್ನಪೂರ್ಣ ಎಲ್ಲೂ ಹಿನ್ನಡೆ ಕಾಣಲಿಲ್ಲ. ನಿಧಾನಕ್ಕೆ ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ, ಸುಲಭ ಜಯ ಗಳಿಸಿದ್ರು. ಈ ಮೂಲಕ ಸಂಡೂರಿನಿಂದ ವಿಧಾನಸಭೆ ಪ್ರವೇಶ ಮಾಡ್ತಿರುವ ಮೊದಲ ಮಹಿಳಾ ಶಾಸಕಿ ಅನ್ನೋ ಹೆಗ್ಗಳಿಕೆಗೂ ಪಾತ್ರರಾದ್ರು.

    ಸಂಡೂರು ಫಲಿತಾಂಶ ಹೇಗಿದೆ?
    * ಅನ್ನಪೂರ್ಣ – ಕಾಂಗ್ರೆಸ್ – ಗೆಲುವು – 93,616 ಮತ
    * ಬಂಗಾರು ಹನುಮಂತು – ಬಿಜೆಪಿ – ಸೋಲು – 83,967 ಮತ
    (ಕಳೆದ ಬಾರಿ ಬಿಜೆಪಿ ಪಡೆದ ಮತ 49,700 )
    * ಕಾಂಗ್ರೆಸ್ ಗೆಲುವಿನ ಅಂತರ – 9649 ಮತ

    ಸಂಡೂರು ರಿಸಲ್ಟ್ ಟ್ರೆಂಡ್ಸ್ ಹೇಗಿದೆ?
    * 1ನೇ ಸುತ್ತು – ಅನ್ನಪೂರ್ಣಗೆ 2,586 ಮತಗಳ ಮುನ್ನಡೆ
    * 6ನೇ ಸುತ್ತು – ಬಂಗಾರುಗೆ 262 ಮತಗಳ ಮುನ್ನಡೆ
    * 8ನೇ ಸುತ್ತು – ಅನ್ನಪೂರ್ಣಗೆ 33 ಮತಗಳ ಮುನ್ನಡೆ
    * 19ನೇ ಸುತ್ತು – ಅನ್ನಪೂರ್ಣಗೆ 9,649 ಮತಗಳ ಗೆಲುವು

    ಸಂಡೂರು ಫಲಿತಾಂಶ ವಿಶ್ಲೇಷಣೆ
    * ಕಾಂಗ್ರೆಸ್‌ನ ಭದ್ರಕೋಟೆ
    * ಸಂಸದ ತುಕಾರಾಂ ಸಾಫ್ಟ್ ಇಮೇಜ್
    * ಸಂತೋಷ್ ಲಾಡ್ ಸಂಘಟನೆ
    * ಕಾಂಗ್ರೆಸ್ ಕೈಹಿಡಿದ `ಗ್ಯಾರಂಟಿ’
    * ಜನಾರ್ದನರೆಡ್ಡಿ ರಣತಂತ್ರ ಫೇಲ್
    * ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ
    * ಬಂಗಾರು ಹೊರಗಿನವರು ಎಂಬ ಆರೋಪ

  • ಇದು ಬಯಸದೇ ಬಂದ ಉಪಚುನಾವಣೆ, ಕೊನೆಗಳಿಗೆಯ ತೀರ್ಮಾನಕ್ಕೆ ತಲೆ ಬಾಗುತ್ತೇನೆ – ನಿಖಿಲ್ ಕುಮಾರಸ್ವಾಮಿ

    ಇದು ಬಯಸದೇ ಬಂದ ಉಪಚುನಾವಣೆ, ಕೊನೆಗಳಿಗೆಯ ತೀರ್ಮಾನಕ್ಕೆ ತಲೆ ಬಾಗುತ್ತೇನೆ – ನಿಖಿಲ್ ಕುಮಾರಸ್ವಾಮಿ

    ರಾಮನಗರ: ಇದು ಬಯಸದೇ ಬಂದ ಉಪಚುನಾವಣೆ, ಕೊನೆಗಳಿಗೆಯ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್‌ಡಿಎ ಅಭ್ಯರ್ಥಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

    ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಬಯಸದೇ ಬಂದ ಉಪಚುನಾವಣೆ, ಕೊನೆಗಳಿಗೆಯ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ. ಚುನಾವಣಾ ಸಂದರ್ಭದಲ್ಲಿ ನಾನು ಕೆಲವು ಮಾತು ಕೊಟ್ಟಿದ್ದೆ ಆ ಮಾತನ್ನ ಚುನಾವಣೆಯ ಸೋಲು-ಗೆಲುವು ನಿರ್ಧಾರ ಮಾಡಲ್ಲ. ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮಾತಿನಿಂದ ಹಿಂದೆ ಸರಿಯಲ್ಲ. ನಾನು ಈ ಜಿಲ್ಲೆಯ ಮಗ ಎಂದು ಭಾವಿಸುತ್ತೇನೆ. ನಾನು ಇಲ್ಲಿ ಹುಟ್ಟದೆ ಇರಬಹುದು ಆದರೆ ಭಾವನಾತ್ಮಕವಾಗಿ ಸಂಬಂಧ ಇದೆ ಎಂದು ಹೇಳಿದರು.ಇದನ್ನೂ ಓದಿ: ಪತಿಯೊಂದಿಗೆ ಯುಕೆಯಲ್ಲಿ ವಾಸಿಸುತ್ತಿದ್ದ ಭಾರತದ ಮಹಿಳೆ ಕಾರಿನಲ್ಲಿ ಶವವಾಗಿ ಪತ್ತೆ


    ರಾಜ್ಯದಲ್ಲಿ 3 ಕ್ಷೇತ್ರದ ಉಪಚುನಾವಣೆಗಳಲ್ಲಿ (ByElection) ಚನ್ನಪಟ್ಟಣ (Channapatna) ಬಹುನಿರೀಕ್ಷೆಯ ಚುನಾವಣೆ ಆಗಿತ್ತು. ಉಪಚುನಾವಣೆಯಲ್ಲಿ ಕೊನೆಹಂತದ ತೀರ್ಮಾನಕ್ಕೆ ಪಕ್ಷದ ಶಿಸ್ತಿನ ಸಿಪಾಯಿ ಆಗಿ ನಾನು ಎನ್‌ಡಿಎ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದೆ. ಚುನಾವಣೆಯ ಫಲಿತಾಂಶ ಎಲ್ಲರಿಗೂ ಆಘಾತ ತಂದುಕೊಟ್ಟಿದೆ. ಕೊನೆಯ ಹಂತದ ಬೆಳವಣಿಗೆಯಲ್ಲಿ ಕಳೆದ 18 ದಿನದಲ್ಲಿ ಪ್ರತಿ ಹಳ್ಳಿಯಲ್ಲೂ ಎಲ್ಲರೂ ನನಗೆ ಪ್ರೀತಿ, ವಾತ್ಸಲ್ಯ ತೋರಿದ್ದಾರೆ. ಸುಮಾರು 87 ಸಾವಿರ ಮತ ಬಂದಿದೆ. ಪ್ರಜಾಪ್ರಭುತ್ವದಲ್ಲಿ ತೀರ್ಮಾನ, ತೀರ್ಪು ತೆಗೆದುಕೊಳ್ಳುವ ಹಕ್ಕು ಇರುವುದು ಜನರಿಗೆ, ಮತದಾರರಿಗೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದರು.

    ಎಲ್ಲರೂ ಬಹಳ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಆದರೆ ಚುನಾವಣೆ ಸೋಲಿಗೆ ಕೆಲವು ಕಾರಣ ಇರುತ್ತದೆ. ಒಂದು ಸಮುದಾಯದ ಮತ ಒಂದು ಕಡೆ ಕ್ರೋಢಿಕರಿಸಿದ್ದು ಕಾರಣ ಆಗಿರಬಹುದು. ನಮ್ಮ ಪಕ್ಷ ಸಾಕಷ್ಟು ಬಾರಿ ಆ ಸಮುದಾಯದ ಜೊತೆ ನಿಂತಿದ್ದೇವೆ. ಆದರೂ ಆ ಸಮುದಾಯ ನಮ್ಮ ಜೊತೆ ನಿಂತಿಲ್ಲ. ಎದೆಗುಂದಲ್ಲ ಹೋರಾಟದ ಹಿನ್ನೆಲೆಯಲ್ಲಿ ಈ ಪಕ್ಷ ಕಟ್ಟಿದ್ದೇವೆ. ವಯಸ್ಸು ಚಿಕ್ಕದಿದೆ ಎಲ್ಲವನ್ನೂ ಸಮಚಿತ್ತದಿಂದ ತಗೆದುಕೊಂಡಿದ್ದೇನೆ. ರಾಜ್ಯದ ನಿಷ್ಠಾವಂತ ಕಾರ್ಯಕರ್ತರೆಲ್ಲರಿಗೂ ಧ್ವನಿಯಾಗಿ ಇರುತ್ತೇನೆ ಎಂದರು.

