Tag: channel

  • ಐವರ ಜಲಸಮಾಧಿ ಬಳಿಕ ಎಚ್ಚೆತ್ತ ಅಧಿಕಾರಿಗಳು – ಆರಂಭವಾಯ್ತು ತಡೆಗೋಡೆ ನಿರ್ಮಾಣ ಕಾರ್ಯ

    ಐವರ ಜಲಸಮಾಧಿ ಬಳಿಕ ಎಚ್ಚೆತ್ತ ಅಧಿಕಾರಿಗಳು – ಆರಂಭವಾಯ್ತು ತಡೆಗೋಡೆ ನಿರ್ಮಾಣ ಕಾರ್ಯ

    ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ನಾಲೆಗೆ ಬಿದ್ದು, ಐವರು ಜಲಸಮಾಧಿಯಾದ ಆಘಾತಕಾರಿ ಘಟನೆಯ ಬಳಿಕ ಇದೀಗ ಅಧಿಕಾರಿಗಳು ಎಚ್ಚೆತ್ತಿದ್ದಾರೆ. ದುರ್ಘಟನೆ ನಡೆದ ಸ್ಥಳದಲ್ಲಿ ಇದೀಗ ತಡೆಗೋಡೆ (Barrier) ನಿರ್ಮಿಸುವ ಕಾರ್ಯ ಆರಂಭವಾಗಿದೆ.

    ದುರ್ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಯಲ್ಲಿ (VC Canal) ಸಂಭವಿಸಿತ್ತು. ಭದ್ರವಾತಿ ನಿವಾಸಿಗಳಾದ ಚಂದ್ರಪ್ಪ (61), ಕೃಷ್ಣಪ್ಪ (60), ಧನಂಜಯ (55), ಬಾಬು ಹಾಗೂ ಜಯಣ್ಣ ಘಟನೆಯಲ್ಲಿ ಸಾವನ್ನಪ್ಪಿದ್ದರು. ಮೃತರು ಇಂಡಿಕಾ ಕಾರಿನಲ್ಲಿ ಮಂಗಳವಾರ ಸಂಜೆ 4:45 ರ ವೇಳೆಯಲ್ಲಿ ಮೈಸೂರಿನಿಂದ ಭದ್ರಾವತಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಬನಘಟ್ಟದ ವಿಸಿ ನಾಲೆ ಸೇತುವೆ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ನೇರವಾಗಿ ನಾಲೆಗೆ ಉರುಳಿಬಿದ್ದಿದೆ.

    ಕಿರಿದಾದ ರಸ್ತೆ ಹಾಗೂ ತಿರುವಿದ್ದ ಕಾರಣ ಚಾಲಕನಿಗೆ ಕಾರು ನಿಯಂತ್ರಿಸಲು ಸಾಧ್ಯವಾಗಿಲ್ಲ. ಅಲ್ಲದೇ ಕೆಆರ್‌ಎಸ್ ಅಣೆಕಟ್ಟಿನಿಂದ ನಾಲೆಗೆ ನೀರು ಬಿಟ್ಟಿರುವುದರಿಂದ ನಾಲೆಯಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಇದರಿಂದ ನಾಲೆಗೆ ಬಿದ್ದ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದರು. ಇದನ್ನೂ ಓದಿ: ನಾಪತ್ತೆಯಾಗಿ ಮೂರು ದಿನಗಳ ಬಳಿಕ ದಟ್ಟ ಅರಣ್ಯದಲ್ಲಿ ಪತ್ತೆಯಾದ 85ರ ವೃದ್ಧೆ

    ಇದೀಗ ಬಳಘಟ್ಟ ಬಳಿಯ ವಿಸಿ ನಾಲೆಗೆ ತಡೆಗೋಡೆ ನಿರ್ಮಿಸುವ ಕಾರ್ಯ ಆರಂಭವಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಖುದ್ದು ಹಾಜರಿದ್ದು ಕೆಲಸ ಮಾಡಿಸುತ್ತಿದ್ದಾರೆ. ತಡೆಗೋಡೆ ನಿರ್ಮಿಸುವ ಜೊತೆಗೆ ಹೆದ್ದಾರಿ ಪಕ್ಕದಲ್ಲಿದ್ದ ಗಿಡಗಂಟೆ ತೆರವುಗೊಳಿಸಿ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ.

