Tag: Chesscom

  • ಕೊಡಗಿನಲ್ಲಿ ಮಳೆಗಾಲ ಎದುರಿಸಲು ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ: ಬಿ.ಸೋಮಶೇಖರ್

    ಕೊಡಗಿನಲ್ಲಿ ಮಳೆಗಾಲ ಎದುರಿಸಲು ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ: ಬಿ.ಸೋಮಶೇಖರ್

    ಮಡಿಕೇರಿ: ಕೊಡಗಿನ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳನ್ನು ಎದುರಿಸಲು ಈಗಾಗಲೇ ಚೆಸ್ಕಾಂ ಇಲಾಖೆ ಸನ್ನದ್ಧವಾಗಿದೆ ಎಂದು ಚೆಸ್ಕಾಂ ಕಾರ್ಯನಿರ್ವಹಕ ಎಂಜಿನಿಯರ್.ಬಿ.ಸೋಮಶೇಖರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಗಾಲದಲ್ಲಿ ವಿಪರೀತ ಗಾಳಿ-ಮಳೆ ಆಗುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಇಲಾಖೆ ಸನ್ನದ್ಧವಾಗಿದೆ. ವಿದ್ಯುತ್ ಇಲಾಖೆ ಪ್ರತೀ ಮಳೆಗಾಲವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. 2018ರಿಂದ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದರು.

    ಇಂತಹ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಸಿಬ್ಬಂದಿ ರೆಡಿಯಾಗಿದ್ದಾರೆ. ಈಗಾಗಲೇ ನಿಗದಿಪಡಿಸಿರುವ ಸ್ಥಳಗಳಲ್ಲಿ ವಿದ್ಯುತ್ ಕಂಬಗಳನ್ನು ಸಂಗ್ರಹಿಸಿದ್ದೇವೆ. ಮಳೆಗಾಲದಲ್ಲಿ ಅಧಿಕ ಕೆಲಸ ಇರುವುದರಿಂದ ಅಗತ್ಯವಿರುವ ಸಿಬ್ಬಂದಿಯ ಜೊತೆಗೆ 150 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಟೆಂಡರ್ ಕರೆಯಲಾಗಿದೆ. ಸಾಮಾನ್ಯವಾಗಿ 5 ವಾಹನಗಳನ್ನು ಬಳಸುತ್ತಿದ್ದ ಸಿಬ್ಬಂದಿ ಈ ಸಂದರ್ಭದಲ್ಲಿ 20 ವಾಹನಗಳನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳದ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ, ಸೂರ್ಲಬ್ಬಿ, ಮಾದಾಪುರ, ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ಪಾಲಿಬೆಟ್ಟ ಭಾಗಗಳಲ್ಲಿ ಹೆಚ್ಚಿನ ಸಮಸ್ಯೆಗಳು ಕಂಡುಬರುತ್ತವೆ. ಟ್ರಾನ್ಸ್ ಫಾರ್ಮರ್ನಿಂದ ವಿದ್ಯುತ್ ಲೈನ್‍ಗಳು 50 ರಿಂದ 60 ಕಿ.ಮೀಟರ್ ದೂರಕ್ಕೆ ಸಂಪರ್ಕ ಕಲ್ಪಿಸಿರುವುದರಿಂದ ಸಮಸ್ಯೆಗಳು ಎದುರಾಗುತ್ತವೆ ಎಂದರು.

