Tag: chenab

  • ಒಂದೇ ಸಲಕ್ಕೆ ಪಾಕ್‌ಗೆ ಹರಿದ 28,000 ಕ್ಯುಸೆಕ್ ನೀರು – ಹಠಾತ್ ಪ್ರವಾಹ ಭೀತಿ

    ಒಂದೇ ಸಲಕ್ಕೆ ಪಾಕ್‌ಗೆ ಹರಿದ 28,000 ಕ್ಯುಸೆಕ್ ನೀರು – ಹಠಾತ್ ಪ್ರವಾಹ ಭೀತಿ

    ಶ್ರೀನಗರ: ಭಾರತ (India) 24 ಗಂಟೆಗಳ ಕಾಲ ಬಗ್ಲಿಹಾರ್ ಹಾಗೂ ಸಲಾಲ್ ಡ್ಯಾಂ ನೀರನ್ನು ತಡೆದು, ಒಂದೇ ಸಲಕ್ಕೆ ಬಿಡುಗಡೆ ಮಾಡಿದ್ದರಿಂದ ಪಾಕಿಸ್ತಾನದಲ್ಲಿ (Pakistan) ಹಠಾತ್‌ ಪ್ರವಾಹ ಭೀತಿ ಎದುರಾಗಿದೆ.

    ಸಿಯಾಲ್ ಕೋಟೆ ಸೇರಿದಂತೆ ಅನೇಕ ಭಾಗಗಳಲ್ಲಿ ಚೆನಾಬ್ ನದಿ ತುಂಬಿ ಹರಿಯುತ್ತಿದೆ. ಸುಮಾರು 24 ಗಂಟೆಗಳ ಕಾಲ ನೀರನ್ನು ತಡೆಹಿಡಿದು ಬಿಡುಗಡೆ ಮಾಡಿದ್ದರಿಂದ ನದಿಯ ಕೆಳಭಾಗದಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನವು ಸಿಯಾಲ್‌ಕೋಟ್, ಗುಜರಾತ್ ಮತ್ತು ಹೆಡ್ ಖಾದಿರಾಬಾದ್‌ ಪ್ರದೇಶಕ್ಕೆ ಪ್ರವಾಹ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ

    ಭಾರತದ ವಾಟರ್ ವೆಪನ್ ಬಳಕೆಯಿಂದ ಪಾಕಿಸ್ತಾನಕ್ಕೆ ಒಂದು ಸಲ ಗಂಟಲು ಒಣಗಿ ಬಾಯಾರಿದ ಪರಿಸ್ಥಿತಿ, ಮಗದೊಂದು ಸಲ ಪ್ರವಾಹದ ಭೀತಿ ಎದುರಾಗುತ್ತಿದೆ. ಈ ರೀತಿಯ ಭಾರತದ ನೀರಾಟಕ್ಕೆ ಪಾಕ್ ಕಂಗಾಲಾಗಿದೆ.

    ಭಾರತ (India) ನೀರನ್ನು ತಡೆದಿದ್ದರಿಂದ ಒಂದೇ ದಿನ ಚೆನಾಬ್‌ ನದಿಯ (Chenab River) ನೀರಿನ ಮಟ್ಟ 31,900 ಕ್ಯುಸೆಕ್‌ ಇಳಿಕೆಯಾಗಿತ್ತು. ಚೆನಾಬ್ ನದಿಗೆ ಅಡ್ಡಲಾಗಿ ರಾಮಬನದಲ್ಲಿ ಬಾಗ್ಲಿಹಾರ್ ಮತ್ತು ರಿಯಾಸಿಯಲ್ಲಿ ಸಲಾಲ್ ಜಲವಿದ್ಯುತ್ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಸೋಮವಾರ ಈ ಎರಡು ಅಣೆಕಟ್ಟಿನಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು. ನೀರು ಹರಿಸುವುದನ್ನು ನಿಲ್ಲಿಸಿದ ಪರಿಣಾಮ ಪಾಕಿಸ್ತಾನದ ಮರಾಲಾ ಬಳಿ ಭಾನುವಾರ 35,000 ಕ್ಯುಸೆಕ್‌ ನೀರು ಹರಿಯುತ್ತಿದ್ದರೆ, ಸೋಮವಾರ ಇದು 3,100 ಕ್ಯುಸೆಕ್‌ಗೆ ಇಳಿಕೆಯಾಗಿದೆ ಎಂದು ಪಾಕಿಸ್ತಾನದ ಡಾನ್‌ ವರದಿ ಮಾಡಿತ್ತು.

    ಮರಾಲಾ ಬ್ಯಾರೇಜ್ ಸಲಾಲ್ ಅಣೆಕಟ್ಟಿನಿಂದ 76 ಕಿ.ಮೀ ದೂರದಲ್ಲಿದೆ. ಒಟ್ಟು 1.2 ದಶಲಕ್ಷ ಎಕರೆ ಅಡಿಗಳಷ್ಟು ನೀರು ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. ಸಲಾಲ್‌ ಅಣೆಕಟ್ಟಯ ಭರ್ತಿಯಾದ ನಂತರ ಒಂದೇ ಬಾರಿಗೆ ಚೆನಾಬ್‌ ನದಿಗೆ ನೀರು ಹರಿಸಿದರೆ ಪಾಕ್‌ ಭಾಗದಲ್ಲಿ ಪ್ರವಾಹ ಎದುರಾಗಬಹುದು ಎಂದು ಅಧಿಕಾರಿಯೊಬ್ಬರು ಎಚ್ಚರಿಸಿದ್ದರು.

    ಒಂದು ವೇಳೆ ಭಾರತ ಸರಿಯಾಗಿ ನೀರನ್ನು ಹರಿಸದೇ ಇದ್ದರೆ ಖಾರಿಫ್ ಬೆಳೆಗಳಿಗೆ ಭಾರೀ ಸಮಸ್ಯೆಯಾಗಲಿದೆ. ಈಗಾಗಲೇ 21% ನೀರಿನ ಕೊರತೆಯನ್ನು ಎದುರಿಸುತ್ತಿದೆ. ಚೆನಾಬ್‌ ನದಿಯ ಒಳಹರಿವು ಹಠಾತ್ ಇಳಿಕೆಯಾದರೆ ಖಾರಿಫ್ ಋತುವಿನ ಆರಂಭದಲ್ಲಿ ಕೊರತೆ ಎದುರಾಗಲಿದೆ ಎಂದು ವರದಿಯಾಗಿತ್ತು.

    ಪಹಲ್ಗಾಮ್‌ ಭೀಕರ ನರಮೇಧಕ್ಕೆ (Pahalgam Terror Attack) ಪ್ರತಿಯಾಗಿ ಭಾರತ ಸಿಂಧೂ ನದಿಯ ಒಪ್ಪಂದವನ್ನು ಮೊದಲ ಬಾರಿಗೆ ಅಮಾನತಿನಲ್ಲಿಟ್ಟು ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದೆ. ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟಿದೆ. ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

  • ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ನವದೆಹಲಿ: ದೆಹಲಿಯಿಂದ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಭಾರತೀಯ ರೈಲ್ವೇ ಶೀಘ್ರದಲ್ಲೇ ಇದನ್ನು ಸಾರ್ವಜನಿಕ ಪ್ರಯಾಣಕ್ಕಾಗಿ ಉದ್ಘಾಟಿಸಲಿದೆ.

    ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ ಸೇತುವೆ ವಿಶ್ವದಲ್ಲೇ ಅತಿ ಎತ್ತರದ ರೈಲ್ವೇ ಸೇತುವೆ ಎಂಬ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ಸೇತುವೆಯ ಉಕ್ಕಿನ ಕಮಾನು ಈ ತಿಂಗಳು ಪೂರ್ಣಗೊಳ್ಳಲಿದ್ದು, ಶೀಘ್ರವೇ ಉದ್ಘಾಟನೆಗೊಳ್ಳುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಲಿದೆ.

    ಏನಿದರ ವಿಶೇಷತೆ?
    ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಬಹುತೇಕ ಪೂರ್ಣಗೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಕತ್ರಾದಿಂದ ಬನಿಹಾಲ್‌ಗೆ ಸಂಪರ್ಕ ಕಲ್ಪಿಸುವ 111 ಕಿ.ಮೀ ಉದ್ದದ ರೈಲ್ವೇ ಹಳಿಯಲ್ಲಿ 12.6 ಕಿ.ಮೀ ಉದ್ದದ ಟಿ-49ಬಿ ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಶ್ರೀನಗರದಲ್ಲಿ 35 ಸುರಂಗಗಳು ಹಾಗೂ ಬನಿಹಾಲ್ ಮಾರ್ಗದಲ್ಲಿ ಒಟ್ಟು 37 ಸೇತುವೆಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿ ನಿತೀಶ್? – ದೂರವಾಣಿ ಕರೆಗಳ ಬಗ್ಗೆ ಸಿಎಂ ಹೇಳಿದ್ದೇನು?

    ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ.

    ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಈಗಾಗಲೇ 86 ಕಿ.ಮೀ ಸುರಂಗ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ.

    ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಟ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದ್ದು, ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ: ನ್ಯಾ.ಸಂತೋಷ್‌ ಹೆಗ್ಡೆ

    ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು.

    Live Tv
    [brid partner=56869869 player=32851 video=960834 autoplay=true]