Tag: chhatrapati shivaji

  • ಶಿವಾಜಿಗೆ ಅವಮಾನ – ಠಾಣೆ ಮುಂದೆ ಜನ ಸೇರುತ್ತಿದ್ದಂತೆ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

    ಶಿವಾಜಿಗೆ ಅವಮಾನ – ಠಾಣೆ ಮುಂದೆ ಜನ ಸೇರುತ್ತಿದ್ದಂತೆ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

    ಯಾದಗಿರಿ: ಕಿಡಿಗೇಡಿಗಳು ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji) ತಿರುಚಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅವಮಾನ ಮಾಡಿರುವ ಘಟನೆ ಯಾದಗಿರಿಯಲ್ಲಿ (Yadagiri) ನಡೆದಿದೆ.

    ದುಷ್ಕರ್ಮಿಗಳು ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಟಿಪ್ಪು ಸುಲ್ತಾನ್ (Tippu Sultan) ಫೋಟೋಗಳನ್ನು ಬಳಸಿಕೊಂಡಿದ್ದಾರೆ. ಟಿಪ್ಪುವಿನ ಕಾಲ ಬುಡದಲ್ಲಿ ಶಿವಾಜಿ ಇರುವಂತೆ ಫೋಟೋ ಎಡಿಟ್ ಮಾಡಿದ್ದಾರೆ. ಅಂಬಾಭವಾನಿ ದೇವಿಯ ಮುಂದೆ ಶಿವಾಜಿ ಮಂಡಿಯೂರಿ ಪ್ರಾರ್ಥಿಸುತ್ತಿರುವ ಚಿತ್ರವನ್ನು ಕತ್ತರಿಸಿ, ಟಿಪ್ಪು ಸುಲ್ತಾನ್‌ನ ಮುಂದೆ ಮಂಡಿಯೂರಿ ಕುಳಿತು ಪ್ರಾರ್ಥಿಸುತ್ತಿರುವಂತೆ ಕೂರಿಸಿ ಕಿಡಿಗೇಡಿಗಳು ಎಡಿಟ್ ಮಾಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.

    ಯಾದಗಿರಿ ನಗರದ ಅರ್ಸನ್ ಶೇಕ್ ಹಾಗೂ ಶೇಕ್ ಇರ್ಫಾನ್ ಎಂಬ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಮಾಹಿತಿ ತಿಳಿದ ಕೂಡಲೆ ನಗರ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ ನೂರಾರು ಹಿಂದೂ ಕಾರ್ಯಕರ್ತರು ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಎಡಿಟ್ ಮಾಡಿರುವ ಚಿತ್ರವನ್ನು ಯುವಕರು ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಾಕಿ ಅವಮಾನ ಮಾಡಿ ಅದರ ವೀಡಿಯೋ ಕೂಡ ಹರಿಬಿಟ್ಟಿದ್ದಾರೆ. ಈ ಮೂಲಕ ಹಿಂದೂ ಭಾವನೆಗೆ ಧಕ್ಕೆಯಾಗುವ ರೀತಿ ವರ್ತಿಸಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

    ಈ ಕುರಿತು ದೂರು ನೀಡಲು ಆಗಮಿಸಿದ ಹಿಂದೂ ಸಂಘಟನೆ ಯುವಕರು ತಡರಾತ್ರಿಯವರೆಗೂ ಯಾದಗಿರಿ ನಗರ ಠಾಣೆ ಮುಂದೆ ಜಮಾಯಿಸಿದರು. ಹಿಂದೂ ಕಾರ್ಯಕರ್ತ ಶಿವಕುಮಾರ್ ದೂರು ನೀಡಿದ್ದು, ಆರೋಪಿಗಳಾದ ಅರ್ಸನ್ ಶೇಕ್ ಹಾಗೂ ಶೇಕ್ ಇರ್ಫಾನ್ ವಿರುದ್ಧ ನಗರ ಠಾಣೆಯಲ್ಲಿ ಐಪಿಸಿ 295 (ಎ) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ

    ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ರಾಜಹಂಸಗಡ ಕೋಟೆಯ ರಾಜಕೀಯ ಜೋರಾಗಿದ್ದು ಬಿಜೆಪಿ, ಕಾಂಗ್ರೆಸ್ ಬಳಿಕ ಈಗ ಎಂಇಎಸ್ (MES) ಎಂಟ್ರಿಯಾಗಿದೆ. ಮಹಾರಾಷ್ಟ್ರದ (Maharashtra) ರಾಯಗಡದಿಂದ ಅರ್ಚಕರನ್ನು ಕರೆತಂದು ಎಂಇಎಸ್ ಪುಂಡರು ರಾಜಹಂಸಗಡ ಕೋಟೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಜಹಂಸಗಡ ಕೋಟೆಯಲ್ಲಿ ಈಗಾಗಲೇ ಎರಡೆರಡು ಬಾರಿ ಪ್ರತಿಮೆ ಲೋಕಾರ್ಪಣೆ ಆಗಿದೆ. ಇದರಿಂದ ಶಿವಾಜಿ ಪ್ರತಿಮೆಗೆ (Chhatrapati Shivaji Statue) ಅಪಮಾನ ಆಗಿದೆ ಎಂದು ಆರೋಪಿಸಿ ಶಿವಾಜಿ ಪ್ರತಿಮೆ ಶುದ್ಧೀಕರಣ ಹೆಸರಲ್ಲಿ ಎಂಇಎಸ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ನಡು ರಸ್ತೆಯಲ್ಲೇ ಮತದಾರರಿಂದ ಕ್ಲಾಸ್

    ಮಹಾರಾಷ್ಟ್ರದ ರಾಯಗಡದಿಂದ ಅರ್ಚಕರನ್ನು ಕರೆತಂದು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು. ಮಹಾರಾಷ್ಟ್ರದ ಪಂಡರಪುರದ ಚಂದ್ರಭಾಗಾ, ಭೀಮಾ ಭಾಮಾ ಇಂದ್ರಾಯಣಿ, ರಾಜಹಂಸಗಡ, ರಾಮಶೇಜ ಸಾಲ್ಹೇರ, ಪನ್ಹಾಳಗಡ, ರಾಯಗಡ, ಗಂಗಾಸಾಗರದಿಂದ ನೀರು ತಂದು ಶಿವಾಜಿ ಉತ್ಸವ ಮೂರ್ತಿಗೆ ಪೂಜೆ ಮಾಡಲಾಯಿತು.

    ಇತ್ತ ಶಿವಾಜಿ ಪ್ರತಿಮೆ ಎದುರು ಯಾವುದೇ ರೀತಿಯ ಪೂಜೆಗೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನಾ ಫಲಕ ಹಾಕಿದೆ. ಮತ್ತೊಂದೆಡೆ ಎಂಇಎಸ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ಪೂಜಾ ಕೈಂಕರ್ಯ ನಡೆಸಲಾಗಿದೆ. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

  • ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

    ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

    ಬೆಳಗಾವಿ: ಮರಾಠಾ (Marathas) ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ (Kannadigas) ಮರೆತರಾ ಬೆಳಗಾವಿ (Belagavi) ರಾಜಕಾರಣಿಗಳು ಎಂಬುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ ಶುರುವಾಗಿದೆ. ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರನ್ನು ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಬೆಳಗಾವಿ ತಾಲೂಕಿನ 3 ಕ್ಷೇತ್ರದಲ್ಲಿ ಮರಾಠಾ ಮತಗಳ ಓಲೈಕೆಗೆ ‘ಪ್ರತಿಮೆ’ ಪಾಲಿಟಿಕ್ಸ್ ನಡೆಯುತ್ತಿದೆ. ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಾ ಮತಗಳನ್ನು ಸೆಳೆಯಲು ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ನಾನಾ ಕಸರತ್ತು ನಡೆಸಿದ್ದಾರೆ. ಬಿಜೆಪಿ-ಕಾಂಗ್ರೆಸ್ ಮಧ್ಯೆ ಮರಾಠಾ ಮತಗಳ ಓಲೈಕೆಗೆ ಪೈಪೋಟಿ ನಡೆಯುತ್ತಿದ್ದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಗೆ ಪೈಪೋಟಿ ನಡೆಯುತ್ತಿದೆ.

    ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಮಧ್ಯೆ ಕ್ರೆಡಿಟ್ ಫೈಟ್ ಜೋರಾಗಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಇತ್ತಿಚೆಗೆ ಬಿಜೆಪಿ ಶಾಸಕ ಅನಿಲ್ ಬೆನಕೆ ಸಂಭಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಿದ್ದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಿವಚರಿತ್ರೆ ಉದ್ಘಾಟನೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ತಯಾರಿ ಮಾಡಿಕೊಂಡಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಕಲಾಕೃತಿ ಮೂಲಕ ಪರಿಚಯಿಸುವ ಧ್ವನಿ ಬೆಳಕಿನ ಕಾರ್ಯಕ್ರಮ ಶಿವಚರಿತ್ರೆ ಉದ್ದೇಶವನ್ನು ಶಾಸಕ ಅಭಯ್ ಪಾಟೀಲ್ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

    ಪೀರನವಾಡಿಯಲ್ಲಿ ಹೋರಾಟ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ವರ್ಷಗಳೇ ಕಳೆದು ಹೋದವು. ಇತ್ತ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಮೂರ್ತಿಯನ್ನು ಕಳೆದ 2008ರಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ವಿಶ್ವಗುರು ಬಸವಣ್ಣ ಪುತ್ಥಳಿ ಅಧಿಕೃತವಾಗಿ ಲೋಕಾರ್ಪಣೆ ಕಂಡಿಲ್ಲ. 2008ರಲ್ಲಿ ಅಭಯ್ ಪಾಟೀಲ್ ಶಾಸಕರಾಗಿದ್ದಾಗ ಸ್ವಂತ ಖರ್ಚಿನಲ್ಲಿ ಬಸವಣ್ಣ ಮೂರ್ತಿ ಪ್ರತಿಷ್ಠಾನೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿ 4, ರಾಜ್ಯಹೆದ್ದಾರಿ ಮಧ್ಯೆ ವೃತ್ತದಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ಲೋಕಾರ್ಪಣೆಗೊಂಡಿಲ್ಲ.

    ಬೆಳಗಾವಿ ರಾಜಕಾರಣಿಗಳ ನಡೆಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ‘ಜಾನಿ ಜಾನಿ ಎಸ್ ಪಪ್ಪಾ.. ಬೆಳಗಾವಿ ಅಭಿವೃದ್ಧಿ ನೋ ಪಪ್ಪಾ.. ಇಲ್ಲಿ ಬರೀ ಮರಾಠಿಗರ ಓಲೈಕೆ ಹಾ.. ಹಾ..’ ಎಂದು ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇದೆ. ಆದರೆ ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ: ಸತೀಶ್ ಜಾರಕಿಹೊಳಿ

    ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಬಹುಜನ ಸಮಾಜದ ನಾಯಕರಾಗಿದ್ದರು. ಛತ್ರಪತಿ ಶಿವಾಜಿ (Chhatrapati Shivaji) ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

    ತಾಲೂಕಿನ ಹೊನಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿಶೇಷ ಗೌರವ ಇದೆ. ಮೊದಲು ಕರ್ನಾಟಕ ಮಹಾರಾಷ್ಟ್ರ ಅಂತಾ ಇರಲಿಲ್ಲ. ಬೆಂಗಳೂರಿನವರೆಗೂ ಛತ್ರಪತಿ ಶಿವಾಜಿ ಮಹಾರಾಜರು ಆಳ್ವಿಕೆ ನಡೆಸಿದ್ದರು. ನಮ್ಮ ಸರ್ಕಾರ ಇದ್ದಾಗ ಬೆಳಗಾವಿಯಲ್ಲಿಯೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಒಂದು ಕೋಟಿ ಮೀಸಲು ಇಟ್ಟಿದ್ದೇವೆ. ಆದಷ್ಟು ಬೇಗ ಆ ಪ್ರತಿಮೆ ಲೋಕಾರ್ಪಣೆ ಆಗಲಿದೆ ಎಂದರು.

    ಛತ್ರಪತಿ ಶಿವಾಜಿ ಮಹಾರಾಜರ ಅಂತ್ಯ ಹೇಗೆ ಆಯ್ತು ಈ ಬಗ್ಗೆ ಚರ್ಚೆ ಆಗಬೇಕಿದೆ. ಛತ್ರಪತಿ ಶಿವಾಜಿ ಮಹಾರಾಜರು ಇರಲಿ, ಬಸವಣ್ಣ ಇರಲಿ, ಡಾ.ಬಿ.ಆರ್. ಅಂಬೇಡ್ಕರ್ ಇರಲಿ ಅವರಿಗೆ ಹೇಗೆ ಅನ್ಯಾಯ ಆಯ್ತು ಈ ಬಗ್ಗೆ ಚರ್ಚೆ ಆಗಬೇಕಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ದೇಶ ದ್ರೋಹಿ ಪಟ್ಟ ಕೊಡ್ತಾರೆ ಎಂದು ಕಿಡಿಕಾರಿದರು.

    ಶಾಹು ಮಹಾರಾಜರ ಬಗ್ಗೆ ಕರ್ನಾಟಕದಲ್ಲಿ ವಿಶೇಷ ಗೌರವ ಇದೆ. ದಲಿತರಿಗೆ ಮೀಸಲಾತಿ ನೀಡಿ, ಬಡವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡಿದ್ದರು. ಇತಿಹಾಸವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಶಿಕ್ಷಣ, ಸಮಾಜ, ರೈತರು, ತಮ್ಮ ಮಕ್ಕಳ ಬಗ್ಗೆ ಚರ್ಚೆ ಆಗಬೇಕು. ಧರ್ಮ, ಜಾತಿ, ಭಾಷೆ ಆಮೇಲೆ ಬರುತ್ತೆ, ಮೊದಲು ಈ ಬಗ್ಗೆ ಚರ್ಚೆ ಆಗಬೇಕು‌ ಎಂದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

    ಶಿವಾಜಿ ಮಹಾರಾಜರ ಪ್ರತಿಮೆ ಇಂದು ಲೋಕಾರ್ಪಣೆ ಆಗಿದೆ. ಅದನ್ನು ನೋಡಿದ ಮೇಲೆ ಅವರ ಹೋರಾಟ ನಮಗೆ ನೆನಪಾಗಬೇಕು. ಕೇವಲ ಮರಾಠಿಗರಷ್ಟೇ ಅಲ್ಲ ಸರ್ವ ಜನಾಂಗದ ರಕ್ಷಣೆ ಛತ್ರಪತಿ ಶಿವಾಜಿ ಮಹಾರಾಜರು ಮಾಡಿದ್ದರು. ನನ್ನ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆದಿದ್ದಕ್ಕೆ ಖುಷಿ ಆಗುತ್ತಿದೆ. ಸುಳ್ಳಿನ ವಿರುದ್ಧ ಹೋರಾಟ ಮಾಡುವವ ನಾನು. ಯಾವುದೇ ಎಂಎಲ್‌ಎ, ಎಂಪಿ ಹುದ್ದೆಗಾಗಿ ನಾನಿಲ್ಲ. ಸಮಾಜಕ್ಕೆ ಸತ್ಯ ಹೇಳುವ ಕೆಲಸ ನಮ್ಮದಿ ಇದೆ, ಸತ್ಯ ಏನಿದೆ ಆ ಸತ್ಯ ಹೇಳಬೇಕಿದೆ ಎಂದರು.

