Tag: charity

  • ಕನ್ನಡದಲ್ಲೂ ನಟಿಸಿರುವ ಈ ನಟಿ ಮಕ್ಕಳ ಚಿಕಿತ್ಸೆಗೆ 67 ಲಕ್ಷ ದಾನ

    ಕನ್ನಡದಲ್ಲೂ ನಟಿಸಿರುವ ಈ ನಟಿ ಮಕ್ಕಳ ಚಿಕಿತ್ಸೆಗೆ 67 ಲಕ್ಷ ದಾನ

    ಸ್ಯಾಂಡಲ್ ವುಡ್ ನಲ್ಲಿ ತೆರೆ ಕಂಡಿರುವ ಐರಾವತ ಸಿನಿಮಾದ ನಾಯಕಿ, ಬಾಲಿವುಡ್ ನಟಿ ಮತ್ತು ಮಾಡೆಲ್ ಊರ್ವಶಿ ರೌಟೆಲಾ ಮತ್ತೆ ಸುದ್ದಿಗೆ ಬಂದಿದ್ದಾರೆ. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹತ್ತು ಹಲವು ಬಗೆಯಲ್ಲಿ ಸಹಾಯ ಮಾಡಿದ್ದ ಈ ನಟಿ ಇದೀಗ ಮಕ್ಕಳ ಸೀಳು ತುಟಿ ಚಿಕಿತ್ಸೆಗಾಗಿ ಬರೋಬ್ಬರಿ 67 ಲಕ್ಷ ರೂಪಾಯಿಯನ್ನು ದಾನ ಮಾಡಿದ್ದಾರೆ. ಮಾಡೆಲಿಂಗ್ ನಿಂದ ಬಂದ ಹಣದಲ್ಲಿ ಅವರು ಪ್ರತಿ ಸಾರಿಯೂ ಒಂದಿಲ್ಲೊಂದು ರೀತಿಯಲ್ಲಿ ಸಹಾಯ ಮಾಡುತ್ತಲೇ ಇರುತ್ತಾರೆ.

    ಸಿನಿಮಾಗಳಿಗಿಂತ ಮಾಡೆಲಿಂಗ್ ಜಗತ್ತಿನಲ್ಲಿ ಹೆಚ್ಚು ಪ್ರಸಿದ್ಧ ಹೊಂದಿರುವ ಊರ್ವಶಿ, ಸಾಕಷ್ಟು ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ದುಬೈನಲ್ಲಿ ಬಹುಬೇಡಿಕೆಯ ಮಾಡೆಲ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಮಾಡೆಲಿಂಗ್ ಜಗತ್ತಿನ ಜೊತೆ ಜೊತೆಗೆ ಎನ್.ಜಿ.ಓ ಗಳ ರಾಯಭಾರಿಯಾಗಿಯೂ ಉಚಿತವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಆ ಎನ್.ಜಿ.ಓಗಳಿಗೆ ತಾವು ದುಡಿದ ಹಣವನ್ನೂ ಕೊಡುತ್ತಾರೆ. ಇದನ್ನೂ ಓದಿ:ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಫ್ಯಾಶನ್‌ ಡಿಸೈನರ್‌ ಮಸಾಬ ಗುಪ್ತಾ

    ಸದ್ಯ ಸ್ಮೈಲ್ ಟ್ರೈನ್ ಹೆಸರಿನ ಎನ್.ಜಿ.ಓ ಗೆ ರಾಯಭಾರಿ ಆಗಿರುವ ಊರ್ವಶಿ, ಇದೊಂದು ಸೀಳು ತುಂಟಿ ಹೊಂದಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸುವ ಸಂಸ್ಥೆ. ಎರಡು ದಶಕಗಳಿಂದಲೂ ಇದು ಈ ಕೆಲಸವನ್ನು ಮಾಡುತ್ತಿದೆ. ಹಾಗಾಗಿ ಇದರೊಂದಿಗೆ ಕೈ ಜೋಡಿಸಿರುವ ರೌಟೆಲಾ ತನ್ನ ದುಡಿಮೆಯಿಂದ ಬಂದ ಹಣದಲ್ಲಿ 67 ಲಕ್ಷ ದೇಣಿಗೆ ನೀಡಿ, ಆ ಮಕ್ಕಳ ಮೊಗದಲ್ಲಿ ನಗು ಕಾಣಲು ಕಾರಣರಾಗಿದ್ದಾರೆ. ಈ ಹಣದಿಂದ ಇನ್ನೂರಕ್ಕೂ ಹೆಚ್ಚು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾಲ್ಕು ಕೈ- ನಾಲ್ಕು ಕಾಲು ಇರುವ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವಾದ ಸೋನು ಸೂದ್