    ದುರ್ಘಟನೆ ಬಳಿಕ ಇಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸ್ಥಳಕ್ಕೆ ಅಧಿಕಾರಿಗಳನ್ನು ಕರೆಸಿ ತಡೆಗೋಡೆ ನಿರ್ಮಿಸಲು ಸೂಚಿಸಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿ ವಲಯದ ಅಧಿಕಾರಿಗಳು ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಚಿಂತಾಮಣಿ ಮನೆಯ ಮೇಲೆ ಪೊಲೀಸ್‌ ದಾಳಿ – ಹುಲಿ ಉಗುರು ಪತ್ತೆ, ಯುವಕ ನಾಪತ್ತೆ

  • ಐದಾರು ವರ್ಷಗಳಿಂದ ಒಣಗಿದ್ದ ಚಾನಲ್‍ಗೆ ವಿವಿ ಸಾಗರ ಜಲಾಶಯದಿಂದ ನೀರು

    ಐದಾರು ವರ್ಷಗಳಿಂದ ಒಣಗಿದ್ದ ಚಾನಲ್‍ಗೆ ವಿವಿ ಸಾಗರ ಜಲಾಶಯದಿಂದ ನೀರು

    – ರೈತರ ಮೊಗದಲ್ಲಿ ಮಂದಹಾಸ

    ಚಿತ್ರದುರ್ಗ: ಕಳೆದ ಐದಾರು ವರ್ಷಗಳಿಂದ ಮಳೆಯಾಗಿಲ್ಲ ಅಂತ ನಿಲ್ಲಿಸಲಾಗಿದ್ದ ವಾಣಿವಿಲಾಸ ಸಾಗರ ಜಲಾಶಯದ ನೀರನ್ನು ಇಂದು ಚಾನಲ್ ಮೂಲಕ ಹೊರಬಿಡಲಾಯಿತು. ಹೀಗಾಗಿ ನೀರಿಲ್ಲದೇ ವಿನಾಶದ ಅಂಚಿನಲ್ಲಿದ್ದ ಬರದನಾಡಿನ ಜಮೀನುಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಹಾಗೂ ಜಿಲ್ಲೆಯ ಮುರಘಾ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಇದಕ್ಕೂ ಮುನ್ನ ಜಲಾಶಯದ ಆವರಣದಲ್ಲಿರುವ ಕಣಿವೆ ಮಾರಮ್ಮ ದೇಗುಲದ ಬಳಿ ಹೋಮಹವನ, ವಿಶೇಷ ಪೂಜಾಕಾರ್ಯ ಹಾಗೂ ಗಂಗಾ ಪೂಜೆ ಸಲ್ಲಿಸಿದ್ದಾರೆ. ನಂತರ ಎಲ್ಲರೂ ಸೇರಿ ಚಾನಲ್ ಮೂಲಕ ನೀರು ಹರಿಸಲು ಜಾಕ್‍ವಾಲ್ ಎತ್ತಿದರು.

    ಹೀಗಾಗಿ ಸುಮಾರು ಐದಾರು ವರ್ಷಗಳಿಂದ ಖಾಲಿಯಾಗಿ ಒಣಗಿ ಹೋಗಿದ್ದ ಚಾನಲ್‍ಗಳಲ್ಲಿ ರಭಸವಾಗಿ ನೀರು ಹರಿಯುತ್ತಿದೆ. ಕಳೆದ ಐದಾರು ವರ್ಷಗಳಿಂದ ಮಳೆ ಇಲ್ಲದೇ ಈ ಭಾಗದ ಕೊಳವೆ ಬಾವಿಗಳೆಲ್ಲ ಬತ್ತಿ ಬರಿದಾಗಿದ್ದವು. ವಿವಿಸಾಗರ ಜಲಾಶಯದಲ್ಲಿನ ನೀರು ಸಹ ಡೆಡ್ ಸ್ಟೋರೇಜ್ ಮಟ್ಟಕ್ಕೆ ತಲುಪಿತ್ತು. ಹೀಗಾಗಿ ಎಚ್ಚೆತ್ತ ಜಿಲ್ಲಾಡಳಿತ ಕಳೆದ ನಾಲ್ಕು ವರ್ಷದ ಹಿಂದೆಯೇ ಚಾನಲ್ ಮೂಲಕ ನೀರು ಹರಿಯದಂತೆ ನಿಲ್ಲಿಸಲಾಗಿತ್ತು.

