Tag: Char Dham

  • ಚಾರ್‌ಧಾಮ್ ಯಾತ್ರೆಗೆ ಚಾಲನೆ – ಶಾಸ್ತ್ರೋಕ್ತವಾಗಿ ಕೇದಾರನಾಥ ಧಾಮದ ಬಾಗಿಲು ಓಪನ್

    ಚಾರ್‌ಧಾಮ್ ಯಾತ್ರೆಗೆ ಚಾಲನೆ – ಶಾಸ್ತ್ರೋಕ್ತವಾಗಿ ಕೇದಾರನಾಥ ಧಾಮದ ಬಾಗಿಲು ಓಪನ್

    ರುದ್ರಪ್ರಯಾಗ: ಉತ್ತರಾಖಂಡದ (Uttarakhand) ಪವಿತ್ರ ಚಾರ್‌ಧಾಮ್ ಯಾತ್ರೆಯ (Chardham Yatra) ಭಾಗವಾಗಿ, ಇಂದು ಕೇದಾರನಾಥ ಧಾಮದ ಬಾಗಿಲುಗಳನ್ನು ತೆರಲಾಯಿತು. ಬೆಳಿಗ್ಗೆ 7 ಗಂಟೆಗೆ ವೃಷಭ ಲಗ್ನದಲ್ಲಿ ಭಕ್ತರ ದರ್ಶನಕ್ಕಾಗಿ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು `ಹರ್ ಹರ್ ಮಹಾದೇವ’ ಜಯಘೋಷ ಕೂಗಿದರು.

    ಕೇದಾರನಾಥ ದೇವಾಲಯವನ್ನು ಈ ಬಾರಿ 108 ಕ್ವಿಂಟಾಲ್ ವಿವಿಧ ರೀತಿಯ ಹೂಗಳಿಂದ ಅಲಂಕರಿಸಲಾಗಿದೆ. ನೇಪಾಳ, ಥೈಲ್ಯಾಂಡ್ ಮತ್ತು ಶ್ರೀಲಂಕಾದಿಂದ ತರಲಾಗಿದ್ದ ಗುಲಾಬಿ, ಮಲ್ಲಿಗೆ ಸೇರಿದಂತೆ 54 ಬಗೆಯ ಹೂಗಳಿಂದ ದೇವಾಲಯದ ಶೃಂಗರಿಸಲಾಗಿದೆ.ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

    ಗುರುವಾರ ಸಂಜೆ ಬಾಬಾ ಕೇದಾರನಾಥನ ಪಂಚಮುಖಿ ಡೋಲಿಯು ಕೇದಾರನಾಥ ಧಾಮಕ್ಕೆ ಆಗಮಿಸಿತು. ಡೋಲಿಯ ಆಗಮನದ ಸಂದರ್ಭದಲ್ಲಿ ಭಕ್ತರು ಭಕ್ತಿಭಾವದಿಂದ ಸ್ವಾಗತಿಸಿದರು. ಬಾಗಿಲು ತೆರೆಯುವ ಸಮಾರಂಭದಲ್ಲಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾಗವಹಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೊದಲ ಪೂಜೆ ಸಲ್ಲಿಸಲಾಯಿತು.

