Tag: Chetan Kumar

  • ರಕ್ಷ ರಾಮ್ ಹುಟ್ಟು ಹಬ್ಬಕ್ಕೆ ‘ಬರ್ಮ’ ಹೊಸ ಪೋಸ್ಟರ್ ರಿಲೀಸ್

    ರಕ್ಷ ರಾಮ್ ಹುಟ್ಟು ಹಬ್ಬಕ್ಕೆ ‘ಬರ್ಮ’ ಹೊಸ ಪೋಸ್ಟರ್ ರಿಲೀಸ್

    ಟ್ಟಿಮೇಳ ಸೀರಿಯಲ್ ಮೂಲಕ ಕರುನಾಡ ಮನ-ಮನೆ ಗೆದ್ದಿರುವ ರಕ್ಷ್ ರಾಮ್ (Raksha Ram) ಇಂದು ಜನ್ಮದಿನದ ಸಂಭ್ರಮದಲ್ಲಿ ಇದ್ದಾರೆ. ಅವರ ಹುಟ್ಟುಹಬ್ಬದ (Birthday) ವಿಶೇಷವಾಗಿ ಬರ್ಮ ಚಿತ್ರತಂಡ ಹೊಸ ಪೋಸ್ಟರ್ ಉಡುಗೊರೆಯಾಗಿ ನೀಡಿದೆ. ರಕ್ಷ್ ಬರ್ತ್ ಡೇ ಅಂಗವಾಗಿ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಬರ್ಮ (Burma) ನಯಾ ಲುಕ್ ಅನಾವರಣ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ‌.

    ಬರ್ಮ ಹೊಸ ಪೋಸ್ಟರ್  (Poster) ಸಖತ್ ಇಂಪ್ರೆಸಿವ್ ಆಗಿದೆ. ಕೈಯಲ್ಲಿ ಕೊಡಲಿ ಹಿಡಿದು, ರಕ್ತಸಿಕ್ತ ಅವತಾರದಲ್ಲಿ ಮಾಸ್ ಗೆಟಪ್ ನಲ್ಲಿ ರಕ್ಷ್ ರಾಮ್ ಪ್ರತ್ಯಕ್ಷರಾಗಿದ್ದಾರೆ. ಅಂದಹಾಗೇ ಬರ್ಮ ಪಕ್ಕಾ ಆಕ್ಷನ್ ಎಂಟರ್‌ಟೈನರ್ ಸಿನಿಮಾ. ಈ ಸಿನಿಮಾ ಮೂಲಕ ಕಿರುತೆರೆ ನಟ ರಕ್ಷ್ ಪ್ಯಾನ್ ಇಂಡಿಯಾ ಸ್ಟಾರ್ ಎಮರ್ಜ್ ಆಗಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹೆಚ್ಚಿರುವ ರಕ್ಷ್ ರಾಮ್, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಶ್ರೀ ಸಾಯಿ ಆಂಜನೇಯ  ಕಂಪನಿಯಡಿ ಬರ್ಮ ಸಿನಿಮಾಗೆ ಹಣ ಹಾಕಿದ್ದಾರೆ.

    ಚೇತನ್ ಕುಮಾರ್ (Chetan Kumar) ನಿರ್ದೇಶಿಸುತ್ತಿರುವ ‘ಬರ್ಮ’ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಬಹದ್ದೂರ್’ ಹಾಗೂ ‘ಭರ್ಜರಿ’ ಸಿನಿಮಾದಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಬರ್ಮ ಮೂಲಕ ಮೂರನೇ ಬಾರಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.

    ‘ಜೇಮ್ಸ್’ ಹೊರತುಪಡಿಸಿ ಚೇತನ್ ಕುಮಾರ್ ನಿರ್ದೇಶಿಸಿದ ಅಷ್ಟೂ ಸಿನಿಮಾಗಳೂ ‘ಬ’ ಇಲ್ಲವೇ ‘ಭ’ದಿಂದಲೇ ಆರಂಭ ಆಗಿರುವುದು ವಿಶೇಷ. ಇವರು  ನಿರ್ದೇಶಿಸಿರುವ ಜೇಮ್ಸ್ ಸೇರಿದಂತೆ  ‘ಬಹದ್ದೂರ್’, ‘ಭರ್ಜರಿ’ ಹಾಗೂ ‘ಭರಾಟೆ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹಿಟ್ ಲಿಸ್ಟ್ ಸೇರಿವೆ. ಈಗ ಹೊಸ ಸಿನಿಮಾ ‘ಬರ್ಮ’ ಅಂತ ಟೈಟಲ್‌ ಇಟ್ಟಿದ್ದಾರೆ. ಈ ಮೂಲಕ ಮತ್ತೆ ಯಶಸ್ಸನ್ನು ಹುಡುಕಿ ಹೊರಟಿದ್ದಾರೆ ಚೇತನ್.