    ಪರಿಣಾಮ ಹಿರಿಯೂರು ತಾಲೂಕಿನ ರೈತರ ತೋಟಗಳಲ್ಲಿದ್ದ ಅಡಿಕೆ, ತೆಂಗು, ದಾಳಿಂಬೆ ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ದರು. ಹೀಗಾಗಿ ರೈತರು ನೀರು ಬಿಟ್ಟು ರೈತರನ್ನು ಉಳಿಸಿ ಅಂತ ಹೋರಾಟ ಕೂಡ ನಡೆಸಿದ್ದರು. ರೈತರ ಕಷ್ಟ ನೋಡಲಾರದ ವರುಣ ಕೃಪೆತೋರಿ ಉತ್ತಮಮಳೆಯಾದ ಹಿನ್ನೆಲೆಯಲ್ಲಿ 101.65 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಹೀಗಾಗಿ ಇಂದು ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋಮಹವನ ನಡೆಸಿ ಚಾನಲ್ ಮೂಲಕ ರೈತರ ಬಳಕೆಗಾಗಿ ನೀರು ಹರಿಸಲಾಯಿತು.

    ರೈತರ ತೋಟಗಳಿಗೆ ಚಾನಲ್ ಮೂಲಕ ವಿವಿ ಸಾಗರ ಜಲಾಶಯದ 1.21 ಟಿ.ಎಂಸಿ ನೀರನ್ನು ಇಂದು ಹರಿಸಲಾಗಿದೆ. ಅಲ್ಲದೇ ಎಡನಾಲೆ ಹಾಗೂ ಬಲನಾಲೆ ಎರಡರಲ್ಲೂ ನೀರು ಹರಿಯುತ್ತಿದ್ದು, ಒಂದು ಹೊಸ ಫಾಲ್ಸ್ ಧುಮುಕುವಂತೆ ಹರಿಯುತ್ತಿರುವ ಚಾನಲ್ ನೋಡಲು ಜನಸಾಗರವೇ ವಿವಿಸಾಗರದತ್ತ ಹರಿದು ಬರುತ್ತಿದೆ.

    ಈ ನೀರು ಹಿರಿಯೂರು ತಾಲೂಕಿನ ಜಾನುವಾರುಗಳಿಗೆ ಕುಡಿಯುವ ನೀರು, ಅಚ್ಚುಕಟ್ಟು ಪ್ರದೇಶದ ರೈತರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾಗೂ 38 ಗ್ರಾಮಗಳ ಜನತೆಗೆ ತುಂಬಾ ಅನುಕೂಲವಾಗಲಿದೆ ಎಂದು ಶಾಸಕಿ ಪೂರ್ಣಿಮಾ ಪ್ರತಿಕ್ರಿಯಿಸಿದರು.

  • ಟಿವಿಗೆ ಲಗ್ಗೆ ಇಟ್ಟ ‘ಕೆಜಿಎಫ್’

    ಟಿವಿಗೆ ಲಗ್ಗೆ ಇಟ್ಟ ‘ಕೆಜಿಎಫ್’

    ಬೆಂಗಳೂರು: ಭಾರತದಾದ್ಯಂತ ಹವಾ ಎಬ್ಬಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ರಿಲೀಸ್ ಆಗಿ ಬಹುತೇಕ ಎರಡು ತಿಂಗಳು ಆಗಿದೆ. ಆದರೂ ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಇದೀಗ ಈ ಚಿತ್ರ ದೂರದರ್ಶನದಲ್ಲಿ ಪ್ರಸಾರವಾಗಲು ಸಜ್ಜಾಗುತ್ತಿದೆ.

    ಈಗಾಗಲೇ ಕೆಜಿಎಫ್ ಸಿನಿಮಾ ಬಾಲಿವುಡ್ ಕಿರುತೆರೆಯಲ್ಲಿ ಪ್ರಸಾರವಾಗಿದ್ದು, ಕನ್ನಡದಲ್ಲಿ ಅಮೇಜಾನ್ ಪ್ರೈಮ್ ನಲ್ಲಿ ಮಾತ್ರ ಪ್ರಸಾರ ಆಗುತ್ತಿತ್ತು. ಈಗ ದುಬಾರಿ ಬೆಲೆಗೆ ಕೆಜಿಎಫ್ ಸಿನಿಮಾವನ್ನು ಖಾಸಗಿ ಚಾನಲ್ ಖರೀದಿಸಿದೆ. ಈ ಮೂಲಕ ಸದ್ಯದಲ್ಲೇ ಕೆಜಿಎಫ್ ಸಿನಿಮಾವನ್ನು ಮನೆಯಲ್ಲಿಯೇ ಕುಳಿತು ನೋಡಬಹುದಾಗಿದೆ.