    ಬಾಗಿಲು ತೆರೆಯುತ್ತಿದ್ದಂತೆ ಭಕ್ತರು ತಮ್ಮ ಶ್ರದ್ಧೆಯನ್ನು ಜಯಕಾರಗಳ ಮೂಲಕ ವ್ಯಕ್ತಪಡಿಸಿದರು. ದೇವಾಲಯದ ಸುತ್ತಲೂ ಭಕ್ತರ ದಂಡು ಜಮಾಯಿಸಿತು. ಕೇದಾರನಾಥ ಧಾಮದಲ್ಲಿ ಈ ಬಾರಿ ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಭದ್ರತೆ, ಆರೋಗ್ಯ ಸೇವೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೇದಾರನಾಥ ಯಾತ್ರೆಗಾಗಿ ಸರ್ಕಾರವು ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಿದೆ. ಈ ಬಾರಿ ಕೇದಾರನಾಥ ಮತ್ತು ಯಮುನೋತ್ರಿ ಮಾರ್ಗದಲ್ಲಿ 4,300ಕ್ಕೂ ಹೆಚ್ಚು ಕುದುರೆ-ಗಾಡಿ ಸಂಚಾಲಕರು ಸೇವೆಯನ್ನು ಒದಗಿಸಲಿದ್ದಾರೆ. ಇದರ ಜೊತೆಗೆ, ಯಾತ್ರಿಗಳ ಸುರಕ್ಷತೆಗಾಗಿ ಪ್ಯಾರಾ ಮಿಲಿಟರಿ ಫೋರ್ಸ್‌ನ ತುಕಡಿಯನ್ನು ಮೊದಲ ಬಾರಿಗೆ ನಿಯೋಜಿಸಲಾಗಿದೆ.ಇದನ್ನೂ ಓದಿ: ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ಶಿವಣ್ಣನ ‘A for ಆನಂದ್’ ಸಿನಿಮಾ

  • ಚಾರ್ ಧಾಮ್ ಯಾತ್ರೆ – ಇಲ್ಲಿಯವರೆಗೆ 46 ಯಾತ್ರಿಕರು ಹೃದಯಾಘಾತದಿಂದ ಸಾವು

    ಚಾರ್ ಧಾಮ್ ಯಾತ್ರೆ – ಇಲ್ಲಿಯವರೆಗೆ 46 ಯಾತ್ರಿಕರು ಹೃದಯಾಘಾತದಿಂದ ಸಾವು

    ಡೆಹ್ರಾಡೂನ್: ಮೇ 3 ರಂದು ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಪ್ರಾರಂಭವಾದಾಗಿನಿಂದ ದೇಗುಲಗಳಿಗೆ ಹೋಗುವ ಮಾರ್ಗದಲ್ಲಿ ಇಲ್ಲಿವರೆಗೆ 48 ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅವುಗಳಲ್ಲಿ 46 ಜನರು ಹೃದಯಾಘಾತ ಹಾಗೂ ಇತರ ಹೃದಯ ಸಂಬಂಧಿ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಧಿಕ ರಕ್ತದೊತ್ತಡ, ಹೃದಯಾಘಾತಗಳಿಂದ ಹೆಚ್ಚಿನ ಚಾರ್‌ಧಾಮ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಉತ್ತರಾಖಂಡ ಸರ್ಕಾರ ಈ ಹಿಂದೆಯೇ ಯಾತ್ರಾರ್ಥಿಗಳಿಗೆ ಚಾರಣವನ್ನು ಪ್ರಾರಂಭಿಸುವುದಕ್ಕೂ ಮೊದಲು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ಸೂಚಿಸಿತ್ತು. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಹೆಚ್ಚುತ್ತಿರುವ ಯಾತ್ರಾರ್ಥಿಗಳ ಸಾವಿನ ಹಿನ್ನೆಲೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯಾತ್ರಾರ್ಥಿಗಳಿಗೆ ತಮ್ಮ ವೈದ್ಯರೊಂದಿಗೆ ಸಮಾಲೋಚಿಸಿ, ಬಳಿಕವೇ ತೀರ್ಥಯಾತ್ರೆಗೆ ತೆರಳುವಂತೆ ಮನವಿ ಮಾಡಿದ್ದರು. ಚಾರ್ ಧಾಮ್ ಯಾತ್ರಾ ಸ್ಥಳದಲ್ಲಿ ಅಗತ್ಯ ವಸ್ತುಗಳ ಸೀಮಿತ ವ್ಯವಸ್ಥೆಗಳಿರುವುದರಿಂದ, ಆಹಾರ ಹಾಗೂ ನೀರಿನ ವ್ಯವಸ್ಥೆ ಮಾಡಿಕೊಂಡೇ ಪ್ರಯಾಣವನ್ನು ಪ್ರಾರಂಭಿಸಬೇಕಾಗಿ ಸೂಚನೆ ನೀಡಿದ್ದಾರೆ.

    ಶುಕ್ರವಾರ ಉತ್ತರಾಖಂಡ ಸರ್ಕಾರ ಚಾರ್ ಧಾಮ್ ಯಾತ್ರೆಯ ಆಫ್‌ಲೈನ್ ನೋಂದಣಿ ಅವಧಿಯನ್ನು ಒಂದು ತಿಂಗಳಿಂದ ಒಂದು ವಾರಕ್ಕೆ ಕಡಿತಗೊಳಿಸಿದೆ. ಪ್ರಯಾಣದ ಮಾರ್ಗಗಳಲ್ಲಿ ಸುಮಾರು 20 ಸ್ಥಳಗಳಲ್ಲಿ ನೋಂದಣಿ ಮಾಡಲಾಗುತ್ತಿದೆ ಎಂದು ರಾಜ್ಯ ಪ್ರವಾಸೋದ್ಯಮ ಕಾರ್ಯದರ್ಶಿ ತಿಳಿಸಿದ್ದಾರೆ. ಇದನ್ನೂ ಓದಿ: ಬಕಲ್‌ ಹಾಕದೇ ISI ಮಾರ್ಕ್‌ ಇಲ್ಲದ ಹೆಲ್ಮೆಟ್‌ ಧರಿಸಿದರೆ 2 ಸಾವಿರ ದಂಡ – ಚೆಕ್‌ ಮಾಡೋದು ಹೇಗೆ?

    2 ವರ್ಷಗಳ ಕಾಲ ಕೋವಿಡ್-19 ಕಾರಣದಿಂದಾಗಿ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ಪೂರ್ಣ ಪ್ರಮಾಣದಲ್ಲಿ ಯಾತ್ರೆ ಪ್ರಾರಂಭವಾಗಿರುವುದರಿಂದ ಯಾತ್ರಿಕರ ಸಂಖ್ಯೆಯೂ ಹೆಚ್ಚಾಗಿದೆ.

    ಅಕ್ಷಯ ತೃತೀಯ ಹಿನ್ನೆಲೆ ಮೇ 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ಪೋರ್ಟಲ್‌ಗಳನ್ನು ತೆರೆಯಲಾಗಿದೆ. ಮೇ 6ರಂದು ಕೇದಾರನಾಥ ಹಾಗೂ ಮೇ 8ರಂದು ಬದರಿನಾಥ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ.

  • ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    ನವದೆಹಲಿ: ರೈಲ್ವೆ ಇಲಾಖೆ ಮೇ ತಿಂಗಳಲ್ಲಿ ಚಾರ್ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದೆ. ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದ್ದು, ಹಲವು ಅಗತ್ಯ ಸೌಲಭ್ಯಗಳಿರುವ ಟೂರ್ ಪ್ಯಾಕೇಜ್ ಇದಾಗಿದೆ.

    ಯಾವ ಸ್ಥಳಗಳಿಗೆ: ಹರಿದ್ವಾರ, ಬಾರ್‍ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್‍ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್‍ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

    ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ. ಇದನ್ನೂ ಓದಿ: ಕ್ರಿಶ್ಚಿಯನ್ ವರ, ಮುಸ್ಲಿಂ ವಧು ಹಿಂದೂ ಸಂಪ್ರದಾಯದಂತೆ ಮದುವೆ 

    ಪ್ರಯಾಣ ದರ: ಒಬ್ಬರಿಗೆ 77,600 ಮತ್ತು ಇಬ್ಬರಿಗೆ 61,400 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಪ್ರಯಾಣದರದೊಂದಿಗೆ ವಸತಿ, ಊಟೋಪಚಾರ ವೆಚ್ಚಗಳನ್ನೂ ಒಳಗೊಂದಿದೆ. ಹೆಚ್ಚಿನ ಮಾಹಿತಿಗೆ  www.irctctourism.com ಜಾಲತಾಣ ನೋಡಿ.