Tag: Charlie

  • Bigg Boss Kannada10: ದೊಡ್ಮನೆಗೆ ಬರಲೇ ಇಲ್ಲ ಚಾರ್ಲಿ: ಬಿಗ್ ಬಾಸ್ ಗೆ ಪ್ರಶ್ನೆ ಕೇಳಿದ ಫ್ಯಾನ್ಸ್

    Bigg Boss Kannada10: ದೊಡ್ಮನೆಗೆ ಬರಲೇ ಇಲ್ಲ ಚಾರ್ಲಿ: ಬಿಗ್ ಬಾಸ್ ಗೆ ಪ್ರಶ್ನೆ ಕೇಳಿದ ಫ್ಯಾನ್ಸ್

    ಬಾರಿ ಚಾರ್ಲಿ ಬಿಗ್ ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದೆ ಎಂದು ವಾಹಿನಿ ಹೇಳಿಕೊಂಡಿತ್ತು. ಚಾರ್ಲಿ(Charli) ದೊಡ್ಮನೆಗೆ ಬಂದೇ ಬರುತ್ತಾನೆ ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದರು. ಆದರೆ, ಇಂದು ಗ್ರ್ಯಾಂಡ್ ಓಪನಿಂಗ್ ಸಮಯದಲ್ಲಿ ಚಾರ್ಲಿ ಕಾಣಿಸಿಕೊಳ್ಳಲೇ ಇಲ್ಲ. ಹಾಗಾಗಿ ಸಹಜವಾಗಿ ಚಾರ್ಲಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಚಾರ್ಲಿ ಎಲ್ಲಿ ಎಂದು ಬಿಗ್ ಬಾಸ್ ಅನ್ನು ಅಭಿಮಾನಿಗಳು ಕೇಳುತ್ತಿದ್ದಾರೆ.

    ಚಾರ್ಲಿಯನ್ನು ಬಿಗ್ ಬಾಸ್ ಮನೆಗೆ ಕರೆದುಕೊಂಡು ಬರುವುದೇ ಇಲ್ಲವಾ? ಅಥವಾ ಸ್ಪೆಷಲ್ ಟಾಸ್ಕ್ ಮೂಲಕ ಮನೆ ಒಳಗೆ ಪ್ರವೇಶ ಮಾಡುತ್ತದಾ ಗೊತ್ತಿಲ್ಲ. ಆದರೆ, ಸ್ಪರ್ಧಿಗಳ ಜೊತೆಯಂತೂ ಚಾರ್ಲಿ ಬರಲಿಲ್ಲ. ಸುದೀಪ್ ಅವರ ಮುಂದೆ ನಿಲ್ಲಲಿಲ್ಲ. ಹಾಗಾಗಿ ಚಾರ್ಲಿ ಬರುತ್ತದೆಯೋ ಇಲ್ಲವೋ ಎನ್ನುವ ಅನುಮಾನ ಕೂಡ ಮೂಡಿದೆ.

    ವೇಟಿಂಗ್ ಲಿಸ್ಟ್ ಪರೀಕ್ಷೆ

    ಕಡಿಮೆ ಮತಗಳನ್ನು ಪಡೆಯುವ ಮೂಲಕ ಡ್ರೋನ್ ಪ್ರತಾಪ್, ನಟಿ ತನಿಷಾ ಕುಪ್ಪಂಡ, ನಟಿ ಸಂಗೀತಾ ಶೃಂಗೇರಿ, ರೈತ ವರ್ತುರ್ ಸಂತೋಶ್, ನಟ ಕಾರ್ತಿಕ್ ಮಹೇಶ್ ಮತ್ತು ಬುಲೆಟ್ ಪ್ರಕಾಶ್ ಪುತ್ರ ರಕ್ಷರ್ ವೇಟಿಂಗ್ ಲಿಸ್ಟ್ ನಲ್ಲಿ ಇದ್ದರು. ಇವರಿಗೆ ಬಿಗ್ ಬಾಸ್  (Bigg Boss Karnataka)ವಿಶೇಷ ಟಾಸ್ಕ್ ಕೊಡುವ ಮೂಲಕ ದೊಡ್ಮನೆ ಒಳಗೆ ಕಳುಹಿಸುತ್ತಾರೆ ಎಂದು ನಂಬಲಾಗಿತ್ತು. ಆದರೆ, ವಿಶೇಷ ಟ್ವಿಸ್ಟ್ ಕೊಟ್ಟರು ಸುದೀಪ್.

    ಹೋಲ್ಡ್ ನಲ್ಲಿ ಇರಿಸಿರುವ ಈ ಆರು ಸ್ಪರ್ಧೆಗಳನ್ನು ಮನೆಗೆ ಒಳಗೆ ಕಳುಹಿಸುವುದಾಗಿ ಹೇಳಿದ ಸುದೀಪ್, ಅವರಿಗೆ ಒಂದು ವಾರಗಳ ಕಾಲ ಕಾಲಾವಕಾಶ ನೀಡಿದ್ದಾರೆ. ಈ ಒಂದು ವಾರದಲ್ಲಿ ಬಿಗ್ ಬಾಸ್ ಆದೇಶ ನೋಡಿಕೊಂಡು ಅವರು ಮನೆಯಲ್ಲಿ ಇರುತ್ತಾರಾ ಅಥವಾ ಇಲ್ಲವಾ ಎನ್ನುವುದನ್ನು ನಿರ್ಧರಿಸಲಾಗುವುದು ಎಂದಿದ್ದಾರೆ ಸುದೀಪ್.

     

    ಈ ಬಾರಿ ಒಟ್ಟು 19 ಸ್ಪರ್ಧಿಗಳು ವೇದಿಕೆಯ ಮೇಲೆ ಬಂದಿದ್ದರು. ಅದರಲ್ಲಿ ಇಬ್ಬರು ಮತವನ್ನು ಪಡೆಯಲಾಗದೇ ತಮ್ಮ ಮನೆಗೆ ವಾಪಸ್ಸಾದರು. 11 ಸ್ಪರ್ಧಿಗಳು ವೋಟು ಪಡೆದುಕೊಂಡು ಮನೆ ಒಳಗೆ ಪ್ರವೇಶ ಮಾಡಿದರು. ಉಳಿದ ಆರು ಜನರು ಕಡಿಮೆ ಮತಗಳನ್ನು ಪಡೆದು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್‌ ಬಾಸ್‌ ಸೀಸನ್‌ 10 ಮೊದಲ ಸ್ಪರ್ಧಿ ಚಾರ್ಲಿ

    ಬಿಗ್‌ ಬಾಸ್‌ ಸೀಸನ್‌ 10 ಮೊದಲ ಸ್ಪರ್ಧಿ ಚಾರ್ಲಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾರ್ಲಿ ಮೇನಿಯಾ : ಮಂಗಳೂರಿನ ಶ್ವಾನಕ್ಕೆ ‘ಚಾರ್ಲಿ’ ಎಂದು ಹೆಸರಿಟ್ಟ ಪೊಲೀಸ್ ಇಲಾಖೆ

    ಚಾರ್ಲಿ ಮೇನಿಯಾ : ಮಂಗಳೂರಿನ ಶ್ವಾನಕ್ಕೆ ‘ಚಾರ್ಲಿ’ ಎಂದು ಹೆಸರಿಟ್ಟ ಪೊಲೀಸ್ ಇಲಾಖೆ

    ಕ್ಷಿತ್ ಶೆಟ್ಟಿ ನಟಿಸಿರು ಚಾರ್ಲಿ 777 ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ. ಈ ಸಿನಿಮಾದ ಕೊನೆಯಲ್ಲಿ ನಾಯಿಯನ್ನು ದತ್ತು ಪಡೆದುಕೊಳ್ಳಿ ಎಂದು ಸಂದೇಶವಿದೆಯಂತೆ. ಹಾಗಾಗಿಯೇ ಸಿನಿಮಾ ನೋಡಿದ ಅನೇಕರು ತಮ್ಮ ತಮ್ಮ ಶ್ವಾನ ಪ್ರೀತಿ ತೋರುತ್ತಿದ್ದಾರೆ. ಕೇವಲ ಸಾಮಾನ್ಯ ಸಿನಿಮಾ ನೋಡುಗರು ಮಾತ್ರವಲ್ಲ, ಪೊಲೀಸ್ ಇಲಾಖೆ ಕೂಡ ತಮ್ಮ ಶ್ವಾನ ದಳದ ನಾಯಿಗೆ ವಿಭಿನ್ನ ರೀತಿಯಲ್ಲಿ ಗೌರವ ನೀಡುವ ಮೂಲಕ ಸಿನಿಮಾವನ್ನು ನೆನಪಿಸಿಕೊಂಡಿದೆ.

    ಚಾರ್ಲಿ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯ ಸಂಬಂಧದ ಕುರಿತು ಅನೇಕ ಅಂಶಗಳನ್ನು ಅಳವಡಿಸಲಾಗಿದೆಯಂತೆ. ಹಾಗಾಗಿ ಮಂಗಳೂರು ಪೊಲೀಸ್ ಇಲಾಖೆಯು ಅದರಿಂದ ಸ್ಫೂರ್ತಿ ಪಡೆದುಕೊಂಡು ತಮ್ಮ ಶ್ವಾನ ದಳದ ಮರಿನಾಯಿಗೆ ಚಾರ್ಲಿ ಎಂದು ಹೆಸರಿಟ್ಟಿದ್ದಾರೆ. ನಾಯಿಮರಿಗೆ ಇನ್ನೂ ಮೂರು ತಿಂಗಳಾಗಿದ್ದರಿಂದ ಚಾರ್ಲಿ ಎಂದು ಹೆಸರಿಡುವ ಮೂಲಕ ಸಂಭ್ರಮಿಸಿದ್ದಾರೆ. ಇದಕ್ಕೆ ಕಾರಣ ಚಾರ್ಲಿ ಸಿನಿಮಾ ಎಂದು ಹೇಳಿದ್ದಾರೆ. ಓದಿ : ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ಪೊಲೀಸ್ ಸಿಬ್ಬಂದಿ ಕಚೇರಿಯಲ್ಲೇ ಕೇಕ್ ತಂದು, ನಾಯಿಗೆ ಹೆಸರಿಟ್ಟು ಜೂನ್.9ರಂದು ನಾಮಕರಣ ಶಾಸ್ತ್ರ ಮುಗಿಸಿದ್ದಾರೆ. ಈ ನಾಯಿಮರಿಯು ಲ್ಯಾಬ್ರಡರ್ ತಳಿಯಾಗಿದ್ದು, ಬಂಟ್ವಾಳದಿಂದ ಇಪ್ಪತ್ತು ಸಾವಿರ ರೂಪಾಯಿ ಕೊಟ್ಟು ಖರೀದಿಸಲಾಗಿದೆಯಂತೆ. ಅಂದಹಾಗೆ ಈ ನಾಯಿ ಮರಿ ಹುಟ್ಟಿದ್ದು 16 ಮಾರ್ಚ್ 2022ರಂದು, ಮೂರ್ನಾಲ್ಕು ತಿಂಗಳ ಬಳಿಕೆ ಈ ನಾಯಿಮರಿ ಬೆಂಗಳೂರಿನಲ್ಲಿ ತರಬೇತಿಗಾಗಿ ಬರಲಿದೆಯಂತೆ. ಆನಂತರವಷ್ಟೇ ಅದನ್ನು ಬಾಂಬ್ ನಿಷ್ಕ್ರೀಯ ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತದೆಯಂತೆ.

  • ಶುರುವಾಯ್ತೊಂದು ಹೊಸ ಹಾದಿ – ಪಪ್ಪಿ ತೋರಿಸಿದ ರಕ್ಷಿತ್ ಶೆಟ್ಟಿ

    ಶುರುವಾಯ್ತೊಂದು ಹೊಸ ಹಾದಿ – ಪಪ್ಪಿ ತೋರಿಸಿದ ರಕ್ಷಿತ್ ಶೆಟ್ಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ವಿಶೇಷವಾಗಿ ಇಂದು ಅವರ ಅಭಿಮಾನಿಗಳಿಗಾಗಿ 777 ಚಾರ್ಲಿ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.

    ಸದ್ಯ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮನುಷ್ಯ ಮತ್ತು ಶ್ವಾನದ ನಡುವೆ ಇರುವ ಒಂದು ಎಮೋಷನಲ್ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಈ ಸಿನಿಮಾದ ಮೊದಲ ಟೀಸರ್ ರೀಲಿಸ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದನ್ನೂ ಓದಿ: ರಾಜೀನಾಮೆಗೆ ಸಿದ್ಧ, ಅವಮಾನ ಮಾಡಿ ಕೆಳಗೆ ಇಳಿಸುತ್ತೇವೆ ಎಂದರೆ ನಾನು ಬಗ್ಗಲ್ಲ

    ಅಭಿಮಾನಿಗಳು ಏನನ್ನು ಊಹಿಸುತ್ತಾರೋ ಅದಕ್ಕಿಂತಲೂ ಭಿನ್ನವಾಗಿಯೇ ರಕ್ಷಿತ್ ಶೆಟ್ಟಿ ಅವರು ಪರದೆ ಮೇಲೆ ಕಾಣಿಸಿಕೊಳ್ಳುತ್ತಾರೆ. ಇವರು ನಟಿಸಿರು ಈ ಹಿಂದಿನ ಹಲವು ಸಿನಿಮಾಗಳಿಗೆ ಹೋಲಿಸಿದರೆ ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಅವರು ಬೇರೆಯದ್ದೇ ರೀತಿಯಲ್ಲಿ ಕಮಾಲ್ ಮಾಡಲಿದ್ದಾರೆ ಎನ್ನುವುದ ಟೀಸರ್ ನೀಡಿದವರಿ ಏನ್ನಿಸುತ್ತದೆ. ಶ್ವಾನ ಸಿನಿಮಾದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರುವುದರಿಂದ ಟೀಸರ್‍ನಲ್ಲಿ ಪೂರ್ತಿಯಾಗಿ ಮುದ್ದಾದ ಶ್ವಾನವೇ ಕಾಣಿಸಿಕೊಂಡಿದೆ.

    ಶ್ವಾನವು ಮಾಡುವ ತಂಟೆ, ತರ್ಲೆ, ತುಂಟಾ, ಕಷ್ಟ, ನೋವು, ಮುಗ್ದತೆ ಅದರ ಜೀವನ ಶೈಲಿ ಹೇಳಿರುತ್ತದೆ ಎಂಬುದನ್ನು ನಾವು ಟೀಸರ್‍ನಲ್ಲಿ ನೋಡಬಹುದಾಗಿದೆ. ಟೀಸರ್ ಕೊನೆಯಲ್ಲಿ ರಕ್ಷಿತ್ ಶೆಟ್ಟಿಯವರು ಕಾಣಿಸಿಕೊಳ್ಳುತ್ತಾರೆ ಅವರ ಕೈಯಲ್ಲಿ ನಾವು ಶ್ವಾನ ಇರುವುದನ್ನು ಗಮನಿಸ ಬಹುದಾಗಿದೆ. ಟೀಸರ್ ತುಂಬಾ ಚೆನ್ನಾಗಿ ಮೂಡಿಬಂದಿದೆ ಟೀಸರ್ ನೋಡಿರುವವರಿಗೆ ಒಂದು ಕ್ಯೂರ್ಯಾಸಿಟಿ ಹುಟ್ಟುವುದಂತು ಖಂಡಿತಾ ಹೌದು. ಯಾಕೆ ಎಂದರೆ ಶ್ವಾನವನ್ನು ಇಟ್ಟುಕೊಂಡು ರಕ್ಷಿತ್ ಶೆಟ್ಟಿವರು ಏನು ಹೇಳಲು ಹೊರಟ್ಟಿದ್ದಾರೆ ಎನ್ನುವುನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾತುರರಾಗಿರುವುದು ಖಂಡಿತಾ ಹೌದು.

    ತೆಲುಗಿನಲ್ಲಿ ನ್ಯಾಚುರಲ್ ಸ್ಟಾರ್ ನಾನಿ 777 ಚಾರ್ಲಿ ಟೀಸರ್ ರಿಲೀಸ್ ಮಾಡಿದ್ದಾರೆ. ತಮಿಳಿನಲ್ಲಿ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಮಲೆಯಾಳಂನಲ್ಲಿ ಪೃಥ್ವಿರಾಜ್ ಟೀಸರ್ ರಿಲೀಸ್ ಮಾಡಿದ್ದಾರೆ. ಹಿಂದಿ ಮತ್ತು ಕನ್ನಡ ಟೀಸರ್‍ಗಳು ಪರಮ್‍ವಾ ಸ್ಟುಡಿಯೋ ಮೂಲಕ ರಿಲೀಸ್ ಆಗಿದೆ.

    777 ಚಾರ್ಲಿ ಸಿನಿಮಾವನ್ನು ಕಿರಣ್ ರಾಜ್ ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್ ಬಿ. ಶೆಟ್ಟಿ, ದಾನಿಶ್ ಸೇಟ್ ಮೊದಲಾದವರು ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಟೀಸರ್ ನೋಡಿದ ಹಲವು ಸ್ಟಾರ್‍ಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸುಂದರವಾಗಿದೆ ಹೃದಯಸ್ಪರ್ಶಿ ಪ್ರಯತ್ನ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

    ಸಿಂಪಲ್ ಸ್ಟಾರ್ ಆಗಿದ್ದರೂ ಕೂಡ ಸಿನಿಮಾ ಆಯ್ಕೆಗಳ ವಿಚಾರದಲ್ಲಿ ತಾವು ಸ್ಪೆಷಲ್ ಎಂಬುದನ್ನು ರಕ್ಷಿತ್ ಶೆಟ್ಟಿ ಸಾಬೀತು ಮಾಡುತ್ತಲೇ ಬಂದಿದ್ದಾರೆ. ಇಂದು ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರಿಂದ ಹುಟ್ಟುಹಬ್ಬದ ಶುಭಾಶಯ ಬರುತ್ತಿದೆ.