Tag: Chetan Kumar

  • ಸಲಾಂ ಸೋಲ್ಜರ್ ಬದಲು ಸಲಾಂ ಅಪ್ಪು ಅಂತಿದ್ದಾರೆ ಫ್ಯಾನ್ಸ್ : ಜೇಮ್ಸ್ ಮತ್ತೊಂದು ಹಾಡು ರಿಲೀಸ್

    ಸಲಾಂ ಸೋಲ್ಜರ್ ಬದಲು ಸಲಾಂ ಅಪ್ಪು ಅಂತಿದ್ದಾರೆ ಫ್ಯಾನ್ಸ್ : ಜೇಮ್ಸ್ ಮತ್ತೊಂದು ಹಾಡು ರಿಲೀಸ್

    ದಿನದಿಂದ ದಿನಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ’ಜೇಮ್ಸ್’ ಸಿನಿಮಾದ ಕ್ರೇಜ್ ಹೆಚ್ಚಾಗುತ್ತಿದೆ. ಅಪ್ಪು ಅಭಿಮಾನಿಗಳು ಈ ಸಿನಿಮಾವನ್ನು ಭಾವನಾತ್ಮಕವಾಗಿ ರಿಸೀವ್ ಮಾಡಿರುವುದರಿಂದ ಒಂದು ರೀತಿಯಲ್ಲಿ ಜಾತ್ರೆಯಂತೆ ಸಿನಿಮಾ ರಿಲೀಸ್ಗೆ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ : Breaking- ಉಪೇಂದ್ರ ಹೊಸ ಚಿತ್ರದ ಪೋಸ್ಟರ್ : ನೀವು ಏನ್ ಬೇಕಾದ್ರೂ ಅಂದ್ಕೊಳ್ಳಿ ಎಂದ ಉಪ್ಪಿದಾದ

    ಈಗಾಗಲೇ ರಾಜ್ಯಾದ್ಯಂತ ಸಿನಿಮಾದ ಪೋಸ್ಟರ್ಸ್ ಗೋಡೆಗಳನ್ನು ಅಲಂಕರಿಸಿವೆ. ಚಿತ್ರಮಂದಿರಗಳಲ್ಲಿ ಕಟೌಟ್ ಎದ್ದು ನಿಂತಿವೆ. ಟೀ ಶರ್ಟ್, ಆಟೋಗಳ ಮೇಲೆ ಅಪ್ಪು ರಾರಾಜಿಸುತ್ತಿದ್ದಾರೆ. ಅಲ್ಲದೇ, ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಪ್ಪು ಉತ್ಸವವೇ ನಡೆಯುತ್ತಿದೆ. ಅಷ್ಟರ ಮಟ್ಟಿಗೆ ಪುನೀತ್ ಬರ್ತಡೆ ಮತ್ತು ಜೇಮ್ಸ್ ಸಿನಿಮಾದ ರಿಲೀಸ್ ತಯಾರಿ ನಡೆದಿದೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಈ ಹೊತ್ತಿನಲ್ಲಿ ಸಿನಿಮಾದ ಮತ್ತೊಂದು ಗೀತೆಯನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ‘ಸಲಾಂ ಸೋಲ್ಜರ್’ ಲಿರಿಕಲ್ ಸಾಂಗ್ ಅನ್ನು ಇಂದು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ನಾಡಿನ ಸಮಸ್ತ ಸೈನಿಕರಿಗೆ ಅರ್ಪಿಸಿರುವುದಾಗಿ ನಿರ್ದೇಶಕ ಚೇತನ್ ತಿಳಿಸಿದ್ದಾರೆ. ಈ ಹಾಡಿನಲ್ಲಿ ಪುನೀತ್ ರಾಜ್ ಕುಮಾರ್ ಅವರು ಸೈನಿಕನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಗೆಟಪ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ‘ಸಲಾಂ ಅಪ್ಪು’ ಎಂದೇ ಜೈಕಾರ ಹಾಕುತ್ತಿದ್ದಾರೆ. ಈ ಗೀತೆಯನ್ನು ಸ್ವತಃ ನಿರ್ದೇಶಕ ಚೇತನ್ ಕುಮಾರ್ ಅವರೇ ಬರೆದದ್ದು, ಸಂಜಿತ್ ಹೆಗಡೆ ಮತ್ತು ಚರಣ್ ರಾಜ್ ಹಾಡಿದ್ದಾರೆ. ಇದನ್ನೂ ಓದಿ : ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದರಿಂದ, ಪ್ರಿ ರಿಲೀಸ್ ಇವೆಂಟ್ ಕೂಡ ಅದ್ಧೂರಿಯಾಗಿ ನಡೆಲಿದೆ. ಬೆಂಗಳೂರಿನಲ್ಲಿ ಇವೆಂಟ್ ಮಾಡಲು ಅರಮನೆ ಮೈದಾನ ಕೂಡ ಸಿದ್ಧವಾಗಿದೆ. ಮಾ.13 ರಂದು ಇಡೀ ಸಿನಿಮಾ ರಂಗವೇ ಅಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದೆ.

  • ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಜೇಮ್ಸ್ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಚಿತ್ರತಂಡ ಸಾಕಷ್ಟು ಗೊಂದಲದಲ್ಲಿದೆ. ಭಾರೀ ನಿರೀಕ್ಷೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ಕಾರ್ಯಕ್ರಮ ಎಲ್ಲಿ ಮಾಡಬೇಕು ಎನ್ನುವ ಸಂಕಷ್ಟಕ್ಕೆ ಸಿಲುಕಿದ್ದಾರೆ ಜೇಮ್ಸ್ ನಿರ್ಮಾಪಕರು. ಇದನ್ನೂ ಓದಿ : ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಈ ಹಿಂದೆ ಜೇಮ್ಸ್ ಸಿನಿಮಾದ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹೊಸಪೇಟೆಯಲ್ಲಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ನಂತರ ದಿನಗಳಲ್ಲಿ ಅದು ಮೈಸೂರು ಅಂದಾಯಿತು. ಈಗ ಮೈಸೂರಿನಲ್ಲಿಯೂ ಇವೆಂಟ್ ನಡೆಯುತ್ತಿಲ್ಲ. ಅಲ್ಲಿಂದ ಇದೀಗ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದನ್ನೂ ಓದಿ : ದೌರ್ಜನ್ಯ ಖಂಡಿಸಿ, ಭಾವನಾ ಮೆನನ್ ಬೆಂಬಲಕ್ಕೆ ನಿಂತ ತಮಿಳು ನಟ ಸೂರ್ಯ

    ಮಾ.13ರಂದು ಅದ್ಧೂರಿಯಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಅಂದು ಬಹುತೇಕ ಚಿತ್ರರಂಗವೇ ಇದರಲ್ಲಿ ಭಾಗಿಯಾಗಲಿದೆ. ಮೊದಲ ಬಾರಿಗೆ ಬಹುತೇಕ ಕಲಾವಿದರು ಒಂದಾಗಿ ಸೇರುತ್ತಿರುವ ಕಾರ್ಯಕ್ರಮ ಎನ್ನುವ ಹೆಗ್ಗಳಿಕೆಗೂ ಇದು ಪಾತ್ರವಾಗಲಿದೆ. ಇದನ್ನೂ ಓದಿ : ರಕ್ಷಿತ್ ಶೆಟ್ಟಿ ‘777 ಚಾರ್ಲಿ’ ಸಿನಿಮಾ ಏನಾಯ್ತು? ಗುಡ್ ನ್ಯೂಸ್ ಕೊಡುತ್ತಂತೆ ಚಿತ್ರತಂಡ

    ಸಿನಿಮಾ ಬಿಡುಗಡೆಗಾಗಿ ಈಗಾಗಲೇ ಚಿತ್ರತಂಡ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ದೇಶ ಮತ್ತು ವಿದೇಶಗಳಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ಪುನೀತ್ ನಟನೆಯ ಕೊನೆಯ ಸಿನಿಮಾ ಇದಾಗಿದ್ದರಿಂದ ಅಭಿಮಾನಿಗಳು ಕೂಡ ಈ ಚಿತ್ರವನ್ನು ಭಾವನಾತ್ಮಕವಾಗಿ ತಗೆದುಕೊಂಡಿದ್ದಾರೆ.

  • ಆ ಏರಿಯಾದಲ್ಲಿ ಪುನೀತ್ ನಟನೆಯ ಜೇಮ್ಸ್ ರಿಲೀಸ್ ಗೆ 12 ಕೋಟಿ ಕೇಳಿದ್ರಾ ವಿತರಕರು?

    ಆ ಏರಿಯಾದಲ್ಲಿ ಪುನೀತ್ ನಟನೆಯ ಜೇಮ್ಸ್ ರಿಲೀಸ್ ಗೆ 12 ಕೋಟಿ ಕೇಳಿದ್ರಾ ವಿತರಕರು?

    ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಕುರಿತಾದ ಸುದ್ದಿಗಳು ಕ್ಷಣಕ್ಕೊಂದು ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿವೆ. ಮಾ.17 ರಂದು ಅಪ್ಪು ಹುಟ್ಟಿದ ದಿನ. ಅಂದೇ ಈ ಸಿನಿಮಾ ರಿಲೀಸ್ ಆಗುತ್ತಿದೆ. ಜತೆಗೆ ಪುನೀತ್ ನಾಯಕನಾಗಿ ನಟಿಸಿರುವ ಕೊನೆಯ ಚಿತ್ರವಿದು. ಅಲ್ಲದೇ, ಮೂವರು ಸಹೋದರರು ಇದೇ ಮೊದಲ ಬಾರಿಗೆ ತೆರೆಯ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಚಿತ್ರಕ್ಕೆ ಸಾಕಷ್ಟು ಬೇಡಿಕೆ ಬರುತ್ತಿದೆ. ಇದನ್ನೂ ಓದಿ : ಸೋನಾಕ್ಷಿ ಸಿನ್ಹಾ ಮೋಸ ಮಾಡಿದ್ರಾ? ಅಸಲಿ ಕಥೆ ಏನು?

