Tag: chief minister of karnataka

  • ನಾನ್ಯಾಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ?: ಡಿಕೆಶಿ ಗರಂ

    ನಾನ್ಯಾಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ?: ಡಿಕೆಶಿ ಗರಂ

    ನವದೆಹಲಿ: ಕೆಪಿಸಿಸಿ ಅಧ್ಯಕ್ಷ (KPCC President) ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನವದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ. ಇದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದಂತೆ. ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

    ವಿಧಾನಸಭಾ ಚುನಾವಣೆ (Assembly Election 2023) ಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿ 3-4 ದಿನ ಕಳೆದರೂ ಇನ್ನೂ ಸಿಎಂ ಯಾರೆಂಬುದು ಕಗ್ಗಂಟಾಗಿ ಉಳಿದಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ನಡುವೆ ಸಿಎಂ ಕುರ್ಚಿಗೆ ಭಾರೀ ಫೈಟ್ ನಡೆಯುತ್ತಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ಇಬ್ಬರು ನಾಯಕರೂ ಕೂಡ ದೆಹಲಿ ತಲುಪಿದ್ದು, ಇಂದು ಸಂಜೆಯೇ ಸಿಎಂ ಯಾರೆಂದು ಅನೌನ್ಸ್ ಮಾಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

  • ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು: ಸಿಎಂ

    ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.

    ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

    ಕೋವಿಡ್ ಪರೀಕ್ಷೆ ಹೆಚ್ಚಳ: ಕೋವಿಡ್ ಹೊಸ ತಳಿ ಓಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ತನಿಖೆಗೆ ಎನ್‌ಸಿಬಿಎಸ್‌ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.

    ಕ್ಲಸ್ಟರ್‌ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ ನಡೆಸಿ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್‌ ಕಸ್ಟರ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಮುಂಬೈ, ಪುಣೆ, ನಾಸಿಕ್ ಶಾಲೆ ಪುನರಾರಂಭ ಮುಂದೂಡಿಕೆ

    ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

  • ಬೊಮ್ಮಾಯಿ ರಬ್ಬರ್‌ ಸ್ಟಾಂಪ್  ಮುಖ್ಯಮಂತ್ರಿ: ಸಿದ್ದರಾಮಯ್ಯ

    ಬೊಮ್ಮಾಯಿ ರಬ್ಬರ್‌ ಸ್ಟಾಂಪ್  ಮುಖ್ಯಮಂತ್ರಿ: ಸಿದ್ದರಾಮಯ್ಯ

    – ಸಿಎಂರಿಂದ ಕಾಟಾಚಾರದ ಪ್ರವಾಸ

    ಹುಬ್ಬಳ್ಳಿ: ನೂತನವಾಗಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ರಬ್ಬರ್‌ ಸ್ಟಾಂಪ್  ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರಬಹುದು. ಆದರೆ ಬಿಜೆಪಿ ಸರ್ಕಾರ ಬದಲಾಗಿಲ್ಲ. ಬೊಮ್ಮಾಯಿ ರಬ್ಬರ್‌ ಸ್ಟಾಂಪ್  ಸಿಎಂ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ಹಿಂದಿನ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಸಚಿವರಾಗಿದ್ರು, ಈಗ ಸಿಎಂ ಆಗಿದ್ದಾರೆ. ಆದರೆ ಭ್ರಷ್ಟಾಚಾರ ಕಡಿಮೆ ಆಗಿಲ್ಲ. ನಾವೇನೂ ಅವರನ್ನ ರಬ್ಬರ್‌ ಸ್ಟಾಂಪ್  ಎಂದು ಕರೆದಿಲ್ಲ ಅವರೇ ನಾನು ರಬ್ಬರ್‌ ಸ್ಟಾಂಪ್  ಸಿಎಂ ಹೇಳಿಕೊಂಡಿರುವುದರಿಂದ ಅವರು ರಬ್ಬರ್‌ ಸ್ಟಾಂಪ್  ಸಿಎಂ ಆಗಿದ್ದಾರೆ ಎಂದು ಮುಖ್ಯಮಂತ್ರಿಯನ್ನು ಕುಟುಕಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ ಸಿಂಧು

    ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಮಗೆ ಸಂಯಮ ಕಡಿಮೆ ಆಗಿದೆ ಅಂತಾ ಹೇಳಿದ್ದಾರೆ. ಆದರೆ ನನಗೆ ಸಂಯಮ ಕಡಿಮೆ ಆಗಿಲ್ಲ. ನಾನು ಸಂಯಮ ಮೀರಿ ಮಾತನಾಡಿಲ್ಲ. ಶಾಂತವಾಗಿ ಸಹನೆಯಿಂದ ಸಮಾಧಾನದಿಂದಲೇ ಇದ್ದೇನೆ ಎಂದು ಸಿದ್ದರಾಮಯ್ಯ ಬಿಎಸ್‍ವೈಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮೇಕೆ ಮೇಲೆ ಗ್ಯಾಂಗ್ ರೇಪ್ – ಟ್ರೋಲ್ ಆದ ಪಾಕ್ ಪ್ರಧಾನಿ

