Tag: Cheteshwar Pujara

  • Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

    Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

    ಮುಂಬೈ: ಟೆಸ್ಟ್‌ ಪರಿಣತ ಬ್ಯಾಟರ್‌ ಚೇತೇಶ್ವರ ಪೂಜಾರ (Cheteshwar Pujara) ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಈ ವರ್ಷ ರೋಹಿತ್‌ ಶರ್ಮಾ (ಟೆಸ್ಟ್‌), ವಿರಾಟ್‌ ಕೊಹ್ಲಿ (ಟೆಸ್ಟ್‌), ರವಿಚಂದ್ರನ್‌ ಅಶ್ವಿನ್‌ (ಎಲ್ಲಾ ಮಾದರಿ) ಬಳಿಕ ಈಗ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ (Cricket) ನಿವೃತ್ತಿ ಘೋಷಿಸಿದ್ದಾರೆ.

    ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ಜೆರ್ಸಿಯನ್ನ ಧರಿಸಿ ರಾಷ್ಟ್ರಗೀತೆ ಹಾಡುವುದು, ಪ್ರತಿ ಬಾರಿ ಮೈದಾನಕ್ಕಿಳಿದಾಗ ನನ್ನ ಅತ್ಯುತ್ತಮ ಪ್ರಯತ್ನ ಮಾಡುವುದು ಇದೆಲ್ಲವೂ ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದ್ರೆ ಎಲ್ಲ ಒಳ್ಳೇ ವಿಷಯಗಳೂ ಎಂದಾದರೂ ಕೊನೆಗೊಳ್ಳಬೇಕಲ್ಲವೇ? ಅದೇ ರೀತಿ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ, ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಅಂತ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ರಾಜ್‌ಕೋಟ್‌ನಲ್ಲಿ ಜನಿಸಿದ 37 ವರ್ಷದ ಪೂಜಾರ 2010ರಲ್ಲಿ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದರು. ಟೀಂ ಇಂಡಿಯಾದಲ್ಲಿ ಅತಿಹೆಚ್ಚು ರನ್‌ ಗಳಿಸಿದ 8ನೇ ಟೆಸ್ಟ್‌ ಬ್ಯಾಟರ್‌ ಎನಿಸಿಕೊಂಡಿದ್ದರು. ಇದುವರೆಗೆ 103 ಟೆಸ್ಟ್‌, 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಟೀಂ ಇಂಡಿಯಾ ಪರ 103 ಟೆಸ್ಟ್‌ ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 7,195 ರನ್‌ ಗಳಿಸಿದ್ದಾರೆ. ಇದರಲ್ಲಿ 19 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ತವರಿನಲ್ಲಿ ನಡೆದ ಒಟ್ಟು ಟೆಸ್ಟ್‌ನಲ್ಲಿ 3,839 ರನ್ ಗಳಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ಯಾಟರ್‌ ಆಗಿದ್ದ ಪೂಜಾರ, ಸ್ವದೇಶಿ ಮತ್ತು ವಿದೇಶಗಳಲ್ಲಿ ನಡೆದ ಟೆಸ್ಟ್‌ ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ ಕಳೆದ ವರ್ಷಗಳಲ್ಲಿ ಸಂಪೂರ್ಣವಾಗಿ ಫಾರ್ಮ್‌ ಕಳೆದುಕೊಂಡಿದ್ದರು. ಇದು ಅವರನ್ನು ನಿವೃತ್ತಿಯ ಕಡೆಗೆ ಸೆಳೆದಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

  • ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    – ಏಕದಿನ ಕ್ರಿಕೆಟ್‌ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಚಾನ್ಸ್‌

    ಮುಂಬೈ: ಜುಲೈನಲ್ಲಿ ವೆಸ್ಟ್ ಇಂಡೀಸ್‌ (West Indies) ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ತಲಾ 16 ಸದಸ್ಯರ ಭಾರತ ತಂಡವನ್ನ (Team India) ಬಿಸಿಸಿಐ (BCCI) ಪ್ರಕಟಿಸಿದೆ.

    ವಿಂಡೀಸ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ನಲ್ಲಿ ಐಪಿಎಲ್‌ನಲ್ಲಿ (IPL 2023) ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿ ಮಿಂಚಿದ ಯಶಸ್ವಿ ಜೈಸ್ವಾಲ್‌ (Yashasvi Jaiswal) ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ ಆಸ್ಟ್ರೇಲಿಯಾ (Australia) ವಿರುದ್ಧದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸರಣಿಯಿಂದಲೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಚೇತೇಶ್ವರ್‌ ಪೂಜಾರ ಸ್ಥಾನ ಕಳೆದುಕೊಂಡಿದ್ದಾರೆ. ಒಂದು ಕಾಲದಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದ ಹುಡುಗ ಕೊನೆಗೂ ಸತತ ಶ್ರಮದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ʻಯಶಸ್ವಿʼಯಾಗಿದ್ದಾರೆ.

    ಇನ್ನೂ ದೀರ್ಘಕಾಲದಿಂದ ಟೀಂ ಇಂಡಿಯಾ ಸೇರಲು ವಿಫಲವಾಗಿದ್ದ ಸಂಜು ಸ್ಯಾಮ್ಸನ್‌ (Sanju Samson) ವಿಂಡೀಸ್‌ ವಿರುದ್ಧ ಏಕದಿನ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಯುವ ವೇಗಿ ಆಕಾಶ್‌ ದೀಪ್‌ ಅವರಿಗೂ ಟೆಸ್ಟ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.

    2023ರ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಗೇಮ್‌ ಚೇಂಜರ್‌ ಪಾತ್ರ ವಹಿಸಿದ ಹಾಗೂ 2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಅರ್ಧಶತಕ ಸೇರಿದಂತೆ ಭಾರತದ ಪರ ಅತಿ ಹೆಚ್ಚು ರನ್‌ ಗಳಿಸಿದ ಅಜಿಂಕ್ಯ ರಹಾನೆ ಉಪನಾಯಕನ ಪಟ್ಟ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: T20 ಕ್ರಿಕೆಟ್‌ನಲ್ಲಿ ಸಿಕ್ಸರ್‌ ಬ್ಲಾಸ್ಟ್‌ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್‌

    ರಣಜಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ರನ್‌ ಹೊಳೆ ಹರಿಸಿರುವ ಐಪಿಎಲ್‌ ಹೀರೋ ಯಶಸ್ವಿ ಜೈಸ್ವಾಲ್‌, ಇತ್ತೀಚೆಗೆ ಮುಕ್ತಾಯವಾಗಿದ್ದ 2023ರ ಐಪಿಎಲ್‌ ಟೂರ್ನಿಯಲ್ಲಿಯೂ ರಾಜಸ್ಥಾನ್‌ ರಾಯಲ್ಸ್ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿ ಚೇತೇಶ್ವರ್ ಪೂಜಾರ ಅವರ ಸ್ಥಾನಕ್ಕೆ ಜೈಸ್ವಾಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ 21ರ ಪ್ರಾಯದ ಯುವ ಆಟಗಾರನಿಗೆ ದೀರ್ಘಾವಧಿ ಅವಕಾಶ ನೀಡಲು ಬಿಸಿಸಿಐ ತೀರ್ಮಾನಿಸಿದೆ.