    ನಾಲ್ಕು ಕೈ- ನಾಲ್ಕು ಕಾಲು ಇರುವ ಮಗುವಿನ ಶಸ್ತ್ರ ಚಿಕಿತ್ಸೆಗೆ ನೆರವಾದ ಸೋನು ಸೂದ್

    ಬಾಲಿವುಡ್ ನಟ ಸೋನು ಸೂದ್ ಬಹುಭಾಷಾ ಕಲಾವಿದನಾಗಿ ಗುರುತಿಸಿಕೊಂಡಿರುವ ನಟ, ಸಿನಿಮಾಗಳಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದನ್ನ ಮತ್ತೆ ಪ್ರೂವ್ ಮಾಡಿದ್ದಾರೆ. ವಿಶೇಷ ಮಗುವಿಗೆ ಶಸ್ತ್ರ ಚಿಕಿತ್ಸೆಗೆ ನೆರವಾಗಿ, ಅಭಿಮಾನಿಗಳ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದಾರೆ.

    ನಟನಾಗಿ, ಖಳನಾಯಕನಾಗಿ, ಪೋಷಕ ಪಾತ್ರಗಳ ಮೂಲಕ ಬಹುಭಾಷಾ ತಾರೆಯಾಗಿ ಗುರುತಿಸಿಕೊಂಡಿರುವ ಸೋನು ಸೂದ್ ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಹೀರೋ ಅಲ್ಲಾ, ನಿಜ ಜೀವನದಲ್ಲೂ ಅದೆಷ್ಟೋ ಸಂಕಷ್ಟದಲ್ಲಿರುವವರಿಗೆ ನೆರವಾಗಿ ಅವರ ಬಾಳಿಗೆ ಬೆಳಕಾಗಿ ಸಾಥ್ ನೀಡಿದ್ದಾರೆ. ಕೊವೀಡ್ ವೇಳೆಯಲ್ಲಿ ಸಾಕಷ್ಟು ಜನರ ಕಷ್ಟಕ್ಕೆ ಸೋನು ಮಿಡಿದಿದ್ದಾರೆ. ಈಗ ನಾಲ್ಕು ಕೈ, ನಾಲ್ಕು ಕಾಲು ಇರುವ ಪುಟ್ಟ ಮಗುವಿನ ನೆರವಿಗೆ ಧಾವಿಸಿದ್ದಾರೆ. ಇದನ್ನೂ ಓದಿ: ಹಾಟ್ ಅವತಾರದಲ್ಲಿ ಪಾರುಲ್ ಯಾದವ್

     

    View this post on Instagram

     

    A post shared by Sonu Sood (@sonu_sood)

    ಬಿಹಾರ್‌ನ ಪುಟ್ಟ ಗ್ರಾಮದ ಹುಡುಗಿ ಚಹುಮುಖಿಯ ದೇಹದಲ್ಲಿ ನಾಲ್ಕು ಕೈ ಮತ್ತು ನಾಲ್ಕು ಕಾಲುಗಳೊಂದಿಗೆ ಜನಿಸಿದ್ದಳು.ಮಗುವಿನ ಪೋಷಕರಿಗೆ ಶಸ್ತ್ರ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದ ಸಂದರ್ಭದಲ್ಲಿ, ಮಗುವಿನ ಚಿಕಿತ್ಸೆಯ ಖರ್ಚನ್ನು ಈಗ ಸೋನು ಅವರೇ ನೋಡಿಕೊಂಡಿದ್ದು. ಇದೀಗ ಶಸ್ತ್ರ ಚಿಕಿತ್ಸೆಯ ನಂತರ ಮಗುವಿನ ಆರೋಗ್ಯ ಸುಧಾರಿಸಿದೆ. ಮಗುವಿನ ಸದ್ಯದ ಸ್ಥಿತಿಯ ಕುರಿತು ಸೋನು ಸೂದ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಸೋನು ಸೂದ್ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಕಷ್ಟು ತಾರೆಯರು ಸೋನು ಸೂದ್ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

  • ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ

    ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ

    ಮೈಸೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯರ ಸರಕಳ್ಳತನ ಮಾಡಿರುವ ಘಟನೆ ಮೈಸೂರು ನಗರದಲ್ಲಿ ನಡೆದಿದೆ.

    ಮೊದಲಿಗೆ ಕಳ್ಳರು ಚಾಮರಾಜಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಮಾದೇವಿ ಎಂಬವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. 

    POLICE JEEP

    ನಂತರ ಇದೇ ಸರಕಳ್ಳರು ವಿ.ವಿ.ಪುರಂ ಸಮೀಪದ ಹೈವೇ ಹೋಟೆಲ್ ಕ್ರಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೀನಾಕ್ಷಮ್ಮ ಎಂಬವರ ಕುತ್ತಿಗೆಯಿಂದ 70 ಗ್ರಾಂ ಚಿನ್ನದ ಸರವನ್ನು ಎಳೆದಿದ್ದಾರೆ. ಇದನ್ನೂ ಓದಿ: ಕೊಡಗಿನ ಗ್ರಾಮವೊಂದರಲ್ಲಿ ಪುರಾತನ ಈಶ್ವರ ಕೆತ್ತನೆ ಕಲ್ಲುಗಳು ಪತ್ತೆ

    ಎರಡು ಕಡೆಗೂ ಸ್ಕೂಟರ್‍ನಿಂದ ಬಂದ ಇಬ್ಬರು ಸರಗಳ್ಳರಿಂದ ಈ ಕೃತ್ಯ ನಡೆದಿದೆ. ಕೃತ್ಯ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ಮಾಡುವಾಗ ಯಾವುದೇ ರೀತಿಯ ಮಾಹಿತಿ ಲಭ್ಯವಾಗಲಿಲ್ಲ. ಈ ಕುರಿತು ಲಕ್ಷ್ಮೀ ಪುರಂ ಮತ್ತು ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಿನಿಮಾ ಕೆಲಸಗಾರರಿಗಾಗಿ 50 ಲಕ್ಷ ರೂ. ದಾನ ನೀಡಿದ ರಜನಿ