    ರಾಜ್ಯದಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಬಿಜೆಪಿಯವರು ಅಧಿಕಾರಕ್ಕೆ ಓಡಾಡ್ತಾ ಇದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕಾಟಾಚಾರದ ಪ್ರವಾಸ ಮಾಡಿದ್ದಾರೆ. ಉತ್ತರ ಕನ್ನಡಕ್ಕೆ ಅಷ್ಟೇ ಹೋಗಿ ಬಂದು ದೆಹಲಿಗೆ ಹೋಗಿ ಕುಳಿತಿದ್ದಾರೆ. ಬಿಜೆಪಿಯವರು ದೆಹಲಿ ಹೋಗಿ ಕುಳಿತು ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗಿದೆ.  ಸಿಎಂ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನನ ಹೆಚ್ಚಳ ಮಾಡಿದ್ದಾರೆ. ರೈತರ ಮಕ್ಕಳಿಗೆ ಯೋಜನೆ ಘೋಷಿಸಿದ್ದಾರೆ. ಆದರೆ ಕೊಡೋಕೆ ಹಣ ಎಲ್ಲಿದೆ ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಸರ್ಕಾರಕ್ಕೆ ನ್ಯಾಯಯುತವಾಗಿ ಬರಬೇಕಾದ ಹಣವನ್ನು ಕೇಂದ್ರದಿಂದ ಪಡೆದುಕೊಂಡು ಬರಬೇಕೆಂದು ನೂತಮ ಸಿಎಂ ಬಸವರಾಜ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ.

  • ರಾಮನಗರ ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿಯಾದವರಿಗೆ ಪೂರ್ಣಾವಧಿ ಭಾಗ್ಯವೇ ಇಲ್ಲ

    ರಾಮನಗರ ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿಯಾದವರಿಗೆ ಪೂರ್ಣಾವಧಿ ಭಾಗ್ಯವೇ ಇಲ್ಲ

    ರಾಮನಗರ: ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿ ಜವಾಬ್ದಾರಿ ಹೊತ್ತ ಯಾರೊಬ್ಬರಿಗೂ ಪೂರ್ಣಾವಧಿ ಭಾಗ್ಯ ಸಿಕ್ಕಿಲ್ಲ.

    ಜಿಲ್ಲೆಯಿಂದ ಆಯ್ಕೆಯಾದ ಶಾಸಕರ ಪೈಕಿ ಒಟ್ಟು ನಾಲ್ವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ಅವರಲ್ಲಿ ಯಾರೊಬ್ಬರೂ 5 ವರ್ಷಗಳ ಕಾಲ ಸಿಎಂ ಆಗಿ ಅಧಿಕಾರ ಪೂರ್ಣಗೊಳಿಸಲೇ ಇಲ್ಲ. ಅಷ್ಟೇ ಅಲ್ಲದೆ ಎರಡು ಬಾರಿ ಆಯ್ಕೆಯಾದರೂ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳ್ಳುವ ಮುನ್ನವೇ ಪತನಗೊಂಡಿದೆ.

    ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯಿಂದ ಆಯ್ಕೆಯಾಗಿ ಸಿಎಂ ಆಗಿದ್ದರು. ಆದರೆ ನಾಲ್ವರಲ್ಲಿ ಒಬ್ಬರೇ ಒಬ್ಬರೂ ಅಧಿಕಾರ ಪೂರ್ಣಗೊಳಿಸಿಲ್ಲ. ಕುಮಾರಸ್ವಾಮಿ ಅವರು ಮೊದಲ ಬಾರಿ 20 ತಿಂಗಳು ಸಿಎಂ ಆಗಿ ಅಧಿಕಾರ ನಡೆಸಿದ್ದರು. 2018ರ ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದ ಸಿಎಂ 14 ತಿಂಗಳಲ್ಲಿ ಅಧಿಕಾರವನ್ನು ಕಳೆದುಕೊಂಡಿದ್ದಾರೆ.

    ಕೆಂಗಲ್ ಹನುಮಂತಯ್ಯ ಅವರು 4 ವರ್ಷ 5 ತಿಂಗಳು ಅಧಿಕಾರ ನಡೆಸಿದ್ದರೆ, ರಾಮಕೃಷ್ಣ ಹೆಗಡೆ 12 ತಿಂಗಳು ಅಧಿಕಾರದಲ್ಲಿದ್ದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 17 ತಿಂಗಳ ಬಳಿಕ ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದರು.