Tag: chaya singh

  • ಮನೆಕೆಲಸದಾಕೆಯಿಂದ್ಲೇ ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ

    ಮನೆಕೆಲಸದಾಕೆಯಿಂದ್ಲೇ ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ

    ಹುಭಾಷಾ ನಟಿ ಛಾಯಾ ಸಿಂಗ್ (Chaya Singh)  ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಕಳ್ಳತನ ಮಾಡಿದ ಮನೆಕೆಲಸದಾಕೆಯ ಬಂಧನವಾಗಿದೆ. ಇದನ್ನೂ ಓದಿ:11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ; ಮ್ಯೂಸಿಕ್‌ ಡೈರೆಕ್ಟರ್ ಜಿ.ವಿ ಪ್ರಕಾಶ್

    ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಇದೀಗ ನಟಿ ಛಾಯಾ ಸಿಂಗ್ ತಾಯಿ ಚಮನಲತಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯಿಂದ ಕೃತ್ಯ ಜರುಗಿದೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಾರೆ. ಮನೆಯ ಮಾಲೀಕರು ಚಿನ್ನಾಭರಣ ಪರಿಶೀಲಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

    ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತಳಿಂದ 66 ಗ್ರಾಂ ಗೋಲ್ಡ್ ಸೇರಿ, 150 ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ.

    ಅಂದಹಾಗೆ, ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ಸೀರಿಯಲ್‌ನಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದಲ್ಲಿ ಛಾಯಾ ನಟಿಸಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

  • Exclusive:ಶಿವಣ್ಣ ‘ಭೈರತಿ ರಣಗಲ್’ ಸಿನಿಮಾದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ನಟಿ ಸ್ಪಷ್ಟನೆ

    Exclusive:ಶಿವಣ್ಣ ‘ಭೈರತಿ ರಣಗಲ್’ ಸಿನಿಮಾದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ನಟಿ ಸ್ಪಷ್ಟನೆ

    ಸ್ಯಾಂಡಲ್ವುಡ್ ಚಿಟ್ಟೆ ಛಾಯಾ ಸಿಂಗ್ (Chaya Singh) ಅವರು ಬಹುಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಪ್ರಸ್ತುತ ‘ಅಮೃತಧಾರೆ’ (Amruthadaare) ಸೀರಿಯಲ್ ನಾಯಕಿಯಾಗಿ ಕಿರುತೆರೆಯಲ್ಲಿ ಹೊಸ ಪರ್ವ ಆರಂಭಿಸಿದ್ದಾರೆ. ಈ ನಡುವೆ ‘ಭೈರತಿ ರಣಗಲ್’ (Bhairathi Rangal) ಚಿತ್ರದಲ್ಲಿ ಛಾಯಾ ಸಿಂಗ್ ನಟಿಸುತ್ತಾರಾ.? ಶಿವಣ್ಣ ಜೊತೆ ಮತ್ತೆ ಕಾಣಿಸಿಕೊಳ್ತಾರಾ ಎಂಬ ಅಭಿಮಾನಿಗಳ ಪ್ರಶ್ನೆಗೆ ನಟಿ ಛಾಯಾ ಸಿಂಗ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.

    2017ರಲ್ಲಿ ‘ಮಫ್ತಿ’ (Mufti) ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನರ್ತನ್ ನಿರ್ದೇಶನದಲ್ಲಿ ಶಿವಣ್ಣ ಅಬ್ಬರಿಸಿದ್ದರು. ಇದೇ ಸಿನಿಮಾದಲ್ಲಿ ಶಿವಣ್ಣಗೆ ತಂಗಿಯಾಗಿ ಛಾಯಾ ಜೀವತುಂಬಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ಬ್ಯುಸಿಯಿದ್ದ ನಟಿ ಈ ಹಿಂದೆ ರೌಡಿ ಅಳಿಯ ಚಿತ್ರದಲ್ಲಿ ಶಿವಣ್ಣ ಜೊತೆ ನಟಿಸಿದ್ದರು. ಇದಾದ ನಂತರ 10 ವರ್ಷ ಕನ್ನಡ ಸಿನಿಮಾಗಳಿಂದ ದೂರವಿದ್ದರು. ಇದನ್ನೂ ಓದಿ:ಸುದೀಪ್ ನಟನೆಯ 46ನೇ ಸಿನಿಮಾ: ಇನ್ನಷ್ಟು, ಮತ್ತಷ್ಟು ಸುದ್ದಿ

    ಬಳಿಕ ಶಿವಣ್ಣ ಅವರ ಒತ್ತಾಯಕ್ಕೆ ಮಣಿದು 10 ವರ್ಷಗಳ ನಂತರ ಮಫ್ತಿ ಚಿತ್ರದಲ್ಲಿ ಶಿವರಾಜ್‌ಕುಮಾರ್ ಛಾಯಾ ಸಿಂಗ್ ಕೂಡ ಪ್ರಮುಖ ಪಾತ್ರ ಮಾಡ್ತಾರೆ. ಇದೀಗ ‘ಮಫ್ತಿ’ ಪ್ರೀಕ್ವೆಲ್ ಆಗಿರೋ ‘ಭೈರತಿ ರಣಗಲ್’ (Bharathi Rangal) ಸಿನಿಮಾಗೆ ಈಗ ಚಾಲನೆ ಸಿಕ್ಕಿದೆ. ಈ ಭಾಗದಲ್ಲೂ ನಟಿ ಛಾಯಾ ಸಿಂಗ್ ಆಕ್ಟ್ ಮಾಡ್ತಿದ್ದಾರೆ. ಈ ಕುರಿತು ನಟಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಶಿವಣ್ಣ ಜೊತೆ ಮತ್ತೆ ಸ್ಕ್ರೀನ್ ಶೇರ್ ಮಾಡೋದಾಗಿ ಖುಷಿಯಿಂದ ಹೇಳಿಕೊಂಡಿದ್ದಾರೆ.

    ‘ಭೈರತಿ ರಣಗಲ್’ ಚಿತ್ರದಲ್ಲಿ ಶಿವಣ್ಣಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ತಿದ್ದಾರೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದೆ. ಛಾಯಾ ಸಿಂಗ್ ಅವರ ಭಾಗದ ಚಿತ್ರೀಕರಣ ಮುಂದಿನ ತಿಂಗಳು ಜುಲೈನಿಂದ ಶುರುವಾಗಲಿದೆ ಎಂದು ತಿಳಿಸಿದ್ದಾರೆ.‌

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್

  • ‘ಅಮೃತಧಾರೆ’ಯಾಗಿ ಕಿರುತೆರೆಗೆ ಮರಳಿದ ಛಾಯಾ ಸಿಂಗ್

    ‘ಅಮೃತಧಾರೆ’ಯಾಗಿ ಕಿರುತೆರೆಗೆ ಮರಳಿದ ಛಾಯಾ ಸಿಂಗ್

    ಖ ಸಖಿ, ಆಕಾಶಗಂಗೆ, ರೌಡಿ ಅಳಿಯ, ಸೇರಿದಂತೆ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಛಾಯಾ ಸಿಂಗ್ (Chaya Singh) ಇದೀಗ ‘ಅಮೃತಧಾರೆ’ಯಾಗಿ ಟಿವಿ ಪರದೆಗೆ ಮರಳಿದ್ದಾರೆ. ಹಿರಿತೆರೆಯ ಬಳಿಕ ಕಿರುತೆರೆಯಲ್ಲಿ (Tv) ಮಿಂಚಲು ರೆಡಿಯಾಗಿದ್ದಾರೆ.

     

    View this post on Instagram

     

    A post shared by Chaya Singh (@chayasingh_16)

    ಕನ್ನಡತಿ ಛಾಯಾ ಸಿಂಗ್ ತಮಿಳು, ಮಲಯಾಳಂ, ಕನ್ನಡ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಾಕಷ್ಟು ರಿಯಾಲಿಟಿ ಶೋ ಜಡ್ಜ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗಿರುವಾಗ ತಮ್ಮ ಅಭಿಮಾನಿಗಳಿಗೆ ನಟಿ ಛಾಯಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಅಮೃತಧಾರೆ’ (Amruthadaare) ಸೀರಿಯಲ್ ಮೂಲಕ ಹೊಸ ಲವ್ ಸ್ಟೋರಿ ಹೇಳಲು ಹೊರಟಿದ್ದಾರೆ. ಇದನ್ನೂ ಓದಿ:ಕೋರ್ಟ್ ಮೆಟ್ಟಿಲು ಏರಿದ್ದ ಅಮಿತಾಭ್ ಮೊಮ್ಮಗಳಿಗೆ ಗೆಲುವು

     

    View this post on Instagram

     

    A post shared by Chaya Singh (@chayasingh_16)

    ಹುಡುಗ-ಹುಡುಗಿ ಹೊಂದ್ಕೊಂಡಿದ್ರೆ ಅದೊಂದು ಚೆಂದದ ಕಥೆ, ಅವರಿಬ್ರೂ ಕಿತ್ತಾಡ್ಕೊಂಡಿದ್ರೆ ಅದು ಬೇರೇನೇ ಕಥೆ ಎನ್ನುವುದು ಅಮೃತಧಾರೆ ಕಥೆಯಾಗಿದೆ. ರಾಜೇಶ್ ನಟರಂಗ (Rajesh Nataranga) ಅವರು ಅಮೃತಧಾರೆ ಸೀರಿಯಲ್‌ನ ನಾಯಕನಾಗಿದ್ದು, ಛಾಯಾಗೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ.

    ಈಗಾಗಲೇ ‘ಅಮೃತಾಧಾರೆ ಪ್ರೋಮೋ ರಿಲೀಸ್ ಆಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಿದೆ. ಪ್ರೋಮೋ ಝಲಕ್ ನೋಡಿ ಫಿದಾ ಆಗಿರುವ ಪ್ರೇಕ್ಷಕರು ಅಮೃತಾಧಾರೆ ಧಾರಾವಾಹಿಯ ರಾಜೇಶ್- ಛಾಯಾ ಜೋಡಿ ನೋಡಲು ಎದುರು ನೋಡ್ತಿದ್ದಾರೆ.