    ಕೆಜಿಎಫ್ ಸಿನಿಮಾದ ಟಿವಿ ಹಕ್ಕನ್ನು ಕಲರ್ಸ್ ಕನ್ನಡ ವಾಹಿನಿ ಖರೀದಿಸಿರುವುದು ಖಚಿತವಾಗಿದ್ದು, ಈಗಾಗಲೇ ವಾಹಿನಿ ಸಿನಿಮಾ ರಿಲೀಸ್ ಪ್ರೋಮೋ ಟೆಲಿಕಾಸ್ಟ್ ಮಾಡುತ್ತಿದೆ. ಈ ಮೂಲಕ ಥಿಯೇಟರ್, ಮೊಬೈಲ್, ಲ್ಯಾಪ್‍ಟಾಪ್ ನಲ್ಲಿ ಸಿನಿಮಾ ನೋಡಿದ್ದೀರಿ. ಈಗ ಮನೆಯಲ್ಲಿಯೇ ಕುಳಿತು ಟಿವಿಯಲ್ಲಿ ವೀಕ್ಷಿಸಬಹುದು.

    ಕೆಜಿಎಫ್ ಸಿನಿಮಾ ದೇಶಾದ್ಯಂತ ಪಂಚಭಾಷೆಗಳಲ್ಲಿ ರಿಲೀಸ್ ಆಗಿದ್ದು, ಇನ್ನೂ ರಾಜ್ಯದ ಹಲವು ಚಿತ್ರಮಂದಿರದಲ್ಲಿ ಕೆಜಿಎಫ್ ಪ್ರದರ್ಶನವಾಗುತ್ತಿದೆ. ಒಟ್ಟಾರೆ 200 ಕೋಟಿ ಗಳಿಕೆ ಕಂಡಿದೆ ಎಂದು ಹೇಳಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 7 ವರ್ಷದ ಪೋರ ವರ್ಷಕ್ಕೆ 155 ಕೋಟಿ ರೂ. ಸಂಪಾದಿಸಿದ!

    7 ವರ್ಷದ ಪೋರ ವರ್ಷಕ್ಕೆ 155 ಕೋಟಿ ರೂ. ಸಂಪಾದಿಸಿದ!

    ವಾಷಿಂಗ್ಟನ್: ಅಮೆರಿಕದ ನ್ಯೂಯಾರ್ಕ್ ನಿವಾಸಿಯಾಗಿರುವ 7 ವರ್ಷದ ಪೋರ ವಾರ್ಷಿಕವಾಗಿ ಬರೋಬ್ಬರಿ 155 ಕೋಟಿ ರೂಪಾಯಿ ಗಳಿಸುವ ಮೂಲಕ ವಿಶ್ವದ ಯೂಟ್ಯೂಬ್ ಸ್ಟಾರ್ 2018ರ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದ್ದಾನೆ.

    7 ವರ್ಷದ ರೇಯಾನ್ ಅತಿ ಹೆಚ್ಚು ಆದಾಯ ಪಡೆಯುವ ಜಗತ್ತಿನ ಅತಿ ಚಿಕ್ಕ ಯೂಟ್ಯೂಬ್ ಸ್ಟಾರ್ ಎಂದು ಖ್ಯಾತಿಯನ್ನು ಪಡೆದಿದ್ದಾನೆ. 2018ರ ಸಾಲಿನಲ್ಲಿ ಬರೋಬ್ಬರಿ 155 ಕೋಟಿ ರೂಪಾಯಿ ಆದಾಯ ಗಳಿಸುವ ಮೂಲಕ ವಿಶ್ವದ ನಂಬರ್ ಒನ್ ಯೂಟ್ಯೂಬ್ ಸ್ಟಾರ್ ಆಗಿ ಹೊರಹೊಮ್ಮಿದ್ದಾನೆ.

