Tag: chemical factory

  • ಕೆಮಿಕಲ್ ದುರ್ವಾಸನೆಗೆ ಉಸಿರುಗಟ್ಟಿ ಕಾರ್ಮಿಕರು ಅಸ್ವಸ್ಥ – ಲಾರಿಯಿಂದ ಕೆಳಗೆ ಬಿದ್ದು ಓರ್ವ ಸಾವು

    ಕೆಮಿಕಲ್ ದುರ್ವಾಸನೆಗೆ ಉಸಿರುಗಟ್ಟಿ ಕಾರ್ಮಿಕರು ಅಸ್ವಸ್ಥ – ಲಾರಿಯಿಂದ ಕೆಳಗೆ ಬಿದ್ದು ಓರ್ವ ಸಾವು

    ಚಿಕ್ಕಬಳ್ಳಾಪುರ: ಕೆಮಿಕಲ್ (Chemical) ದುರ್ವಾಸನೆಯಿಂದ ಉಸಿರುಗಟ್ಟಿ, ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

    ಬಿಹಾರ ಮೂಲದ ಮಹಮದ್ ರಜೀಕ್ (33) ಮೃತ ಕಾರ್ಮಿಕ. ಘಟನೆಯಲ್ಲಿ ವಿಕಾಸ್ ಹಾಗೂ ಸೋನು ಎಂಬ ಸಹ ಕಾರ್ಮಿಕರು (labours) ಉಸಿರಾಟದ ಸಮಸ್ಯೆಯಿಂದ (Breathing problem) ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ನೂರಾರು ಜನರ ಮುಂದೆ ಯುವತಿಯ ಬರ್ಬರ ಹತ್ಯೆ – ಆರೋಪಿಗೆ ಧರ್ಮದೇಟು

    ಮಹಮದ್ ರಜೀಕ್ ಮೂಲತಃ ಬಿಹಾರದವನು, ಕಳೆದ 5 ವರ್ಷಗಳ ಹಿಂದೆ ಹೆಂಡತಿಯೊಂದಿಗೆ ಕೂಲಿ ಕೆಲಸ ಹರಸಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ. ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಮಾಲೀಕ ಶ್ರೀನಿವಾಸಮೂರ್ತಿ ಎಂಬುವವರಿಗೆ ಸೇರಿದ ರಾಮ್ ಕೀ ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಈತನ ಜೊತೆ ಸೋನು ಹಾಗೂ ವಿಕಾಸ್ ಸಹ ಕೆಲಸ ಮಾಡ್ತಿದ್ರು. ಇದನ್ನೂ ಓದಿ: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

    ಎಂದಿನಂತೆ ಬುಧವಾರ ಸಂಜೆ ಫ್ಯಾಕ್ಟರಿಗೆ ಕೆಮಿಕಲ್ ವೇಸ್ಟ್ ತುಂಬಿಕೊಂಡು ಹೋಗಲು ಟ್ಯಾಂಕರ್ ಲಾರಿ ಬಂದಿದೆ. ಈ ವೇಳೆ ಟ್ಯಾಂಕರ್‌ನ ಮೇಲ್ಭಾಗದ ಕ್ಯಾಪ್ ಒಪನ್ ಆಗಿದೆ. ಇದರಿಂದ ಕೆಮಿಕಲ್‌ ದುರ್ವಾಸನೆ ಹೊರಸೂಸಿದ್ದು, ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ರೆ ವಿಕಾಸ್ ಹಾಗೂ ಸೋನು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ನಂತರ ಲಾರಿ ಚಾಲಕ ಲಾರಿಯೊಂದಿಗೆ ಎಸ್ಕೇಪ್ ಆಗಿದ್ದಾನೆ. ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯೆ ಶವಾಗರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನೂ ಮೃತದೇಹವನ್ನ ಮೃತನ ಸ್ವಗ್ರಾಮ ಬಿಹಾರಕ್ಕೆ ಕಳುಹಿಸಿಕೊಡಲು ತಯಾರಿ ಮಾಡಲಾಗಿದೆ. ಕೆಮಿಕಲ್‌ ಕಾರ್ಖಾನೆ ಮಾಲೀಕ ಶ್ರೀನಿವಾಸಮೂರ್ತಿ ಮೃತರ ಜೊತೆಗಾರರ ಜೊತೆ ಮಧ್ಯಸ್ಥಿಕೆ ಮಾಡಿಸಿ ಪ್ರಕರಣ ಮುಚ್ಚಿ ಹಾಕಿವ ಹುನ್ನಾರ ಸಹ ನಡೆಸಿದ್ರು ಎಂಬ ಆರೋಪ ಕೇಳಿಬಂದಿದೆ. ಆದ್ರೆ ಕಾರ್ಮಿಕ ಇಲಾಖಾಧಿಕಾರಿಗಳಿಗೆ ʻಪಬ್ಲಿಕ್‌ ಟಿವಿʼ ಮಾಹಿತಿ ಮುಟ್ಟಿಸಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

    ಮಾಲೀಕನ ನಿರ್ಲಕ್ಷ್ಯ ಆರೋಪದಡಿ ಕಾರ್ಮಿಕನ ಸಾವು ಸಂಭವಿಸಿದ್ದು, ನಂದಿಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಕಾರ್ಮಿಕ ಇಲಾಖೆ ಸಹ ಕಾರ್ಮಿಕರಿಗೆ ಬೇಕಾದ ಯಾವುದೇ ಸುರಕ್ಷತಾ ಕ್ರಮಗಳನ್ನ ಕೈಗೊಂಡಿಲ್ಲ ಅಂತ ಮಾಲೀಕನ ಮೇಲೆ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ತ್ರಿಬಲ್‌ ಮರ್ಡರ್‌ ಕೇಸ್‌ – ಎರಡನೇ ಪತ್ನಿ, ಮಲ ಮಗಳ ಮೇಲೆ ಅಕ್ರಮ ಸಂಬಂಧ ಅನುಮಾನ

  • ಥಾಣೆಯ ಕಾರ್ಖಾನೆಯೊದರಲ್ಲಿ ಅಗ್ನಿ ಅವಘಡ – 6 ಜನರ ದುರ್ಮರಣ

    ಥಾಣೆಯ ಕಾರ್ಖಾನೆಯೊದರಲ್ಲಿ ಅಗ್ನಿ ಅವಘಡ – 6 ಜನರ ದುರ್ಮರಣ

    – 48ಕ್ಕೂ ಹೆಚ್ಚು ಜನರಿಗೆ ಗಾಯ

    ಮುಂಬೈ: ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ (Explosion) ಹೊತ್ತಿಕೊಡ ಬೆಂಕಿಯಿಂದ 6 ಜನ ಸಾವಿಗೀಡಾದ ಘಟನೆ ಥಾಣೆಯ(Thane)  ಡೊಂಬಿವಿಲಿಯಲ್ಲಿ ನಡೆದಿದೆ. ಘಟನೆಯಲ್ಲಿ 48ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

    ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ (Chemical Factory) ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಆರೋಪಿ ಬಂಧನಕ್ಕೆ ಏಮ್ಸ್‌ ಒಳಗಡೆ ವಾಹನ ನುಗ್ಗಿಸಿದ ಪೊಲೀಸರು!

    ಕಾರ್ಖಾನೆಯಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ. ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳ ಗಾಜುಗಳು ಒಡೆದು ಹೋಗಿವೆ. ಕಾರು ಶೋರೂಂ ಸೇರಿದಂತೆ ಇನ್ನೆರಡು ಕಟ್ಟಡಗಳಿಗೂ ಬೆಂಕಿ (Fire Accident) ವ್ಯಾಪಿಸಿದೆ. ಅವಘಡದಲ್ಲಿ 10-12 ಕಾರುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

    ಬೆಂಕಿ ನಂದಿಸಲು ಸುಮಾರು 15 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿ ನಂದಿಸಲು ನಾಲ್ಕು ಗಂಟೆಗೂ ಹೆಚ್ಚು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಸಿದ ಮಹಾರಾಷ್ಟ್ರದ (Maharashtra) ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis), ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಇಲ್ಲಿಯವರೆಗೂ ಕಾರ್ಖಾನೆಯ ಒಳಗೆ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಅಂಬುಲೆನ್ಸ್‍ಗಳನ್ನು ಸಿದ್ಧಪಡಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಎನ್‍ಡಿಆರ್‍ಎಫ್, ಟಿಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಇಬ್ಬರು ಸಿಎಂ ಅರೆಸ್ಟ್‌ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್‌ ಗಾಂಧಿ

  • ಸೂರತ್ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ – ರಾಸಾಯನಿಕ ಸ್ಥಾವರದ ಆವರಣದಲ್ಲಿ 7 ಸುಟ್ಟ ಶವಗಳು ಪತ್ತೆ

    ಸೂರತ್ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ – ರಾಸಾಯನಿಕ ಸ್ಥಾವರದ ಆವರಣದಲ್ಲಿ 7 ಸುಟ್ಟ ಶವಗಳು ಪತ್ತೆ

    ಗಾಂಧಿನಗರ: ಬುಧವಾರ ಸೂರತ್‌ನ (Surat) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಸಂಭವಿಸಿದ ಅಗ್ನಿ ಅವಘಡದಲ್ಲಿ 24 ಕಾರ್ಮಿಕರು ಗಾಯಗೊಂಡಿದ್ದು, ಒಂದು ದಿನದ ನಂತರ ರಾಸಾಯನಿಕ ಸ್ಥಾವರದ ಆವರಣದಲ್ಲಿ ಕನಿಷ್ಠ ಏಳು ಸುಟ್ಟ ಶವಗಳು ಪತ್ತೆಯಾಗಿವೆ ಎಂದು ಸೂರತ್ ಪೊಲೀಸರು ತಿಳಿಸಿದ್ದಾರೆ.

    ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಈಥರ್ ಇಂಡಸ್ಟ್ರೀಸ್‌ನಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಸೈಟ್‌ನಲ್ಲಿ ಸುಮಾರು ಏಳು ವ್ಯಕ್ತಿಗಳ ಅಸ್ಥಿಪಂಜರಗಳು ಮತ್ತು ಇತರ ಅವಶೇಷಗಳು ಕಂಡುಬಂದಿವೆ ಎಂದು ಅಧಿಕಾರಿಯೊಬ್ಬರು ಹೇಳಿದರು. ಇದನ್ನೂ ಓದಿ: ಸೂರತ್‍ನ ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 24 ಕಾರ್ಮಿಕರಿಗೆ ಗಾಯ

    ಈ ಹಿಂದೆ ಏಳು ಮಂದಿ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದರು. ಪೊಲೀಸರು ಮತ್ತು ಇತರ ರಕ್ಷಣಾ ಕಾರ್ಯಕರ್ತರು ಬುಧವಾರ ಒಳಗೆ ಸಿಲುಕಿದ್ದ 24 ವ್ಯಕ್ತಿಗಳನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಸುಟ್ಟ ಗಾಯಗಳಾಗಿರುವ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

    ಘಟನೆಗೆ ಏನು ಕಾರಣ ಎಂಬುದನ್ನು ಕಂಡುಹಿಡಿಯುವ ಸಲುವಾಗಿ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಏಕಾಏಕಿ ಸಂಭವಿಸಿದ ಸಮಯದಲ್ಲಿ, 100 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ

    ಸೂರತ್ ಮೂಲದ ಈಥರ್ ಇಂಡಸ್ಟ್ರೀಸ್ ಕೃಷಿ ರಾಸಾಯನಿಕ, ಔಷಧೀಯ ಮತ್ತು ತೈಲ ಮತ್ತು ಅನಿಲ ಉದ್ಯಮಗಳಿಗೆ ರಾಸಾಯನಿಕಗಳನ್ನು ಪೂರೈಸುತ್ತದೆ. ಪಶ್ಚಿಮ ಭಾರತದ ರಾಜ್ಯವಾದ ಗುಜರಾತ್‌ನಲ್ಲಿ ಈಥರ್ ಎರಡು ಕಾರ್ಖಾನೆಗಳನ್ನು ಹೊಂದಿದೆ. ಇದನ್ನೂ ಓದಿ: ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

  • ರಾಯಚೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ದುರಂತ – ತಪ್ಪಿದ ಅನಾಹುತ

    ರಾಯಚೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ದುರಂತ – ತಪ್ಪಿದ ಅನಾಹುತ

    ರಾಯಚೂರು: ತಾಲ್ಲೂಕಿನ ಚಿಕ್ಕಸುಗೂರು ಬಳಿ ಕೈಗಾರಿಕಾ ಪ್ರದೇಶದ (Industrial Area) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

    ಬೆಂಕಿಯಿಂದ ದಟ್ಟಹೊಗೆ ಆವರಿಸುತ್ತಿದ್ದಂತೆಯೇ ಹೊರ ಓಡಿಬಂದ ಸಿಬ್ಬಂದಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.

    ಹೈದರಾಬಾದ್‌ ರಸ್ತೆ ಬಳಿಯ ಜಯಂತ್ ಲೈಫ್ ಸೈನ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ‌ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಕೂಡಲೇ ರಸ್ತೆಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಹೆಸರು ಕಳೆದುಕೊಳ್ಳಲು ಇಷ್ಟವಿಲ್ಲ- ರಾಮನಗರ ಮರುನಾಮಕರಣ ಪುನರುಚ್ಚರಿಸಿದ ಡಿಕೆಶಿ

    ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಇದನ್ನೂ ಓದಿ: ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

  • ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಗಾಂಧಿನಗರ: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.

    ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ

    POLICE

    ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ಹೊರತಾಗಿ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ

  • ರಸಗೊಬ್ಬರ ತಯಾರಿಕೆ ಹೆಸರಲ್ಲಿ ಸಲ್ಫ್ಯೂರಿಕ್ ಆ್ಯಸಿಡ್ ಉತ್ಪಾದನೆ – ಲಕ್ಷಾಂತರ ರೂ. ಬೆಳೆ ಹಾನಿ

    ರಸಗೊಬ್ಬರ ತಯಾರಿಕೆ ಹೆಸರಲ್ಲಿ ಸಲ್ಫ್ಯೂರಿಕ್ ಆ್ಯಸಿಡ್ ಉತ್ಪಾದನೆ – ಲಕ್ಷಾಂತರ ರೂ. ಬೆಳೆ ಹಾನಿ

    ಮಂಡ್ಯ: ರಸಗೊಬ್ಬರ ತಯಾರಿಕೆಯ ಹೆಸರಿನಲ್ಲಿ ಸಲ್ಫ್ಯೂರಿಕ್ ಆಸಿಡ್ ಉತ್ಪಾದಿಸಿ, ವಿಷಾನಿಲ ಸೋರಿಕೆಯಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾಗಿರುವ ಘಟನೆ ಮಂಡ್ಯದ ಕಾರೇಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಕೀರ್ತಿ ಕೆಮಿಕಲ್ ಫ್ಯಾಕ್ಟರಿ ಹೆಸರಿನ ರಸಗೊಬ್ಬರ ತಯಾರಿಕಾ ಘಟಕ ಗ್ರಾಮದ ಹೊರವಲಯದಲ್ಲಿ ಕೆಲ ದಿನಗಳಿಂದ ಅನುಮತಿ ಪಡೆಯದೇ ಸಲ್ಫ್ಯೂರಿಕ್ ಆ್ಯಸಿಡ್ ತಯಾರಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಾಗೆಯೇ ಸ್ಥಳೀಯ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿಸಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೇಸ್‍ಗೆ ಕೌಂಟರ್ ಕೊಡಲು ಕೈ ಪಾಳಯ ಸಿದ್ಧ

    ಕಾರ್ಖಾನೆಯ ವಿಷಾನಿಲ ಸೋರಿಕೆಯಿಂದಾಗಿ 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ತೆಂಗು, ರಾಗಿ, ಹುರುಳಿ ಬೆಳೆಗಳು ನಾಶವಾಗಿದೆ. ಸುತ್ತಮುತ್ತಲ ಗ್ರಾಮದ ಕೆಲವರಿಗೆ ಉಸಿರಾಟದ ಸಮಸ್ಯೆಯೂ ಕಂಡುಬಂದಿದೆ ಎಂದು ನಷ್ಟಕ್ಕೊಳಗಾದ ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ಯಪಾನಕ್ಕೆ ಕರೆದೊಯ್ದು ಸ್ನೇಹಿತರಿಂದಲೇ ಯುವಕನ ಕತ್ತು ಕೊಯ್ದು ಕೊಲೆ

    ಕಾರ್ಖಾನೆಯನ್ನು ಅನುಮತಿ ಪಡೆದೇ ಆರಂಭಿಸಿದ್ದೇವೆ ಎಂದು ಕೀರ್ತಿ ಕಾರ್ಖಾನೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದೆ. ಆದರೂ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚುವಂತೆ ಸ್ಥಳೀಯ ರೈತರು ಆಗ್ರಹಿಸುತ್ತಿದ್ದಾರೆ.

  • ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

    ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- 8 ಜನಕ್ಕೆ ಗಾಯ, ಓರ್ವ ಸಾವಿನ ಶಂಕೆ

    ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅತ್ತಿಬೆಲೆ ವಡ್ಡರ ಪಾಳ್ಯ ಸಮೀಪವಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಗಾಯಗೊಂಡು ಓರ್ವ ಸಾವಿನ ಶಂಕೆ ವ್ಯಕ್ತವಾಗಿದೆ.

    ಅತ್ತಿಬೆಲೆ ವಡ್ಡರ ಪಾಳ್ಯ ಸಮೀಪ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಹೊಗೆ 3 ಕಿ.ಮೀ ವ್ಯಾಪಿಸಿದೆ. ಈಗಾಗಲೇ 8 ಮಂದಿಗೆ ಗಾಯ ಓರ್ವ ಸಾವಿನ ಶಂಕೆ ವ್ಯಕ್ತವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದ ಪರಿಣಾಮ ಮೇಲ್ಭಾಗದ ಶಿಟ್‍ಗಳು ಹಾರಿ ಹೋಗಿದೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ. ಈಗಾಗಲೇ ಸ್ಫೋಟದಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ ಎಂದು ವರದಿಯಾಗಿದ್ದು, ಈ ಹಿಂದೆ ಕೂಡ ಸ್ಫೋಟ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

  • ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಕಾರ್ಖಾನೆ -ವಾಯುಪಡೆಗೆ ಕರೆ

    ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಕಾರ್ಖಾನೆ -ವಾಯುಪಡೆಗೆ ಕರೆ

    ಶ್ರೀನಗರ: ರಾಸಾಯನಿಕ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡಕ್ಕೆ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದಿರುವ ಘಟನೆ ಉಧಂಪುರ್ ಜಿಲ್ಲೆಯ ಬಟಾಲ್ ಬಲಿಯನ್ ಕೈಗಾರಿಕಾ ಪ್ರದೇಶದಲ್ಲಿ ವರದಿಯಾಗಿದೆ.

    ಧನುಕಾ ಅಗ್ರಿಟೆಕ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮುಂಜಾನೆ 12.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಆಗಮಿಸಿದರು ಕೂಡ ರಾಸಾಯನಿಕ ಉತ್ಪಾದನೆಯ ಕಾರ್ಖಾನೆ ಆಗಿರುವುದರಿಂದ ಬೆಂಕಿ ಕಾರ್ಖಾನೆ ತುಂಬ ಹರಡಿಕೊಂಡಿಕೊಂಡಿದೆ. ಸ್ಥಳದಲ್ಲಿ 8 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಮಾಡುತ್ತಿದೆ. ಆದರೂ ಬೆಂಕಿ ನಂದಿಸಲು ಕಷ್ಟವಾಗುತ್ತಿರುವ ಪರಿಣಾಮ ವಾಯುಪಡೆಗೆ ಬೆಂಕಿ ನಂದಿಸಲು ಕರೆ ಮಾಡಲಾಗಿದೆ.

    ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿ, ಕೈಗಾರಿಕಾ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ನಾವು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದರು ಕೂಡ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

    ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರ್ಖಾನೆ ಮತ್ತು ಸ್ಥಳದಲ್ಲಿದ್ದ ವಾಹನಗಳು ಪೂರ್ತಿ ಸುಟ್ಟು ಕರಕಲಾಗಿದೆ. ಹತ್ತಿರದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಕಾರ್ಯಾಚರಣೆ ಮುಂದುವರಿದಿದೆ.

  • ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.

    ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿರುವುದರಿಂದ ಹರಸಾಹಸ ಪಡುವಂತಾಗಿದೆ. ಈಗಾಗಲೇ ಅಕ್ಕ ಪಕ್ಕದ ಮನೆಯವರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಸಾವು, ನೋವಿನ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

  • ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- ಎಂಟು ಜನ ಕಾರ್ಮಿಕರ ಸ್ಥಿತಿ ಗಂಭೀರ

    ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ- ಎಂಟು ಜನ ಕಾರ್ಮಿಕರ ಸ್ಥಿತಿ ಗಂಭೀರ

    ರಾಯಚೂರು: ಯಾದಗಿರಿಯ ಕಡೆಚೂರು ಕೆಐಎಡಿಬಿ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಹಾಗೂ ಆಯಿಲ್ ಟ್ಯಾಂಕ್ ಸ್ಫೋಟದಿಂದ ಎಂಟು ಜನ ದಿನಗೂಲಿ ಕಾರ್ಮಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹೈದರಾಬಾದ್ ಮೂಲದ ಎಸ್‍ಡಿ ಪ್ಯಾರಲೆ ಕಂಪನಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಕೂಲಿ ಕೆಲಸ ಮಾಡುತ್ತಿದ್ದ ಆರೀಫ್, ಹುಸೇನ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ. ಇಮ್ರಾನ್, ರವಿ, ಸುಫಿಯನ್, ಶೇಕ್ ಹುಸೇನ್, ವಿಜಯ್ ಗೆ ಗಾಯಗಳಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಗಂಭೀರ ಗಾಯಗೊಂಡವರ ಪರಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

    ಗಾಯಾಳುಗಳು ಬಡವರಾಗಿದ್ದು ಕೂಲಿ ಕೆಲಸವನ್ನೇ ನಂಬಿಕೊಂಡಿದ್ದವರು. ಈ ಘಟನೆಯಿಂದ ಅವರ ಕುಟುಂಬಕ್ಕೆ ನೋವಾಗಿದೆ. ಚಿಕಿತ್ಸೆ ವೆಚ್ಚವನ್ನು ಕಾರ್ಖಾನೆಯೆ ಭರಿಸಬೇಕು. ಅವರ ಕುಟುಂಬಗಳಿಗೆ ಸಹಾಯ ಮಾಡಬೇಕು ಎಂದು ಗಾಯಾಳುಗಳ ಕಡೆಯವರು ಒತ್ತಾಯಿಸಿದ್ದಾರೆ.