Tag: Charanjit Singh Channi

  • ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ

    ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ

    ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದರು.

    ಆಮ್ ಆದ್ಮಿ ಪಕ್ಷದ ನಾಯಕರಾದ ದುರ್ಗೇಶ್ ಪಾಠಕ್, ಸಂಜಯ್ ಸಿಂಗ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಪಡಿಸಿ ಈ ಹೇಳಿಕೆಯನ್ನು ನೀಡಿದ್ದೇನೆ. ಆದರೆ ನಿನ್ನೆಯಿಂದ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪಂಜಾಬ್‍ನ ಪ್ರಗತಿಗಾಗಿ ತಮ್ಮ ರಕ್ತ ಮತ್ತು ಬೆವರು ಸುರಿಸಿರುವವರ ಜೊತೆಗೆ ನಾವು ಪ್ರೀತಿಯ ಬಾಂಧವ್ಯವನ್ನು ಹೊಂದಿದ್ದೇವೆ ಎಂದರು.

    ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ. ಉತ್ತರ ಪ್ರದೇಶ, ಬಿಹಾರ, ದೆಹಲಿ ಜನರು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ. ನಾವು ಉತ್ತರಪ್ರದೇಶ ಜನರಿಂದ ಪಂಜಾಬ್‍ನ ದಾರಿ ತಪ್ಪಿಸಲು ಬಿಡುವುದಿಲ್ಲ ಎಂದು ನಿನ್ನೆ ನಡೆದ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಪಕ್ಕದಲ್ಲಿದ್ದ ಪ್ರಿಯಾಂಕಾ ಗಾಂಧಿ ಚಪ್ಪಾಳೆ ತಟ್ಟಿ ಮುಗುಳ್ನಕ್ಕಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಿಡಿಕಾರಿದ್ದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

  • ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ

    ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ

    ಚಂಡೀಗಢ: ವಿಭಜಕ ಮನಸ್ಥಿತಿಯ ಜನರಿಗೆ ಒಂದು ಕ್ಷಣವೂ ಪಂಜಾಬ್ ಅನ್ನು ಆಳಲು ಬಿಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಪಂಜಾಬ್‍ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂದ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಹೇಳಿಕೆಗೆ ದಿಲ್ಲಿಯ ಕುಟುಂಬವು ಚಪ್ಪಾಳೆ ತಟ್ಟಿದ್ದನ್ನು ಇಡೀ ದೇಶವೇ ನೋಡಿದೆ ಎಂದು ವಾಗ್ದಾಳಿ ನಡೆಸಿದರು.

    ಗುರು ಗೋವಿಂದ್ ಸಿಂಗ್ ಹುಟ್ಟಿದ್ದು ಬಿಹಾರದ ಪಾಟ್ನಾ ಸಾಹಿಬ್‍ನಲ್ಲಿ. ಗುರು ಗೋವಿಂದ್ ಸಿಂಗ್ ಅವರನ್ನು ಪಂಜಾಬ್‍ನಿಂದ ಹೊರಹಾಕುತ್ತೀರಾ? ಎಂದ ಅವರು, ನಿನ್ನೆ ಗುರು ರವಿದಾಸ್ ಜನ್ಮ ವಾರ್ಷಿಕೋತ್ಸವಕ್ಕೆ ವಿವಿಧ ರಾಜಕೀಯ ನಾಯಕರು ದೇವಾಲಯಗಳಿಗೆ ಭೇಟಿ ನೀಡುದ್ದಾರೆ. ನಿನ್ನೆ ನಾವು ಸಂತ ರವಿದಾಸ್ ಜಯಂತಿ ಆಚರಿಸಿದ್ದೆವು. ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನಿಸಿದ್ದರು. ನೀವು ಸಂತ ರವಿದಾಸ್ ಅವರನ್ನು ಪಂಜಾಬ್‍ನಿಂದ ತೆಗೆದುಹಾಕುತ್ತೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿ ಹೇಳಿಕೆಯನ್ನು ಬೆಂಬಲಿಸಿದ್ದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಪ್ರಬಲ ಸ್ಪರ್ಧೆಯಲ್ಲಿದೆ.

  • ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್‍ನವರಿಗೆ ತಿಳಿದಿದೆಯೇ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.

    ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್‍ಗೆ ಬರಲು ಬಿಡಬೇಡಿ ಎಂಬ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರು ಇಂತಹ ಹೇಳಿಕೆಗಳನ್ನು ಹೇಗೆ ನೀಡುತ್ತಾರೆಂದು ನನಗೆ ದಿಗ್ಭ್ರಮೆಯಾಗಿದೆ ಎಂದು ಹೇಳಿದರು.

    ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಕಾಂಗ್ರೆಸ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿ, ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

  • ಭಗವಂತ್ ಮಾನ್ ಒಬ್ಬ ಕುಡುಕ, ಅನಕ್ಷರಸ್ಥ: ಚರಣ್‍ಜಿತ್ ಸಿಂಗ್ ಚನ್ನಿ

    ಭಗವಂತ್ ಮಾನ್ ಒಬ್ಬ ಕುಡುಕ, ಅನಕ್ಷರಸ್ಥ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಒಬ್ಬ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ವಾಗ್ದಾಳಿ ನಡೆಸಿದ್ದಾರೆ.

     

    ಬುಧವಾರ ಬಟಿಂಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಗವಂತ್ ಮಾನ್ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ. ಅವರು ಮೂರು ವರ್ಷಗಳ ಕಾಲ 12 ನೇ ತರಗತಿಯನ್ನು ಓದಿ ಪಾಸಾಗಿದ್ದಾರೆ. ಅಂತಹ ವ್ಯಕ್ತಿಗೆ ಯಾರಾದರೂ ಪಂಜಾಬ್‍ನ ಅಧಿಕಾರವನ್ನು ಹೇಗೆ ನೀಡಲು ಸಾಧ್ಯ ಎಂದು ಎಎಪಿಯನ್ನು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು

    ಎಎಪಿ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಪಂಜಾಬ್ ಅನ್ನು ಆತನ ಕೈಗೆ ನೀಡಲು ಹೇಗೆ ನಿರ್ಧರಿಸಿದ್ದಾರೆ? ಎಂದು ಕೇಳಿದ್ದಾರೆ. ಬಟಿಂಡಾ ನಗರ ಕ್ಷೇತ್ರದ ಅಭ್ಯರ್ಥಿ ಮನ್‍ಪ್ರೀತ್ ಸಿಂಗ್ ಬಾದಲ್ ಪರವಾಗಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ರೋಡ್‍ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಿದರು. ಫೆಬ್ರವರಿ 20 ರಂದು ಪಂಜಾಬ್‍ನಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಫೇಸ್‌ಬುಕ್ ಉದ್ಯೋಗಿಗಳು ಇನ್ನು ಮುಂದೆ ಮೆಟಾಮೇಟ್ಸ್: ಜುಕರ್‌ಬರ್ಗ್

  • ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

    ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತವಾಗಿ ಚರಣ್‍ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚನ್ನಿ ಅವರ ನಾಮನಿರ್ದೇಶನದೊಂದಿಗೆ, ಪಂಜಾಬ್‍ನ ದಲಿತ ಮತದಾರರನ್ನು ಗೆಲ್ಲಲು ಕಾಂಗ್ರೆಸ್ ಯೋಚಿಸುತ್ತಿದೆ. ಪಂಜಾಬ್‍ನ ಜನಸಂಖ್ಯೆಯ ಶೇಕಡಾ 32ಕ್ಕಿಂತ ಹೆಚ್ಚು ದಲಿತರು ಇದ್ದಾರೆ. ಪಂಜಾಬ್‍ನಲ್ಲಿ ದಲಿತ ಸಮುದಾಯದಿಂದ ಚನ್ನಿ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

  • ನವಜೋತ್ ಸಿಂಗ್ ಸಿಧು ನನ್ನ ಸಹೋದರನಿದ್ದಂತೆ: ಚರಣ್‍ಜಿತ್ ಸಿಂಗ್ ಚನ್ನಿ

    ನವಜೋತ್ ಸಿಂಗ್ ಸಿಧು ನನ್ನ ಸಹೋದರನಿದ್ದಂತೆ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ನವಜೋತ್ ಸಿಂಗ್ ಸಿಧು ಅವರು ತಮ್ಮ ಸಹೋದರನಿದ್ದಂತೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಜೊತೆಗೆ ಕಾಂಗ್ರೆಸ್‍ಗೆ ಪ್ರತಿಯೊಬ್ಬ ಕಾರ್ಯಕರ್ತನೂ ಮುಖ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್‍ನಲ್ಲಿನ ಆಂತರಿಕ ಅಧಿಕಾರದ ಕಲಹದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ಪಂಜಾಬ್‍ನಲ್ಲಿ ಮಾತನಾಡಿದ ಅವರು, ನವಜೋತ್ ಸಿಂಗ್ ಸಿಧು ನಮ್ಮೊಂದಿಗಿದ್ದಾರೆ. ಸಿಧು ಅವರು ರಾಹುಲ್ ಗಾಂಧಿ ಜೊತೆಯಲ್ಲಿದ್ದಾರೆ. ನಮಲ್ಲಿ ಅನೇಕ ನಾಯಕರಿದ್ದಾರೆ. ಸಿಧು ನನ್ನ ಸಹೋದರ ಮತ್ತು ನಮ್ಮ ಪಕ್ಷದ ಮುಖ್ಯಸ್ಥ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ, ಚೀನಾ ಏಜೆಂಟ್‌ ಆಗಿದ್ದಾರೆ ತೆಲಂಗಾಣ ಸಿಎಂ: ಬಿಜೆಪಿ

    ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷವು ನಡೆಸಿದ ಟೆಲಿ-ವೋಟಿಂಗ್ ಬಳಿಕ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರು. ಚನ್ನಿ ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗಿಂತ ಹೆಚ್ಚು ಮತಗಳನ್ನು ಪಡೆದಿದ್ದರು. ಪಂಜಾಬ್‍ನ ಜನಸಂಖ್ಯೆಯಲ್ಲಿ ಶೇಕಡಾ 32 ಕ್ಕಿಂತಲೂ ಹೆಚ್ಚು ಮಂದಿ ದಲಿತರಿದ್ದಾರೆ. ಪಂಜಾಬ್‍ನ ದಲಿತ ಸಮುದಾಯದಿಂದ ಮೊದಲ ಬಾರಿಗೆ ಚನ್ನಿ ಮುಖ್ಯಮಂತ್ರಿಯಾಗಿದ್ದು, ದಲಿತ ಮತದಾರರನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

  • ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ: ಸಿಎಂ ಚನ್ನಿ ಭರವಸೆ

    ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ: ಸಿಎಂ ಚನ್ನಿ ಭರವಸೆ

    ಚಂಡೀಗಢ: ಮತದಾನಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಪಂಜಾಬ್‍ನಲ್ಲಿ ಚುನಾವಣೆ ಕಾವು ಜೋರಾಗಿದ್ದು, ಮತದಾರರನ್ನು ಓಲೈಸಲು ಹಲವು ಭರಪೂರ ಕೊಡುಗೆಗಳನ್ನು ಘೋಷಿಸಲಾಗುತ್ತಿದೆ. ಇದೇ ಹಾದಿಯಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಚಿತ ಕೊಡುಗೆಗಳ ಭರವಸೆ ನೀಡಿದ್ದಾರೆ.

    ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಂಜಾಬ್‍ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಆರು ತಿಂಗಳಲ್ಲಿ ಬಡವರಿಗೆ ವಸತಿ ಕಲ್ಪಿಸುವುದಾಗಿ ಘೋಷಿಸಿದ್ದಾರೆ. ನಾವು ಶಿಕ್ಷಣ, ಆರೋಗ್ಯ ಮತ್ತು ವಸತಿಗಳಲ್ಲಿ ಕ್ಷೇತ್ರದಲ್ಲಿ ಕೇಂದ್ರಿಕರಿಸಲಿದ್ದು, ಸಣ್ಣ ಉದ್ಯಮಿಗಳಿಗೂ ತೇರಿಗೆ ರಿಯಾಯಿತಿ ನೀಡುತ್ತೇವೆ, ಮಹಿಳೆಯರ ಅಭ್ಯುದಯಕ್ಕಾಗಿ ಕಾಂಗ್ರೆಸ್ ಶ್ರಮಿಸುತ್ತಿದೆ ಎಂದು ಚನ್ನಿ ಟ್ವೀಟ್ ಮಾಡಿದ್ದಾರೆ.

    ಆಟಾ – ದಾಲ್ ( ಹಿಟ್ಟು – ಬೇಳೆ ) ಹೊಟ್ಟೆಯನ್ನು ಮಾತ್ರ ತುಂಬಿಸುತ್ತದೆ. ಪಂಜಾಬಿನ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯವಾಗಿದೆ. ಆದರೆ ಖಾಸಗಿ ಸಂಸ್ಥೆಗಳಲ್ಲಿ ಓದುವುದು ತುಂಬಾ ದುಬಾರಿಯಾಗಿದ್ದು, ಪೋಷಕರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದರಿಂದ ನಾವು ವಿದ್ಯಾವಂತರಾಗಿದ್ದೇವೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಗುಣಮಟ್ಟದ ಶಿಕ್ಷಣ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

    ಅಕಾಲಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಿದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಗಳನ್ನು ಮರುಪ್ರಾರಂಭಿಸಲಾಗುವುದು. ಸಾಮಾನ್ಯ ವರ್ಗದ ಬಡ ವಿದ್ಯಾರ್ಥಿಗಳು ಮತ್ತು ರೈತ ಕುಟುಂಬದಿಂದ ಬಂದವರು ಸಹ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಶುಲ್ಕದ ಮೇಲೆ ಕಡಿಮೆ ನಿಬಂಧನೆಗಳು ಇರುತ್ತವೆ ಎಂದು ಚನ್ನಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್‌ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್‌

    ಯುವಕರಿಗೆ ಉದ್ಯೋಗದ ಭರವಸೆ ನೀಡಿರುವ ಅವರು, ಪ್ರತಿಯೊಬ್ಬ ಯುವಕರು ಉದ್ಯೋಗವನ್ನು ಹೊಂದಿರಬೇಕು, ಇದಕ್ಕಾಗಿ ಸರ್ಕಾರ ಸಾಲ ನೀಡಲಿದೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಹೊಂದಿರುವವರಿಗೆ ಮತ್ತು ವಿದೇಶದಲ್ಲಿ ಅಧ್ಯಯನ ಮಾಡಲು ಅಥವಾ ಕೆಲಸ ಮಾಡಲು ಬಯಸುವವರಿಗೆ ಖಾತರಿ ಯೋಜನೆಯನ್ನು ಪರಿಚಯಿಸುತ್ತೇವೆ. ಅಂತಹ ಅಭ್ಯರ್ಥಿಗಳ ವಿದೇಶಿ ಪ್ರಯಾಣಕ್ಕೆ ಅನುಕೂಲವಾಗುವ ಯೋಜನೆಗಳನ್ನು ಸಹ ಪರಿಚಯಿಸಲಾಗುವುದು ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್‍ ಶಾಸಕಿ

    ನನಗೆ ಮೂರು ತಿಂಗಳು ಮಾತ್ರ ಸಿಕ್ಕಿತು. ಆದರೆ ಐದು ವರ್ಷ ಸಿಕ್ಕರೆ ಒಂದು ಲಕ್ಷ ಉದ್ಯೋಗ ಮಂಜೂರು ಮಾಡುತ್ತೇನೆ, ವಿದೇಶಿ ಆಸ್ಪತ್ರೆಗಳಲ್ಲಿ ಒದಗಿಸುವ ಸೌಲಭ್ಯಗಳ ಮಾದರಿಯಲ್ಲಿ ನಾವು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುತ್ತೇವೆ, ಆರು ತಿಂಗಳಲ್ಲಿ, ಪ್ರತಿಯೊಬ್ಬ ಬಡವನ ತಲೆಯ ಮೇಲೆ ಗಟ್ಟಿಯಾದ ಸೂರು ಇರುವುದನ್ನು ನಾನು ಖಚಿತಪಡಿಸುತ್ತೇನೆ. ಇದು ನನ್ನ ಬದ್ಧತೆ ಎಂದು ಅವರು ಟ್ವಿಟ್ ನಲ್ಲಿ ವಿವರಿಸಿದ್ದಾರೆ.

  • ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ಚಂಡೀಗಢ: ಫಿರೋಜ್‍ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಭದ್ರತೆಯನ್ನು ನೀಡಲಾಗದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಪಂಜಾಬ್‍ನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದರು.

    ಲುಧಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಚರಂಜಿತ್ ಚನ್ನಿ ಅವರು ಪಂಜಾಬ್‍ನಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ರಚಿಸುವ ಕನಸು ಕಾಣುತ್ತಿದ್ದಾರೆ. ಆದರೆ ಅವರು ದೇಶದ ಪ್ರಧಾನಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು ವಿಫಲವಾದ ಮುಖ್ಯಮಂತ್ರಿ ಎನಿಸಿದ್ದಾರೆ. ಇಂತಹವರು ಪಂಜಾಬ್‍ಗೆ ಭದ್ರತೆಯನ್ನು ಒದಗಿಸಲು ಸಾಧ್ಯವೆ ಎಂದು ಕಿಡಿಕಾರಿದರು.

    ಕಳೆದ ತಿಂಗಳು ಪಂಜಾಬ್‍ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿಮೀ ದೂರದಲ್ಲಿ ಕೆಲವು ಪ್ರತಿಭಟನಾಕಾರರು ರಸ್ತೆ ತಡೆಯಿಂದಾಗಿ 15-20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಸಿಲುಕಿಕೊಂಡಿತ್ತು.

    ಇದೇ ವೇಳೆ ಪಂಜಾಬ್ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆಯಾದರೆ ಡ್ರಗ್ಸ್ ಸಮಸ್ಯೆಯನ್ನು ನಿವಾರಿಸಲು ಹೆಚ್ಚಿನ ಮಹತ್ವ ನೀಡುತ್ತದೆ. ಪಂಜಾಬ್‍ನಲ್ಲಿ ಸರ್ಕಾರ ರಚನೆಯಾದ ನಂತರ, ನಾವು ರಾಜ್ಯದ ನಾಲ್ಕು ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಜೊತೆಗೆ ಮಾದಕ ದ್ರವ್ಯ ತಡೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕಾರ್ಯಪಡೆ ರಚಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ ಜಾತಿಗಣತಿ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ

    ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು ಮತ್ತು 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಸ್‍ಎಡಿ-ಬಿಜೆಪಿ ಸರ್ಕಾರವನ್ನು ಸೋಲಿಸಿತ್ತು. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್‌ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್

  • ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರಾಗಿಯೂ ಆಯ್ಕೆಯಾಗುವುದಿಲ್ಲ: ಅರವಿಂದ ಕೇಜ್ರಿವಾಲ್

    ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರಾಗಿಯೂ ಆಯ್ಕೆಯಾಗುವುದಿಲ್ಲ: ಅರವಿಂದ ಕೇಜ್ರಿವಾಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಸ್ಪರ್ಧಿಸುತ್ತಿರುವ ಎರಡೂ ಸ್ಥಾನಗಳಲ್ಲಿ ಸೋಲುತ್ತಾರೆ ಮತ್ತು ಇದು ಅವರ ಮತ್ತೊಂದು ಟೆಲಿಪೋಲ್ ಮೂಲಕ ದೃಢೀಕರಿಸಲ್ಪಟ್ಟಿದೆ. ಮೂರು ಬಾರಿ ಪುನರಾವರ್ತನೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಪಂಜಾಬ್‍ನ ಅಮೃತಸರದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಕೇಜ್ರಿವಾಲ್ ಅವರು, ಚರಣ್‍ಜಿತ್ ಸಿಂಗ್ ಚನ್ನಿ ಅವರು ಚಮ್ಕೌರ್ ಸಾಹಿಬ್ ಮತ್ತು ಭದೌರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ನಾವು ಮೂರು ಬಾರಿ ಸಮೀಕ್ಷೆ ನಡೆಸಿದ್ದೇವೆ. ಚನ್ನಿ ಸಾಹೇಬ್ ಎರಡೂ ಸ್ಥಾನಗಳಲ್ಲಿಯೂ ಸೋಲುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ

    ಚಮ್ಕೌರ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.52ರಷ್ಟು ಮತಗಳನ್ನು ಪಡೆಯಲಿದೆ. ಇದು ಭದೌರ್‌ನಲ್ಲಿ ಶೇಕಡಾ 48 ರಷ್ಟು ಮತಗಳನ್ನು ಪಡೆಯುತ್ತದೆ. ಹಾಗಾದರೆ ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರೇ ಆಗದಿದ್ದರೆ, ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎಎಪಿಗೆ ಅವಕಾಶ ನೀಡಿ, ನಾವು ಕಲ್ಯಾಣ, ಅಭಿವೃದ್ಧಿ ಕೆಲಸ ಮಾಡುತ್ತೇವೆ: ಅರವಿಂದ್ ಕೇಜ್ರಿವಾಲ್

  • ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ

    ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ಅರವಿಂದ್ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬಸ್ಥರಾದ ರಾಘವ್ ಚಡ್ಡಾ, ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬ್ರಿಟಿಷ್ ರಾಜ್‍ಗೆ ಹೋಲಿಸಿದ್ದಾರೆ.

    ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಹೇಗೆ ಬಂದಿದ್ದರು, ಅದೇ ರೀತಿ ಕೇಜ್ರಿವಾಲ್ ಮತ್ತು ರಾಘವ್ ಚಡ್ಡಾ ಸೇರಿದಂತೆ ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ತಮ್ಮ ಸ್ಥಾನವನ್ನು ತೋರಿಸಿದಂತೆ ಪಂಜಾಬ್ ಇವರಿಗೂ ತಮ್ಮ ಸ್ಥಾನವನ್ನು ತೋರಿಸುತ್ತದೆ ಎಂದು ಚನ್ನಿ ಹೇಳಿದ್ದಾರೆ.  ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಲ್ಲಿನ ಅಕ್ರಮ ಗಣಿಗಾರಿಕೆ ಆರೋಪದಡಿ ರೋಪರ್ ಜಿಲ್ಲಾಡಳಿತ ಮತ್ತು ಪೊಲೀಸರಿಂದ ಕ್ಲೀನ್ ಚಿಟ್ ಪಡೆದ ಬಳಿಕ ಚರಣ್‍ಜಿತ್ ಸಿಂಗ್ ಚನ್ನಿ ಅವರು ಕೇಜ್ರಿವಾಲ್ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ. ಕೇಜ್ರಿವಾಲ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು. ಆದರೆ ಆದ್ಯಾವುದು ನಿಜವಲ್ಲ. ಕೇಜ್ರಿವಾಲ್ ನನ್ನ ವಿರುದ್ಧ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರ ಬಳಿಗೆ ಹೋಗಿದ್ದರು. ಆದರೆ ಅಂತಿಮವಾಗಿ ಸತ್ಯ ಮೇಲುಗೈ ಸಾಧಿಸಿತು. ಸುಳ್ಳಿನ ಆಧಾರದ ಮೇಲೆ ಸರ್ಕಾರ ರಚನೆಯಾಗಲ್ಲ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್