    ಸಿನಿಮಾ ಕೆಲಸಗಾರರಿಗಾಗಿ 50 ಲಕ್ಷ ರೂ. ದಾನ ನೀಡಿದ ರಜನಿ

    ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಕಷ್ಟದಲ್ಲಿರುವವರಿಗೆ ಹಾಗೂ ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ ಸಹಾಯ ಹಸ್ತ ಚಾಚುವಲ್ಲಿ ಎತ್ತಿದ ಕೈ. ಯಾವುದೇ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿಯೂ ಅವರು ಲಕ್ಷ ಲಕ್ಷ ರೂಗಳನ್ನು ಸಹಾಯದ ರೂಪದಲ್ಲಿ ನೀಡುತ್ತಾರೆ. ಅದೇ ರೀತಿ ಇದೀಗ ಕೊರೊನಾದಿಂದ ತತ್ತರಿಸಿರುವ ಸಿನಿಮಾ ಕ್ಷೇತ್ರದ ದಿನಗೂಲಿ ನೌಕರರಿಗೂ ಸಹಾಯ ಹಸ್ತ ಚಾಚಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ ಇಡೀ ದೇಶವೇ ತತ್ತರಿಸಿ ಹೋಗಿದೆ. ಎಲ್ಲವೂ ಸ್ತಬ್ಧವಾಗಿದೆ, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಯಾವುದೇ ಕಾರ್ಖಾನೆ, ಕಂಪನಿಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಕಂಪನಿಗಳು ವರ್ಕ್ ಫ್ರಮ್ ಹೋಮ್ ಪದ್ಧತಿ ಅನುಸರಿಸಿದರೆ, ಇನ್ನೂ ಕೆಲ ಕಂಪನಿಗಳು ತಾತ್ಕಾಲಿಕವಾಗಿ ಕಾರ್ಯವನ್ನು ಸ್ಥಗಿತಗೊಳಿಸಿವೆ. ಮಾರ್ಚ್ 31ರ ವರೆಗೆ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಎಲ್ಲರೂ ಆತಂಕದಲ್ಲಿದ್ದಾರೆ.

    ಕೊರೊನಾ ಎಫೆಕ್ಟ್ ಸಿನಿಮಾ ರಂಗಕ್ಕೂ ತಟ್ಟಿದ್ದು, ಸಿನಿಮಾ ಕ್ಷೇತ್ರದ ಎಲ್ಲ ಕೆಲಸಗಳು ಸ್ಥಗಿತಗೊಂಡಿವೆ. ನಟ, ನಟಿಯರು ಸ್ವಯಂ ದಿಗ್ಬಂಧನ ವಿಧಿಸಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಸಿನಿಮಾ ಕ್ಷೇತ್ರ ಸ್ತಬ್ಧವಾಗಿದೆ. ಇದರ ಎಫೆಕ್ಟ್ ಸಿನಿಮಾ ಕ್ಷೇತ್ರದ ದಿನಗೂಲಿ ನೌಕರರ ಮೇಲೆ ಬಿದ್ದಿದ್ದು, ಕೆಲಸವಿಲ್ಲದೆ, ಸಂಬಳ ಇಲ್ಲದೆ ಪರದಾಡುತ್ತಿದ್ದಾರೆ. ತುತ್ತು ಅನ್ನಕ್ಕೂ ಬೇಡುವ ಪರಿಸ್ಥಿತಿ ಎದುರಾಗಿದೆ ಹೀಗಾಗಿ ಇಂತಹ ಕೆಲಸಗಾರರಿಗೆ ಇದೀಗ ಸಿನಿಮಾ ನಟರು ಸಹಾಯ ಹಸ್ತ ಚಾಚಿದ್ದಾರೆ.

    ನಟರಾದ ಸೂರ್ಯ ಮತ್ತು ವಿಜಯ್ ಸೇತುಪತಿ ಈಗಾಗಲೇ ತಲಾ 10 ಲಕ್ಷ ರೂ.ಗಳನ್ನು ನೀಡಿದ್ದಾರೆ. ಇದಾದ ಬಳಿಕ ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಾರ್ಮಿಕರ ಕಷ್ಟಕ್ಕೆ ಮಿಡಿದಿದ್ದಾರೆ. ಚಲನಚಿತ್ರ ಕಾರ್ಮಿಕರಿಗೆಂದೇ ಇರುವ ಫಿಲ್ಮ್ ಎಂಪ್ಲಾಯಿಸ್ ಫೆಡರೇಷನ್ ಆಫ್ ಸೌತ್ ಇಂಡಿಯಾ (ಎಫ್‍ಇಎಫ್‍ಎಸ್‍ಐ) ಸಂಘಟನೆಗೆ ರಜನಿಕಾಂತ್ 50 ಲಕ್ಷ ರೂ. ನೀಡಿದ್ದಾರೆ. ಈ ಸಂಘಟನೆಯಲ್ಲಿ ಸುಮಾರು 25 ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಕೊರೊನಾ ಎಫೆಕ್ಟ್‍ನಿಂದಾಗಿ ಕೆಲಸವಿಲ್ಲದೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇದನ್ನು ಕಂಡ ರಜನಿ, ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ರಜನಿಕಾಂತ್ ಸದ್ಯ ಅಣ್ಣಾತೆ ಚಿತ್ರದಲ್ಲಿ ನಟಿಸುತ್ತಿದ್ದು, ಕೊರೊನಾ ಭೀತಿಯಿಂದಾಗಿ ಸಿನಿಮಾದ ಚಿತ್ರೀಕರಣವನ್ನು ಬಂದ್ ಮಾಡಲಾಗಿದೆ. ಈ ಚಿತ್ರಕ್ಕೆ ಶಿವ ಆ್ಯಕ್ಷನ್ ಕಟ್ ಹೇಳಿದ್ದು, ನಯನತಾರಾ, ಕೀರ್ತಿ ಸುರೇಶ್ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

  • ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ತಲೆಕೂದಲನ್ನು ದಾನ ಮಾಡಿದ 80 ವಿದ್ಯಾರ್ಥಿನಿಯರು

    ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ತಲೆಕೂದಲನ್ನು ದಾನ ಮಾಡಿದ 80 ವಿದ್ಯಾರ್ಥಿನಿಯರು

    – 200 ಜನ ದಾನ ಮಾಡಲು ಸಿದ್ಧ

    ಚೆನ್ನೈ: ಕ್ಯಾನ್ಸರ್ ರೋಗಿಗಳಿಗಾಗಿ ಕೊಯಮತ್ತೂರಿನ ಖಾಸಗಿ ಕಾಲೇಜಿನ 80 ಜನ ವಿದ್ಯಾರ್ಥಿನಿಯರು ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ.

    ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುವಾಗ ರೋಗಿಗಳು ತಲೆ ಕೂದಲನ್ನು ಕಳೆದುಕೊಂಡಿರುತ್ತಾರೆ. ಹಾಗಾಗಿ ಈ ರೀತಿಯ ರೋಗಿಗಳಿಗಾಗಿ ನಾವು ದಾನ ಮಾಡುವ ಕೂದಲನ್ನು ವಿಗ್ ಮಾಡಲು ಬಳಸಿಕೊಳ್ಳಿ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

    ಕ್ಯಾನ್ಸರ್ ರೋಗಿಗಳಿಗೆ ಹಣ ಸಹಾಯ ಮಾಡುವಷ್ಟು ಅರ್ಥಿಕವಾಗಿ ನಾವು ಸಬಲರಾಗಿಲ್ಲ. ಅದಕ್ಕಾಗಿ ನಮ್ಮ ಕೈಯಲ್ಲಿ ಆಗುವ ಸಹಾಯ ಮಾಡುತ್ತಿದ್ದೇವೆ. ಇದರಿಂದ ರೋಗಿಗಳ ಮುಖದಲ್ಲಿ ಸ್ವಲ್ಪ ಸಂತೋಷವಾದರು ನಮಗೆ ಖುಷಿಯಾಗುತ್ತದೆ. ನನಗೆ ಅವರಿಗೇ ಏನಾದರೂ ಸಹಾಯ ಮಾಡಬೇಕು ಎಂದು ಅನಿಸಿತ್ತು. ಆದರೆ ನನ್ನ ಬಳಿ ಹಣ ಇರಲಿಲ್ಲ. ಆಗ ನನ್ನ ಮನಸ್ಸಿಗೆ ಈ ಆಲೋಚನೆ ಬಂತು ಎಂದು ವಿದ್ಯಾರ್ಥಿನಿ ವಿನೋಥಿನಿ ಹೇಳಿದ್ದಾರೆ.

    ನಮ್ಮ ತಲೆ ಕೂದಲಿನ ಎಂಟು ಇಂಚು ಕೂದಲನ್ನು ಮಾತ್ರ ವಿಗ್‍ಗಾಗಿ ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಾನು ಅದಕ್ಕಿಂತ ಜಾಸ್ತಿ ದಾನ ಮಾಡಲು ಸಿದ್ಧವಾಗಿದ್ದೇನೆ. ಈಗ ಕೇವಲ 80 ಜನ ವಿದ್ಯಾರ್ಥಿನಿಯರು ಮಾತ್ರ ತಲೆ ಕೂದಲು ದಾನ ಮಾಡಲು ಬಂದಿದ್ದಾರೆ. ಇನ್ನೂ 200 ಜನ ವಿದ್ಯಾರ್ಥಿನಿಯರು ಕೂದಲು ದಾನ ಮಾಡಲು ಬರುತ್ತಾರೆ ಎಂದು ವಿನೋಥಿನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

  • ಮೂವರಿಗೆ ಮರು ಜನ್ಮ ನೀಡಿದ 19ರ ಯುವಕ!

    ಮೂವರಿಗೆ ಮರು ಜನ್ಮ ನೀಡಿದ 19ರ ಯುವಕ!

    ಪಾಟ್ನಾ: ಅಪಘಾತದಲ್ಲಿ ಸಾವನ್ನಪ್ಪಿದ್ದ 19 ವರ್ಷದ ಯುವಕನ ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಪೋಷಕರು ಮೂವರು ವ್ಯಕ್ತಿಗಳಿಗೆ ಮರುಜನ್ಮವನ್ನು ನೀಡಿದ್ದಾರೆ.

    ಬಿಹಾರದ ನಳಂದ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದ. ಮೃತಪಟ್ಟ ಯುವಕನ ತಂದೆ ಎಸ್ ಭೂಷಣ್ ಪ್ರಸಾದ್ ಅವರು ಪಾಟ್ನಾದಲ್ಲಿರುವ ಇಂದಿರಾ ಗಾಂಧಿ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಮಗನ ಅಂಗಾಂಗಳನ್ನು ದಾನ ಮಾಡಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಮಗನ ಹೃದಯ, ಕಣ್ಣುಗಳು ಮತ್ತು ಲಿವರ್(ಯಕೃತ್ತು) ಬೇರೆ ವ್ಯಕ್ತಿಗಳ ಜೀವನಕ್ಕೆ ಆಸರೆಯಾಗುತ್ತದೆ ಎಂದು ದಾನ ಮಾಡಲು ನಿರ್ಧರಿಸಿದೆವು ಎಂದು ಹೇಳಿದ್ದಾರೆ.

    ಮೃತ ಪಟ್ಟ ಯುವಕನ ತಾಯಿ ಮಗನ ದೇಹವನ್ನು ದಾನ ಮಾಡಲು ಒಪ್ಪಿಕೊಂಡಿದ್ದು, ಆಕೆಯ ತೀರ್ಮಾನ ಇತರರಿಗೆ ಸ್ಫೂರ್ತಿಯಾಗಿದೆ. ದೇಹವನ್ನು ದಾನ ಮಾಡುವುದರಿಂದ ಮೂರು ವ್ಯಕ್ತಿಗಳಿಗೆ ಮರುಜನ್ಮ ನೀಡಿದಂತೆ ಆಗುತ್ತದೆ ಎಂದು ಆಸ್ಪತ್ರೆಯ ಅಧೀಕ್ಷಕ ಮನೀಶ್ ಮಂಡಲ್ ತಿಳಿಸಿದರು.

    ಮೃತಪಟ್ಟ ಯುವಕನ ಕಣ್ಣುಗಳನ್ನು ಇನ್ ಸ್ಟಿಟ್ಯೂಟ್ ನಲ್ಲೇ ಇರಿಸಲಾಗಿದೆ. ಹೃದಯವನ್ನು ಕೋಲ್ಕತ್ತಾಗೆ ಕಳುಹಿಸಲಾಗಿದ್ದು, ಅಗತ್ಯವಿರುವ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲು ಲಿವರ್ ಅನ್ನು ದೆಹಲಿಗೆ ಕಳುಹಿಸಲಾಗಿದೆ ಎಂದು ಮಂಡಲ್ ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿತ್ಯ ಹೆಂಡತಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಅಕ್ಕನಿಂದಲೇ ಧರ್ಮದೇಟು

    ನಿತ್ಯ ಹೆಂಡತಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಅಕ್ಕನಿಂದಲೇ ಧರ್ಮದೇಟು

    ಕೊಪ್ಪಳ: ಭಾಗ್ಯಾನಗರದಲ್ಲಿ ನಿತ್ಯ ಹೆಂಡತಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನ ಸ್ವತಃ ಅಕ್ಕನೆ ಕೈಕಾಲು ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ.

    ಕಳಕಪ್ಪ ಡಾಣಾಪುರ ಎಂಬಾತ ಕೂದಲು ಉದ್ಯಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಬಂದ ಹಣವನ್ನೆಲ್ಲ ಕುಡಿದು, ಮನೆಗೆ ಬಂದು ಹೆಂಡತಿ ಮಕ್ಕಳಿಗೆ ನಿತ್ಯ ಕಿರುಕುಳ ನೀಡುತ್ತಿದ್ದ.

    ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ಕಳಕಪ್ಪ ಹೆಂಡತಿ ಮೇಲೆ ಹಲ್ಲೆ ಮಾಡಿದ್ದಾನೆ. ಹೆಂಡತಿಯನ್ನು ಮನೆಯಿಂದ ಹೊರಹಾಕಿ, ತನ್ನ ಮಗಳನ್ನು ತನ್ನ ತಂಗಿಯ ಮನೆಗೆ ತಂದು ಬಿಟ್ಟಿದ್ದಾನೆ. ಈತನ ವರ್ತನೆಯಿಂದ ಬೇಸತ್ತು, ಸ್ವತಃ ಅಕ್ಕನೇ ತನ್ನ ಮನೆಮುಂದೆ ಕೈ ಕಾಲುಗಳನ್ನ ಕಟ್ಟಿಹಾಕಿ ನಾಲ್ಕೈದು ಧರ್ಮದೇಟು ನೀಡಿ ಬುದ್ಧಿ ಹೇಳಿದರು. ನಿನ್ನ ಹೆಂಡತಿಯನ್ನು ಎಲ್ಲಿಗೆ ಕಳಿಸಿದ್ದಿಯಾ, ಅವಳು ಬರುವವರೆಗೆ ನಿನ್ನನ್ನೂ ಬಿಡುವುದಿಲ್ಲ ಎಂದು ತಮ್ಮನೆಂಬುದನ್ನು ಮರೆತು ಧರ್ಮದೇಟು ನೀಡಿದ್ದಾರೆ.

    ಗಂಡನ ಕಿರುಕುಳಕ್ಕೆ ಬೇಸತ್ತು ಮನೆಬಿಟ್ಟು ಹೋಗಿದ್ದ ಹೆಂಡತಿಯನ್ನು ಸ್ಥಳೀಯರು ಹುಡುಕಾಡಿ ಮನೆಗೆ ಕರೆದುಕೊಂಡು ಬಂದಿದ್ದಾರೆ. ದುಡಿದ ಹಣವನ್ನ ಮನೆಗೆ ಕೊಡುವುದಿಲ್ಲ, ಬದಲಾಗಿ ನಿತ್ಯ ಕಿರುಕುಳ ನೀಡುತ್ತಾನೆ. ಈತನ ವರ್ತನೆಯಿಂದ ಬೇಸತ್ತು ಮನೆಯಿಂದ ಹೋಗಿದ್ದೆ ಎಂದು ಹೆಂಡತಿ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

    ಸ್ಥಳೀಯರು ಕೊಪ್ಪಳ ನಗರ ಪೊಲೀಸರಿಗೆ ನೀಡಿದ ಮಾಹಿತಿಯಿಂದ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳಕಪ್ಪನ ನ್ನು ತಮ್ಮ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋದರು.