Tag: Chian Vikram

  • ಕರ್ನಾಟಕದ ಚಿನ್ನದ ನೆಲದ ಕಥೆ ಹೇಳ್ತಿದ್ದಾರೆ ತಮಿಳಿನ ಖ್ಯಾತ ಡೈರೆಕ್ಟಕ್ ಪಾ.ರಂಜಿತ್

    ಕರ್ನಾಟಕದ ಚಿನ್ನದ ನೆಲದ ಕಥೆ ಹೇಳ್ತಿದ್ದಾರೆ ತಮಿಳಿನ ಖ್ಯಾತ ಡೈರೆಕ್ಟಕ್ ಪಾ.ರಂಜಿತ್

    ಜನಿಕಾಂತ್ ಸೇರಿದಂತೆ ಹಲವು ಸ್ಟಾರ್ ನಟರುಗಳಿಗೆ ಸಿನಿಮಾ ಮಾಡಿರುವ ಖ್ಯಾಥ ನಿರ್ದೇಶಕ ಪಾ.ರಂಜಿತ್ (Pa. Ranjith) ಕನ್ನಡಿಗರ ತಲೆಗೆ ಹುಳು ಬಿಟ್ಟುಕೊಳ್ಳುವಂತಹ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ತಾವು ತಮಿಳು ನಿರ್ದೇಶಕರಾದರೂ, ಕನ್ನಡ ಸಿನಿಮಾ ರಂಗವನ್ನು ಜಗತ್ತಿಗೆ ಪರಿಚಯಿಸಿದ ‘ಕೆಜಿಎಫ್’ ಸಿನಿಮಾದ ಅಸಲಿ ಕಥೆಯನ್ನೂ ಅವರು ಬಿಚ್ಚಿಟ್ಟಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಕೆಜಿಎಫ್ ಸಿನಿಮಾ ಅದೊಂದು ಕಾಲ್ಪನಿಕ ಕಥೆಯನ್ನು ಹೊಂದಿತ್ತು. ತಾವು ಕೆಜಿಎಫ್ ನ ಅಸಲಿ ಕಥೆಯನ್ನು ಹೇಳಲು ಹೊರಟಿದ್ದಾರೆ.

    ಕೆಜಿಎಫ್ (KGF) ಸಿನಿಮಾ ಬರುವ ಮುಂಚೆಯೇ ಅವರು ಕೆಜಿಎಫ್ ನೆಲದ ಕರುಣಾಜನಕ ನೈಜ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದರಂತೆ. ಆದರೆ, ಕನ್ನಡದ ಕೆಜಿಎಫ್ ಸಿನಿಮಾ ಬಂದಿದ್ದರಿಂದ ಅದನ್ನು ಮುಂದೆಹಾಕಿದ್ದರಂತೆ. ಈ ವಿಷಯವನ್ನು ಸ್ವತಃ ರಂಜಿತ್ ಅವರೇ ಈ ಹಿಂದೆ ಕಾನ್ ಫೆಸ್ಟಿವೆಲ್ ನಲ್ಲಿ ಹೇಳಿದ್ದರುಇ. ಅಲ್ಲದೇ, ಕೆಜಿಎಫ್ ಸಿನಿಮಾದ ಪಾತ್ರಗಳು ಕಾಲ್ಪನಿಕವಾಗಿದ್ದವು. ರಂಜಿತ್ ಮಾಡಿರುವ ಕಥೆಯಲ್ಲಿ ಬಹುತೇಕ ಪಾತ್ರಗಳು ಆ ನೆಲದಲ್ಲಿ ಜೀವಿಸಿದ್ದವು ಎಂದಿದ್ದಾರೆ.

     