     

    ಶೂಟಿಂಗ್ ಅಖಾಡದಲ್ಲಿರುವ ಬರ್ಮ ಸಿನಿಮಾದಲ್ಲಿ ಶಾವರ್ ಅಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಡ ತಾರಾ ಬಳಗವೇ ಇದೆ. ಬರ್ಮ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗುತ್ತದೆ. ಆ ನಿಟ್ಟಿನಲ್ಲಿಯೇ ದೊಡ್ಡಮಟ್ಟದಲ್ಲಿಯೇ ಈ ಚಿತ್ರ ತಯಾರಾಗುತ್ತಿದೆ.

  • ಸ್ಯಾಂಡಲ್ ವುಡ್ ಗೆ ಶಾವಲಿ ಅಲಿ ಎಂಟ್ರಿ: ಬರ್ಮಗಾಗಿ ಬಂದ ಬಾಲಿವುಡ್ ನಟ

    ಸ್ಯಾಂಡಲ್ ವುಡ್ ಗೆ ಶಾವಲಿ ಅಲಿ ಎಂಟ್ರಿ: ಬರ್ಮಗಾಗಿ ಬಂದ ಬಾಲಿವುಡ್ ನಟ

    ಚೇತನ್ ಕುಮಾರ್ (Chetan Kumar) ಹಾಗೂ ರಕ್ಷ್ ಜೋಡಿಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಬರ್ಮ (Burma)ದ ಶೂಟಿಂಗ್ ಭರದಿಂದ ಸಾಗುತ್ತಿದೆ. ಟೈಟಲ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಅಂಗಳದಿಂದ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಬರ್ಮ ಬಳಗದಲ್ಲಿ ಯಾವ ಯಾವ ತಾರೆಯರು ಇರ್ತಾರೆ? ಯಾರು ಚಿತ್ರದ ಭಾಗವಾಲಿದ್ದಾರೆ ಅನ್ನೋದನ್ನು ಚಿತ್ರತಂಡ ರಿವೀಲ್ ಮಾಡಿರಲಿಲ್ಲ. ಆದ್ರೀಗ ನಿರ್ದೇಶಕ ಚೇತನ್ ಕುಮಾರ್ ಬರ್ಮಗಾಗಿ ಬಾಲಿವುಡ್ ತಾರೆಯನ್ನು ಕರೆದು ತಂದಿದ್ದಾರೆ.

    ಬರ್ಮ ಅಖಾಡಕ್ಕೀಗ ಬಾಲಿವುಡ್ ಸ್ಟಾರ್ ಎಂಟ್ರಿಯಾಗಿದೆ. ಹಿಂದಿ ಮಾತ್ರವಲ್ಲ ತೆಲುಗು ಸಿನಿಮಾಗಳಲ್ಲಿ ಮಿಂಚಿರುವ ಶಾವರ್ ಅಲಿ ಮತ್ತೊಮ್ಮೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಆದಿತ್ಯ ನಟನೆಯ ರೆಬಲ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಶಾವರ್ ಅಲಿ, ದರ್ಶನ್ ಅಭಿನಯದ ಚಕ್ರವರ್ತಿ ಸಿನಿಮಾದಲ್ಲಿಯೂ ವಿಲನ್ ಆಗಿ ಅಬ್ಬರಿಸಿದ್ದರು. ಇದೀಗ ಆರು ವರ್ಷದ ನಂತ್ರ ಮಗದೊಮ್ಮೆ ಕನ್ನಡ ಚಿತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಾಲಿವುಡ್ ಸಿನಿಮಾರಂಗದಿಂದ ಬಣ್ಣದ ಬದುಕು ಆರಂಭಿಸಿದ್ದ ಅವರೀಗ ಟಾಲಿವುಡ್, ಸ್ಯಾಂಡಲ್ ವುಡ್ ನಲ್ಲಿಯೂ ಮಿಂಚುತ್ತಿದ್ದು, ಚೇತನ್ ಕುಮಾರ್ ಸಾರಥ್ಯದಲ್ಲಿ ತಯಾರಾಗುತ್ತಿರುವ ಬರ್ಮ ಸಿನಿಮಾದಲ್ಲಿ ಸ್ಪೆಷಲ್ ರೋಲ್ ನಲ್ಲಿ ಶಾವರ್ ಅಲಿ ನಟಿಸುತ್ತಿದ್ದಾರೆ.

    ರಕ್ಷ್ ರಾಮ್ ಆಕ್ಷನ್ ಹೀರೋ ಆಗಿ ಅಬ್ಬರಿಸಲಿರುವ ಬರ್ಮ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬರ್ಮ ತೆರೆಗೆ ಬರಲಿದೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಹಿಂದೆ ‘ಬಹದ್ದೂರ್’ ಹಾಗೂ ‘ಭರ್ಜರಿ’ ಚಿತ್ರಗಳಲ್ಲಿ ಚೇತನ್ ಕುಮಾರ್ ಹಾಗೂ ವಿ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ‘ಬರ್ಮ’ ಚಿತ್ರದ ಮೂಲಕ ಮೂರನೇ ಬಾರಿಗೆ ಚೇತನ್ ಕುಮಾರ್ – ವಿ ಹರಿಕೃಷ್ಣ ಒಂದಾಗಿದ್ದಾರೆ.

     

    ಕಿರುತೆರೆ ಲೋಕದಲ್ಲಿ ಜನಪ್ರಿಯ ನಟರಾಗಿರುವ ರಕ್ಷ್ ಈಗ ‘ಬರ್ಮ’ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

  • ಮೀಸಲಾತಿ ಇದ್ದಿದ್ದರೇ ಭಾರತ ಸುಲಭವಾಗಿ ವಿಶ್ವಕಪ್‌ ಗೆಲ್ಲುತ್ತಿತ್ತು: ನಟ ಚೇತನ್‌

    ಮೀಸಲಾತಿ ಇದ್ದಿದ್ದರೇ ಭಾರತ ಸುಲಭವಾಗಿ ವಿಶ್ವಕಪ್‌ ಗೆಲ್ಲುತ್ತಿತ್ತು: ನಟ ಚೇತನ್‌

    ಬೆಂಗಳೂರು: ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ (Cricket Reservations) ಇದ್ದಿದ್ದರೇ ಟೀಂ ಇಂಡಿಯಾ ಸುಲಭವಾಗಿ ಈ ವಿಶ್ವಕಪ್‌ ಗೆಲ್ಲುತ್ತಿತ್ತು ಎಂದು ಪುನರುಚ್ಛರಿಸಿರುವ ನಟ ಚೇತನ್‌ (Chetan Kumar) ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ. ಕೋಟ್ಯಂತರ ಅಭಿಮಾನಿಗಳಿಗೆ ಟೀಂ ಇಂಡಿಯಾದ (Team India) ಸೋಲು ನೋವು ತರಿಸಿದ್ದು, ಕಣ್ಣೀರ ಕಡಲಲ್ಲಿ ತೇಲುವಂತೆ ಮಾಡಿದೆ. ಆದ್ರೆ ಆಗಾಗ್ಗೆ ಜಾಲತಾಣದಲ್ಲಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗುತ್ತಿರುವ ನಟ ಚೇತನ್‌ ಮತ್ತೊಮ್ಮೆ ಕ್ರಿಕೆಟ್‌ನಲ್ಲಿ ಮೀಸಲಾತಿ ತರಬೇಕೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: World Cup 2023: ನಾವು ಯಾವಾಗಲೂ ನಿಮ್ಮೊಂದಿಗಿರುತ್ತೇವೆ – ಟೀಂ ಇಂಡಿಯಾಕ್ಕೆ ಮೋದಿ ಅಭಯ

    ಈ ಕುರಿತು ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಬರೆದುಕೊಂಡಿರುವ ಚೇತನ್‌, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದು ಪುನರುಚ್ಛರಿಸಿದ್ದಾರೆ. ಇದಕ್ಕೆ ಬೆರಳೆಣಿಯಷ್ಟು ಮಂದಿ ಬೆಂಬಲ ಸೂಚಿಸಿದ್ದರೆ, ಟೀಂ ಇಂಡಿಯಾ ಕ್ರಿಕೆಟ್‌ ಫ್ಯಾನ್ಸ್‌ ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: World Cup 2023: ಆಸ್ಟ್ರೇಲಿಯಾ ಗೆಲುವಿಗೆ ಕಾರಣಗಳೇನು..?

    ಎಂತೆಂತಹ ಮನೋ ರೋಗಿಗಳನ್ನು ವೈದ್ಯರು ಗುಣಪಡಿಸಿದ್ದಾರೆ, ಸಾಧ್ಯವಾದರೆ ಇವರನ್ನು‌ ಗುಣಪಡಿಸಬೇಕು. ಏಕೆಂದರೆ ಇಂತಹ ಪ್ರತಿಭೆ ನಮ್ಮನ್ನು ಬಿಟ್ಟು ಹೋಗಬಾರದು ಎಂದು ತಿವಿದಿದ್ದಾರೆ. ಅಲ್ಲದೇ ನೆಮ್ಮದಿಯಾಗಿ ಅಳೋಕು ಈ ಜನ ಬಿಡ್ತಿಲ್ಲ, ಅಣ್ಣ ರಿಸರ್ವೇಶನ್ ಕ್ರಿಕೆಟ್ ಅಲ್ಲಿ ಬೇಕು ಅಂತ ಅಂಬೇಡ್ಕರ್ ಹೇಳಿದ್ರಾ? ಪೆರಿಯಾರ್ ಹೇಳಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

    ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 240 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 6ನೇ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿತು. ಇದನ್ನೂ ಓದಿ: 140 ಕೋಟಿ ಭಾರತೀಯರ ಕನಸು ಭಗ್ನ – ವಿಶ್ವ ವಿಜೇತ ಆಸ್ಟ್ರೇಲಿಯಾ

  • ರಕ್ಷ್ ರಾಮ್ ನಟಿಸುತ್ತಿರುವ  ‘ಬರ್ಮ’ ಚಿತ್ರಕ್ಕೆ ಚಾಲನೆ

    ರಕ್ಷ್ ರಾಮ್ ನಟಿಸುತ್ತಿರುವ ‘ಬರ್ಮ’ ಚಿತ್ರಕ್ಕೆ ಚಾಲನೆ

    ಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್  (Chetan Kumar) ನಿರ್ದೇಶನದ ಹಾಗೂ ‘ಗಟ್ಟಿಮೇಳ’ ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ (Raksh Ram) ನಾಯಕನಾಗಿ ನಟಿಸುತ್ತಿರುವ ‘ಬರ್ಮ’ (Burma) ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneet Raj Kumar) ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ ಎ.ಪಿ.ಅರ್ಜುನ್, ನಟ ಧೀರನ್ ರಾಮಕುಮಾರ್ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

    ಚೇತನ್ ಕುಮಾರ್ ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡಿರುತ್ತಾರೆ. ರಕ್ಷ್ ಈ ಸಿನಿಮಾ ಮೂಲಕ ನಾಯಕನಾಗುತ್ತಿದ್ದಾರೆ. ಇಡೀ ಬರ್ಮ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾರೈಸಿದರು. ಇದನ್ನೂ ಓದಿ:ನ.24ಕ್ಕೆ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಸ್ಟಾರ್ ಕಲಾವಿದರ ಸಾಥ್

    ಬರ್ಮ ನನ್ನ ನಿರ್ದೇಶನದ ಐದನೇ ಚಿತ್ರ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಚೇತನ್ ಕುಮಾರ್, ಬರ್ಮ ಎಂದರೆ ಬ್ರಹ್ಮ ವಾಸಿಸುವ ಜಾಗ ಹಾಗೂ ಒಂದು ಕಂಟ್ರಿಯ ಹೆಸರು ಕೂಡ. ಈ ಹೆಸರು ಚಿತ್ರದ ಕಥೆಗೆ ಪೂರಕವಾಗಿದೆ. ಹಾಗಾಗಿ ಬರ್ಮ ಎಂದು ಹೆಸರಿಟ್ಟಿದ್ದೇವೆ. ಚಿತ್ರದ ನಾಯಕ ರಕ್ಷ್ ಈಗಾಗಲೇ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದಾರೆ. ಅವರೆ ಈ ಚಿತ್ರದ ನಿರ್ಮಾಪಕರು ಕೂಡ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಐದು ಭಾಷೆಗಳ ಆಡಿಯೋ ಹಕ್ಕನ್ನು ಡಿ ಬಿಟ್ಸ್ ಸಂಸ್ಥೆ ಪಡೆದುಕೊಂಡಿದೆ. ವಿ.ಹರಿಕೃಷ್ಣ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಸಂಕೇತ್ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನ  ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ,  ಹೀಗೆ ಅನೇಕ ನುರಿತ ತಂತ್ರಜ್ಞರು ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅಕ್ಟೋಬರ್ 3 ರಿಂದ ಮಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಆದಿತ್ಯ ಮೆನನ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇಲ್ಲಿನ ಹಾಗೂ ಬೇರೆ ಭಾಷೆಗಳ ಹೆಸರಾಂತ ಕಲಾವಿದರು ನಮ್ಮ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ಕಲಾವಿದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದರು.

    ಪುಟ್ಟಗೌರಿ ಮದುವೆಯಿಂದ ಗಟ್ಟಿಮೇಳ ಧಾರಾವಾಹಿ ತನಕ ಸುಮಾರು ಮೂರು ಸಾವಿರ ಎಪಿಸೋಡ್ ಗಳಲ್ಲಿ ನಟಿಸಿದ್ದೇನೆ. ಕನ್ನಡಿಗರು ನನ್ನ ಪಾತ್ರವನ್ನು ಮೆಚ್ಚಿ ತೋರಿರುವ ಪ್ರೀತಿಗೆ ನಾನು ಚಿರ ಋಣಿ. ನಾನು ಚೇತನ್ ಅವರನ್ನು ಬಹಳ ವರ್ಷಗಳಿಂದ ನನ್ನ ಜೊತೆ ಸಿನಿಮಾ ಮಾಡಿ ಎಂದು ಕೇಳಿದ್ದೆ. ಅದು ಈಗ ಕೂಡಿ ಬಂದಿದೆ. ಇಡೀ ಕುಟುಂದವರೆಲ್ಲಾ ಒಟ್ಟಾಗಿ ಕುಳಿತು ನೋಡುವಂತಹ ಒಳ್ಳೆಯ ಕಥೆಯನ್ನು ನಿರ್ದೇಶಕರು ಸಿದ್ದ ಮಾಡಿಕೊಂಡಿದ್ದಾರೆ. ನಮ್ಮ ಸಂಸ್ಥೆಯ ಮೂಲಕ ನಾನು ಹಾಗೂ ನನ್ನ ಪತ್ನಿ ಅನುಶಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ ನಮಗಿರಲಿ ಎಂದರು ನಾಯಕ ರಕ್ಷ್ ರಾಮ್.

    ಗಟ್ಟಿಮೇಳ ಧಾರಾವಾಹಿ ನಿರ್ಮಾಣ ಮಾಡಿರುವ ನಮ್ಮ ಶ್ರೀ ಸಾಯಿ ಆಂಜನೇಯ ಕಂಪನಿ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನನ್ನ ಪತಿ ರಕ್ಷ್ ಅವರೆ ಈ ಚಿತ್ರದ ನಾಯಕನಾಗಿರುವುದು ಖುಷಿಯ ವಿಷಯ ಎನ್ನುತ್ತಾರೆ ನಿರ್ಮಾಪಕಿ ಅನುಶಾ. ಹಾಡುಗಳ ಬಗ್ಗೆ ಹರಿಕೃಷ್ಣ ಮಾಹಿತಿ ನೀಡಿದರು. ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಈ ಚಿತ್ರದ ಐದು ಭಾಷೆಗಳ ಆಡಿಯೋ ಹಕ್ಕನ್ನು ಪಡೆದಿರುವುದಾಗಿ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ

    ‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ

    ಕಿರುತೆರೆಯ ಹೆಸರಾಂತ ನಟ, ಗಟ್ಟಿಮೇಳ ಖ್ಯಾತಿಯ ರಕ್ಷ್ ರಾಮ್ (Raksh Ram) ಅವರ ಹೊಸ ಸಿನಿಮಾಗೆ ಇಂದು ಬೆಂಗಳೂರಿನಲ್ಲಿ ಮುಹೂರ್ತ ನೆರವೇರಲಿದೆ. ಈ ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಲಿದ್ದಾರೆ.

    ಜೇಮ್ಸ್ ನಂತರ ನಿರ್ದೇಶಕ ಚೇತನ್ ಕುಮಾರ್ (Chetan Kumar) ಯಾವ ಸಿನಿಮಾ ಮಾಡಲಿದ್ದಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬದ ದಿನದಂದು ಹೊಸ ಸಿನಿಮಾ (New Movie) ಘೋಷಣೆ ಮಾಡಿದ್ದಾರೆ ಚೇತನ್. ಆದರೆ, ಯಾವ ವಿವರಗಳನ್ನೂ ಅವರು ಬಿಟ್ಟುಕೊಟ್ಟಿರಲಿಲ್ಲ. ಇಂದು ಒಂದಷ್ಟು ಮಾಹಿತಿ ಹೊರಬರಹುದು. ಇದನ್ನೂ ಓದಿ:ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ದುನಿಯಾ ವಿಜಯ್ ಪುತ್ರಿಯರು

    ಈ ಹಿಂದೆ ಹೊಸ ಸಿನಿಮಾದ ಕುರಿತಂತೆ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದ್ದರು ಚೇತನ್, ‘ಹೊಸ ಸಿನಿಮಾವನ್ನು ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ಬೆಳಗ್ಗೆ 11.11ಕ್ಕೆ ಘೋಷಣೆ ಮಾಡುತ್ತಿದ್ದೇನೆ. ಆ ಸಿನಿಮಾ ಕುರಿತು ಹೆಚ್ಚಿನ ಮಾಹಿತಿಯನ್ನು ಅಂದು ನೀಡುತ್ತೇನೆ’ ಎಂದು ಹೇಳಿಕೊಂಡಿದ್ದರು.

     

    ಬಹದ್ದೂರ್(Bahaddar) , ಭರ್ಜರಿ, ಭರಾಟೆ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಅನಿಸಿಕೊಂಡವರು ಚೇತನ್. ಹಲವು ಸಿನಿಮಾಗಳಿಗೆ ಹಾಡು, ಡೈಲಾಗ್ ಕೂಡ ಬರೆದವರು. ಅಪ್ಪು ನಟನೆಯ ಕೊನೆಯ ಚಿತ್ರಕ್ಕೆ ಇವರದ್ದೇ ನಿರ್ದೇಶನವಿತ್ತು. ಆ ಸಿನಿಮಾ ನಂತರ ಇದೀಗ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಹಾಗಾಗಿ ಸಿನಿಮಾದ ಅಪ್ ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್: ಗಟ್ಟಿಮೇಳ ರಕ್ಷ್ ಹೀರೋ

    ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್: ಗಟ್ಟಿಮೇಳ ರಕ್ಷ್ ಹೀರೋ

    ಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ (Chetan Kumar) ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ  ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ‘ಬರ್ಮ’ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ರಾಮ್ (Raksha Ram) ನಾಯಕ. ಅಂದಹಾಗೇ ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ.

    ಬರ್ಮ (Burma) ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ. ವಿ.ಹರಿಕೃಷ್ಣ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬದಂದು ವೈಷ್ಣವಿ ಗೌಡ ಫ್ಯಾನ್ಸ್‌ಗೆ ಸಿಹಿಸುದ್ದಿ

    ಬರ್ಮ ಸಿನಿಮಾ ಅನೌನ್ಸ್ ದಿನವೇ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಇದಪ್ಪ ಚೇತನ್ ಸಿನಿಮಾಗಳ ರೆಕಾರ್ಡ್ ಎನ್ನುತ್ತಿದ್ದಾರೆ ಗಾಂಧಿನಗರದ ಮಂದಿ. ಈಗಾಗಲೇ ರಕ್ಷ್ ರಾಮ್ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದು,  ಬರ್ಮ ಮೂಲಕ ಪ್ಯಾನ್ ಇಂಡಿಯಾ ಪ್ರಪಂಚದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

     

    ನಿರ್ದೇಶಕ ಚೇತನ್ ಕುಮಾರ್ ಪ್ರತಿ ಸಿನಿಮಾದಲ್ಲೊಂದು ಹೊಸತನ ಹೊತ್ತು ತರುತ್ತಾರೆ. ಅದೇ ನಿರೀಕ್ಷೆ ಬರ್ಮ ಸಿನಿಮಾ ಮೇಲೆಯೂ ಇದೆ. ಮುಂದಿನ ತಿಂಗಳು ಸೆಪ್ಟೆಂಬರ್ ನಿಂದ ಶೂಟಿಂಗ್ ಅಖಾಡಕ್ಕೆ ಚಿತ್ರತಂಡ ಧುಮುಕಲಿದೆ. ಇನ್ನುಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಒಂದೊಂದಾಗಿ ಚಿತ್ರತಂಡ ನೀಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೇಮ್ಸ್’ ಖ್ಯಾತಿಯ ನಿರ್ದೇಶಕ ಚೇತನ್ ಹೊಸ ಸಿನಿಮಾ: ಆ.25ಕ್ಕೆ ಘೋಷಣೆ

    ‘ಜೇಮ್ಸ್’ ಖ್ಯಾತಿಯ ನಿರ್ದೇಶಕ ಚೇತನ್ ಹೊಸ ಸಿನಿಮಾ: ಆ.25ಕ್ಕೆ ಘೋಷಣೆ

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ (James) ಅದನ್ನು ನಿರ್ದೇಶನ ಮಾಡಿದ್ದ ಚೇತನ್ ಕುಮಾರ್ (Chetan Kumar), ಮುಂದೆ ಯಾವ ಸಿನಿಮಾ ಮಾಡಲಿದ್ದಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದೇ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬದ ದಿನದಂದು ಹೊಸ ಸಿನಿಮಾ (New Movie) ಘೋಷಣೆ ಮಾಡುವುದಾಗಿ ಚೇತನ್ ಹೇಳಿದ್ದಾರೆ.

    ಹೊಸ ಸಿನಿಮಾದ ಕುರಿತಂತೆ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಚೇತನ್, ‘ಹೊಸ ಸಿನಿಮಾವನ್ನು ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ಬೆಳಗ್ಗೆ 11.11ಕ್ಕೆ ಘೋಷಣೆ ಮಾಡುತ್ತಿದ್ದೇನೆ. ಆ ಸಿನಿಮಾ ಕುರಿತು ಹೆಚ್ಚಿನ ಮಾಹಿತಿಯನ್ನು ಅಂದು ನೀಡುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.

     

    ಬಹದ್ದೂರ್(Bahaddar) , ಭರ್ಜರಿ, ಭರಾಟೆ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಅನಿಸಿಕೊಂಡವರು ಚೇತನ್. ಹಲವು ಸಿನಿಮಾಗಳಿಗೆ ಹಾಡು, ಡೈಲಾಗ್ ಕೂಡ ಬರೆದವರು. ಅಪ್ಪು ನಟನೆಯ ಕೊನೆಯ ಚಿತ್ರಕ್ಕೆ ಇವರದ್ದೇ ನಿರ್ದೇಶನವಿತ್ತು. ಆ ಸಿನಿಮಾ ನಂತರ ಇದೀಗ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಹಾಗಾಗಿ ಸಿನಿಮಾದ ಅಪ್ ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಷಾಢ ಬಳಿಕ ಸಿದ್ದರಾಮಯ್ಯ ಮನೆ ಶಿಫ್ಟ್ ವಿಚಾರ – ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು; ನಟ ಚೇತನ್ ಪ್ರಶ್ನೆ

    ಆಷಾಢ ಬಳಿಕ ಸಿದ್ದರಾಮಯ್ಯ ಮನೆ ಶಿಫ್ಟ್ ವಿಚಾರ – ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು; ನಟ ಚೇತನ್ ಪ್ರಶ್ನೆ

    ಬೆಂಗಳೂರು: ಆಷಾಢದ (Ashadha Masa) ‘ಅಶುಭ’ ಅವಧಿಯ ನಂತರ ಹೊಸ ಮನೆಗೆ ಶಿಫ್ಟ್ ಆಗಲು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪ್ಲಾನ್ ಮಾಡಿದ್ದಾರೆ. ನಿಜವಾದ ವೈಜ್ಞಾನಿಕ ಚಿಂತಕನಿಗೆ ಇಂತಹ ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು ಎಂದು ನಟ ಚೇತನ್ (Chetan Kumar) ಪ್ರಶ್ನಿಸಿದ್ದಾರೆ.

    ಈ ಹಿಂದೆ ಬಿಜೆಪಿ ಸರ್ಕಾರದ (BJP Government) ವಿರುದ್ಧ ಕಿಡಿ ಕಾರುತ್ತಿದ್ದ ನಟ ಚೇತನ್, ಈಗ ಸಿದ್ದರಾಮಯ್ಯ ವಿರುದ್ಧವೂ ಕಿಡಿ ಕಾರಿದ್ದಾರೆ. ಆಷಾಢದ ಬಳಿಕ ಸರ್ಕಾರಿ ಹೊಸ ಬಂಗಲೆಗೆ ಸಿಎಂ ಸಿದ್ದರಾಮಯ್ಯ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಚೇತನ್, ಸಿಎಂ ನಡೆಗೆ ವ್ಯಂಗ್ಯವಾಡಿದ್ದಾರೆ.

    ಆಷಾಢದ ‘ಅಶುಭ’ ಅವಧಿಯ ನಂತರ ಹೊಸ ಮನೆಗೆ ಶಿಫ್ಟ್ ಆಗಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ನಿಜವಾದ ವೈಜ್ಞಾನಿಕ ಚಿಂತಕನಿಗೆ ಇಂತಹ ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು? 2 ತಿಂಗಳ ಹಿಂದೆ ‘ದೇವರ’ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು. ಈಗ ಆಷಾಢ ಅಸಂಬದ್ಧತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಂದ್ರಯಾನ-3 ಇದರ ಕೆಲವು ವಿಜ್ಞಾನಿಗಳ ಬೂಟಾಟಿಕೆಯ ಜೊತೆಗೆ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅವಳಿನ್ನೂ ಮುಸಲ್ಮಾನಳಲ್ಲ, ಪಾಕಿಸ್ತಾನಕ್ಕೆ ಬರೋದು ಬೇಡ – ಪಾಕ್ ಮಹಿಳೆ ಪೋಷಕರ ಫಸ್ಟ್ ರಿಯಾಕ್ಷನ್

    ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದಾಗ, ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಮೇಕೆದಾಟು ಯೋಜನೆ ಕೆಟ್ಟ ಯೋಜನೆ ಎಂದು ಜರಿದಿದ್ದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು

    ಇಸ್ರೋ ವಿಜ್ಞಾನಿಗಳ ಪೂಜೆಗೂ ಚೇತನ್ ವಿರೋಧ:
    ಚಂದ್ರಯಾನ-3 (Chandrayaan 3) ಗಗನನೌಕೆ ಉಡಾವಣೆಗೂ ಮುನ್ನ ಇಸ್ರೋ (ISRO) ವಿಜ್ಞಾನಿಗಳು ತಿರುಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಇದು ತುಂಬಾ ಅಸಂಬದ್ಧ ಮತ್ತು ಬೂಟಾಟಿಕೆ ಎಂದು ಚೇತನ್ ಟೀಕಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುರ್ಬಲರನ್ನ ಬಲಿಪಶು ಮಾಡಲು ನಮ್ಮ ವ್ಯವಸ್ಥೆ ಯಾವುದೇ ಹಂತಕ್ಕೆ ಹೋಗುತ್ತದೆ – ನಟ ಚೇತನ್‌

    ದುರ್ಬಲರನ್ನ ಬಲಿಪಶು ಮಾಡಲು ನಮ್ಮ ವ್ಯವಸ್ಥೆ ಯಾವುದೇ ಹಂತಕ್ಕೆ ಹೋಗುತ್ತದೆ – ನಟ ಚೇತನ್‌

    – ಕುಸ್ತಿಪಟುಗಳ ಪ್ರತಿಭಟನೆಗೆ ನಟ ಚೇತನ್‌ ಬೆಂಬಲ

    ಬೆಂಗಳೂರು: ಭಾರತೀಯ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ಕಳೆದ ಕೆಲವು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Chetan Kumar) ಬೆಂಬಲ ಸೂಚಿಸಿದ್ದಾರೆ.

    ಈ ಕುರಿತು ಫೇಸ್‌ಬುಕ್‌ ವಾಲ್‌ನಲ್ಲಿ ಪ್ರತಿಕ್ರಿಯಿಸಿರುವ ಚೇತನ್‌, ಕುಸ್ತಿಯು ನಮ್ಮ ದೇಶದ ಅತ್ಯಂತ ಯಶಸ್ವಿ ಒಲಿಂಪಿಕ್ ಕ್ರೀಡೆಯಾಗಿದೆ. ತಮ್ಮ ನ್ಯಾಯಕ್ಕಾಗಿ ನಮ್ಮ ಕುಸ್ತಿಪಟುಗಳ ಅಹಿಂಸಾತ್ಮಕ ಹೋರಾಟ ಮತ್ತು ಹೊಸ ಸಂಸತ್ತಿನ ಇತ್ತೀಚಿನ ಪ್ರತಿಭಟನೆಯ ಕಾರಣ, ರಾಷ್ಟ್ರ- ಪ್ರಾಯೋಜಿತ ಆಕ್ರಮಣ ಮತ್ತು ಎಫ್‌ಐಆರ್‌ಗಳನ್ನು ಅವರು ಎದುರಿಸಬೇಕಾಯಿತು ಎಂಬುದು ದುಃಖಕರವಾಗಿದೆ. ಶಕ್ತಿಶಾಲಿಗಳನ್ನು ರಕ್ಷಿಸಲು ಮತ್ತು ದುರ್ಬಲರನ್ನು ಬಲಿಪಶು ಮಾಡಲು ನಮ್ಮ ವ್ಯವಸ್ಥೆಯು ಯಾವುದೇ ಹಂತಕ್ಕೆ ಹೋಗುತ್ತದೆ/ಹೋಗಬಹುದು ಎಂಬುದಕ್ಕೆ ಇದೇ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಭಾನುವಾರ ಹೊಸ ಸಂಸತ್‌ ಭವನದ (New Parliament Building) ಎದುರು ಪ್ರತಿಭಟನೆ ನಡೆಸಲು ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ದೆಹಲಿ ಪೊಲೀಸರು ತಡೆದಿದ್ದರು. ಅವರು ಬ್ಯಾರಿಕೇಡ್‌ ಕಿತ್ತೆಸೆದು ಪ್ರತಿಭಟನೆಗೆ ತೆರಳಲು ಮುಂದಾದಾಗ ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು, ಬಳಿಕ ಅವರನ್ನು ವಶಕ್ಕೆ ಪಡೆದಿದ್ದರು. ಒಲಿಂಪಿಕ್‌ ಪದಕ ವಿಜೇತರಾದ ಬಜರಂಗ್‌ ಪೂನಿಯಾ, ವಿನೇಶ್‌ ಫೋಗಟ್‌, ಸಂಗೀತಾ ಫೋಗಟ್‌ ಹಾಗೂ ಸಾಕ್ಷಿ ಮಲಿಕ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

    ಪ್ರತಿಭಟನೆಯ ನಂತರ ಹಲವು ಕುಸ್ತಿಪಟುಗಳ ವಿರುದ್ಧ IPC ಸೆಕ್ಷನ್ 147, 149, 186, 188, 332, 353 PDPP ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು. ಅಲ್ಲದೇ ದೆಹಲಿಯ ಜಂತರ್‌ ಮಂತರ್‌ನಲ್ಲೂ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದಾರೆ. ಕ್ರೀಡಾಪಟುಗಳ ವಿರುದ್ಧ ಎಫ್‌ಐಆರ್‌ ದಾಖಲಾದ ನಂತರ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

  • `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    ಬೆಂಗಳೂರು: ʻದಿ ಕೇರಳ ಸ್ಟೋರಿʼ (The Kerala Story) ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್‌ ಹಾಸನ್‌ (Kamal Haasan) ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Chetan Kumar) ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗಳ ವಿರುದ್ಧ ಇದ್ದೇನೆ’ ಎಂದಿದ್ದಾರೆ. ನಾವು ರಾಜಕೀಯವಾಗಿ/ಸೈದ್ಧಾಂತಿಕವಾಗಿ ವಿರೋಧಿಸುವುದನ್ನು ಪ್ರಾಪಗಾಂಡ ಎಂದು ಕರೆಯುತ್ತೇವೆ. ‘ಕರ್ಣನ್’ ಮತ್ತು ‘ಜೈ ಭೀಮ್’ ಅನ್ನು ಜಾತಿ ವಿರೋಧಿ ಅಥವಾ ಪೊಲೀಸ್ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? ಬಲವಾದ ಪ್ರಜಾಪ್ರಭುತ್ವಕ್ಕಾಗಿ, ವಿಭಿನ್ನ ಸಿದ್ಧಾಂತಗಳು ಕೂಡ ಅಸ್ತಿತ್ವದಲ್ಲಿ ಇರಬೇಕು/ ಇರುತ್ತವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ‘ದಿ ಕೇರಳ ಸ್ಟೋರಿ’ ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು.

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಯಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.