Tag: cheetha

  • ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ವಾಯು ವಿಹಾರ ನಿಷೇಧ

    ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ವಾಯು ವಿಹಾರ ನಿಷೇಧ

    ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯೇಕ್ಷವಾಗಿದ್ದು ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರ ನಿಷೇಧ ಹೇರಲಾಗಿದೆ.

    ಬುಧವಾರ ರಾತ್ರಿ ವಾಯುವಿಹಾರಕ್ಕೆ ಆಗಮಿಸಿದ ಸ್ಥಳೀಯರಿಗೆ ಚಿರತೆ ಕಂಡಿದ್ದು, ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಎಸ್ ಎಂ ತೆಗ್ಗಿನಮನಿ ನೇತೃತ್ವದಲ್ಲಿ ಸಿಬ್ಬಂದಿ ಬೆಟ್ಟಕ್ಕೆ ಭೇಟಿ ನೀಡಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!

    ಚಿರತೆ ಪ್ರತ್ಯಕ್ಷವಾದ ಪರಿಣಾಮ ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಬರ್ಂಧಿಸಲಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಬೋನ್ ವ್ಯವಸ್ಥೆ ಮಾಡಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಇದೀಗ ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡ ಪರಿಣಾಮ ಬೆಟ್ಟದ ಸುತ್ತ ಮುತ್ತಲಿನ ಜನರು ಭಯಗೊಂಡಿದ್ದಾರೆ. ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ- ನೂರಾರು ಟನ್ ಕಬ್ಬು ಬೆಂಕಿಗಾಹುತಿ

    ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಆಹಾರ ಹುಡುಕಿ ಹೆಚ್ಚು ನಾಡಿನೊಳಗೆ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಪ್ರಾಣಿಗಳನ್ನು ಅರಣ್ಯ ಇಲಾಖೆಯವರು ರಕ್ಷಿಸಿ ಕಾಡಿಗೆ ಬಿಟ್ಟರೂ ಮತ್ತೆ ಮತ್ತೆ ನಾಡಿನೊಳಗೆ ಕಾಣಿಸಿಕೊಳ್ಳುತ್ತಿವೆ.

  • ಚಿರತೆಯೊಂದು ಸೈಲೆಂಟಾಗಿ ಸಿಟಿಗೆ ಎಂಟ್ರಿಕೊಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

    ಚಿರತೆಯೊಂದು ಸೈಲೆಂಟಾಗಿ ಸಿಟಿಗೆ ಎಂಟ್ರಿಕೊಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

    ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಚಿರತೆಯೊಂದು ಸೈಲೆಂಟಾಗಿ ರಾತ್ರಿ ಎಂಟ್ರಿ ಕೊಟ್ಟಿದೆ.

    ಗಂಗಾವತಿಯ ಸಾಯಿನಗರದ ಸಿಮೆಂಟ್ ಬ್ರಿಕ್ಸ್ ಘಟಕದ ಆವರಣದಲ್ಲಿ ತಡರಾತ್ರಿಗೂ ಮುನ್ನವೇ ಬಂದ ಚಿರತೆ ಆವರಣದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿದೆ. ಈ ಎಲ್ಲ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ಮುಂಜಾನೆ ಎದ್ದು ಬಂದ ಸಿಮೆಂಟ್ ಬ್ರಿಕ್ಸ್ ಘಟಕದ ಮಾಲೀಕ ತಾನು ಸಾಕಿದ ನಾಯಿಯನ್ನು ಹುಡುಕಿದ್ದಾರೆ. ಅದು ಕಾಣದೆ ಇದ್ದಾಗ ಕಚೇರಿಯಲ್ಲಿದ್ದ ಸಿಸಿಟಿವಿಯನ್ನು ಚೆಕ್ ಮಾಡಿದಾಗ ಚಿರತೆ ಬಂದು ನಾಯಿಯನ್ನು ಎಳೆದುಕೊಂಡು ಹೋಗಿರುವ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

    ಈ ಕುರಿತು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಪ್ರತಿ ವರ್ಷ ಮಾರ್ಚ್, ಎಪ್ರಿಲ್, ಮೇ, ಜೂನ್ ವೇಳೆ ಆಹಾರ ಅರಿಸಿ ಕಾಡು ಪ್ರಾಣಿಗಳು ನಗರಕ್ಕೆ ಲಗ್ಗೆ ಇಡುತ್ತಿವೆ. ಕಳೆದ ಬಾರಿ ಕೂಡ ಚಿರತೆ, ಕರಡಿಗಳು ಬಂದು ಹೋಗಿದ್ದವು. ಈ ಕುರಿತು ಅರಣ್ಯ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲಾ. ಹೇಳಿದರೆ ಅವು ಬರ್ತಾವೆ ಹೋಗ್ತಾವೆ ಎಂಬ ಹಾರಿಕೆ ಉತ್ತರ ನಿಡ್ತಾರೆ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

  • ಬಳ್ಳಾರಿಯಲ್ಲಿ ಬೋನಿಗೆ ಬಿತ್ತು ಮತ್ತೊಂದು ನರಭಕ್ಷಕ ಚಿರತೆ!

    ಬಳ್ಳಾರಿಯಲ್ಲಿ ಬೋನಿಗೆ ಬಿತ್ತು ಮತ್ತೊಂದು ನರಭಕ್ಷಕ ಚಿರತೆ!

    ಬಳ್ಳಾರಿ: ಮಕ್ಕಳನ್ನು ಹೊತ್ತೊಯ್ದು ಬಲಿ ಪಡೆದಿದ್ದ ನರಭಕ್ಷಕ ಚಿರತೆಗಳನ್ನು ಸೆರೆಹಿಡಿಯಲು ಜಿಲ್ಲೆಯ ಕಂಪ್ಲಿ ಭಾಗದ ದೇವಲಾಪುರ ಹೊರವಲಯದಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿನಲ್ಲಿ ಮತ್ತೊಂದು ಚಿರತೆ ಸೆರೆಯಾಗಿದೆ. ನಿನ್ನೆಯಷ್ಟೇ ಒಂದು ಚಿರತೆಯನ್ನು ಸೆರೆಹಿಡಿಯಲಾಗಿತ್ತು.

    ಕಂಪ್ಲಿ ಭಾಗದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇದೂವರೆಗೆ ಇಬ್ಬರು ಮಕ್ಕಳನ್ನು ಚಿರತೆ ಬಲಿ ಪಡೆದುಕೊಂಡಿದೆ. ಇದರಿಂದ ಈ ಭಾಗದ ಜನರು ಮನೆಯಿಂದ ಹೊರಬರಲು ಹೆದರುವಂತ ಪರಿಸ್ಥಿತಿ ಎದುರಾಗಿತ್ತು. ಕಂಪ್ಲಿ ಭಾಗದ ಸೋಮಲಾಪುರ ಹಾಗೂ ದೇವಾಲಾಪುರವು ಕಾಡಂಚಿನ ಗ್ರಾಮವಾಗಿರುವುದರಿಂದ ಇಲ್ಲಿ ಚಿರತೆಗಳು ಗ್ರಾಮಕ್ಕೆ ಆಹಾರ ಅರಸಿಕೊಂಡು ಬರುತ್ತದೆ. ಹೀಗೆ ಬಂದಾಗ ಜನರ ಮೇಲೆ ದಾಳಿಯೂ ಕೂಡ ನಡೆಸುತ್ತದೆ. ಇದನ್ನೂ ಓದಿ:ಕೊನೆಗೂ ಬೋನಿಗೆ ಬಿದ್ದ ಎರಡನೇ ನರಭಕ್ಷಕ ಚಿರತೆ

    ಡಿ.25ರಂದು ಜಯಸುಧಾ(13) ಬಾಲಕಿಯನ್ನು ಚಿರತೆಯೊಂದು ಹೊತ್ತೊಯ್ದು ಬಲಿ ಪಡೆದಿತ್ತು. ಶಾಲೆಗೆ ಕಿಸ್ಮಸ್ ರಜೆಯಿದ್ದ ಕಾರಣ ಜಮೀನಿಗೆ ಪೋಷಕರ ಜೊತೆ ಹೋಗುತ್ತಿದ್ದ ಜಯಸುಧಾ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿ ಆಕೆಯನ್ನು ಹೊತ್ತೊಯ್ದಿತ್ತು. ಚಿರತೆ ದಾಳಿ ನಡೆಸುತ್ತಿದ್ದಂತೆಯೇ ಪೋಷಕರ ಚೀರಾಟ ಕೇಳಿ ಬಾಲಕಿಯನ್ನು ತುಸು ದೂರದಲ್ಲೇ ಬಿಟ್ಟು ಹೋಗಿತ್ತು. ತಕ್ಷಣ ಕಂಪ್ಲಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಜಯಸುಧಾ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಳು.

    ಡಿ.12ರಂದು ಬಾಲಕ ವೆಂಕಟಸಾಯಿಯನ್ನು ಚಿರತೆ ಬಲಿ ಪಡೆದಿತ್ತು. ಸಂಜೆ ಆಟವಾಡುವಾಗ ಮನೆಯವರು ನೋಡ ನೋಡುತ್ತಿದ್ದಂತೆಯೇ ಚಿರತೆ ಬಾಲಕನನ್ನು ಎಳೆದೊಯ್ದಿತ್ತು. ಬಳಿಕ ಆತನ ಪೋಷಕರು ಹಾಗೂ ಗ್ರಾಮಸ್ಥರು ಬಾಲಕನನ್ನ ಹುಡುಕಾಡಿದಾಗ ಗ್ರಾಮದ ಹೊರವಲಯದಲ್ಲಿ ಆತ ಶವವಾಗಿ ಪತ್ತೆಯಾಗಿದ್ದನು. ಆದರೆ ಅರಣ್ಯ ಇಲಾಖೆಯವರು ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ ಅಂತ ತಿಳಿದಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

    ಈ ಸರಣಿ ಸಾವುಗಳಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗಳನ್ನು ಸೆರೆಹಿಡಿಯಲು ಸೋಮಲಾಪುರ ಹಾಗೂ ದೇವಾಲಾಪುರವು ಗ್ರಾಮದ ಸುತ್ತಮುತ್ತ ಒಟ್ಟು 11 ಕಡೆ ಬೋನು ಅಳವಡಿಸಿದ್ದರು. ಈ ಹಿಂದೆ ಸೋಮಲಾಪುರ ಗ್ರಾಮದಲ್ಲಿ ಎರಡು ಚಿರತೆಗಳು ಹಾಗೂ ಇಂದು ದೇವಾಲಪುರದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಇದುವರೆಗೂ ಒಟ್ಟು ಮೂರು ಚಿರತೆಗಳನ್ನು ಅರಣ್ಯ ಇಲಾಖೆ ಅವರು ಯಶಸ್ವಿಯಾಗಿ ಸೆರೆಹಿಡಿದು ಜನರ ಆತಂಕವನ್ನು ಕೊಂಚ ಮಟ್ಟಿಗೆ ದೂರ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 13 ವರ್ಷದ ಬಾಲಕಿಯನ್ನು ಬಲಿ ಪಡೆದ ಚಿರತೆ!

    13 ವರ್ಷದ ಬಾಲಕಿಯನ್ನು ಬಲಿ ಪಡೆದ ಚಿರತೆ!

    – ಒಂದೇ ತಿಂಗಳಿನಲ್ಲಿ ಚಿರತೆ ದಾಳಿ ಇಬ್ಬರು ಮಕ್ಕಳು ಬಲಿ

    ಬಳ್ಳಾರಿ: ಗಣಿನಾಡಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಪೋಷಕರ ಜೊತೆ ಜಮೀನಿಗೆ ತೆರಳಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ.

    ಜಯಸುಧಾ(13) ಬಾಲಕಿ ಮೃತ ದುರ್ದೈವಿ. ಶಾಲೆಗೆ ಕಿಸ್ಮಸ್ ಹಬ್ಬದ ರಜೆಯಿದ್ದ ಕಾರಣ ಜಮೀನಿಗೆ ಪೋಷಕರ ಜೊತೆ ಹೋಗುತ್ತಿದ್ದ ಜಯಸುಧಾ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿ ಆಕೆಯನ್ನು ಹೊತ್ತೊಯ್ದಿದೆ. ಚಿರತೆ ದಾಳಿ ನಡೆಯುತ್ತಿದ್ದಂತೆ ಪೋಷಕರ ಚೀರಾಟ ಕೇಳಿ ಬಾಲಕಿಯನ್ನು ತುಸು ದೂರದಲ್ಲೇ ಬಿಟ್ಟು ಹೋಗಿದೆ. ತಕ್ಷಣ ಕಂಪ್ಲಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಜಯಸುಧಾ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.

    ಕಳೆದ 15 ದಿನಗಳ ಹಿಂದೆ ದೇವಲಾಪುರ ಗ್ರಾಮದ ಪಕ್ಕದಲ್ಲೇ ಇರುವ ಸೋಮಲಾಪುರ ಗ್ರಾಮದಲ್ಲೂ ಚಿರತೆ ದಾಳಿ ಮಾಡಿ ಮೂರು ವರ್ಷದ ಬಾಲಕನನ್ನು ಬಲಿ ಪಡೆದಿತ್ತು. ಸೋಮಲಾಪುರದ ದಾಳಿ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯೊಂದನ್ನು ಸೆರೆ ಹಿಡಿದಿದ್ದರು. ಆದರೂ ಇದೀಗ ಮತ್ತೆ ಚಿರತೆ ದಾಳಿ ಮುಂದುವರಿದ ಪರಿಣಾಮ ಸುತ್ತಮುತ್ತಲಿನ ಗ್ರಾಮಸ್ಥರು ಭಯಗೊಂಡಿದ್ದಾರೆ.

    ಘಟನೆಯ ಬಗ್ಗೆ ಮಾತನಾಡಿರುವ ಡಿಎಫ್‍ಓ ರಮೇಶ್ ಕುಮಾರ್, ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. ರೈತರು ಗ್ರಾಮಸ್ಥರು ಒಬ್ಬೊಬ್ಬರೆ ಜಮೀನಿಗೆ ತೆರಳದಂತೆ ಸೂಚನೆ ನೀಡಿದ್ದೇವೆ. ಅಲ್ಲದೇ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದೆಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಗೆ ನುಗ್ಗಿ 3 ವರ್ಷದ ಬಾಲಕನನ್ನು ಕಚ್ಚಿ ಎಳೆದುಕೊಂಡು ಹೋಯ್ತು ಚಿರತೆ

    ಮನೆಗೆ ನುಗ್ಗಿ 3 ವರ್ಷದ ಬಾಲಕನನ್ನು ಕಚ್ಚಿ ಎಳೆದುಕೊಂಡು ಹೋಯ್ತು ಚಿರತೆ

    ಕಾಶ್ಮೀರ: ಚಿರತೆಯೊಂದು ಮನೆಗೆ ನುಗ್ಗಿ 3 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಸಾಯಿಸಿರುವ ದಾರುಣ ಘಟನೆ ಜಮ್ಮು- ಕಾಶ್ಮೀರದಲ್ಲಿ ನಡೆದಿದೆ.

    ವಾಸಿಮ್ ಅಕ್ರಮ್ ಎಂಬ ಮೂರು ವರ್ಷದ ಬಾಲಕನನ್ನು ಚಿರತೆ ಸಾಯಿಸಿದೆ. ಬಾಲಕ ತನ್ನ ಮನೆಯಲ್ಲಿ ತಾಯಿಯ ಜೊತೆ ಅಡುಗೆ ಮನೆಯಲ್ಲಿದ್ದಾಗ ಚಿರತೆಯೊಂದು ಏಕಾಏಕಿ ನುಗ್ಗಿ ಮಗುವನ್ನು ಬಾಯಿಯಲ್ಲಿ ಕಚ್ಚಿ ಎಳೆದುಕೊಂಡು ಹೋಗಿದೆ.

    ಘಟನೆ ಕುರಿತು ತಕ್ಷಣ ಬಾಲಕನ ತಾಯಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಮಗುವನ್ನು ಹುಡುಕಲು ಅರಣ್ಯಕ್ಕೆ ಹೋದ ಸಿಬ್ಬಂದಿಗೆ ತಲೆ ಇಲ್ಲದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬಾಲಕನ ಮೃತದೇಹವನ್ನು ಪೋಷಕರಿಗೆ ಒಪ್ಪಿಸಿದ್ದು, ಚಿರತೆಯನ್ನು ಸೆರೆಹಿಡಿಯುವ ಪ್ರಯತ್ನ ಸಾಗಿದೆ.

    ಬುಧವಾರ ಬೆಳಗ್ಗೆ ಜಮ್ಮುವಿನ ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಕೊಂಡಿತ್ತು. ಆದರೆ ಸೆರೆಹಿಡಿಯಲು ಸಾಧ್ಯವಾಗಲಿಲ್ಲ. ಅರಣ್ಯದ ಸಮೀಪ ವಾಸಿಸುವ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದೇವೆ ಎಂದು ಜಮ್ಮುವಿನ ಪ್ರದೇಶಿಕ ವನ್ಯಜೀವಿ ಅಧಿಕಾರಿ ತಾಹಿರ್ ಅಹ್ಮದ್ ಶಾವ್ಲ್ ತಿಳಿಸಿದ್ದಾರೆ.

    ಅರಣ್ಯ ಪ್ರದೇಶದಲ್ಲಿ ಮನುಷ್ಯರ ಓಡಾಟ ಇತ್ತೀಚಿಗೆ ಹೆಚ್ಚಾಗುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಕಾಡನ್ನು ನಾಶ ಮಾಡುವುದರಿಂದ ವನ್ಯಜೀವಿಗಳು ನಾಡಿಗೆ ಬರುತ್ತಿದೆ. ಸುಮಾರು 12 ಸಾವಿರದಿಂದ 14 ಸಾವಿರ ಚಿರತೆಗಳು ಭಾರತದಲ್ಲಿ ಇದೆ. ಆದರೆ 2017ರಲ್ಲಿ 431 ಚಿರತೆಗಳನ್ನು ಭೇಟೆಯಾಡಲಾಗಿದೆ. ನಗರ ಪ್ರದೇಶವು ಬೆಳೆಯುತ್ತಿರುವುದರಿಂದ ಕಾಡು ಪ್ರಾಣಿಗಳು ಜನ ವಾಸಿಸುತ್ತಿರುವ ಜಾಗಗಳಿಗೆ ಬರುತ್ತಿದೆ ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 150ಕ್ಕೂ ಅಧಿಕ ಕೋಳಿಗಳನ್ನು ತಿಂದು ಸಿಕ್ಕಿಬಿದ್ದ ಚಿರತೆ!

    150ಕ್ಕೂ ಅಧಿಕ ಕೋಳಿಗಳನ್ನು ತಿಂದು ಸಿಕ್ಕಿಬಿದ್ದ ಚಿರತೆ!

    ತುಮಕೂರು: ಕೋಳಿಫಾರಂನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಕೂಡಿಹಾಕಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ನಡೆದಿದೆ.

    ತುಂಬಾಡಿ ಗ್ರಾಮದ ಮಾರುತಿ ಎನ್ನುವರಿಗೆ ಸೇರಿದ ಕೋಳಿಫಾರಂನ ಮೇಲೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ 150ಕ್ಕೂ ಹೆಚ್ಚು ಕೋಳಿಗಳನ್ನು ಚಿರತೆ ತಿಂದು ಹಾಕಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರು ಚಿರತೆಯನ್ನು ಕೋಳಿಫಾರಂನಲ್ಲೇ ಕೂಡಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

    ಆಹಾರ ಅರಸಿ ನಾಡಿಗೆ ಬಂದ ಚಿರತೆಗೆ ಮೃಷ್ಟಾನ್ನಾ ಭೋಜನವೇ ಸಿಕ್ಕಿದ್ದು, ತಪ್ಪಿಸಿಕೊಳ್ಳುವ ಬರದಲ್ಲಿ ಕೋಳಿಫಾರಂನಲ್ಲೇ ಬಂಧಿಯಾಗಿದೆ. ಚಿರತೆ ಹೊರಬರಲು ಹರಸಾಹಸ ಪಡುತ್ತಿದ್ದು, ಗ್ರಾಮಸ್ಥರು ಕೋಳಿಫಾರಂ ಭದ್ರ ಪಡಿಸಿ ಸುತ್ತಾ ಕಾವಲು ಕಾಯುತ್ತಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸರು ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿದ್ದು, ಚಿರತೆಗೆ ಅರವಳಿಕೆ ಮದ್ದು ನೀಡಿ ಹಿಡಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಿಂದ ಅರವಳಿಕೆ ತಜ್ಞರು ಸ್ಥಳಕ್ಕೆ ಬರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

  • ಹಸಿವು ತಾಳಲಾಗದೇ ಮನೆಯಂಗಳದಲ್ಲಿ ಎದ್ದು ಬಿದ್ದು ಒದ್ದಾಡಿ ಚಿರತೆ ಸಾವು: ವಿಡಿಯೋ ನೋಡಿ

    ಹಸಿವು ತಾಳಲಾಗದೇ ಮನೆಯಂಗಳದಲ್ಲಿ ಎದ್ದು ಬಿದ್ದು ಒದ್ದಾಡಿ ಚಿರತೆ ಸಾವು: ವಿಡಿಯೋ ನೋಡಿ

    ಉಡುಪಿ: ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪ್ಪಾಡಿಯಲ್ಲಿ ನಡೆದಿದೆ. ಈ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.

    ತಾಲೂಕಿನ ಎರ್ಲಪ್ಪಾಡಿ ಗ್ರಾಮದ ಕಾಂತರಗೋಡಿಯ ವಿಲಿಎಂ ಎಂಬವರ ಮನೆಯ ಅಂಗಳಕ್ಕೆ ದೊಡ್ಡ ಗಾತ್ರದ ಹೆಣ್ಣು ಚಿರತೆಯೊಂದು ಏಕಾಏಕಿ ಬಂದಿದೆ. ಆದರೆ ಚಿರತೆಗೆ ಇರಬೇಕಾದ ಘರ್ಜನೆ ಮಾತ್ರ ಮನೆಗೆ ಬಂದ ಚಿರತೆಗೆ ಇರಲಿಲ್ಲ. ಬದಲಾಗಿ ಚಿರತೆ ತಲೆ ಸುತ್ತು ಬಂದವರಂತೆ ಬೀಳುತ್ತಿತ್ತು. ಮತ್ತೆ ಏಳಲು ಪ್ರಯತ್ನ ಮಾಡಿ ಮತ್ತೆ ಮತ್ತೆ ಬೀಳುತ್ತಿತ್ತು. ಸುಮಾರು 10 ರಿಂದ 15 ನಿಮಿಷಗಳ ಕಾಲ ಎಲ್ಲರ ಕಣ್ಣಮುಂದೆಯೇ ಒದ್ದಾಡಿ, ಕೊನೆಗೆ ಸತ್ತುಹೋಗಿದೆ.

    ಕೂಡಲೇ ವಿಲಿಯಂ ಅವರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುಷ್ಟರಲ್ಲಿ ಚಿರತೆ ಸಾವನ್ನಪ್ಪಿದೆ. ಅರಣ್ಯ ಇಲಾಖೆ ಚಿರತೆಯ ಮೃತದೇಹವನ್ನು ಪರೀಕ್ಷೆ ಮಾಡಿದ್ದು, ಚಿರತೆ ಹೊಟ್ಟೆಯಲ್ಲಿ ಹುಲ್ಲು ಕಂಡುಬಂದಿದೆ. ತೀವ್ರ ಹಸಿವಿನಿಂದ ಚಿರತೆ ಬಳಲುತ್ತಿದ್ದು, ಹಸಿವು ತಾಳಲಾರದೆ ಹುಲ್ಲನ್ನು ತಿಂದಿರಬಹುದು. ಜೊತೆಗೆ ಹಸಿವು ಜೋರಾಗಿ ಸತ್ತಿರಬಹುದು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

    ಇನ್ನೂ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತೊಂದು ಗಂಡು ಚಿರತೆಯ ಮೃತದೇಹ ಪತ್ತೆಯಾಗಿದೆ. ಎರಡು ಚಿರತೆಗಳು ಒಟ್ಟೊಟ್ಟಿಗೆ ಸತ್ತಿರುವುದರಿಂದ ವಿಷಾಹಾರವನ್ನು ತಿಂದಿರಬಹುದು ಎಂಬ ಶಂಕೆಯಿದೆ. ಅಂತಿಮ ಮರಣೋತ್ತರ ವರದಿ ಬಂದ ಮೇಲೆ ಚಿರತೆಗಳ ಸಾವಿಗೆ ನಿಖರ ಕಾರಣ ತಿಳಿಯಬಹುದು ಎಂದು ಅರಣ್ಯಾಧಿಕಾರಿಗಳ ಹೇಳಿದ್ದಾರೆ.

    ಬೆಳೆ ನಾಶ ಮಾಡಲು ಬರುವ ಕಾಡು ಹಂದಿಗಳಿಗೆ ಹಳ್ಳಿಕಡೆ ವಿಷಾಹಾರ ಇಡಲಾಗುತ್ತದೆ. ಈ ಎರಡು ಚಿರತೆಗಳು ವಿಷಾಹಾರ ಸೇವನೆ ಮಾಡಿರಬಹುದು ಎಂಬ ಸಂಶಯ ಇದೆ. ವಿಷಾಹಾರ ತಿಂದು ಎರ್ಲಪ್ಪಾಡಿವರೆಗೆ ಚಿರತೆ ಬಂದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಎರಡು ಜೊತೆಗೆ ಓಡಾಡುತ್ತಿದ್ದ ಚಿರತೆಗಳು ಒಂದೇ ಕಡೆ ವಿಷ ತಿಂದು ಸತ್ತಿರಬಹುದು ಎಂದು ಹೇಳಲಾಗುತ್ತಿದೆ.

    https://www.youtube.com/watch?v=kNIncCNQCuU

  • ಹೊಟ್ಟೆ, ಕತ್ತಿನ ಭಾಗಕ್ಕೆ ತಂತಿಮುಳ್ಳು ಸಿಲುಕಿ ಚಿರತೆ ಒದ್ದಾಟ- ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ

    ಹೊಟ್ಟೆ, ಕತ್ತಿನ ಭಾಗಕ್ಕೆ ತಂತಿಮುಳ್ಳು ಸಿಲುಕಿ ಚಿರತೆ ಒದ್ದಾಟ- ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ

    ತುಮಕೂರು: ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಒದ್ದಾಡಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ.

    ಆಹಾರ ಅರಸಿ ಚಿರತೆಯೊಂದು ರಂಗಸ್ವಾಮಿ ಎಂಬವರ ತೋಟಕ್ಕೆ ಬಂದಿದೆ. ಬಳಿಕ ತಂತಿ ಬೇಲಿ ದಾಟಿ ಮುಂದಕ್ಕೆ ಬರುತ್ತಿದ್ದಾಗ ಸಿಲುಕಿಕೊಂಡಿದೆ. ಚಿರತೆಯ ಹೊಟ್ಟೆ ಮತ್ತು ಕತ್ತಿನ ಭಾಗಕ್ಕೆ ತಂತಿಯ ಮುಳ್ಳುಗಳು ಹೊಕ್ಕಿದ್ದು ರಕ್ತಸ್ರಾವ ಆಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಬೆಳಗ್ಗಿನ ಜಾವ ಚಿರತೆ ಪ್ರತ್ಯಕ್ಷವಾಗಿದ್ದು, ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟರೂ ಇನ್ನೂ ಸ್ಥಳಕ್ಕೆ ಬಂದಿಲ್ಲ. ಇದರಿಂದ ಸ್ಥಳೀಯರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಸಿಲುಕಿ ಹಾಕಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಜನರ ದಂಡೇ ತೋಟದ ಬಳಿ ಜಮಾಯಿಸಿದ್ದು, ಕೆಲವರು ತಮ್ಮ ಮೊಬೈಲ್ ನಲ್ಲಿ ಚಿರತೆ ಫೋಟೋ ಕ್ಲಿಕ್ಕಿಸಿದ್ದಾರೆ.