Tag: charge sheet

  • ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಡ್ರಗ್ಸ್ ಲಿಂಕ್ ಪ್ರಕರಣ – ಚಾರ್ಜ್‍ಶೀಟ್‍ನಲ್ಲಿ ಆ್ಯಂಕರ್ ಅನುಶ್ರೀ ಹೆಸರು

    ಮಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಕಮ್ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್  ಶೀಟ್‍ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಲಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ, ಅನುಶ್ರೀ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದರು. ಅಲ್ಲದೆ ರೂಂಗೆ ಕೂಡ ತರುತ್ತಿದ್ದರು ಎಂದು  ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ 

    ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀ ಮತ್ತೆ ಡ್ರಗ್ಸ್ ಶಾಕ್ ಎದುರಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ

  • ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ- ಪ್ರಮುಖ ಸಚಿವರ ಬಯೋಡೆಟಾ, ಲೆಟರ್ ಹೆಡ್ ಪತ್ತೆ

    ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ- ಪ್ರಮುಖ ಸಚಿವರ ಬಯೋಡೆಟಾ, ಲೆಟರ್ ಹೆಡ್ ಪತ್ತೆ

    ಬೆಂಗಳೂರು: ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪ್ರಮುಖ ಸಚಿವರ ಬಯೋಡೆಟಾ ಹಾಗೂ ಲೆಟರ್‍ಹೆಡ್ ಪತ್ತೆಯಾಗಿವೆ. ಅಲ್ಲದೆ ಆರೋಪಿ ಹೇಗೆ ವಂಚನೆ ಮಾಡಿದ್ದಾನೆ ಎಂಬುದರ ವಿವರವನ್ನು ಸಹ ಇದರಲ್ಲಿ ತಿಳಿಸಲಾಗಿದೆ.

    ಸಿಸಿಬಿ ಪೊಲೀಸರು ಯುವರಾಜ್ ಮನೆಯ ಮೇಲೆ ದಾಳಿ ಮಾಡಿದ್ದ ವೇಳೆ ಬರೋಬ್ಬರಿ 89ಕ್ಕೂ ಹೆಚ್ಚು ದಾಖಲೆಗಳನ್ನು ಸೀಜ್ ಮಾಡಿದ್ದರು. ಯುವರಾಜ್ ನ ಪರ್ಸನಲ್ ಹಾಗೂ ಬ್ಯಾಂಕ್, ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಅಲ್ಲದೆ ಇದೇ ಸಂದರ್ಭದಲ್ಲಿ ಅನೇಕ ಗಣ್ಯರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿತ್ತು. ಇದೀಗ ಎಲ್ಲ ಪಿನ್ ಟು ಪಿನ್ ದಾಖಲೆಗಳನ್ನು ಪೊಲೀಸರು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

    ಪ್ರಮುಖ ದಾಖಲೆಗಳು
    ಚಾರ್ಜ್ ಶೀಟ್ ನಲ್ಲಿ ಹೇಳಿರುವ ಕೆಲವು ಪ್ರಮುಖ ದಾಖಲೆಗಳ ಲಭ್ಯವಾಗಿದ್ದು, ಇದರಲ್ಲಿ ಸಚಿವ ಮುರಗೇಶ್ ನಿರಾಣಿ ಲೇಟರ್ ಹೆಡ್ ಮತ್ತು ಬಯೋಡೆಟಾ, ಪ್ರಮೋದ್ ಮಧ್ವರಾಜ್ ಲೇಟರ್ ಹೆಡ್, ಬಯೋಡೆಟಾ, ಉಮೇಶ್ ಕತ್ತಿಯವರ ಲೇಟರ್ ಹೆಡ್, ಬಯೋಡೆಟಾ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿದೆ. ಮುತ್ತಪ್ಪ ರೈಗೆ ಸೆಕ್ಯೂರಿಟಿ ಕೋರಿ ಶ್ರೀರಾಮುಲು ಹೆಸರಲ್ಲಿ ಪತ್ರ ಬರೆದಿರುವುದು ಸಹ ಸಿಕ್ಕಿದೆ. ಶ್ರೀರಾಮುಲು ಅವರ ಲೇಟರ್ ಹೆಡ್ ನಲ್ಲಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.

    ಬಿಜೆಪಿ ಪಕ್ಷದ ಹೆಸರಿನ ಅನೇಕ ಲೇಟರ್ ಹೆಡ್ ಸಮೇತ ಪತ್ರಗಳು, ಉಪಚುನಾವಣೆಗೆ ವಸಂತ್ ಬೆಳವಾಯಿ ಟಿಕೆಟ್ ಕೋರಿಕೆ ಪತ್ರ. ಟಿ.ಶ್ಯಾಮ್ ಭಟ್ ವಯಕ್ತಿಕ ಸೇವಾ ವಿವರ ಇರುವ ದಾಖಲೆಗಳು, ನಿವೃತ್ತ ಜಡ್ಜ್ ಇಂದ್ರಕಲಾ ಅವರ ಪರ್ಸನಲ್ ಪ್ರೋಫೈಲ್ ಗಳು ಲಭ್ಯವಾಗಿವೆ. 9 ಮಂದಿ ಸಾಕ್ಷಿಗಳ ಸಮೇತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಯುವರಾಜ್ ಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 504, 506 ಅಡಿ ಚಾರ್ಜ್ ಸಲ್ಲಿಸಲಾಗಿದೆ. ಮಾಡಿದ ಕೃತ್ಯವನ್ನು ಯುವರಾಜ್ ಸ್ವಾಮಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

    ಕೇಸ್ ನಂಬರ್ 12/2021 ಜ್ಞಾನಭಾರತಿ ಪೊಲೀಸ್ ಠಾಣೆ:
    ಎಇಇ ಹುದ್ದೆ ಕೊಡಿಸುವುದಾಗಿ ರಾಜಾಜಿನಗರ ನಿವಾಸಿ ಜಿ.ನರಸಿಂಹ ಮೂರ್ತಿಯವರಿಗೆ ಲಕ್ಷಾಂತರ ಹಣ ಪಡೆದು ವಂಚನೆ ಮಾಡಲಾಗಿದೆ. ವಾಪಸ್ ಹಣ ಕೇಳಿದಾಗ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ನೀನು ಕೊಟ್ಟ ಹಣದಿಂದಲೇ ನಿನ್ನ ಕೊಲೆಗೆ ಸುಪಾರಿ ಕೊಡುತ್ತೇನೆ. ನಿನ್ನ ಹಣದಿಂದಲೇ ರೌಡಿಗಳಿಂದ ನಿನ್ನನ್ನು ಕೊಲ್ಲಿಸುತ್ತೇನೆ ಎಂದು ಯುವರಾಜ್ ಸ್ವಾಮಿ ದೂರುದಾರರಿಗೆ ಜೀವ ಬೆದರಿಕೆ ಹಾಕಿದ್ದಾನೆ.

    ಕೇಸ್ ನಲ್ಲಿ ಯುವರಾಜ್ ಮೇಲೆ ಬಂದಿದ್ದ ಆರೋಪ:
    ರಾಜಾಜಿನಗರ ಡಾಕ್ಟರ್ ನರಸಿಂಹ ಸ್ವಾಮಿಯ ಪುತ್ರ ರವೀಂದ್ರ ಎಂ.ಟೆಕ್ ಮುಗಿಸಿದ್ದ. ಅವರಿಗೆ ಲೋಕೇಶ್ ಎಂಬಾತನ ಮೂಲಕ ಈ ಯುವರಾಜ್ ಪರಿಚಯವಾಗಿದ್ದನಂತೆ. ಆದರಂತೆ ಅಕ್ಟೋಬರ್ 20, 2019 ರಲ್ಲಿ ಭೇಟಿಯಾಗಿ, ನಾನು ಆರ್‍ಎಸ್‍ಎಸ್ ಮುಖಂಡ, ಬಿಜೆಪಿ ಮುಖಂಡರು ನನಗೆ ಪರಿಚಯ ಅದರಲ್ಲೂ ಕೇಂದ್ರದ ನಾಯಕರು ಪರಿಚಯ ಎಂದು ಹೇಳಿದ್ದನಂತೆ. ನಾನು ನನಗೆ ಗೊತ್ತಿರುವ ಮಂತ್ರಿಯ ಬಳಿ ಮಾತನಾಡಿ ಎಇಇ ಕೆಲಸ ಕೊಡಿಸುವುದಾಗಿ ಹೇಳಿದ್ದನಂತೆ. ಇದಕ್ಕಾಗಿ 75 ಲಕ್ಷ ರೂ. ಲಂಚ ಕೇಳಿದ್ದನಂತೆ. ಅದನ್ನು ಕ್ಯಾಶ್ ಮೂಲಕವೇ ಕೊಡಬೇಕು ಅಂದಿದ್ದ. ಇದಕ್ಕೆ ಒಪ್ಪಿ 30 ಲಕ್ಷ ರೂ.ಗಳನ್ನು ನೀಡಿದ್ದಾರೆ. ಖುದ್ದು ಯುವರಾಜ್ ಮನೆಗೆ ಹೋಗಿ ಆತನಿಗೆ ಹಣವನ್ನ ನೀಡಿದ್ದಾರೆ. ಆದರೆ ಈ ವರೆಗೆ ಆತ ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸ್ ನೀಡಿಲ್ಲವಂತೆ. ಈ ಬಗ್ಗೆ ಕೇಳಲು ಹೋದಾಗ ಜೀವ ಬೆದರಿಕೆ ಹಾಕಿದ್ದಾನೆ. ನೀನು ಕೊಟ್ಟಿರುವ ಹಣವನ್ನು ರೌಡಿಗಳಿಗೆ ಕೊಟ್ಟು ಸುಪಾರಿ ನೀಡುತ್ತೇನೆ. ನೀನು ಕೊಟ್ಟ ಹಣದಿಂದಲೇ ನಿನ್ನನ್ನು ಕೊಲ್ಲಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನಂತೆ.

    ಯುವರಾಜ್ ಸ್ವಾಮಿಯಿಂದ ತಪ್ಪೊಪ್ಪಿಗೆ:
    2019ರ ಮಾರ್ಚ್ ನಲ್ಲಿ ಏರ್‍ಪೋರ್ಟ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುವ ಲೋಕೇಶ್ ಕಾರನ್ನು ಬುಕ್ ಮಾಡಿಕೊಂಡಿದ್ದೆ. ಈ ವೇಳೆ ಆತನ ಜೊತೆ ಪರಿಚಯವಾಗಿ ನಂತರ ಆತನ ಮೂಲಕ ಪಿಕ್ ಅಪ್ ಡ್ರಾಪ್ ಮಾಡಿಸಿಕೊಳ್ಳುತ್ತಿದೆ. 2019 ರಲ್ಲಿ ಆತನ ಮೂಲಕ ನರಸಿಂಹಸ್ವಾಮಿ ಅವರು ತಮ್ಮ ಮಗನಿಗೆ ಎಇಇ ಕೆಲಸ ಕೊಡಿಸಿ ಎಂದು ಬಂದಿದ್ದು ನಿಜ. ಈ ಬಗ್ಗೆ ನನ್ನ ಮನೆಯ ನೆಲಮಡಿಯಲ್ಲಿ ಕುಳಿತು ಮಾತನಾಡಿ, 75 ಲಕ್ಷ ಹಣವನ್ನು ಕ್ಯಾಶ್ ಕೇಳಿದ್ದೆ. ಅದಕ್ಕೆ ಒಪ್ಪಿದ ಅವರು, 30 ಲಕ್ಷ ಹಣವನ್ನು ಕ್ಯಾಶ್‍ನಲ್ಲಿ ಕೊಟ್ಟಿದ್ದರು. ಅದನ್ನು ನನ್ನ ಮತ್ತು ಕುಟುಂಬದ ಖರ್ಚಿಗಾಗಿ ಬಳಸಿಕೊಂಡಿದ್ದೇನೆ. ಅವರಿಗೆ ಇಲ್ಲಿತನಕ ಯಾವುದೇ ಕಲಸವನ್ನು ಸಹ ಕೊಡಿಸಿಲ್ಲ. ಕೇಳಲು ಬಂದಾಗಿ ಜೀವ ಬೆದರಿಕೆ ಹಾಕಿದ್ದು ನಿಜ. ಜಾಮೀನು ಪಡೆದು ಹೊರ ಬಂದ ತಕ್ಷಣ ಹಣ ವಾಪಸ್ ನೀಡುತ್ತೇನೆ ಎಂದಿದ್ದಾನೆ.

    ಕೇಸ್ ನಂಬರ್ 38/2020 ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ:
    ತನ್ನ ಬಳಿ ಕೆಲಸ ಮಾಡುತ್ತಿದ್ದ ಡ್ರೈವರ್ ಗೂ ಯುವರಾಜ್ ವಂಚಿಸಿದ್ದು, ಅಮಾಯಕ ಕೆಲಸಗಾರನ ಬ್ಯಾಂಕ್ ಅಕೌಂಟ್ ನ್ನು ದುರ್ಬಳಕೆ ಮಾಡಿಕೊಂಡು, ತಾನು ವಂಚಿಸಿ ಪಡೆದ ಹಣವನ್ನು ಡೆಪಾಸಿಟ್ ಮಾಡುತ್ತಿದ್ದ. ಐಟಿ ಇಲಾಖೆಯಿಂದ ಬಂದ ನೊಟೀಸ್ ನೋಡಿ ಡ್ರೈವರ್ ಗಾಬರಿಯಾಗಿದ್ದ. ಈ ಕುರಿತು ಯುವರಾಜ್ ನ ಪ್ರಶ್ನೆ ಮಾಡಿದಾಗ ಹೊಡೆದು ಮನೆಯಿಂದ ಆಚೆ ಹಾಕಿದ್ದ.

    ಕೇಸ್ ನಂಬರ್ 40/2020 ಸೆನ್ ಪೊಲೀಸ್ ಠಾಣೆ:
    ಕೆಎಸ್‍ಆರ್‍ಟಿಸಿ ಅಧ್ಯಕ್ಷ ಹುದ್ದೆ ಕೊಡಿಸುವುದಾಗಿ ಹೇಳಿ ರೈತ ಹಾಗೂ ಉದ್ಯಮಿ ಸುಧೀಂದ್ರ ರೆಡ್ಡಿಗೆ 1 ಕೋಟಿ ರೂಪಾಯಿ ಉಂಡೆನಾಮ ಹಾಕಿದ್ದಾನೆ. ಬರೋಬ್ಬರಿ 1 ಕೋಟಿ ರೂ.ಗಳನ್ನು ಪಡೆದು ಸ್ವಾಮಿ ವಂಚಿಸಿದ್ದಾನೆ. ಚೆಕ್ ಮೂಲಕ ಯುವರಾಜ್ ಸ್ವಾಮಿ ಹಣ ಪಡೆದಿದ್ದು, ಬಿಜೆಪಿ ಕಾರ್ಯಕರ್ತ ಮಧುರಾಜ್ ಜೊತೆ ಬಂದು ವಂಚನೆ ಮಾಡಿದ್ದಾನೆ. 10 ದಿನಗಳಲ್ಲಿ ಹುದ್ದೆ ಕೊಡಿಸುವುದಾಗಿ ಹೇಳಿ ಹಣ ಪಡೆದು ಮೋಸ ಮಾಡಿದ್ದಾರೆ. ಈ ಕುರಿತು ಯುವರಾಜ್ ಮತ್ತು ಮಧುರಾಜ್ ವಿರುದ್ಧ ಸೆನ್ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.

    ಮೇ 2020ರಲ್ಲಿ ಬಿಜೆಪಿ ಕಾರ್ಯಕರ್ತ ಮಧುರಾಜ್ ಜೊತೆಯಲ್ಲಿ ಯುವರಾಜ್ ನ ಕರೆದುಕೊಂಡು ಸುಧೀಂದ್ರ ರೆಡ್ಡಿ ಮನೆಗೆ ಹೋಗಿದ್ದನಂತೆ. ನಿಮಗೆ ಕೆಎಸ್‍ಆರ್‍ಟಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿದ್ದರಂತೆ. ಅದಕ್ಕಾಗಿ 1 ಕೋಟಿ ಹಣವನ್ನು ಪಡೆದು, ಹುದ್ದೆ ಕೊಡಿಸದೇ ವಂಚನೆ ಮಾಡಿದ್ದಾನಂತೆ. ಬಳಿಕ ಮೊದಲು ಪೋನ್ ರಿಸಿವ್ ಮಾಡದೇ ತಪ್ಪಿಸಿಕೊಳ್ಳುತ್ತಿದ್ದನಂತೆ. ನಂತರ ನಿನಗೆ ಹಣ ವಾಪಸ್ ಕೊಡಲ್ಲ. ಹಣ ಕೇಳಿದರೆ ನಿನಗೊಂದು ಗತಿ ಕಾಣಿಸುತ್ತೆನೆಂದು ಬೆದರಿಕೆ. ಈ ಬಗ್ಗೆ ಯಾರ ಬಳಿಯಾದರೂ ಚರ್ಚೆ ಮಾಡಿದರೆ ಹುಷಾರ್ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

    ನನಗೆ ಗೋವಿಂದರಾಜನಗರದ ಬಿಜೆಪಿ ಕಾರ್ಯಕರ್ತ ಮಧುರಾಜ್ ಮೂಲಕ ಸುಧೀಂದ್ರ ರೆಡ್ಡಿ 2020ರ ಮೇ ತಿಂಗಳಲ್ಲಿ ಪರಿಚಯವಾದರು. ಅವರಿಗೆ ಕೆಎಸ್‍ಆರ್‍ಟಿಸಿ ಅಧ್ಯಕ್ಷ ಹುದ್ದೆ ಕೊಡಿಸುವುದಾಗಿ ನಾನು ಹೇಳಿದ್ದು ನಿಜ. ಅದಕ್ಕೆ ಅವರ ಬ್ಯಾಂಕ್ ಖಾತೆಯಿಂದ ಹಾಗೂ ಕ್ಯಾಷ್ ಮೂಲಕ 1 ಕೋಟಿ ರೂಪಾಯಿ ಪಡೆದುಕೊಂಡಿದ್ದೇನೆ. ಆದರೆ ಅವರಿಗೆ ನಾನು ಕೆಲಸವನ್ನು ಕೊಡಿಸಿಲ್ಲ. ಅವರಿಂದ ಪಡೆದ ಹಣವನ್ನು ನನ್ನ ಮನೆಯಲ್ಲಿ ಇಟ್ಟಾಗ 26 ಲಕ್ಷ ರೂ.ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಉಳಿದ ಹಣವನ್ನು ಕಾಡುಕೊತ್ತನಹಳ್ಳಿ ಗ್ರಾಮದ ತೋಟದ ಮನೆಯ ಬೆಡ್ ರೂಂ ನ ಬೀರುವಿನಲ್ಲಿ ಇಟ್ಟಿದ್ದೇನೆ. ನೀವು ಕರೆದುಕೊಂಡು ಹೋದರೆ ಅದನ್ನು ನೀಡುತ್ತೇನೆ. ಮತ್ತಷ್ಟು ಹಣವನ್ನು ಕಾರುಗಳ ಖರೀದಿಗೆ ಬಳಸಿಕೊಂಡಿದ್ದೇನೆ ಎಂದು ಯುವರಾಜ್ ಹೇಳಿದ್ದಾನೆ.

  • ಗ್ಯಾಬ್ಲಿಂಗ್ ಆರೋಪ – ಹರಿರಾಜ್ ಶೆಟ್ಟಿ, ಉದ್ಯಮಿಗಳ ಪತ್ನಿಯರ ಮೇಲೆ ಚಾರ್ಜ್‍ಶೀಟ್ ಸಲ್ಲಿಕೆ

    ಗ್ಯಾಬ್ಲಿಂಗ್ ಆರೋಪ – ಹರಿರಾಜ್ ಶೆಟ್ಟಿ, ಉದ್ಯಮಿಗಳ ಪತ್ನಿಯರ ಮೇಲೆ ಚಾರ್ಜ್‍ಶೀಟ್ ಸಲ್ಲಿಕೆ

    ಬೆಂಗಳೂರು: ಗ್ಯಾಂಬ್ಲಿಂಗ್ ನಡೆಸ್ತಿದ್ದ ಆರೋಪದ ಮೇಲೆ ಉದ್ಯಮಿ ಹರಿರಾಜ್ ಶೆಟ್ಟಿಯ ಮೇಲೆ ಸಿಸಿಬಿ  ಪೊಲೀಸರು ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ.

    ಮುಂಗಾರು ಮಳೆ- 2 ಚಿತ್ರದ ನಟಿ ನೇಹಾ ಶೆಟ್ಟಿಯ ತಂದೆ ಹರಿರಾಜ್ ಶೆಟ್ಟಿ ಕನ್ನಿಂಗ್ ಹ್ಯಾಮ್ ರಸ್ತೆಯ ನಂ15ನೇ ಬೇಸ್ಮೆಂಟ್ ನ ಪೂಲ್‍ಎನ್ ರಿ ಕ್ರಿಯೇಷನ್ ಕ್ಲಬ್ ನಲ್ಲಿ ಜೂಜು ನಡೆಸುತ್ತಿದ್ದರು ಎಂಬ ಆರೋಪದಡಿ ಬಂಧನವಾಗಿದ್ದರು. ಇದನ್ನೂ ಓದಿ: ಮುಂಗಾರುಮಳೆ-2 ಚಿತ್ರದ ನಟಿಯ ತಂದೆ ಅರೆಸ್ಟ್..!

