Tag: Chhindwara

  • ಮಧ್ಯಪ್ರದೇಶ | ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳು ಸಾವು

    ಮಧ್ಯಪ್ರದೇಶ | ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳು ಸಾವು

    – ಸಾವಿನ ಸಂಖ್ಯೆ 20ಕ್ಕೆ ಏರಿಕೆ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಮಾರಕ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

    ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ (Chhindwara) 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ.ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಈಗಾಗಲೇ ಔಷಧಿ ಉತ್ಪಾದಕ ಕಂಪನಿಗೆ ತಮಿಳುನಾಡು ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

    ಇನ್ನೂ ಪಂಜಾಬ್ ಸರ್ಕಾರ ಕೂಡ ಸಿರಪ್ ಅನ್ನು ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಸಿರಪ್ ನಿಷೇಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ. ಸಿರಪ್ ಕುರಿತು ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಲಾಗಿದೆ.ಇದನ್ನೂ ಓದಿ: ಕರೂರಿನಲ್ಲಿ ಕಾಲ್ತುಳಿತ ಕೇಸ್; ಮೃತರ ಕುಟುಂಬಗಳಿಗೆ ನಟ ವಿಜಯ್ ವಿಡಿಯೋ ಕರೆ – ಸಹಾಯದ ಭರವಸೆ

  • ಕೆಮ್ಮಿನ ಸಿರಪ್ ಸೇವನೆ – 15 ದಿನಗಳ ಅಂತರದಲ್ಲಿ ಕಿಡ್ನಿ ವೈಫಲ್ಯದಿಂದ 6 ಮಕ್ಕಳು ಸಾವು

    ಕೆಮ್ಮಿನ ಸಿರಪ್ ಸೇವನೆ – 15 ದಿನಗಳ ಅಂತರದಲ್ಲಿ ಕಿಡ್ನಿ ವೈಫಲ್ಯದಿಂದ 6 ಮಕ್ಕಳು ಸಾವು

    ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ (Madhya Pradesh) ಛಿಂದ್ವಾರದಲ್ಲಿ (Chhindwara) ನಡೆದಿದೆ.

    ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಈಗ ಭೀಕರ ತಿರುವು ಪಡೆದುಕೊಂಡಿದ್ದು, ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ (Cough Syrup) ಅಡ್ಡಪರಿಣಾಮದಿಂದಾಗಿ ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಮಚಂದ್ರ ಗುಹಾಗೆ ರಾಜ್ಯ ಸರ್ಕಾರದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

    ಸಾವನ್ನಪ್ಪಿದ ಮಕ್ಕಳನ್ನು ಐದು ವರ್ಷದೊಳಗಿನವರು ಎಂದು ಹೇಳಲಾಗಿದ್ದು, ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ ಸ್ಥಳೀಯ ಕ್ಲೀನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಿಗಳನ್ನು ಸೂಚಿಸಿದರು. ಅದನ್ನು ಸೇವಿಸಿದ ನಂತರ ಮಕ್ಕಳು ಚೇತರಿಸಿಕೊಳ್ಳುತ್ತಿರುವಂತೆ ತೋರುತ್ತಿತ್ತು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ರೋಗ ಲಕ್ಷಣಗಳು ಮರಳಿದವು. ನಂತರ ಮೂತ್ರ ವಿಸರ್ಜನೆಯಲ್ಲಿ ಹಠಾತ್ ಮತ್ತು ಆತಂಕಕಾರಿ ಇಳಿಕೆ ಕಂಡುಬಂದಿತು. ಸ್ಥಿತಿಯು ಬೇಗನೆ ಹದಗೆಟ್ಟು ಮೂತ್ರಪಿಂಡದ ಸೋಂಕುಗಳಾಗಿ ಮಾರ್ಪಟ್ಟಿತು. ಬಳಿಕ ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಅಲ್ಲಿಯೇ ಸಾವನ್ನಪ್ಪಿದರು. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ

    ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂದು ಶಂಕಿಸಲಾಗುತ್ತಿದ್ದು, ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮಕ್ಕಳ ಮೂತ್ರಪಿಂಡದ ಬಯಾಪ್ಸಿ ಪರೀಕ್ಷೆಯಲ್ಲಿ ಔಷಧೀಯ ವಿಷಕ್ಕೆ ಸಂಬಂಧಿಸಿದ ವಿಷಕಾರಿ ರಾಸಾಯನಿಕವಾದ ಡೈಥಿಲೀನ್ ಗ್ಲೈಕಾಲ್ ಮಾಲಿನ್ಯ ಇರುವುದು ಬೆಳಕಿಗೆ ಬಂದಾಗ ಮಹತ್ವದ ತಿರುವು ಸಿಕ್ಕಿತು. ಹೆಚ್ಚಿನ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಸಿರಪ್‌ಗಳನ್ನು ನೀಡಲಾಗಿತ್ತು. ಇದನ್ನೂ ಓದಿ: ಯುವತಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್

    ಚಿಂದ್ವಾರ ಜಿಲ್ಲಾಧಿಕಾರಿ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್‌ಗಳ ಮಾರಾಟವನ್ನು ತಕ್ಷಣವೇ ನಿಷೇಧಿಸಿದರು ಮತ್ತು ಇದರ ಬಳಕೆ ಮಾಡದಂತೆ ವೈದ್ಯರು, ಔಷಧಾಲಯಗಳು ಮತ್ತು ಪೋಷಕರಿಗೆ ತುರ್ತು ಸಲಹೆಯನ್ನು ನೀಡಿದರು. ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಡಳಿತವು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ತಂಡವನ್ನು ಪರೀಕ್ಷೆಗೆ ಕರೆದಿದ್ದು, ತನಿಖೆ ಪ್ರಗತಿಯಲ್ಲಿದೆ.  ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

  • ಮೊದಲ ಹಂತದ ಮತದಾನ: 716 ಕೋಟಿ ಆಸ್ತಿ ಒಡೆಯ – ʻಕೈʼನಾಯಕ ನಂ.1 ಶ್ರೀಮಂತ ಅಭ್ಯರ್ಥಿ!

    ಮೊದಲ ಹಂತದ ಮತದಾನ: 716 ಕೋಟಿ ಆಸ್ತಿ ಒಡೆಯ – ʻಕೈʼನಾಯಕ ನಂ.1 ಶ್ರೀಮಂತ ಅಭ್ಯರ್ಥಿ!

    – ಬಡ ಅಭ್ಯರ್ಥಿ ಬಳಿಯಿದೆ ಕೇವಲ 320 ರೂ.

    ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ (Lok Sabha Elections 2024) ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ (Voting) ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಎಲ್ಲೆಡೆ ಜನ ಉತ್ಸಾಹದಿಂದಲೇ ಮತದಾನ ಮಾಡ್ತಿದ್ದಾರೆ.

    ಈ ಮೊದಲ ಹಂತ ಚುನಾವಣೆಯಲ್ಲಿ ಒಂದೆಡೆ ಶ್ರೀಮಂತರಿದ್ದರೆ, ಮತ್ತೊಂದೆಡೆ ಬಡ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ವಿಶೇಷ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (Association for Democratic Reforms)  1,625 ಅರ್ಥಿಗಳ ಪೈಕಿ 1,618 ಅಭ್ಯರ್ಥಿಗಳ ಆಸ್ತಿ ವಿವರ ಬಿಡುಗಡೆಯಾಗಿದೆ. ಅವರಲ್ಲಿ 10 ಮಂದಿ ತಮ್ಮ ಆಸ್ತಿಯನ್ನು ಶೂನ್ಯ ಎಂದು ಘೋಷಿಸಿದ್ದಾರೆ. 450 ಅಭ್ಯರ್ಥಿಗಳು ಕೋಟ್ಯಧಿಪತಿಗಳಾಗಿದ್ದು 1 ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ವರದಿಗಳು ತೋರಿಸಿವೆ.

    ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ (Nakul Nath) ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ನಕುಲ್‌ ನಾಥ್‌ ಸರಿಸುಮಾರು 716 ಕೋಟಿ ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ. ಮಧ್ಯಪ್ರದೇಶದ ಮಾಜಿ ಸಿಎಂ ಪುತ್ರನೂ ಆಗಿರುವ ನಕುಲ್‌ ನಾಥ್‌ 2019ರ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದರು.

    ಕೋಟ್ಯಧಿಪತಿಗಳು ಯಾರು?
    ಮೊದಲ ಹಂತದ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ನಕುಲ್‌ ನಾಥ್‌ ಅತ್ಯಂತ ಶ್ರೀಮಂತ (716 ಕೋಟಿ ರೂ.) ಅಭ್ಯರ್ಥಿಯಾಗಿದ್ದಾರೆ. ಅಲ್ಲದೇ ತಮಿಳುನಾಡಿನ ಈರೋಡ್‌ನಿಂದ ಸ್ಪರ್ಧಿಸಿರುವ ಎಐಎಡಿಎಂಕೆಯ ಅಶೋಕ್ ಕುಮಾರ್ 662 ಕೋಟಿ ರೂ., ಶಿವಗಂಗಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿಯ ದೇವನಾಥನ್ ಯಾದವ್ 304 ಕೋಟಿ ರೂ., ಉತ್ತರಾಖಂಡದ ತೆಹ್ರಿ ಗರ್ವಾಲ್‌ನಿಂದ ಕಣಕ್ಕಿಳಿದಿರುವ ಬಿಜೆಪಿಯ ಮಾಲಾ ರಾಜ್ಯ ಲಕ್ಷ್ಮಿ ಶಾ 206 ಕೋಟಿ ರೂ., ಉತ್ತರ ಪ್ರದೇಶದ ಸಹರಾನ್‌ಪುರದಿಂದ ಸ್ಪರ್ಧಿಸಿರುವ 159 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ, ಕಾಂಗ್ರೆಸ್‌ನ ಹಾಲಿ ಸಂಸದ ಕಾರ್ತಿ ಚಿದಂಬರಂ 96 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ.

    ಬಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರಿದ್ದಾರೆ.
    ತಮಿಳುನಾಡಿನ ತೂತುಕುಡಿ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಪೊನ್‌ರಾಜ್ ಕೇವಲ 320 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದ ರಾಮ್‌ಟೆಕ್ ಕ್ಷೇತ್ರ ಮತ್ತು ತಮಿಳುನಾಡಿನ ಚೆನ್ನೈ ಉತ್ತರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಗಳಾದ ಕಾರ್ತಿಕ್ ಗೆಂದ್ಲಾಜಿ ಡೋಕೆ ಮತ್ತು ಸೂರ್ಯಮುತ್ತು ತಲಾ 500 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.