ಫೆಬ್ರವರಿ 24ರ ಬಳಿಕ ಎನ್.ವಿ ಅಂಜಾರಿಯಾ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ. ಎನ್.ವಿ ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್ನಲ್ಲಿ (Gujarat High Court) ಹಾಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ರಾಜ್ಯ ಬಜೆಟ್ನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್
ಇಸ್ಲಾಮಾಬಾದ್: ನಿಧಾನವಾಗಿ ಹೃದಯಾಘಾತವನ್ನು ಉಂಟುಮಾಡಲು ತನಗೆ ಚುಚ್ಚು ಮದ್ದನ್ನು ನೀಡಲಾಯಿತು ಜೊತೆಗೆ ವಾಶ್ ರೂಂ ಅನ್ನು ಬಳಸಲು ಅನುಮತಿ ನೀಡಿರಲಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದರು.
ಈ ಬಗ್ಗೆ ಇಮ್ರಾನ್ ಖಾನ್ ಅವರ ವಕೀಲರು ಮಾತನಾಡಿ, ಬಿಡುಗಡೆ ನಂತರ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದೇವೆ. ಈ ವೇಳೆ ಇಮ್ರಾನ್ ಖಾನ್ ಎದೆ ನೋವಿನ ಬಗ್ಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಇಮ್ರಾನ್ ಖಾನ್ಗೆ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು. ಅಷ್ಟೇ ಅಲ್ಲದೇ ನಿಧಾನವಾಗಿ ಹೃದಯಾಘಾತವಾಗಲು ಊಟದಲ್ಲಿ ಇನ್ಸುಲಿನ್ ಅನ್ನು ನೀಡಲಾಗಿದೆ. ಇಮ್ರಾನ್ ಖಾನ್ನನ್ನು ಕೊಲ್ಲುವ ಯತ್ನ ನಡೆಯುತ್ತಿದೆ. ಅವರಿಗೆ ಮಲುಗಲು ಬಿಡುತ್ತಿಲ್ಲ. ಶೌಚಾಲಯ ಹಾಗೂ ಹಾಸಿಗೆ ಇಲ್ಲದ ಕೊಳಕು ಕೊಣೆಯಲ್ಲಿ ಇರಿಸಲಾಗಿತ್ತು. ಅವರಿಗೆ ತಿನ್ನಲು ಏನನ್ನು ನೀಡಿರಲಿಲ್ಲ ಎಂದು ಕಿಡಿಕಾರಿದರು.
ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಇಮ್ರಾನ್ ಖಾನ್ (Imran Khan) (70) ಅವರ ಬಂಧನ ಕಾನೂನು ಬಾಹಿರವಾಗಿದೆ. ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್ನ ಸುಪ್ರೀಂ ಕೋರ್ಟ್ (Pakistan Supreme Court) ಗುರುವಾರ ಆದೇಶಿಸಿತ್ತು. ಅಲ್ಲದೆ ಹೈಕೋರ್ಟ್ಗೆ (High Court) ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿತ್ತು. ಇದನ್ನೂ ಓದಿ: ಇಮ್ರಾನ್ಖಾನ್ರನ್ನು ತಕ್ಷಣ ಬಿಡುಗಡೆಗೊಳಿಸಿ – ಪಾಕ್ ಸುಪ್ರೀಂ ಕೋರ್ಟ್
ಇಸ್ಲಾಮಾಬಾದ್: ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಇಮ್ರಾನ್ ಖಾನ್ (Imran Khan) (70) ಅವರ ಬಂಧನ ಕಾನೂನು ಬಾಹಿರವಾಗಿದೆ. ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್ನ ಸುಪ್ರೀಂ ಕೋರ್ಟ್ (Pakistan Supreme Court) ಗುರುವಾರ ಆದೇಶಿಸಿದೆ.
ಬಂಧನವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (Chief Justice) ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಅಲ್ಲದೆ ಹೈಕೋರ್ಟ್ಗೆ (High Court) ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್- ಪ್ರತಿಭಟನೆಯಲ್ಲಿ 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ
ಇಮ್ರಾನ್ ಖಾನ್ ಅವರನ್ನು ಅಲ್ಲಿನ ಭ್ರಷ್ಟಚಾರ ನಿಗ್ರಹ ಸಂಸ್ಥೆ ಮೇ 9 ರಂದು ಬಂಧಿಸಿತ್ತು. ಅವರ ಬಂಧನವನ್ನು ವಿರೋಧಿಸಿ ಖಾನ್ ಬೆಂಬಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ನಿಯಂತ್ರಿಸಲು ಪಾಕ್ ಪಂಜಾಬ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಿತ್ತು. ಅಲ್ಲದೆ ದೇಶದಲ್ಲಿ ಇಂಟರ್ನೆಟ್ ಸೇವೆ ಬಂದ್ ಮಾಡಿತ್ತು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ – ಸಾವಿರ ಮಂದಿ ಬಂಧನ
ನವದೆಹಲಿ: ಮಕ್ಕಳು ಬೆಳಿಗ್ಗೆ 7 ಗಂಟೆಗೆ ಶಾಲೆಗೆ ಹೋಗಬಹುದು ಅನ್ನೋದಾದ್ರೆ ನ್ಯಾಯಾಧೀಶರು, ವಕೀಲರೇಕೆ ತಮ್ಮ ದಿನವನ್ನು 9 ಗಂಟೆಗೆ ಪ್ರಾರಂಭಿಸಬಾರದು ಎಂದು ನ್ಯಾಯಮೂರ್ತಿ ಯು.ಯು.ಲಲಿತ್ ಹೇಳಿದ್ದಾರೆ.
ಮುಂದಿನ ಆಗಸ್ಟ್ ತಿಂಗಳಿನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಲಿರುವ ಲಲಿತ್ ಅವರಿದ್ದ ತ್ರಿಸದಸ್ಯ ಪೀಠವು ಇಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ಕುಳಿತು ವಿಚಾರಣೆ ಆರಂಭಿಸಿತು. ಸಾಮಾನ್ಯವಾಗಿ ನ್ಯಾಯಾಲಯವು ಬೆಳಿಗ್ಗೆ 10:30ಕ್ಕೆ ತನ್ನ ವಿಚಾರಣೆ ಪ್ರಾರಂಭಿಸುತ್ತದೆ. ಆದರೆ ನ್ಯಾ. ಯು.ಯು.ಲಲಿತ್ ಇಂದು ಬೆಳಿಗ್ಗೆ 9:30ಕ್ಕೆ ಪ್ರಕರಣದ ವಿಚಾರಣೆ ಪ್ರಾರಂಭಿಸಿದರು. ಇದನ್ನೂ ಓದಿ: ಲಿಪ್ಸ್ಟಿಕ್, ಕಾಸ್ಟ್ಲಿ ಮೊಬೈಲ್ ತಗೋತಿರಾ, ಫೀಸ್ ಕಟ್ಟೋಕೆ ಆಗಲ್ವಾ?- ವಿವಿ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು
ವಿಚಾರಣೆ ಆರಂಭಿಸಿದ ಬಗ್ಗೆ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಯು.ಯು.ಲಲಿತ್ `ಮಕ್ಕಳು ಬೆಳಿಗ್ಗೆ 7 ಗಂಟೆಯಿಂದಲೇ ಶಾಲೆಗೆ ಹೋಗಬಹುದಾದರೆ ನ್ಯಾಯಾಧೀಶರು ಹಾಗೂ ವಕೀಲರು ತಮ್ಮ ದಿನವನ್ನು ಏಕೆ 9 ಗಂಟೆಗೆ ಪ್ರಾರಂಭಿಸಬಾರದು? ಎಂದು ಪ್ರಶ್ನಿಸಿದರು.
ನ್ಯಾಯಮೂರ್ತಿ ಲಲಿತ್, ನ್ಯಾ. ಎಸ್.ರವೀಂದ್ರ ಭಟ್, ನ್ಯಾ. ಸುಧಾಂಶು ಧುಲಿಯಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ 2ನೇ ದರ್ಜೆಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ರೋಹಟಗಿ, 9.30 ಈ ಸಮಯ ನ್ಯಾಯಾಲಯದ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಕ್ತ ಸಮಯ ಎಂದು ಹೇಳಿದರು. ಇದನ್ನೂ ಓದಿ: ಅಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು
ಹೇಗಿರಬೇಕು ವಿಚಾರಣೆ?: ವಾರದಲ್ಲಿ 5 ದಿನಗಳವರೆಗೆ, ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಬೆಳಿಗ್ಗೆ 10.30ಕ್ಕೆ ಪ್ರಕರಣಗಳ ವಿಚಾರಣೆಯನ್ನು ಪ್ರಾರಂಭಿಸುತ್ತಾರೆ. ಸಂಜೆ 4ರ ವರೆಗೆ ಕುಳಿತುಕೊಳ್ಳುತ್ತಾರೆ. ಮಧ್ಯಾಹ್ನ 1 ರಿಂದ 2ರ ವರೆಗೆ ಒಂದು ಗಂಟೆಯ ಊಟದ ವಿರಾಮ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಇನ್ನು ಮುಂದೆ ಸುದೀರ್ಘ ವಿಚಾರಣೆ ಅಗತ್ಯವಿಲ್ಲದಿದ್ದಾಗ ಸುಪ್ರೀಂ ಕೋರ್ಟ್ ಬೆಳಿಗ್ಗೆ 9 ಗಂಟೆಗೇ ಪ್ರಾರಂಭವಾಗಬೇಕು. 11.30ಕ್ಕೆ ಅರ್ಧಗಂಟೆ ವಿರಾಮಕ್ಕಾಗಿ ಎದ್ದೇಳಬೇಕು. ತೀರ್ಪುಗಾರರು ಮತ್ತೆ ವಿಚಾರಣೆ ಪ್ರಾರಂಭಿಸಿ ಮಧ್ಯಾಹ್ನ 2 ಗಂಟೆಗೆ ಮುಕ್ತಾಗೊಳಿಸಬೇಕು. ಇದರಿಂದ ಸಂಜೆ ವೇಳೆ ಹೆಚ್ಚಿನ ಕೆಲಸ ಮಾಡಲು ಸಮಯ ಸಿಗುತ್ತದೆ ಎಂದು ಲಲಿತ್ ಸಲಹೆ ನೀಡಿದರು.
ಯು.ಯು.ಲಲಿತ್ ಮುಂದಿನ ಆಗಸ್ಟ್ 27ರಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ನವೆಂಬರ್ 8ರ ಮಾತ್ರವೇ ಅಧಿಕಾರದಲ್ಲಿ ಇರುಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪೈಥಾನ್ ಯಂತ್ರ ಬಳಸಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಚಾಟಿ ಬೀಸಿದೆ.
ಸಾಕಷ್ಟು ಸಮಯಾವಕಾಶ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ. ಎಲ್ಲದಕ್ಕೂ ಮಿತಿ ಇರುತ್ತದೆ. ಇನ್ನು ಸಹಿಸಲು ಸಾಧ್ಯವಿಲ್ಲ. ರಸ್ತೆ ನಿರ್ವಹಣೆಯ ಕೆಲಸವನ್ನು ಮಿಲಿಟರಿ ಏಜೆನ್ಸಿ ಅಥವಾ ಬೇರೆ ಯಾವುದಾದರೂ ಸಂಸ್ಥೆಗೆ ವಹಿಸುತ್ತೇವೆ. ಇದರೊಂದಿಗೆ ಪಾಲಿಕೆ ಮುಖ್ಯ ಆಯುಕ್ತರು, ಅಧಿಕಾರಿಗಳ ಅಮಾನತಿಗೆ ಸರ್ಕಾರಕ್ಕೆ ಆದೇಶಿಸುತ್ತೇವೆ ಎಂದು ಮುಖ್ಯ ಕೋರ್ಟ್ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೆ: ಬಿಜೆಪಿ ವ್ಯಂಗ್ಯ
ಅಂತಿಮವಾಗಿ ಒಂದು ದಿನ ಕಾಲಾವಕಾಶ ನೀಡುತ್ತೇವೆ. ಅಷ್ಟರೊಳಗೆ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಕಾರ್ಯಾದೇಶ ಹೊರಡಿಸಿ ಕೋರ್ಟ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದರೆ ಬಿಬಿಎಂಪಿ ವಿರುದ್ಧ ಕಠಿಣ ಆದೇಶ ಹೊರಡಿಸಲು ನ್ಯಾಯಾಲಯ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.
ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿದ ಹೇಳಿಕೆಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರ ಕೇಂದ್ರ ಪಡೆಗಳನ್ನು ಕರೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಸೂಚನೆ ನೀಡಿದೆ.
ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುವಂತೆ ಹಿಂಸಾಚಾರದ ಘಟನೆಗಳ ವೀಡಿಯೋ ತುಣುಕನ್ನು ಸಂಗ್ರಹಿಸಲು ರಾಜ್ಯ ಅಧಿಕಾರಿಗಳಿಗೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರಿದ್ದ ಪೀಠ ಸೂಚಿಸಿದೆ. ಇದನ್ನೂ ಓದಿ: ಪ್ರವಾದಿ ಅವಹೇಳನ – ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 400ಕ್ಕೂ ಹೆಚ್ಚು ಮಂದಿ ಬಂಧನ
ನ್ಯಾಯಾಲಯದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವಂತೆ ಹಲವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಹಿಂಸಾಚಾರದ ವೇಳೆ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. `ಹೌರಾ ಅಂಕುರ್ಹಾಟಿ ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಯೊಬ್ಬರನ್ನೂ ಬಂಧಿಸಬೇಕು’ ಎಂಬಿತ್ಯಾದಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನಡುವೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಮಾಡಿಕೊಡುವಂತೆಯೂ ಕೆಲ ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್ಪಿ ತೀವ್ರ ಖಂಡನೆ
ರಾಜ್ಯದ ಪ್ರಸ್ತುತ ಪರಿಸ್ಥಿತಿ ಮತ್ತು ಅಧಿಕಾರಿಗಳು ಕೈಗೊಂಡ ಕ್ರಮ ವಿವರಿಸುವ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಅಗತ್ಯವಿರುವುದರಿಂದ ವಿಚಾರಣೆ ಮುಂದೂಡಬೇಕೆಂದು ಅಡ್ವೋಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಕಾಪಾಡಲು ಸಾಧ್ಯವಾಗುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಹಿಂಸಾಚಾರ ಪ್ರತಿಭಟನೆ ನಿಯಂತ್ರಿಸಲು ಸಾಧ್ಯವಾಗದೇ ಇದ್ದಲ್ಲಿ, ಕೇಂದ್ರದ ಪಡೆಗಳನ್ನು ಕರೆಸಬೇಕು ಎಂದು ನಿರ್ದೇಶನ ನೀಡಿದೆ.
ಈ ಘಟನೆಗೆ ಸಂಬಂಧಿಸಿದಂತೆ 26 ಎಫ್ಐಆರ್ ದಾಖಲಾಗಿದ್ದು, 240 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಉತ್ತರ ಪ್ರದೇಶದಲ್ಲೂ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಈವರೆಗೆ ದೇಶಾದ್ಯಂತ 400ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು 40ಕ್ಕೂ ಹೆಚ್ಚು FIRಗಳು ದಾಖಲಾಗಿವೆ.
ನವದೆಹಲಿ: ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿರುವ ಮೊಘಲ್ ಮಸೀದಿಯಲ್ಲಿ ನಮಾಜ್ ಮಾಡುವುದನ್ನು ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮೇ 6ರಂದು ಕೇವಲ 5 ಮಂದಿಗೆ ಮಸೀದಿಯಲ್ಲಿ ನಮಾಜ್ ಮಾಡಲು ಅನುಮತಿಸುವ ಮೂಲಕ ಪ್ರಾರ್ಥನೆಗೆ ಭಾಗಶಃ ತಡೆಯೊಡ್ಡಿತು. ನಂತರ ಮೇ 13ರಂದು ಅಧಿಕಾರಿಗಳು ಪ್ರಾರ್ಥನೆ ಸಂಪೂರ್ಣವಾಗಿ ನಿಲ್ಲಿಸಿದರು ಎಂದು ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ.ಸುಫಿಯಾನ್ ಸಿದ್ದಿಕಿ ತಿಳಿಸಿದರು. ಇದನ್ನೂ ಓದಿ: ಜೂನ್ 13 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಯಾವುದೇ ಆದೇಶ ನೀಡದೆ ಮೌಖಿಕ ಸೂಚನೆಗಳ ಮೂಲಕವೇ ಜನರ ಪ್ರಾರ್ಥನೆಗೆ ತಡೆಯೊಡ್ಡಲಾಗಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿದು ರಕ್ಷಿಸಬೇಕು ಎಂದು ಸಿದ್ದಿಕ್ಕೆ ಮನವಿ ಮಾಡಿದ್ದರು.
ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ (ACJ) ವಿಪಿನ್ ಸಾಂಘಿ ಅವರಿದ್ದ ಪೀಠದೆದುರು ಅರ್ಜಿಯನ್ನು ಪ್ರಸ್ತಾಪಿಸಿದಾಗ ರಜೆಕಾಲೀನ ಪೀಠದೆದುರು ಮನವಿ ಸಲ್ಲಿಸುವಂತೆ ಪೀಠ ತಿಳಿಸಿತ್ತು.
ನಂತರ ಮೊಘಲ್ ಮಸೀದಿಯು ದೆಹಲಿಯ ಮೊಘಲ್ ಉದ್ಯಾನದ ಎದುರು ಕುತುಬ್ ಸಂಕೀರ್ಣದ ಪ್ರವೇಶದ್ವಾರದಲ್ಲಿದೆ. ಕುತುಬ್ ಮಿನಾರ್ ಆವರಣದಲ್ಲಿರುವ ವಿವಾದಿತ ಕುವ್ವಾತ್-ಉಲ್-ಇಸ್ಲಾಂ ಮಸೀದಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಪೀಠ ಹೇಳಿ ವಿಚಾರಣೆ ನಿರಾಕರಿಸಿತು. ಇದನ್ನೂ ಓದಿ: 21ನೇ ಶತಮಾನದ ಭಾರತವು ಜನಕೇಂದ್ರಿತ ಆಡಳಿತದೊಂದಿಗೆ ಮುನ್ನಡೆಯುತ್ತಿದೆ: ಮೋದಿ
ಹಿನ್ನೆಲೆ ಏನು?
ಕುವ್ವಾತ್- ಉಲ್- ಇಸ್ಲಾಂ ಮಸೀದಿಯಲ್ಲಿ ಹಲವು ಹಿಂದೂ ದೇವತೆಗಳ ಪ್ರತಿಮೆಗಳಿವೆ ಎಂದು ವಿವಿಧ ಹಿಂದುತ್ವವಾದಿ ಗುಂಪುಗಳು ವಾದಿಸಿದ್ದು ಹಿಂದೂ ಮತ್ತು ಜೈನ ದೇಗುಲಗಳನ್ನು ಧ್ವಂಸಗೊಳಿಸಿ ಇದನ್ನು ನಿರ್ಮಿಸಲಾಗಿದೆ. ಹೀಗಾಗಿ ಅಲ್ಲಿ ತಮಗೆ ಪ್ರಾರ್ಥನೆ ಸಲ್ಲಿಸುವ ಹಕ್ಕು ನೀಡಬೇಕು ಎಂದು ಆಗ್ರಹಿಸಿದ್ದವು.
ಗ್ಯಾಂಗ್ಟಾಕ್: ಸಿಕ್ಕಿಂ ರಾಜ್ಯ ಸರ್ಕಾರದ ʻಒಂದು ಕುಟುಂಬ – ಒಂದು ಸರ್ಕಾರಿ ಕೆಲಸʼ ಯೋಜನೆಯನ್ನು ಸಿಕ್ಕಿಂ ಹೈಕೋರ್ಟ್ ಎತ್ತಿಹಿಡಿದಿದೆ. ಯೋಜನೆಯ ಸತ್ಯಾಸತ್ಯತೆಗಳ ಬಗ್ಗೆ ಯಾವುದೇ ಸಂದೇಹವಿಲ್ಲ, ಇದು ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿದೆ.
ಸಿಕ್ಕಿಂ ರಾಜ್ಯದಲ್ಲಿ ನೆಲೆಸಿರುವ 13,000ಕ್ಕೂ ಹೆಚ್ಚು ನಾಗರಿಕರು ಈ ಪ್ರಕ್ರಿಯೆಯಲ್ಲಿ ಉದ್ಯೋಗ ಪಡೆದಿದ್ದಾರೆ. ಒಂದು ಕುಟುಂಬಕ್ಕೆ ಒಂದು ಉದ್ಯೋಗ ಒದಗಿಸುವ ಈ ನೀತಿಯು ಸದುದ್ಧೇಶ ಹೊಂದಿದೆ. ಹಾಗಾಗಿ ಸಿಕ್ಕಿಂ ಸರ್ಕಾರಿ ಸೇವಾ ನಿಯಮ-1974ರ ಅಡಿಯಲ್ಲಿ ಒದಗಿಸಲಾದ ತಾಂತ್ರಿಕತೆಗಳ ಆಧಾರದ ಮೇಲೆ ಈ ಹಂತದಲ್ಲಿ ಯೋಜನೆಯ ಪ್ರಯೋಜನಕಾರಿ ಸ್ವರೂಪವನ್ನು ಅನುಮಾನಿಸಲಾಗುವುದಿಲ್ಲ ಮತ್ತು ಪರಿಶೀಲಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ
ಸಿಕ್ಕಿಂ ರಾಜ್ಯದ ಆಡಳಿತ ಸುಧಾರಣೆ ಮತ್ತು ತರಬೇತಿ ಇಲಾಖೆಯ ಜಂಟಿ ಕಾರ್ಯದರ್ಶಿ ಉಮೇಶ್ ಸುನಮ್ ಅವರು ತಮ್ಮ ರಾಜ್ಯದ 31 ಕ್ಷೇತ್ರಗಳ ಪ್ರವಾಸಗಳನ್ನು ಪೂರ್ಣಗೊಳಿಸಿದ ನಂತರ ಮಾಜಿ ಮುಖ್ಯಮಂತ್ರಿ (ಸಿಎಂ) ಅವರು ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ ಎಂದು ಮನವಿ ಸಲ್ಲಿಸಲಾಗಿತ್ತು. ಈ ಪ್ರವಾಸದ ಸಮಯದಲ್ಲಿ, ಸಿಕ್ಕಿಂ ಜನರ ಮುಖ್ಯ ಕುಂದುಕೊರತೆ ಸರ್ಕಾರಿ ಸೇವೆಯಲ್ಲಿ ಉದ್ಯೋಗದ ಕೊರತೆ ಎಂದು ಗಮನಿಸಲಾಗಿದೆ ಎಂದು ಪೀಠವು ಗಮನಿಸಿತು.
ಅಲ್ಲದೆ, ಅಂದಿನ ಸರ್ಕಾರವು ಸರ್ಕಾರಿ ಸೇವೆಯಲ್ಲಿ ಯಾವುದೇ ಕುಟುಂಬ ಸದಸ್ಯರನ್ನು ಹೊಂದಿರದ ಅರ್ಜಿದಾರರ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಂದಿನ ಸರ್ಕಾರ ನಿರ್ಧರಿಸಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಈ ಪ್ರಶ್ನೆಯು ಯೋಜನೆಯ ಪರಿಕಲ್ಪನೆಗೆ ಕಾರಣವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ
ಈ ಅಫಿಡವಿಟ್ ನಲ್ಲಿ 1974ರ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸದಿದ್ದರೂ ತಾಂತ್ರಿಕ ಅವಶ್ಯಕತೆಗಳನ್ನು ಅನುಸರಿಸಿದೆ. ಆದರೂ ಈ ಪ್ರಕ್ರಿಯೆಯಲ್ಲಿ ಸರ್ಕಾರ ಶಾಸನ ಬದ್ಧ ಕಾನೂನು ಮತ್ತು ನಿಯಮಗಳಿಗೆ ಕಟ್ಟುನಿಟ್ಟಾಗಿ ಪಾಲಿಸಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇದರೊಂದಿಗೆ ಮುಂದೆ ಜನ ಕಲ್ಯಾಣ ಹಾಗೂ ಪ್ರಯೋಜನಕಾರಿ ಯೋಜನೆಗಳನ್ನು ರಾಜ್ಯ ಹಾಗೂ ಏಜೆನ್ಸಿಗಳು ಜಾರಿಗೆ ತರಲು ನ್ಯಾಯಾಲಯ ಸಲಹೆ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಎ. ಮೌಲಿಕ್, ವಕೀಲರಾದ ಕೆ.ಡಿ.ಭುಟಿಯಾ ಮತ್ತು ರಂಜಿತ್ ಪ್ರಸಾದ್ ವಾದ ಮಂಡಿಸಿದರು. ಅಡ್ವೊಕೇಟ್ ಜನರಲ್ ವಿವೇಕ್ ಕೊಹ್ಲಿ, ಸರ್ಕಾರಿ ವಕೀಲರಾದ ವೈಡಬ್ಲ್ಯೂ ರಿಂಚೆನ್ ಮತ್ತು ಪೆಮಾ ಭುಟಿಯಾ ಅವರು ರಾಜ್ಯ ಅಧಿಕಾರಿಗಳನ್ನು ಪ್ರತಿನಿಧಿಸಿದರು.
1987ರಲ್ಲಿ ಅಡ್ವೊಕೇಟ್ ಆಗಿ ದಾಖಲಾತಿ ಮಾಡಿಕೊಂಡ ನಂತರ ಸಿವಿಲ್, ಸರ್ವಿಸ್ ಮತ್ತು ಶಿಕ್ಷಣ ವಿಷಯಗಳಲ್ಲಿ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠದ ಮೂಲಕ ವ್ಯಾಜ್ಯಗಳ ಅಭ್ಯಾಸ ನಡೆಸುತ್ತಿದ್ದರು. ಬಳಿಕ 2009ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಹೊಂದುವ ಮೊದಲು ಲಕ್ನೋದಲ್ಲಿ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್ ಶಾ
ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಲವು ಗಣ್ಯರು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂ 8 ಹೈಕೋರ್ಟ್ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಡಿದ್ದು, ಜೊತೆಗೆ 5 ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನೀಡಿದ ಶಿಫಾರಸು ಪಟ್ಟಿಯಲ್ಲಿ ರಾಜ್ಯ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಅರವಿಂದ್ ಕುಮಾರ್ ಹೆಸರು ಕೂಡ ಇದ್ದು ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.
ಸೆಪ್ಟೆಂಬರ್ 16 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದೀಗ ಗುಜರಾತ್ ಹೈಕೋರ್ಟ್ ಮುಖ್ಯ ನಾಯಮೂರ್ತಿ ಸ್ಥಾನಕ್ಕೆ ಕನ್ನಡಿಗರಾದ ನ್ಯಾ.ಅರವಿಂದ್ ಕುಮಾರ್ ನೇಮಕವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು
ನ್ಯಾ.ಅರವಿಂದ್ ಕುಮಾರ್, 1987 ರಲ್ಲಿ ವಕೀಲರಾಗಿ ಸೇವೆ ಆರಂಭಿಸಿ, 4 ವರ್ಷಗಳ ಕಾಲ ಸಿವಿಲ್ ನ್ಯಾಯಾಲಯಗಳು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಕಾರ್ಯ ನಿರ್ವಹಿಸದರು. ಬಳಿಕ ಅವರು ಹೈಕೋರ್ಟ್ನಲ್ಲಿ ತಮ್ಮ ವಕೀಲಿ ವೃತ್ತಿ ಮುಂದುವರಿಸಿದರು. 1999 ರಲ್ಲಿ ರಾಜ್ಯ ಹೈಕೋರ್ಟ್ನಲ್ಲಿ ಹೆಚ್ಚುವರಿ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ ನೇಮಕಗೊಂಡಿದ್ದರು. ಇದನ್ನೂ ಓದಿ: ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ
2002ರಲ್ಲಿ ಪ್ರಾದೇಶಿಕ ನೇರ ತೆರಿಗೆ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಬಳಿಕ ಅವರು, ಆದಾಯ ತೆರಿಗೆ ಇಲಾಖೆಗೆ ಸ್ಥಾಯಿ ಸಲಹೆಗಾರರಾಗಿ ನೇಮಕವಾದರು. ಸುಧೀರ್ಘ ಅನುಭವದ ಬಳಿಕ 2005 ರಲ್ಲಿ ದೇಶದ ಅಡಿಷನಲ್ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. 2009ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕವಾದ ಅವರು 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿನೇಮಕಗೊಂಡರು. ಈಗ ಕೊಲಿಜಿಯಂ ಶಿಫಾರಸು ಸರ್ಕಾರದ ಅನುಮೋದಿಸಿದರೇ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಅವರು ಗುಜರಾತ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.