    ರೇಯಾನ್ ಯಾರು?
    ರೇಯಾನ್ ತನ್ನ ‘ರೇಯಾನ್ ಟಾಯ್ಸ್ ರಿವೀವ್’ ಯೂಟ್ಯೂಬ್ ಚಾನಲ್ ಮೂಲಕ ವಿಶ್ವ ಪ್ರಸಿದ್ಧಿಯಾಗಿದ್ದಾನೆ. 2015ರಲ್ಲ ಈ ಚಾನೆಲ್ ಅನ್ನು ಆರಂಭಿಸಿದ್ದ. ವಿಶ್ವದಾದ್ಯಂತ ಈತ ಸುಮಾರು 1.73 ಕೋಟಿ ಫಾಲೋವರ್ಸ್ ರನ್ನು ಹೊಂದಿದ್ದಾನೆ. ಅಲ್ಲದೇ ಫೋರ್ಬ್ಸ್ ಬಿಡುಗಡೆ ಮಾಡಿರುವ 2018 ಯೂಟ್ಯೂಬ್ ಸ್ಟಾರ್ ಪಟ್ಟಿಯಲ್ಲಿ ವಿಶ್ವದ ಗಣ್ಯಾತಿಗಣ್ಯರನ್ನೆಲ್ಲಾ ಹಿಂದಿಕ್ಕಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಅಲ್ಲದೇ ಕಳೆದ ವರ್ಷ 71 ಕೋಟಿ ರೂಪಾಯಿ ಆದಾಯ ಗಳಿಸುವ ಮುಖಾಂತರ ಫೋರ್ಬ್ಸ್ ಪಟ್ಟಿಯಲ್ಲಿ 8ನೇ ಸ್ಥಾನ ಪಡೆದುಕೊಂಡಿದ್ದ.

    1.73 ಕೋಟಿ ಫಾಲೋವರ್ಸ್ ಹೊಂದಿರುವ ರೇಯಾನ್ ವಿಡಿಯೋವನ್ನು ಕೋಟ್ಯಂತರ ಮಂದಿ ವೀಕ್ಷಿಸುತ್ತಾರೆ. ಬಾಲಕ ಮನೆಯಲ್ಲಿಯೇ ಕುಳಿತು ವಿಡಿಯೋ ಮೂಲಕ ಆಟಿಕೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ವಿವರಿಸುತ್ತಾನೆ. ಇದನ್ನು ವಿಡಿಯೋ ಮಾಡುವ ಆತನ ತಂದೆ-ತಾಯಿಗಳು ಅದನ್ನು ಯೂಟ್ಯೂಬಿನಲ್ಲಿ ಅಪ್‍ಲೋಡ್ ಮಾಡುತ್ತಾರೆ.

    ರೇಯಾನ್‍ನ ವಿಡಿಯೋಗಳನ್ನು ನೋಡುವವರು ಬಹುತೇಕ 3 ರಿಂದ 7 ವರ್ಷದ ಮಕ್ಕಳಾಗಿದ್ದಾರೆ. ಅಲ್ಲದೇ ಅತಿಹೆಚ್ಚು ಅಮೆರಿಕದ ಅಭಿಮಾನಿಗಳನ್ನು ಹೊಂದಿದ್ದಾನೆ. ಇದಲ್ಲದೇ ಬಾಲಕ ತನ್ನ ‘ರೇಯಾನ್ಸ್ ವರ್ಲ್ಡ್ಸ್’ ಎಂಬ ಹೆಸರಿನ ಮೂಲಕ ಮಕ್ಕಳ ಆಟಿಕೆ ಹಾಗೂ ಬಟ್ಟೆಗಳ ವ್ಯಾಪಾರವನ್ನು ಮಾಡುತ್ತಿದ್ದಾನೆ. ಈತ ತನ್ನ ಉತ್ಪನ್ನಗಳನ್ನು ಇ-ಕಾಮರ್ಸ್ ದಿಗ್ಗಜ ವಾಲ್‍ಮಾರ್ಟ್ ನಲ್ಲಿ ಮಾರಾಟ ಮಾಡುತ್ತಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಬ್ಲಿಕ್ ಟಿವಿಯಿಂದ ಮತ್ತೊಂದು ಚಾನೆಲ್ – ‘ಪಬ್ಲಿಕ್ ಮೂವೀಸ್’ ಚಾನೆಲ್ ಶೀಘ್ರದಲ್ಲೇ ಲೋಕಾರ್ಪಣೆ

    ಪಬ್ಲಿಕ್ ಟಿವಿಯಿಂದ ಮತ್ತೊಂದು ಚಾನೆಲ್ – ‘ಪಬ್ಲಿಕ್ ಮೂವೀಸ್’ ಚಾನೆಲ್ ಶೀಘ್ರದಲ್ಲೇ ಲೋಕಾರ್ಪಣೆ

    ಬೆಂಗಳೂರು: ಸಮಸ್ತ ಕನ್ನಡದ ಜನತೆಗೆ ಪಬ್ಲಿಕ್ ಟಿವಿ ವತಿಯಿಂದ ಸಂತಸದ ಸುದ್ದಿ. ನೀವು ಹರಸಿ, ಹಾರೈಸಿ ಬೆಳೆಸಿದ ನಿಮ್ಮ ರೈಟ್‍ಮೆನ್ ಮೀಡಿಯಾದ ಪಬ್ಲಿಕ್ ಟಿವಿ ನ್ಯೂಸ್ ಹಾಗೂ ಪಬ್ಲಿಕ್ ಮ್ಯೂಸಿಕ್ ಚಾನೆಲ್ ಜೊತೆಗೆ ಹೊಸದೊಂದು ಚಾನೆಲ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ.