    ಸಿಎಸ್‌ಕೆ ತಂಡದಲ್ಲಿ ಐಪಿಎಲ್‌ ಹೀರೋ ಆಗಿದ್ದ ಋತುರಾಜ್‌ ಗಾಯಕ್ವಾಡ್‌, ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ಗಳಾಗಿ ಕೆ.ಎಸ್‌ ಭರತ್‌ ಹಾಗೂ ಇಶಾನ್‌ ಕಿಶನ್‌ ಸ್ಥಾನ ಪಡೆದುಕೊಂಡಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಆರ್‌. ಅಶ್ವಿನ್‌ ಹಾಗೂ ಅಕ್ಷರ್‌ ಪಟೇಲ್‌ ಅವರು ಸ್ಪಿನ್‌ ಆಲ್‌ರೌಂಡರ್‌ಗಳಾಗಿ ಸ್ಥಾನ ಉಳಿಸಿಕೊಂಡಿದ್ದಾರೆ. ಯುವ ವೇಗಿ ಮುಖೇಶ್‌ ಕುಮಾರ್‌ ಅವರು ಟೆಸ್ಟ್‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ವೇಗದ ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌, ಜಯದೇವ್‌ ಉನಾದ್ಕಟ್‌ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ. ಶಾರ್ದುಲ್‌ ಠಾಕೂರ್‌ ವೇಗದ ಬೌಲಿಂಗ್‌ ಆಲ್‌ರೌಂಡರ್‌ ಆಗಿ ತಂಡದಲ್ಲಿ ಉಳಿದಿದ್ದಾರೆ. ಏಕದಿನ ಸರಣಿಯಲ್ಲಿ ಹಾರ್ದಿಕ್‌ ಪಾಂಡ್ಯ ಉಪನಾಯಕನಾಗಿ ಸ್ಥಾನ ಉಳಿಸಿಕೊಂಡಿದ್ದಾರೆ.

    ಭಾರತ ಟೆಸ್ಟ್‌ ತಂಡ:
    ರೋಹಿತ್ ಶರ್ಮಾ (ನಾಯಕ) (Rohit Sharma), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್‌ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ. ಇದನ್ನೂ ಓದಿ:  ICC ಟೂರ್ನಿಗಳಲ್ಲಿ ಟೀಂ ಇಂಡಿಯಾ ಫೇಲ್ ಆಗ್ತಿರೋದೇಕೆ? – ಕಾರಣ ತಿಳಿಸಿದ ChatGPT

    ಭಾರತ ಏಕದಿನ ತಂಡ:
    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್‌, ಕುಲ್ದೀಪ್‌ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

  • ಭಾರತಕ್ಕೆ 188 ರನ್‌ಗಳ ಗೆಲುವು – ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ

    ಭಾರತಕ್ಕೆ 188 ರನ್‌ಗಳ ಗೆಲುವು – ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ

    ಢಾಕಾ: ಟೀಂ ಇಂಡಿಯಾದ ಕುಲ್‌ದೀಪ್ ಯಾದವ್ (Kuldeep Yadav), ಅಕ್ಷರ್ ಪಟೇಲ್ (Axar Patel) ಸ್ಪಿನ್ ಬೌಲಿಂಗ್ ದಾಳಿ ಹಾಗೂ ಶುಭಮನ್‌ಗಿಲ್ (Shubman Gill), ಚೇತೇಶ್ವರ್ ಪೂಜಾರ (Cheteshwar Pujara) ಭರ್ಜರಿ ಶತಕದ ಕಮಾಲ್‌ನಿಂದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ (Test Cricket) ಪಂದ್ಯದಲ್ಲಿ ಭಾರತ 188 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಭಾರತದ ಬೌಲರ್‌ಗಳ ಸಂಘಟಿತ ದಾಳಿಯ ಫಲವಾಗಿ 4ನೇ ದಿನದಾಟದ ಅಂತ್ಯಕ್ಕೆ 102 ಓವರ್‌ಗಳಲ್ಲಿ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 272 ಗಳಿಸಿ 241 ರನ್‌ಗಳ ಹಿನ್ನಡೆಯಲ್ಲಿತ್ತು. ಇಂದು ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ 113.2 ಓವರ್‌ಗಳಲ್ಲಿ 324 ರನ್‌ಗಳಿಗೆ ಸರ್ವಪತನಕಂಡಿದೆ. ಭಾರತ ಭರ್ಜರಿ 188 ರನ್‌ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ಗಿಲ್ ಚೊಚ್ಚಲ 100, ಪೂಜಾರ ವೇಗದ ಶತಕ – ಬಾಂಗ್ಲಾಗೆ ಬೃಹತ್ ಟಾರ್ಗೆಟ್

    4ನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 272 ರನ್ ಬಾರಿಸಿತ್ತು, ನಾಯಕ ಶಕೀಬ್ ಅಲ್ ಹಸನ್ (Shakib Al Hasan) ಅಜೇಯ 40 ರನ್ (69 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ಮೆಹಿದಿ ಹಸನ್ ಮಿರಾಜ್ 9 ರನ್ ಸಿಡಿಸಿ 5ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಬಾಂಗ್ಲಾ (Bangladesh) ಗೆಲುವಿಗೆ 241 ರನ್ ಬಾಕಿಯಿತ್ತು. ಇಂದು ಬಾಂಗ್ಲಾದೇಶ ಗೆಲುವಿನ ಭರವಸೆಯೊಂದಿಗೆ ಕ್ರೀಸ್‌ಗಿಳಿದಿತ್ತು. ಆದರೆ ಟೀಂ ಇಂಡಿಯಾ ಬೌಲರ್‌ಗಳ ಸ್ಪಿನ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡ 113.2 ಓವರ್‌ಗಳಿಗೆ ಸರ್ವಪತನ ಕಂಡಿತು.

    ಕೊನೆಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ 11.2 ಓವರ್‌ಗಳಲ್ಲಿ 52 ರನ್ ಗಳಿಸುವ ವೇಳೆಗೆ ಭಾರತ ಎದುರಾಳಿಗಳನ್ನು ಕಟ್ಟಿಹಾಕಿತು. 2ನೇ ಇನ್ನಿಂಗ್ಸ್‌ನಲ್ಲಿ ಜಾಕಿರ್ ಹಸನ್ 224 ಎಸೆತಗಳಲ್ಲಿ 100 ರನ್ (13 ಬೌಂಡರಿ, 1 ಸಿಕ್ಸರ್) ಸಿಡಿದರು. ನಾಯಕ ಶಕೀಬ್ ಅಲ್ ಹಸನ್ 108 ಎಸೆತಗಳಲ್ಲಿ ಸ್ಫೋಟಕ 84 ರನ್ (6 ಬೌಂಡರಿ, 6 ಸಿಕ್ಸರ್) ಚಚ್ಚಿ ಔಟಾದರು. ನಂತರದಲ್ಲಿ ಕ್ರೀಸ್‌ಗಿಳಿದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಬಾಂಗ್ಲಾದೇಶ ಸೋಲಿಗೆ ಶರಣಾಯಿತು. ಇದನ್ನೂ ಓದಿ: ಬಾಂಗ್ಲಾದ ಭಾರ ಹೊತ್ತ ಜಾಕಿರ್ – ಜಯದ ಹೊಸ್ತಿಲಲ್ಲಿ ಭಾರತ

    ಕುಲ್‌ದೀಪ್, ಅಕ್ಷರ್ ಸ್ಪಿನ್ ಕಮಾಲ್:
    ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ 40 ರನ್ ಗಳಿಸಿ, ಬೌಲಿಂಗ್‌ನಲ್ಲಿ 5 ವಿಕೆಟ್ ಕಬಳಿಸಿದ ಕುಲ್‌ದೀಪ್ 2ನೇ ಇನ್ನಿಂಗ್ಸ್ನಲ್ಲೂ 3 ವಿಕೆಟ್ ಕಬಳಿಸುವ ಮೂಲಕ ಕಮಾಲ್ ಮಾಡಿದರು. ಇನ್ನೂ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್‌ಗೆ ತೃಪ್ತಿ ಪಡೆಕೊಂಡಿದ್ದ ಅಕ್ಷರ್‌ಪಟೇಲ್ 2ನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದರು.

    ಬಾಂಗ್ಲಾ ವಿರುದ್ಧ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಬ್ಯಾಟ್ಸ್‌ಮ್ಯಾನ್‌ ತಮ್ಮ ಉತ್ತಮ ಲಯ ಮುಂದುವರಿಸಿದ್ದರು. ಭಾರತ ಪರ ಶುಭಮನ್ ಗಿಲ್ 110 ರನ್ (152 ಎಸೆತ, 10 ಬೌಂಡರಿ, 3 ಸಿಕ್ಸ್) ಚಚ್ಚಿ ತಮ್ಮ ಚೊಚ್ಚಲ ಶತಕ ಪೂರೈಸಿದರು. ಇನ್ನೊಂದೆಡೆ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ವಂಚಿತರಾಗಿದ್ದ ಪೂಜಾರ 2ನೇ ಇನ್ನಿಂಗ್ಸ್‌ನಲ್ಲಿ 102 ರನ್ (130 ಎಸೆತ, 13 ಬೌಂಡರಿ) ಬಾರಿಸಿ ಶತಕ ಪೂರೈಸಿಕೊಂಡರು. ಇದು ಪೂಜಾರ ಅವರ ಟೆಸ್ಟ್ ವೃತ್ತಿ ಜೀವನದ ವೇಗದ ಹಾಗೂ 19ನೇ ಶತಕವಾಗಿದೆ. ಪೂಜಾರ ಶತಕ ಸಿಡಿಸುತ್ತಿದ್ದಂತೆ 61.4 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 258 ರನ್ ಬಾರಿಸಿದ್ದಾಗ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಅರ್ಜುನ ಪ್ರಶಸ್ತಿ ಸಿಕ್ಕಿದ್ದು 2017ರಲ್ಲಿ ಕೈ ಸೇರಿದ್ದು 2022ರಲ್ಲಿ – 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿ ಸ್ವೀಕಾರ

    ಅರ್ಜುನ ಪ್ರಶಸ್ತಿ ಸಿಕ್ಕಿದ್ದು 2017ರಲ್ಲಿ ಕೈ ಸೇರಿದ್ದು 2022ರಲ್ಲಿ – 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿ ಸ್ವೀಕಾರ

    ಮುಂಬೈ: ಟೀಂ ಇಂಡಿಯಾದ (Team India) ಕ್ರಿಕೆಟರ್‌ ಚೇತೇಶ್ವರ ಪೂಜಾರಗೆ (Cheteshwar Pujara) 2017ರಲ್ಲಿ ಅರ್ಜುನ ಪ್ರಶಸ್ತಿ (Arjuna Award) ಸಿಕ್ಕಿತ್ತು. ಆ ಪ್ರಶಸ್ತಿ 5 ವರ್ಷಗಳ ಬಳಿಕ ಇದೀಗ ಪೂಜಾರ ಕೈ ಸೇರಿದೆ.

    2017ರಲ್ಲಿ ಪೂಜಾರ ಅರ್ಜುನ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಹೋಗಿರಲಿಲ್ಲ. ಆ ಬಳಿಕ ಇದೀಗ 5 ವರ್ಷಗಳ ಬಳಿಕ ಅರ್ಜುನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌ರಿಂದ ಪೂಜಾರ ಸ್ವೀಕರಿಸಿದ್ದಾರೆ. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆವೀರ ಸೂರ್ಯ

    ಈ ಬಗ್ಗೆ ಟ್ವೀಟ್ ಮಾಡಿರುವ ಪೂಜಾರ, ನಾನು 2017ರಲ್ಲಿ ಅರ್ಜುನ ಪ್ರಶಸ್ತಿ ಬಂದಾಗ ಸ್ವೀಕರಿಸಿರಲಿಲ್ಲ. ಕ್ರಿಕೆಟ್ ನಡುವೆ ಬಿಡುವಿಲ್ಲದ ಕಾರಣ ಹಾಗೆ ಉಳಿದುಕೊಂಡಿತ್ತು. ಇದೀಗ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್‌ರಿಂದ ಪ್ರಶಸ್ತಿ ಪಡೆದುಕೊಂಡಿದ್ದೇನೆ. ಬಿಸಿಸಿಐ (BCCI) ಮತ್ತು ಸಚಿವರಿಗೆ ಧನ್ಯವಾದ ಎಂದಿದ್ದಾರೆ. ಇದನ್ನೂ ಓದಿ: ಕಾಲ್ಚೆಂಡು ಹಬ್ಬ ಬಲು ದುಬಾರಿ – ಫಿಫಾ ಟಿಕೆಟ್ ದರ ಕೇಳಿದ್ರೆ ದಂಗಾಗ್ತಿರಿ!

