Tag: Cheluvaraswamy

  • ಎಲೆಕ್ಷನ್‍ಗೆ ಹೋಗೋಣ, ಇಲ್ಲ ವಿರೋಧ ಪಕ್ಷವಾಗಿ ಕೂರೋಣ: ಮಂಡ್ಯದ ಕೈ ನಾಯಕ

    ಎಲೆಕ್ಷನ್‍ಗೆ ಹೋಗೋಣ, ಇಲ್ಲ ವಿರೋಧ ಪಕ್ಷವಾಗಿ ಕೂರೋಣ: ಮಂಡ್ಯದ ಕೈ ನಾಯಕ

    ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾಗಮಂಗಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 23 ರಂದು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೋಡಿಯೂ ಸರ್ಕಾರ ಇನ್ನೂ ಬುದ್ಧಿ ಕಲಿಯುತ್ತಿಲ್ಲ. ಇದರಿಂದ ಜೊತೆಲಿದ್ದಂತಹ ಕಾಂಗ್ರೆಸ್ ಪಕ್ಷ ನೋವು ಅನುಭವಿಸಬೇಕಾಗುತ್ತದೆ. ಜೆಡಿಎಸ್ ನವರರಿಗೂ ಜನ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಎಲೆಕ್ಷನ್‍ಗೆ ಹೋಗೋಣ ಇಲ್ಲ ವಿರೋಧ ಪಕ್ಷವಾಗಿ ಕೂರೋಣ” ಎಂದು ಬರೆದು ಈ ಮೂಲಕ ತಮ್ಮ ನಿರ್ಧಾರವನ್ನು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

    ಮೈತ್ರಿ ವಿಚಾರದಲ್ಲಿ ರಾಷ್ಟ್ರದ ನಾಯಕರು ತೆಗೆದುಕೊಂಡಿರುವ ತೀರ್ಮಾನಕ್ಕೆ ನಾನು ಬದ್ಧ. ಆದರೆ ಇದೇ ತರ ಮುಂದುವರಿದರೆ ಕಾಂಗ್ರೆಸ್ ಪಕ್ಷ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ನಾಯಕರು ಇದನ್ನ ಸರಿಪಡಿಸಬೇಕು ಇಲ್ಲ, ಒಂದು ಪೂರ್ಣ ಪ್ರಮಾಣದ ತೀರ್ಮಾನ ತೆಗೆದುಕೊಳ್ಳಬೇಕು. ಆಗ್ಲಿಲ್ಲ ಅಂದರೆ ಮುಂದೆ ಪಕ್ಷವನ್ನು ಈ ಸ್ಥಿತಿಗೆ ಬರದೆ ಇರುವಂತೆ ನೋಡಿಕೊಳ್ಳವುದಕ್ಕೆ ಪಕ್ಷದ ಎಲ್ಲ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

    ನಾನು ಇವತ್ತು ಪಕ್ಷದ ತೀರ್ಮಾನವನ್ನು ಪ್ರಶ್ನೆ ಮಾಡುವುದಕ್ಕೆ ಹೋಗಲ್ಲ. ಆದರೆ ಈಗಿನ ನಡವಳಿಕೆ ನೋಡುತ್ತಿದ್ದರೆ ಪಕ್ಷಕ್ಕೆ ಒಳ್ಳೆಯ ಭವಿಷ್ಯ ಕಾಣುತ್ತಿಲ್ಲ. ಮೈತ್ರಿ ಚುನಾವಣೆಯಿಂದ ಈ ಮಟ್ಟಿಗೆ ಪರಿಸ್ಥಿತಿ ಎದುರಾಗಿದೆ ಎಂದು ಈಗ ಕೆಲವರಿಗೆ ಮನವರಿಕೆಯಾಗಿದೆ. ನಾನು ಕಾದು ನೋಡುತ್ತೀನಿ. ಹೆಚ್ಚು ದಿನ ಉಳಿಯಲ್ಲ. ಈಗಾಗಲೇ ಜನ ಲೋಕಸಭಾ ಚುನಾವಣೆಯಲ್ಲಿ ಒಂದು ಸಾರಿ ತೋರಿಸಿದ್ದಾರೆ. ಇನ್ನು ಮತ್ತೆ ಅದನ್ನೇ ಮಾಡಿದರೆ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ ಬಿಡಿ, ನನ್ನೊಬ್ಬನ ಕೈಲಿ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮನೆಗೆ, ಪಕ್ಷಕ್ಕೆ ಮಾತ್ರ ಸೀಮಿತವಲ್ಲ, ಆರೂವರೆ ಕೋಟಿ ಕನ್ನಡಿಗರಿಗೆ ಸಿಎಂ: ಚೆಲುವರಾಯಸ್ವಾಮಿ

    ಮನೆಗೆ, ಪಕ್ಷಕ್ಕೆ ಮಾತ್ರ ಸೀಮಿತವಲ್ಲ, ಆರೂವರೆ ಕೋಟಿ ಕನ್ನಡಿಗರಿಗೆ ಸಿಎಂ: ಚೆಲುವರಾಯಸ್ವಾಮಿ

    ಬೆಂಗಳೂರು: ಕುಮಾರಸ್ವಾಮಿ ಅವರ ಮನೆಗೆ ಅಥವಾ ಪಕ್ಷಕ್ಕೆ ಮಾತ್ರ ಸೀಮಿತವಲ್ಲ. ಆರೂವರೆ ಕೋಟಿ ಕನ್ನಡಿಗರಿಗೆ ಸಿಎಂ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಶಾಸಕ ಚಲುವರಾಯಸ್ವಾಮಿ, ಕುಮಾರಸ್ವಾಮಿ ಮೇಲಿನ ಮುನಿಸು ಇದೆ ಅನ್ನೋದನ್ನ ಪರೋಕ್ಷವಾಗಿ ನುಡಿದಿದ್ದಾರೆ. ಮೈತ್ರಿ ಬೆಂಗಳೂರಿಗೆ ಮಾತ್ರ ಸಿಮೀತ. ಮಂಡ್ಯಕ್ಕೆ ಅಲ್ಲ, 78 ಸ್ಥಾನ ಪಡೆದು ಸಿಎಂ ಸ್ಥಾನ ಬಿಟ್ಟುಕೊಟ್ಟಿಲವೇ..? ಮಾತನಾಡಿರೆ ಬಹಳ ಇದೆ. ಮಂಡ್ಯದ ಜೆಡಿಎಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.

    ಯಾರೇ ಮುಖ್ಯಮಂತ್ರಿಯಾದರೂ ಅವರು ಕರ್ನಾಟಕ ಮುಖ್ಯಮಂತ್ರಿಯಾಗುತ್ತಾರೆ ಹೊರತು, ಅವರ ಮನೆಗೆ ಅಥವಾ ಅವರ ಪಕ್ಷಕ್ಕೆ ಸೀಮಿತ ಆಗಲ್ಲ. ಆದರೆ ನಮ್ಮ ಅವರ ಮಧ್ಯೆ ಇದ್ದಂತಹ ಸ್ನೇಹ ಇವತ್ತು ಇಲ್ಲ. ಆದರೆ ನನಗೂ ಅವರಿಗೂ ಯಾವುದೇ ವೈಯಕ್ತಿಕ ಸಂಬಂಧ ಇಲ್ಲ. ಮುಖ್ಯಮಂತ್ರಿ ಆಗಿದ್ದಾರೆ ಆದ್ದರಿಂದ ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

    ಕುಮಾರಸ್ವಾಮಿ ಒಂದು ಪಕ್ಷದ ಸಿಎಂ ಅಲ್ಲ ರಾಜ್ಯದ ಆರು ಕೋಟಿ ಕನ್ನಡಿಗರಿಗೆ ಸಿಎಂ. ಜಮೀರ್, ಕುಮಾರಸ್ವಾಮಿ ಜೊತೆ ಮಾತನಾಡಿದ ಮಾತ್ರಕ್ಕೆ ಹಳೆಯದೆಲ್ಲ ಮರೆತಿದ್ದೇವೆ ಎಂದಲ್ಲ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಜೊತೆಗಿನ ಮುನಿಸು ಹಾಗೆ ಇದೆ ಅನ್ನೋದನ್ನ ಹೇಳಿದ್ದಾರೆ.

    https://www.youtube.com/watch?v=ChN81eT3xzE