Tag: chevarayaswamy

  • ಕಾಂಗ್ರೆಸ್‍ನಲ್ಲಿ ಒಕ್ಕಲಿಗ ಸಮರ – ಜಮೀರ್ ವಿರುದ್ಧ ಆಪ್ತ ಚೆಲುವರಾಯಸ್ವಾಮಿ ಸಂಧಾನ, ಸಿದ್ದು ಸೈಲೆಂಟ್

    ಕಾಂಗ್ರೆಸ್‍ನಲ್ಲಿ ಒಕ್ಕಲಿಗ ಸಮರ – ಜಮೀರ್ ವಿರುದ್ಧ ಆಪ್ತ ಚೆಲುವರಾಯಸ್ವಾಮಿ ಸಂಧಾನ, ಸಿದ್ದು ಸೈಲೆಂಟ್

    ಬೆಂಗಳೂರು: ದಿನೇ ದಿನೇ ಕಾಂಗ್ರೆಸ್‍ನಲ್ಲಿ ಕುರ್ಚಿ ಕದನ ಜೋರಾಗಿದೆ. ಜೊತೆಗೆ ಜಮೀರ್ ವರ್ಸಸ್ ಡಿಕೆಶಿ ಟಾಕ್‍ವಾರ್ ಸಹ ಮಿತಿ ಮೀರುತ್ತಿದೆ. ಡಿಕೆಶಿ ವಾರ್ನಿಂಗ್ ಬಳಿಕವೂ ಶಾಸಕ ಜಮೀರ್ ಅವರು ಸಿದ್ದರಾಮಯ್ಯ ಜಪ ಮಾಡಿದ್ದು ಕಾಂಗ್ರೆಸ್‍ನಲ್ಲಿ ಟಾಕ್‍ವಾರ್ ಹೆಚ್ಚಿಸಿದೆ.

    ಈ ಮಧ್ಯೆ ಮಾಜಿ ಸಚಿವ ಚಲುವರಾಯಸ್ವಾಮಿ, ಡಿ.ಕೆ ಸುರೇಶ್ ಮನೆಗೆ ಭೇಟಿ ನೀಡಿದ್ದು, ಜಮೀರ್ ವಿರುದ್ಧ ಹರಿಹಾಯ್ದಿದ್ದಾರೆ. ಒಕ್ಕಲಿಗರ ಬಗ್ಗೆ ಮಾತಾಡದಂತೆ ಚಲುವರಾಯಸ್ವಾಮಿ ತಾಕೀತು ಮಾಡಿದ್ದಾರೆ. ಜಮೀರ್ ನಡೆಯಿಂದ ಜೆಡಿಎಸ್‍ಗೆ ಲಾಭವಾಗಬಹುದು. ಹೀಗಾಗಿ ಆರಂಭದಲ್ಲೇ ವಿವಾದವನ್ನು ತಣ್ಣಗಾಗಿಸಲು ಚಲುವರಾಯಸ್ವಾಮಿ ಮುಂದಾಗಿದ್ದಾರೆ. ಇದನ್ನೂ ಓದಿ; ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ದುರ್ಮರಣ- ಗೃಹ ಸಚಿವರು ಕಂಬನಿ

    ತಕ್ಷಣವೇ ಜಮೀರ್ ಜೊತೆ ಮಾತುಕತೆ ನಡೆಸುವುದಾಗಿ ಚಲುವರಾಯಸ್ವಾಮಿ ಹೇಳಿದ್ದಾರೆ. ಅಲ್ಲದೇ ವಿವಾದಕ್ಕೆ ಅಂತ್ಯ ಹಾಡಲು ಸಿದ್ದರಾಮಯ್ಯ ಸಹ ಸೂಚಿಸಿದ್ರು ಎನ್ನಲಾಗಿದೆ. ಹೀಗಾಗಿ ಜಮೀರ್, ಸಿದ್ದರಾಮಯ್ಯ ಆಪ್ತರಾದ ಚಲುವರಾಯಸ್ವಾಮಿ ಖುದ್ದು ಫೀಲ್ಡ್‍ಗಿಳಿದಿದ್ದಾರೆ. ಕಟುನುಡಿಗಳ ಮೂಲಕ ಆಪ್ತನಿಗೆ ಸುಮ್ಮನಿರುವಂತೆ ಪರೋಕ್ಷವಾಗಿ ಸೂಚಿಸಿದ್ದಾರೆ.

    ಜಮೀರ್‍ಗೆ ಶೋಕಾಸ್ ನೋಟಿಸ್ ಮಾಡಿ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಸ್ತುಪಾಲನ ಸಮಿತಿ ರೆಹಮಾನ್ ಖಾನ್‍ಗೆ ಖುದ್ದು ಡಿಕೆಶಿ ಸೂಚಿಸಿದ್ದಾರೆ. ಇದೆಲ್ಲದರ ಮಧ್ಯೆ ಸಿದ್ದರಾಮಯ್ಯ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತುಟಿ ಬಿಚ್ಚಿಲ್ಲ. ಸಿದ್ದರಾಮೋತ್ಸವದವರೆಗೆ ಸಿದ್ದು ಮೌನವಾಗಿರ್ತಾರಾ ಎಂದ ಗುಸುಗುಸು ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]