    ಪೂಜಾರ ಸದ್ಯ ಸೌರಾಷ್ಟ್ರ ಪರ ವಿಜಯ್ ಹಜಾರೆ ದೇಸಿ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಆಡಲು ಭಾರತ-ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಲಂಡನ್: ಟೀಂ ಇಂಡಿಯಾದ ಟೆಸ್ಟ್ ಸ್ಪೆಷಲಿಷ್ಟ್‌ ಖ್ಯಾತಿಯ ಚೇತೇಶ್ವರ ಪೂಜಾರ ಇದೀಗ ರಾಯಲ್ ಲಂಡನ್ ಏಕದಿನ ಪಂದ್ಯ ಒಂದರಲ್ಲಿ ಒಂದೇ ಓವರ್‌ನಲ್ಲಿ ಬರೋಬ್ಬರಿ 22 ರನ್ ಚಚ್ಚಿ ಸ್ಫೋಟಕ ಆಟದ ಮೂಲಕ ಸುದ್ದಿಯಾಗಿದ್ದಾರೆ.

    ಈ ಹಿಂದೆ ಕೌಂಟಿ ಕ್ರಿಕೆಟ್‍ನಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಮಿಂಚಿದ್ದ ಪೂಜಾರ ಇದೀಗ ರಾಯಲ್ ಲಂಡನ್ ಏಕದಿನ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಎದುರಾಳಿ ತಂಡಕ್ಕೆ ಕಂಟಕವಾಗಿದ್ದಾರೆ. ಸಸೆಕ್ಸ್ ಪರ ಆಡಿದ ಪೂಜಾರ 107 ರನ್ (79 ಎಸೆತ, 7 ಬೌಂಡರಿ, 2 ಸಿಕ್ಸ್) ಶತಕ ಸಿಡಿಸಿ ಮೆರೆದಾಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ ಕ್ಯಾಪ್ಟನ್, ಕೋಚ್ ಪದೇ ಪದೇ ಬದಲಾವಣೆ – ಬಿಸಿಸಿಐಗೆ ನೆಟ್ಟಿಗರಿಂದ ಫುಲ್ ಕ್ಲಾಸ್

     

    ವಾರ್ವಿಕ್‍ಶೈರ್ ವಿರುದ್ಧ ಪಂದ್ಯದ 45ನೇ ಓವರ್‌ನಲ್ಲಿ ಪೂಜಾರ ಉಗ್ರರೂಪ ತಾಳಿದ್ದರು. ಲಿಯಾಮ್ ನಾರ್ವೆಲ್ ಎಸೆದ 45ನೇ ಓವರ್‌ನಲ್ಲಿ ಕ್ರಮವಾಗಿ 4,2,4,2,6,4 ಸೇರಿ ಒಟ್ಟು 22 ರನ್ ಬಾರಿಸಿ ಮಿಂಚಿದರು. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    ಪಂದ್ಯದಲ್ಲಿ ವಾರ್ವಿಕ್‍ಶೈರ್ 7 ವಿಕೆಟ್ ನಷ್ಟಕ್ಕೆ 306 ರನ್ ಬಾರಿಸಿ ಸಸೆಕ್ಸ್ ತಂಡಕ್ಕೆ 307 ರನ್ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಸಸೆಕ್ಸ್ ಪಂದ್ಯವನ್ನು ಗೆಲ್ಲಲು ವಿಫಲವಾಯಿತು.

    Live Tv
    [brid partner=56869869 player=32851 video=960834 autoplay=true]

  • ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಲಂಡನ್: ಇಂಗ್ಲೆಂಡ್‍ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್‍ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಆಟಗಾರರಾದ ಚೇತೇಶ್ವರ ಪೂಜಾರ, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿ ಭರ್ಜರಿ ಪ್ರದರ್ಶನ ನೀಡಿ ಗಮನಸೆಳೆದಿದ್ದಾರೆ.

    ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯ ಪೂಜಾರ ಇದೀಗ ಸಸೆಕ್ಸ್ ತಂಡದ ನಾಯಕರಾಗಿದ್ದು, ಮಿಡೆಕ್ಸ್ ವಿರುದ್ಧದ ಪಂದ್ಯದಲ್ಲಿ ಪೂಜಾರ 231 ರನ್ (403 ಎಸೆತ, 21 ಬೌಂಡರಿ, 3 ಸಿಕ್ಸ್) ಬಾರಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.  ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್ ಲೀಗ್‍ನಲ್ಲಿ ಫ್ರಾಂಚೈಸಿ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್

    ಇತ್ತ ಟೀಂ ಇಂಡಿಯಾದಿಂದ ಹೊರಗುಳಿದಿರುವ ಆಲ್‍ರೌಂಡರ್ ವಾಷಿಂಗ್ಟನ್ ಸುಂದರ್ ಕೌಂಟಿ ಕ್ರಿಕೆಟ್‍ನಲ್ಲಿ ನಾರ್ಥಾಂಪ್ಟನ್‍ಶೈರ್ ತಂಡದ ಪರ ಆಡುತ್ತಿದ್ದು, ಲಂಕಾಶೈರ್ ವಿರುದ್ಧದ ಪಂದ್ಯದಲ್ಲಿ 22 ಓವರ್ ಎಸೆದು 1 ಮೇಡನ್ ಓವರ್ ಸಹಿತ 5 ವಿಕೆಟ್ ಕಿತ್ತು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ

    ಕೆಂಟ್ ತಂಡದ ಪರ ಆಡುತ್ತಿರುವ ಇನ್ನೋರ್ವ ಟೀಂ ಇಂಡಿಯಾ ವೇಗಿ ನವದೀಪ್ ಸೈನಿ ವಾರ್ವಿಕ್‍ಷೈರ್ ವಿರುದ್ಧದ ಪಂದ್ಯದಲ್ಲಿ 18 ಓವರ್ ಎಸೆದು 4 ಮೇಡನ್ ಓವರ್ ಸಹಿತ 5 ವಿಕೆಟ್ ಪಡೆದಿದ್ದಾರೆ.

    ಈ ಮೂವರು ಆಟಗಾರರು ಕೂಡ ಮತ್ತೆ ಟೀಂ ಇಂಡಿಯಾ ಪರ ಕಂಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಪೂಜಾರ ಟೆಸ್ಟ್ ತಂಡಕ್ಕೆ ಮಾತ್ರ ಸೀಮಿತವಾದರೆ, ಸೈನಿ ಮತ್ತು ಸುಂದರ್ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ. ಆಗೊಮ್ಮೆ ಈಗೊಮ್ಮೆ ತಂಡಕ್ಕೆ ಎಂಟ್ರಿಕೊಟ್ಟು ಹೊರ ಹೋಗುತ್ತಿದ್ದಾರೆ. ಮುಂದಿನ ಟಿ20 ವಿಶ್ವಕಪ್‍ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಇವರಿಬ್ಬರು ಮೈದಾನದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಮಿ ಮಿಂಚಿನ ಬೌಲಿಂಗ್‌ಗೆ ಪೂಜಾರ ಡಕ್‌ಔಟ್ – ತಬ್ಬಿ ಸಂಭ್ರಮಿಸಿದ ಟೀಂ ಇಂಡಿಯಾ ವೇಗಿ

    ಶಮಿ ಮಿಂಚಿನ ಬೌಲಿಂಗ್‌ಗೆ ಪೂಜಾರ ಡಕ್‌ಔಟ್ – ತಬ್ಬಿ ಸಂಭ್ರಮಿಸಿದ ಟೀಂ ಇಂಡಿಯಾ ವೇಗಿ

    ಮುಂಬೈ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಜುಲೈ 1 ರಿಂದ 5ರ ವರೆಗೆ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯನ್ನಾಡಲು ಸಮರಾಭ್ಯಾಸದಲ್ಲಿ ತೊಡಗಿದೆ.

    ಅದಕ್ಕಾಗಿ ಕೌಂಟಿ ಕ್ರಿಕೆಟ್ ಚಾಂಪಿಯನ್‌ಷಿಪ್‌ನ ಲೈಸ್ಟರ್‌ಶೈರ್ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಲೈಸ್ಟರ್‌ಶೈರ್ ತಂಡದ ಪರ ಆಡಿದ್ದ ಭಾರತ ತಂಡದ ಅನುಭವಿ ಬ್ಯಾಟರ್ ಚೇತೇಶ್ವರ್ ಪೂಜಾರ ಅವರನ್ನು ವೇಗಿಯ ಬೌಲರ್ ಮೊಹಮ್ಮದ್ ಶಮಿ ಶೂನ್ಯಕ್ಕೆ ಡಕ್‌ಔಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೆ ಔಟಾದ ಬಳಿಕ ಪೂಜಾರಾ ಅವರನ್ನು ತಬ್ಬಿ ಕುಣಿದಾಡುವ ಮೂಲಕ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೆ ರಣಜಿ ಟ್ರೋಫಿಯಲ್ಲಿ DRS ಬಳಸಲು ಹಣವಿಲ್ಲ!

    ಅಭ್ಯಾಸ ಪಂದ್ಯದ 2ನೇ ದಿನವಾದ ಶುಕ್ರವಾರ ಭಾರತ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 246/8 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಶ್ರೀಕರ್ ಭರತ್ 111 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಿ ತಂಡವನ್ನು 250ರ ಗಡಿ ತಲುಪುವಂತೆ ಮಾಡಿದರು. ಬಳಿಕ ಬ್ಯಾಟಿಂಗ್ ಆರಂಭಿಸಿದ ಲೈಸ್ಟರ್‌ಶೈರ್ ತಂಡ ಚಹಾ ವಿರಾಮಕ್ಕೆ 7 ವಿಕೆಟ್‌ಗಳ ನಷ್ಟದಲ್ಲಿ 213 ರನ್ ಗಳಿಸಿತ್ತು. ಲೈಸ್ಟರ್‌ಶೈರ್ ಪರ ಆಡಿದ್ದ ರಿಷಭ್ ಪಂತ್ 87 ಎಸೆತಗಳಲ್ಲಿ 76 ರನ್ ಗಳಿಸಿ ಔಟಾದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

    ಇದಕ್ಕೂ ಮುನ್ನ ಕ್ರೀಸ್‌ನಲ್ಲಿದ್ದ ಪೂಜಾರಾ ಎಚ್ಚರಿಕೆ ಆಟವಾಡುವ ಸೂಚನೆ ನೀಡಿದ್ದರು. ಈ ವೇಳೆ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಪೂಜಾರಾ ಅವರನ್ನು ಪೆವಿಲಿಯನ್ ಸೇರುವಂತೆ ಮಾಡಿದರು. 6 ಎಸೆತಗಳನ್ನು ಎದುರಿಸಿದ ಚೇತೇಶ್ವರ್ ಖಾತೆ ಕೂಡ ತೆರೆಯಲಾಗದೆ ಪೆವಿಲಿಯನ್ ಸೇರಿದರು.

    Live Tv

  • ಟೆಸ್ಟ್ ಸರಣಿ ಸೋಲಿಗೆ ಕಾರಣವಾಯಿತೇ ಪೂಜಾರ, ರಹಾನೆ ಬ್ಯಾಟಿಂಗ್ ವೈಫಲ್ಯ?

    ಟೆಸ್ಟ್ ಸರಣಿ ಸೋಲಿಗೆ ಕಾರಣವಾಯಿತೇ ಪೂಜಾರ, ರಹಾನೆ ಬ್ಯಾಟಿಂಗ್ ವೈಫಲ್ಯ?

    ಜೋಹನ್ಸ್‌ಬಗ್‌: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಸೋತಿದೆ. ಸರಣಿ ಸೋಲಲು ಇಬ್ಬರು ಬ್ಯಾಟ್ಸ್‌ಮ್ಯಾನ್‌ಗಳ ಬ್ಯಾಟಿಂಗ್ ವೈಫಲ್ಯ ಪ್ರಮುಖ ಕಾರಣವೆಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿದೆ.

    ಹೌದು ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ಮತ್ತು ವಿ.ವಿ.ಎಸ್ ಲಕ್ಷ್ಮಣ್ ಬಳಿಕ ಟೆಸ್ಟ್ ಸ್ಪೆಷಲಿಷ್ಟ್‌ಗಳೆಂದು ತಂಡದಲ್ಲಿ ಖಾಯಂ ಸ್ಥಾನ ಪಡೆದಿದ್ದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಕಳೆದ ಕೆಲ ಸರಣಿಗಳಲ್ಲಿ ತಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಸುಳ್ಳಾಗಿಸಿದ್ದಾರೆ. ಇದೀಗ ಇವರಿಬ್ಬರ ಬ್ಯಾಟಿಂಗ್ ವೈಫಲ್ಯ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಮುಂದುವರಿದಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಪೂಜಾರ ಮತ್ತು ರಹಾನೆ ತಲಾ ಒಂದೊಂದು ಅರ್ಧಶತಕ ಸಿಡಿಸಿದನ್ನು ಬಿಟ್ಟರೆ ಇವರ ಬ್ಯಾಟ್‍ನಿಂದ ರನ್ ಹರಿದು ಬಂದಿಲ್ಲ. ಮಧ್ಯಮಕ್ರಮಾಂಕದಲ್ಲಿ ತಂಡದ ಆಧಾರ ಸ್ತಂಭವಾಗಬೇಕಿದ್ದ ಈ ಇಬ್ಬರೂ ಬ್ಯಾಟ್ಸ್‌ಮ್ಯಾನ್‌ಗಳು ಕೂಡ ಕೈ ಕೊಟ್ಟರು ಹಾಗಾಗಿ ಟೀಂ ಇಂಡಿಯಾ ಸರಣಿ ಸೋತಿದೆ. ಮುಂದಿನ ಸರಣಿಗೆ ಪೂಜಾರ ಮತ್ತು ರಹಾನೆಗೆ ಕೊಕ್ ನೀಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಿ ಎಂಬ ಕೂಗು ಜೋರಾಗಿದೆ. ಇದನ್ನೂ ಓದಿ: 3ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಸೋಲು – ಸರಣಿ ವಶಪಡಿಸಿಕೊಂಡ ಆಫ್ರಿಕಾ

    ಸರಣಿಯ ಮೂರು ಪಂದ್ಯಗಳ 6 ಇನ್ನಿಂಗ್ಸ್‌ನಲ್ಲಿ ಪೂಜಾರ, ಕ್ರಮವಾಗಿ 0, 16, 3, 53, 43, 9 ರನ್ ಸೇರಿ ಒಟ್ಟು 124 ರನ್ ಸಿಡಿಸಿದರೆ, ರಹಾನೆ ಕೊಡುಗೆ 48, 20, 0, 58, 9, 1 ರನ್ ಸೇರಿ ಒಟ್ಟು 136 ರನ್ ಬಾರಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ತಂಡ ಆರಂಭಿಕ ಆಘಾತ ಎದುರಿಸಿದಾಗ ಕ್ರಿಸ್‍ನಲ್ಲಿ ನಿಂತು ಬ್ಯಾಟಿಂಗ್ ಮುಂದುವರಿಸಿ ತಂಡಕ್ಕೆ ಬಲ ತುಂಬಬೇಕಾಗಿದ್ದ ಇಬ್ಬರೂ ಕೂಡ ಆಫ್ರಿಕಾ ನೆಲದಲ್ಲಿ ಎಡವಿದ್ದಾರೆ. ಈಗಾಗಲೇ ಸಾಕಷ್ಟು ಅವಕಾಶಗಳನ್ನು ಟೀಂ ಇಂಡಿಯಾದಲ್ಲಿ ಪೂಜಾರ ಮತ್ತು ರಹಾನೆಗೆ ಕಲ್ಪಿಸಿಕೊಡಲಾಗಿದೆ. ಹಾಗಾಗಿ ಮುಂದಿನ ಸರಣಿಯಲ್ಲಿ ಬೆಂಚ್ ಕಾಯುತ್ತಿರುವ ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಅವರಂತ ಪ್ರತಿಭವಂತ ಆಟಗಾರರಿಗೆ ಅವಕಾಶ ಕೊಡಿ ಎಂಬ ಅಭಿಪ್ರಾಯ ಹೆಚ್ಚಿದೆ. ಇದನ್ನೂ ಓದಿ: ಶಾಕಿಂಗ್‌ ಡಿಆರ್‌ಎಸ್‌ ವಿಡಿಯೋಗೆ ಕೊಹ್ಲಿ ಕಿಡಿ – ರಿವ್ಯೂ ಸಕ್ಸಸ್‌ ಎಂದು ವಾಹಿನಿಯಿಂದ ಸಮರ್ಥನೆ

    ಟೆಸ್ಟ್ ಸರಣಿಯನ್ನು ಗೆಲುವಿನ ಮೂಲಕ ಆರಂಭಿಸಿದ ಟೀಂ ಇಂಡಿಯಾ ಆ ಬಳಿಕ ಸತತ 2 ಪಂದ್ಯವನ್ನು ಸೋತು ಸರಣಿ ಕೈಚೆಲ್ಲಿದೆ. ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದ್ದು ಮೊದಲ ಪಂದ್ಯ ಜನವರಿ 19 ರಂದು ಆರಂಭವಾಗುತ್ತಿದೆ. ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಸರಣಿ ಗೆಲ್ಲಲಿ ಅನ್ನೋದು ಅಭಿಮಾನಿಗಳ ಹಾರೈಕೆಯಾಗಿದೆ. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