    ಸಿನಿಮಾ ಬಿಡುಗಡೆ ದಿನ ಅಭಿಮಾನಿಯೊಬ್ಬ ಹತ್ತು ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿ ಪುನೀತ್ ಹಬ್ಬವನ್ನೇ ಆಚರಿಸುತ್ತಿದ್ದಾನೆ. ರಾಜ್ಯಾದ್ಯಂತ ಅವತ್ತು ಪುನೀತ್ ಕಟೌಟ್ ಗೆ ಹಾರ ಮತ್ತು ಹಾಲಿನ ಅಭಿಷೇಕ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅಲ್ಲದೇ, ಬೃಹತ್ ಕಟೌಟ್ ಗಳು ಕೂಡ ಚಿತ್ರಮಂದಿರದ ಮುಂದೆ ಎದ್ದು ನಿಲ್ಲಲಿವೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಐದು ಕಾಂಟ್ರವರ್ಸಿಗಳು

    ಇಷ್ಟೆಲ್ಲದರ ಮಧ್ಯ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ವಿತರಕರು ಮುಗಿಬಿದ್ದು ಸಿನಿಮಾ ಖರೀದಿಸುತ್ತಿದ್ದಾರೆ. ಈಗಾಗಲೇ ಆಯಾ ಭಾಗ ಮತ್ತು ಏರಿಯಾಗಳಲ್ಲಿ ವಿತರಿಸಲು ಹಲವರು ಮುಂದೆ ಬಂದಿದ್ದಾರೆ. ಆದರೆ, ಆ ಏರಿಯಾ ಮಾತ್ರ ಭಾರೀ ಡಿಮಾಂಡ್ ಕ್ರಿಯೇಟ್ ಮಾಡಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಅಂತಾರಾಷ್ಟ್ರೀಯ ಮಹಿಳಾ ದಿನ: ನಟಿಯ ವರ್ಕೌಟ್ ವಿಡಿಯೋ ಗಿಫ್ಟ್ ಕೊಡ್ತಾರಂತೆ ರಾಮ್ ಗೋಪಾಲ್ ವರ್ಮಾ

    ಸಿನಿಮಾ ರಂಗದವರಿಗೆ ಬಿಕೆಟಿ ಏರಿಯಾ ಅಂದರೆ ಚಿನ್ನದ ಮೊಟ್ಟೆ ಇಡುವ ಕೋಳಿ ಇದ್ದಂತೆ. ವಿತರಕರ ಭಾಷೆಯಲ್ಲಿ ಬಿಕೆಟಿ ಅಂದರೆ ಬೆಂಗಳೂರು-ಕೋಲಾರ ಹಾಗೂ ತುಮಕೂರು ಎಂದರ್ಥ. ಈ ಮೂರು ಏರಿಯಾಗಳಲ್ಲಿ ಚಿತ್ರ ಬಿಡುಗಡೆ ವಿತರಕರೊಬ್ಬರು ನಿರ್ಮಾಪಕರಿಗೆ ಬರೋಬ್ಬರಿ 12 ಕೋಟಿ ಆಫರ್ ಕೊಟ್ಟರಂತೆ. ಆದರೆ, ನಿರ್ಮಾಪಕರು ಈ ಆಫರ್ ಒಪ್ಪಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ಪ್ರಮಾಣದಲ್ಲಿ ಇದೊಂದೆ ಏರಿಯಾಗೆ ಇಷ್ಟು ಮೊತ್ತದ ಹಣಕ್ಕೆ ಎಂದೂ ವಿತರಣಾ ಹಕ್ಕು ಹೋಗಿಲ್ಲ. ಆದರೂ, ದಾಖಲೆಯ ಮೊತ್ತಕ್ಕೆ ಕೇಳಿದ್ದರೂ, ನಿರ್ಮಾಪಕರು ಕೊಟ್ಟಿಲ್ಲವಂತೆ. ಇದನ್ನೂ ಓದಿ : ಜೈಲಿನಲ್ಲಿರೋದು ವಾಸಿ ಅಂತಿದ್ದಾಳೆ ಪೂನಂ ಪಾಂಡೆ

    ಜೇಮ್ಸ್ ಬಿಡುಗಡೆ ಆಗುತ್ತಿರುವ ವಾರ ಯಾವುದೇ ಸಿನಿಮಾಗಳು ಬಿಡುಗಡೆ ಆಗುತ್ತಿಲ್ಲ. ಅಲ್ಲದೇ, ಈಗಾಗಲೇ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಒಂದು ರೀತಿಯಲ್ಲಿ ಕ್ರೇಜ್ ಕೂಡ ಕ್ರಿಯೇಟ್ ಆಗಿದೆ. ಹಾಗಾಗಿ ಬಿಕೆಟಿಯಲ್ಲೇ ನಿರ್ಮಾಪಕರಿಗೆ ಅಂದಾಜು 20 ಕೋಟಿ ಬರುವ ಅಂದಾಜಿದೆಯಂತೆ.

  • ವಾರದೊಳಗೆ 100 ಕೋಟಿ ಕ್ಲಬ್ ಸೇರಲಿದೆ ಪುನೀತ್ ನಟನೆಯ ಜೇಮ್ಸ್:  ಪಕ್ಕಾ ಲೆಕ್ಕಾಚಾರ

    ವಾರದೊಳಗೆ 100 ಕೋಟಿ ಕ್ಲಬ್ ಸೇರಲಿದೆ ಪುನೀತ್ ನಟನೆಯ ಜೇಮ್ಸ್: ಪಕ್ಕಾ ಲೆಕ್ಕಾಚಾರ

    ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗುತ್ತಿದೆ. ಈಗಿನಿಂದಲೂ ಚಿತ್ರತಂಡ ಸರ್ವ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನ ಮಜೆಸ್ಟಿಕ್ ಚಿತ್ರಮಂದಿರದಲ್ಲಿ 81 ಅಡಿ ಪುನೀತ್ ಅವರ ಕಟೌಟ್ ನಿಲ್ಲಿಸಲು ಚಿತ್ರತಂಡ ಹೊರಟಿದೆ. ಅಲ್ಲದೇ ನಾಡಿನ ಮೂಲೆ ಮೂಲೆಯಲ್ಲಿರುವ ಚಿತ್ರತಂದಿರಗಳಿಗೂ ಪುನೀತ್ ಅವರ ಕಟೌಟ್ ಕಳುಹಿಸಲಾಗುತ್ತಿದೆ. ಒಂದು ಲೆಕ್ಕದಲ್ಲೇ ಪುನೀತ್ ಹುಟ್ಟು ಹಬ್ಬವನ್ನು ಉತ್ಸವದ ರೀತಿಯಲ್ಲಿ ಮಾಡಲು ಹೊರಟಿದೆ ಜೇಮ್ಸ್ ಚಿತ್ರತಂಡ. ಇದನ್ನೂ ಓದಿ : ಕಬ್ಜ ಸಿನಿಮಾದಲ್ಲಿ ಮಧುಮತಿಯಾದ ಶ್ರೀಯಾ ಶರಣ್: ಫಸ್ಟ್ ಲುಕ್ ರಿಲೀಸ್

    ಪುನೀತ್ ನಟನೆಯ ಕೊನೆ ಸಿನಿಮಾ ಇದಾಗಿದ್ದರಿಂದ ಈ ಸಿನಿಮಾವನ್ನು ದಾಖಲೆಯ ರೀತಿಯಲ್ಲಿ ಪ್ರದರ್ಶಿಸಬೇಕು ಎನ್ನುವುದು ನಿರ್ದೇಶಕ ಚೇತನ್ ಕನಸು. ಹಾಗಾಗಿಯೇ ಜಗತ್ತಿನಾದ್ಯಂತ ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನವಾಗಲಿದೆಯಂತೆ. ಅಂದಾಜಿನ ಪ್ರಕಾರ ವಾರದೊಳಗೇ ಜೇಮ್ಸ್ ‘ನೂರು ಕೋಟಿ ಕ್ಲಬ್’ ಸೇರಲಿದೆ. ಇದನ್ನೂ ಓದಿ :  ಕೇರಳದಲ್ಲಿ ಸಿಕ್ತು ನಿರ್ದೇಶಕ ರಿಷಬ್ ಶೆಟ್ಟಿಗೆ ನ್ಯಾಯ

    ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದು ಹುಡುಗಾಟಿಕೆ ಅಲ್ಲ. ಆದರೂ, ಪುನೀತ್ ಅವರ ಅಭಿಮಾನಿಗಳ ಮೇಲಿನ ನಂಬಿಕೆಯಿಂದ ಅಷ್ಟು ಚಿತ್ರಮಂದಿರಗಳನ್ನು ಬುಕ್ ಮಾಡುತ್ತಿದ್ದಾರಂತೆ ನಿರ್ಮಾಪಕರು. ಅಂದು ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾ ರಿಲೀಸ್ ಆಗುವಂತೆ ಕಾಣುತ್ತಿಲ್ಲ. ಬೇರೆ ಭಾಷೆಯ ಚಿತ್ರಗಳು ಕೂಡ ಆದಷ್ಟು ಅವೈಡ್ ಮಾಡಲಾಗುತ್ತಿದೆ. ಇದನ್ನೂ ಓದಿ : ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

    ಬಹಾದೂರ್ ಚೇತನ್ ಕುಮಾರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಇದೊಂದು ಸಾಹಜ ಪ್ರಧಾನ ಸಿನಿಮಾ ಎನ್ನಲಾಗುತ್ತೆದೆ.

  • ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ಹೊಸ ಫೋಟೋಸ್ ನೋಡ್ಬೇಕಾ?

    ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ಹೊಸ ಫೋಟೋಸ್ ನೋಡ್ಬೇಕಾ?

    ಕನ್ನಡ ರತ್ನ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಸಿನಿಮಾ ತಂಡದಿಂದ ಎರಡು ಹೊಸ ಸುದ್ದಿಗಳು ಹೊರ ಬಂದಿವೆ. ಅಪ್ಪು ಹುಟ್ಟಿದ ದಿನದಂದೇ ಈ ಸಿನಿಮಾ ರಿಲೀಸ್ ಪಕ್ಕಾ ಎಂದು ಘೋಷಣೆ ಮಾಡಿದೆ. ಅದಕ್ಕೂ ಮುನ್ನ ಟ್ರೇಲರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇದನ್ನೂ ಓದಿ : ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ

    ಜೇಮ್ಸ್ ಸಿನಿಮಾದ ಕುರಿತಾಗಿ ಒಂದೆರಡು ಫೋಟೋಗಳ ಹೊರತಾಗಿ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ಹಂಚಿಕೊಂಡಿರಲಿಲ್ಲ. ಇದೀಗ ಪುನೀತ್ ರಾಜ್ ಕುಮಾರ್ ಅವರ ವಿವಿಧ ಗೆಟಪ್ ಗಳ ಫೋಟೋಗಳನ್ನು ರಿಲೀಸ್ ಮಾಡಿದೆ. ಆ ಫೋಟೋದಲ್ಲಿ ಪುನೀತ್ ರಾಜ್ ಕುಮಾರ್ ಸೈನಿಕ ಉಡುಪಿನಲ್ಲಿ ಮತ್ತು ಹಾಡುಗಳ ಚಿತ್ರೀಕರಣದ ಫೋಟೋ ಮತ್ತು ಇತರ ಸನ್ನಿವೇಶದ ಭಾವಚಿತ್ರಗಳು ಸದ್ಯ ಅಭಿಮಾನಿಗಳಿಗೆ ಲಭ್ಯವಾಗಿವೆ. ಇದನ್ನೂ ಓದಿ : ತಾಯಿಯ ಸಾವಿನ ನೋವಲ್ಲೂ ವೃತ್ತಿ ಪರತೆ ಮೆರೆದ ರಘು ದೀಕ್ಷಿತ್

    ಜೇಮ್ಸ್ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಜತೆ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ನಟಿಸಿದ್ದರಿಂದ ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ಮೂವರು ಸಹೋದರರನ್ನು ನೋಡುವ ಭಾಗ್ಯ ನೋಡುಗರಿಗೆ ಸಿಕ್ಕಿದೆ. ಇದು ಪುನೀತ್ ಅವರ ಡ್ರೀಮ್ ಕೂಡ ಆಗಿತ್ತು. ಈ ಸಿನಿಮಾದ ಮೂಲಕ ಈಡೇರಿದ್ದರಿಂದ ಸಿನಿಮಾ ಮತ್ತಷ್ಟು ಕುತೂಹಲ ಮೂಡಿಸಿದೆ. ಇದನ್ನೂ ಓದಿ : ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್

    ನಿರ್ದೇಶ ಚೇತನ್ ಕುಮಾರ್ ಜೇಮ್ಸ್ ಸಿನಿಮಾವನ್ನು ವಿಭಿನ್ನವಾಗಿ ಕಟ್ಟಿಕೊಟ್ಟಿದ್ದಾರಂತೆ. ಇದೇ ಮೊದಲ ಬಾರಿಗೆ ಪುನೀತ್ ಅವರು ಅಂಥದ್ದೊಂದು ಪಾತ್ರ ಮಾಡಿದ್ದಾರೆ ಎನ್ನುವುದು ಮತ್ತೊಂದು ವಿಶೇಷ.

  • ಪ್ರಶಸ್ತಿಗಳಿಗಿಂತ ಅಪ್ಪು ವ್ಯಕ್ತಿತ್ವ ದೊಡ್ಡದು: ಚೇತನ್

    ಪ್ರಶಸ್ತಿಗಳಿಗಿಂತ ಅಪ್ಪು ವ್ಯಕ್ತಿತ್ವ ದೊಡ್ಡದು: ಚೇತನ್

    ರಾಯಚೂರು: ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಅಪ್ಪು ಅವರ ಸಾಮಾಜಿಕ ಕಾಳಜಿ, ಒಳ್ಳೆಯತನ ದೊಡ್ಡದು ಎಂದು ನಟ ಚೇತನ್ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದವರು, ಅಪ್ಪುಗೆ ಪದ್ಮಶ್ರೀ ಪ್ರಶಸ್ತಿ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಅಪ್ಪು ಅವರ ಸಾಮಾಜಿಕ ಕಾಳಜಿ, ಒಳ್ಳೆಯತನ ದೊಡ್ಡದು. ಪ್ರಶಸ್ತಿಯಿಂದ ಅಪ್ಪು ಅವರ ವಿಚಾರಗಳು ಹೆಚ್ಚು ಆಗಲ್ಲ , ಸಿಗದಿದ್ರೆ ಕಡಿಮೆಯೂ ಆಗಲ್ಲ ಪ್ರಶಸ್ತಿಗಿಂತ ಅಪ್ಪು ವ್ಯಕ್ತಿತ್ವವೇ ಮುಖ್ಯ. ಅಪ್ಪು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾವಾದದ್ದು ಎಂದಿದ್ದಾರೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಅಪ್ಪು ಮತ್ತು ನಮ್ಮ ಸ್ನೇಹ 13 ವರ್ಷದ್ದು, ಒಟ್ಟಿಗೆ ಒಂದೇ ಕಡೆ ಜಿಮ್ ಮತ್ತು ಯೋಗ ಮಾಡುತ್ತಿದ್ದೇವು. 2012 ರ ಬಳಿಕ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. ಅಪ್ಪು ಸಾವಿನ ಬಳಿಕ ಕಣ್ಣು ದಾನ ಮಾಡಿ ನಾಲ್ಕು ಜನರ ಬದುಕಿಗೆ ಬೆಳಕಾಗಿದ್ದಾರೆ. ನಾವು ಕೂಡ ಅಪ್ಪು ಅವರ ಆದರ್ಶದಂತೆ ದೇಹ ಮತ್ತು ಅಂಗಾಂಗಗಳ ದಾನ ಮಾಡಬೇಕು ಅಂತ ನಟ, ಹೊರಾಟಗಾರ ಚೇತನ್ ಹೇಳಿದ್ದಾರೆ. ಇದನ್ನೂ ಓದಿ: ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

    ಸಿದ್ದರಾಮಯ್ಯ ತನ್ನ ಜಾತಿಗೆ ಹೆಚ್ಚು ಸೌಲಭ್ಯ ನೀಡಿದ್ದಾರೆ: ದೇವದಾಸಿ ಪದ್ದತಿ ನಿರ್ಮೂಲನೆ ಹಾಗೂ ಅಲೆಮಾರಿ ಜನಾಂಗಕ್ಕೆ ಸೂರು ಒದಗಿಸಲು ಹೋರಾಟ ನಡೆಸಿದ್ದೇವೆ. ಜನಪ್ರತಿನಿಧಿಗಳು ಬಣ್ಣದ ಮಾತನಾಡದೆ ಕೆಲಸ ಮಾಡಬೇಕು. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಮೂರು ಪಕ್ಷಗಳು ಬ್ರಾಹ್ಮಣ್ಯದ ಪರವಾಗೇ ಇವೆ. ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಅಲೆಮಾರಿಗಳನ್ನ ಕಡೆಗಣಿಸಲಾಗಿದೆ. ಸಿದ್ದರಾಮಯ್ಯ ತಾವು ಹುಟ್ಟಿದ ಜಾತಿಗೆ ಹೆಚ್ಚು ಸೌಲಭ್ಯ ಕೊಟ್ಟಿದ್ದಾರೆ, ದಲಿತರಿಗೆ ಹೆಚ್ಚು ಸೌಲಭ್ಯ ನೀಡಿಲ್ಲ. ಜನಪ್ರತಿನಿಧಿಗಳು ಬಣ್ಣಬಣ್ಣದ ಮಾತುಗಳನ್ನ ಹೇಳಿ ತಮ್ಮ ಮತಗಳಿಗೆ ಮಾತ್ರ ಬಡ ಜನರನ್ನ ಬಳಸಿಕೊಳ್ಳುತ್ತಿದ್ದಾರೆ ಅಂತ ಚೇತನ್ ಆರೋಪಿಸಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಚೇತನ್ ಕುಮಾರ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಚೇತನ್ ಕುಮಾರ್

    ಬೆಂಗಳೂರು: ಸ್ಯಾಂಡಲ್‍ವುಡ್ ಭರ್ಜರಿ ಸಿನಿಮಾ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಚೇತನ್ ಕುಮಾರ್ ಮೈಸೂರಿನಲ್ಲಿ ಇಂದು ಮಾನಸ ಜೊತೆ ಸಪ್ತಪದಿ ತುಳಿದ್ದಾರೆ. ಮೈಸೂರಿನ ಇನ್ಫೋಸಿಸ್‍ನಲ್ಲಿ ಮಾನಸ ಕೆಲಸ ಮಾಡುತ್ತಿದ್ದಾರೆ. ಈ ಮುದ್ದಾದ ಜೋಡಿ ಇಂದು ದಾಂಪತ್ಯಜೀವನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: IAS ಆಕಾಂಕ್ಷಿಗಳಿಗೆ ಫ್ರೀ ಕೋಚಿಂಗ್ ಆಫರ್ ನೀಡಿದ ಸೋನು ಸೂದ್

    ಪುನೀತ್ ರಾಜ್ ಕುಮಾರ್, ಧ್ರುವ ಸರ್ಜಾ, ನಿರ್ಮಾಪಕ ಉಮಾಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಭರ್ಜರಿ, ಬಹಾದ್ದೂರ್ ಮತ್ತು ಭರಾಟೆ ಚಿತ್ರಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರೊ ಇವರು ಗೀತರಚನಕಾರರಾಗಿ ಮತ್ತು ಸಂಭಾಷಣಾಕಾರನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಸದ್ಯ ಅಪ್ಪು ನಟನೆಯ ಜೇಮ್ಸ್ ಸಿನಿಮಾವನ್ನು ಚೇತನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

  • ಕೊರೊನಾ ಬಗ್ಗೆ ಅವೈಜ್ಞಾನಿಕ ಥಿಯರಿ ಹರಡಬೇಡಿ – ಕಿಚ್ಚನಿಗೆ ಚೇತನ್ ಟ್ವೀಟ್

    ಕೊರೊನಾ ಬಗ್ಗೆ ಅವೈಜ್ಞಾನಿಕ ಥಿಯರಿ ಹರಡಬೇಡಿ – ಕಿಚ್ಚನಿಗೆ ಚೇತನ್ ಟ್ವೀಟ್

    ಬೆಂಗಳೂರು: ಕೊರೊನಾ ವೈರಸ್ ತಡೆಯುವ ಬಗ್ಗೆ ಅವೈಜ್ಞಾನಿಕ ಥಿಯರಿ ಹರಡಬೇಡಿ ಎಂದು ಆದಿನಗಳು ನಟ ಚೇತನ್ ಕುಮಾರ್ ಕಿಚ್ಚ ಸುದೀಪ್ ಅವರಿಗೆ ಟ್ವೀಟ್ ಮಾಡಿದ್ದಾರೆ.

    ಸುದೀಪ್ ಅವರು ಭಾನುವಾರ ವಿಡಿಯೋ ಒಂದನ್ನು ಟ್ವೀಟ್ ಮಾಡಿ, ಸಂಜೆ 5 ಗಂಟೆಗೆ ಎಲ್ಲರೂ ಚಪ್ಪಾಳೆ ತಟ್ಟಲು ದಯವಿಟ್ಟು ಭಾಗವಹಿಸಿ. ಹೀಗೆ ಮಾಡಿದರೆ ನಾವು ಯಾವುದನ್ನಾದರೂ ಕಳೆದುಕೊಳ್ಳುತ್ತೇವೆಯೇ? ಇಲ್ಲವಲ್ಲ. ನಾವು ಗಳಿಸುತ್ತೇವೆಯೇ? ಬಹುಶಃ ಗಳಿಸಬಹುದು. ಆದರೆ ಕನಿಷ್ಠ ಪ್ರಯತ್ನಿಸೋಣ. ಎಲ್ಲವನ್ನೂ ಆಮೇಲೆ ಯೋಚಿಸೋಣ. ಇದು ನಮ್ಮ ಜೀವನಕ್ಕಾಗಿ ಎಂದು ಬರೆದುಕೊಂಡಿದ್ದರು.

    ವಿಡಿಯೋದಲ್ಲಿ ಏನಿದೆ?
    ಯುವತಿಯೊಬ್ಬರು ಮಾತನಾಡುತ್ತಾ, ‘ಚಪ್ಪಾಳೆ ತಟ್ಟುವುದನ್ನ ತುಂಬಾ ಲಘುವಾಗಿ ಪರಿಗಣಿಸಬೇಡಿ. ದಯವಿಟ್ಟು ಎಲ್ಲರೂ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಲು ಭಾಗವಹಿಸಿ. ಪ್ರಧಾನಿ ನರೇಂದ್ರ ಮೋದಿ ಅವರ ಈ ಸಂದೇಶದಿಂದ ಎನರ್ಜಿ ಮೆಡಿಸಿನ್ ಸೃಷ್ಟಿಯಾಗುತ್ತದೆ ಎಂದು ಎಲ್ಲರಿಗೂ ತಿಳಿಸೋಣ. ನಿಮ್ಮ ಬಾಲ್ಕನಿ, ಮನೆಯಲ್ಲಿ ಮಾತ್ರ ನೀವು ಸುರಕ್ಷಿತವಾಗಿರಲು ಸಾಧ್ಯ. ನಿಮಗಾಗಿ ಶ್ರಮಿಸುವವರಿಗೆ ಚಪ್ಪಾಳೆ ಮೂಲಕ ಧನ್ಯವಾದ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದರು.

    ಇದಕ್ಕೆ ಪ್ರತಿಕ್ರಿತಿಯೆ ನೀಡಿರುವ ನಟ ಚೇತನ್, ಸುದೀಪ್ ಸರ್. ಸಿನಿಮಾ ಕ್ಷೇತ್ರದಲ್ಲಿ ನಿಮ್ಮ ಕೆಲಸವನ್ನು ನಾನು ಗೌರವಿಸುತ್ತೇನೆ. ವೈದ್ಯ ದಂಪತಿಯ ಮಗನಾಗಿ ನಮ್ಮ ವೈದ್ಯಕೀಯ ಸಿಬ್ಬಂದಿಯನ್ನು ಪ್ರಶಂಸಿಸಬೇಕು ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮೂಢನಂಬಿಕೆ ಮತ್ತು ತಪ್ಪು ಮಾಹಿತಿಯ ಹಾದಿಯಲ್ಲಿ ನಮ್ಮನ್ನು ಕೊಂಡೊಯ್ಯುವ ಇಂತಹ ಅವೈಜ್ಞಾನಿಕ ‘ಎನರ್ಜಿ ಮೆಡಿಸಿನ್’ ಸಿದ್ಧಾಂತಗಳನ್ನು ಹರಡುವುದರ ಮೂಲಕ ವೈದ್ಯರನ್ನು ಪ್ರಶಂಸಿಸುವುದು ಸರಿಯಲ್ಲ. ವಿಜ್ಞಾನದ ಮೂಲಕ ಕೊರೊನಾ ವೈರಸ್ ವಿರುದ್ಧ ಹೋರಾಡೋಣ ಎಂದು ಟ್ವೀಟ್ ಮಾಡಿದ್ದಾರೆ.

  • ಭರಾಟೆಗೆ ಶಿವಣ್ಣನ ಧ್ವನಿ

    ಭರಾಟೆಗೆ ಶಿವಣ್ಣನ ಧ್ವನಿ

    ಬೆಂಗಳೂರು: ಗೆಳೆಯ ನಿರ್ದೇಶಕ ಚೇತನ್ ಕುಮಾರ್ ಸಿನಿಮಾಗೆ ಹ್ಯಾಟ್ರಿಕ್ ಹೀರೋ ಧ್ವನಿಯನ್ನು ನೀಡಿದ್ದಾರೆ.

    ದೊಡ್ಡಮನೆಗೆ ಆಪ್ತರಲ್ಲಿ ಒಬ್ಬರಾಗಿರುವ ಚೇತನ್ ಕುಮಾರ್ ನಿರ್ದೇಶನದಲ್ಲಿ ಭರಾಟೆ ಸಿನಿಮಾ ಮೂಡಿ ಬರುತ್ತಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಾಂಧಿನಗರದಲ್ಲಿ ತನ್ನ ಪೋಸ್ಟರ್, ಲುಕ್ ಮೂಲಕ ಸದ್ದು ಮಾಡುತ್ತಿರುವ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಟಿಸುತ್ತಿದ್ದಾರೆ. ಪಕ್ಕಾ ಮಾಸ್ ಜೊತೆ ಪ್ರೇಮ ಕಥೆಯನ್ನು ಚಿತ್ರ ಹೊಂದಿದೆ ಎನ್ನಲಾಗುತ್ತಿದೆ. ಆದ್ರೆ ಇದೂವರೆಗೂ ಚಿತ್ರತಂಡ ಎಲ್ಲಿಯೂ ಕಥೆಯ ಎಳೆಯನ್ನು ಬಿಟ್ಟುಕೊಟ್ಟಿಲ್ಲ. ಹಾಗಾಗಿ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

    ಈ ಹಿಂದೆ ಚೇತನ್ ಕುಮಾರ್ ನಿರ್ದೇಶನದ ಬಹದ್ದೂರ್ ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮತ್ತು ಭರ್ಜರಿ ಸಿನಿಮಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಿನ್ನೆಲೆ ಧ್ವನಿಯನ್ನು ನೀಡಿದ್ದರು. ಚಿತ್ರಕ್ಕೆ ಶಿವರಾಜ್ ಕುಮಾರ್ ಹಿನ್ನೆಲೆ ಧ್ವನಿ ನೀಡಿದ್ದು ಭರಾಟೆಯ ಮತ್ತೊಂದು ವಿಶೇಷವಾಗಿದೆ. ಚಿತ್ರಕ್ಕೆ ಧ್ವನಿ ನೀಡಿದ ಶಿವಣ್ಣನಿಗೆ ನಿರ್ದೇಶಕ ಚೇತನ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.