    2018ರ ಫೆಬ್ರವರಿ 12ರಂದು ಪಬ್ಲಿಕ್ ಟಿವಿ 6ನೇ ವರ್ಷದ ಸಂಭ್ರಮಾಚರಣೆ ವೇಳೆ ನಿಮ್ಮ ಪಬ್ಲಿಕ್ ಟಿವಿ ಸಮೂಹದ 3ನೇ ಚಾನೆಲ್ ಪಬ್ಲಿಕ್ ಮೂವೀಸ್ ಲಾಂಚ್ ಆಗಲಿದೆ. ಪಬ್ಲಿಕ್ ಮ್ಯೂಸಿಕ್ 3ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಈ ವಿಷಯವನ್ನು ಘೋಷಣೆ ಮಾಡಿದ್ರು.

    ಇದೇ ವರ್ಷ ಫೆಬ್ರವರಿ 12 ರಂದು ಪಬ್ಲಿಕ್ ಟಿವಿ 5ನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ತು. ಸೆಪ್ಟೆಂಬರ್ 28 ಅಂದ್ರೆ ಇಂದು ಪಬ್ಲಿಕ್ ಮ್ಯೂಸಿಕ್ ಚಾನೆಲ್ ತನ್ನ ಮೂರನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ತಿದೆ. ಇದೀಗ ಈ ಎರಡು ಚಾನೆಲ್‍ಗಳ ಜೊತೆ ಪಬ್ಲಿಕ್ ಮೂವೀಸ್ ಚಾನೆಲ್ ಕೂಡ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ.

    ಈ ಬಾರಿ ಮೂರು ವರ್ಷ ಪ್ಲಸ್ಸು ಎಂಬ ಕಾನ್ಸೆಪ್ಟ್ ನೊಂದಿಗೆ ಪಬ್ಲಿಕ್ ಮ್ಯೂಸಿಕ್ ನಿಮ್ಮ ಮುಂದೆ ಬಂದಿದೆ. ಮೂರನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ನಟ ಧ್ರುವಾ ಸರ್ಜಾ, ನಟಿ ರಚಿತಾ ರಾಮ್, ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಮುಖ್ಯ ಅತಿಥಿಗಳಾಗಿದ್ರು. ಆನಂದ್ ಆಡಿಯೋ ಸಂಸ್ಥೆಯ ಮಾಲೀಕರಾದ ಶ್ಯಾಮ್, ಅಶ್ವಿನಿ ರೆಕಾರ್ಡಿಂಗ್ ಸಂಸ್ಥೆಯ ಮಾಲೀಕರಾದ ಅಶ್ವಿನಿ ರಾಮ್‍ಪ್ರಸಾದ್, ಸ್ವರ್ಣ ಆಡಿಯೋ ರೆಕಾರ್ಡಿಂಗ್ ಕಂಪೆನಿಯ ಇಬ್ಬರು ಮಾಲೀಕರಾದ ನವೀನ್ ಯಜಮಾನ್ ಹಾಗೂ ಶಶಾಂಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

     ಪಬ್ಲಿಕ್ ಮ್ಯೂಸಿಕ್ 2ನೇ ವರ್ಷದ ಸಂಭ್ರಮಾಚರಣೆ ವೇಳೆ ದಾಖಲೆಯ ಮ್ಯೂಸಿಕಲ್ ಮ್ಯಾರಥಾನ್ ಕಾರ್ಯಕ್ರಮ ಮಾಡಿದ್ದಾಗ ನೀವು ನೀಡಿದ್ದ ಅಭೂತಪೂರ್ವ ಬೆಂಬಲ ನಮಗೆ ಇನ್ನೂ ನೆನಪಿದೆ. ನಮ್ಮನ್ನು ನಿರಂತರ ಬೆಂಬಲಿಸಿ, ಕೈಹಿಡಿದು ಮುನ್ನಡೆಸಿದ ನಿಮಗೆ ಹೃದಯಪೂರ್ವಕ ಕೃತಜ್ಞತೆಗಳು.