  • ನನಗೆ ವಾರ್ನರ್, ಸೆಹ್ವಾಗ್ ರೀತಿ ಬ್ಯಾಟ್ ಬೀಸಲು ಬರಲ್ಲ: ಪೂಜಾರ

    ನನಗೆ ವಾರ್ನರ್, ಸೆಹ್ವಾಗ್ ರೀತಿ ಬ್ಯಾಟ್ ಬೀಸಲು ಬರಲ್ಲ: ಪೂಜಾರ

    – ತಂಡವನ್ನು ಗೆಲುವಿನ ದಡ ಸೇರಿಸುವುದು ನನ್ನ ಗುರಿ

    ನವದೆಹಲಿ: ನನಗೆ ಡೇವಿಡ್ ವಾರ್ನರ್ ಅಥವಾ ವೀರೇಂದ್ರ ಸೆಹ್ವಾಗ್ ರೀತಿಯಲ್ಲಿ ಬ್ಯಾಟ್ ಬೀಸಲು ಬರಲ್ಲ ಎಂದು ಭಾರತದ ಟೆಸ್ಟ್ ಬ್ಯಾಟ್ಸ್ ಮ್ಯಾನ್ ಚೆತೇಶ್ವರ ಪೂಜಾರ ಅವರು ಹೇಳಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ಚೆತೇಶ್ವರ ಪೂಜಾರ ಟೆಸ್ಟ್‍ನಲ್ಲಿ ಭಾರತದ ಬ್ಯಾಟಿಂಗ್‍ನ ಮುಖ್ಯ ಆಧಾರವಾಗಿದ್ದಾರೆ. ಟೆಸ್ಟ್‍ನಲ್ಲಿ ಮೂರನೇ ಆಟಗಾರನಾಗಿ ಬ್ಯಾಟಿಂಗ್ ಬರುವ ಪೂಜಾರ 48.7 ಸರಾಸರಿಯಲ್ಲಿ ಬ್ಯಾಟ್ ಬೀಸಿ 18 ಶತಕಗಳನ್ನು ಸಿಡಿಸಿದ್ದಾರೆ. ಇದರ ಜೊತೆಗೆ ಇದುವರೆಗೆ ಆಡಿರುವ 77 ಟೆಸ್ಟ್ ಪಂದ್ಯಗಳಲ್ಲಿ 5,840 ರನ್ ಗಳಿಸಿದ್ದಾರೆ.

    ಟೆಸ್ಟ್ ಮಾದರಿಯಲ್ಲಿ ಒಳ್ಳೆಯ ದಾಖಲೆಯನ್ನು ಹೊಂದಿರುವ ಪೂಜಾರ ಅವರನ್ನು ಇತ್ತೀಚೆಗೆ ಅವರ ಮಂದಗತಿಯ ಬ್ಯಾಟಿಂಗ್ ವಿಚಾರವಾಗಿ ಪ್ರಶ್ನೆ ಮಾಡಲಾಗಿತ್ತು. ಇತ್ತೀಚೆಗೆ ನಡೆದ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪೂಜಾರ ಅವರು ಬರೋಬ್ಬರಿ 237 ಎಸೆತಗಳಲ್ಲಿ ಕೇವಲ 66 ರನ್ ಸಿಡಿಸಿದ್ದರು. ಈ ವಿಚಾರವಾಗಿ ಅವರನ್ನು ಪ್ರಶ್ನೆ ಮಾಡಿದಾಗ ನನಗೆ ಡೇವಿಡ್ ವಾರ್ನರ್ ಅಥವಾ ವೀರೇಂದ್ರ ಸೆಹ್ವಾಗ್ ರೀತಿಯಲ್ಲಿ ಬ್ಯಾಟ್ ಬಿಸಲು ಬರುವುದಿಲ್ಲ. ನನ್ನ ತಂಡಕ್ಕೆ ಹೇಗೆ ಬೇಕು ಹಾಗೇ ಆಡುತ್ತೇನೆ ಎಂದು ಹೇಳಿದ್ದಾರೆ.

    ನನ್ನ ಬ್ಯಾಟಿಂಗ್ ಬಗ್ಗೆ ಮೀಡಿಯಾದಲ್ಲಿ ಬಹಳ ಚರ್ಚೆ ನಡೆಯುತ್ತಿದೆ ಎಂಬುದು ನನಗೆ ಗೊತ್ತು. ಆದರೆ ನಾನು ಅದರ ಬಗ್ಗೆ ಯೋಚನೆ ಮಾಡುವುದಿಲ್ಲ. ನನ್ನ ಮಂದಗತಿಯ ಬ್ಯಾಟಿಂಗ್ ಅನ್ನು ಹೊರಗೆ ಬೇರೆ ರೀತಿಯಲ್ಲಿ ವರ್ಣಿಸಲಾಗುತ್ತಿದೆ. ಆದರೆ ತಂಡದ ಆಡಳಿತ ಮಂಡಳಿ ಈ ವಿಚಾರದಲ್ಲಿ ನನ್ನ ಸಹಾಯಕ್ಕೆ ನಿಂತಿದೆ. ನನ್ನ ಸ್ಟ್ರೈಕ್ ರೇಟ್ ವಿಚಾರದಲ್ಲಿ ನನ್ನ ತಂಡದ ಕೋಚ್ ಆಗಲಿ ಅಥವಾ ಕ್ಯಾಪ್ಟನ್ ಅಗಲಿ ಯಾವುದೇ ರೀತಿಯ ಒತ್ತಡ ಹಾಕಿಲ್ಲ ಎಂದು ಪೂಜಾರ ತಿಳಿಸಿದ್ದಾರೆ.

    ನನಗೆ ನನ್ನ ಸ್ಟ್ರೈಕ್ ರೇಟ್ ಮುಖ್ಯವಲ್ಲ, ನನ್ನ ಪ್ರಾಥಮಿಕ ಕಾಳಜಿ ಮತ್ತು ಕಲಸವೆಂದರೆ ಪ್ರತಿ ಬಾರಿಯೂ ತನ್ನ ತಂಡವನ್ನು ಗೆಲುವಿನ ದಡ ಸೇರಿಸುವುದು ನನ್ನ ಜವಾಬ್ದಾರಿ. ಆದ್ದರಿಂದ ನನ್ನ ನಿಧಾನಗತಿಯ ಬ್ಯಾಟಿಂಗ್ ಶೈಲಿ ಮತ್ತು ಸ್ಟ್ರೈಕ್ ರೇಟ್ ಈ ಎಲ್ಲವುದರಿಂದ ನಾನು ಸ್ವೀಕರಿಸುತ್ತಿರುವ ಟೀಕೆಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಪೂಜಾರ ಸ್ಪಷ್ಟಪಡಿಸಿದ್ದಾರೆ.