    ಚಿಯಾನ್ ವಿಕ್ರಮ್ (Chian Vikram) ಈ ಸಿನಿಮಾದ ಹೀರೋ. ಸಿನಿಮಾಗೆ ನಿರ್ದೇಶಕರು ಹೆಸರು ಇಟ್ಟಿದ್ದು ತಂಗಳಾನ್. ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಮತ್ತು ಮಾಹಿತಿಗಳು ವೈರಲ್ ಆಗಿವೆ. ಈ ಸಿನಿಮಾದಲ್ಲಿ ಕೆಜಿಎಫ್ ಹುಟ್ಟಿದ್ದು ಹೇಗೆ? ಚಿನ್ನಕ್ಕಾಗಿ ಬ್ರಿಟಿಷರು ಹೂಡಿದ್ದ ಆಟವೇನು? ಈ ನೆಲದಲ್ಲಿ ತಮಿಳಿಗರ ಪಾತ್ರ ಏನಾಗಿತ್ತು? ಹೀಗೆ ಹಲವು ಸಂಗತಿಗಳನ್ನು ಚಿತ್ರದಲ್ಲಿ ತೋರಿಸಲಿದ್ದಾರಂತೆ. ಕನ್ನಡಿಗರಿಗಿಂತಲೂ ತಮಿಳಿಗರನ್ನು ಕರೆತಂದು ಈ ಚಿನ್ನದ ಗಣಿಯಲ್ಲಿ ಬಿಡುತ್ತಿದ್ದರಂತೆ ಬ್ರಿಟಿಷರು. ಪ್ರಮುಖವಾಗಿ ಕಥೆಯನ್ನು ಅವರು ಹೇಳಲಿದ್ದಾರಂತೆ.

  • ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ನಿನ್ನೆಯಷ್ಟೇ ಸಾಹಸ ಸನ್ನಿವೇಶದ ರಿಹರ್ಸಲ್ ವೇಳೆ ಪಕ್ಕೆಲುಬು (Ribs) ಮುರಿದುಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಿಂದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

    ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾದ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ವಿಕ್ರಮ್ ರೆಡಿಯಾಗುತ್ತಿದ್ದರು. ಸದ್ಯ ಅವರು ‘ತಂಗಲಾನ್’ (Thangalaan Film) ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲೇ ಇದ್ದಾರೆ.

    ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

  • ತಮಿಳಿನಲ್ಲಿ ಶುರುವಾಯಿತು ‘ಕೆಜಿಎಫ್’ ಸಿನಿಮಾದ ಶೂಟಿಂಗ್: ಹೀರೋ ಯಶ್ ಅಲ್ಲ, ಬೇರೆ

    ತಮಿಳಿನಲ್ಲಿ ಶುರುವಾಯಿತು ‘ಕೆಜಿಎಫ್’ ಸಿನಿಮಾದ ಶೂಟಿಂಗ್: ಹೀರೋ ಯಶ್ ಅಲ್ಲ, ಬೇರೆ

    ಭಾರತೀಯ ಸಿನಿಮಾ ರಂಗದಲ್ಲೇ ದಾಖಲೆ ಸೃಷ್ಟಿ ಮಾಡಿರುವ ಕನ್ನಡದ ಕೆಜಿಎಫ್ ಸಿನಿಮಾ, ಮುಂದುವರೆದ ಭಾಗ ಬರತ್ತಾ ಎಂದು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಪ್ರಶಾಂತ್ ನೀಲ್ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಂತೆ ಸದ್ಯಕ್ಕಂತೂ ಕೆಜಿಎಫ್ 3 ಸಿನಿಮಾ ಇಲ್ಲವೆಂದು, ಮುಂದೆ ತಾವು ಮಾಡಬೇಕಾದ ಸಿನಿಮಾಗಳ ಕಾರಣದಿಂದಾಗಿ ಕೆಜಿಎಫ್ 3 ಚಿತ್ರವನ್ನು ಮಾಡುತ್ತಿಲ್ಲವೆಂದು ಘೋಷಿಸಿಯಾಗಿದೆ. ಆದರೂ, ತಮಿಳಿನಲ್ಲೊಂದು ಕೆಜಿಎಫ್ ಸಿನಿಮಾ ಮೂಡಿ ಬರಲಿದೆ.

