Tag: Chelavara Falls

  • ಕೊಡಗಿನ ಚೇಲವಾರ ಫಾಲ್ಸ್‌ನಲ್ಲಿ ಮುಳುಗಿ ಕೇರಳದ ಯುವಕ ಸಾವು

    ಕೊಡಗಿನ ಚೇಲವಾರ ಫಾಲ್ಸ್‌ನಲ್ಲಿ ಮುಳುಗಿ ಕೇರಳದ ಯುವಕ ಸಾವು

    ಮಡಿಕೇರಿ: ಕೊಡಗು (Kodagu) ಜಿಲ್ಲೆ ನಾಪೋಕ್ಲುವಿನ (Napoklu) ಚೆಯ್ಯಂಡಾಣೆ ಗ್ರಾಮದ ಚೇಲವಾರ ಫಾಲ್ಸ್‌ನಲ್ಲಿ (Chelavara Falls) ಮುಳುಗಿ ಯುವಕನೊಬ್ಬ ನೀರುಪಾಲಾದ ಘಟನೆ ನಡೆದಿದೆ.

    ಕೊಡಗಿಗೆ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ಯುವಕ (Youth) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಕೇರಳದ ಇರಿಟ್ಟಿಯ ರಶೀದ್ (25) ಮೃತ ಯುವಕ ಎಂದು ಗುರುತಿಸಲಾಗಿದೆ. ಚೆಯ್ಯಂಡಾಣೆ ಸಮೀಪದ ಚೇಲವಾರ ಫಾಲ್ಸ್ನಲ್ಲಿ ಈ ಘಟನೆ ನಡೆದಿದೆ. ಚೇಲಾವರ ಫಾಲ್ಸ್‌ಗೆ ಬಂದಿದ್ದ ರಶೀದ್ ಈಜಲು ನೀರಿಗೆ ಇಳಿದಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವೆಬ್ ಸೀರಿಸ್‍ನಿಂದ ಪ್ರೇರಣೆ ಪಡೆದು ನಕಲಿ ನೋಟ್ ದಂಧೆ – ಇಬ್ಬರೂ ಆರೋಪಿಗಳು ಅರೆಸ್ಟ್

    ಫಾಲ್ಸ್ ನೋಡಲು ಮೂವರು ಸ್ನೇಹಿತರೊಂದಿಗೆ ಬಂದಿದ್ದ ರಶೀದ್ ಆಳ ತಿಳಿಯದೇ ನೀರಿಗೆ ಇಳಿದಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದು, ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: ಪಾಕ್ ISIಗೆ ಸೇನಾ ಮಾಹಿತಿ ರವಾನೆ – ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿ ಅರೆಸ್ಟ್

    ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿ ಶವವನ್ನು ಮೇಲಕ್ಕೆ ತೆಗೆದಿದ್ದಾರೆ. ಭದ್ರತೆ ಇಲ್ಲದೆ ಇರುವುದು ಇಂತಹ ಅವಘಡಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ನಾಪೊಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

    ಅಪಾಯ ಇದೆ ಎಂದು ಹೇಳುತ್ತಿದ್ದರೂ ಪ್ರವಾಸಿಗರು ನೀರಿಗೆ ಇಳಿಯುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

  • ವಿಡಿಯೋ: ಮುಂಗಾರಿನ ಅಭಿಷೇಕಕ್ಕೆ ಮೈದುಂಬಿ ಹರೀತಿದೆ ಚೆಲಾವರ ಫಾಲ್ಸ್

    ವಿಡಿಯೋ: ಮುಂಗಾರಿನ ಅಭಿಷೇಕಕ್ಕೆ ಮೈದುಂಬಿ ಹರೀತಿದೆ ಚೆಲಾವರ ಫಾಲ್ಸ್

    ಮಡಿಕೇರಿ: ಕೊಡಗು.. ಹೇಳಿಕೇಳಿ ರಾಜ್ಯದ ಪ್ರಕೃತಿ ಪ್ರವಾಸೋದ್ಯಮದ ಹಾಟ್ ಸ್ಪಾಟ್ ಆಗಿದೆ. ಕಣ್ಣು ಹಾಯಿಸಿದಲ್ಲೆಲ್ಲಾ ಕಾಣೋ ಹಚ್ಚ ಹಸಿರು, ಮುಗಿಲಿಗೆ ಮುತ್ತಿಡುವಂತೆ ಕಾಣೋ ಗಿರಿಶಿಖರಗಳು, ಹೋದಲ್ಲೆಲ್ಲಾ ಸದ್ದುಮಾಡೋ ಜಲರಾಶಿಗಳು ಕಣ್ಮನಸೂರೆಗೊಳ್ಳುತ್ತವೆ.

    ಮುಂಗಾರು ಮಳೆ ಆರಂಭವಾದ್ರೆ ಸಾಕು, ಮುಗಿಲ ಮರೆಯಿಂದ ಧುಮ್ಮಿಕ್ಕೋ ಜಲಪಾತಗಳು ನಿಸರ್ಗದ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇಂತಹ ಸುಂದರ ಜಲಪಾತಗಳ ಸಾಲಿಗೆ ಸೇರುವ ಚೆಲವಾರ ಫಾಲ್ಸ್ ನ ವಯ್ಯಾರ ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿದ್ದು, ಮುಂಗಾರಿನ ಅಭಿಷೇಕ್ಕೆ ಮೈದುಂಬಿ ಹರಿಯುತ್ತಾ ಕಣ್ಣು ಕುಕ್ಕುತ್ತಿದೆ.

    ಕೊಡಗಿನ ಸುಂದರ ಜಲಪಾತಗಳಲ್ಲೊಂದಾದ ಚೆಲವಾರ ಫಾಲ್ಸ್ ಮಳೆಗಾಲದಲ್ಲಿ ಬೋರ್ಗರೆಯುತ್ತಾ ಮುಗಿಲೆತ್ತರದಿಂದ ಧುಮ್ಮಿಕ್ಕೋ ಜಲಪಾತದ ಸೌಂದರ್ಯ ಸವಿಯೋದು ಕಣ್ಣಿಗೆ ಹಬ್ಬವಾಗಿದೆ. ಇನ್ನು ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ತನ್ನ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಂಡು ನಲಿಯುವ ಈ ಜಲರಾಣಿ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ವಿಸ್ತಾರವಾದ ಗುಡ್ಡದ ಮೇಲಿಂದ ಹಾಲು ಚೆಲ್ಲಿದಂತೆ ಧರೆಗಿಳಿಯೋ ಜಲರಾಶಿ ನೋಡೋದೆ ಅಂದ. ರಾಜ್ಯದ ವಿವಿಧೆಡೆಗಳಿಂದ ಇಲ್ಲಿಗೆ ಬರುವ ಪ್ರವಾಸಿಗರು ಜಲಪಾತದ ಸೊಬಗು ನೋಡಿ ಮೈ ಮರೆಯುತ್ತಾರೆ. ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಂಡು ಎಂಜಾಯ್ ಮಾಡುತ್ತಾರೆ.

    ವಿರಾಜಪೇಟೆ ತಾಲೂಕಿನ ಕಕ್ಕಬ್ಬೆ ಸಮೀಪದ ಬೆಟ್ಟಗುಡ್ಡಗಳ ನಡುವಿನಿಂದ ಧುಮ್ಮಿಕ್ಕುವ ಈ ಜಲಪಾತ ಕೊಡಗಿನ ಪ್ರಮುಖ ಜಲಪಾತಗಳಲ್ಲೊಂದು. ಹಚ್ಚಹಸಿರ ನಡುವಿನಿಂದ ಕಾರ್ಗಲ್ಲನ್ನು ಸೀಳಿಕೊಂಡು ಧುಮುಕುವ ಜಲಪಾತ, ಕಷ್ಟಪಟ್ಟು ಬರೋ ಪ್ರವಾಸಿಗರಿಗೆ ಲಾಸ್ ಮಾಡೋದಿಲ್ಲ. ಫಾಲ್ಸ್ ಬಗ್ಗೆ ಮಾಹಿತಿಯಿಲ್ಲದೆ ಕೆಲ ಪ್ರವಾಸಿಗರು ಅಪಾಯದ ಸ್ಥಳದಲ್ಲಿ ನೀರಿಗಿಳಿದು ಪ್ರಾಣವನ್ನೂ ಕಳೆದುಕೊಂಡಿದ್ದಾರೆ.

    ಮಳೆಯ ನಡುವೆಯೂ ಇಲ್ಲಿಗೆ ಬರುವ ಪ್ರವಾಸಿಗರು ಕಷ್ಟದ ಹಾದಿಯಲ್ಲಿ ಸಾಗಿ ಜಲಪಾತವನ್ನು ಕಣ್ತುಂಬಿಕೊಳ್ಳುತ್ತಾರೆ. ನಿತ್ಯವೂ ನೂರಾರು ಜನರನ್ನು ತನ್ನತ್ತ ಸೆಳೆಯೋ ಫಾಲ್ಸ್ ಗೆ ತೆರಳೋಕೆ ಇರೋದು ಖಾಸಗಿ ದಾರಿ. ಹಾಗಾಗಿ ಇಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಜಲಪಾತದ ನೀರಲ್ಲಿ ಇಳಿದರೆ ಅಪಾಯವಿದ್ದು, ಅಲ್ಲಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಬೇಕು. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನೋದು ಜನರ ಒತ್ತಾಯವಾಗಿದೆ. ಸೌಂದರ್ಯದ ನಡುವೆ ಅಪಾಯವನ್ನೂ ಮಡಿನಲ್ಲಿಟ್ಟುಕೊಂಡಿರುವ ಜಲಪಾತಕ್ಕೆ ಸೂಕ್ತ ಕಾಯಕಲ್ಪ ಮಾಡಿದರೆ ಮತ್ತಷ್ಟು ಜನರನ್ನ ಸೆಳೆಯಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಪಶ್ಚಿಮ ಘಟ್ಟದ ತಪ್ಪಲಿನ ಪುಟ್ಟ ಜಿಲ್ಲೆ ಕೊಡಗು ತನ್ನ ಪ್ರಕೃತಿ ಸೌಂದರ್ಯದಿಂದ ಇಡೀ ಜಗತ್ತನ್ನೆ ತನ್ನತ್ತ ಸೆಳೆಯುತ್ತಿದೆ. ಇಂತಹ ನಿಸರ್ಗದ ತಪ್ಪಲಿನ ಪ್ರವಾಸಿತಾಣಗಳು ಮುಂಗಾರು ಮಳೆಯ ಸಿಂಚನಕ್ಕೆ ಹೊಸರೂಪ ತಳೆದು ಕಣ್ಮನ ಸೆಳೆಯುತ್ತವೆ. ಇಷ್ಟಿದ್ದರೂ ಪ್ರವಾಸೋದ್ಯಮ ಇಲಾಖೆ ಮಾತ್ರ ಸೂಕ್ತ ವ್ಯವಸ್ಥೆ ಕೊಡದೆ ನಿರ್ಲಕ್ಷ ವಹಿಸುತ್ತಿದೆ.

  • ಚೇಲಾವರ ಜಲಪಾತದಲ್ಲಿ ಮುಳುಗಿದ್ದ ಬೆಂಗಳೂರು ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ಪತ್ತೆ

    ಚೇಲಾವರ ಜಲಪಾತದಲ್ಲಿ ಮುಳುಗಿದ್ದ ಬೆಂಗಳೂರು ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ಪತ್ತೆ

    ಮಡಿಕೇರಿ: ಸ್ನೇಹಿತರೊಂದಿಗೆ ನರಿಯಂದಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೇಲಾವರ ಜಲಪಾತ ವೀಕ್ಷಣೆಗೆ ತೆರಳಿ ಸಾವನ್ನಪ್ಪಿದ್ದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ.

    ಕೂಡಗು ಮೂಲದ ಜೆಪಿ ನಗರದಲ್ಲಿ ನೆಲೆಸಿರುವ ಕಾವೇರಪ್ಪ ಅವರ ಪುತ್ರ ದರ್ಶನ್ (22) ಜಲಪಾತದಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿದ್ದ. ಬೆಂಗಳೂರಿನ ಕೆಎಸ್‍ಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ನಾಲ್ವರು ಸ್ನೇಹಿತರೊಂದಿಗೆ ಮಡಿಕೇರಿ ದಸರಾ ವೀಕ್ಷಣೆಗೆಂದು ಕೊಡಗಿಗೆ ಬಂದು, ಭಾನುವಾರ ಮಧ್ಯಾಹ್ನ ಚೇಲಾವರ ಜಲಪಾತ ವೀಕ್ಷಣೆಗೆ ತೆರಳಿದ್ದ.

    ಜಲಪಾತದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ದರ್ಶನ್ ಕಾಲುಜಾರಿ ಜಲಪಾತದ ಸುಳಿಯಲ್ಲಿ ಸಿಲುಕಿಕೊಂಡಿದ್ದ. ನೀರಿನ ರಭಸಕ್ಕೆ ಮೇಲೆ ಬಾರದೇ ಜಲಪಾತದಲ್ಲಿ ಮುಳುಗಿ ಮೃತಪಟ್ಟಿದ್ದ. ದರ್ಶನ್ ನೀರಿನಲ್ಲಿ ಮುಳುಗಿದ್ದ ಸುದ್ದಿಯನ್ನು ಸ್ನೇಹಿತರು ಗ್ರಾಮಸ್ಥರಿಗೆ ತಿಳಿಸಿದ್ದರು.

    ಸ್ಥಳಕ್ಕೆ ಆಗಮಿಸಿದ ನಾಪೋಕ್ಲು ಠಾಣೆ ಪೊಲೀಸರ ಶವಕ್ಕಾಗಿ ಭಾನುವಾರ ಹುಡುಕಾಟ ನಡೆಸಿದ್ದರು. ಆದರೆ ಜಲಪಾತದಲ್ಲಿ ನೀರಿನ ರಭಸ ಹೆಚ್ಚಿದ್ದ ಹಿನ್ನೆಲೆಯಲ್ಲಿ ಶವ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆಯಿಂದ ಮೃತ ದೇಹಕ್ಕಾಗಿ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ದರ್ಶನ್ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.