    ಈ ಬಗ್ಗೆ ಸಿಸಿಬಿ ಇನ್ಸ್‍ಪೆಕ್ಟರ್ ಎ.ಪಿ ಕುಮಾರ್ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ನಗರದಲ್ಲಿ ಜೂಜು ಅಡ್ಡೆ ನಿರ್ಮಿಸಿ ಕಾನೂನು ಬಾಹಿರ ಕೃತ್ಯ ಕೇಸ್ ದಾಖಲಾಗಿದೆ. ಪೂಲ್‍ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಗ್ಯಾಂಬ್ಲಿಂಗ್, ಬ್ಯಾನ್ ಸ್ಕಿಲ್ ಗೇಮ್, ವಿಡಿಯೋ ಗೇಮ್ ಪಾರ್ಲರ್ ನಡೆಸ್ತಿದ್ದ ಆರೋಪದಡಿ ಹರಿರಾಜ್ ವಿರುದ್ಧ ಬರೋಬ್ಬರಿ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

    ಹರಿರಾಜ್ ಜೊತೆಗೆ ಬರೋಬ್ಬರಿ 42 ಮಂದಿ ಗ್ಯಾಂಬ್ಲರ್ ಗಳ ವಿರುದ್ಧವು ಸಿಸಿಬಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ. ಜೂಜು ಆಡಿಸುತ್ತಿದ್ದ ಹರಿರಾಜ್ ಶೆಟ್ಟಿ, ಬೆಂಗಳೂರು, ಚಿಕ್ಕಬಳ್ಲಾಪುರ, ಬಳ್ಳಾರಿ ಹಾಗೂ ಆಂಧ್ರಪ್ರದೇಶ, ತಮಿಳುನಾಡು ರಾಜ್ಯದ ಜೂಜು ಕೋರರಿಂದ ಲಕ್ಷ, ಲಕ್ಷ ಹಣ ಪಡೆಯುತ್ತಿದ್ದರು ಎಂಬ ಅಂಶ ಬಯಲಾಗಿದೆ. ರೇಡ್ ವೇಳೆ ಸಿಸಿಬಿ ಪೊಲೀಸರು ಲಕ್ಷ ಗಟ್ಟಲೇ ಹಣ ಸೀಜ್ ಮಾಡಿ ಆರೋಪಿಗಳನ್ನು ಬಂಧಿಸಿದ್ದರು.

    ವಿಚಾರಣೆ ವೇಳೆ ಮಹಿಳೆಯರನ್ನು ಸಹ ಜೂಜಾಟಕ್ಕೆ ಹರಿರಾಜ್ ಶೆಟ್ಟಿ ಕರೆ ತಂದಿದ್ದ ಬಗ್ಗೆ ತಿಳಿದುಬಂದಿದೆ. ಸಿಸಿಬಿ ಪೊಲೀಸರ ರೇಡ್ ಮಾಡುವ ಸಂದರ್ಭ ಬೆಂಗಳೂರಿನ ಉದ್ಯಮಿಗಳ ಪತ್ನಿಯರು, ಸರ್ಕಾರಿ ಅಧಿಕಾರಿಗಳ ಪತ್ನಿಯರು ಸಿಕ್ಕಿಬಿದ್ದಿದ್ದಾರೆ. 5 ಮಂದಿ ಮಹಿಳೆಯರಲ್ಲಿ ಇಬ್ಬರು ಉದ್ಯಮಿಗಳ ಪತ್ನಿಯರು, ಇಬ್ಬರು ಅಧಿಕಾರಿಗಳ ಪತ್ನಿಯರು ಮತ್ತೊಬ್ಬ ಮಹಿಳೆ, ಒರ್ವ ರೌಡಿ ಶೀಟರ್ ತಾಯಿ ಎಂದು ಗುರುತಿಸಲಾಗಿದೆ. ಸದ್ಯ ಪುರುಷರ ಜೊತೆ 5 ಮಹಿಳೆಯರಾದ ಮಂಜುಳ, ಸ್ವಾತಿ, ಲಕ್ಷ್ಮಿ, ಗೀತಾದೇವಿ ಮತ್ತು ಕ್ರಿಸ್ಟೀನ್ ಕುಮಾರಿ ವಿರುದ್ಧ ಮಹಿಳಾ ಗ್ಯಾಂಬ್ಲರ್ ಗಳೆಂದು  ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ.

  • ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ- 11 ಸಾವಿರ ಪುಟದ ಪಂಚನಾಮೆ ಸಲ್ಲಿಕೆ

    ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ- 11 ಸಾವಿರ ಪುಟದ ಪಂಚನಾಮೆ ಸಲ್ಲಿಕೆ

    ಕೋಲಾರ: ಪ್ರತಿಷ್ಟಿತ ಬಹುರಾಷ್ಟ್ರೀಯ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 11 ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 7 ಸಾವಿರ ಕಾರ್ಮಿಕರನ್ನ ಆರೋಪಿಗಳನ್ನಾಗಿ ಪರಿಗಣಿಸಿರುವ ವೇಮಗಲ್ ಪೊಲೀಸರು 170 ಆರೋಪಿಗಳನ್ನ ಬಂಧಿಸಿದ್ದರು, 30 ಜನರನ್ನ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನಾಲ್ವರು ಷರತ್ತುಬದ್ದ ಜಾಮೀನು ಪಡೆದಿದ್ದಾರೆ ಎಂದು ಕೋಲಾರದಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಅವರು ತಿಳಿಸಿದರು.

    ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಹೋಂಡಾ ಕಂಪನಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಸ್ಟ್ರಾನ್ ದಾಂಧಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಇಬ್ಬರು ಎಎಸ್ಪಿಗಳು ತನಿಖೆ ನಡೆಸಿದ್ದು, ಹನ್ನೊಂದು ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಹೇಳಿದರು. ಇನ್ನು ವಿಸ್ಟ್ರಾನ್ ದಾಂಧಲೆ ಪ್ರಕರಣದ ತನಿಖೆಯಲ್ಲಿ ಕಂಡು ಬಂದಂತೆ ವೇತನ, ಓಟಿ ವೇತನ ಸೇರಿದಂತೆ ಹಾಜರಾತಿ ಸಿಸ್ಟಮ್‍ನಲ್ಲಿ ಸಮಸ್ಯೆ ಇದ್ದ ಪರಿಣಾಮ, ಸಡೆನ್ ಪ್ರಿಪೇರ್ ನಿಂದಾಗಿ ಕಂಪನಿಯಲ್ಲಿ ಗಲಾಟೆ ಆಗಲು ಕಾರಣವಾಗಿದೆ ಎಂದರು. ಇದನ್ನೂ ಓದಿ: ವಿಸ್ಟ್ರಾನ್ ಕಂಪನಿಯಲ್ಲಿ ಮರು ನೇಮಕಾತಿ ಶುರು- ಕೆಲಸ ಪಡೆಯಲು ಏನೆಲ್ಲ ಮಾಡಬೇಕು?

    ಅಲ್ಲದೆ ಹೊರಗಿನವರು ಸೇರಿದಂತೆ ಯಾವುದೇ ಬಾಹ್ಯ ಬೆಂಬಲದಿಂದ ದಾಂಧಲೆ ನಡೆದಿಲ್ಲ. ಯಾವುದೇ ಕುಮ್ಮಕ್ಕು ಇಲ್ಲ ಎನ್ನುವುದು ನಮ್ಮ ತನಿಖೆಯಿಂದ ಕಂಡುಬಂದಿದೆ ಎಂದು ತಿಳಿಸಿದರು. ಇನ್ನೂ ಡಿಸೆಂಬರ್ 12 ರಂದು ವಿಸ್ಟ್ರಾನ್ ಕಂಪನಿಯಲ್ಲಿ ದಾಂದಲೆ ನಡೆದಿತ್ತು, ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಇದನ್ನೂ ಓದಿ: ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ – ಭಾರತ ವಿಸ್ಟ್ರಾನ್ ಕಂಪನಿ ಉಪಾಧ್ಯಕ್ಷನ ತಲೆದಂಡ

  • ಮಂಗ್ಳೂರು ಏರ್‌ಪೋರ್ಟಿನಲ್ಲಿ ಇಟ್ಟಿದ್ದ ಬ್ಯಾಗ್‍ನಲ್ಲಿದ್ದಿದ್ದು ನಿಜವಾದ ಸ್ಫೋಟಕ!

    ಮಂಗ್ಳೂರು ಏರ್‌ಪೋರ್ಟಿನಲ್ಲಿ ಇಟ್ಟಿದ್ದ ಬ್ಯಾಗ್‍ನಲ್ಲಿದ್ದಿದ್ದು ನಿಜವಾದ ಸ್ಫೋಟಕ!

    – ಆದಿತ್ಯರಾವ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಆದಿತ್ಯರಾವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

    ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಆರೋಪಿ ಆದಿತ್ಯರಾವ್ ವಿರುದ್ಧ ಸ್ಥಳೀಯ ಪೋಲಿಸರ ವಿಶೇಷ ತನಿಖಾ ತಂಡ 700 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಚಾರ್ಜ್‍ಶೀಟ್‍ನಲ್ಲಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಲಾಗಿದ್ದು, ಆರೋಪಿ ಇಟ್ಟಿದ್ದ ಬ್ಯಾಗ್ ನಲ್ಲಿ ಇದ್ದದ್ದು ನಿಜವಾದ ಸ್ಫೋಟಕವಾಗಿದೆ. ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಆದಿತ್ಯರಾವ್ ಬಾಂಬ್ ಇಟ್ಟಿದ್ದ ಎಂದು ತಿಳಿಸಲಾಗಿದೆ.

    ಅಲ್ಲದೆ ಅಮೋನಿಯಂ ನೈಟ್ರೇಟ್, ಸ್ಫೋಟದ ತೀವ್ರತೆ ಹೆಚ್ಚಿಸಲು ಕಬ್ಬಿಣದ ಮೊಳೆ ಅಳವಡಿಸಲಾಗಿತ್ತು. ಉದ್ದೇಶಪೂರ್ವಕವಾಗಿ ಒಂದು ವೈಯರ್ ಸಂಪರ್ಕಿಸದೆ ಆರೋಪಿ ಹಾಗೆಯೇ ಬಿಟ್ಟಿದ್ದ. ಇದು ನಿಜವಾದ ಸ್ಫೋಟಕ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲೂ ಸಾಬೀತಾಗಿದೆ. ಆರೋಪಿ ವಿರುದ್ಧ ಯು.ಎ.ಪಿ.ಎ ಅಡಿ ಪ್ರಕರಣ ದಾಖಲಿಸಿ ಈ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

    ಏನಿದು ಪ್ರಕರಣ?:
    2020ರ ಜನವರಿ 20ರಂದು ಮಂಗಳೂರು ಏರ್ ಪೋರ್ಟ್‍ನಲ್ಲಿ ಬಾಂಬ್ ಪತ್ತೆಯಾಗಿದ್ದು, ಈ ವಿಚಾರ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಬೆನ್ನಲ್ಲೆ ಎಲ್ಲಾ ವಿಮಾನ ನಿಲ್ಧಾನದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಪಿ ಆದಿತ್ಯರಾವ್ ನಢರವಾಗಿ ಬೆಂಗಳೂರಿಗೆ ಬಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರ ಕಚೇರಿಗೆ ತೆರಳಿ ಶರಣಾಗಿದ್ದನು. ಅಲ್ಲದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಾನೇ ಬಾಂಬ್ ಇಟ್ಟಿರುವುದಾಗಿ ಬಾಯ್ಬಿಟ್ಟಿದ್ದನು.

  • ಕೋಟಿ ಕೋಟಿ ಹಣ ಸಂಪಾದನೆಗಾಗಿ ಆಟವನ್ನೇ ಪಣಕ್ಕಿಟ್ಟಿದ್ದವರ ವಿರುದ್ಧ ಚಾರ್ಚ್ ಶೀಟ್

    ಕೋಟಿ ಕೋಟಿ ಹಣ ಸಂಪಾದನೆಗಾಗಿ ಆಟವನ್ನೇ ಪಣಕ್ಕಿಟ್ಟಿದ್ದವರ ವಿರುದ್ಧ ಚಾರ್ಚ್ ಶೀಟ್

    – ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ದೋಷಾರೋಪ ಸಲ್ಲಿಕೆ

    ಬೆಂಗಳೂರು: ಕೋಟಿ ಕೋಟಿ ಹಣ ಸಂಪಾದನೆಗಾಗಿ ಕ್ರಿಕೆಟ್ ಆಟವನ್ನೇ ಪಣಕ್ಕಿಟ್ಟಿದವರು ಅಂದರ್ ಆಗಿದ್ದು ಆಯ್ತು, ಬೇಲ್‍ನ ಮೇಲೆ ಬಿಡುಗಡೆಯೂ ಆದರು. ಆದ್ರೀಗ ಆ ಎಲ್ಲಾ ಖತರ್ನಾಕ್ ಟೀಂ ಮೇಲೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. ಆರೋಪಿಗಳು ಯಾವ ರೀತಿಯಲ್ಲಿ ಪ್ರಕರಣಕ್ಕೆ ಕೈ ಜೋಡಿಸಿದ್ದರು ಎನ್ನುವುದನ್ನು ಸಾಕ್ಷ್ಯ ಸಮೇತ ಸಿಸಿಬಿ ಪೊಲೀಸರು ಬಿಚ್ಚಿಟ್ಟಿದ್ದಾರೆ.

    ಕೆಪಿಎಲ್‍ನ ಎರಡು ಟೀಂಗಳ ಮಾಲೀಕರಾದ ಆಲಿ, ಅರವಿಂದ ರೆಡ್ಡಿ, ಆಟಗಾರರಾದ ಗೌತಮ್, ಖಾಜಿ ವಿರುದ್ಧ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಸಿಸಿಬಿ ಪೊಲೀಸರು ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್‍ನಲ್ಲಿ ಉಲ್ಲೇಖವಾದ ಪ್ರಮುಖ ಅಂಶಗಳ ಪ್ರಕಾರ, ಮೊದಲು ಅಂತರರಾಷ್ಟ್ರೀಯ ಮಟ್ಟದ ಬುಕ್ಕಿಗಳಿಂದ ಕೆಪಿಎಲ್ ತಂಡಗಳ ಮಾಲೀಕರ ಸಂಪರ್ಕವಾಗಿತ್ತು. ಬಳಿಕ ಮ್ಯಾಚ್ ಫಿಕ್ಸಿಂಗ್ ಬಗ್ಗೆ ದುರಾಲೋಚನೆಯುಳ್ಳ ಮಾಲೀಕರು ತಮ್ಮ ತಂಡದ ಕೆಲ ಆಟಗಾರರನ್ನು ಸಂಪರ್ಕಿಸಿದ್ದರು. ನಂತರ ಆಟಗಾರರು ಹಾಗೂ ಬುಕ್ಕಿಗಳು ಜೊತೆ ಅನ್ಯೋನ್ಯತೆ ಬೆಳೆಸಿ ಫಿಕ್ಸಿಂಗ್ ನಡೆದಿತ್ತು ಎಂದು ತಿಳಿಸಲಾಗಿದೆ.

    ಮ್ಯಾಚ್ ಫಿಕ್ಸಿಂಗ್ ಟ್ರಿಕ್ಸ್:
    * ಒಂದು ಓವರಿನಲ್ಲಿ 10ಕ್ಕೂ ಹೆಚ್ಚು ರನ್ ನೀಡುವಂತೆ ಡೀಲ್
    * ಅತಿ ಹೆಚ್ಚು ಬಾಲ್‍ಗಳಲ್ಲಿ ಕಡಿಮೆ ರನ್ ಗಳಿಸುವಂತೆ ಫಿಕ್ಸ್
    * ಫುಲ್ ಸ್ಲೀವ್ ಶರ್ಟ್ ಅನ್ನು ಅರ್ಧಕ್ಕೆ ಏರಿಸಿಕೊಂಡು ಸಿಗ್ನಲ್
    * ಪದೇ ಪದೇ ಬ್ಯಾಟ್‍ಗಳನ್ನು ಬದಲಿಸುವ ರೀತಿ ಸಿಗ್ನಲ್ ನೀಡುತ್ತಿದ್ದ ಫಿಕ್ಸರ್ಸ್

  • ಆರೋಪಿಯ ಕಿರುಕುಳಕ್ಕೆ ಬೇಸತ್ತು ಮಧು ಪತ್ತಾರ್ ಆತ್ಮಹತ್ಯೆ – ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

    ಆರೋಪಿಯ ಕಿರುಕುಳಕ್ಕೆ ಬೇಸತ್ತು ಮಧು ಪತ್ತಾರ್ ಆತ್ಮಹತ್ಯೆ – ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

    ರಾಯಚೂರು: ಭಾರೀ ಸಂಚಲನ ಮೂಡಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣದಲ್ಲಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಿ ಸುದರ್ಶನ್ ಯಾದವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಆರೋಪಿ ಯುವತಿಗೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾನೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ಒಂದು ಸಾವಿರ ಪುಟಗಳ ದೋಷಾರೋಪಣೆ ಪಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ, ಕಿರುಕುಳ, ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಎಂದು ಆರೋಪಗಳಿವೆ. ಸುಮಾರು 60 ಸಾಕ್ಷಿ, 45 ದಾಖಲೆಗಳನ್ನ ರಾಯಚೂರಿನ 3 ನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಸಲ್ಲಿಸಿದ್ದಾರೆ.

    ವಿದ್ಯಾರ್ಥಿನಿ ಶವ ಕೆಲದಿನಗಳಾದ ಮೇಲೆ ಪತ್ತೆಯಾದ ಹಿನ್ನೆಲೆ ಕಪ್ಪುಬಣ್ಣಕ್ಕೆ ತಿರುಗಿದೆ, ಯಾವುದೇ ಸುಟ್ಟಗಾಯಗಳಿಲ್ಲದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ ಎನ್ನುವ ಮಾಹಿತಿಯನ್ನ ಸಿಐಡಿ ನ್ಯಾಯಾಲಯಕ್ಕೆ ನೀಡಿದೆ. ಆರೋಪಿ ಸುದರ್ಶನ್ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಪಿಯುಸಿಯಲ್ಲಿ ಸಹಪಾಠಿಯಾಗಿದ್ದ ಮಧು ಹಾಗೂ ಸುದರ್ಶನ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಮಧು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಕೆಲ ತಿಂಗಳಿಂದ ಸುದರ್ಶನ್ ಮಧು ನಡವಳಿಕೆ ಬಗ್ಗೆ ಸಂಶಯಪಟ್ಟು ಕಿರುಕುಳ ಕೊಡುತ್ತಿದ್ದನು. ಇದರಿಂದ ವಿದ್ಯಾರ್ಥಿನಿ ನೊಂದಿದ್ದಳು. ಹೀಗಾಗಿ ಆರೋಪಿಯಿಂದ ಮಧು ಅಂತರ ಕಾಯ್ದುಕೊಂಡಿದ್ದಳು.

    ಕಳೆದ ಏ.13ರಂದು ಮಧು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಸುದರ್ಶನ್ ಆಕೆಯ ಜೊತೆ ಜಗಳವಾಡಿದ್ದನು. ಆಗ ಸಾರ್ವಜನಿಕರು ಜಗಳ ಬಿಡಿಸಿ ಕಳುಹಿಸಿದ್ದರು. ಆ ಬಳಿಕ ಅಲ್ಲಿಂದ ಮಧು ನೇರವಾಗಿ ತಾನು ಓದುತ್ತಿದ್ದ ನವೋದಯ ಕಾಲೇಜಿನ ಆವರಣಕ್ಕೆ ಹೋಗಿದ್ದಳು. ಆದರೆ ಮಧುವನ್ನು ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ ಕಾಲೇಜಿನ ಆವರಣದ ಪಾರ್ಕಿಂಗ್‍ನಲ್ಲಿ ಆಕೆಯ ದ್ವಿಚಕ್ರ ವಾಹನದ ಕೀ ಮತ್ತು ಮೊಬೈಲ್ ಕಸಿದುಕೊಂಡಿದ್ದನು. ನೀನು ನನ್ನನ್ನೇ ಪ್ರೀತಿಸಬೇಕು, ಇಲ್ಲದಿದ್ದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸಿದ್ದನು. ಸುದರ್ಶನ್ ಕಿರುಕುಳದಿಂದ ಬೇಸತ್ತ ಮಧು ನೇರವಾಗಿ ಕಾಲೇಜು ಆವರಣದಿಂದ ನಿರ್ಜನ ಪ್ರದೇಶಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

  • ಮೊಹಮ್ಮದ್ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲು

    ಮೊಹಮ್ಮದ್ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲು

    ಕೋಲ್ಕತ್ತಾ: ಲೈಂಗಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಕೋಲ್ಕತ್ತಾ ಪೊಲೀಸರು ಚಾರ್ಜ್‍ಶೀಟ್ ದಾಖಲಿಸಿದ್ದಾರೆ.

    ವಿಶ್ವಕಪ್ ಟೂರ್ನಿಗೆ ಕೆಲ ಸಮಯ ಬಾಕಿ ಇರುವ ವೇಳೆಯಲ್ಲೇ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿರುವುದಿಂದ ಶಮಿ ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

    ಶಮಿ ಪತ್ನಿ ಹಸಿನ್ ಜಹಾನ್ ಶಮಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 7 ಲಕ್ಷ ರೂ. ಕೋರಿ ಮನವಿ ಸಲ್ಲಿಸಿದ್ದಾರೆ. ಜಾಹನ್ ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ಮಗಳ ಜೀವನಕ್ಕಾಗಿ 80 ಸಾವಿರ ರೂ. ನೀಡುವಂತೆ ತಿಳಿಸಿತ್ತು. ಗುರುವಾರ ಶಮಿ ಹಾಗೂ ಅವರ ಕುಟುಂಬ ಮೇಲೆ ಐಪಿಸಿ ಸೆಕ್ಷನ್ 498ಎ (ವರದಕ್ಷಿಣೆ ಕಿರುಕುಳ) ಮತ್ತು 254ಎ (ಲೈಂಗಿಕ ದೌರ್ಜನ್ಯ) ಸೆಕ್ಷನ್ ಅಡಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

    ಶಮಿ ಅವರ ವಿರುದ್ಧ ಪತ್ನಿ ಜಹಾನ್ ಮ್ಯಾಚ್ ಫಿಕ್ಸಿಂಗ್ ಆರೋಪ ಕೂಡ ಮಾಡಿದ್ದರು. ಅಲ್ಲದೇ ಈ ಬಗ್ಗೆ ನನ್ನ ಬಳಿ ಸಾಕ್ಷಿ ಇದೆ ಎಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಶಮಿ ಬೇರೆ ಬೇರೆ ಮಹಿಳೆಯರೊಂದಿಗೆ ಇದ್ದ ಫೋಟೋ ಹಾಗೂ ಚಾಟ್ ಮಾಡಿದ್ದ ಸ್ಕ್ರಿನ್ ಶಾರ್ಟ್ ಗಳನ್ನು ಪೋಸ್ಟ್ ಮಾಡಿದ್ದರು. ಅಲ್ಲದೇ ಸಹೋದರನೊಂದಿಗೆ ಸಂಬಂಧ ಹೊಂದುವಂತೆ ಶಮಿ ಒತ್ತಡ ಹಾಕಿದ್ದರು ಎಂದು ಜಹಾನ್ ಗಂಭೀರ ಆರೋಪಗಳನ್ನು ಮಾಡಿದ್ದರು. ಆದರೆ ಈ ಎಲ್ಲಾ ಆರೋಪಗಳನ್ನು ಶಮಿ ನಿರಾಕರಿಸಿದ್ದರು.

    ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶಮಿ ಆಸೀಸ್ ವಿರುದ್ಧ ಆಡಿದ್ದರು. 9 ಓವರ್ ಬೌಲ್ ಮಾಡಿದ್ದ ಶಮಿ 57 ರನ್ ನೀಡಿ 2 ವಿಕೆಟ್ ಪಡೆದಿದ್ದರು. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುಂಡು ಮುಖಭಂಗ ಅನುಭವಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ

    ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ

    ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬಳ್ಳಾರಿ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧ ವಿಶೇಷ ತನಿಖಾ ತಂಡ (ಎಸ್‍ಐಟಿ) ಚಾರ್ಜ್ ಶೀಟ್ ಸಲ್ಲಿಸಿದೆ.

    ಶೇಖ್ ಸಾಬ್ ಗಣಿಯಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಮತ್ತು ಆಪ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ್ಕಕೆ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಜನಾರ್ದನ ರೆಡ್ಡಿ ಎ 1 ಆರೋಪಿಯಾಗಿದ್ದು, ಎ 2 ಆಗಿ ಅಲಿಖಾನ್ ಹಾಗೂ ಎ 3 ಆರೋಪಿಯಾಗಿ ಶ್ರೀನಿವಾಸ ರೆಡ್ಡಿ ಅವರ ಹೆಸರು ಉಲ್ಲೇಖ ಮಾಡಲಾಗಿದೆ. ಉಳಿದಂತೆ ಮತ್ತೊಬ್ಬ ಆರೋಪಿ ಖಾರದ ಪುಡಿ ಮಹೇಶ್ ಸೇರಿ ಹಲವರನ್ನು ಚಾರ್ಜ್ ಶೀಟ್ ನಿಂದ ಕೈ ಬಿಡಲಾಗಿದೆ.

    ಜನಾರ್ದನ ರೆಡ್ಡಿ ವಿರುದ್ಧ IPಅ 379, 420, 120ಬಿ, ಎಂಎಂಡಿಆರ್ ಕಾಯ್ದೆಯ 125ನಿಯಮ, ಕರ್ನಾಟಕ ಅರಣ್ಯ ಖಾಯ್ದೆ ನಿಯಮ 144ರ ಅಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸುಮಾರು 1,069 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಗೆ ನಡೆಸಿದ್ದಾರೆ ಹಾಗು ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯ ಸರ್ಕಾರಕ್ಕೆ 23,89,650 ರೂ. ನಷ್ಟ ಮಾಡಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ಅಂದಹಾಗೇ ಶೇಖ್ ಸಾಬ್ ಎಂಬವರಿಂದ ರೆಡ್ಡಿ & ಟೀಂ ಗಣಿ ಕಂಪನಿಯ ಗುತ್ತಿಗೆ ಪಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟೂಥ್ ಬ್ರಶ್‍ನಿಂದ ಗೌರಿ ಲಂಕೇಶ್ ಹಂತಕರು ಅರೆಸ್ಟ್!

    ಟೂಥ್ ಬ್ರಶ್‍ನಿಂದ ಗೌರಿ ಲಂಕೇಶ್ ಹಂತಕರು ಅರೆಸ್ಟ್!

    -ಸುಳಿವು ನೀಡಿತ್ತು ಟೂಥ್ ಬ್ರಶ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸುದೀರ್ಘ 6 ಸಾವಿರ ಪುಟಗಳಿರುವ ಚಾರ್ಜ್ ಶೀಟ್ ಅನ್ನು ಟ್ರಂಕ್‍ನಲ್ಲಿ ಇಟ್ಟು ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಆರೋಪಿಗಳ್ನು ಪೊಲೀಸರು ಹೇಗೆ ಪತ್ತೆ ಮಾಡಿದರು ಎಂಬುವುದು ಮಾಹಿತಿಗಳು ಉಲ್ಲೇಖವಾಗಿರುತ್ತವೆ. ಚಾರ್ಜ್ ಶೀಟ್ ಉಲ್ಲೇಖವಾದ ಕೆಲ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಆರೋಪಿಗಳ ಬಗ್ಗೆ ಟೂಥ್ ಬ್ರಶ್ ಒಂದು ಸುಳಿವು ನೀಡಿತ್ತು.

    ಹಂತಕರು ಗೌರಿ ಹತ್ಯೆಗೂ ಮುನ್ನ ನಗರದ ಸುಂಕದಕಟ್ಟೆಯ ಸುರೇಶ್ ಎಂಬವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಗೌರಿ ಹಂತಕ ಪರಶುರಾಮ್ ವಾಗ್ಮೋರೆ, ಬೈಕ್ ಓಡಿಸಿದ್ದ ಗಣೇಶ್ ಮಿಸ್ಕಿನ್ ಇಬ್ಬರೂ ಸುರೇಶ್ ಮನೆಯಲ್ಲಿದ್ದರು. ಹಂತಕರು ಕೊಲೆಯ ಬಳಿಕ ಸುರೇಶ್ ಮನೆಯಲ್ಲಿ ತಮ್ಮ ಟೂಥ್ ಬ್ರೆಶ್ ಬಿಟ್ಟು ಹೋಗಿದ್ದರು. ಈ ಟೂಥ್ ಬ್ರಶ್‍ನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ವಾಗ್ಮೋರೆ, ಮಿಸ್ಕಿನ್ ಡಿಎನ್‍ಎ ಟೆಸ್ಟ್ ಮಾಡಿಸಿದ್ದರು.

    ಗೌರಿ ಹತ್ಯೆ ಬಳಿಕ ಸುರೇಶ್ ಮನೆಗೆ ವಾಪಸ್ಸಾಗದೇ ಪರಶುರಾಮ್ ಓಡಿಹೋಗಿದ್ದನು. ತಾನು ವಾಸ್ತವ್ಯ ಹೂಡಿದ್ದ ಮನೆಯಲ್ಲಿ ತನ್ನದೊಂದು ಅಂಗಿಯನ್ನು ವಾಗ್ಮೋರೆ ಬಿಟ್ಟು ಹೋಗಿದ್ದನು. ಈ ಅಂಗಿಯಲ್ಲಿ ಕೂದಲುಗಳು ಪತ್ತೆಯಾಗಿದ್ದುವು. ಪೊಲೀಸರು ಕೂದಲನ್ನು ಸಹ ಡಿಎನ್ ಎ ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷೆಯಲ್ಲಿ ಶರ್ಟ್ ನಲ್ಲಿದ್ದ ಕೂದಲಿಗೂ ಪರಶುರಾಮ್ ವಾಗ್ಮೋರೆ ಮೈ ಮೇಲಿನ ಕೂದಲಿಗೂ ಸಾಮ್ಯತೆ ಕಂಡು ಬಂದಿದೆ. ಇತ್ತ ಟೂಥ್ ಬ್ರಶ್ ಪರೀಕ್ಷೆಯಲ್ಲಿ ಪೊಲೀಸರಿಗೆ ಸಕಾರಾತ್ಮಕ ಉತ್ತರ ಬಂದಿದೆ. ಈ ಎಲ್ಲ ಬಲವಾದ ಆಧಾರಗಳ ಮೇಲೆಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳು ಹಿಂದೂ ಧರ್ಮದ ವಿರೋಧಿಗಳು ಯಾರು ಎಂಬುದನ್ನ ಮೂರು ವರ್ಗ ಮಾಡಿಕೊಂಡಿದ್ದರು. ಮೊದಲನೆಯದ್ದು ಹಿಂದೂಗಳಾಗಿದ್ದುಕೊಂಡು ಹಿಂದೂ ಧರ್ಮವನ್ನು ವಿರೋಧಿಸುವುದು. ಎರಡನೇಯದು, ಹಿಂದೂ ಧರ್ಮವನ್ನು ವಿರೋಧಿಸುವ ಅನ್ಯಧರ್ಮೀಯರು ಮತ್ತು ನಾಸ್ತಿಕರು ಎಂದು ಮೂರು ರೀತಿಯಲ್ಲಿ ವಿಂಗಡನೆ ಮಾಡಿಕೊಂಡಿದ್ದರು. ಆರೋಪಿಗಳು 2023ರ ವೇಳೆಗೆ ಭಾರತವನ್ನ ಸಂಪೂರ್ಣ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಟಾರ್ಗೆಟ್ ಹೊಂದಿದ್ದರು ಎಂದು ಹೇಳಲಾಗುತ್ತಿದೆ.

    ಈ ಎಲ್ಲ ಬೆಳವಣಿಗೆಗಳ ನಡುವೆ ಗೌರಿ ಲಂಕೇಶ್ ತಮ್ಮ ಭಾಷಣದಲ್ಲಿ ಹಿಂದೂ ಧರ್ಮಕ್ಕೆ ಅಪ್ಪ ಅಮ್ಮ ಇಲ್ಲ, ಅದೊಂದು ಧರ್ಮವೇ ಅಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯಿಂದಲೇ ಹಂತಕರು ಮೊದಲಿಗೆ ಗೌರಿ ಲಂಕೇಶ್ ಅವರನ್ನೆ ಟಾರ್ಗೆಟ್ ಮಾಡಿಕೊಂಡಿದ್ದರು.

    ಎಸ್‍ಐಟಿ ತನಿಖಾಧಿಕಾರಿ ಎಂ.ಎನ್.ಅನುಚೇತ್ ಅವರ ಮೂಲಕ 1ನೇ ಸಿಸಿಎಚ್ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಒಟ್ಟು 18 ಜನ ಆರೋಪಿಗಳು ಭಾಗಿ ಆಗಿರುವ ಕುರಿತು ಮಾಹಿತಿ ನೀಡಲಾಗಿದೆ. ಒಟ್ಟು 16 ಜನರನ್ನು ಬಂಧಿಸಿ ಕೋಕಾ ಕಾಯ್ದೆಯಡಿ ಎಸ್‍ಐಟಿ ಪ್ರಕರಣವನ್ನು ದಾಖಲಿಸಿತ್ತು. ಗೌರಿ ಹತ್ಯೆ ಪ್ರಕರಣ ಸಂಬಂಧ 650 ಪುಟಗಳ ಮೊದಲ ದೋಷಾರೋಪ ಪಟ್ಟಿಯನ್ನು 2018ರ ಮೇ ತಿಂಗಳಲ್ಲಿ ಎಸ್‍ಐಟಿ ಸಲ್ಲಿಸಿತ್ತು. ಹೆಚ್ಚುವರಿ ಆರೋಪ ಸಲ್ಲಿಕೆಗೆ ನವೆಂಬರ್ 27 ಕೊನೆಯ ದಿನವಾಗಿತ್ತು. ಹೀಗಾಗಿ ಶುಕ್ರವಾರ ಎಸ್‍ಐಟಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಈ ಪ್ರಕರಣದಲ್ಲಿ ಬೇಕಾಗಿದ್ದ ದಾದಾ ಹಾಗೂ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿರುವುದಾಗಿ ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೇ 450ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ.

    ಆರೋಪಿಗಳು ಯಾರು?
    ಪ್ರಕರಣದ ಪ್ರಮುಖ ಆರೋಪಿ (ಎ1) ಮಹಾರಾಷ್ಟ್ರ ಅಮೋಲ್ ಕಾಳೆ ಇವನು ಹತ್ಯೆಯ ಪ್ರಧಾನ ಸಂಚುಕಾರ, ಉಳಿದಂತೆ (ಎ2) ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ್ ವಾಗ್ಮೋರೆ -ಶೂಟರ್, (ಎ3) ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್ – ಬೈಕ್ ರೈಡರ್, (ಎ4) ಹುಬ್ಬಳ್ಳಿ ಅಮಿತ್ ಬುದ್ಧ -ರೈಡರ್ ಸಹಾಯಕ, (ಎ5) ಮಹಾರಾಷ್ಟ್ರದ ಅಮಿತ್ ದೇಗ್ವೇಕರ್ -ಹಣಕಾಸು ಉಸ್ತುವಾರಿ, (ಎ6) ಬೆಳಗಾವಿಯ ಭರತ್ ಕುರ್ನೆ – ಶಸ್ತ್ರಾಸ್ತ್ರ ತರಬೇತಿಗೆ ಆಶ್ರಯ ನೀಡಿದ್ದು, (ಎ7) ಮಹಾರಾಷ್ಟ್ರದ ಸುಧನ್ವಾ ಗೋಲೆಧಕರ್ – ಸಂಚುಗಾರ, (ಎ8) ಮಹಾರಾಷ್ಟ್ರದ ಶರದ್ ಕಲಾಸ್ಕರ್ – ಸಂಚುಗಾರ, (ಎ9) ಕೊಡಗಿನ ರಾಜೇಶ್ ಬಂಗೇರಾ – ಶಸ್ತ್ರಾಸ್ತ್ರ ತರಬೇತುದಾರ, (ಎ10) ಮಹಾರಾಷ್ಟ್ರದ ಶ್ರೀಕಾಂತ್ ಪಂಗಾರ್ಕರ್ – ಸಂಚುಗಾರ ಇವರನ್ನು ಸೇರಿದಂತೆ ಒಟ್ಟು 17 ಜನ ಆರೋಪಿಗಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv