Tag: Chennai Airport

  • ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ

    ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ

    ಚೆನ್ನೈ: ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ (World Chess Champion) ಹೆಗ್ಗಳಿಕೆಗೆ ಪಾತ್ರರಾದ ಡಿ.ಗುಕೇಶ್ (D.Gukesh) ಭಾರತಕ್ಕೆ ಮರಳಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) ಭರ್ಜರಿ ಸ್ವಾಗತ ಸಿಕ್ಕಿತು.

    ಇತ್ತೀಚಿಗಷ್ಟೇ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವದ ಕಿರಿಯ ಚೆಸ್ ಚಾಂಪಿಯನ್ ಎಂಬ ಇತಿಹಾಸ ನಿರ್ಮಿಸಿದರು.ಇದನ್ನೂ ಓದಿ: ವಿವಾದದ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ 1409 ಕೋಟಿ ಬಾಚಿದ ‘ಪುಷ್ಪ 2’

    ಇಂದು (ಡಿ.16) ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಧಿಕಾರಿಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಧನೆಯ ಬಳಿಕ ಮರಳಿ ಭಾರತಕ್ಕೆ ಬಂದಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲವೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತೋಷ ವ್ಯಕ್ತಪಡಿಸಿದರು.

    ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. 18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವ್ ಚಾಂಪಿಯನ್‌ಶಿಪ್‌ನ ಕೊನೆಯ 14ನೇ ನಿರ್ಣಾಯಕ ಪಂದ್ಯದಲ್ಲಿ 6.5-6.5 ಸಮಬಲಗೊಂಡು, ಬಳಿಕ 7.5-6.5 ಅಂಕಗಳೊಂದಿಗೆ ಗುಕೇಶ್ ಗೆಲುವು ಸಾಧಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು.ಇದನ್ನೂ ಓದಿ: ಭಾರತ-ಆಸೀಸ್ ಮೂರನೇ ಟೆಸ್ಟ್‌ಗೆ ಮಳೆ ಕಾಟ – ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 51 ರನ್‌ಗೆ 4 ವಿಕೆಟ್

  • Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    – 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
    – ವಿಮಾನ, ರೈಲು ಸಂಚಾರದಲ್ಲಿ ವಿಳಂಬ

    ಚೆನ್ನೈ: ತಮಿಳುನಾಡಿಗೆ (Tamil Nadu) ಅಪ್ಪಳಿಸಿರುವ ಫೆಂಗಲ್‌ ಚಂಡಮಾರುತ ಹಲವು ಅವಾಂತರಗಳನ್ನ ತಂದೊಡ್ಡಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆ ಉಂಟಾಗಿದೆ, ಇದರಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ (Chennai Airport) ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

    ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓರ್ವ ವಲಸೆ ಕಾರ್ಮಿಕ ಮತ್ತೊಬ್ಬರು ಎಟಿಎಂನಿಂದ (ATM) ಹಣ ಡ್ರಾ ಮಾಡಲು ಹೋದಾಗ, ಮತ್ತೊಬ್ಬರು ಹೆಣವಾಗಿ ತೇಲುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ಎಲ್ಲೆಲ್ಲಿ ಎಷ್ಟು ಮಳೆ?
    ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 8.30ರಿಂದ ಸಂಜೆ 6ರ ವರೆಗೆ ಸುಮಾರು 10 ಸೆಂ.ಮೀ ಮಳೆ ದಾಖಲಾಗಿದೆ. ಇನ್ನೂ ಪ್ರದೇಶವಾರು ನೋಡುವುದಾದರೆ ವಿಲ್ಲುಪುರಂ – ಮೈಲಾಮ್‌ನಲ್ಲಿ 498 ಎಂ.ಎಂ, ಪಾಂಡೀಚೇರಿ – 469 ಎಂಎಂ, ಕೂಡ್ಲೂರೆ – 179 ಎಂಎಂ, ತಿರುವಣ್ಣಾಮಲೈ – ತಿರುವಣ್ಣಾಮಲೈ ಇಸ್ರೋ – 176 ಎಂಎಂ, ತಿರುವಣ್ಣಾಮಲೈ – ಚೆಯ್ಯರ್ – 160 ಎಂಎಂ, ತಿರುವಳ್ಳುವರ್ – ಆರ್‌ಕೆ ಪೇಟೆ – 124 ಎಂಎಂ, ತಿರುವಳ್ಳುವರ್ – ಕೊಲ್ಲಪಕ್ಕಂ – 120 ಎಂಎಂ ಮಳೆಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    100ಕ್ಕೂ ಅಧಿಕ ಜನರ ರಕ್ಷಣೆ:
    ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.

    ಸಿಎಂ, ಡಿಸಿಎಂ ಮೇಲ್ವಿಚಾರಣೆ:
    ಇನ್ನೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಅನುಷ್ಠಾನಗೊಳಿಸುತ್ತಿರುವ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ‌, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರವಾಹ ಪರಿಸ್ಥಿತಿಯ ನಗ್ಗೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಇದನ್ನೂ ಓದಿ: ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

  • ಏರ್‌ಪೋರ್ಟಲ್ಲಿ ಪವರ್ ಸ್ಟಾರ್ ಅಪ್ಪುಗೆ ಎದುರಾದ ಗೂಗ್ಲಿ!

    ಏರ್‌ಪೋರ್ಟಲ್ಲಿ ಪವರ್ ಸ್ಟಾರ್ ಅಪ್ಪುಗೆ ಎದುರಾದ ಗೂಗ್ಲಿ!

    ಬೆಂಗಳೂರು: ಕೆಲ ಸಂದರ್ಭಗಳಲ್ಲಿ ಸೆಲೆಬ್ರಿಟಿಗಳ ನಡುವೆ ಅನಿರೀಕ್ಷಿತ ಭೇಟಿ ಸಂಭವಿಸುತ್ತೆ. ಹಾಗೆ ಸಿಕ್ಕಾಗ ಯಾವ ಕ್ಷೇತ್ರದವರೇ ಆಗಿದ್ದರೂ ಪರಸ್ಪರ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೂ ಕೂಡಾ ಚೆನ್ನೈ ಏರ್‌ಪೋರ್ಟನಲ್ಲಿ ಅಂಥಾದ್ದೇ ಒಂದು ವಿಶೇಷ ವ್ಯಕ್ತಿತ್ವ ಹಠಾತ್ತನೆ ಎದುರಾಗಿದೆ!

    ಕೆಲಸದ ನಿಮಿತ್ತವಾಗಿ ಚೆನ್ನೈಗೆ ತೆರಳಿದ್ದ ಪುನೀತ್ ವಾಪಾಸಾಗುವಾಗ ಏರ್ ಪೋರ್ಟಿನಲ್ಲಿ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದಾರೆ. ಸ್ವತಃ ಪುನೀತ್ ಅವರೇ ಬಳಿ ಸಾಗಿ ಮಾತಾಡಿಸಿದಾಗ ಹೌಹಾರಿದ ಕುಂಬ್ಳೆ ಆಲಿಂಗಿಸಿಕೊಂಡು ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ನಂತರ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

    ನಂತರ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಪುನೀತ್ ಅನಿಲ್ ಕುಂಬ್ಳೆಯವರನ್ನು ಭೇಟಿ ಮಾಡಿದ ಬಗ್ಗೆ ಖುಷಿಯಿಂದ ಹೇಳಿಕೊಂಡರೆ, ಅತ್ತ ಕುಂಬ್ಳೆ ಸಹ ಈ ಫೋಟೋ ಜಾಹೀರು ಮಾಡಿ ಪವರ್ ಸ್ಟಾರ್ ಭೇಟಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

    ವಿಶೇಷವೆಂದರೆ ಈ ಭೇಟಿ ಅನಿರೀಕ್ಷಿತವಾಗಿದ್ದರೂ ಅನಿಲ್ ಕುಂಬ್ಳೆ ಮತ್ತು ಪುನೀತ್ ರಾಜ್ ಕುಮಾರ್ ಕಪ್ಪು ಬಣ್ಣದ ಡ್ರೆಸ್ ಮೂಲಕ ಕಾಕತಾಳೀಯವೆಂಬಂತೆ ಕಂಗೊಳಿಸಿದ್ದಾರೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.instagram.com/p/Bma_EytAeZO/?hl=en&taken-by=puneethrajkumar.official