    ನಾನು ಮೂರು ಬಾರಿ ಸೋತಿದ್ದೇನೆ ಒಪ್ಪಿಕೊಳ್ಳುತ್ತೇನೆ. ನಾನು ಗೆಲುವನ್ನು ನೋಡಿಲ್ಲ. ಇತಿಹಾಸ ನೋಡಿದರೆ ಅಬ್ರಾಹಂ ಲಿಂಕನ್, ಅಂಬೇಡ್ಕರ್, ವಾಜಪೇಯಿ ಸೋತಿದ್ದು ಹೇಳುತ್ತಾರೆ. ಈ ಪರಿಸ್ಥಿತಿಯಲ್ಲಿ ಕಾರ್ಯಕರ್ತರಿಗೆ ಕೊಟ್ಟು ಅವರು ಸೋತಿದ್ದರೆ ಕುಟುಂಬ, ರಾಜಕಾರಣ, ಸ್ವಾರ್ಥ ಎಂಬ ಆರೋಪ ಬರುತ್ತಿತ್ತು. ಇವಾಗ ಈ ಹೊಣೆ ನಾನೇ ಹೊರುತ್ತೇನೆ ನೆಮ್ಮದಿಯಿಂದ ಮಲಗುತ್ತೇನೆ. ಈ ಒಂದು ಸೋಲಿನಿಂದ ಜಿಲ್ಲೆಯಲ್ಲಿ ಜೆಡಿಎಸ್ ಮುಕ್ತ ಅಂದುಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಲೋಕಸಭೆಯಲ್ಲಿ ಸೋತರು ಅವರ ಬಲವಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹಾಗೆಯೇ ಈ ಗೆಲವಿನಿಂದ ಅವರ ಬಲ ಮತ್ತೆ ಹೆಚ್ಚಿದೆ ಎನ್ನಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಂತೋಷವಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಉಪಚುನಾವಣೆಯಲ್ಲಿ ಸೋತಿದ್ದೇವೆ, ಇವಿಎಂ ಹ್ಯಾಕ್ ಮಾಡಿದ್ದಾರೆ ಎನ್ನಲ್ಲ: ಜೋಶಿ

  • ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    – ಭ್ರಷ್ಟ ಕಾಂಗ್ರೆಸ್ ಅಭಿವೃದ್ಧಿ ಮಾಡದೇ ಗೆದ್ದಿದೆ
    – `ಕೈ’ಗೆ ತಾತ್ಕಾಲಿಕ ಸಂತೋಷ

    ಬೆಂಗಳೂರು: ಭ್ರಷ್ಟ ಕಾಂಗ್ರೆಸ್ (Congress) ಅಭಿವೃದ್ಧಿ ಮಾಡದೇ ಉಪಚುನಾವಣೆಯಲ್ಲಿ (By Election) ಗೆದ್ದಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅಸಮಾಧಾನ ಹೊರ ಹಾಕಿದ್ದಾರೆ.

    ಬೆಂಗಳೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಅವರು ಮಾತನಾಡಿದರು. ಈ ವೇಳೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿರಬಹುದು. ಆದರೆ ಸಂಪೂರ್ಣ ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇದೆ ಎಂದಿದ್ದಾರೆ.

    ಚನ್ನಪಟ್ಟಣ (Channapatna) ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಸ್ವಂತ ಬಲದಲ್ಲಿ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಯೋಗೇಶ್ವರ್ (C.P Yogeshwar) ಅವರಿಂದ ಕಾಂಗ್ರೆಸ್ ಗೆಲುವು ಕಂಡಿದೆ. ಕಾಂಗ್ರೆಸ್‍ಗೆ ತಾತ್ಕಾಲಿಕ ಸಂತೋಷ ಸಿಕ್ಕಿದೆ. ಅಲ್ಲಿ ಅವರ ಪರವಾದ ಅಲೆ ಇತ್ತು. ನಾವೂ ಸಹ ಯೋಗೇಶ್ವರ್ ಅವರಿಗೆ ಸೀಟು ಕೊಡಿಸುವ ಪ್ರಯತ್ನ ಮಾಡಿದ್ವಿ. ಜೆಡಿಎಸ್‍ನಿಂದಲೂ ಅವರಿಗೆ ಆಹ್ವಾನ ಕೊಟ್ಟಿದ್ದರು. ಕಾಂಗ್ರೆಸ್‍ನಿಂದ ಗೆದ್ದು ಅವರು ಶಾಸಕರಾಗಿರಬಹುದು, ಬಿಜೆಪಿಯಲ್ಲಿ ಇದ್ದಿದ್ದರೆ (BJP) ಲೀಡರ್ ಆಗಿರುತ್ತಿದ್ದರು ಎಂದಿದ್ದಾರೆ.

    ನಿಖಿಲ್ ಕುಮಾರಸ್ವಾಮಿಯವರಿಗೆ ಸೋಲಾಗಿದ್ದರೂ ಸಹ ಒಬ್ಬ ನಾಯಕರಾಗಿ ಬೆಳೆದಿದ್ದಾರೆ. ಇನ್ನೂ ಶಿಗ್ಗಾಂವಿಯಲ್ಲಿ ಎಲ್ಲಾ ವಿರೋಧಿ ಬಣಗಳು ಒಂದಾಗಿದ್ದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.