  • ನಿಮಗೇನು ಮಾನ ಮರ್ಯಾದೆ ಇಲ್ವಾ, ಸಮಸ್ಯೆ ಬಗೆಹರಿಸಲು ಲಂಚ ಕೇಳ್ತೀರಾ – ಮಂಡ್ಯ ರೈತರ ಆಕ್ರೋಶ

    ನಿಮಗೇನು ಮಾನ ಮರ್ಯಾದೆ ಇಲ್ವಾ, ಸಮಸ್ಯೆ ಬಗೆಹರಿಸಲು ಲಂಚ ಕೇಳ್ತೀರಾ – ಮಂಡ್ಯ ರೈತರ ಆಕ್ರೋಶ

    – ಅಧಿಕಾರಿಗಳು ಲಂಚ ಪಡೀತಾರೆ, ಲಂಚ ಪಡೆದರೂ ಕೆಲಸ ಮಾಡಲ್ಲ

    ಮಂಡ್ಯ: ನಿಮಗೇನು ಮಾನ ಮರ್ಯಾದೆ ಇಲ್ವಾ? ರೈತರ ಸಮಸ್ಯೆ ಬಗೆಹರಿಸಿ ಎಂದರೆ ಲಂಚ ಕೇಳ್ತೀರಾ? ಲಂಚ ತಗೊಂಡು ಕೆಲಸ ಮಾಡಿಕೊಡದೇ ಸತಾಯಿಸುತ್ತೀರಾ ಎಂದು ಮಂಡ್ಯ ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇಂದು ಶಾಸಕ ಸುರೇಶ್‍ಗೌಡ ಅಧ್ಯಕ್ಷತೆಯಲ್ಲಿ ಚೆಸ್ಕಾಂ ಎಂಡಿ ಗೋಪಾಲಕೃಷ್ಣ, ಮೈಸೂರು ಮುಖ್ಯ ಅಭಿಯಂತರ ಶ್ರೀನಿವಾಸ ಮೂರ್ತಿ ಮತ್ತು ನಾಗಮಂಗಲ ತಾಲೂಕಿನ ಚೆಸ್ಕಾಂ ಅಧಿಕಾರಿಗಳು ಸೇರಿದಂತೆ ಚೆಸ್ಕಾಂ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು.

    ಈ ಸಭೆಯ ಮಧ್ಯೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಂಡ್ಯ ರೈತರು, ಶಾಸಕ ಸುರೇಶ್‍ಗೌಡ ಅವರ ಮುಂದೆಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಮಗೇನು ಮಾನ ಮರ್ಯಾದೆ ಇಲ್ವಾ. ನಿಮ್ಮಿಂದ ಶಾಸಕರ ಮರ್ಯಾದೇನೂ ಕಳೆಯುತ್ತಿರಾ. ಸರಿಯಾಗಿ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅಧಿಕಾರಿಗಳು ಲಂಚ ಪಡೆಯುತ್ತಾರೆ. ಲಂಚ ಪಡೆದರೂ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

    ಈ ಸಭೆಯಲ್ಲಿ ರೈತರ ಕಷ್ಟಗಳನ್ನು ಅಲಿಸಿದ ಶಾಸಕ ಸುರೇಶ್‍ಗೌಡ ಮತ್ತು ಚೆಸ್ಕಾಂ ಅಧಿಕಾರಿಗಳು ಸಮಸ್ಯೆ ಬಗೆಹರಿಸುವುದಾಗಿ ರೈತರಿಗೆ ಭರವಸೆ ನೀಡಿದರು.

  • ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

    ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

    – ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ

    ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ಜಿಲ್ಲೆಯಲ್ಲಿ ತಣ್ಣೀರುಹಳ್ಳದಲ್ಲಿರುವ ಚೆಸ್ಕಾಂ ಮುಖ್ಯ ಕಾರ್ಯಪಾಲನಾ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2006ರಲ್ಲಿ ನಮ್ಮ ಸರ್ಕಾರದಲ್ಲಿ ಗ್ಯಾಂಗ್ ಮ್ಯಾನ್ ಗಳನ್ನು ನೇಮಕ ಮಾಡಿದ್ದೇವು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದೆ ಶೋಭಕ್ಕ ಸೇರಿ ಇವರೆಲ್ಲರೂ ರೇವಣ್ಣನ ಕಡೆಯವರು ಎಂದು ಲೈನ್‍ಮೆನ್ ನೇಮಕಾತಿಯನ್ನು ವಜಾ ಮಾಡಿದರು ಎಂದು ಆರೋಪಿಸಿದರು.

    2006ರಲ್ಲಿ ನಮ್ಮ ಸರ್ಕಾರದಲ್ಲಿ 450 ಚೆಸ್ಕಾಂ ಸಬ್ ಸ್ಟೇಷನ್ ಮಾಡಿದ್ದೆ. ಈಗ ಎಲ್ಲಾ ಆನ್ ಲೈನ್ ಗೀನ್ ಲೈನ್ ಅಂತಾರೆ ಆಗ ಯಾವುದೂ ಇರಲಿಲ್ಲ. ಈ ವಿಚಾರವಾಗಿ ಹಿಂದಿನ ಸರ್ಕಾರ ಏನು ಮಾಡಿದೆ ಎಂದು ಹೇಳಲಿ ನೋಡೋಣ. ಈ ಹಿಂದೆ ಕೆಇಬಿಗೆ 200 ಕೋಟಿ ಅನುದಾನ ಕೊಡಿಸಿದ್ದಕ್ಕೆ ನನಗೆ 10 ಕೋಟಿ ಲಂಚ ಕೊಡೋಕೆ ಬಂದಿದ್ದರು. ನಾನು ಲಂಚ ತೆಗೆದುಕೊಳ್ಳಲಿಲ್ಲಾ ಆದರ ಬದಲಾಗಿ ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಬ್ಲಾಕ್ ಮಾಡಿ ಎಂದು ಮಾಡಿಸಿದ್ದೀನಿ ಎಂದು ತಿಳಿಸಿದರು.

    ಕಳೆದ 2006ರಲ್ಲಿ ನಾವು ಚನ್ನರಾಯಪಟ್ಟಣ, ಹೊಳೆನರಸೀಪುರಕ್ಕೆ 35 ಸಾವಿರ ಟ್ರಾನ್ಸ್ ಫಾರ್ಮರ್‍ ಗಳನ್ನು ತರಿಸಿದ್ದೇವು. ಸರ್ಕಾರ ಬಿದ್ದ ತಕ್ಷಣ ಎಲ್ಲಾ ಟ್ರಾನ್ಸ್ ಫಾರ್ಮರ್‍ ಗಳನ್ನು ತುಂಬಿಕೊಂಡು ಹೋಗಿದ್ದರು. ಈಗ ರೈತರು ಯಾರೆಲ್ಲ ಟ್ರಾನ್ಸ್ ಫಾರ್ಮರ್ ಕೇಳಿದರೆ ಎಲ್ಲರಿಗೂ ಕೊಡಿ ಎಂದು ಹೇಳಿದರು.

    ತುಮಕೂರಿಗೆ 25 ಟಿಎಂಸಿ ನೀರು ಮೊದಲು ನೀಡಿದ್ದು ನಾವು ಈಗ ಹೊಸ ಎಂಪಿ ಬಂದಿದ್ದಾರೆ ಹೇಗೆ ನೀರು ಕೊಡಿಸುತ್ತಾರೆ ನೋಡೋಣ. ಇಡೀ ರಾಜ್ಯದಲ್ಲಿ ನನ್ನ ಮೇಲೆ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದ ಏಕೈಕ ಪ್ರತಿನಿಧಿ ನಾನು, ಯಡಿಯೂರಪ್ಪ ಸರ್ಕಾರದಲ್ಲಿ ನನ್ನ ಮೇಲೆ ತನಿಖೆ ಮಾಡಿದರು. ನನ್ನ ಜೊತೆ ಕೆಲ ಒಳ್ಳೆಯ ಅಧಿಕಾರಿಗಳ ಮೇಲೆ ತನಿಖೆ ಮಾಡಿಸಿದರಿ ಎಂದು ಕಿಡಿಕಾರಿದರು.

    ಖಾಸಗಿಯವರ ಪೈಪೋಟಿ ಮೇಲೆ ನಾವು ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುತ್ತಿದ್ದೇವೆ. ಈ ಬಾರಿ 1000 ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭ ಮಾಡಿದ್ದೇವೆ. ಕಳೆದ ಐದು ವರ್ಷದಲ್ಲಿ ಕೇಂದ್ರ ಸರ್ಕಾರ ಜನರಿಗೆ ಏನು ಮಾಡಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]