    ಕನ್ನಡ ಮರಾಠಿ ಭೇದ ಇಲ್ಲ ಎಲ್ಲರೂ ಒಗ್ಗೂಡಿ ಹೋಗಬೇಕು. ಕನ್ನಡ ಮರಾಠಿ ಭೇದಭಾವದಿಂದ ನಮಗೇನೂ ಲಾಭವಿಲ್ಲ ನಷ್ಟವೇ ಇದೆ.ಎಲ್ಲರೂ ಒಗ್ಗೂಡಿ ಹೋಗೋಣ ಎಂದು ನಾನು ವಿನಂತಿ ಮಾಡುತ್ತೇನೆ. ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಪ್ರೇರಣೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ತಂದೆಯ ಆತ್ಮ ವಿಲವಿಲ ಅಂತ ಒದ್ದಾಡುತ್ತಿರಬಹುದು : ಸಿ.ಟಿ.ರವಿ

    Live Tv
    [brid partner=56869869 player=32851 video=960834 autoplay=true]

  • 200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

    200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

    ನವದೆಹಲಿ: ಭಾರತೀಯ ಕರೆನ್ಸಿಯ (Indian Currency) ನೋಟುಗಳ ಲಕ್ಷ್ಮೀದೇವಿ ಹಾಗೂ ಗಣೇಶನ ಚಿನ್ಹೆಗಳನ್ನು ಮುದ್ರಿಸಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಲಹೆಗೆ ಬಿಜೆಪಿ (BJP) ನಾಯಕರೊಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    200 ರೂ. ಮುಖಬೆಲೆಯ ನೋಟಿನ ಮೇಲೆ ಛತ್ರಪತಿ ಶಿವಾಜಿ ಚಿತ್ರವನ್ನು (Chhatrapati Shivaji Photo) ಫೋಟೋಶಾಪ್ (PhotoShop) ಮಾಡಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿ (BJP) ನಾಯಕ ನಿತೇಶ್ ರಾಣೆ ಹಂಚಿಕೊಂಡು ವಿವಾದ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ಕಂಕಾವ್ಲಿಯ ಶಾಸಕ ರಾಣೆ ಅವರು ಫೋಟೋವನ್ನು ಟ್ವೀಟ್ ಮಾಡಿ, `ಯೇ ಪರ್ಫೆಕ್ಟ್ ಹೈ (ಇದು ಸರಿಯಾಗಿದೆ)’ ಎಂದು ಶೀರ್ಷಿಕೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

    ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಕೇಜ್ರಿವಾಲ್, ಭಾರತೀಯ ಕರೆನ್ಸಿಯ (Indian Currency) ಮೇಲೆ ಲಕ್ಷ್ಮೀದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಸೂಚಿಸಿದ್ದಾರೆ. ಇದು ಆರ್ಥಿಕತೆ ಹೆಚ್ಚಿಸುವ ಒಂದು ಮಾರ್ಗವಾಗಿದೆ. ಜೊತೆಗೆ ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿತವಾಗುವುದನ್ನು ತಡೆಯುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

    ಈ ಸಲಹೆಯು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ತೀವ್ರ ವಾಗ್ದಾಳಿಗೆ ಮುಂದಾಗಿದ್ದಾರೆ. ಕೇಜ್ರಿವಾಲ್ ತಮ್ಮ ಸರ್ಕಾರದ ದೋಷಗಳು ಹಾಗೂ ಎಎಪಿ ವಿರೋಧಿ ಮನಸ್ಥಿತಿಯನ್ನು ಬೇರೆಡೆಗೆ ಸೆಳೆಯಲು ರಾಜಕೀಯ ನಾಟಕವಾಡುತ್ತಿದೆ ಎಂದು ಕಿಡಿಕಾರಿದೆ.

    Live Tv
    [brid partner=56869869 player=32851 video=960834 autoplay=true]

  • ಇತಿಹಾಸ ತಪ್ಪು – ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್: ಶಿವಾಜಿ ಜಯಂತಿ ಶುಭಕೋರಿದ ಸೆಹ್ವಾಗ್

    ಇತಿಹಾಸ ತಪ್ಪು – ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್: ಶಿವಾಜಿ ಜಯಂತಿ ಶುಭಕೋರಿದ ಸೆಹ್ವಾಗ್

    ಮುಂಬೈ: ಪವರ್ ಫುಲ್ ಪೀಪಲ್ ಕಮ್ ಫ್ರಮ್ ಪವರ್ ಫುಲ್ ಪ್ಲೇಸಸ್. ಇತಿಹಾಸ ತಪ್ಪು ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್ ಎಂದು ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಶಿವಾಜಿ ಜಯಂತಿಯ ಶುಭಕೋರಿದ್ದಾರೆ.

    ಶಿವಾಜಿ ಜಯಂತಿಯ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸೆಹ್ವಾಗ್, ಪವರ್ ಫುಲ್ ಪೀಪಲ್ ಕಮ್ ಫ್ರಮ್ ಪವರ್ ಫುಲ್ ಪ್ಲೇಸಸ್. ಇತಿಹಾಸ ತಪ್ಪು ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್ ದಿ ಗ್ರೇಟ್ ಛತ್ರಪತಿ ಶಿವಾಜಿ ಜಯಂತಿಯ ಶುಭಾಶಯಗಳು ಎಂದು ಬರೆದುಕೊಂಡು ಶಿವಾಜಿಯ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಓದಿ: ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ

    ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಜಾಲತಾಣದ ಮೂಲಕ ಶಿವಾಜಿ ಜಯಂತಿಯ ಶುಭಕೋರಿದ್ದು, ನಾನು ಶಿವಾಜಿಯ ಸಾಧನೆಗೆ ಹೆಮ್ಮೆ ಪಡುತ್ತೇನೆ. ಅವರ ಆಡಳಿತ, ನಾಯಕತ್ವದ ಗುಣ, ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿ. ಸತ್ಯ ಮತ್ತು ನ್ಯಾಯದ ಪರ ನಿಲ್ಲುವ ಅವರ ಗುಣ ಅದ್ಭುತ. ಅವರ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸೋಣ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಕೃಷಿ ಕ್ಷೇತ್ರದಲ್ಲಿ ಕ್ರಾಂತಿ – 100 ʼಕಿಸಾನ್‌ ಡ್ರೋನ್‌ʼಗಳಿಗೆ ಪ್ರಧಾನಿ ಮೋದಿ ಚಾಲನೆ

  • ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯ ಸಹನೀಯವಲ್ಲ: ಕೇಂದ್ರ ಸಚಿವ ಜೋಶಿ

    ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯ ಸಹನೀಯವಲ್ಲ: ಕೇಂದ್ರ ಸಚಿವ ಜೋಶಿ

    ನವದೆಹಲಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿಯುವ ಕೃತ್ಯವನ್ನು ಯಾರೂ ಸಹಿಸುವುದಿಲ್ಲ, ಇದು ನಿಜಕ್ಕೂ ಖಂಡನಾರ್ಹ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯಕ್ಕೆ ಸಂಬಂಧಿಸಿದಂತೆ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದಿರುವ ಜೋಶಿ, ಸರ್ಕಾರ ಕಾನೂನು ಭಂಗ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಿಗೂ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ

    ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

    ದೇಶಕ್ಕಾಗಿ ತ್ಯಾಗ ಮಾಡಿದ್ದಕ್ಕೆ ಅವರ ಮೂರ್ತಿ ಸ್ಥಾಪಿಸಲಾಗಿದೆ. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ. ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಕಾನೂನು ಭಂಗ ಮಾಡುವವರಿಗೆ ಸರ್ಕಾರ ಅವಕಾಶ ನೀಡಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಲೂ ಮನವಿ ಮಾಡುತ್ತೇನೆ. ಸಂಗೊಳ್ಳಿ ರಾಯಣ್ಣ ದೇಶಭಕ್ತ. ಅವರು ಭಾಷೆ, ಸಮುದಾಯ ಎಲ್ಲವನ್ನೂ ಮೀರಿ ಬೆಳೆದವರು. ಇಂತಹವರ ಪ್ರತಿಮೆಗಳಿಗೆ ಮಸಿ ಬಳಿಯುವಂತಹ ಹೀನ ಕೃತ್ಯಕ್ಕೆ ಇಳಿಯಬಾರದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