    ಯೋಗೇಶ್ವರ್ 25,357 ಮತಗಳಿಂದ ಗೆಲುವು ದಾಖಲಿಸಿದ್ದಾರೆ. 20 ಸುತ್ತುಗಳ ಮತ ಎಣಿಕೆಯ ನಂತರ ಯೋಗೇಶ್ವರ್ 1,12,388 ಮತಗಳನ್ನು ಪಡೆದರೆ ನಿಖಿಲ್ ಕುಮಾರಸ್ವಾಮಿ 87,031 ಮತಗಳನ್ನು ಪಡೆದಿದ್ದಾರೆ.

  • ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    – ಸ್ವಾಭಿಮಾನ ಇದ್ದರೆ ವಿಜಯೇಂದ್ರ ರಾಜೀನಾಮೆ ನೀಡಬೇಕು
    – ನಿಖಿಲ್‌ ಕುಮಾರಸ್ವಾಮಿ ಸೋಲು ದುರ್ದೈವ

    ಚಿಕ್ಕೋಡಿ: ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಇನ್ನಾದರೂ ಹೈಕಮಾಂಡ್‌ ಈ ಬಗ್ಗೆ ಗಂಭೀರ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಪಚುನಾವಣೆ ಸೋಲಿಗೆ ಬೇಸರ ವ್ಯಕ್ತಪಡಿಸಿದರು.

    ಕಬ್ಬೂರು ಗ್ರಾಮದಲ್ಲಿ ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡಿದ ಯತ್ನಾಳ್‌, ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಇನ್ನಾದರೂ ಹೈಕಮಾಂಡ್ ಗಂಭೀರ ಚರ್ಚೆ ಮಾಡಬೇಕು. ಹೈಕಮಾಂಡ್‌ಗೆ ಸರಿಯಾದ ಮಾಹಿತಿ ನೀಡುವ ಉಸ್ತುವಾರಿಗಳನ್ನ ಕಳಿಸಬೇಕು ಎಂದು ಸಲಹೆ ನೀಡಿದರು.

    ವಿಜಯೇಂದ್ರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಹರಿಹಾಯ್ದರು.

    ಭರತ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಮತ್ತು ಬಿಜೆಪಿಗೆ ಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದ್ದಾರೆ.

    ನಿಖಿಲ್‌ ಕುಮಾರಸ್ವಾಮಿ ಸೋಲು ದುರ್ದೈವ. ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಪಾಪ ಕೊನೆಯ ವರೆಗೂ ಯೋಗೇಶ್ವರ್‌ ಬಿಜೆಪಿ ಪರ ಒಲವು ತೋರಿದ್ದರು. ಜನ ಯೋಗೇಶ್ವರ್‌ ಕೆಲಸ ಮಾಡಿದ್ದನ್ನ ನೋಡಿ ಗೆಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಮುಂದೆ ಯೋಚನೆ ಮಾಡಿ ಪಕ್ಷ ಸಂಘಟನೆ ಮಾಡಬೇಕು. ಇನ್ನಾದರೂ ಬಿಜೆಪಿ, ಜೆ.ಪಿ.ನಡ್ಡಾ ಅವರು ಕಣ್ಣು ತೆರೆಯಬೇಕು ಎಂದು ಹೇಳಿದರು.

    ವಕ್ಫ್‌ ಹೋರಾಟ ಈಗ ಆರಂಭವಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಜಾಗೃತಿ ಮೂಡಿಸುತ್ತೇವೆ. ಕಾಂಗ್ರೆಸ್ ಗೆದ್ದರೆ ಮುಂದೆ ರೈತರ ಜಮೀನು ಕೂಡ ಹೋಗುತ್ತವೆ. ಹೈಕಮಾಂಡ್ ಬಳಿ ವಿಜಯೇಂದ್ರ ವಿರುದ್ಧ ನಿಯೋಗ ತೆರಳುತ್ತಿವೆ. ಕೇವಲ ವಿಜಯೇಂದ್ರ, ಯಡಿಯೂರಪ್ಪ ಅವರಿಗೆ ಅಪಾಯಿಟ್‌ಮೆಂಟ್ ಕೊಟ್ಟರೆ ಹೀಗೆ ಆಗೋದು. ಬಿಜೆಪಿ ಹೈಕಮಾಂಡ್ ಬಳಿ ಅಪ್ಪ-ಮಕ್ಕಳ ಬಗ್ಗೆ ಹೇಳುತ್ತೇವೆ ಎಂದು ಹರಿಹಾಯ್ದರು.

  • ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ, ಹಗರಣಗಳು ಮುಚ್ಚಿ ಹೋಗಲ್ಲ: ವಿಶ್ವನಾಥ್‌

    ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ, ಹಗರಣಗಳು ಮುಚ್ಚಿ ಹೋಗಲ್ಲ: ವಿಶ್ವನಾಥ್‌

    – ಬಿಜೆಪಿಯಲ್ಲಿ 4 ಗುಂಪು ಇರೋದು ಸತ್ಯ ಎಂದ ಎಂಎಲ್‌ಸಿ

    ಮೈಸೂರು: ಇದು ಸಿದ್ದರಾಮಯ್ಯ (Siddaramaiah) ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ. ಈ ತೀರ್ಪಿನಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H Vishwanath) ತಿಳಿಸಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್‌ ಉಪ ಚುನಾವಣೆಯಲ್ಲಿ (BY Poll) ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಿದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ. ಈ ತೀರ್ಪಿನಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ, ಗೆದ್ದವರು ಬೀಗುವ ಅಗತ್ಯವೂ ಇಲ್ಲ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ, ದೇವೇಗೌಡ್ರ ಹೋರಾಟದಲ್ಲಿ ಸ್ವಾರ್ಥವಿತ್ತು: ಯೋಗೇಶ್ವರ್

    ಹಣ, ಹೆಂಡ, ಶಿಫಾರಸ್ಸು ಇಂತಹದರ ಮೇಲೆಯೆ ಚುನಾವಣೆ ನಡೆಯುವುದು. ಈ ಚುನಾವಣೆಯೂ ಅದೇ ರೀತಿ ನಡೆದಿದೆ. ಮುಡಾ ಹಗರಣ ಮೈಸೂರು ವ್ಯಾಪ್ತಿಯದ್ದು, ಹೀಗಾಗಿ ಅದು ಚನ್ನಪಟ್ಟಣದಲ್ಲಿ ವರ್ಕ್ ಆಗುತ್ತೆ ಅಂದುಕೊಳ್ಳುವುದು ಬೇಡ. ಸಿದ್ದರಾಮಯ್ಯ ಸರ್ಕಾರಕ್ಕೆ ಜನಕೊಟ್ಟ ತೀರ್ಪು ಇದಲ್ಲ. ಉಪಚುನಾವಣೆಗಳು ಯಾವ ರೀತಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೂರೂ ಕ್ಷೇತ್ರಗಳ ಸೋಲಿನಿಂದ ನಮಗೆ ನಿರಾಸೆ ಆಗಿರೋದು ಸತ್ಯ: ವಿಜಯೇಂದ್ರ

    ಬಿಜೆಪಿ 4 ಗುಂಪು ಇರೋದು ಸತ್ಯ:
    ಹಗರಣದ ಆರೋಪ ಹೊತ್ತವರು, ಈ ತೀರ್ಪುನಿಂದ ಖುಷಿ ಪಡುವ ಅಗತ್ಯ ಇಲ್ಲ. ನಿಖಿಲ್ ಸೋತಿದ್ದಾರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದೆಲ್ಲ ಸಾಮಾನ್ಯ. ಬಿಜೆಪಿಯವರು ಜೆಡಿಎಸ್ ಒಟ್ಟಾಗಿ ಕೆಲಸ ಮಾಡಿದರು, ಆದರೂ ಅದು ಫಲಕೊಟ್ಟಿಲ್ಲ. ಬಿಜೆಪಿ 4 ಗುಂಪು ಇರೋದು ಸತ್ಯ. ಅವಕಾಶ ಕೊಟ್ಟವರಿಗೆ ಮತ್ತೆ ಮತ್ತೆ ಅವಕಾಶ ಕೊಟ್ಟಿದ್ದಾರೆ ವಿಶ್ವನಾಥ್‌ ಹೇಳಿದ್ದಾರೆ.

  • ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ, ದೇವೇಗೌಡ್ರ ಹೋರಾಟದಲ್ಲಿ ಸ್ವಾರ್ಥವಿತ್ತು: ಯೋಗೇಶ್ವರ್

    ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ, ದೇವೇಗೌಡ್ರ ಹೋರಾಟದಲ್ಲಿ ಸ್ವಾರ್ಥವಿತ್ತು: ಯೋಗೇಶ್ವರ್

    – ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ಗೆ, ಸಿಎಂ, ಡಿಸಿಎಂ, ನನ್ನ ಆಪ್ತ ಸುರೇಶ್‌ಗೆ ಅರ್ಪಿಸುತ್ತೇನೆ

    ರಾಮನಗರ: ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ಗೆ, ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹಾಗೂ ನನ್ನ ಆಪ್ತ ಸುರೇಶ್‌ಗೆ ಅರ್ಪಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಸಂತಸ ವ್ಯಕ್ತಪಡಿಸಿದ್ದರು.