    ನನ್ನ ತಂಡದ ಆಡಳಿತ ಮಂಡಳಿ ಮತ್ತು ಆಟಗಾರರು ನನ್ನ ಬ್ಯಾಟಿಂಗ್ ಶೈಲಿಯನ್ನು ಅರ್ಥಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಣಜಿ ಟ್ರೋಫಿ ಫೈನಲ್‍ನಲ್ಲಿ ಯಾಕೆ ರನ್ ಗಳಿಸಲು ಪೂಜಾರ ಅಷ್ಟೊಂದು ಎಸೆತಗಳನ್ನು ತೆಗೆದುಕೊಂಡರು ಎಂಬ ಪ್ರಶ್ನೆ ಎದ್ದಿದೆ. ಅದರ ಬಗ್ಗೆ ನಾನು ಯಾವಗಲೂ ಗಮನ ಕೊಡುವುದಿಲ್ಲ. ನನ್ನ ಕೆಲಸ ನನ್ನ ತಂಡ ಎಲ್ಲ ಸಮಯದಲ್ಲೂ ಗೆಲ್ಲುವಂತೆ ಮಾಡುವುದು. ಅದನ್ನು ನಾನು ಮಾಡಲು ಪ್ರಯತ್ನ ಪಡುತ್ತೇನೆ ಎಂದು ಪೂಜಾರ ಹೇಳಿದ್ದಾರೆ.

    ಈಗ ಬರುತ್ತಿರುವ ಯುವ ಆಟಗಾರರು ಟೆಸ್ಟ್ ಕ್ರಿಕೆಟ್‍ನಲ್ಲಿ ಹೆಚ್ಚು ಆಸಕ್ತಿ ಹೊಂದಿರುವುದಿಲ್ಲ, ಬದಲಿಗೆ ಅವರು ಏಕದಿನ ಮತ್ತು ಟಿ-20 ಮಾದರಿಯಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಂಡಿರುತ್ತಾರೆ. ನಾನು ಇದನ್ನು ತಪ್ಪು ಎಂದು ಹೇಳುವುದಿಲ್ಲ. ಯಾಕೆಂದರೆ ಬಿಳಿ ಬಾಲಿನಲ್ಲಿ ಹೆಚ್ಚು ಪಂದ್ಯಗಳನ್ನು ಇತ್ತೀಚೆಗೆ ಆಡಿಸುತ್ತಾರೆ ಹಾಗೂ ಆ ಪಂದ್ಯಗಳು ಆರ್ಥಿಕವಾಗಿ ಉತ್ತಮವಾಗಿ ಇರುತ್ತವೆ. ಆದರೆ ನಿಜವಾದ ಆಟ ಇರುವುದು ಟೆಸ್ಟ್ ಕ್ರಿಕೆಟ್‍ನಲ್ಲಿ ಎಂದು ಪೂಜಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಪೂಜಾರ ಭರ್ಜರಿ ದ್ವಿಶತಕ- ಸಂಕಷ್ಟದಲ್ಲಿ ಕರ್ನಾಟಕ

    ಪೂಜಾರ ಭರ್ಜರಿ ದ್ವಿಶತಕ- ಸಂಕಷ್ಟದಲ್ಲಿ ಕರ್ನಾಟಕ

    ರಾಜ್‍ಕೋಟ್ : ಭಾರತದ ಟೆಸ್ಟ್ ತಂಡದ ಆಟಗಾರ ಚೇತೇಶ್ವರ್ ಪೂಜಾರ ಭರ್ಜರಿ ದ್ವಿಶತಕದಿಂದಾಗಿ ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಸೌರಾಷ್ಟ್ರ ಬೃಹತ್ ಮೊತ್ತ ಕಲೆಹಾಕಿದೆ. ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿರುವ ಸೌರಾಷ್ಟ್ರ ಗೆಲುವಿನ ಕಡೆ ಮುಖ ಮಾಡಿದೆ. ಸೌರಾಷ್ಟ್ರದ ಬೃಹತ್ ಮೊತ್ತ ಬೆನ್ನತ್ತಿರುವ ಕರ್ನಾಟಕ ಸಂಕಷ್ಟಕ್ಕೆ ಸಿಲುಕಿದೆ.

    ರಾಜ್ ಕೋಟ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ದಿನದ ಅಂತ್ಯಕ್ಕೆ 162 ರನ್ ಗಳಿಸಿದ್ದ ಪೂಜಾರ ಎರಡನೇ ದಿನ ಕೂಡಾ ಭರ್ಜರಿ ಬ್ಯಾಟಿಂಗ್ ನಡೆಸಿದ್ರು. ಕರ್ನಾಟಕ ತಂಡದ ಬೌಲರ್ ಗಳಿಗೆ ಬೆವರಿಳಿಸಿ ದ್ವಿಶತಕ (248) ಬಾರಿಸಿದ್ರು. ಪೂಜಾರಿಗೆ ಸಾಥ್ ನೀಡಿದ್ದ ಶೆಲ್ಡನ್ ಜಾಕ್ಸನ್ ಕೂಡಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿ ಶತಕ(161) ಸಿಡಿಸಿದ್ರು. ಇಬ್ಬರು ಆಟಗಾರರ ಪ್ರದರ್ಶನದಿಂದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್ ನ್ನ 581 ಗೆ ಡಿಕ್ಲೈರ್ ಮಾಡಿಕೊಳ್ತು. ಭಾರತದ ಪರ ಪ್ರವೀಣ್, ಪವನ್, ಸುಚೀತ್ ತಲಾ ಎರಡು ವಿಕೆಟ್ ಪಡೆದ್ರು.

    ಮೊಲದ ಇನ್ನಿಂಗ್ಸ್ ಪ್ರಾರಂಭ ಮಾಡಿರುವ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿದೆ. ಇನ್ನಿಂಗ್ಸ್ ನ ಮೊದಲ ಎಸೆತದಲ್ಲೆ ದೇವದತ್ ಔಟಾದ್ರು. ಎರಡನೇ ದಿನದ ಅಂತ್ಯಕ್ಕೆ ಕರ್ನಾಟಕ ಒಂದು ವಿಕೆಟ್ ಕಳೆದುಕೊಂಡು 13 ರನ್ ಗಳಿಸಿದೆ. ಆರ್. ಸಮರ್ಥ ಮತ್ತು ರೋಹನ್ ಕದಂ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

    ಸ್ಕೋರ್:
    ಸೌರಾಷ್ಟ್ರ ಮೊದಲ ಇನ್ನಿಂಗ್ಸ್ 581/7
    ಪೂಜಾರ-248
    ಜಾಕ್ಸನ್ – 161

    ಪ್ರವೀಣ್ – 80-2
    ಸುಚೀತ್ – 129-2

    ಕರ್ನಾಟಕ ಮೊದಲ ಇನ್ನಿಂಗ್ಸ್ – 13/1
    ಆರ್.ಸಮರ್ಥ -6*
    ರೋಹನ್ ಕದಂ – 7*