    ಹೌದು, ನಿರ್ದೇಶಕ ಪ್ರಶಾಂತ್ ನೀಲ್ ಮಾಡಿರುವ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಕೆಜಿಎಫ್ ಕಥೆಯನ್ನು ಅದು ಒಳಗೊಂಡಿರಲಿಲ್ಲ. ಹಾಗಾಗಿ ಕೆಜಿಎಫ್ ನಲ್ಲಿ ನಡೆದ ರಿಯಲ್ ಘಟನೆಯನ್ನು ಕೆಜಿಎಫ್ ಹೆಸರಿನ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರಂತೆ ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್. ಅಲ್ಲಿ ರಿಯಲ್ ಆಗಿ ನಡೆದ ಸಂಘರ್ಷಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ. ಹಾಗಾಗಿ ಇದೇ ಮೊದಲ ಬಾರಿಗೆ ಕೆಜಿಎಫ್ ಕುರಿತಾಗಿ ರಿಯಲ್ ಆಗಿ ಬರುತ್ತಿರುವ ಸಿನಿಮಾ ಇದಾಗಲಿದೆಯಂತೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಕೆಜಿಎಫ್ ಸಿನಿಮಾಗೆ ಚಿಯಾನ್ ವಿಕ್ರಮ್ ನಾಯಕನಾಗಿ ಆಯ್ಕೆಯಾಗಿದ್ದು, ಇದೊಂದು ಒಳ್ಳೆಯ ಸಿನಿಮಾ ಆಗಲಿದೆ ಎಂದಿದ್ದಾರೆ ವಿಕ್ರಮ್. ಆಸ್ಕರ್ ಪ್ರಶಸ್ತಿ ಸಲ್ಲಬೇಕಾದ ಸಿನಿಮಾ ಇದಾಗಲಿದೆ ಎಂದೂ ಅವರು ಹಾಡಿ ಹೊಗಳಿದ್ದಾರೆ. ಪಾ.ರಂಜಿತ್ ದೇಸಿಯ ಕಥೆಗಳನ್ನು ಸಿನಿಮಾ ಮಾಡಿದ ನಿರ್ದೇಶಕ. ಶೋಷಿತರ ನೋವುಗಳನ್ನು ದೃಶ್ಯಕ್ಕೆ ತಂದ ಹೆಗ್ಗಳಿಕೆ ಇವರದ್ದು. ಹಾಗಾಗಿ ಕೆಜಿಎಫ್ ಸಿನಿಮಾ ಹೊಸ ರೀತಿಯೊಂದಿಗೆ ಬರುವುದು ಗ್ಯಾರಂಟಿ.

    Live Tv
    [brid partner=56869869 player=32851 video=960834 autoplay=true]

  • ಸಾಮಿ ಸ್ಕ್ವೇರ್ ನಿಂದ ತ್ರಿಶಾ ಔಟ್ – ಚಿಯಾನ್ ವಿಕ್ರಂಗೆ ಸಿಕ್ಕಿದ್ದು ಐಶ್ವರ್ಯ!

    ಸಾಮಿ ಸ್ಕ್ವೇರ್ ನಿಂದ ತ್ರಿಶಾ ಔಟ್ – ಚಿಯಾನ್ ವಿಕ್ರಂಗೆ ಸಿಕ್ಕಿದ್ದು ಐಶ್ವರ್ಯ!

    ಬೆಂಗಳೂರು: ‘ಸಾಮಿ ಸ್ಕ್ವೇರ್’ ಯಾವುದೋ ಹಾಲಿವುಡ್, ಬಾಲಿವುಡ್ ಸಿನಿಮಾ ಎಂದು ಕನ್ಫ್ಯೂಸ್ ಆಗಬೇಡಿ! 2003ರಲ್ಲಿ ಸಂಚಲನ ಸೃಷ್ಟಿಸಿದ್ದ ವಿಕ್ರಮ್ ನಾಯಕನಾಗಿದ್ದ ‘ಸಾಮಿ’ ಚಿತ್ರದ ಭಾಗ 2 ಈ ಚಿತ್ರ. ಕೆಟ್ಟಾ ಕೊಳಕಾಗಿ ಬೈಯುವ ಖಡಕ್ ಪೊಲೀಸ್ ಅಧಿಕಾರಿ ಆಗಿದ್ದ ವಿಕ್ರಮ್ ‘ಸಾಮಿ ಸ್ಕ್ವೇರ್’ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಹಿಟ್ ಜೋಡಿ ಆಗಿ ನಾಯಕ ವಿಕ್ರಂ ಹಾಗೂ ನಿರ್ದೇಶಕ ಹರಿ ಅವರೇ ಇರಲಿದ್ದು, ‘ಆಫೀಸರ್ ಆರು ಸಾಮಿ’ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

    ಆ್ಯಕ್ಷನ್ ಚಿತ್ರದಲ್ಲಿ ವಿಕ್ರಂ ಎದುರು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಬಾಬಿ ಸಿಂಹ ನಟಿಸಿದ್ದು, ಭಾಗ 2ರಲ್ಲಿ ಮೊದಲ ನಾಯಕ ತ್ರಿಶಾ ಔಟ್ ಆಗಿದ್ದಾರೆ. ಅವರ ಸ್ಥಾನದಲ್ಲಿ ‘ಸಾಮಿ ಸ್ಕ್ವೇರ್’ಗೆ ನಟಿ ಐಶ್ವರ್ಯ ರಾಜೇಶ್ ಆಯ್ಕೆಯಾಗಿದ್ದು, ಚಿತ್ರ ಆಗಸ್ಟ್ 31 ಅಥವಾ ಸೆಪ್ಟೆಂಬರ್ 13ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿದೆ.

    ಟೀಸರ್ ಬಿಡುಗಡೆಯಾದ ತಿಂಗಳಲ್ಲೇ 11 ಮಿಲಿಯನ್ ವ್ಯೂಗಳನ್ನು ಯುಟ್ಯೂಬ್‍ನಲ್ಲಿ ಪಡೆದಿರುವ ಚಿತ್ರ ಕುತೂಹಲ ಹುಟ್ಟಿಸಿರುವುದಂತೂ ಸುಳ್ಳಲ್ಲ. ತೆಲುಗಿನ ಖ್ಯಾತ ರಾಕ್ ಸ್ಟಾರ್ ಗಾಯಕ ದೇವಿಶ್ರೀ ಪ್ರಸಾದ್ (ಡಿಎಸ್‍ಪಿ) ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು ಪ್ಲಸ್ ಪಾಯಿಂಟ್ ಆಗುವುದು ಖಂಡಿತ. ಚಿತ್ರದ ಇನ್ನೋರ್ವ ನಾಯಕಿಯಾಗಿ ಕೀರ್ತಿ ಸುರೇಶ್ ಆಯ್ಕೆ ಆಗಿದ್ದು, ಐಶ್ವರ್ಯ ರಾಜೇಶ್‍ಗೆ ಸ್ಪರ್ಧೆ ಹೆಚ್ಚಿಸಿದೆ. ತನ್ನ ಪಾತ್ರದ ಬಗ್ಗೆ ಥ್ರಿಲ್ ಆಗಿರುವ ಐಶ್ವರ್ಯ ತಾನು ಪ್ರಸ್ತುತ ಪ್ರಯೋಗಾತ್ಮಕ ಪಾತ್ರಗಳಿಗೆ ಒಡ್ಡಿಕೊಂಡಿದ್ದೇನೆಂದು ಹೇಳಿಕೊಂಡಿದ್ದಾರೆ. ತೆರೆಗೆ ಬರಲಿರುವ ‘ಕಾನಾ’ ಚಿತ್ರದಲ್ಲಿ ತಾಪ್ಸಿ ಪನ್ನು ಜೊತೆ ತೆರೆ ಹಂಚಿಕೊಂಡಿರುವ ಐಶ್ವರ್ಯ ಮಹಿಳಾ ಕ್ರಿಕೆಟರ್ ಆಗಿ ನಟಿಸಿದ್ದಾರೆ. ‘ಚೆಕ್ಕಾ ಚಿವಂತವನಂ’ನಲ್ಲಿ ಕ್ಲಾಸ್ ಪಾತ್ರ ಮಾಡಿರುವ ಐಶ್ವರ್ಯ ‘ಧ್ರುವ ನಕ್ಷತ್ರಂ’ನಲ್ಲಿ ಜರ್ನಲಿಸ್ಟ್ ಆಗಿದ್ದಾರೆ.

    ‘ಸಾಮಿ’ ಮಾಡಿದ್ದ ಗಲ್ಲಾ ಪೆಟ್ಟಿಗೆ ರೆಕಾರ್ಡ್‍ಗಳನ್ನು ‘ಸಾಮಿ ಸ್ಕ್ವೇರ್’ ಚಿಂದಿ ಉಡಾಯಿಸಿ ಹೊಸ ದಾಖಲೆಗಳನ್ನು ಬರೆಯಲಿದೆ ಎಂಬುದು ತಮಿಳು ಚಿತ್ರ ಪಂಡಿತರ ಹಾಗೂ ಸಿನಿ ರಸಿಕರ ಅಂಬೋಣ!