    ಚನ್ನಪಟ್ಟಣ (Channapatna) ಉಪಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ (Congress) ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ 25,515 ಮತಗಳ ಅಂತರದಿಂದ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ (Nikhil Kumarswamy) ವಿರುದ್ಧ ಗೆಲುವು ಸಾಧಿಸಿದ್ದಾರೆ.ಇದನ್ನೂ ಓದಿ: ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ಗೆಲುವಿನ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ನಿರೀಕ್ಷೆ ಮಾಡಿದ್ದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ 30 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಮಾಹಿತಿ ಕೊಟ್ಟಿದ್ದೆ. ನನ್ನ ನಿರೀಕ್ಷೆಗೆ ಹತ್ತಿರವಾದ ಗೆಲುವು. ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ಗೆ, ಮುಖ್ಯಮಂತ್ರಿಗೆ, ಉಪಮುಖ್ಯಮಂತ್ರಿಗೆ ಮತ್ತು ನನ್ನ ಜೊತೆ ಇದ್ದ ಸುರೇಶ್‌ಗೆ ಅರ್ಪಿಸುತ್ತೇನೆ ಎಂದು ಹೇಳಿದರು.

    ಜೆಡಿಎಸ್ ಅಂತಿಮ ದಿನಗಳನ್ನ ಎಣಿಸುತ್ತಿದೆ ಎಂದು ಹೇಳಲು ಬಯಸುತ್ತೇನೆ. ದೇವೇಗೌಡರು ಹೋರಾಟದಲ್ಲಿ ಸಾಮಾಜಿಕ ಕಳಕಳಿ ಇರಲಿಲ್ಲ. ಕೇವಲ ಸ್ವಾರ್ಥ ಇತ್ತು. ಕುಟುಂಬದವರನ್ನ ಬೆಳೆಸುವ ಹೋರಾಟ ಇತ್ತು. ಒಕ್ಕಲಿಗರ ನಾಯಕತ್ವವನ್ನ ದೇವೇಗೌಡರ ಕುಟುಂಬದಿಂದ ಜನ ಕಿತ್ತುಕೊಂಡಿದ್ದಾರೆ. ಅವರ ಹಠ, ಛಲ ನೋಡಿ ನಾನು ಆಲೋಚನೆ ಮಾಡಿದ್ದೆ ಆದರೆ ಅದಕ್ಕೆ ಜನ ಸೊಪ್ಪು ಹಾಕಲಿಲ್ಲ. ನಿಖಿಲ್ ಇನ್ನೂ ಯುವಕ. ಆತನಿಗೆ ಒಳ್ಳೆದಾಗಲಿ. ನಿಖಿಲ್ 36 ವರ್ಷದ ಯುವಕ 63 ವರ್ಷದವರ ಥರ ಮಾತನಾಡುತ್ತೇನೆ. ದೇವೇಗೌಡರು ತಮ್ಮ ಸಂಧ್ಯಕಾಲದಲ್ಲಿ ಮೊಮ್ಮಗನ ಪರ ಪ್ರಚಾರ ಮಾಡಿದ್ದರೂ ಕೂಡ ಏನು ಆಗಲಿಲ್ಲ. ಇನ್ನು ಮುಂದೆಯೂ ಆರಾಮಾಗಿ ಇರಲ್ಲ. 100ಕ್ಕೆ 100 ಭಾಗ ಒಕ್ಕಲಿಗರ ಒಲವನ್ನ ದೇವೇಗೌಡರ ಕುಟುಂಬ ಕಳೆದಕೊಳ್ಳುತ್ತಿದೆ ಎಂದು ಹೇಳಿದರು.

    ವಿಜಯೇಂದ್ರ ಅವರು ನನ್ನ ಬ್ಯಾಟರಿ ವೀಕ್ ಆಗಿದೆ ಎಂದು ಹೇಳಿದ್ದರು ಆದರೆ ಅವರ ಬ್ಯಾಟರಿ ವೀಕ್ ಆದಾಗ ನಾನು ಚಾರ್ಜ್ ಮಾಡಿದ್ದೆ. ವಿಜಯೇಂದ್ರ, ಯಡಿಯೂರಪ್ಪ ಷಡ್ಯಂತ್ರದಿಂದ ನಾನು ಎನ್‌ಡಿಎ ಬಿಟ್ಟೆ. ಇವತ್ತು ಹಳೇ ಮೈಸೂರು ಭಾಗದಲ್ಲಿ ಡಿಕೆ ಶಿವಕುಮಾರ್ ನಾಯಕತ್ವವನ್ನು ನಮ್ಮ ಜನ ಒಪ್ಪಿಕೊಂಡಿದ್ದಾರೆ. ಕುಮಾರಸ್ವಾಮಿಗೆ ಅಧಿಕಾರ ದಾಹವಿದೆ. ಹಾಗಾಗಿ ಯಾರನ್ನು ಸಹಿಸಲ್ಲ, ಅಪ್ಪನ್ನು ಸಹಿಸಲ್ಲ, ಮಗನನ್ನು ಸಹಿಸಲ್ಲ. ಮಂಡ್ಯದಲ್ಲಿ ಕುಮಾರಸ್ವಾಮಿ ನಿಖಿಲ್ ಅವರನ್ನು ನಿಲ್ಲಿಸಿದ್ದರೆ ಈ ಬಾರಿ ಗೆಲ್ಲುತ್ತಿದ್ದರೇನೋ? ರಾಜೀನಾಮೆ ಕೊಟ್ಟು ಮಂಡ್ಯಕ್ಕೆ ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಸಂಡೂರು ಸೋಲನ್ನ ಒಪ್ಪಿಕೊಳ್ತೇವೆ, 2028ಕ್ಕೆ ಬಂಗಾರು ಗೆಲ್ತಾರೆ: ಜನಾರ್ದನ ರೆಡ್ಡಿ

  • ಮೂರೂ ಕ್ಷೇತ್ರಗಳ ಸೋಲಿನಿಂದ ನಮಗೆ ನಿರಾಸೆ ಆಗಿರೋದು ಸತ್ಯ: ವಿಜಯೇಂದ್ರ

    ಮೂರೂ ಕ್ಷೇತ್ರಗಳ ಸೋಲಿನಿಂದ ನಮಗೆ ನಿರಾಸೆ ಆಗಿರೋದು ಸತ್ಯ: ವಿಜಯೇಂದ್ರ

    – ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ 200ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದೇವೆ

    ಬೆಂಗಳೂರು: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಸೋಲನುಭವಿಸಿರುವುದಕ್ಕೆ ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದರು.

    ಮಹಾರಾಷ್ಟ್ರದಲ್ಲಿ ಎನ್‍ಡಿಎ ನಮ್ಮ ನಿರೀಕ್ಷೆಗೂ ಮೀರಿ 200 ಸೀಟುಗಳ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಎನ್‍ಡಿಎ ಹೊಸ ಇತಿಹಾಸವನ್ನು ಸೃಷ್ಟಿಸಿವೆ. ಮಹಾರಾಷ್ಟ್ರದ ಮಹಾಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ಇಟ್ಟು ಒಂದು ಐತಿಹಾಸಿಕ ಗೆಲುವು ನೀಡಿದ್ದು ತುಂಬ ಸಂತಸ ತಂದಿದೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು- ಈ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದಿದೆ. 3 ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ. ಚನ್ನಪಟ್ಟಣದಲ್ಲಿ ನಮ್ಮ ಮಿತ್ರ ಪಕ್ಷ ಜೆಡಿಎಸ್ ಪಕ್ಷ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ಆದರೆ, ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ನುಡಿದರು. ಹಿನ್ನಡೆಯ ಕಾರಣ ಏನು? ಯಾತಕ್ಕೋಸ್ಕರ ನಮಗೆ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂಬ ಬಗ್ಗೆ ಎರಡೂ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡಲಿದ್ದೇವೆ. ತಪ್ಪನ್ನು ಸರಿಪಡಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ತಿಳಿಸಿದರು.

    ನಮಗೆ ಈಗ ಕೇವಲ ಫಲಿತಾಂಶ ಸಿಕ್ಕಿದೆ. ಮೊದಲ ಬಾರಿ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸುಮಾರು 80 ಸಾವಿರ ಮತಗಳನ್ನು ಪಡೆದಿದೆ. ನಾವು ಇಲ್ಲಿ ಎಂಟ್ಹತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನಮಗಿತ್ತು. ಆ ರೀತಿಯ ಎಲ್ಲ ಶ್ರಮವನ್ನು ಹಾಕಿದ್ದೆವು ಎಂದು ಪ್ರಶ್ನೆಗೆ ಉತ್ತರಿಸಿದರು. ಅದರ ನಡುವೆ ನಮಗೆ ಗೆಲ್ಲಲು ಸಾಧ್ಯವಾಗಿಲ್ಲ; ಸಂಡೂರಿನ ಫಲಿತಾಂಶವನ್ನು ಹಿನ್ನಡೆ ಎಂದು ನಾವು ಭಾವಿಸುವುದಿಲ್ಲ. ಉತ್ತಮ ಮತಗಳನ್ನು ನಾವು ಪಡೆದಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಕುಳಿತು ಹಿನ್ನಡೆಗೆ ಕಾರಣಗಳೇನು ಎಂದು ಚರ್ಚಿಸುತ್ತೇವೆ ಎಂದು ನುಡಿದರು.

    ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸುಪುತ್ರ ಅಲ್ಲಿ ಬಿಜೆಪಿ ಸ್ಪರ್ಧಿಯಾಗಿದ್ದರು. ಬಿಜೆಪಿಯ ಎಲ್ಲ ಕಾರ್ಯಕರ್ತರು ಅಲ್ಲಿ ಹಗಲು- ರಾತ್ರಿ ಶ್ರಮವನ್ನು ಹಾಕಿದ್ದರು. ಬೊಮ್ಮಾಯಿಯವರು ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜನರು ಇವತ್ತು ಆಡಳಿತಪಕ್ಷದ ಕಡೆ ವಾಲಿದ್ದಾರೆ. ಇದೆಲ್ಲವನ್ನೂ ನಾವು ಹಿರಿಯರು ಕುಳಿತು ಸೋಲಿನ ವಿಮರ್ಶೆ ಮಾಡುತ್ತೇವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

  • ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಜನ ಬೆಂಬಲಕ್ಕೆ ಕಾಂಗ್ರೆಸ್‌ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಕಾಂಗ್ರೆಸ್‌, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕಾಂಗ್ರೆಸ್ ಹಣ ಹಂಚಿಕೆ ಮಾಡದಿದ್ರೆ ನನ್ನ ಗೆಲುವು ಆಗುತ್ತಿತ್ತು: ಬಂಗಾರು ಹನುಮಂತು

    ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ ಜಯದ ಅಂಚಿನಲ್ಲಿದ್ದಾರೆ.

    ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

    ಗ್ಯಾರಂಟಿಗೆ ಹಣವಿಲ್ಲದೇ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಗೃಹಲಕ್ಷ್ಮಿ ಯೋಜನೆ ಹಣ ಕೆಲ ತಿಂಗಳಿಂದ ಬಿಡುಗಡೆ ಆಗಿಲ್ಲ. ಶಕ್ತಿ ಯೋಜನೆ ನಿಲ್ಲಿಸುತ್ತಾರೆ. ಯುವಕರಿಗೆ ಯುವನಿಧಿ ಹಣ ಬಂದಿಲ್ಲ ಎಂದು ಗ್ಯಾರಂಟಿ ಯೋಜನೆಗಳನ್ನು ಟಾರ್ಗೆಟ್‌ ಮಾಡಿ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ದರು.

    ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಸರ್ಕಾರದ ಬಳಿ ಹಣ ಇಲ್ಲ ಎಂದು ಸಹ ಬಿಜೆಪಿ ಆರೋಪಿಸಿತ್ತು. ಆದರೆ, ಈಗ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆದ್ದಿದೆ.

  • ಚನ್ನಪಟ್ಟಣದಲ್ಲಿ ಗೆದ್ದ ಸೈನಿಕ, ಸೋತ ಅಭಿಮನ್ಯು

    ಚನ್ನಪಟ್ಟಣದಲ್ಲಿ ಗೆದ್ದ ಸೈನಿಕ, ಸೋತ ಅಭಿಮನ್ಯು

    ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್‌ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ (Congress) ಜಂಪ್‌ ಆದರೂ ಜನತೆ ಯೋಗೇಶ್ವರ್‌ ಕೈಹಿಡಿದಿದ್ದಾರೆ.

    ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

    ಯೋಗೇಶ್ವರ್‌ 25,357 ಮತಗಳಿಂದ ಗೆಲುವು ದಾಖಲಿಸಿದ್ದಾರೆ. 20 ಸುತ್ತುಗಳ ಮತ ಎಣಿಕೆಯ ನಂತರ ಯೋಗೇಶ್ವರ್‌ 1,12,388 ಮತಗಳನ್ನು ಪಡೆದರೆ ನಿಖಿಲ್‌ ಕುಮಾರಸ್ವಾಮಿ 87,031 ಮತಗಳನ್ನು ಪಡೆದರು.


    ಗೆಲ್ಲಲು ಕಾರಣ ಏನು?
    ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.

    ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್‌ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.

    ಸಚಿವ ಜಮೀರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಿಲ್ಲ. ಆಧುನಿಕ ಭಗೀರಥ ಫೈಟ್‌ನಲ್ಲಿ ಚನ್ನಪಟ್ಟಣ ಕೆರೆಗೆ ನೀರು ತುಂಬಿಸಿದ ಇಮೇಜ್‌ನಲ್ಲಿ ಜನರು ಯೋಗೇಶ್ವರ್‌ ಕೈ ಹಿಡಿದಿದ್ದಾರೆ.